Home Blog Page 3084

ಉಪ ಸಭಾಪತಿ ಧರ್ಮೇಗೌಡ ನಿಧನಕ್ಕೆ ಮಹಾಮಂಡಳ ಸಂತಾಪ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ನಿಧನಕ್ಕೆ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಧರ್ಮೇಗೌಡರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ. ಶ್ರೀಯುತರ ಅಗಲಿಕೆಯಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ, ಹಿರಿಯ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ.

ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಎಂದು ಸಂತಾಪ ಸಂದೇಶದ ಮೂಲಕ ಪ್ರಾರ್ಥಿಸಿದ್ದಾರೆ.

ಸಜ್ಜನ ವ್ಯಕ್ತಿತ್ವ ಹೊಂದಿದ್ದ ಅವರ ಹಠಾತ್‌ ಮರಣದ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ರೈಲಿಗೆ ತಲೆಕೊಟ್ಟು ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿಕ್ಕಮಗಳೂರು

ವಿಧಾನಪರಿಷತ ಉಪ ಸಭಾಪತಿ‌ ಎಸ್.ಎಲ್.ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಿಂದ ಒಬ್ಬರೇ ಹೊರಟವರು ರಾತ್ರಿ ಬಹಳ ಹೊತ್ತಾದರೂ ಮರಳಲಿಲ್ಲ. ಫೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಆಗುತ್ತಿರಲಿಲ್ಲ. ಅನುಮಾನಗೊಂಡು ಗನ್ ಮ್ಯಾನ್, ಪೊಲೀಸರು, ಸ್ಥಳೀಯರು ಹುಡುಕಿದಾಗ ಅವರು ರೈಲಿಗೆ ಸಿಕ್ಕು ಮೃತಪಟ್ಟಿರುವುದು ಗೊತ್ತಾಗಿದೆ.

ರೈಲಿನ ರಭಸಕ್ಕೆ ದೇಹ ಎರಡು ತುಂಡಾಗಿ ಎರಡು ದಿಕ್ಕಿಗೆ ಬಿದ್ದಿತ್ತು. ತಲೆ ಗುರುತು ಹಿಡಿದು ಮೃತದೇಹ ಧರ್ಮೇಗೌಡರದ್ದೇ ಎಂದು ಖಚಿತಪಡಿಸಿಕೊಂಡ ಗನ್ ಮನ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯದ ಮಟ್ಟಿಗೆ ಇದೊಂದು ಆತ್ಮಹತ್ಯೆ ಎನ್ನಲಾಗುತ್ತಿದೆ. ಆದರೆ ಇತರೆ ಸಾಧ್ಯತೆಗಳನ್ನು ತಳ್ಳಿ ಹಾಕದ ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ,ಸಿ.ಟಿ. ರವಿ ಸೇರಿದಂತೆ ಜಿಲ್ಲೆಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.

16 ಡಿಸಬರ್ 1955 ರಂದು ಜನಿಸಿದ್ದ ಧರ್ಮೇಗೌಡರಿಗೆ 65 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಪರಿಷತ್ ನಲ್ಲಿ ನಡೆದ ಘಟನೆಯಿಂದ ನೊಂದು ಈ ರೀತಿ ಮಾಡಿಕೊಂಡರಾ ಎಂಬ ಅನುಮಾನಗಳು ಕಾಡುತ್ತಿವೆ.

ಗ್ರಾಮ ಪಂಚಾಯತಿ ಮಟ್ಟದಿಂದ ಬೆಳೆದು ಬಂದಿದ್ದ ಎಸ್.ಎಲ್.ಧರ್ಮೇಗೌಡರು ಬಿಳಕಲ್ ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಎರಡು ಬಾರಿ ತಾ.ಪಂ.ಸದಸ್ಯರಾಗಿದ್ದರು. ಅಲ್ಲದೇ, ಬೀರೂರು ಶಾಸಕರಾಗಿದ್ದ ಅವರು ವಿಧಾನ ಪರಿಷತ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದರು.

