Home Blog Page 3077

ಬೀಗ ಮುರಿದು ದೇವಸ್ಥಾನದಲ್ಲಿ ಕಳ್ಳತನ

ವಿಜಯಸಾಕ್ಷಿ ಸುದ್ದಿ, ಹಾವೇರಿ

ತಾಲೂಕಿನ ನೀರಲಗಿ ಗ್ರಾಮದಲ್ಲಿ ದುರಗಮ್ಮ ದೇವಿ ದೇವಸ್ಥಾನಕ್ಕೆ ಕಳ್ಳರು ಕನ್ನ ಹಾಕಿದ್ದಾರೆ.
ನಿನ್ನೆ ರಾತ್ರಿ ದೇವಸ್ಥಾನ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ದೇವಿಯ ಕೊರಳಲ್ಲಿದ್ದ ಚಿನ್ನದ ತಾಳಿ, ಕಿರೀಟ ಸೇರಿದಂತೆ ಸುಮಾರು ಇಪ್ಪತ್ತು ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೈಡರ್ ಜಂಪ್ ಮಾಡಿ ಎರಡು ಲಾರಿಗಳಿಗೆ ಅಪ್ಪಳಿಸಿದ ಕಂಟೇನರ್; ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ನಗರದ ಹೊರವಲಯದ ಕಾಕತಿ ಬಳಿಯ ವಂಟಮೂರಿ ಘಾಟ್ ನಲ್ಲಿ ಲಾರಿಯೊಂದು ಭೀಕರ ಅಪಘಾತಕ್ಕೆ ಒಳಗಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ‌.

ಉತ್ತರ ಪ್ರದೇಶದ ನೀರಜ್, ಮಹಾರಾಷ್ಟ್ರ ಬೀಡ ಜಿಲ್ಲೆಯ ರಾಜೇಂದ್ರ ದೋಹಿಪಡೆ ಎಂಬಾತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.

ವಂಟಮೂರಿ ಘಾಟ್ ಇಳಿಜಾರಿನಿಂದ ಜೋರಾಗಿ ಬಂದ ಲಾರಿ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು ಡಿವೈಡರ್ ಗೆ ಜಂಪ್ ಮಾಡಿ
ರಸ್ತೆ ಬದಿಗೆ ನಿಂತಿದ್ದ ಎರಡು ಲಾರಿಗಳಿಗೆ ಅಪ್ಪಳಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ರಸ್ತೆಯಲ್ಲಿ ಲಾರಿಗಳ ಬಿಡಿಬಾಗಗಳು ಚಿಲ್ಲಾಪಿಲ್ಲಿಯಾಗಿವೆ. ಶಿಗ್ಗಾವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

ತಡರಾತ್ರಿ ಸ್ಥಳಕ್ಕೆ ಧಾವಿಸಿದ ಕಾಕತಿ ಪೊಲೀಸರು ತಕ್ಷಣ ವಾಹನಗಳನ್ನು ತೆರವು ಮಾಡಿ, ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ಅನಕೂಲ ಮಾಡಿದ್ದಾರೆ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ‌.

ಕಳ್ಳತನ ಮಾಡುವಾಗಲೇ ಸಿಕ್ಕಿಬಿದ್ದ ಕಳ್ಳ; ಮತ್ತೆ ಜೈಲುಪಾಲಾದ ಖದೀಮ!

