Home Blog Page 3086

ಕಾಂಗ್ರೆಸ್ ಆರೋಪಕ್ಕೆ ಜಾರಕಿಹೊಳಿ ಪುರಾವೆ: ಬಿಜೆಪಿಯಲ್ಲಿ ಅತೃಪ್ತಿ ತಾಂಡವ, ಜ.೨೦ ರಂದು ರಾಜಭವನ ಚಲೋ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಆಪರೇಷನ್ ಕಮಲಕ್ಕೆ ಯೋಗೀಶ್ವರ್ ಕೋಟ್ಯಾಂತರ ರೂಪಾಯಿ ಸಾಲ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದು, ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿ ಬಹಿರಂಗಪಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಶಾಸಕರು ಬಿಜೆಪಿ ಸೇರಿದ್ದರೆ ಯೋಗೀಶ್ವರ್ ೯ ಕೋಟಿ ರೂಪಾಯಿ ಸಾಲ ಮಾಡುವ ಅಗತ್ಯವೇನಿತ್ತು?. ಈ ಆರೋಪ ನಾವು ಮಾಡಿದ್ದರೆ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿವೆ ಎಂದು ನಿರಾಕರಿಸಬಹುದಿತ್ತು. ಈಗ ಅವರದ್ದೇ ಪಕ್ಷದ ಸಚಿವರು ಹೇಳಿದ್ದಾರಲ್ಲಾ, ಇದಕ್ಕೆ ಏನನ್ನುತ್ತಾರೆ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

ರಾಜ್ಯದಲ್ಲಿ ಸರ್ಕಾರವೇ ಜೀವಂತವಾಗಿಲ್ಲ. ಇನ್ನು ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಮಾಡಿದರೆ ಜನರ ಮೇಲೆ ಯಾವ ಪರಿಣಾಮ ಬೀರಲು ಸಾಧ್ಯ. ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ. ಹೀಗಿರುವಾಗ ಅಭಿವೃದ್ದಿ ಕೆಲಸಗಳು ದೂರದ ಮಾತು ಎಂದು ಸಿದ್ದರಾಮಯ್ಯ ಟೀಕಿಸಿದರು.

ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ ಶಾಸಕನ ಹಕ್ಕಾಗಿದೆ. ಹೀಗಿದ್ದಾಗ ಬ್ಲಾಕ್‌ಮೇಲ್ ಮಾಡುವ ಅಗತ್ಯವೇನಿದೆ.

ಚಾಮರಾಜಪೇಟೆ ಕ್ಷೇತ್ರಕ್ಕೆ ಶಾಸಕ ಜಮೀರ್‌ಅಹ್ಮದ್ ಕೇಳಿದಷ್ಟು ಸಿಎಂ ಅನುದಾನ ನೀಡಿದ್ದರೆ, ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಅರ್ಥವಿರುತ್ತಿತ್ತು. ಮಂತ್ರಿಗಿರಿ ಕೈತಪ್ಪಿದ್ದರಿಂದ ಹತಾಶರಾಗಿ ಆಡಿರುವ ಮಾತುಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಯತ್ನಾಳ್‌ಗೆ ತಿರುಗೇಟು ನೀಡಿದರು.

ಕೃಷಿಗೆ ಮಾರಕವಾದ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಕಾಂಗ್ರೆಸ್ ಪಕ್ಷ ಶುಕ್ರವಾರ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಸಂಕ್ರಾಂತಿ ಹಬ್ಬದ ಕಾರಣಕ್ಕೆ ರಾಜ್ಯದಲ್ಲಿ ನಾವು ನಿನ್ನೆ ಪ್ರತಿಭಟನೆ ಮಾಡಿಲ್ಲ. ಹಾಗಾಗಿ ಜ.೨೦ ರಂದು ‘ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಭಯ ಮತ್ತು ಅರಾಜಕತೆ ಸೃಷ್ಟಿಸಲು ಸಂಚು ಆರೋಪ: ರೈತ ಮುಖಂಡನಿಗೆ ಎನ್‌ಐಎಯಿಂದ ಸಮನ್ಸ್ ಜಾರಿ

