Home Blog Page 3082

ದೇಶವನ್ನೇ ಮಾರಾಟ ಮಾಡಲು ಹೊರಟಿದೆ ಬಿಜೆಪಿ; ಶಾಸಕ ಅಮರೇಗೌಡ ಬಯ್ಯಾಪುರ ಆರೋಪ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಇಷ್ಟು ವರ್ಷ ಅಧಿಕಾರ ನಡೆಸಿದ ಬಿಜೆಪಿ ಸಾಧಿಸಿದ್ದೇನೆಂದರೆ ಬಿಎಸ್‌ಎನ್‌ಎಲ್, ರೈಲ್ವೆ ವ್ಯವಸ್ಥೆಯನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದು. ಹೀಗೇ ಬಿಟ್ಟರೆ ವಿಮಾನ ವ್ಯವಸ್ಥೆಯನ್ನು ಮಾರಾಟ ಮಾಡುತ್ತಾರೆ, ಮುಂದೆ ದೇಶವನ್ನೇ ಮಾರಾಟ ಮಾಡುತ್ತಾರೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.
ಕೊಪ್ಪಳದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಬೆಂಬಲಿತ ಗ್ರಾಪಂ ನೂತನ ಸದಸ್ಯರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯ ಶಾಸಕರ ಆಸ್ತಿ ಕನಿಷ್ಠ ಸಾವಿರಾರು ಕೋಟಿ ಇರುತ್ತೆ. ಸಚಿವ ಸ್ಥಾನ ನೀಡಬೇಕಾದರೆ ಪಕ್ಷಕ್ಕೆ ದುಡಿದ ಬಗೆ, ಜನಪರ ಕೆಲಸ ಮಾಡಿದ ರೀತಿ, ಜಾತಿ ನೋಡಿ ಸಚಿವ ಸ್ಥಾನ ನೀಡುವ ಪರಿಪಾಠ ಕಾಂಗ್ರೆಸ್‌‌ನಲ್ಲಿದ್ದರೆ, ಬಿಜೆಪಿಯಲ್ಲಿ ಯಾವ ಶಾಸಕ ಎಷ್ಟು ಕೋಟಿ ಹಣ ಪಕ್ಷಕ್ಕೆ ಕೊಡುತ್ತಾರೆ ಎಂಬುದರ ಮೇಲೆ ಮಂತ್ರಿ ಸ್ಥಾನ ನಿರ್ಧಾರ ಆಗುತ್ತೆ ಎಂದರು.
ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಮುಖ್ಯಮಂತ್ರಿಗಳು ಶೇಕಡಾ 60 ರಷ್ಟು ಸ್ಥಾನಗಳು ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ ಎಂದರೆ, ಬಿಜೆಪಿ ರಾಜ್ಯಾಧ್ಯಕ್ಷರು ಶೇಕಡಾ 55 ರಷ್ಟು ಎಂದು ತಿಳಿಸಿದರು. ಮಂತ್ರಿಗಳು ಶೇಕಡಾ 50 ರಷ್ಟು ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ ಎಂದು ಹೇಳಿರುವುದನ್ನ ನೋಡಿದರೆ ಬಿಜೆಪಿ ನಾಯಕರೆಲ್ಲ ಹೇಳುವುದು ಸುಳ್ಳು ಎಂಬುದು ಸ್ಪಷ್ಟ. ರಾಜ್ಯಾದ್ಯಂತ ಕಾಂಗ್ರೆಸ್ ಬೆಂಬಲಿತರೇ ಹೆಚ್ಚು ಗೆದ್ದಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಮಾತನಾಡಿ, ಅಧಿಕಾರ ವಿಕೇಂದ್ರೀಕರಣದ ಪರಿಕಲ್ಪನೆ ಹುಟ್ಟಿಕೊಂಡದ್ದೇ ಕಾಂಗ್ರೆಸ್ ಕಾಲಾವಧಿಯಲ್ಲಿ. ಬಿಜೆಪಿ ರಾಜ್ಯವನ್ನು, ದೇಶವನ್ನು ಅಧಃಪತನದ ಹಾದಿಯತ್ತ ಒಯ್ಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಜಿಲ್ಲೆಯಲ್ಲಿ, ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಡಿದ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುವ ಕಾಲ ದೂರವಿಲ್ಲ ಎಂದು ದೂರಿದರು.
ಕೋವಿಡ್-19 ಹೆಸರಿನಲ್ಲಿ ಬಿಜೆಪಿ ಸರಕಾರ ಲೂಟಿ ಹೊಡೆಯುವ ಕೆಲಸಕ್ಕೆ ಇಳಿದಿದೆಯೇ ಹೊರತು ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಯಡಿಯೂರಪ್ಪ ಸಿಎಂ ಆದನಂತರ ಹೈದ್ರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೆ ಹೊರತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡಿಲ್ಲ ಎಂದು ಅವರು ಹರಿ ಹಾಯ್ದರು.
ದೊಡ್ಡ ದೊಡ್ಡ ಶ್ರೀಮಂತರಿಗೆ ಮಕ್ಕಳು, ಮೊಮ್ಮಕ್ಕಳು ಹುಟ್ಟಿದರೆ ಅಲ್ಲಿ ಭೇಟಿ ಕೊಡುವ ಪ್ರಧಾನಿ ಮೋದಿಯವರು, ರೈತರು ಸಂಕಷ್ಟ ಅನುಭವಿಸುತ್ತಲೇ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದು, ಅಲ್ಲಿಗೆ ಭೇಟಿ ಕೊಡಲು, ಅವರ ಸಮಸ್ಯೆ ಆಲಿಸಲು ಪ್ರಧಾನಿ ಬಳಿ ಸಮಯ ಇಲ್ಲ. ಬದಲಾಗಿ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಬಿಜೆಪಿ ಸರಕಾರ ಎಂದು ಗುಡುಗಿದರು.
ಪಕ್ಷದ ಮುಖಂಡರಾದ ಜನಾರ್ದನ ಹುಲಗಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಬಾಲಚಂದರ್, ಕಾಟನ್ ಪಾಷಾ, ಅಕ್ಬರ್ ಪಾಷಾ ಪಲ್ಟಾನ್, ಸುರೇಶ್ ಭೂಮರಡ್ಡಿ, ಕೆ.ಬಸವರಾಜ ಹಿಟ್ನಾಳ, ಎಸ್.ಬಿ.ನಾಗರಳ್ಳಿ, ಜುಲ್ಲು ಖಾದ್ರಿ, ಇಂದಿರಾ ಭಾವಿಕಟ್ಟಿ, ಕಿಶೋರಿ, ಮಾಲತಿ ನಾಯಕ್, ರವಿ ಕುರಗೋಡ್ ಇತರರು ಇದ್ದರು. ಕೃಷ್ಣ ಇಟ್ಟಂಗಿ ಕಾರ್ಯಕ್ರಮ ನಿರ್ವಹಿಸಿದರು.