ವಿಜಯಸಾಕ್ಷಿ ಸುದ್ದಿ, ಮುಂಡರಗಿ

ಸ್ಟಾಪ್ ನರ್ಸ್ ಒಬ್ಬರ ಮನೆಯಲ್ಲಿ ಕಳ್ಳತನ ಮಾಡುವಾಗ ರೂಡಿಗತ ಕಳ್ಳನೊಬ್ಬ ಮತ್ತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಜೈಲು ಪಾಲಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಎ.ಡಿ. ನಗರದಲ್ಲಿ ಈ ಘಟನೆ ನಡೆದಿದೆ. ವಿನಾಯಕ ಕೊಪ್ಪಳ ಎಂಬುವರು ಹೂವಿನ ಅಡಗಲಿ ತಾಲೂಕಿನ ಕೊಂಬಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡ್ತಿದ್ದಾರೆ. ಇವರು ಮುಂಡರಗಿಯಲ್ಲಿ‌ ನೆಲಸಿದ್ದರು. ಡ್ಯೂಟಿಗೆ ಹೋಗಿದ್ದ ಸಂದರ್ಭದಲ್ಲಿ ಮುಂಡರಗಿ ನಿವಾಸಿಯಾಗಿರೋ ಕಾರ್ತಿಕ ಅಪ್ಪಣ್ಣ ಕೊಂಪಿ ಎಂಬಾತ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿ ಹಾಡುಹಗಲೇ ಬೀಗ ಹೊಡೆದು ಒಳಗೆ ಹೊಕ್ಕಿದ್ದಾನೆ. ಒಳಗಡೆ ಹೋಗಿ ಯಾರೂ ಒಳಬರದಂತೆ ಬಂದೋಬಸ್ತ್ ಮಾಡಿಕೊಂಡು ಕಳ್ಳತನಕ್ಕೆ ಇಳಿದಿದ್ದ. ಇದೇ ವೇಳೆಗೆ ಡ್ಯೂಟಿಯಿಂದ ತಡವಾಗಿ ಬಂದ ನರ್ಸ್ ವಿನಾಯಕ ಅವರಿಗೆ ಒಳಗಡೆ ಯಾರೋ ಇದ್ದಿರೋದನ್ನ ಗಮನಿಸಿ ದಿಢೀರ್ ಹೊರಗಡೆಯಿಂದ ಬೀಗ ಹಾಕಿದ್ದಾರೆ. ಬಳಿಕ ಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಎಲ್ಲರೂ ಸೇರಿ ಪೊಲೀಸರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಕರೆಸಿ ಕಳ್ಳನನ್ನ ರೆಡ್ ಹ್ಯಾಂಡ್ ಆಗಿ ಒಪ್ಪಿಸಿದ್ದಾರೆ.

ಕಪಾಟಿನಲ್ಲಿ ಇದ್ದ 8700 ರೂ. ಯನ್ನ ಕದ್ದಿದ್ದ ಕಳ್ಳ ಪರಾರಿಯಾಗಿ ಮತ್ತೆ ಮಜಾ ಮಾಡಬೇಕು ಅನಕೊಂಡಿದ್ದ ಖದೀಮ ಮತ್ಯೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಈ ಹಿಂದೆ ಕೂಡ ಶಿರಹಟ್ಟಿ, ಗದಗ ಹಾಗೂ ಮುಂಡರಗಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಜೈಲು ಪಾಲಾಗಿದ್ದ ಅಸಾಮಿ ಕಾರ್ತಿಕ ಮತ್ತೆ ಈಗ ಜೈಲು ಪಾಲಾಗಿದ್ದಾನೆ. ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ-ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆ!

ವಿಜಯಸಾಕ್ಷಿ ಸುದ್ದಿ, ಗದಗ

ಲಾಕ್ಡೌನ್ ನಲ್ಲಿ ಬಡ ಜನರಿಗೆ ಅನುಕೂಲವಾಗಲಿ ಅಂತ ಸರಕಾರ ಕೊಟ್ಟಿರುವ ಅನ್ನಭಾಗ್ಯ ಅಕ್ಕಿ ಖದೀಮರ ಪಾಲಾಗುತ್ತಿದೆ. ಪಡಿತರ ಅಂಗಡಿಯಲ್ಲಿ ಕೊಟ್ಟ ಅಕ್ಕಿಯನ್ನು ಖದೀಮರು ಹೆಚ್ಚಿನ ಬೆಲೆಗೆ ಖರೀದಿಸಿ ಹಾವೇರಿ, ಹುಬ್ಬಳ್ಳಿ ಮೂಲಕ ಮುಂಬೈಗೆ ಕಳುಹಿಸುತ್ತಾರೆ.

ಈ ದಂದೆಯಲ್ಲಿ ಆ ಪಕ್ಷ-ಈ ಪಕ್ಷ ಅಂತ ಇಲ್ಲ. ಬಹುತೇಕ ರಾಜಕೀಯ ಬಲ ಇದ್ದವರೇ ಈ ದಂದೆಯಲ್ಲಿ ತೊಡಗುವ ಸಾಧ್ಯತೆ ಹೆಚ್ಚು.

ಹೀಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿದ ಖಚಿತ ಮಾಹಿತಿ ಪಡೆದ ಸೈಬರ್ ಠಾಣೆಯ ಇನ್ಸ್‌ಪೆಕ್ಟರ್ ಟಿ ಮಹಾಂತೇಶ್ ಹಾಗೂ ಸಿಬ್ಬಂದಿ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ಕಾರ್ಯಚರಣೆ ನಡೆಸಿ ಲಕ್ಷಾಂತರ ರೂ.ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಹಿರೇವಡ್ಡಟ್ಟಿ ಗ್ರಾಮದ ಬಿಜೆಪಿ ಮುಖಂಡ, ಗುತ್ತಿಗೆದಾರ ಆನಂದ ನಾಗರಳ್ಳಿ, ಕಾಂಗ್ರೆಸ್ ಮುಖಂಡ ಮಹಬೂಬಸಾಬ್ ಮುಂಡರಗಿ, ಹಾಗೂ ಷಣ್ಮುಖಪ್ಪ ಎಂಬುವವರು ಮನೆ ಕಮ್ ಅಂಗಡಿಗಳಲ್ಲಿ ಈ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿದ್ದರು ಎನ್ನಲಾಗಿದೆ.

