ವಿಜಯಸಾಕ್ಷಿ ಸುದ್ದಿ ಕಾರಟಗಿ
ಪಟ್ಟಣದ ಕೆಪಿಟಿಸಿಎಲ್ ಮತ್ತು ಜೇಸ್ಕಾಂ ವತಿಯಿಂದ ಕಾರಟಗಿ ಉಪವಿಭಾಗದ ಆವರಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಅಧಿಕಾರಿಗಳ ಮತ್ತು ನೌಕರರು ಹಾಗೂ ಗುತ್ತಿಗೆದಾರರು ಮತ್ತು ಗ್ರಾಮ-ವಿದ್ಯುತ್-ಪ್ರತಿನಿಧಿಗಳ ಉಪಸ್ಥಿತಿಯಲ್ಲಿ 2021ನೇ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅರುಣ್ ಕುಮಾರ್ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಕ್ರೀಡಾಕೂಟವನ್ನು ಕ್ರಿಕೆಟ್ ಆಡುವುದರ ಮೂಲಕ ಪ್ರಾರಂಭಿಸಲಾಯಿತು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಾಗರಾಜ ಕುರೇಕೊಪ್ಪ ಮತ್ತು ಗಂಗಾವತಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಲ್ಲಾಭಕ್ಷಿ ಗುತ್ತಿಗೆದಾರರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (659) ಅಧ್ಯಕ್ಷ ನರಸಪ್ಪ. ಮತ್ತು ನವಲಿ ಶಾಖಾಧಿಕಾರಿಗಳಾದ ನಾಗಪ್ಪ, ಶ್ರೀರಾಮನಗರದ ಪ್ರಸಾದ್ ಮತ್ತು ಶಂಕ್ರಮ್ಮ ಪ್ರಭಾವತಿ ಕ್ರೀಡಾಕೂಟದಲ್ಲಿ ಎಲ್ಲಾ ಕೆಪಿಟಿಸಿಎಲ್ ಮತ್ತು ಜೆಸ್ಕಾಂ ಸಿಬ್ಬಂದಿ ವರ್ಗ ಲೈನ್ ಮ್ಯಾನ್ ಗಳು ಭಾಗವಹಿಸಿದ್ದರು.
ಗಣರಾಜ್ಯೋತ್ಸವದ ಅಂಗವಾಗಿ ಜೆಸ್ಕಾಂ ಕ್ರೀಡಾಕೂಟಕ್ಕೆ ಚಾಲನೆ
ಡಿಕೆಶಿಗೆ ಜನ ಬೆಂಬಲವಿಲ್ಲ, ಸಿದ್ರಾಮಯ್ಯನವರೇ ಅವರ ಕಾರ್ಯಶೈಲಿ ಒಪ್ಪುತ್ತಿಲ್ಲ: ಸಂಸದೆ ಶೋಭಾ
ವಿಜಯಸಾಕ್ಷಿ ಸುದ್ದಿ, ಮಂಗಳೂರು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೋತು, ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಹಾಗಾಗಿ ಡಿಕೆಶಿ ಸಿದ್ದರಾಮಯ್ಯ ಆತಂಕಗೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಕುಟಕಿದರು.
ಮಂಗಳೂರಿನಲ್ಲಿ ಈ ಮೇಲಿನಂತೆ ಹೇಳಿದ ಅವರು, ಕೊರೊನಾದಂತಹ ಸಂದಿಗ್ದ ಸ್ಥಿತಿಯಲ್ಲಿಯೂ ಬಿಜೆಪಿ ನೇತೃತ್ವದ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಅನಾವಶ್ಯಕವಾದ ಆರೋಪ ಮಾಡುತ್ತಿದೆ ಎಂದು ಆರೋಪಿಸಿದರು.
ಡಿಕೆಶಿ ಬಿಜೆಪಿ ಯಾತ್ರೆ ಅನುಸರಿಸೋಕೆ ಹೋಗಿದ್ದಾರೆ. ಅವರಿಗೆ
ಜನಬೆಂಬಲವಿಲ್ಲ. ಸಿದ್ದರಾಮಯ್ಯನವರೇ ಡಿಕೆಶಿ ಕಾರ್ಯಶೈಲಿ ಒಪ್ಪುತ್ತಿಲ್ಲ.