ಮಾಜಿ ಸಚಿವ ತಂಗಡಗಿಯವರ ಮಾವ ಹಿರೇ ಹನುಮಂತಪ್ಪ ಗುತ್ತೆದಾರ ನಿಧನ

0

ಮಾಜಿ ಸಚಿವ ಶಿವರಾಜ ತಂಗಡಗಿಯವರ  ಮಾವ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ವಿದ್ಯಾವತಿ ಶಿವರಾಜ ತಂಗಡಗಿಯವರ ತಂದೆ ಹಿರೇ ಹನುಮಂತಪ್ಪ ಗುತ್ತೆದಾರ (80) ಭಾನುವಾರ ರಾತ್ರಿ ನಿಧನರಾದರು. ಮೃತರಿಗೆ ನಾಲ್ಕು ಜನ ಪುತ್ರರು, ಐದು ಜನ ಪುತ್ತಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಮಸ್ಕಿ ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಸಮಂಜರಿ ಕಾರ್ಯಕ್ರಮವಾದ ಕಾಂಗ್ರೆಸ್ ಸಮಾರಂಭ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ಗ್ರಾ.ಪಂ. ನೂತನ ಸದಸ್ಯರ ಕಾಂಗ್ರೆಸ್ ಅಭಿನಂದನಾ ಸಮಾರಂಭದಲ್ಲಿ ರಸಮಂಜರಿ ಕಾರ್ಯಕ್ರಮ ಗಮನ ಸೆಳೆಯಿತು. ನಿಗದಿಗೊಳಿಸಿದಂತೆ ೧೧ ಗಂಟೆಗೆ ಆರಂಭವಾಗಬೇಕಿದ್ದ ಕಾರ್ಯಕ್ರಮ ೧೧:೩೦ ಆದರೂ ಆರಂಭವಾಗದಿದ್ದಾಗ ಕಾಂಗ್ರೆಸ್ ಮುಖಂಡ ಪರಶುರಾಮ ಕೆರಳ್ಳಿ ವೇದಿಕೆಯ ಮೇಲೆ ಕರೋಕೆ ಹಾಡುಗಳ ಗಾಯನ ಆರಂಭಿಸಿದರು.
ಗ್ರಾ. ಪಂ. ಸದಸ್ಯರ ಅಭಿನಂದನಾ ಸಮಾರಂಭ ಕೊಪ್ಪಳದ ಶಿವಶಾಂತ ಮಂಗಲ ಭವನದಲದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸನ್ಮಾನ ಸಮಾರಂಭ ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಬರುವಿಕೆವರೆಗೂ ಬೇಸರ ಕಳೆಯಲು ಚಿತ್ರಗೀತೆ ಗಳನ್ನು ಹಾಡಿ ಚಿತ್ರಗೀತೆ ಹಾಡಿ ಬಂದವರನ್ನು ಕಾಂಗ್ರೆಸ್ ಎಸ್‌ಟಿ ಘಟಕದ ಮುಖಂಡ ಪರಶುರಾಮ ಕೆರೆಹಳ್ಳಿ ರಂಜಿಸಿದರು.
ಹಳೇ ಕನ್ನಡ ಚಿತ್ರಗೀತೆಗಳ ಟ್ರ್ಯಾಕ್‌ಗೆ ದನಿ ನೀಡಿದ ಕಾಂಗ್ರೆಸ್ ಮುಖಂಡನ ಹಾಡುಗಾರಿಕೆಯನ್ನು ಗ್ರಾಪಂ ಸದಸ್ಯರು ಎಂಜಾಯ್ ಮಾಡಿದರು.

ರೈತರ ಹೋರಾಟದ ಹಿಂದೆ ಕಾಂಗ್ರೆಸ್, ಕಮ್ಯುನಿಸ್ಟ್ ರ ಕೈವಾಡವಿದೆ; ಕೃಷಿ ಕಾಯ್ದೆ ಸಮರ್ಥಿಸಿದ ಎಸ್.ಎಲ್.ಬೈರಪ್ಪ

ವಿಜಯಸಾಕ್ಷಿ ಸುದ್ದಿ, ಮೈಸೂರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳನ್ನು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಬೆಂಬಲಿಸಿದರು.

ಮೈಸೂರಿನಲ್ಲಿ ಈ ಕುರಿತು ಮಾತನಾಡಿರುವ ಅವರು, ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವವರು ಕೇವಲ ಪಂಜಾಬಿ ರೈತರು ಮಾತ್ರ.
ಹಾಗಾಗಿ, ಅವರು ಇಡೀ ದೇಶದ ರೈತರನ್ನು ಪ್ರತಿನಿಧಿಸಿದಂತೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೃಷಿ ಮಸೂದೆಯಲ್ಲಿ ರೈತರಿಗೆ ಅನುಕೂಲಕರ‌ವಾಗುವ ಅಂಶಗಳಿವೆ. ಈ ಹೋರಾಟದ ಹಿಂದೆ ಕಾಂಗ್ರೆಸ್, ಕಮ್ಯುನಿಸ್ಟ್‌ ರ ಕೈವಾಡವಿದೆ. ಅವರಿಗೆ ಪ್ರಧಾನಿ‌ ಮೋದಿಯವರ ಜನಪ್ರಿಯತೆ ಸಹಿಸಲಾಗುತ್ತಿಲ್ಲ ಎಂದು ಬೈರಪ್ಪ ಕುಟುಕಿದರು.