ಅಲ್ಲದೇ, ವಿವಿಧ ನಿಗಮ-ಮಂಡಳ, ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಎಸ್.ಎಲ್.ಧರ್ಮೇಗೌಡ ಅವರ ಅಕಾಲಿಕ ಸಾವಿಗೆ ಸಿಎಂ ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ‌ ಸಿಎಂ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಎಸ್.ಎಲ್.ಬೋಜೇಗೌಡ ಮತ್ತು ಎಸ್.ಎಲ್.ಧರ್ಮೇಗೌಡ ಸಹೋದರರು ದೇವೇಗೌಡರ ಕುಟುಂಬಕ್ಕೆ ಹತ್ತಿರದವರಾಗಿದ್ದು
ಜೆ ಡಿ ಎಸ್ ಜತೆಗೇ ರಾಜಕೀಯ ಜೀವನ ಆರಂಭಿಸಿದ್ದರು. ಯಾವತ್ತೂ ಪಕ್ಷ ನಿಷ್ಠೆ ಬದಲಿಸಿರಲಿಲ್ಲ.

ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್; ಡಿ.31 ಸಂಜೆಯಿಂದ ನಿಷೇಧಾಜ್ಞೆ ಜಾರಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾ ವೈರಸ್ ರೂಪಾಂತರ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಡಿ.31 ರ ಸಂಜೆ 6 ರಿಂದ ಜ.1 ರವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದು, ಡಿ.31 ರ ರಾತ್ರ 8 ಗಂಟೆಯಿಂದ ಬೆಂಗಳೂರಿನ ಪ್ಲೈ ಓವರ್ ಬಂದ್ ಆಗಿರಲಿವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈರಸ್ ರೂಪಾಂತರ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ನಿಬಂದನೆಗಳಿದ್ದು, ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರಲು ಅವಕಾಶವಿಲ್ಲ. ಪ್ರತಿಯೊಬ್ಬರು ಕೊವಿಡ್ ನಿಯಮ ಪಾಲಿಸಬೇಕು ಎಂದರು.

ಖಾಸಗಿ ಕ್ಲಬ್ ಗಳು, ಅಪಾರ್ಟ್ಮೆಂಟ್ ನಿವಾಸಿಗಳಿಗೆ ಆಚರಣೆಗೆ ಅವಕಾಶವಿದ್ದು, ಯಾವುದೇ ಬ್ಯಾಂಡ್, ಮ್ಯೂಸಿಕ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ. ಹೊಸ ವರ್ಷಾಚರಣೆಗೆ ಡಿಜೆ ಅವಕಾಶವಿಲ್ಲ.

ಡಿ.31 ರಿಂದ ಬೆಂಗಳೂರು ನಗರಾದ್ಯಾಂತ ಹೆಚ್ಚಿನ ಕಡೆ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುತ್ತೇವೆ. ಅನಾವಶ್ಯಕವಾಗಿ ಜಾಲಿರೈಡ್ ತೆರಳಲು ಅವಕಾಶವಿಲ್ಲ. ಅಲ್ಲದೇ, ವ್ಹಿಲಿಂಗ್, ಡ್ರಾಗ್ ರೈಡ್ ಮಾಡಿದರೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಪಂತ್ ತಿಳಿಸಿದರು.

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಸ್ಥಾಪಿಸಲಾಗುವುದು. ಮಾಲ್, ರೆಸ್ಟೋರೆಂಟ್, ಪಬ್, ಕ್ಲಬ್ ಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು.
ಅಡ್ವಾನ್ಸ್ ಬುಕಿಂಗ್ ಮಾಡಿದ ಶೇ.50 ಜನರಿಗೆ ಮತ್ತು ಪ್ರವೇಶ ಕೂಪನ್ ಪಡೆದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ರಾತ್ರಿ 11 ಕ್ಕೆ ಬಾರ್, ವೈನ್ ಶಾಪ್ ಬಂದ್ ಮಾಡಬೇಕು. ತುರ್ತು ಸೇವೆ, ತುರ್ತು ಚಟುವಟಿಕೆಗಳಿಗೆ ಎಂದಿನಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಗ್ರಾ.ಪಂ. ಚುನಾವಣೆ: ಜಿಲ್ಲೆಯ 7 ಕಡೆ ಮತ ಎಣಿಕೆ ಕೇಂದ್ರ