ಕಾಂಗ್ರೆಸ್ ನಲ್ಲಿ ಗೊಂದಲವಿದ್ದು,
ಗೊಂದಲ ಮರೆಮಾಚಲು ಬಿಜೆಪಿ ಮೇಲೆ ಅನಗತ್ಯ ಆರೋಪ ಮಾಡುತ್ತಿದೆ ಎಂದು ದೂರಿದರು.
ಸಿದ್ದರಾಮಯ್ಯ ಗೋಮಾಂಸ ಸೇವನೆ ಹೇಳಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದರು, ಒಂದು ಸಮುದಾಯವನ್ನು ಓಲೈಸಲು ಸಿದ್ದರಾಮಯ್ಯ ಪ್ರಯತ್ನ ಪಡುತ್ತಿದ್ದು, ನಾಟಕವಾಡುತ್ತಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರೇ ಗೊಂದಲದಲ್ಲಿದ್ದಾರೆ ಎಂದು
ಹೇಳಿದರು.
ಬೈಕ್ ಗೆ ಟಿಪ್ಪರ್ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು: ಗ್ರಾಮಸ್ಥರ ಆಕ್ರೋಶ
ವಿಜಯಸಾಕ್ಷಿ ಸುದ್ದಿ, ಗದಗ
ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ.
ಅಡವಿಸೋಮಾಪೂರ ಗ್ರಾಮದ ಪೀರಸಾಬ ಕುಮನೂರ (55) ಸ್ಥಳದಲ್ಲೆ ಮೃತಪಟ್ಟಿರುವ ದುರ್ದೈವಿ.

ರಸ್ತೆ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ BSCPL ಒಡೆತನದ ವಾಹನ ಇದಾಗಿದ್ದು, ನಿತ್ಯ ಸಾಮರ್ಥ್ಯಕ್ಕಿಂತ ಮಿತಿಮೀರಿ ಮಣ್ಣು ಸಾಗಿಸುತ್ತಿವೆ. ಟಿಪ್ಪರ್ ಗಳ ಹಾವಳಿಯಿಂದ ಇಲ್ಲಿನ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.
ಇನ್ನು ಬೈಕ್ ಗೆ ಡಿಕ್ಕಿ ಹೊಡೆದದ್ದರಿಂದ ಸ್ಥಳೀಯರು ರಸ್ತೆ ತಡೆ ನಡೆಸಿ
BSCPL ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.
ಸಾರಿಗೆ ಡಿಸಿ ಹಿರೇಮಠ ರಿಂದ ಕೊಲೆ ಬೆದರಿಕೆ: ಪ್ರಕರಣ ದಾಖಲು
ವಿಜಯಸಾಕ್ಷಿ ಸುದ್ದಿ, ಗದಗ
ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಕೆಎಸ್ಆರ್ ಟಿಸಿ ಡಿಸಿ ಫಕ್ಕೀರಯ್ಯ ಹಿರೇಮಠ ಅವರ ವಿರುದ್ಧ ರೈತರೊಬ್ಬರು ಗದಗ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಕುಂಬಾರಗಟ್ಟಿ ಪ್ಲಾಟ್ ನ ಚಿದಾನಂದ ಹರಿಜನ ಎಂಬುವವರೇ ದೂರು ನೀಡಿದವರು.