ಗೋವಿಗೂ ನಮಗೂ ತಾಯಿ ಮಕ್ಕಳ ಸಂಬಂಧವಿದೆ. ಗೋವು ಅಹಿಂಸೆಯ ಪ್ರತೀಕ. ಚಿಕ್ಕಂದಿನಿಂದ ಎಲ್ಲರೂ ಗೋವಿನ ಹಾಲು ಕುಡಿದೇ ಬೆಳೆದಿದ್ದೇವೆ.
ವಯಸ್ಸಾದ ಮೇಲೆ ತಾಯಿಯನ್ನು ನಿರುಪಯುಕ್ತವೆಂದು ಹೇಳಲಾಗುವುದೇ ಎಂದು ಪ್ರಶ್ನಿಸಿದ ಅವರು, ಗೋವು ಟೀಕಿಸುವವರು ಮೂಲಭೂತ ಜ್ಞಾನ ಇಲ್ಲದವರು ಎಂದು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿರುವುದನ್ನು ಸಮರ್ಥಿಸಿಕೊಂಡರು.

ಹನುಮಂತ ಗುಲಾಮಗಿರಿಯ ಸಂಕೇತ. ಮಾಜಿ ಸಿದ್ದರಾಮಯ್ಯ ಹನುಮ‌ ಜಯಂತಿಯನ್ನೇ‌ ಪ್ರಶ್ನೆ ಮಾಡಿದ್ದಾರೆ. ಇದು ನಾನು ಉತ್ತರ ಕೊಡಲು ಲಾಯಕ್ಕೇ ಇಲ್ಲದ‌ ವಿಚಾರ. ಹಾಗಾಗಿ ಅಂತಹವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ
ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಜ.14 ರಂದು ಬೃಹತ್ ಪಾದಯಾತ್ರೆ: ಜಯ ಮೃತ್ಯುಂಜಯ ಸ್ವಾಮೀಜಿ

ವಿಜಯಸಾಕ್ಷಿ ಸುದ್ದಿ, ಗದಗ

ಪಂಚಮಸಾಲಿ ಸಮಾಜಕ್ಕೆ 2’A’ ಮೀಸಲಾತಿ ನೀಡುವಂತೆ
ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಟಿ‌ ನಡೆಸಿ ಈ ಬಗ್ಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2’A’ ಮೀಸಲಾತಿ ನೀಡುವಂತೆ ಮತ್ತು ಕೇಂದ್ರ ಸರ್ಕಾರದ ಒಬಿಸಿ ಸೇರ್ಪಡೆಗೆ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಸೂಕ್ತವಾದ ಪರಿಹಾರ ಸಿಕ್ಕಿಲ್ಲ ಎಂದರು.

ಈ ನಿಟ್ಟಿನಲ್ಲಿ ‘ಪಂಚಮಸಾಲಿ ನಡೆ, ವಿಧಾನ ಸೌಧದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ಜ.14 ರಂದು ಕೂಡಲ ಸಂಗಮದಿಂದ
ಇಳಕಲ್, ಕುಷ್ಟಗಿ, ಯಲಬುರ್ಗಾ, ಕೊಪ್ಪಳ, ಹರಿಹರ, ತುಮಕೂರು ಮಾರ್ಗವಾಗಿ ಬೆಂಗಳೂರುವರೆಗೆ ಸುಮಾರು 1 ಲಕ್ಷ ಜನರು ಪಾದಯಾತ್ರೆ ಮಾಡಿ ಬಜೆಟ್ ಅಧಿವೇಶನ ನಡೆಯುವ ಸಂದರ್ಭದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಪಂಚಮಸಾಲಿ ಸಮಾಜದಿಂದ ಪಂಚ ಲಕ್ಷ ಹೆಜ್ಜೆಯ ಮೂಲಕ ಹೋರಾಟ ಮಾಡುತ್ತೇವೆ. ಭೂಮಿ ತಾಯಿಯ ಮಕ್ಕಳ ನೋವು, ಸಂಕಟವನ್ನು ರಾಜ್ಯದ ದೊರೆಯಾಗಿರುವ ಮುಖ್ಯಮಂತ್ರಿ ಅವರಿಗೆ ತೋರಿಸುತ್ತೇವೆ ಎಂದು‌ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; 8 ಜನರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಮಂಗಳೂರು

ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿ
ಬಸ್ ನಲ್ಲಿದ್ದ ಎಂಟು ಜನ ದುರ್ಮರಣ ಹೊಂದಿರುವ ಘಟನೆ
ಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ ಬಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಪುತ್ತೂರಿನಿಂದ ಕೊಡಗಿನ ಕರಿಕೆಯಲ್ಲಿದ್ದ ಮದುವೆ ಕಾರ್ಯಕ್ರಮಕ್ಕೆ ಕೇರಳದ ಪಾಣತ್ತೂರು ಮೂಲಕ ಹೊರಟಿದ್ದ ಖಾಸಗಿ ಬಸ್ ನಲ್ಲಿ
ಒಟ್ಟು 63 ಜನ ಪ್ರಯಾಣಿಕರಿದ್ದರು.

ಮೃತರನ್ನು ರಾಜೇಶ್, ರವಿಚಂದ್ರ, ಆದರ್ಶ, ಶ್ರೇಯಸ್, ಸುಮತಿ, ಶಶಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

ಬಸ್ ಪಲ್ಟಿಯಾಗಿರುವ ಪರಿಣಾಮದಿಂದಾಗಿ ಬಸ್ ನಲ್ಲಿದ್ದ ಹತ್ತುಕ್ಕೂ ಹೆಚ್ಚಿನ ಜನರ ಪರಿಸ್ಥಿತಿ ಗಂಭೀರವಾಗಿದ್ದು, ಮೂವತ್ತುಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಗಾಯಗೊಂಡವರನ್ನು ಮಂಗಳೂರು ಹಾಗೂ ಕಾಸರಗೋಡಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯನ್ ತನಿಖೆಗೆ ಆದೇಶಸಿದ್ದಾರೆ.

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; ಐವರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಮಂಗಳೂರು

ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿ
ಬಸ್ ನಲ್ಲಿದ್ದ ಐವರು ಜನ ದುರ್ಮರಣ ಹೊಂದಿರುವ ಘಟನೆ
ಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ ಬಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಪುತ್ತೂರಿನಿಂದ ಕೊಡಗಿನ ಕರಿಕೆಯಲ್ಲಿದ್ದ ಮದುವೆ ಕಾರ್ಯಕ್ರಮಕ್ಕೆ ಕೇರಳದ ಪಾಣತ್ತೂರು ಮೂಲಕ ಹೊರಟಿದ್ದ ಖಾಸಗಿ ಬಸ್ ನಲ್ಲಿ
ಒಟ್ಟು 63 ಜನ ಪ್ರಯಾಣಿಕರಿದ್ದರು.

ಬಸ್ ಪಲ್ಟಿಯಾಗಿರುವ ಪರಿಣಾಮದಿಂದಾಗಿ ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಂಚಾಯಿತಿಯ ನೂತನ ಸದಸ್ಯ ತಾಳಿಕೋಟಿ ಪೊಲೀಸರ ಋಣ ತೀರಿಸಿದನೇ ?

