Home Blog Page 3090

ಗದಗ ನಗರ ಠಾಣೆ ಪೊಲೀಸರ ಬಲೆಗೆ ಬಿದ್ದ ಮನೆಗಳ್ಳರು

ವಿಜಯಸಾಕ್ಷಿ ಸುದ್ದಿ, ಗದಗ: ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರ ಜಿಲ್ಲಾ ಮನೆಗಳ್ಳರ ಹಾಗೂ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರನ್ನು ಹುಬ್ಬಳ್ಳಿಯ ತಾರಿಹಾಳದ ರಾಮನಗರ ನಿವಾಸಿ ಕಾಸೀಂ ಗಾಳೆಪ್ಪ ಹುಬ್ಬಳ್ಳಿ ಹಾಗೂ ಗದಗ ನಗರದ ಸುನೀಲ್ ಸಂಜೀವಪ್ಪ ಮುಳಗುಂದ ಎಂದು ಗುರುತಿಸಲಾಗಿದೆ.

ಕಳೆದ ವರ್ಷ ನವಂಬರ್ ತಿಂಗಳ 25 ರಂದು ನಗರದ ಗಣೇಶ್ ಕಾಲೋನಿಯ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರ ಮನೆಯ ಬೀಗ ಮುರಿದು 2,37,000 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದರು.

ಡಿಸೆಂಬರ್ 17 ರಂದು ಶಿವಾನಂದ ನಗರದಲ್ಲಿ ಮಹಿಳೆಯ ಕೊರಳಲ್ಲಿದ್ದ 1,35,000 ಮೌಲ್ಯದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದರು. ಇನ್ನು ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ದೇವಸ್ಥಾನವೊಂದರ ಹುಂಡಿ ಮತ್ತು ರಾಮದುರ್ಗದಲ್ಲಿ ಮನೆ ಕಳ್ಳತನವನ್ನೂ ಮಾಡಿದ್ದರು.

ಬಂಧಿತ ಆರೋಪಿತರಿಂದ ಒಟ್ಟು 5,00,000 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ಕಳಸಾಪುರ ರಸ್ತೆಯ ಬಾಪೂಜಿ ನಗರದ ಸಮೀಪ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇವರನ್ನು ಬಂಧಿಸಲಾಗಿದೆ.

ಗದಗ ಎಸ್ಪಿ ಯತೀಶ್ ಎನ್ ಹಾಗೂ ಡಿವೈಎಸ್ಪಿ ಕೆ ಪ್ರಹ್ಲಾದ್ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆ ಸಿಪಿಐ ಪಿ ವಿ ಸಾಲಿಮಠ, ಪಿಎಸ್ಐ ಶ್ರೀಮತಿ ಜಿ ಟಿ ಜಕ್ಕಲಿ, ಎಆರ್ ಎಸ್ಐ ಜಿ ಎಂ ಬೂದಿಹಾಳ, ಸಿಬ್ಬಂದಿಗಳಾದ ಬಿ ಜಿ ಹೊರಕೇರಿ, ವಿ ಎಸ್ ಶೆಟ್ಟಣ್ಣವರ್, ಎಸ್ ಎ ಗುಡ್ಡಿಮಠ, ಎಂ ಎ ಸದರನ್ನವರ್, ಪಿ ಆರ್ ಕುಲಕರ್ಣಿ, ಹನುಮಂತ ಯಡಿಯಾಪುರ್, ಪ್ರವೀಣ್ ಕಲ್ಲೂರ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕಟಾವಿಗೆ ಬಂದ ಕಬ್ಬು ಬೆಂಕಿಗಾಹುತಿ: ತಲೆ ಮೇಲೆ ಕೈ ಹೊತ್ತು ಕೂತ ರೈತ

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಜಮೀನಿಗೆ ಬೆಂಕಿ ಹತ್ತಿದ ಪರಿಣಾಮ 8 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಬೀರಪ್ಪ ಬಂಡಿ ಎನ್ನುವವರಿಗೆ ಸೇರಿದ ಜಮೀನು ಇದಾಗಿದ್ದು, 9 ಎಕರೆ ಜಮೀನಿನ ಪೈಕಿ‌ 8 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸ ಪಟ್ಟರು.

ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಹಕ್ಕಿಜ್ವರದ ಭೀತಿ: ಗದಗ ಜಿಲ್ಲೆಯಲ್ಲಿ ಸತ್ತು ಬಿದ್ದ ಹತ್ತಾರು ಹಕ್ಕಿಗಳು!