ವಿಜಯಸಾಕ್ಷಿ ಸುದ್ದಿ, ಅಮೃತಸರ್

ಕೃಷಿ ಕಾನೂನುಗಳ ವಾಪಸಾತಿಗೆ ಆಗ್ರಹಿಸಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿರುವ ರೈತ ಸಂಘಟನೆಗಳ ಪೈಕಿ ಒಂದಾಗಿರುವ ಲೋಕ್ ಭಲಾಯಿ ಇನ್ಸಾಫ್ ವೆಲ್ಫೇರ್ ಸೊಸೈಟಿಯ ಅಧ್ಯಕ್ಷ ಬಲದೇವ್ ಸಿಂಗ್ ಸಿರ್ಸಾ ಅವರಿಗೆ ರಾಷ್ಟ್ರೀಯ ತನಿಖಾ ಏಜನ್ಸಿ ಸಮನ್ಸ್ ಜಾರಿಗೊಳಿಸಿದೆ.

ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ನಾಯಕ ಗುರ್ಪತ್ವಂತ್ ಸಿಂಗ್ ಅವರ ವಿರುದ್ಧ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳನ್ವಯ ದಾಖಲಾಗಿರುವ ಪ್ರಕರಣ ಸಂಬಂಧ ಸಿರ್ಸಾಗೆ ಸಮನ್ಸ್ ಜಾರಿ ಮಾಡಿದೆ.

ಜ.17ರಂದು ಎನ್‌ಐಎಯ ಹೊಸದಿಲ್ಲಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದೆ. ‘ಸರ್ಕಾರದ ವಿರುದ್ಧ ಬಂಡಾಯವೆಬ್ಬಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ. ಭಯ ಮತ್ತು ಅರಾಜಕತೆ ಸೃಷ್ಟಿಸಲು ಸಂಚು ಹೂಡಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ.

‘ರೈತರ ಪ್ರತಿಭಟನೆಯ ಹಳಿ ತಪ್ಪಿಸಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಬಲದೇವ್ ಸಿಂಗ್ ಸಿರ್ಸಾ ಆರೋಪಿಸಿದ್ದಾರೆ.
‘ಸರ್ಕಾರ ಮೊದಲು ಸರ್ವೋಚ್ಛ ನ್ಯಾಯಾಲಯದ ಮೂಲಕ ರೈತರ ಪ್ರತಿಭಟನೆ ಹಳಿ ತಪ್ಪಿಸಲು ಯತ್ನಿಸಿತ್ತು, ಇದೀಗ ಎನ್‌ಐಎ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

‘ರೈತರ ಹೋರಾಟದ ಭಾಗವಾಗಿರುವ ಹಲವು ಜನರ ವಿರುದ್ಧವೂ ಸಮನ್ಸ್ ಜಾರಿ ಮಾಡಿದೆ. ಇದು ರೈತರನ್ನು ಹೆದರಿಸುವ ಯತ್ನ. ಆದರೆ, ಇದು ನಮ್ಮನ್ನು ಬಾಧಿಸದು, ನಾವು ಜಗ್ಗುವುದಿಲ್ಲ. ಆದರೆ ಜ.26ರ ಕಿಸಾನ್ ಪೆರೇಡ್‌ಗೆ ಅಡ್ಡಿಯುಂಟು ಮಾಡಲು ಎನ್‌ಐಎ ಹಗಲು ರಾತ್ರಿ ಶ್ರಮಿಸುತ್ತಿದೆ. ಪ್ರತಿಭಟನೆಗೆ ಕೆಟ್ಟ ಹೆಸರು ತರಲು ಸರ್ಕಾರವೂ ಕಂಕಣ ಬದ್ಧವಾಗಿದೆ ಎಂದು ಬಲದೇವ್ ಸಿಂಗ್ ಸಿರ್ಸಾ ದೂರಿದರು.

