Home Blog Page 3076

ಚಿಕ್ಕನರಗುಂದ ಗ್ರಾ.ಪಂ ಅಧ್ಯಕ್ಷರಾಗಿ ಮುತ್ತು ರಾಯರಡ್ಡಿ ಅವಿರೋಧ ಆಯ್ಕೆ

ವಿಜಯಸಾಕ್ಷಿ ಸುದ್ದಿ, ನರಗುಂದ

ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುತ್ತು ರಾಯರಡ್ಡಿ ಹಾಗೂ ಉಪಾಧ್ಯಕ್ಷರಾಗಿ ಮಲ್ಲವ್ವ ಮರಿಯಣ್ಣವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾಗಿರುವ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಬೆಂಬಲಿಗರು, ಗ್ರಾಮಸ್ಥರು ಸಂಭ್ರಮಸಿ ಅಭಿನಂದಿಸಿದರು.

ಚಿಕ್ಕನರಗುಂದ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ‘ಅ‌’ ವರ್ಗ ಮಹಿಳೆಗೆ ಮೀಸಲಿರಿಸಲಾಗಿತ್ತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಲಕ್ಷ್ಮಣ ಕಂಬಳಿ,
ಬಾಪುಗೌಡ ಹಿರೇಗೌಡ್ರ,
ನಿರ್ಮಲಾ ತಳವಾರ,
ಈರವ್ವ ಮುದಿಗೌಡ್ರ,
ಶಂಕ್ರವ್ವ ಚಲವಾದಿ ಹಾಗೂ
ಶ್ರುತಿ ಬ್ಯಾಳಿ ಇದ್ದರು.

ಅಧಿಕಾರಿಯ ಛಾಯಾಚಿತ್ರ ಪ್ರದರ್ಶನ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ಇಂದಿನಿಂದ ಆರಂಭವಾಗಿರುವ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಹವ್ಯಾಸಿ ಛಾಯಾಗ್ರಾಹ , ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ
ಅಮರದೀಪ್‌ ಪಿ.ಎಸ್.ರಿಂದ ಛಾಯಾಚಿತ್ರ ಪ್ರದರ್ಶನ ನಡೆಯುತ್ತಿದೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ. 4 ಮತ್ತು 5ರಂದು ಆಯೋಜನೆಯಾಗಿರುವ
ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ
ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕೋವಿಡ್‌ ನಂತರದ ಮೊದಲ ಚಿತ್ರ ಪ್ರದರ್ಶನ ಇದಾಗಿದೆ.

ಅಮರದೀಪ ಖ್ಯಾತ ಹವ್ಯಾಸಿ ಛಾಯಾಗ್ರಾಹಕರೂ ಹೌದು. ಈ ಹಿಂದೆಯೂ ಅವರು ಹಲವಾರು ಸಂದರ್ಭಗಳಲ್ಲಿ ವಿವಿಧ ವಿಷಯಗಳ
ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಿದ್ದಾರೆ. ಈ ಹಿಂದಿನ ಛಾಯಾಚಿತ್ರಗಳ ಪ್ರದರ್ಶನಗಳಿಗೆ ನೋಡುಗರಿಂದ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಿತ್ತು. ಛಾಯಾಚಿತ್ರ ಪ್ರದರ್ಶನದಲ್ಲಿ 60 ವಿವಿಧ ಛಾಯಾಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಟ್ರಾವೆಲ್ ಫೋಟೋಗ್ರಾಫಿ ವಿಷಯದಡಿಯಲ್ಲಿ ತೆಗೆದ ಪೋಟೊಗಳ ಪ್ರದರ್ಶನ ಗಮನ ಸೆಳೆಯಿತು.

ದೇವರ ದುಡ್ಡು ಕದ್ದ ಖದೀಮರು!

0

ವಿಜಯಸಾಕ್ಷಿ ಸುದ್ದಿ, ಉಡುಪಿ: ನಾರಾಯಣಗುರು ಮಂದಿರಕ್ಕೆ ಕಳ್ಳರು ನುಗ್ಗಿ ಹುಂಡಿ ಒಡೆದು ಹಣ ಕದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಪು ತಾಲೂಕು ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು, ಕಾಣಿಕೆ ಡಬ್ಬಿಯನ್ನು ಒಡೆದು ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಇಂದು ಬೆಳಗ್ಗೆ ಗೋಚರಕ್ಕೆ ಬಂದಿದೆ.