ವಿಜಯಸಾಕ್ಷಿ ಸುದ್ದಿ, ಗದಗ

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಮೊದಲನೇ ಹಾಗೂ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಡಿ.30 ರಂದು ಮತ ಎಣಿಕೆ ಕಾರ್ಯವು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಗದಗ ನಗರದ ಶ್ರೀಗುರುಬಸವ ಆಂಗ್ಲ ಮಾಧ್ಯಮ ಶಾಲೆ, ತೋಂಟದಾರ್ಯ ಇಂಜನೀಯರಿಂಗ್ ಕಾಲೇಜು, ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಕಲಾ ಮಹಾವಿದ್ಯಾಲಯ, ಶಿರಹಟ್ಟಿಯ ಎಫ್.ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯ, ಮುಂಡರಗಿಯ ಕೆ.ಆರ್. ಬೆಲ್ಲದ ಕಾಲೇಜು,

ರೋಣದ ಡಿ.ಪೌಲ್ ಅಕಾಡೆಮಿ ಶಾಲೆ, ಗಜೇಂದ್ರಗಡದ ಶ್ರೀಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ನರಗುಂದ ಪಟ್ಟಣದ ಶ್ರೀವಿಶ್ವೇಶ್ವರಯ್ಯ ಪಾಲಿಟೆಕ್ನಿಕ್ ಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಾನು ದನದ ಮಾಂಸ ತಿನ್ನುತ್ತೇನೆ ಅದನ್ನ ಕೇಳೋದಕ್ಕೆ ಅವ್ರ್ಯಾರು? ಸಿದ್ದರಾಮಯ್ಯ ಪ್ರಶ್ನೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದ ಬೆನ್ನಲ್ಲೇ ಮಾಜಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿರುವ ಅವರು, ದನದ ಮಾಂಸ ಕೆಲವರ ಆಹಾರ ಪದ್ಧತಿ, ಅದನ್ನೇಕೆ ಪ್ರಶ್ನೆ ಮಾಡ್ತೀರಾ?. ಆಹಾರ ಆಯ್ಕೆ ಅವರವರ ಇಚ್ಛೆ ಅದನ್ನು ಕಟ್ಟಿಕೊಂಡು ಇವರಿಗೇನು? ಎಂದು ಪ್ರಶ್ನಿಸಿರುವ ಅವರು ನನ್ನ ಆಹಾರ ನನ್ನ ಹಕ್ಕು ಎಂದು ಹೇಳಿದ್ದಾರೆ.

ನಾನು ದನದ ಮಾಂಸ ತಿನ್ನುತ್ತೇನೆ ಅದನ್ನ ಕೇಳುವುದಕ್ಕೆ ಅವರು ಯಾರು? ಎಂದು ಬಹಿರಂಗವಾಗಿಯೇ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ರವಿವಾರವಷ್ಟೇ ಮೈಸೂರು ಜಿಲ್ಲೆಯ ಸಿದ್ದರಾಮಯ್ಯನಹುಂಡಿಯಲ್ಲಿ ಹನುಮನ ಹುಟ್ಟಿದ ದಿನವನ್ನು ಕೇಳಿ ಸಿದ್ದರಾಮಯ್ಯ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಬಿಜೆಪಿ ನಾಯಕರು ಮುಗಿ ಬಿದ್ದಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿರೋಧ ವ್ಯಕ್ತಪಡಿಸಿದ್ದರು.

ಸುಗ್ರಿವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ; ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು

ಸುಗ್ರಿವಾಜ್ಞೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದೆ.

ಸೋಮವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆಗೆ ಅನುಮೋದನೆ ಸಿಕ್ಕಿದೆ. ಈ ಕುರಿತು ಸುದೀರ್ಘ ಚರ್ಚೆ ನಡೆಸಿದೆ.

ವಿಧಾನಸಭೆಯಲ್ಲಿ ಗೋ ಹತ್ಯೆ ಕಾಯ್ದೆಗೆ ಅಂಗೀಕಾರ ಪಡೆದಿದ್ದ ರಾಜ್ಯ ಸರ್ಕಾರ, ವಿಧಾನ ಪರಿಷತ್ ನಲ್ಲಿ ಪಡೆಯಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಮುಂದಿನ ಅಧಿವೇಶನದವರೆಗೂ ಕಾಯದೇ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿ ಮಾಡಿದೆ.