ಸಿಡಿ ವಿಚಾರಕ್ಕೆ ಸಿಎಂ ಯಾಕಿಷ್ಟು ವೀಕ್? ಮೊದಲು ದನದ ಮಾಂಸ ರಫ್ತು ಮಾಡೋರನ್ನ ಜೈಲಿಗೆ ಹಾಕಿ: ಶಾಸಕ ರಾಘವೇಂದ್ರ ಹಿಟ್ನಾಳ

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಸಿಡಿ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಇದನ್ನ ಸ್ವತಃ ಬಿಜೆಪಿ ಶಾಸಕರೇ ಹೇಳಿದಾರೆ. ಅದೇನು ಅನ್ನೋದು ಮೊದಲು ತನಿಖೆ ಆಗಲಿ. ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಯಾಕಿಷ್ಡು ವೀಕ್ ಆಗಿದ್ದಾರೊ ಗೊತ್ತಿಲ್ಲ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಕೊಪ್ಪಳದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕೆಸರೆರೆಚಾಟ ಶುರುವಾಗಿದೆ. ಈ ಸರಕಾರ ಬಹಳ ದಿನ‌ ಉಳಿಯಲ್ಲ ಅಂತ ಬಿಜೆಪಿ ಶಾಸಕರೇ ಹೇಳ್ತಿದಾರೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ. ಸತ್ಯಾಸತ್ಯತೆ ಹೊರಗೆ ಬರಲಿ. ಸಿಡಿ ವಿಚಾರವಾಗಿ ನನಗೆ ಗೊತ್ತಿಲ್ಲ. ಬಿಜೆಪಿ ಶಾಸಕರೇ ಸಿಡಿ ವಿಚಾರ ಬಹಿರಂಗ ಪಡಿಸಿದ್ದಾರೆ. ನಮಗೂ ಸಂಶಯ ಬಂದಿದೆ. ಈ ಬಗ್ಗೆ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದರು.
ಈ ಸರಕಾರಕ್ಕೆ ದಪ್ಪಚರ್ಮ. ವಿರೋಧಪಕ್ಷವಾಗಿ ಕಾಂಗ್ರೆಸ್ ಸಮರ್ಥವಾಗಿ ಕೆಲಸ ಮಾಡ್ತಿದೆ. ದನದ ಮಾಂಸ ತಿನ್ನೋರನ್ನ ಜೈಲಿಗೆ ಹಾಕ್ತಿನಿ ಅನ್ನೋರು ಮಾಂಸ ರಫ್ತು ಮಾಡೋರನ್ನ ಜೈಲಿಗೆ ಯಾಕೆ ಹಾಕಲ್ಲ? ದನದ ಮಾಂಸ ಅತಿ ಹೆಚ್ಚು ರಫ್ತು ಮಾಡುವ ರಾಜ್ಯ ಯಾವುದು ಗೊತ್ತಿಲ್ವಾ?ಪ್ರತಿಯೊಬ್ಬ ತಿಂಗಳು ಎಂದು ಶಾಸಕ‌ ಹಿಟ್ನಾಳ ಪ್ರಶ್ನಿಸಿದರು.