0

ವಿಜಯಸಾಕ್ಷಿ ಸುದ್ದಿ, ಗದಗ

ಜಿಲ್ಲೆಯಲ್ಲೂ ಹಕ್ಕಿ ಜ್ವರದ ಭೀತಿ ಶುರುವಾಗಿದ್ದು, ಜಿಲ್ಲೆಗೂ ಹಕ್ಕಿಜ್ವರ ಕಾಲಿಟ್ಟಿತಾ? ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ಹಕ್ಕಿಗಳು ಸತ್ತು ಬಿದ್ದಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ.
ಹಕ್ಕಿಗಳು ಸತ್ತು ಬಿದ್ದಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಸತ್ತುಬಿದ್ದ ಹಕ್ಕಿ ಸುತ್ತ ಸುಮಾರು 100 ಮೀ ವ್ಯಾಪ್ತಿಯಲ್ಲಿ ಬರದಂತೆ ಎಚ್ಚರಿಕೆ ನೀಡಿದ್ದಾರೆ. ಇನ್ನು ಸಿಬ್ಬಂದಿಗಳು ಸತ್ತುಬಿದ್ದ ಹತ್ತಾರು ಹಕ್ಕಿಗಳನ್ನು ಪರೀಕ್ಷೆಗೊಳಪಡಿಸಲು ಮುಂದಾಗಿದ್ದಾರೆ.

ST ಮೀಸಲಾತಿ ಹೋರಾಟ ಯಾರ ವಿರುದ್ಧ, ಈಶ್ವರ ವರ್ಸೆಸ್ ಈಶ್ವರಪ್ಪನಾ? ಅಥವಾ ಈಶ್ವರಪ್ಪ ವರ್ಸೆಸ್ ಯಡಿಯೂರಪ್ಪನಾ?: ಸಿದ್ದರಾಮಯ್ಯ ಪ್ರಶ್ನೆ

ವಿಜಯಸಾಕ್ಷಿ ಸುದ್ದಿ, ರಾಯಚೂರು

ಕುರುಬರಿಗೆ ST ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ.
ಆದರೆ, ಈಗಿನ ST ಮೀಸಲಾತಿ ಹೋರಾಟದಲ್ಲಿ ರಾಜಕೀಯ ಇದ್ದು, ಇದರ ಹಿಂದೆ RSS ಇರುವ ಕಾರಣಕ್ಕೆ ನಾನು ವಿರೋಧಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದರು.

ದೇವದುರ್ಗ ತಾಲೂಕಿನ ‌ತಿಂಥಣಿಯಲ್ಲಿ ನಡೆದ ಹಾಲುಮತ ಉತ್ಸವದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಿನ ಹೋರಾಟ ಯಾರ ವಿರುದ್ಧ ಈಶ್ವರ ವರ್ಸೆಸ್ ಈಶ್ವರಪ್ಪನಾ?
ಅಥವಾ ಈಶ್ವರಪ್ಪ ವರ್ಸೆಸ್ ಯಡಿಯೂರಪ್ಪನಾ? ಎಂದು ಪ್ರಶ್ನಿಸಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಅವರದ್ದೇ ಸರ್ಕಾರವಿದೆ. ಯಾಕೆ ಒತ್ತಡ ಹೇರಿ ಮೀಸಲಾತಿ ಕೊಡಿಸಬಾರದು. ನಾನು ಸಿಎಂ ಇದ್ದಾಗ ನಾಲ್ಕು ಜಿಲ್ಲೆಗಳಲ್ಲಿ ಕುರುಬರಿಗೆ ST ಮೀಸಲಾತಿ ನೀಡಿದ್ದೇನೆ.ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ನಡೆದಿದೆ, ಆದರೆ ಅದು ಆಗುವುದಿಲ್ಲ. ಈಶ್ವರಪ್ಪ ಕುರುಬ ಸಮಾಜದ ನಾಯಕರಾಗಲು ಹೊರಟಿದ್ದಾರೆ ಅದು ಸಾಧ್ಯವಿಲ್ಲ ಎಂದು ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಿಎಂ ಬಿಎಸ್ವೈ ಅವರಿಂದ ಕತ್ತಿಗೆ ಬುಲಾವ್: ಬೆಂಗಳೂರಿಗೆ ಹಾರಿದ ಉಮೇಶ್ ಕತ್ತಿ

0

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಾಗುತ್ತದೆನ್ನುವ ಸುದ್ದಿಗಳ ನಡುವೆಯೇ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಬೆಂಗಳೂರಿಗೆ ಹಾರಿದ್ದಾರೆ.

