Home Blog Page 3073

ಸಿಎಂ ಸ್ಥಾನ ಹೋದ ಮೇಲೆ ಸಿದ್ಧರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ

ವಿಜಯಸಾಕ್ಷಿ ಸುದ್ದಿ, ದಾವಣಗೆರೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಹುಚ್ಚನಂತಾಗಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಸಿಎಂ ಆಗಲು ಕುರುಬರ ಎಸ್ ಟಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಆಗಿದ್ದವರು ಹೀಗೆ ನೀಚತನಕ್ಕೆ ಇಳಿದು ಮಾತನಾಡಬಾರದು. ನಾನು ಮುಖ್ಯಮಂತ್ರಿ ಆಗುವುದು ಬಿಜೆಪಿ ಪಕ್ಷ ನಿರ್ಧಾರ ಮಾಡುತ್ತದೆ. ನಮ್ಮ ಪಕ್ಷದಲ್ಲಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುವ ಸಿಸ್ಟಂ ಇಲ್ಲ.

ಧಮ್ ಇದ್ರೆ ಮುಂದಿನ ಸಿಎಂ ಈಶ್ವರಪ್ಪ ಎಂದು ಘೋಷಿಸಿಕೊಳ್ಳಲಿ ಎಂದಿದ್ದಾರೆ. ತಾವೇ ನಾನು ಮುಂದಿನ ಸಿಎಂ ಎಂದು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮೇಲೆ ಕಂಟ್ರೋಲ್ ಇಲ್ಲ. ಸಿದ್ದರಾಮಯ್ಯರನ್ನು ಯಾರು ಕಂಟ್ರೋಲ್ ಮಾಡುತ್ತಿಲ್ಲ. ಇದನ್ನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟ ಪಡಿಸಿ, ತಾಕತ್ತಿದ್ದರೆ ಸಿದ್ದರಾಮಯ್ಯಗೆ ನೋಟಿಸ್ ಕೊಡಲಿ ಎಂದು ಸವಾಲೆಸೆದರು.

ಪಾದಯಾತ್ರೆ ಮಾಡುತ್ತಿರುವುದು ಕನಕ ಗುರುಪೀಠದ ಸ್ವಾಮೀಜಿ. ನಾನಲ್ಲ. ಕನಿಷ್ಟ ಅರ್ಧ ಕಿಲೋಮೀಟರ್ ಆದ್ರೂ ಸಿದ್ದರಾಮಯ್ಯ ಪಾದಯಾತ್ರೆ ಮಾಡಲಿ ಎಂದು ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಕುಟುಕಿದರು.

ಬಸ್, ಕಾರ್ ಡಿಕ್ಕಿಗೆ ಓರ್ವ ಬಲಿ

0

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಜಿಲ್ಲೆಯ ಸೇಡಂ ತಾಲೂಕಿನ ಅಡಕಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಕಾರ್ ನಲ್ಲಿದ್ದ ದೇವರಾಜ್(35) ಎಂದು ಗುರುತಿಸಲಾಗಿದೆ. ಮೃತ ದೇವರಾಜ್ ಸೇಡಂ ತಾಲೂಕಿನ ಹುಡಾ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಧೋಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಟಿಎಂ ಮಷೀನನ್ನೇ ಹೊತ್ತೊಯ್ದ ಖತರ್ನಾಕ್ ಕಳ್ಳರು

ವಿಜಯಸಾಕ್ಷಿ ಸುದ್ದಿ, ತುಮಕೂರು: ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನ ಎಟಿಎಂ ಮಷೀನನ್ನೇ ಕಳ್ಳರು ಹೊತ್ತೊಯ್ದಿರೋ ಘಟನೆ ತಾಲೂಕಿನ ಹೆಗ್ಗೆರೆಯಲ್ಲಿ ನಡೆದಿದೆ.