ವಿಧಾನಸಭೆಯಲ್ಲಿ ಕಾಯ್ದೆ ಅಂಗೀಕಾರಗೊಳ್ಳುತ್ತಿದ್ದಂತೆ ರಾಜ್ಯಾದ್ಯಂತ ಕೆಲ ಹಿಂದೂಪರ ಸಂಘಟನೆಗಳು ಸಂಭ್ರಮಿಸಿದ್ದವು. ಅಲ್ಲದೇ, ಸರ್ಕಾರಕ್ಕೆ ಅಭಿನಂದ‌ನೆಗಳ ಸುರಿಮಳೆ ಗೈದಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಗೋ ಹತ್ಯೆ ಕಾಯ್ದೆ ಜಾರಿಗೊಳಿಸಿದೆ.

ಸಿದ್ದರಾಮಯ್ಯಗೆ ಅನುಮಾನಿಸುವ ಕಾಯಿಲೆ ಇದೆ; ಹನುಮ ಹುಟ್ಟಿದ್ದು ಗೊತ್ತಾ ಹೇಳಿಕೆಗೆ ಸಿ.ಟಿ.ರವಿ ಟಾಂಗ್

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

ತಾಯಿ ಇವರೇ ನಿಮ್ಮ ತಂದೆ ಎಂದರೆ ನಂಬುತ್ತಾರೆ, ಸಾಕ್ಷಿ ಕೇಳಲ್ಲ. ಕೆಲವರು ಸಾಕ್ಷಿ ಕೇಳುವ ಮನಸ್ಥಿತಿಯ ಜನರು ಇರುತ್ತಾರೆ. ಸಿದ್ದರಾಮಯ್ಯ ಸಾಕ್ಷಿ ಕೇಳುವ ಮನಸ್ಥಿತಿ ಇದ್ದರೆ ಅವರ ದೋಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದರು.

ಹನುಮ ಹುಟ್ಟಿದ್ದು ಗೊತ್ತಾ, ಸುಮ್ಮನೆ ತಿನ್ಲಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಕೆಲವರಿಗೆ ಎಲ್ಲವನ್ನೂ ಅನುಮಾನಿಸುವ ಪ್ರವೃತ್ತಿ ಇರುತ್ತೆ. ಸಿದ್ದರಾಮಯ್ಯ ಅವರಿಗೂ ಅಂತಹ ಕಾಯಿಲೆ ಇದ್ರೆ ಅದು ಅವರ ದೋಷ. ನಂಬಿಕೆ ಎಲ್ಲವನ್ನೂ ಮೀರಿದ್ದು.
ನಂಬಿಕೆಗಳ ಮೇಲೆ ಜಗತ್ತು ಇರುವುದು ಎಂದು ಅಭಿಪ್ರಾಯ ಪಟ್ಟರು.

ಕೆಲವರಿಗೆ ಭಗವಂತ ಕಾಣಲ್ಲ, ಕೆಲವರಿಗೆ ಎಲ್ಲ ಕಡೆ ಕಾಣುತ್ತಾನೆ.
ನೋಡುವ ದೃಷ್ಟಿ ಇರುವವರಿಗೆ ಭಗವಂತನನ್ನು ತೋರಿಸಬಹುದು.
ನೋಡುವ ದೃಷ್ಟಿ ಇಲ್ಲದವರಿಗೆ ಎಲ್ಲಿ ನಿಂತರೂ ಭಗವಂತ ಕಾಣುವುದಿಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.