ಅಸಮಾಧಾನ‌ ಬರೀ ಕಾಂಗ್ರೆಸ್‌ನಲ್ಲಲ್ಲ, ಬಿಜೆಪಿಯಲ್ಲಿ ಎಷ್ಟು ಜನ ಅಸಮಾಧಾನಿತರು ಇದಾರೆ ಅನ್ನೋದನ್ನ ಮಾಧ್ಯಮದಲ್ಲಿ ನೀವೇ ತೋರಸ್ತಿದಿರಲ್ಲ. ಅನುದಾನ ಹಂಚಿಕೆಯಲ್ಲಿ ಸರಕಾರ ಎಷ್ಟು ತಾರತಮ್ಯ ಮಾಡ್ತಿದೆ ಅನ್ನೋದನ್ನ ಸ್ವತಃ ಬಿಜೆಪಿ ಶಾಸಕ ಯತ್ನಾಳ ಅವರೇ ಹೇಳಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ನಂತರ ಹೈಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿತು. ಕಲ್ಯಾಣ ಕರ್ನಾಟಕ ಎಂದು ಹೆಸರಿಟ್ಟು ವರ್ಷವಾದರೂ ಒಂದು ರೂಪಾಯಿ ಅನುದಾನ ಕೊಡಲಿಲ್ಲ.
ಹೈದ್ರಾಬಾದ್ ಕರ್ನಾಟಕ ಹೆಸರಿದ್ದಾಗ ಪ್ರತಿ ವರ್ಷ 1,100 ಕೋಟಿ ರೂಪಾಯಿ ಅನುದಾನ ಬರುತ್ತಿತ್ತು.
ಈ ಭಾಗ ಕಲ್ಯಾಣ ಕರ್ನಾಟಕ ಆದ ನಂತರ ಅಭಿವೃದ್ಧಿಯಲ್ಲಿ ಒಂದು ವರ್ಷ ಹಿಂದುಳಿದಂತಾಗಿದೆ.
ಈ ಸರಕಾರ ಕೊರೊನಾ ನೆಪದಲ್ಲಿ 8 ತಿಂಗಳು ಕಳೆದಿದೆ. ಕೊರೊನಾ ಕ್ರಮಕ್ಕಾಗಿ ಸುಮಾರು 5 ಸಾವಿರ ಕೋಟಿ ಖರ್ಚು ಮಾಡಿರುವ ಸರಕಾರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ದೇಶದ ಪ್ರತಿಯೊಬ್ಬರಿಗೂ ಲಸಿಕೆ ಸಿಗುವಂತಾಗಲಿ. ಅನೇಕರು ಕೋವಿಡ್‌ನಿಂದಾಗಿ ಜೀವ ಕಳೆದುಕೊಂಡಿದ್ದಾರೆ. ಈಗ ಲಸಿಕೆ ಬಂದಿರುವುದು ಸ್ವಾಗತಾರ್ಹ. ಶೀಘ್ರವೇ ಎಲ್ಲರಿಗೂ ಲಸಿಕೆ ಸಿಗುವಂತೆ ರಾಜ್ಯ ಮತ್ತು‌ ಕೇಂದ್ರ ಸರಕಾರ ಮಾಡಲಿ ಎಂದು ಶಾಸಕ‌ ರಾಘವೇಂದ್ರ ಹಿಟ್ನಾಳ ಒತ್ತಾಯಿಸಿದರು.