ನಸುಕಿನಜಾವ 3 ಗಂಟೆಗೆ ಈ ಘಟನೆ ನಡೆದಿದ್ದು, ಖತರ್ನಾಕ್ ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಖತರ್ನಾಕ್ ಕಳ್ಳರಿಂದ ಎಟಿಎಂ‌ ಮೆಷಿನ್ ಕಳವು ಮಾಡಲಾಗಿದೆ. ಎಟಿಎಂ ಮಷೀನ್ ಗೂ ಆಚೆಯ ವಾಹನಕ್ಕೂ ಹಗ್ಗ ಕಟ್ಟಿ ಎಳೆದಿದ್ದಾರೆ. ವಾಹನ ಎಳೆದ ರಭಸಕ್ಕೆ ಇಡೀ ಎಟಿಎಂ ಕಳ್ಳರ ಪಾಲಾಗಿದೆ.

ಎಟಿಎಂನಲ್ಲಿದ್ದ ಹಣ ಕದ್ದು ಮಲ್ಲಸಂದ್ರದಲ್ಲಿ ಮಷೀನ್ ಬಿಸಾಡಿ ಕಳ್ಳರು ನಾಪತ್ತೆಯಾಗಿದ್ದಾರೆ. ತುಮಕೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖತರ್ನಾಕ್ ಕಳ್ಳರಿಗೆ ಗ್ರಾಮೀಣ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.

ವೀಕ್ನೆಸ್ ಆಫ್ ಮೈಂಡ್ ನಿಂದ ರೈತರ ಆತ್ಮಹತ್ಯೆ : ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿಕೆ

0

ವಿಜಯಸಾಕ್ಷಿ ಸುದ್ದಿ, ಮೈಸೂರು: ರೈತರ ಆತ್ಮಹತ್ಯೆ ವೀಕ್ನೆಸ್ ಆಫ್ ಮೈಂಡ್ ನಿಂದ ಆಗುತ್ತೆ. ಮೈಂಡ್ ವೀಕ್ನೆಸ್ ಇರುವ ರೈತರಷ್ಟೇ ಆತ್ಮಹತ್ಯೆ ಮಾಡಿಕೊಳ್ತಾರೆ ಅಂತ ಕೃಷೊ ಸಚಿವ ಬಿ ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರು ಜಿಲ್ಲೆ ಪ್ರವಾಸದಲ್ಲಿರುವ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಯಾವುದೋ ಕಾರಣಕ್ಕೋ ಯಾವುದೋ ಟೈಂನಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.
ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಅಂತಾನೆ ಕಾರ್ಯಕ್ರಮ ರೂಪಿಸಲಾಗ್ತಿದೆ. ರೈತರ ಮನೆಗೆ ಹೋಗಿ ಹಾರ ಹಾಕಿ ಸಾಂತ್ವನ ಹೇಳಿದ್ರೆ ಸಮಸ್ಯೆ ಬಗೆಹರಿಯಲ್ಲ ಎಂದರು.

ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣವಲ್ಲ. ವೀಕ್ನೆಸ್ ಆಫ್ ಮೈಂಡ್ ನಿಂದ ಕೆಲ ರೈತರು ಆತ್ಮಹತ್ಯೆ ಮಾಡಿಕೊಳ್ತಾರೆ. ಎಲ್ಲ ರೈತರು ಏನ್ ಆತ್ಮಹತ್ಯೆ ಮಾಡಿಕೊಂಡಿದ್ದಾರಾ?
ಇಲ್ಲ ತಾನೆ ಎಂದು ಪ್ರಶ್ನಿಸಿದರು.

ರೈತರಷ್ಟೇ ಅಲ್ಲ ಬೇರೆ ಬೇರೆಯವರು ಆತ್ಮಹತ್ಯೆ ಮಾಡಿಕೊಳ್ತಾರೆ. ಉದ್ಯಮಿಗಳು, ಅಧಿಕಾರಿಗಳು, ಹಾಗೂ ಇತರೇ ಕ್ಷೇತ್ರದ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ.