ಆನಂದ ನಾಗರಳ್ಳಿ ಎಂಬಾತ ಹಿರೇವಡ್ಡಟ್ಟಿ ಗ್ರಾಮದ ವಿವಿಧೆಡೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಖರೀದಿಸಿ ಗದಗ ಮೂಲದ ವ್ಯಕ್ತಿಗೆ ಸಾಗಿಸುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸುಮಾರು 60 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿರುವ ಪೊಲೀಸರು ಆಹಾರ ಇಲಾಖೆಯ ಸುಪರ್ದಿಗೆ ಒಪ್ಪಿಸಿದ್ದು‌, ಮುಂಡರಗಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ; ಅಶ್ವಥ್ನಾರಾಯಣ್

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಸದ್ಯಕ್ಕೆ ಯಾವುದೇ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದು, ಅಂತಹ ಸಂಪುಟ ವಿಸ್ತರಣೆ, ಪುನರ್ ರಚನೆಯೂ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಇಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಲತಾ ಮತ್ತು ಕುಮಾರಸ್ವಾಮಿ ನಡುವಿನ ಶೀತಲ ಸಮರದ ಕುರಿತು ಮಾತನಾಡಿದ ಅವರು, ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಈಗ ಮೌನವಾಗಿದ್ದಾರೆ. ಪರಸ್ಪರ ಟೀಕೆ ಕೂಡ ಮಾಡ್ತಾ ಇಲ್ಲ. ಹೀಗಾಗಿ ಆ ವಿಚಾರದ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಯಾವ ರೀತಿಯಾಗಿ ಅನುಷ್ಠಾನ ಮಾಡಬೇಕು ಎಂಬುದರ ಬಗ್ಗೆ ಮಾತನಾಡಿದ ಸಚಿವರು, ಈ ಸಂಬಂಧ ಪ್ರಮುಖ ಸಂಸ್ಥೆಗಳ ಜೊತೆ ಮಾತುಕತೆ ನಡೆಯಲಿದೆ. ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಅಗಬೇಕು ಅನ್ನೋ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ. ಕೌಶಲ್ಯತೆಯನ್ನ ಯಾವ ರೀತಿ ಬೆಳೆಸಬೇಕು ಅಂತ ಮಾತುಕತೆ ನಡೆಸಿದ್ದೇವೆ‌. ಸೈನ್ಸ್ ಕೇಂದ್ರಗಳಿಗೆ ಭೇಟಿ ನೀಡಿ ಅವರ ಜೊತೆ ಚರ್ಚೆ ಮಾಡಲಿದ್ದೇವೆ. ಸೈನ್ಸ್ ಆಂಡ್ ಟೆಕ್ನಾಲಜಿ ಇಲಾಖೆಯಿಂದ ಕಿಟ್‌ಗಳ ವಿತರಣೆ ಕಾರ್ಯ ಮಾಡಲಿದ್ದೇವೆ ಎಂದು ಹೇಳಿದರು.

ಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ; ಡಿಸಿಎಂ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಸರಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು ಜಾರಿಗೆ ತಂದಿದ್ದು ಅದರ ಮೂಲಕ ಹಲವಾರು ಕಂಪನಿಗಳು ಹುಬ್ಬಳ್ಳಿಗೆ ಬಂದಿವೆ ಎಂದರು.

ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ದಿಕ್ಕಿನಲ್ಲಿ ಬಹಳಷ್ಟು ಪ್ರಗತಿ ಆಗುತ್ತಿದೆ. ಮುಖ್ಯವಾಗಿ ಇಎಸ್‌ಡಿಎಂ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಕಾಣುತ್ತಿದೆ. ಇನ್ನಷ್ಟು ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಡಿಸಿಎಂ ಅವರು ಹೇಳಿದರು.

‘ಬಿಯಾಂಡ್‌ ಬೆಂಗಳೂರುʼ ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಹಿನ್ನಡೆ ಆಗಿಲ್ಲ

ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ವಿನಾ, ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್‌, ದೇಶಪಾಂಡೆ ಫೌಂಡೇಶ್‌ನ್ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ ಎಂದು ಡಿಸಿಎಂ ಹೇಳಿದರು.

ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ; ಡಿಸಿಎಂ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಸರಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು ಜಾರಿಗೆ ತಂದಿದ್ದು ಅದರ ಮೂಲಕ ಹಲವಾರು ಕಂಪನಿಗಳು ಹುಬ್ಬಳ್ಳಿಗೆ ಬಂದಿವೆ ಎಂದರು.

ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ದಿಕ್ಕಿನಲ್ಲಿ ಬಹಳಷ್ಟು ಪ್ರಗತಿ ಆಗುತ್ತಿದೆ. ಮುಖ್ಯವಾಗಿ ಇಎಸ್‌ಡಿಎಂ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಕಾಣುತ್ತಿದೆ. ಇನ್ನಷ್ಟು ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಡಿಸಿಎಂ ಅವರು ಹೇಳಿದರು.

‘ಬಿಯಾಂಡ್‌ ಬೆಂಗಳೂರುʼ ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಹಿನ್ನಡೆ ಆಗಿಲ್ಲ

ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ವಿನಾ, ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್‌, ದೇಶಪಾಂಡೆ ಫೌಂಡೇಶ್‌ನ್ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ ಎಂದು ಡಿಸಿಎಂ ಹೇಳಿದರು.

ಹಿಂದೂ ದೇವರ ಅವಹೇಳನ ಆರೋಪ; ನಕಲಿ ಬಾಬಾನಿಗೆ ಹಿಗ್ಗಾಮುಗ್ಗಾ ಥಳಿತ

ವಿಜಯಸಾಕ್ಷಿ ಸುದ್ದಿ, ಗದಗ

ಹಿಂದೂ ದೇವರಿಗೆ ಬೈದ ಅಂತ ನಕಲಿ ಬಾಬಾ ಒಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗದಗನಲ್ಲಿ ನಡೆದಿದೆ. ಗದಗದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಡೋಂಗಿ ಬಾಬಾ ಆಸೀಫ್ ಜಾಗಿರದಾರ ಎಂಬಾತನಿಗೆ ಜನ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಡೋಂಗಿ ಬಾಬಾ ಮೂಲತಃ ಬಾಗಲಕೋಟ ಜಿಲ್ಲೆಯವನಾಗಿದ್ದು, ನಗರದ ಗಂಗಿಮಡಿಯಲ್ಲಿನ ತನ್ನ ಹೆಂಡತಿ ತವರುಮನೆಯಲ್ಲಿಯೇ ತಂಗಿದ್ದ.

ಹಲವು ವರ್ಷಗಳಿಂದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿತನದ ಪವಾಡಗಳನ್ನ ಮಾಡಿ ಜನರಿಗೆ ನಂಬಿಸಿದ್ದ. ಕುದಿಯೋ ಎಣ್ಣೆ ಹಾಗೂ ಸುಡು ಸುಡು ತುಪ್ಪದಲ್ಲಿ ಕೈ ಹಾಕುತ್ತಿದ್ದ ಡೋಂಗಿ ಬಾಬಾ, ಏಕಾಏಕಿ ಮೈಮೇಲೆ ದೇವರ ಬಂದಂತೆ ನಟಿಸಿ ಜನರನ್ನ ನಂಬಿಸುತ್ತಿದ್ದ ಎನ್ನಲಾಗಿದೆ.

ಬಾಬಾ ಆಸೀಪ್ ಜಾಗಿರದಾರ, ನಿಂಬೆಹಣ್ಣು, ಬೂದಿ ಕೊಟ್ಟು ಜನರಿಗೆ ಮೋಸ ಮಾಡುತ್ತಿದ್ದ ಅಂತ ಜನರು ಆರೋಪಿಸಿದ್ದಾರೆ. ಹೀಗಾಗಿ ಈ ಡೋಂಗಿ ಬಾಬಾ ನಂಬಿ ಮೋಸ ಹೋದ ಜನ್ರರು ರೊಚ್ಚಿಗೆದ್ದಿದ್ದರು. ಜನ್ರ ಮೈಂಡ್ ವಾಶ್ ಮಾಡಿ ಸಾವಿರಾರು ರೂ. ಹಣ ಲೂಟಿ ಮಾಡುತ್ತಿದ್ದನಂತೆ. ಡೋಂಗಿ ಬಾಬಾನ ಅಸಲಿ ಮುಖವಾಡ ಗೊತ್ತಾಗುತ್ತಿದ್ದಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಾನು ಮಾಡಿದ್ದು ಮೋಸ.. ತಪ್ಪಾಗಿದೆ ಕ್ಷಮಿಸಿ ಅಂತಾ ಬೇಡಿಕೊಂಡ್ರೂ ಧರ್ಮದೇಟು ಕೊಟ್ಟ ಜನರು ಗದಗ ಗ್ರಾಮೀಣ ಠಾಣೆಯ ಪೊಲೀಸರಿಗೆ ಆತನನ್ನ ಒಪ್ಪಿಸಿದ್ದಾರೆ.