ಅಸಮಾಧಾನ ಇದ್ದರೆ ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳಲಿ: ಸಂಗಣ್ಣ

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಅನ್ಯಾಯ, ಅಸಮಾಧಾನ ಇದ್ರೆ ಪಕ್ಷದ ಚೌಕಟ್ಟಿನಲ್ಲಿ ಬಗೆ ಹರಿಸಿಕೊಳ್ಳಬೇಕು ಎಂದು ಶನಿವಾರ
ಕೊಪ್ಪಳದಲ್ಲಿ ಸಂಸದ ಸಂಗಣ್ಣ ಕರಡಿ ಸುದ್ದಿಗಾರರಿಗೆ ತಿಳಿಸಿದರು.
ಈ ವಿಷಯ ತಿಳಿಸಿ ಮಾತನಾಡಿದ ಅವರು, ಹಾಗೇನಾದರೂ ಸಮಸ್ಯೆ ಇದ್ದರೆ ಪಕ್ಷದ ವರಿಷ್ಠರು, ಹೈಕಮಾಂಡ್ ಬಳಿ ಹೇಳಬೇಕು. ಅದನ್ನ ಬಿಟ್ಟು ಈ ರೀತಿ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ, ಮುಖಂಡರಿಗೆ ಮುಜುಗರ ತರಬಾರದು ಎಂದು ಕಿಡಿ ಕಾರಿದರು.
ಯಾವ ಕಾರಣಕ್ಕೆ ಯತ್ನಾಳ ಅವರಿಗೆ ನೀಡಲಾಗಿದ್ದ ಭದ್ರತೆ ಹಿಂಪಡೆದಿದ್ದಾರೊ ಗೊತ್ತಿಲ್ಲ. ಸಿಡಿ ಇದ್ದರೆ ಮೊದಲು ಹೊರಗೆ ಬರಲಿ, ಆಮೇಲೆ ತನಿಖೆ ಆಗೇ ಆಗುತ್ತೆ ಎಂದರು.
ಪಂಚಮಸಾಲಿ ಸಮಾಜದ ಪಾದಯಾತ್ರೆ ಕೊಪ್ಪಳಕ್ಕೆ ಬರ್ತಾ ಇದೆ. ನಾನು ಸಹ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವೆ. ಪಾದಯಾತ್ರೆ ಶುರುವಾಗುವ ಮುನ್ನವೇ ಸಚಿವ ಸಿ.ಸಿ.ಪಾಟೀಲ ಜೊತೆಗೂಡಿ ಸಿಎಂ ಭೇಟಿಯಾಗಿದ್ದೇವೆ.
ಪಾದಯಾತ್ರೆಯಿಂದ ತೊಂದರೆ ಆಗುತ್ತೆ, ಸರಕಾರಕ್ಕೂ ಮುಜುಗರ ಅಂತ ಹೇಳಿದ್ದೇವೆ ಎಂದು ತಿಳಿಸಿದರು.
ಪಂಚಮಸಾಲಿ ಶ್ರೀಗಳೊಂದಿಗೆ ಮಾತನಾಡುವಂತೆ ಸಿಎಂಗೆ ಮನವಿ ಮಾಡಿಕೊಂಡಿದ್ದೇವೆ. ಶೀಘ್ರದಲ್ಲೇ ಮಾತನಾಡುವುದಾಗಿ ಸಿಎಂ ಭರವಸೆ ನೀಡಿದಾರೆ ಎಂದು ಕರಡಿ ಸಂಗಣ್ಣ ತಿಳಿಸಿದರು.

ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ!

0

ವಿಜಯಸಾಕ್ಷಿ ಸುದ್ದಿ, ಹಾಸನ: ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ ಮಾಡಿರುವ ದಾರುಣ ಘಟನೆ ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ.

ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್ (36) ಕೊಲೆಯಾದ ವ್ಯಕ್ತಿಯಾಗಿದ್ದು, ಗ್ರಾಮದ‌ ಬಳಿಯ ಹೊಲದಲ್ಲಿ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಪಾರ್ಟಿ ಮುಗಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಶವದ ಪಕ್ಕದಲ್ಲಿ ಬಿದ್ದಿರುವ ಮದ್ಯದ ಬಾಟಲ್ ಹಾಗೂ ಊಟದ ಪ್ಯಾಕೆಟ್ ಗಳಿಂದ ಪೊಲೀಸರು ಈ ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಗ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಚುಚ್ಚುಮದ್ದು ಲಸಿಕೆ ವಿತರಣೆ ಆರಂಭ: ಮೊದಲ ದಿನ ಏಳನೂರು ಜನರಿಗೆ ಲಸಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್ ಲಸಿಕೆ ವಿತರಣೆಗೆ
ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ ಕೋವಿಡ್ ಚುಚ್ಚುಮದ್ದು ಲಸಿಕೆ ವಿತರಣೆ ಶುರುವಾಗಿದೆ.

ಈಗಾಗಲೇ ಜಿಲ್ಲೆಗೆ 5500 ಡೋಸ್ ಲಸಿಕೆ ಆಗಮಿಸಿದ್ದು, ನಗರದ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಏಳು ಕೇಂದ್ರಗಳಲ್ಲಿ ಲಸಿಕೆ ವಿತರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

7 ಕೇಂದ್ರಗಳಲ್ಲಿ ತಲಾ 100 ಜನರಂತೆ, 700 ಜನರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಇದಕ್ಕಾಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚುಚ್ಚುಮದ್ದು ವೀಕ್ಷಣಾ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ!

0

ವಿಜಯಸಾಕ್ಷಿ ಸುದ್ದಿ, ಹಾಸನ: ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ ಮಾಡಿರುವ ದಾರುಣ ಘಟನೆ ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ.

ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್ (36) ಕೊಲೆಯಾದ ವ್ಯಕ್ತಿಯಾಗಿದ್ದು, ಗ್ರಾಮದ‌ ಬಳಿಯ ಹೊಲದಲ್ಲಿ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಪಾರ್ಟಿ ಮುಗಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಶವದ ಪಕ್ಕದಲ್ಲಿ ಬಿದ್ದಿರುವ ಮದ್ಯದ ಬಾಟಲ್ ಹಾಗೂ ಊಟದ ಪ್ಯಾಕೆಟ್ ಗಳಿಂದ ಪೊಲೀಸರು ಈ ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಗ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಮಿಂಚಿನ ಕಾರ್ಯಾಚರಣೆ: ಪಂದ್ಯದ ಹುಂಜಗಳ ಸಮೇತ ಒಂಬತ್ತು ಜನರ ಬಂಧನ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಸಂಕ್ರಾತಿ ಹಬ್ಬದ ಜಿಲ್ಲೆಯ ಗಂಗಾವತಿ ತಾಲೂಕಿನ‌ ಹೆಬ್ಬಾಳ ಕ್ಯಾಂಪ್ ಗ್ರಾಮದಲ್ಲಿ ನಡೆಯುತ್ತಿದ್ದ ಕೋಳಿ ಪಂದ್ಯಾವಳಿಗೆ ಗಂಗಾವತಿ ಪೊಲೀಸ್ರು ಮಿಂಚಿನ ದಾಳಿ ಮಾಡಿದ್ದಾರೆ.

ತಾಲ್ಲೂಕಿನ ಹೆಬ್ಬಾಳ ಕ್ಯಾಂಪ್, ಆಚಾರನರಸಾಪುರ, ಮರಳಿ, ಗಂಗಾವತಿ, ಕಾರಟಗಿ, ಶ್ರೀರಾಮ ನಗರದ ಜನರು ಭಾಗವಹಿಸಿದ್ದರು ಎನ್ನಲಾಗಿದೆ.

ನಿಷೇಧಿತ ಕೋಳಿ ಪಂದ್ಯಾವಳಿ ಭಾರಿ ಪ್ರಮಾಣದಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ. ಹೆಬ್ಬಾಳ ಕ್ಯಾಂಪ್ ಸೀಮೆಯ ಬಳಿ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆಯ ಸಿಪಿಐ ಉದಯರವಿ ಮತ್ತು ತಂಡ ದಾಳಿ ಮಾಡಿ ಜಮೀನಿನ ಮಾಲೀಕನ್ನು ಸೇರಿ ಒಂಬತ್ತು ಜನರನ್ನು ಬಂಧಿಸಿ, ಏಳು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಹುಂಜದ ಜೂಜಾಟದ ಹಣವನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದಾರೆ, ಜೂಜೂಕೋರರು ಕೋಳಿ ಪಂದ್ಯವನ್ನು ರಾಜಾರೋಷವಾಗಿ ನಡೆಸಿದ್ದು ಹುಂಜಗಳಿಗೆ ಸಾಕಷ್ಟು ತಯಾರಿ ಮಾಡಿ ಬಲಿಷ್ಠಗೊಳಿಸಿ, ಹುಂಜಗಳ ಕಾಲಿಗೆ ಸಣ್ಣ ರೇಜರ್ ಬ್ಲೇಡ್ ಕಟ್ಟಿ ಪಂದ್ಯ ನಡೆಸಲಾಗುತ್ತಿತ್ತು. ಇದಕ್ಕೆ ಸಾವಿರಾರು ರೂಪಾಯಿ ಜೂಜು ಕಟ್ಟಿ ಪಂದ್ಯ ನಡೆಸಲಾಗುತ್ತಿತ್ತು. ಪಂದ್ಯದ ಹುಂಜಕ್ಕೆ ಭಾರಿ ಬೇಡಿಕೆ ಇದ್ದು, ಬಲಿಷ್ಠ ಹಾಗು ಅನುಭವಿ ಹುಂಜಕ್ಕೆ ಲಕ್ಷ ಲಕ್ಷ ಬೆಲೆ ಕಟ್ಟಲಾಗುತ್ತದೆ

ಗದಗ ಜಿಲ್ಲೆಯ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಗೆ ಡೆಡ್ ಲೈನ್ ಫಿಕ್ಸ್: ಯಾವಾಗ, ಎಲ್ಲಿ?