ಸರ್ಕಾರಗಳು ತನ್ನ ಕೆಲಸ ಮಾಡುತ್ತಿವೆ. ಹಳ್ಳಿಯಲ್ಲಿರುವವರು ಬಹುತೇಕರು ರೈತರೇ ಆಗಿರುತ್ತಾರೆ. ಹಾಗಂತ ಹಳ್ಳಿಗಳಲ್ಲಿ ಆಗುವ ಎಲ್ಲ ಸಾವುಗಳು ರೈತರ ಆತ್ಮಹತ್ಯೆ ಅಂದುಕೊಳ್ಳೋಕೆ ಆಗುತ್ತಾ. ಸಮಸ್ಯೆಗೆ ಕಾರಣ ಹುಡುಕೋದೆ ತಜ್ಞರ ಸಮಿತಿಗಳ ಕೆಲಸ. ಅವರು ನೀಡುವ ವರದಿಯಂತೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು.

ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ತಂಡಕ್ಕೆ ಐತಿಹಾಸಿಕ ಗೆಲುವು: ಸತತ ಮೂರನೇ ಟ್ರೋಫಿ ಗೆದ್ದ ಇಂಡಿಯಾ

ವಿಜಯಸಾಕ್ಷಿ ಸುದ್ದಿ, ಬ್ರಿಸ್ಬೇನ್: ಆಸ್ಟ್ರೇಲಿಯಾದ ಬ್ರಿಸ್ಬೇನ್ ನ ಗಾಬಾ ಕ್ರೀಡಾಂಗಾಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ರೋಮಾಂಚಕ ಮತ್ತು ಐತಿಹಾಸಿಕ ಜಯ ಸಾಧಿಸಿದೆ.

ಒಟ್ಟು 4 ಟೆಸ್ಟ್ ಪಂದ್ಯಗಳಲ್ಲಿ ಎರಡರಲ್ಲಿ ಜಯ ಗೆಲುವು ಸಾಧಿಸುವ ಮೂಲಕ ಭಾರತ ತಂಡವು ಈ ಐತಿಹಾಸಿಕ ಸಾಧನೆಗೈದಿದೆ.

ಆರಂಭಿಕ ಬ್ಯಾಟ್ಸ್ ಮನ್ ಆಗಿ ಆಗಮಿಸಿದ್ದ ರೋಹಿತ್ ಶರ್ಮಾ 7 ರನ್ ಗಳಿಸಿ ಪೆವಿಲಿಯನ್ ಸೇರಿದರೂ, ಶುಭ್ ಮನ್ ಗಿಲ್ ಮತ್ತು ಚೇತೇಶ್ವರ ಪೂಜಾರ ಅವರ 114 ರನ್ ಗಳ ಜೊತೆಯಾಟವಾಡಿದರು.

ಗೋಡೆಯಂತೆ ಕ್ರೀಸ್ ನಲ್ಲಿ ನಿಂತು ಆಸೀಸ್ ಬೌಲರ್ ಗಳ ಬೆವರಿಳಿಸಿದ ಚೇತೇಶ್ವರ ಪೂಜಾರ 211 ಎಸೆತಗಳಲ್ಲಿ 56 ರನ್ ಗಳಿಸಿದರು. ಶುಭ್ ಮನ್ ಗಿಲ್ 146 ಎಸೆತಗಳಲ್ಲಿ 91 ರನ್ ಗಳಿಸಿದರು. ವಾಷಿಂಗ್ಟನ್ ಸುಂದರ್ 29 ಎಸೆತಗಳಲ್ಲಿ 22 ರನ್ ಗಳಿಸಿ ನಥನ್ ಲಿಯೋನ್ ಗೆ ವಿಕೆಟ್ ಒಪ್ಪಿಸಿದರು.

ಕೊನೆಯ ಕ್ಷಣದಲ್ಲಿ ಅದ್ಭುತ ಪ್ರದರ್ಶನ ತೋರಿದ ರಿಶಬ್ ಪಂತ್ 138 ಎಸೆತಗಳಲ್ಲಿ 89 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ಮೂಲಕ ಸತತ ಮೂರನೇ ಬಾರಿಗೆ ಬಾರ್ಡರ್ ಗವಾಸ್ಕರ್ ಪ್ರಶಸ್ತಿ ಎತ್ತಿ ಹಿಡಿದಿದ್ದು, ಪ್ರಶಸ್ತಿ ಪಡೆದ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.