ಅನೇಕ ವರ್ಷಗಳಿಂದ ನ್ಯಾಯಯುತ ಹೋರಾಟ ಮತ್ತು ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಕಳೆದ ಸೆಪ್ಟೆಂಬರ್ ೧೨ ರಂದು ಹೋರಾಟದ ಬಗ್ಗೆ ಕೇಳಲು ಹೋದಾಗ ಸಾರಿಗೆ ಡಿಸಿ ಫಕ್ಕೀರಯ್ಯ ಅವರು, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಅಲ್ಲದೇ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಿನ್ನೆ (ಜ.೮) ರಂದು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಗದಗ ಶಹರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಕಾಲಿಕ ಸುರಿದ ಮಳೆ, ನೆಲಕಚ್ಚಿದ ಬೆಳೆ; ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ
ವಿಜಯಸಾಕ್ಷಿ ಸುದ್ದಿ, ಮುಂಡರಗಿ
ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕು ಸೇರಿದಂತೆ ಹಲವಡೆ ತಡರಾತ್ರಿ ಸುರಿದ ಅಕಾಲಿಕ ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲಕಚ್ಚಿದ್ದು, ಸೂಕ್ತ ಪರಿಹಾರ ನೀಡದ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಜಿಲ್ಲೆಯಾದ್ಯಂತ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಠಿಸಿದೆ. ಈ ವರುಣನ ಆರ್ಭಟಕ್ಕೆ ಬಿಳಿಜೋಳ, ಕಡಲೆ, ಗೋಧಿ, ಹತ್ತಿ ಬೆಳೆಗಳು ನೆಲಕ್ಕುರುಳಿ ನಾಶವಾಗಿವೆ. ಇನ್ನು ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಮಳೆಗಾಳಿಗೆ ನೆಲಕ್ಕುರಿಳಿದ್ದು, ಧರೆಗುರುಳಿದ ಬೆಳೆ ಕಂಡು ರೈತ ಕಣ್ಣೀರು ಹಾಕುತ್ತಿದ್ದಾರೆ. ಈಗಾಗಲೇ ಕೆಲವು ಬೆಳೆ ಕಟಾವಿಗೆ ಬಂದಿದ್ದು, ಇನ್ನು ಕೆಲವು ಬೆಳೆ ಕಾಳುಕಚ್ಚುವ ಸಂದರ್ಭದಲ್ಲಿ ಜಮೀನಿನಲ್ಲಿ ನೀರು ನಿಂತು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಪ್ರಸಕ್ತ ಸಾಲಿನ ಮುಂಗಾರುನ ಹಂಗಾಮಿನಲ್ಲಾದ ಅತಿವೃಷ್ಠಿಯಿಂದ ಬೆಳೆಗಳೆಲ್ಲಾ ಹಾಳಾಗಿದ್ದವು. ಇದೀಗ ಹಿಂಗಾರು ಹಂಗಾಮಿನಲ್ಲೂ ಬೆಳೆಗಳು ಹಾನಿಗೊಳಗಾಗಿದ್ದು, ಸಾಲಸೂಲ ಮಾಡಿರುವ ರೈತರು ಮತ್ತಷ್ಟು ಆರ್ಥಿಕ ಸಂಕಷ್ಟಕೀಡಾಗಿದ್ದಾರೆ. ಅಲ್ಲದೇ, ಪ್ರಕೃತಿ ವಿಕೋಪದಿಂದಾಗಿ ಜಾನುವಾರುಗಳಿಗೆ ಮೇವು ಇಲ್ಲದೆ, ರೈತರ ಹೊಟ್ಟೆಗೆ ಹಿಟ್ಟು ಇಲ್ಲದೆ ಬದುಕುವುದು ದುಸ್ತರವಾಗುತ್ತಿದೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಲ್ಲೂ ನೂರಾರು ಹೆಕ್ಟೆರ್ ಪ್ರದೇಶ ಹಾನಿಗೊಳಗಾಗಿದ್ದು, ಇನ್ನೂವರೆಗೂ ಪರಿಹಾರ ಬೆಳೆಗಳಿಗೆ ಸೂಕ್ತ ಪರಿಹಾರ ವಿತರಿಸಿಲ್ಲ. ಈಗಲೂ ಅಕಾಲಿಕ ಮಳೆಯಿಂದ ಆಹಾನಿಯಾಗಿದ್ದು, ಮುಂಗಾರು ಮತ್ತು ಮುಂಗಾರು ಮಳೆಯಿಂದಾಗಿರುವ ನಷ್ಟ ಭರಿಸಬೇಕು ಎಂದು ರೈತರು ಆಗ್ರಹಿಸಿದರು.
ಪದೇ ಪದೇ ಸಂಭವಿಸುತ್ತಿರುವ ಪ್ರಕೃತಿ ವಿಕೋಪದಿಂದಾಗಿ ಬೆಳೆ ನಾಶವಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕು.