ನಾರಾಯಣಗುರು ದೇವಸ್ಥಾನ

ಅರ್ಚಕರು ಬೆಳಗ್ಗೆ ಪೂಜೆಗಾಗಿ ಆಗಮಿಸಿದ ವೇಳೆ ಕೃತ್ಯ ಗೊತ್ತಾಗಿದೆ. ನಾರಾಯಣ ಗುರು ಸಂಘದ ಪ್ರಮುಖರು ಕಾಪು ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿದ್ದಾರೆ.

ಬೆರಳಚ್ಚು ತಜ್ಞರು ಕಳ್ಳರ ಜಾಡು ಹಿಡಿಯಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಂದಿರಕ್ಕೆ ಸಿಸಿಟಿವಿ ಅಳವಡಿಸದ ಕಾರಣ ಕಳ್ಳರ ಪತ್ತೆ ಜಠಿಲವಾಗಬಹುದು. ಸುತ್ತಮುತ್ತಲ ಸಿಸಿಟಿವಿಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ.

ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಭಸ್ಮ

0

ವಿಜಯಸಾಕ್ಷಿ ಸುದ್ದಿ, ರಾಯಚೂರು: ಆಕಸ್ಮಿಕ ಬೆಂಕಿ ತಗುಲಿ ಗುಜರಿ ಅಂಗಡಿ ಬೆಂಕಿಯಿಂದ ಹೊತ್ತು ಉರಿದ ಘಟನೆ ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಕೋಟೆ ಏರಿಯಾದಲ್ಲಿ ಘಟ‌ನೆ ನಿನ್ನೆ ತಡರಾತ್ರಿ ಸಂಭವಿಸಿದ್ದು, ಬೆಂಕಿ ಜ್ವಾಲೆಗೆ ಗುಜರಿ ಅಂಗಡಿಯಲ್ಲಿನ ಸಾಮಾನುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ. 

ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದು, ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಸಿಂಧನೂರು ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಂದರ್-ಬಾಹರ್ ಜೂಜಾಟ: ಉದ್ಯಮಿ ಸೇರಿ 12 ಜನರ ಬಂಧನ, ಇಬ್ಬರು ಪರಾರಿ

ವಿಜಯಸಾಕ್ಷಿ ಸುದ್ದಿ, ಗದಗ

ಇಸ್ಪೀಟು ಎಲೆಗಳ ಸಹಾಯದಿಂದ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಗದಗ ನಗರ ಹಾಗೂ ಗಜೇಂದ್ರಗಡ ಪೊಲೀಸರು ದಾಳಿ ಮಾಡಿ ಉದ್ಯಮಿ ಸೇರಿದಂತೆ 12 ಜನರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಗಜೇಂದ್ರಗಡ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