ವಿಜಯಸಾಕ್ಷಿ ಸುದ್ದಿ, ವಿಜಯಪುರ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸದಸ್ಯನೊಬ್ಬ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಓರ್ವ ಕಾನ್ಸ್ಟೇಬಲ್ಗೆ ಸನ್ಮಾನ ಮಾಡಿರುವ ಘಟನೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಜಿಲ್ಲೆಯ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಸದಸ್ಯನ ಸನ್ಮಾನಕ್ಕೆ ಪ್ರತಿಯಾಗಿ ಪಿಎಸ್​ಐ ಸಹ ಸಿಹಿ ತಿನ್ನಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಚುನಾವಣೆಯಲ್ಲಿ ಸಹಕರಿಸಿದ್ದಕ್ಕೆ ಋಣ ತೀರಿಸಿದ್ದಾರೆಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಘಟನೆಯ ವಿವರಣೆಗೆ ಬರುವುದಾರೆ, ತಾಳಿಕೋಟ ತಾಲೂಕಿನ ಬಳವಾಟ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಸನಗೌಡ ಸಾಸನೂರ ಎಂಬುವರು ಗೆಲುವು ಸಾಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪಿಎಸ್‌ಐ ಗಂಗೂಬಾಯಿ ಬಿರಾದಾರಗೆ ಠಾಣೆಯಲ್ಲಿ ನೂತನ ಸದಸ್ಯ ತಮ್ಮ ಬೆಂಬಲಿಗರೊಂದಿಗೆ ಸನ್ಮಾನ ಮಾಡಿದರು. ಅಲ್ಲದೆ, ಠಾಣೆಯ ಎದುರು ಪೊಲೀಸ್ ಕಾನ್ಸಟೇಬಲ್ ಶಿವನಗೌಡ ಬಿರಾದಾರಗೂ ಸನ್ಮಾನ ಮಾಡಿದ್ದಾರೆ.

ಇದಾದ ಬಳಿಕ ಸನ್ಮಾನದ ಫೋಟೋಗಳನ್ನು ಬಸವರಾಜ ಭಜಂತ್ರಿ‌ ಹೆಸರಿನ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಪಿಎಸ್‌ಐ ಜಿ. ಜಿ. ಬಿರಾದಾರ ಮೇಡಂ ಹಾಗೂ ನಮ್ಮೂರ ಹಿತೈಷಿ ಪೊಲೀಸ್ ಆರಕ್ಷಕ ಶಿವನಗೌಡ ಬಿರಾದಾರರನ್ನು ಭೇಟಿಯಾಗಿ ಚುನಾವಣೆ ಗೆಲುವಿಗೆ ಸಹಕರಿಸಿದ್ದಕ್ಕೆ ಗೌರವ ಸನ್ಮಾನ‌ ಮಾಡಲಾಯಿತು ಎಂದು ಫೇಸ್​ಬುಕ್​ನಲ್ಲಿ ಬರೆದು, ಸಂತಸ ವ್ಯಕ್ತಪಡಿಸಲಾಗಿದೆ.

ಗ್ರಾ.ಪಂ ನೂತನ ಸದಸ್ಯ ಬಸವರಾಜಗೆ ಪಿಂಜಾರ ಯುವಕರಿಂದ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಯಾದಗಿರಿ

ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಭ್ಯರ್ಥಿ ಬಸವರಾಜ ಕಟ್ಟಿಮನಿ ಅವರಿಗೆ ಹುಣಸಗಿ ಪಟ್ಟಣದಲ್ಲಿ ಪಿಂಜಾರ ಯುವಕರಿಂದ ಸನ್ಮಾನಿಸಲಾಯಿತು.

ನೂತನ ಸದಸ್ಯ ಬಸವರಾಜ್ ಮಾತನಾಡಿ, ನೀವು ನನಗೆ ಸನ್ಮಾನ ಮಾಡಿದ್ದು ಯಾವ ಕಾಲಕ್ಕೂ ಮರೆಯುವಂತಿಲ್ಲ ನಿಮ್ಮೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದರು.