ಶಂಕರ್ಗೌಡ್ರ ಎಂ.ಜಯನಗೌಡ್ರ, ರೈತ
ಗೊಂದಲ ಸೃಷ್ಟಿಸಿದ ಮಾಜಿ ಸಚಿವ ರಾಯರಡ್ಡಿ! -ರಾಯರಡ್ಡಿಗೆ ಧಿಕ್ಕಾರ, ಹಾಲಪ್ಪ ಆಚಾರ್ಗೆ ಜೈಕಾರ
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ದೇಶದ ಮೊದಲ ಟಾಯ್ ಕ್ಲಸ್ಟರ್ ಭೂಮಿ ಪೂಜೆ ಸಮಾರಂಭ ಕೆಲ ಕಾಲ ಗೊಂದಲದ ಗೂಡಾಗಿ ಆತಂಕಕ್ಕೆ ಎಡೆ ಮಾಡಿಕೊಟ್ಟಿತು. ಇದಕ್ಕೆ ಕಾರಣ ಮಾಜಿ ಸಚಿವ ಬಸವರಾಜ ರಾಯರಡ್ಡಿ!
ಮಾಜಿ ಸಚಿವ ಆರ್.ವಿ.ದೇಶಪಾಂಡೆ ಭಾಷಣ ಮಾಡುವಾಗ ನನ್ನ ಗಂಟಲು ಸರಿ ಇಲ್ಲ. ಒಂದು ನಿಮಿಷ ಮಾತಾಡ್ತಿನಿ. ನನ್ನ ಭಾಷಣವನ್ನು ಶಾಸಕ ಮಿತ್ರ ಅಮರೇಗೌಡ ಬಯ್ಯಾಪುರ ಓದುತ್ತಾರೆ ಎಂದದ್ದೇ ತಡ.. ಕಸಿವಿಸಿಗೊಂಡ ಮಾಜಿ ಸಚಿವ ಬಸವರಾಜ ರಾಯರಡ್ಡಿ ನಾನು ಮಾತಾಡ್ತಿನಿ ಅಂತ ಎಲ್ಲಿ ಹೇಳಿದಿನಿ ಅಂತ ವಿನಾಕಾರಣ ತಗಾದೆ ತೆಗೆದು ವೇದಿಕೆ ಮೇಲೆ ಗೊಂದಲ ಸೃಷ್ಟಿಸಿದರು. ರಾಯರಡ್ಡಿ ಅವರ ಈ ವರ್ತನೆ ವೇದಿಕೆ ಮೇಲಿದ್ದವರಿಗೆ ಮುಜುಗರ ತಂದರೆ ವೇದಿಕೆ ಮುಂಭಾಗದಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಆಕ್ರೋಶ ತಂದಿತು.
ರಾಯರಡ್ಡಿ ಅವರ ಈ ವರ್ತನೆಯಿಂದ ಕೆಂಡಾಮಂಡಲರಾದ ಕಾರ್ಯಕರ್ತರು ಕಾರ್ಯಕ್ರಮದಿಂದ ಎದ್ದು ನಡಿ ಎಂದು ಕೂಗಿದರು. ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು. ಜೊತೆಗೆ ರಾಯರಡ್ಡಿಗೆ ಧಿಕ್ಕಾರ ಎಂದು ಕೂಗಿದ ಕಾರ್ಯಕರ್ತರು ಶಾಸಕ ಹಾಲಪ್ಪ ಆಚಾರ್ಗೆ ಜೈಕಾರ ಹಾಕಿದರು.
ಒಟ್ಟಾರೆ ಸಿಎಂ ಸಮ್ಮುಖದಲ್ಲಿ ಈ ಗೊಂದಲ ಉಂಟಾಗಿದ್ದು, ಪೊಲೀಸರು ತಕ್ಷಣವೇ ಎಚ್ಚೆತ್ತುಕೊಂಡು ಪರಿಸ್ಥಿತಿ ತಿಳಿಗೊಳಿಸಿದರು.
ಕೇಂದ್ರ ಸೂಚಿಸಿದಾಗ ಸಂಪುಟ ವಿಸ್ತರಣೆ: ಬಿಎಸ್ವೈ
-ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಹಲವು ದಿನಗಳಿಂದ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ನನೆಗುದಿ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ತಿಳಿಸಿದಾಗ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.
ಕೊಪ್ಪಳದ ಬಸಾಪುರ ಏರ್ಸ್ಟ್ರಿಪ್ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಸಂಪುಟ ಪುನರ್ರಚನೆ ಇಲ್ಲ, ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದರು.