ಲಾರಿ, ಟಂಟಂ ಮುಖಾಮುಖಿ: ಸ್ಥಳದಲ್ಲೇ ಓರ್ವ ಸಾವು

0

ವಿಜಯಸಾಕ್ಷಿ ಸುದ್ದಿ, ನರಗುಂದ: ಲಾರಿ‌ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿರುವ ಘಟನೆ‌ ಪಟ್ಟಣದ ಹೊರವಲಯದ ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಶರಣಪ್ಪ ಭಜಂತ್ರಿ (45) ಎಂದು ಗುರುತಿಸಲಾಗಿದೆ. ಮೃತನು ಗದಗ ತಾಲೂಕಿನ ಹುಯಿಲಗೋಳ ಗ್ರಾಮದವನೆಂದು ತಿಳಿದುಬಂದಿದೆ.

ಘಟನೆಯಲ್ಲಿ ನಾಲ್ಕು ಜನರಿಗೆ ಗಾಯಗಳಾಗಿದ್ದು, ನರಗುಂದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಟಿಎಂ ಕೊರೆದು ಕಳ್ಳತನಕ್ಕೆ ಯತ್ನ: ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ

ವಿಜಯಸಾಕ್ಷಿ ಸುದ್ದಿ,ಗದಗ

ಎಟಿಎಂ ಕೊರೆದು ಹಣ ದೋಚಲು ಯತ್ನಿಸಿದ್ದ ಇಬ್ಬರ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.‌

ಜ.16ರ ತಡರಾತ್ರಿ ನಗರದ ಹಾತಲಗೇರಿ ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ ಎಟಿಎಂಗೆ ದುಷ್ಕರ್ಮಿಗಳು ಕನ್ನ ಹಾಕಿದ್ದರು. ಗ್ಯಾಸ್ ವೆಲ್ಡಿಂಗ್ ಹಾಗೂ ಕಟರ್ ನಿಂದ ಎಟಿಎಂ ಮಷಿನ್ ತುಂಡರಿಸಲು ಮುಂದಾಗಿದ್ದ ಘಟನೆ ನಡೆದಿತ್ತು.

ಕೃತ್ಯವೆಸಗುವ ಮುನ್ನ ಇಬ್ಬರು ಖದೀಮರು ಎಟಿಎಂನೊಳಗೆ ನುಗ್ಗಿ, ಸಿಸಿ ಟಿವಿಗೆ ಕೆಂಪು ಪಟ್ಟಿ ಅಂಟಿಸಿದ್ದರು. ಅಲ್ಲದೇ, ಎಟಿಎಂನಲ್ಲಿ ಎಲ್ಲೂ ಬೆರಳಿನ ಗುರುತು ಮೂಡಬಾರದೆಂದು ಕೈಗೆ ಹ್ಯಾಂಡ್ ಗ್ಲೌಸ್ ಹಾಕಿ ಹಣ ದೋಚಲು ಯತ್ನಿಸಿದ್ದರು. ಆದರೆ, ಅವರ ಪ್ರಯತ್ನ ಯಶಸ್ವಿಯಾಗದೇ ಬರಿಗೈಲಿ ಹಿಂದುರಿಗಿರುವ ದೃಶ್ಯ ಸದ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಬೆಟಗೇರಿ ಬಡಾವಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಸ್ – ಸ್ಕೂಟರ್ ನಡುವೆ ಅಪಘಾತ: ವಾಹನದ ಚಕ್ರಕ್ಕೆ‌ ಸಿಲುಕಿ ತಂದೆ ಮಗ ಸಾವು

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಸಾರಿಗೆ ಸಂಸ್ಥೆಯ ವಾಹನದ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ತಂದೆ ಹಾಗೂ ನಾಲ್ಕು ವರ್ಷದ ಮಗು ಸಾವನ್ನಪ್ಪಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ಗಂಗಾವತಿಯ ಜಯನಗರದ ಕೂಲಿ‌ಕಾರ್ಮಿಕ ಹನುಮೇಶ ನಾಯಕ (27) ಹಾಗೂ ಪವನ್ (4) ಎಂದು ಗುರುತಿಸಲಾಗಿದೆ. ಮೃತಪಟ್ಟವರು ಕಲ್ಗುಡಿ ಗ್ರಾಮದಿಂದ ಗಂಗಾವತಿಗೆ ಬರುವ ಸಂದರ್ಭದಲ್ಲಿ ಗಂಗಾವತಿಯಿಂದ ಸಿಂಧನೂರು ಮಾರ್ಗದತ್ತ ಹೊರಟಿದ್ದ ಸಾರಿಗೆ ಸಂಸ್ಥೆಯ ವಾಹನದ‌ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಈ ಘಟ‌ನೆ ಸಂಭವಿಸಿದೆ.

ಕಾರಟಗಿಯಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಹಾಗೂ ಅಂಬುಲೆನ್ಸ್ ವಾಹನಕ್ಕೆ ಕರೆ‌ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡು ಸಂಚಾರ ದಟ್ಟಣೆ‌ ನಿಯಂತ್ರಣ ನಿವಾರಣೆಗೆ ಯತ್ನಿಸಿದರು. ವಿಷಯ ತಿಳಿದ ಶಾಸಕ ಬಸವರಾಜ್ ದಡೇಸೂಗೂರ ಸ್ಥಳಕ್ಕೆ ಧಾವಿಸಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬೆಂಬಲಿತ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಹತ್ಯೆ?

0

ವಿಜಯಸಾಕ್ಷಿ ಸುದ್ದಿ, ಹಾಸನ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರವಾಗಿ ಗ್ರಾ.ಪಂ.ಚುನಾವಣೆಯಲ್ಲಿ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾರಗೊಂಡನಹಳ್ಳಿಯಲ್ಲಿ ನಡೆದಿದೆ.

ಅದೇ ಗ್ರಾಮದ ಎಂ.ಎನ್.ಮೂರ್ತಿ (50) ಕೊಲೆಯಾದ ವ್ಯಕ್ತಿಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿದ ನಂತರ ಬೆನ್ನಿಗೆ ಕಲ್ಲು ಕಟ್ಟಿ ಬಾವಿಗೆ ಎಸೆದಿದ್ದಾರೆ‌.

ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಬಯಲಾಗಬೇಕಾಗಿದೆ. ಸ್ಥಳಕ್ಕೆ ಹೊಳೆನರಸೀಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪೊಲೀಸರ ಮನೆಗೇ ಕನ್ನ! ಚಿನ್ನಾಭರಣ ದೋಚಿದ ಕಳ್ಳರು

0

ವಿಜಯಸಾಕ್ಷಿ ಸುದ್ದಿ, ಹೊಸಪೇಟೆ: ಚಾಲಾಕಿ ಕಳ್ಳರು ಪೊಲೀಸರ ಮನೆಯನ್ನೂ ಬಿಡದೇ ಚಿನ್ನಾಭರಣ ದೋಚಿರುವ ಘಟನೆ ಗ್ರಾಮೀಣ ಠಾಣೆ ವ್ಯಾಪ್ತಿಯ ಪಾಂಡುರಂಗ ಕಾಲೋನಿಯಲ್ಲಿ ನಡೆದಿದೆ.

ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಈರಣ್ಣ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಈರಣ್ಣ ರಾತ್ರಿ ಪಾಳೆಯ ಕರ್ತವ್ಯ ನಿರ್ವಹಿಸಲು ಠಾಣೆಗೆ ಹೋದಾಗ ಮನೆಗೆ ನುಗ್ಗಿರುವ ಕಳ್ಳರು ಮನೆಯಲ್ಲಿದ್ದವರ ಕೈ ಕಾಲು ಕಟ್ಟಿ ಕಳ್ಳತನ ಮಾಡಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಲಾಗಿದೆ ಎಂದು ಹೇಳಲಾಗಿದೆ. ಈರಣ್ಣ ಠಾಣೆಗೆ ಕರ್ತವ್ಯಕ್ಕೆ ಹೋಗುವಾಗ, ಮನೆಯಲ್ಲಿ ಸಂಭಂದಿಗಳಿದ್ದರೂ ಬೀಗ ಹಾಕಿ ಕೊಂಡು ಹೋಗಿದ್ದೇ ಕಳ್ಳತನಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!