ವಿಜಯಸಾಕ್ಷಿ ಸುದ್ದಿ, ಗದಗ

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಗದಗ ಜಿಲ್ಲೆಯ 7 ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಚುನಾವಣಾ ಕ್ಷೇತ್ರಗಳಿಗೆ ಆಯ್ಕೆಯಾದ ಸದಸ್ಯರ ಸಮ್ಮುಖದಲ್ಲಿ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿಯನ್ನು ನಿರ್ಧರಿಸುವ ಸಲುವಾಗಿ ಸಭೆಯನ್ನು ನಿಗದಿಪಡಿಸಲಾಗಿದೆ.

ಸಭೆಯನ್ನು ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜರುಗಿಸಲಾಗುವುದು.

ಜನೆವರಿ 24 ರಂದು ಬೆ. 11 ಗಂಟೆಗೆ ಶಿರಹಟ್ಟಿಯ ಡಿ. ದೇವರಾಜ ಅರಸ್ ಸಭಾಭವನದಲ್ಲಿ ಹಾಗೂ ಅದೇ ದಿನ ಮ. 3 ಗಂಟೆಗೆ ಲಕ್ಷ್ಮೇಶ್ವರದ ಶ್ರೀ ಜಗದ್ಗುರು ವೀರಗಂಗಾಧರ ರಂಭಾಪುರಿ ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ. ಜನೆವರಿ 25 ರಂದು ಬೆ. 11.30 ಗಂಟೆಗೆ ಗದಗನ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಹಾಗೂ ಅದೇ ದಿನ ಸಂಜೆ 4 ಗಂಟೆಗೆ ಮುಂಡರಗಿಯ ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಸಭೆ ಜರುಗುವುದು. ಜನೆವರಿ 27 ರಂದು ಬೆ. 9 ಗಂಟೆಗೆ ನರಗುಂದದ ಆರೂಡ ಜ್ಯೋತಿ ಭವನದಲ್ಲಿ ಅದೇ ದಿನ ಮ. 12 ಗಂಟೆಗೆ ರೋಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಮತ್ತು ಸಂಜೆ 4 ಗಂಟೆಗೆ ಗಜೇಂದ್ರಗಡದ ಸಿದ್ಧಲಿಂಗೇಶ್ವರ ಚಿತ್ರಮಂದಿರದಲ್ಲಿ ಸಭೆ ಏರ್ಪಡಿಸಲಾಗಿದೆ.

ಗದಗ ಜಿಲ್ಲೆಯ ಎಲ್ಲಾ 7 ತಾಲ್ಲೂಕಿನ ಗ್ರಾಮ ಪಂಚಾಯತಿಗಳಿಗೆ ಚುನಾಯಿತ ಎಲ್ಲ ಸದಸ್ಯರಿಗೆ ಮೇಲೆ ತಿಳಿಸಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಯ ಮೀಸಲಾತಿ ನಿರ್ಧರಿಸುವ ಸಭೆ ತಿಳುವಳಿಕೆ ಪತ್ರ ನೀಡಲಾಗಿದೆ. ಸದರಿ ತಿಳುವಳಿಕೆ ಪತ್ರ ತಲುಪದೇ ಇದ್ದಲ್ಲಿ ಈ ಪ್ರಕಟಣೆಯನ್ನೇ ತಿಳುವಳಿಕೆ ಪತ್ರವೆಂದು ಭಾವಿಸಿ ಸಭೆಗೆ ಹಾಜರಾಗಲು ತಿಳಿಸಿದೆ.