ಗದಗನ ನಗರ ಠಾಣೆಯ ಸಮೀಪದಲ್ಲಿಯೇ ಇರುವ ಆನಂದ ಮಾಂಸಾಹಾರಿ ಹೊಟೇಲ್ ಬಳಿಯ ಬಟಾ ಬಯಲು ಜಾಗೆಯಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಮಲ್ಲಿಕಾರ್ಜುನ ಬಸಪ್ಪ ಕುರ್ತಕೋಟಿ, ಫಕ್ಕಿರೇಶ್ ಸಿದ್ದಪ್ಪ ನ್ಯಾವಳ್ಳಿ, ಮಲ್ಲೇಶ್ ಲಕ್ಷ್ಮಣ್ ಚವ್ಹಾಣ, ಮಲ್ಲಿಕಾರ್ಜುನ ಪ್ರಭುಲಿಂಗಪ್ಪ ಕುಸುಗಲ್, ಮಾಬುಸಾಬ ದಾವಲಸಾಬ ಡಂಬಳ, ಅಶೋಕ ಶಂಕ್ರಪ್ಪ ಕೋಳಿವಾಡ, ಯಲ್ಲಪ್ಪ ಗವಿಯಪ್ಪ ಕೆಂಚಣ್ಣವರ, ಸಿದ್ದಲಿಂಗಯ್ಯ ಪ್ರಭಯ್ಯ ಮರಿಯಣ್ಣವರ, ಈರಣ್ಣ ಬಸಪ್ಪ ಹವಳಣ್ಣವರ್, ಹಾಗೂ ಅಶೋಕ ಬಸವರಾಜ್ ಉಳವಿ ಪೊಲೀಸರ ಬಲೆಗೆ ಬಿದ್ದವರು. ಬಂಧಿತರಿಂದ 11200 ರೂ,ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಗಜೇಂದ್ರಗಡ ತಾಲೂಕಿನ ಚಿಲಝರಿ ಗ್ರಾಮದ ಸರಕಾರಿ ಹಳ್ಳದ ಬಳಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಬೆನ್ನತ್ತಿದ್ದ ಪೊಲೀಸರ ಕೈಗೆ ಇಬ್ಬರು ಸಿಕ್ಕಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಸಿಕ್ಕಿಬಿದ್ದ ಟೇಲರ್ ರೇವಣಸಿದ್ದಯ್ಯ ಚನ್ನಬಸಯ್ಯ ಚೌಕಿಮಠ, ಕೆಂಪಜಂಬಣ್ಣ ಮಾರಿಯಪ್ಪ ರಾಹುಲ್ ಅವರಿಂದ 7100 ವಶಪಡಿಸಿಕೊಂಡಿದ್ದಾರೆ. ಪರಶಪ್ಪ ದುರಗಪ್ಪ ದಾರೋತ್ತರ ಹಾಗೂ ಕುಮಾರ್ ದಾರಪ್ಪ ರಾಠೋಡ ಪರಾರಿಯಾಗಿದ್ದಾರೆ.

ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕ ಪ್ರಕಟ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸಹಾಯಕ/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಮುಹೂರ್ತ ನಿಗದಿಪಡಿಸಿದೆ.

ಮುಂದೂಡಲಾಗಿದ್ದ ಪರೀಕ್ಷೆಗಳಿಗೆ ಮರು ದಿನಾಂಕ ನಿಗದಿ ಪಡಿಸಿದ್ದು, ಫೆಬ್ರುವರಿ 28 ರ ಭಾನುವಾರದಂದು ಪರೀಕ್ಷೆಗಳು ಜರುಗಲಿವೆ ಎಂದು ಕೆಪಿ ಎಸ್ ಸಿ ಪ್ರಕಟಣೆ ತಿಳಿಸಿದೆ.

ಜನವರಿ 24 ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೆಪಿಎಸ್ಸಿ ಮುಂದೂಡಿತ್ತು. ಇದು ಪರೀಕ್ಷಾರ್ಥಿಗಳಲ್ಲಿ ನಿರಾಸೆಯನ್ನುಂಟು ಮಾಡಿತ್ತು.

ಶಿರಹಟ್ಟಿಯಲ್ಲಿ ಎಸಿಬಿ ದಾಳಿ: ಕಂಪ್ಯೂಟರ್ ಆಪರೇಟರ್ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಖಾತಾ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುವಾಗ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ.

ಶಿರಹಟ್ಟಿ ಪಟ್ಟಣದ ಮಹೇಶ್ ಡಿ ಆರ್ ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು, ಶಿರಹಟ್ಟಿ ಪಟ್ಟಣ ಪಂಚಾಯತಿಯ ಕಂಪ್ಯೂಟರ್ ಆಪರೇಟರ್ ಶರಣಪ್ಪ ಮಹದೇವಪ್ಪ ಗೌಳಿ ಎಂಬುವರನ್ನು ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿ ವಂಶಕ್ಕೆ ಪಡೆದಿದ್ದಾರೆ.