ಸಿದ್ದರಾಮಯ್ಯ ಅವರಿಗೆ ನಂಬಿಕೆ ಹುಟ್ಟಿನಿಂದ ಬಂದಿರುವುದಲ್ಲ, ಸಹವಾಸ ದೋಷದಿಂದ ಬಂದಿರುವದು. ಅವರ ತಂದೆ-ತಾಯಿಗೆ ದೇವರ ಮೇಲೆ ಶ್ರದ್ಧೆ ಇರುವ ಕಾರಣಕ್ಕೆ ದೇವರ ಹೆಸರಿಟ್ಟರು. ಸಹವಾಸ ದೋಷದಿಂದ ಅವರು ಕೆಟ್ಟಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ಎರಡನೇ ಹಂತದ ಗ್ರಾ.ಪಂ. ಚುನಾವಣೆ: ಜಿಲ್ಲೆಯಲ್ಲಿ 80.32 ರಷ್ಟು ಮತದಾನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆ ಮತದಾನವು ಗದಗ ಜಿಲ್ಲೆಯ ಮುಂಡರಗಿ, ನರಗುಂದ, ರೋಣ ಹಾಗೂ ಗಜೇಂದ್ರಗಡ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 850 ಸ್ಥಾನಗಳಿಗೆ ಭಾನುವಾರ ನಡೆದ ಮತದಾನವು ರೋಣ ತಾಲ್ಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದ ಗಲಾಟೆ ಹೊರತುಪಡಿಸಿ ಜಿಲ್ಲೆಯಲ್ಲಿ ಶಾಂತಿಯುತವಾಗಿತ್ತು. ಬಹುತೇಕ ಎಲ್ಲಾ ಮತಗಟ್ಟೆಗಳಲ್ಲಿ ಬೆಳಗಿನಿಂದಲೇ ಬಿರುಸಿನ ಮತದಾನ ಆರಂಭವಾಗಿತ್ತು.

ರೋಣ ತಾಲ್ಲೂಕಿನ ಗ್ರಾಮಗಳ ಮತಗಟ್ಟೆಗಳಲ್ಲಿ ಮಹಿಳೆಯರು ಮತ್ತು ಪುರುಷರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಗುಜಮಾಗಡಿ, ಚಿಕ್ಕಮಣ್ಣೂರ, ಬೆಳವಣಿಕೆ, ಕರಮುಡಿ, ಮೆಣಸಗಿ ಸೇರಿದಂತೆ ಹಲವು ಮತಗಟ್ಟೆಗಳಲ್ಲಿ ಪುರುಷರು ಮತ್ತು ಮಹಿಳೆಯರು ಪ್ರತ್ಯೇಕ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದರು. ಹೀಗೆ ಹಲವು ಗ್ರಾಮಗಳ ಮತಗಟ್ಟೆಗಳಲ್ಲಿ ಮತದಾರರು ಮತದಾನ ಮಾಡಲು ಗುರುತಿನ ಚೀಟಿಯೊಂದಿಗೆ ಸರದಿ ಸಾಲಿನಲ್ಲಿ ನಿಂತು ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದು ವಿಶೇಷವಾಗಿತ್ತು.

ರೋಣ ತಾಲ್ಲೂಕಿನ ಹಲವು ಮತಗಟ್ಟೆಗಳಲ್ಲಿ ತಮ್ಮ ಮಕ್ಕಳು, ಮೊಮ್ಮಕ್ಕಳ ಸಹಾಯದೊಂದಿಗೆ ಹಿರಿಯರು ಮತಗಟ್ಟೆಗೆ ಆಗಮಿಸಿ ಮತ ಹಕ್ಕು ಚಲಾಯಿಸಿದ್ದು ಕಂಡುಬಂದಿತು. ಹಲವು ಮತಗಟ್ಟೆಗಳಲ್ಲಿ ಬೆಳಗಿನ ವೇಳೆಯಲ್ಲಿ ಬಿರುಸಿನಿಂದ ಮತದಾನ ನಡೆಯಿತು. ಗ್ರಾಮಗಳ ಪ್ರತಿ ಮತದಾರರು ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದು ಕಂಡುಬಂದಿತು.

ಹಲವು ಕಡೆಗಳಲ್ಲಿ ಹೊಸ ಮತದಾರರು ಹುರುಪಿನಿಂದ ಮತ ಚಲಾಯಿಸಿದ್ದು ಕಂಡುಬಂದಿತು. ಹಲವು ಗ್ರಾಮಗಳ ಮತಗಟ್ಟೆಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ್ದು ವಿಶೇಷ ಎನಿಸಿತು.  