ರಾಜ್ಯದ ಬಿಜೆಪಿ ಸಚಿವರು, ಶಾಸಕರ ಜೊತೆ ಯುವರಾಜ್ ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ. ಆದರೆ ಯುವರಾಜ ಪ್ರಕರಣ ತನಿಖೆ ಹಂತದಲ್ಲಿದೆ. ತನಿಖೆ ಮುಗಿದ ನಂತರ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದರು.
ಕೋವಿಡ್ ಕಾರಣ, ಅತಿವೃಷ್ಟಿ, ಬರಗಾಲದ ಆಪತ್ತುಗಳಿಂದಾಗಿ ನಿರೀಕ್ಷಿಸಿದಷ್ಟು ಸರಕಾರದಿಂದ ಕೆಲಸ ಮಾಡಲಾಗಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಸರಿ ಇಲ್ಲ. 40-50 ಸಾವಿರ ಬಜೆಟ್ ಖೋತಾ ಆಗಿದೆ. ಇವೆಲ್ಲವೂ ರಾಜ್ಯದ ಜನತೆಗೆ ಗೊತ್ತಿದೆ. ಜನರು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ವಿವರಿಸಿದರು.
ದೇಶದಲ್ಲಿ ಮೊದಲ ಟಾಯ್ಸ್ ಕ್ಲಸ್ಟರ್ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡ್ತಿದಿವಿ. ಕೆಲಸ ಆರಂಭವಾದ ಬಳಿಕ ಪ್ರಧಾನಿ ಮೋದಿಯವರಿಂದ ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ಪಾಟೀಲ, ಆನಂದ್ ಸಿಂಗ್, ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ ದಡೆಸೂಗುರು ಮತ್ತಿತರರು ಇದ್ದರು.
ಅಜ್ಜನ ಜಾತ್ರೆಯ ತೇರೆಳೆಯೋದು ಪಕ್ಕಾ!? -ಮೂರೇ ದಿನಕ್ಕೆ ಸೀಮಿತವಾಗಲಿದೆಯಾ ಜಾತ್ರಾ ಮಹೋತ್ಸವ!
ವಿಜಯಸಾಕ್ಷಿ ವಿಶೇಷ ಸುದ್ದಿ, ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ, ಉತ್ತರದ ಸಿದ್ಧಗಂಗೆ ಎಂದೇ ಖ್ಯಾತವಾಗಿರುವ ಕೊಪ್ಪಳ ಗವಿಮಠದ ಅಜ್ಜನ ಜಾತ್ರಾ ಮಹೊತ್ಸವದ ತೇರೆಳೆಯೋದು ಬಹುತೇಕ ಪಕ್ಕಾ ಆಗಿದೆ.
ಅಧಿಕೃತವಾಗಿ ಈವರೆಗೆ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲವಾದರೂ ಇಂದು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಮತ್ತು ರಾಘವೇಂದ್ರ ಹಿಟ್ನಾಳರವರು ಭೇಟಿ ನೀಡಿ ಇದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.
ಗವಿಮಠದ ಜಾತ್ರೆ, ಭಕ್ತರ ಜಾತ್ರೆ. ಭಕ್ತರ ತೀರ್ಮಾನವೇ ನಮ್ಮ ತೀರ್ಮಾನ ಎಂದು ಶ್ರೀಗಳು ಹೇಳಿದ್ಧಾರೆ ಎನ್ನಲಾಗಿದೆ. ಪ್ರತಿಸಲದಂತೆ ಆದ್ದೂರಿಯಾಗಿ ಮಾಡದಿದ್ದರೂ ಸಂಕ್ಷಿಪ್ತವಾಗಿ ರಥೋತ್ಸವ ಕಾರ್ಯಕ್ರಮ ಹಾಗೂ ಮೂರು ದಿನ ದಾಸೋಹ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ.
ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಚಿಂತನಾಗೋಷ್ಠಿಗಳನ್ನು ಹಾಗೂ ಹಾಸ್ಯ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಾತ್ರೆಯಲ್ಲಿ ಯಾವುದೆ ರೀತಿಯ ಅಂಗಡಿಗಳು ಮತ್ತು ವಸ್ತು ಪ್ರದರ್ಶನಗಳಿಗೆ ಅವಕಾಶ ನೀಡುವುದಿಲ್ಲ. ಮಳೇಮಲ್ಲೇಶ್ವರದಿಂದ ನಡೆಯುತ್ತಿದ್ದ ಜಾಥಾ ಸಹ ರದ್ದಾಗಿದೆ. ಭಕ್ತಾದಿಗಳು ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಮಾಸ್ಕ್ ಧರಿಸಿ ಬರುವಂತಹ ವ್ಯವಸ್ಥೆ ಮಾಡಿ ಜಾತ್ರೆಯನ್ನು ನಡೆಸೋಣ ಎನ್ನುವ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.
ಆದರೆ ಇದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಜಿಲ್ಲಾಧಿಕಾರಿಗಳು ಈ ಸಲ ಜಾತ್ರೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದ್ದರು. ಹೀಗಾಗಿ ಇಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಸಭೆ ನಡೆಸಿದ ನಂತರ ಯಾವ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಮನೆ ಮಾಡಿದೆ.
ಜಿಲ್ಲಾಧಿಕಾರಿಗಳು ಜಾತ್ರೆ ನಡೆಯುವ ಕುರಿತು ಜ.12ರಂದು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೂ ಗವಿಮಠದಿಂದ ಅಧಿಕೃತವಾಗಿ ಘೋಷಣೆಯಾಗುವವರೆಗೆ ಎಲ್ಲವೂ ಇನ್ನೂ ಅನಿರ್ದಿಷ್ಟವಾಗಿದೆ ಎಂದೇ ಹೇಳಬಹುದು.
ಜ.11ರಂದು ಮಹತ್ವದ ಸಭೆ
ಇದೇ ತಿಂಗಳ 11ರಂದು ಮತ್ತೊಮ್ಮೆ ಅಧಿಕಾರಿಗಳ, ಮಠದ ಭಕ್ತರ, ರಥೋತ್ಸವ ಸಂಘಟಕರ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಅಜ್ಜನ ಜಾತ್ರೆಯ ತೇರೆಳೆಯೋದು ಪಕ್ಕಾ!?
–ಮೂರೇ ದಿನಕ್ಕೆ ಸೀಮಿತವಾಗಲಿದೆಯಾ ಜಾತ್ರಾ ಮಹೋತ್ಸವ!
ವಿಜಯಸಾಕ್ಷಿ ವಿಶೇಷ ಸುದ್ದಿ, ಕೊಪ್ಪಳ:
ದಕ್ಷಿಣ ಭಾರತದ ಕುಂಭಮೇಳ, ಉತ್ತರದ ಸಿದ್ಧಗಂಗೆ ಎಂದೇ ಖ್ಯಾತವಾಗಿರುವ ಕೊಪ್ಪಳ ಗವಿಮಠದ ಅಜ್ಜನ ಜಾತ್ರಾ ಮಹೊತ್ಸವದ ತೇರೆಳೆಯೋದು ಬಹುತೇಕ ಪಕ್ಕಾ ಆಗಿದೆ.
ಅಧಿಕೃತವಾಗಿ ಈವರೆಗೆ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲವಾದರೂ ಇಂದು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಮತ್ತು ರಾಘವೇಂದ್ರ ಹಿಟ್ನಾಳರವರು ಭೇಟಿ ನೀಡಿ ಇದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.
ಗವಿಮಠದ ಜಾತ್ರೆ, ಭಕ್ತರ ಜಾತ್ರೆ. ಭಕ್ತರ ತೀರ್ಮಾನವೇ ನಮ್ಮ ತೀರ್ಮಾನ ಎಂದು ಶ್ರೀಗಳು ಹೇಳಿದ್ಧಾರೆ ಎನ್ನಲಾಗಿದೆ. ಪ್ರತಿಸಲದಂತೆ ಆದ್ದೂರಿಯಾಗಿ ಮಾಡದಿದ್ದರೂ ಸಂಕ್ಷಿಪ್ತವಾಗಿ ರಥೋತ್ಸವ ಕಾರ್ಯಕ್ರಮ ಹಾಗೂ ಮೂರು ದಿನ ದಾಸೋಹ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ.

ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಚಿಂತನಾಗೋಷ್ಠಿಗಳನ್ನು ಹಾಗೂ ಹಾಸ್ಯ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಾತ್ರೆಯಲ್ಲಿ ಯಾವುದೆ ರೀತಿಯ ಅಂಗಡಿಗಳು ಮತ್ತು ವಸ್ತು ಪ್ರದರ್ಶನಗಳಿಗೆ ಅವಕಾಶ ನೀಡುವುದಿಲ್ಲ. ಮಳೇಮಲ್ಲೇಶ್ವರದಿಂದ ನಡೆಯುತ್ತಿದ್ದ ಜಾಥಾ ಸಹ ರದ್ದಾಗಿದೆ. ಭಕ್ತಾದಿಗಳು ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಮಾಸ್ಕ್ ಧರಿಸಿ ಬರುವಂತಹ ವ್ಯವಸ್ಥೆ ಮಾಡಿ ಜಾತ್ರೆಯನ್ನು ನಡೆಸೋಣ ಎನ್ನುವ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.
ಆದರೆ ಇದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಜಿಲ್ಲಾಧಿಕಾರಿಗಳು ಈ ಸಲ ಜಾತ್ರೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದ್ದರು. ಹೀಗಾಗಿ ಇಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಸಭೆ ನಡೆಸಿದ ನಂತರ ಯಾವ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಮನೆ ಮಾಡಿದೆ.
ಜಿಲ್ಲಾಧಿಕಾರಿಗಳು ಜಾತ್ರೆ ನಡೆಯುವ ಕುರಿತು ಜ.12ರಂದು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೂ ಗವಿಮಠದಿಂದ ಅಧಿಕೃತವಾಗಿ ಘೋಷಣೆಯಾಗುವವರೆಗೆ ಎಲ್ಲವೂ ಇನ್ನೂ ಅನಿರ್ದಿಷ್ಟವಾಗಿದೆ ಎಂದೇ ಹೇಳಬಹುದು.
ಜ.11ರಂದು ಮಹತ್ವದ ಸಭೆ
ಇದೇ ತಿಂಗಳ 11ರಂದು ಮತ್ತೊಮ್ಮೆ ಅಧಿಕಾರಿಗಳ, ಮಠದ ಭಕ್ತರ, ರಥೋತ್ಸವ ಸಂಘಟಕರ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ದೇವೇಗೌಡರದ್ದು ಹಗಲುಗನಸು, ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಬಿಗ್ ಝೀರೋ: ಬಿ ಸಿ ಪಾಟೀಲ
–ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ನ್ನು ಅಧಿಕಾರಕ್ಕೆ ತಂದೇ ಕಣ್ಣು ಮುಚ್ಚುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ದೇವೇಗೌಡರದ್ದು ಹಗಲುಗನಸು ಎಂದು ವ್ಯಂಗ್ಯವಾಡಿದರು.
ಕೊಪ್ಪಳದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಜೆಡಿಎಸ್ಗೆ 40 ಸ್ಥಾನ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಾಲ್ಕು ಸೀಟು ಬರೋದು ಕಷ್ಟ ಇದೆ. ತಮ್ಮ ಪಕ್ಷದ ಶಾಸಕರು ಬಿಟ್ಟು ಹೋಗ್ತಾರೆ ಅಂತಾ ದೇವೆಗೌಡರು ಆ ರೀತಿ ಹೇಳಿರಬಹುದು. ಈಗಾಗಲೇ ಕಾಂಗ್ರೆಸ್, ಬಿಜೆಪಿ ಅಂತಾ ಒಬ್ಬೊಬ್ಬರು ಜೆಡಿಎಸ್ ಬಿಟ್ಟು ಹೋಗ್ತಾ ಇದ್ದಾರೆ ಎಂದು ಪಾಟೀಲ್ ಲೇವಡಿ ಮಾಡಿದರು.
ಬಿಜೆಪಿ ಅವರು ನನ್ನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು,
ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ದೊಡ್ಡ ಶೂನ್ಯ.
ಇದನ್ನು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ.
ಅವರು ಚಾಲ್ತಿಯಲ್ಲಿದ್ದಾರೆ, ಅದಕ್ಕೆ ಅವರ ಬಗ್ಗೆ ಮಾತನಾಡ್ತಾರೆ. ಇನ್ನುಳಿದವರ ಚಾಲ್ತಿಯಲ್ಲಿ ಇಲ್ಲ ಅದಕ್ಕೆ ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.