ಆರೋಪಿ ಶರಣಪ್ಪ ಗೌಳಿ ಖಾತಾ ಬದಲಾವಣೆ ಮಾಡಿ ಕಂಪ್ಯೂಟರ್ ಉತಾರ ನೀಡಲು ಮಹೇಶ್ ಅವರಿಗೆ 3500 ಲಂಚದ ಬೇಡಿಕೆ ಇಟ್ಟಿದ್ದ. ಈ ಕುರಿತು ಮಹೇಶ್ ಎಸಿಬಿಗೆ ದೂರು ನೀಡಿದ್ದರು. ಇಂದು ಲಂಚದ ಹಣ ನೀಡುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿತ ಶರಣಪ್ಪನನ್ನು ವಶಕ್ಕೆ ಪಡೆದಿದ್ದಾರೆ‌.

ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ಎನ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಗಳಾದ ಆರ್ ಎಫ್ ದೇಸಾಯಿ, ವೈ ಎಸ್ ಧರಣಾ ನಾಯಕ್, ಸಿಬ್ಬಂದಿಗಳಾದ ಎಂ ಎಂ ಅಯ್ಯನಗೌಡರ್, ಆರ್ ಎಚ್ ಹೆಬಸೂರು, ಎನ್ ಎಸ್ ತಾಯಣ್ಣವರ್, ವೀರೇಶ್ ಜೋಳದ್, ಐ ಸಿ ಕರಿಗಾರ ಹಾಗೂ ತಾರಪ್ಪ ದಾಳಿಯಲ್ಲಿ ಭಾಗವಹಿಸಿದ್ದರು.

ಬಾಲೇಹೊಸೂರು ಗ್ರಾಪಂ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ: ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ

ಖೊಟ್ಟಿ ದಾಖಲೆ ಸಲ್ಲಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಇದರಿಂದ ಮೂಲ ದಲಿತರಿಗೆ ಅನ್ಯಾಯವಾಗಿದೆ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಪಂಚಾಯತಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಮೀಸಲು ಬಂದಿರುವ ಬಾಲೇಹೊಸೂರು ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಡಿಎಸ್ಎಸ್ ಮುಖಂಡ ಸುರೇಶ್ ನಂದೆಣ್ಣವರ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಗ್ರಾಪಂಗೆ ಬೀಗ ಜಡಿದು ಧರಣಿ ನಡೆಸುತ್ತಿದ್ದಾರೆ.

ಖೊಟ್ಟಿ ದಾಖಲೆಗೆ ಸಂಬಂಧಿಸಿದಂತೆ
ಧಾರವಾಡ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ಪ್ರಕರಣ ಇತ್ಯರ್ಥವಾಗುವವರೆಗೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.

ಖೊಟ್ಟಿ ದಾಖಲೆ ಸಲ್ಲಿಸಿ ಸ್ಪರ್ಧಿಸುತ್ತಿರುವವರಿಗೆ ಈಗಾಗಲೇ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿದ್ದು, ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ರದ್ದುಗೊಳಿಸಿ ನ್ಯಾಯ ಒದಗಿಸಿಕೊಡಬೇಕು
ಎಂದು ಪಟ್ಟು ಹಿಡಿದಿದ್ದಾರೆ.

ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡ ವ್ಯಕ್ತಿ : ಸಾವು ಬದುಕಿನ ಮಧ್ಯೆ ಸೆಣಸಾಡುತ್ತಿದವನ ಜೀವ ರಕ್ಷಿಸಿದ 108 ಸಿಬ್ಬಂದಿ

0

ವಿಜಯಸಾಕ್ಷಿ ಸುದ್ದಿ, ಗದಗ: ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು 108 ಸಿಬ್ಬಂದಿಗಳು ರಕ್ಷಿಸಿರುವ ಘಟನೆ ನಗರದ ರಾಜೀವ್ ಗಾಂಧಿ ನಗರದಲ್ಲಿ ರವಿವಾರ ನಡೆದಿದೆ.

ರಾಜೀವ್ ಗಾಂಧಿ ನಗರದ ನಿವಾಸಿ ಚನ್ನಬಸಪ್ಪ ವೀರಪ್ಪ ತಳಕಲ್(35) ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, 108 ಸಿಬ್ಬಂದಿಗಳಾದ ಇಎಂಟಿ ಮಹೇಶ್ ಭಜಂತ್ರಿ ಹಾಗೂ ಪೈಲೆಟ್ ಅಶೋಕ ನೀಲಗಾರ ರಕ್ಷಿಸಿದ್ದಾರೆ.