ಸಭೆಗೆ ಹಾಜರಾಗುವಾಗ ಆಯ್ಕೆಯಾದ ಪ್ರಮಾಣ ಪತ್ರದ ನಕಲು ಪತ್ರಿಯನ್ನು ಹಾಜರುಪಡಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗುವ ಸದಸ್ಯರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಗದಗ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನನಗೆ ತೊಂದರೆಯಾದರೆ ಸಿಎಂ ಅವರೇ ಹೊಣೆ, ತನ್ನ ವಿರುದ್ಧ ಸಿಎಂ ಸೇಡಿನ ರಾಜಕಾರಣ; ಯತ್ನಾಳ್

0

ವಿಜಯಸಾಕ್ಷಿ ಸುದ್ದಿ, ವಿಜಯಪುರ: ತನಗೆ ನೀಡಿದ್ದ ವಿಶೇಷ ಭದ್ರೆತಯನ್ನು ಈಗ ಹಿಂಪಡೆಯಲಾಗಿದ್ದು, ಈ ಮೂಲಕ ಸಿಎಂ ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.

ಈ ಕುರಿತು ಸಿಎಂ ಅವರಿಗೆ ಪತ್ರ ಬರೆದಿರುವ ಯತ್ನಾಳ್, ತನಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ದಿಢೀರ ಹಿಂದಕ್ಕೆ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಯಾದರೆ, ಅನಾಹುತವಾದರೆ ಆಡಳಿತ ನಡೆಸುತ್ತಿರುವ ತಾವೇ ಹೊಣೆ ಎಂದು ಸಿಎಂ, ಗೃಹ ಸಚಿವ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಯತ್ನಾಳ ಪತ್ರ ಬರೆದಿದ್ದಾರೆ.

ನಾನು ಪ್ರಖರ ಹಿಂದೂಪರವಾದ ಮತ್ತು ಜನಪರವಾದ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನ್ನ ಮೇಲೆ ಈ ಹಿಂದೆ ಅನೇಕ ಬಾರಿ ಕೆಲವು ಹಿಂದೂ ವಿರೋಧಿ, ಮತಾಂಧ ಶಕ್ತಿಗಳು ದಾಳಿಯ ಮುನ್ಸೂಚನೆ ನೀಡಿವೆ. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ಈವರೆಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಆದರೆ, ನಾನು ಸಿಎಂ ವಿರುದ್ಧ ಹೇಳಿಕೆ ನೀಡಿರುವ ಕಾರಣಕ್ಕೆ ಸಿಎಂ ಎಂದಿನಂತೆ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಪತ್ರದಲ್ಲಿ ಯತ್ನಾಳ್ ಆರೋಪ ಮಾಡಿದ್ದಾರೆ.

ಪೊಲೀಸ್ ಭದ್ರತೆಯನ್ನು ದಿಢೀರಾಗಿ ಹಿಂಪಡೆದಿದ್ದೀರಿ. ಇದರ ಹಿಂದಿರುವ ದುರುದ್ದೇಶ ಗೊತ್ತು. ಇದು ತಮ್ಮ ಹಳೆಯ ಚಾಳಿ, ವಿಕೃತ ಮನಸ್ಸನ್ನು ಇದು ಬಿಂಬಿಸುತ್ತದೆ. ಇದರಿಂದ ಹಿಂದೂಪರ, ಜನಪರ, ಅನ್ಯಾಯದ ವಿರುದ್ಧ ನನ್ನ ಹೋರಾಟ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಸರಕಾರವನ್ನು ನಂಬಿ ನಾನು ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ನಿರಂತರರವಾಗಿರುತ್ತದೆ. ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಯಾದರೆ, ಅನಾಹುತವಾದರೆ ಆಡಳಿತ ನಡೆಸುತ್ತಿರುವ ತಾವೇ ಹೊಣೆ ಎಂದು ಯತ್ನಾಳ್ ಪತ್ರದಲ್ಲಿ ವಿವರಣೆ ನೀಡಿದ್ದಾರೆ.

error: Content is protected !!