ಎಲ್ಲಾ ಮತಗಟ್ಟೆಗಳಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಮತದಾರರನ್ನು ತಪಾಸಣೆ ಮಾಡಿ ಮತಗಟ್ಟೆಗೆ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತು. ಜತೆಗೆ ಸ್ಯಾನಿಟೇಜರ್ ವ್ಯವಸ್ಥೆ ಮಾಡಲಾಗಿತ್ತು, ಹಾಗೆಯೇ 4 ರಿಂದ 5 ಗಂಟೆ ಅವಧಿಯಲ್ಲಿ ಕೋವಿಡ್-19 ಶಂಕಿತರಿಗೆ ಮತಹಕ್ಕು ಚಲಾಯಿಸಲು ಅವಕಾಶ ನೀಡಲಾಗಿತ್ತು.

ಮತದಾನದ ವಿವರ

ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆಯ ಸಮಯವಾರು ಒಟ್ಟಾರೆ ಮತದಾನದ ವಿವರ ಇಂತಿದೆ; ಮುಂಜಾನೆ 9 ಗಂಟೆಯವರೆಗೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಶೇ. 8.22 ನರಗುಂದ ಶೇ 8.29, ರೋಣ ಶೇ. 6.62 ಹಾಗೂ ಗಜೇಂದ್ರಗಡ ಶೇ. 7.74 ಒಟ್ಟು ಶೇ. 7.69 ರಷ್ಟು ಮತದಾನವಾಗಿತ್ತು.

ಮುಂಜಾನೆ 11 ಗಂಟೆಯವರೆಗೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಶೇ. 24.23 ನರಗುಂದ ಶೇ 24.59, ರೋಣ ಶೇ. 20.16 ಹಾಗೂ ಗಜೇಂದ್ರಗಡ ಶೇ. 25.46 ಒಟ್ಟು ಶೇ. 23.53 ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 1 ಗಂಟೆಯವರೆಗೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಶೇ. 44.50 ನರಗುಂದ ಶೇ 46.96, ರೋಣ ಶೇ. 42.02 ಹಾಗೂ ಗಜೇಂದ್ರಗಡ ಶೇ. 44.91  ಒಟ್ಟು ಶೇ. 44.51 ರಷ್ಟು ಮತದಾನವಾಗಿತ್ತು.

ಮಧ್ಯಾಹ್ನ 3 ಗಂಟೆಯವರೆಗೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನಲ್ಲಿ ಶೇ. 64.88 ನರಗುಂದ ಶೇ 66.45, ರೋಣ ಶೇ. 60.71 ಹಾಗೂ ಗಜೇಂದ್ರಗಡ ಶೇ. 62.29 ಒಟ್ಟು ಶೇ. 63.48 ರಷ್ಟು ಮತದಾನವಾಗಿತ್ತು. ಸಂಜೆ 5 ಗಂಟೆಯವರೆಗೆ ಅಂತಿಮವಾಗಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಶೇ. 82.13 ನರಗುಂದ ಶೇ 83.64, ರೋಣ ಶೇ. 77.41 ಹಾಗೂ ಗಜೇಂದ್ರಗಡ ಶೇ. 78.51 ಒಟ್ಟು ಶೇ. 80.32 ರಷ್ಟು ಮತದಾನವಾಗಿದೆ.

ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ ಅವರು ರೋಣ ತಾಲ್ಲೂಕಿನ ಗುಜಮಾಗಡಿ, ಡ.ಸ.ಹಡಗಲಿ, ಸವಡಿ, ನರಗುಂದ ತಾಲ್ಲೂಕಿನ ಹದ್ಲಿ, ಕಲಕೇರಿ ಗ್ರಾಮಗಳ ಮತಗಟ್ಟೆಗಳಿಗೆ ಬೇಟಿ ನೀಡಿ ಮತದಾನ ಪ್ರಕ್ರಿಯೆ ವೀಕ್ಷಿಸಿದರು.

ಸಿಎಂ ಸ್ಥಾನಕ್ಕೆ ಖರ್ಗೆ ಹೆಸ್ರು ತಿರಸ್ಕರಿಸಿದ್ದು ನಾನಲ್ಲ, ಅವರಿಗೆ ಗೊತ್ತಿದ್ದರೆ ತಿರಸ್ಕರಿದವ್ರ ಹೆಸ್ರು ಹೇಳಲಿ; ಮಾಜಿ ಪ್ರಧಾನಿಗೆ ಸವಾಲೆಸೆದ ಮಾಜಿ ಸಿಎಂ

ವಿಜಯಸಾಕ್ಷಿ ಸುದ್ದಿ, ಮೈಸೂರು/ವರುಣಾ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಗ್ರಾಮ ವರುಣಾ ಹೋಬಳಿಯ ಸಿದ್ದರಾಮಯ್ಯನಹುಂಡಿ ಸರ್ಕಾರಿ ಶಾಲೆ ಮತಗಟ್ಟೆ ಸಂಖ್ಯೆ 138ರಲ್ಲಿ‌ ಮತ ಚಲಾಯಿಸಿದರು.