ಮನೆಯ ಒಂದನೇ ಮಹಡಿಯಲ್ಲಿ ಚನ್ನಬಸಪ್ಪ ಬ್ಲೇಡ್ ನಿಂದ ಕುತ್ತಿಗೆ ಭಾಗದ ಶ್ವಾಸನಾಳದವರೆಗೆ (ಟ್ರಾಕಿಯಾ) ಕೊಯ್ದುಕೊಂಡ ಪರಿಣಾಮ, ತೀವ್ರ ರಕ್ತಸ್ರಾವದಿಂದ ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಬಳಲುತ್ತಿದ್ದ. ತಕ್ಷಣವೇ ಕುತ್ತಿಗೆಯ ಭಾಗಕ್ಕೆ ಡ್ರೆಸ್ಸಿಂಗ್ ಮಾಡಿ ರಕ್ತಸ್ರಾವ ಹತೋಟಿಗೆ ತಂದಿದ್ದಾರೆ.

ಬಳಿಕ ಸ್ಥಳೀಯರ ನೆರವಿನಿಂದ 1 ನೇ ಮಹಡಿಯಿಂದ ಸ್ಪೈನ್ ಬೋರ್ಡ್ ಮುಖಾಂತರ 108 ಒಳಗೆ ಸ್ಥಳಾಂತರಿಸಿದ್ದಾರೆ. ಆ್ಯಂಬುಲೆನ್ಸ್ ನಲ್ಲಿಯೇ ಇಎಂಟಿ ಮಹೇಶ್ ಅವರು ಐವಿ ಫ್ಲೂಯಿಡ್, ಎನ್ಎಸ್, ಆಕ್ಸಿಜನ್, ರಕ್ತದೊತ್ತಡ ಪರೀಕ್ಷಿಸಿ ಆಸ್ಪತ್ರೆಯವರೆಗೂ ಆಂಬುಲೆನ್ಸ್ ನಲ್ಲಿ ಆರೈಕೆ ಮಾಡಿದ್ದು, ಚಿಕಿತ್ಸೆಗಾಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಚನ್ನಬಸಪ್ಪ ಮಾತನಾಡಲಾಗದ ಸ್ಥಿತಿಯಲ್ಲಿ ಇರುವುದರಿಂದ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಕುಟುಂಬದವರು ಹೇಳುವ ಪ್ರಕಾರ ಕೌಟುಂಬಿಕ ಕಲಹವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಮಾರವ್ಯಾಸ ಸ್ಮಾರಕ ಗದಗನಲ್ಲಿ ನಿರ್ಮಾಣವಾಗಲಿ: ಪಂ. ಅನಂತ ಕುಲಕರ್ಣಿ

0

ವಿಜಯಸಾಕ್ಷಿ ಸುದ್ದಿ, ಗದಗ

ಕುಮಾರವ್ಯಾಸನ ಕರ್ಮಭೂಮಿ ಗದಗನಲ್ಲಿ ಕುಮಾರವ್ಯಾಸ ಸ್ಮಾರಕ ನಿರ್ಮಾಣವಾಗಲಿ ಎಂದು ಖ್ಯಾತ ದಾಸವಾಣಿ ಕಲಾವಿದರಾದ ಅನಂತ ಕುಲಕರ್ಣಿ ಹೇಳಿದರು.
ಅವರು ಶ್ರೀ ವೀರನಾರಾಯಣ ದೇವಸ್ಥಾನದ ಆವರಣದಲ್ಲಿ ಕುಮಾರವ್ಯಾಸ ಕಲಾನಯನ ಕಾರ್ಯಕ್ರಮದಲ್ಲಿ ಕುಮಾರವ್ಯಾಸ ಪ್ರತಿಷ್ಠಾನ ಹಾಗೂ ಹೊಂಬಾಳಿ ಕಲಾ ಅಕಾಡೆಮಿ ಯೂಟ್ಯೂಬ್ ಚಾನಲ್ ಉದ್ಘಾಟಿಸಿ ಮಾತನಾಡಿದರು.