ಗ್ರಾಮದ ಅಭಿವೃದ್ಧಿಯೇ ನನ್ನ ಮುಂದಿನ ಯೋಜನೆಯಾಗಿದ್ದು ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಗ್ರಾಮದಲ್ಲಿನ ಹಲವಾರು ಸಮಸ್ಯೆಗಳು ಹಾಗೂ ಕುಂದು ಕೊರತೆಗಳಿಗೆ ಮೊದಲು ಸ್ಪಂದಿಸುತ್ತೆನೆ ಕುಡಿಯುವ ನೀರು, ಚರಂಡಿಯ ವ್ಯವಸ್ಥೆ, ಹೊಸದಾಗಿ ಶೌಚಾಲಯಗಳ ನಿರ್ಮಾಣ, ಗ್ರಾಮದಲ್ಲಿನ ಸಿಸಿ ರಸ್ತೆಗಳ ನಿರ್ಮಾಣ, ಗ್ರಾಮೀಣ ಅಡಿಯಲ್ಲಿ ಬರುವ ನರೇಗ ದಿಂದ ( ಉದ್ಯೋಗ ಖಾತ್ರಿ ) ಅನುದಾನ ಪಡೆದು, ಬೀದಿದೀಪ ಸೇರಿದಂತೆ ಇನ್ನಿತರ ಮೂಲಸೌಲಭ್ಯಗಳ ಕಡೆಗೆ ಹೆಚ್ಚು ಗಮನ ಹರಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಯುವ ನಾಯಕ ಸೋಪಿಸಾಬ ಡಿ ಸುರಪುರ, ಯುವ ಮುಖಂಡ ಹುಸೇನಸಾಬ ಗಾದಿ, ಸೈಯದ್ ದಾವಲಸಾಬ ಡಿ ಬೆಣ್ಣೂರ, ನಾಗಪ್ಪ ಬೋವಿ, ಸಾಬಣ್ಣ ಮಲಗಲದಿನ್ನಿ ಇತರರು ಉಪಸ್ಥಿತರಿದ್ದರು.

ಜೆಡಿಎಸ್ ಕಾಲಕ್ಕೆ ತಕ್ಕಂತೆ ಬದಲಾಗುತ್ತೆ; ಶಾಸಕ ದೇವೇಗೌಡ ಟೀಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು

ಕಾಲ ಚಕ್ರ ಉರುಳುತ್ತಾ ಇರುತ್ತೆ, ಆ‌ ಸಮಯಕ್ಕೆ ಏನಾಗಬೇಕೋ‌ ಅದು‌ ಆಗುತ್ತೆ ಎಂದು ಜೆಡಿಎಸ್ ಕಾಲಕಾಲಕ್ಕೆ ಬದಲಾವಣೆ ಆಗುತ್ತದೆ ಎಂದು ಪರೋಕ್ಷವಾಗಿ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷವನ್ನು ಪರೋಕ್ಷವಾಗಿ ಟೀಕಿಸಿದರು.

ಎನ್‌ಡಿಎ ಜೊತೆ ಜೆಡಿಎಸ್‌ ಕೈ ಜೋಡಿಸುವ ವಿಚಾರವಾಗಿ
ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಲ ಚಕ್ರ ಉರುಳಿದಂತೆ ರಾಜಕೀಯ ಬದಲಾವಣೆ ಆಗುತ್ತೆ.
ಹಿಂದೆ ಧರಂಸಿಂಗ್ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಡಿಸಿಎಂ ಆಗಿದ್ರು. ಕುಮಾರಸ್ವಾಮಿ ಸಿಎಂ ಆದಾಗ ಯಡಿಯೂರಪ್ಪ ಡಿಸಿಎಂ ಆಗಿದ್ರು. 2018 ರಲ್ಲಿ ಕುಮಾರಸ್ವಾಮಿ ಸಿಎಂ ಆದಾಗ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿರುವುದನ್ನು ನೆನಪಿಸಿದರು.

ಹೊಸ ವರ್ಷದಲ್ಲಿ ನನ್ನ ರಾಜಕೀಯ ಜೀವನದಲ್ಲಿ ಏನು ಬದಲಾವಣೆ ಇಲ್ಲ. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. 2023ಕ್ಕೆ ಬದಲಾವಣೆ ಆಗಬಹುದು ಎಂದರು.

ಮೈಸೂರು ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು‌ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ನನ್ನನ್ನು ಕೇಳಿಲ್ಲ. ಈಗ ನಾನು ಉಸ್ತುವಾರಿ ಸಚಿವನಲ್ಲ. ನನ್ನ ಕೇಳ್ತಾರಾ? ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನಿಸಿದರು.

error: Content is protected !!