ಮತದಾನಕ್ಕೂ ಮುನ್ನ ಗ್ರಾಮ ದೇವರಾದ ಸಿದ್ದರಾಮೇಶ್ವರ ದೇವಾಲಯಕ್ಕೆ ಸಿದ್ದರಾಮಯ್ಯ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಬೆಂಬಲಿಗರು ಸುತ್ತುವರೆದರೆ, ಅಭ್ಯರ್ಥಿಗಳು ಕರಪತ್ರ ನೀಡಿ ಮತ ಹಾಕುವಂತೆ ಮನವಿ ಮಾಡಿದರು.

ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಕಟ್ಟಿಲ್ಲ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ, ದೇವೇಗೌಡರು ಪಾಪ ಎಂದು ಮರುಗಿದರು. 1999ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದು ಯಾರು?
6 ವರ್ಷಗಳ ಕಾಲ‌ ಜೆಡಿಎಸ್ ಅಧ್ಯಕ್ಷನಾಗಿದ್ದು ನಾನು?
ಹಾಗಾದರೆ, ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ? ಎಂದು ದೇವೇಗೌಡರನ್ನು ಪ್ರಶ್ನಿಸಿದರು.

ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು ನಾನಂತೂ ಅಲ್ಲ. ನ‌ನಗೆ ಯಾರೆಂಬುದೂ ಗೊತ್ತಿಲ್ಲ. ಅವರಿಗೆ ಖರ್ಗೆ ಹೆಸರು ತಿರಸ್ಕಾರ ಮಾಡಿದವರ ಹೆಸರು ಗೊತ್ತಿದ್ದರೆ ಹೇಳಲಿ.  ಸಿದ್ದರಾಮಯ್ಯ, ವಿಪಕ್ಷ ನಾಯಕ

RSS ಕುರುಬರನ್ನು ಇಬ್ಭಾಗ ಮಾಡುವ ಹುನ್ನಾರ ನಡೆಸಿದೆ: ಸಿದ್ದರಾಮಯ್ಯ ಆರೋಪ

ವಿಜಯಸಾಕ್ಷಿ ಸುದ್ದಿ, ಮೈಸೂರು

ಕುರುಬರ ಎಸ್ ಟಿ ಮೀಸಲಾತಿ ಹೋರಾಟದ ಅಗತ್ಯವೇ ಇಲ್ಲ. ಇದು ಕುರುಬರನ್ನ ಇಬ್ಭಾಗ ಮಾಡುವ ಹುನ್ನಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜ.29 ಕ್ಕೆ ಮೈಸೂರಿನಲ್ಲಿ ನಡೆಯುವ ಕುರುಬರ ಎಸ್‌ಟಿ‌ ಮೀಸಲಾತಿ ಹೋರಾಟ ಸಭೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು.

ನಗರದಲ್ಲಿ ಮಾತನಾಡಿದ ಅವರು,
ನಾನು ಸಿಎಂ ಆಗಿದ್ದಾಗಲೇ
ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸ್ಸು ಮಾಡಿದ್ದೆ. ಈಶ್ವರಪ್ಪ, ವಿಶ್ವನಾಥ ಇಬ್ಬರು ಬಿಜೆಪಿ ಸರ್ಕಾರದಲ್ಲಿದ್ದಾರೆ.
ಅವರು ಕುಲಶಾಸ್ತ್ರ ಅಧ್ಯಯನ ವರದಿ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿಸಲಿ. ಇದು ಕುರುಬರನ್ನ ಇಬ್ಬಾಗ ಮಾಡುವ ಆರ್‌ಎಸ್‌ಎಸ್‌ ಹುನ್ನಾರ ಎಂದು ಆರೋಪಿಸಿದರು.

error: Content is protected !!