ಗದಗ ವೀರನಾರಾಯಣ ಹಾಗೂ ಕುಮಾರವ್ಯಾಸರಿಂದ ನಾಡಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಇಲ್ಲಿ ಗಮಕ ಹಾಗೂ ಸುಗಮ ಸಂಗೀತ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಯುವಂತೆ ಸ್ಮಾರಕ ಭವನ ನಿರ್ಮಾಣವಾಗಲಿ ಎಂದು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ವೀರನಾರಾಯಣ, ತ್ರಿಕೂಟೇಶ್ವರ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಡಾ: ಕುಶಾಲ ಗೋಡಖಿಂಡಿ ಮಾತನಾಡಿ, ಕುಮಾರವ್ಯಾಸ ಕುರಿತಾದ ವಿಚಾರ ಸಂಕೀರ್ಣ ಹಾಗೂ ಗಮಕ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.

ವಿದ್ಯಾದಾನ ಸಮಿತಿ ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ, ಕುಮಾರವ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಎಸ್.ಜಿ. ಪಾಟೀಲ ಉಪಸ್ಥಿತರಿದ್ದರು. ಆರಂಭದಲ್ಲಿ ಶಂಕರಭಟ್ ಸೊರಟೂರ, ಪ್ರಲ್ಹಾದಾಚಾರ್ಯ ನಿಲೂಗಲ್ ವೇದಘೋಷಗೈದರು. ಶ್ರೀನಿವಾಸ ಕುಲಕರ್ಣಿ ಪ್ರಾರ್ಥಿಸಿದರು. ಹೊಂಬಾಳಿ ಅಕಾಡೆಮಿ ಅಧ್ಯಕ್ಷೆ ಮಂಜರಿ ಹೊಂಬಾಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ಕೃಷ್ಣಾಜಿ ನಾಡಿಗೇರ ವಂದಿಸಿದರು.

ನಂತರ ವಿಶ್ವನಾಥ ಕುಲಕರ್ಣಿಯವರಿಂದ ಗಮಕವಾಚನ ಪಂ. ಅನಂತ ಕುಲಕರ್ಣಿ ಅವರಿಂದ ದಾಸವಾಣಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಕುಮಾರವ್ಯಾಸ ಪ್ರತಿಷ್ಠಾನದ ಪ್ರಾ. ಎಸ್.ಜಿ. ಪಾಟೀಲ, ಜಿ.ಎ. ದೇಶಪಾಂಡೆ, ಶಂಕರಭಟ್ ಸೊರಟೂರ, ರವೀಂದ್ರ ಜೋಶಿ, ದತ್ತಪ್ರಸನ್ನ ಪಾಟೀಲ, ಆರ್.ಎಸ್. ಕುಲಕರ್ಣಿ, ಕೃಷ್ಣಾಜಿ ನಾಡಿಗೇರ, ಪ್ರಾ. ಅನಿಲ ವೈದ್ಯ, ರಾಘವೇಂದ್ರ ಜೋಶಿ, ಪ್ರಾ. ಶ್ರೀಧರ ದೇಶಪಾಂಡೆ, ವಿ.ಪಿ. ಪಾಟೀಲ, ಅರುಣ ಕುಲಕರ್ಣಿ, ರಾಜೇಶ ಕುಲಕರ್ಣಿ, ಗಿರೀಶ ಪಂತರ, ಹೂಲಿ ವಾಸುದೇವಾಚಾರ್ಯ, ಎಸ್.ಎ. ಹುಯಿಲಗೋಳ, ಮುರಳಿಧರ ಸಂಕನೂರ, ವಿತ್ತಿ ಪಾಠಕ, ಪ್ರಾಣೇಶ ಕುಲಕರ್ಣಿ, ನಂದಾ ಜಹಾಗೀರದಾರ, ಅಂಜನಾ ಕುಬೇರ ಉಪಸ್ಥಿತರಿದ್ದರು

error: Content is protected !!