ರೋಣದಲ್ಲಿ ಅಮಾನವೀಯ ಘಟನೆ; ಮೇಲ್ಜಾತಿ ವ್ಯಕ್ತಿಯನ್ನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಹಿಳೆಗೆ ಅರೆಬತ್ತಲೆ ಶಿಕ್ಷೆ!

ವಿಜಯಸಾಕ್ಷಿ ಸುದ್ದಿ, ಗದಗ

ಹಾವಿನ‌ ದ್ವೇಷ 12 ವರ್ಷ…. ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಮನುಷ್ಯ ಅನ್ನೋ‌ ವಿಷ ಜಂತುವಿನ ದ್ವೇಷ ನೂರು ವರ್ಷ ಇರುತ್ತೆ. ಅದು ಯಾವಾಗಲಾದರೂ ಬುಗಿಲೆಳಬಹುದು. ಹೌದು ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ನಡೆದ ಅಮಾನವೀಯ ಘಟನೆ ಇದಕ್ಕೆ ಸಾಕ್ಷಿ ಎಂಬಂತಾಗಿದೆ.

28 ವರ್ಷಗಳ ಹಿಂದೆ ಮೇಲ್ಜಾತಿಯ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾದ ತಪ್ಪಿಗೆ ದಲಿತ ಮಹಿಳೆಯನ್ನು, ಪತಿಯ ಸಂಬಂಧಿಕರು, ಕ್ಷುಲ್ಲಕ ನೆಪದಲ್ಲಿ ಅರೆಬತ್ತಲೆಂತಹ ಶಿಕ್ಷೆ ನೀಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ.

ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆ ಹಾಗೂ ಅದೇ ಗ್ರಾಮದ ಈರನಗೌಡ ಕುಲಕರ್ಣಿ ಎಂಬುವವರು ಪ್ರೀತಿಸಿ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಈ ಮದುವೆಗೆ ಕುಲಕರ್ಣಿ ಕುಟುಂಬದ ಸಂಬಂಧಿಕರಿಂದ ವಿರೋಧ ಇತ್ತು. ಅಂದಿನಿಂದ ಇಂದಿನವರೆಗೆ ದ್ವೇಷ ಸಾಧಿಸಲಾಗುತ್ತಿತ್ತು.

ಮೊನ್ನೆ ಜುಲೈ 8 ರ ಗುರುವಾರದಂದು ಸಂಜೆ ಈರನಗೌಡ ಹಾಗೂ ಪತ್ನಿ ವಾಸವಿರುವ ಮನೆಯ ಮುಂದೆ ಆಗಮಿಸಿದ
ಬಸನಗೌಡ ಕುಲಕರ್ಣಿ ಎಂಬ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ ಎಂಬ ಆರೋಪದ ಹಿನ್ನೆಲೆಯಲ್ಲಿ ಹೊತ್ತಿದ ಜಗಳ ಈಗ ಪೊಲೀಸ್ ಠಾಣೆಯ ಮೆಟ್ಟಲು ಏರಿದೆ.

ಬಸನಗೌಡ ಕುಲಕರ್ಣಿ, ಮಲ್ಲನಗೌಡ ಕುಲಕರ್ಣಿ ಹಾಗೂ ಕುಮಾರ್ ಗೌಡ ಕುಲಕರ್ಣಿ ಮತ್ತು ಸಂಬಂಧಿಕರು ಸೇರಿ ಈರನಗೌಡ ಕುಲಕರ್ಣಿ ಹಾಗೂ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ ಈರನಗೌಡನ ಪತ್ನಿಯನ್ನು ಅರೆಬತ್ತಲೆ ಮಾಡಿ ಅಮಾನವೀಯವಾಗಿ ನಡೆದುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಡಲಿ ಕಾವಿನಿಂದ ಹಲ್ಲೆ ಮಾಡಿದ್ದಾರೆ.

ಇದನ್ನು ಬಿಡಿಸಲು ಬಂದ ಪತಿ ಈರನಗೌಡ, ಮಗ ಹನಮಂತಗೌಡನ ಮೇಲೂ ಬಸನಗೌಡ ಕುಲಕರ್ಣಿ ಹಾಗೂ ಸಂಬಂಧಿಕರು ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!