ಹೊರಡುವ ಮೊದಲು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬುಲಾವ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟ್ಟಿದ್ದೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲಿಯೇ ಆಗಲಿದ್ದು, ಸಂಪುಟದಲ್ಲಿ ಅವಕಾಶ ಕೊಡೋದು ಬಿಡೋದು ಸಿಎಂ ಅವರಿಗೆ ಬಿಟ್ಟದ್ದು. ಅವಕಾಶ ಕೊಟ್ಟರೆ ಸಮರ್ಥವಾಗಿ ಕೆಲಸ ಮಾಡುತ್ತೇನೆ ಎಂದು ಕತ್ತಿ ತಿಳಿಸಿದರು.

ಅಂದು ವಿಧಾನ ಪರಿಷತ್ ನಲ್ಲಿ ನಡೆದದ್ದು ಗದ್ದಲವಲ್ಲ, ದುರ್ಘಟನೆ: ಅಲ್ಲಂ ವೀರಭದ್ರಪ್ಪ

ವಿಜಯಸಾಕ್ಷಿ ಸುದ್ದಿ, ಮೈಸೂರು

ಮುಂದಿನ ಅಧಿವೇಶನದಲ್ಲಿ ಎಲ್ಲರೂ ಪ್ರಮಾಣ ಮಾಡಬೇಕು.
ನಾವು ಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ ಎಂದು ಪ್ರಮಾಣ ಮಾಡಿ ಸದನ ಶುರು ಮಾಡಬೇಕು ಎಂದು ಹಿರಿಯ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ
ವಿಧಾನ ಪರಿಷತ್‌‌ನ ಗದ್ದಲ ವಿಚಾರವಾಗಿ ಹೀಗೆ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅಂದು ನಡೆದದ್ದು ಗದ್ದಲವಲ್ಲ, ದುರ್ಘಟನೆ ಎಂದು ವಿಷಾದ ವ್ಯಕ್ತಪಡಿಸಿದರು.

ಪರಿಷತ್ ಬೇಕೊ ಬೇಡವೋ ಎಂಬ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ವೀರಭದ್ರಪ್ಪ, ಪರಿಷತ್ ರದ್ದು ಮಾಡೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿಧಾನಸಭೆಗಿಂತ ವಿಧಾನ ಪರಿಷತ್‌ನಲ್ಲಿ ಹೆಚ್ಚು ಚರ್ಚೆ ಆಗುತ್ತಿತ್ತು. ನಾನು ಈ ಹಿಂದೆ ಸಚಿವನಾಗಿದ್ದ ವೇಳೆ ಪರಿಷತ್ ಸದಸ್ಯರ ಪ್ರಶ್ನೆಗಳಿಗೆ ಭಯ ಬೀಳುತ್ತಿದ್ದೆ.
ಹಾಗಾಗಿಯೇ ಪರಿಷತ್ತನ್ನ ಬುದ್ದಿಜೀವಿಗಳು, ಹಿರಿಯರ‌ ಮನೆ ಅಂತಿದ್ರು, ಈಗ ಆ ರೀತಿ ಇಲ್ಲ ಎಂದು ಅಸಮಾಧಾನ ಪಟ್ಟರು.

ಮಹಿಳೆಯ ಸರ ಕದ್ದು ಇಬ್ಬರು ಪರಾರಿ

0

ವಿಜಯಸಾಕ್ಷಿ ಸುದ್ದಿ, ಮೈಸೂರು

ಇಷ್ಟು ದಿವಸ ನಗರ ಪ್ರದೇಶಕ್ಕಷ್ಟೇ ಸೀಮಿತವಾಗಿದ್ದ ಸರಗಳ್ಳತನ ಇದೀಗ ಹಳ್ಳಿಗೂ ಕಾಲಿಟ್ಟಿದೆ.

ಧನುರ್ಮಾಸ ಪೂಜೆಗೆಂದು ದೇವಸ್ಥಾ‌ನಕ್ಕೆ ಹೋಗಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಖದೀಮರು ಕಸಿದು ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಳ್ಳಿಕೆರೆಹುಂಡಿ ಗ್ರಾಮದಲ್ಲಿ ನಡೆದಿದೆ.

ಧನುರ್ಮಾಸ ಹಿನ್ನಲೆಯಲ್ಲಿ ವಿಮಲಾ ಎಂಬ ಮಹಿಳೆ ಗ್ರಾಮದ ಬಸವೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಚಿನ್ನದ ಸರ ಕಿತ್ತುಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಸರ ಕಸಿಯುತ್ತಿರುವ ವೇಳೆ ಮಹಿಳೆ ಪ್ರತಿರೋಧವೊಡ್ಡಿದ್ದಾರೆ. ಆದರೆ, ಖದೀಮರು ಗೃಹಿಣಿಯನ್ನು ನೆಲಕ್ಕೆ ಬೀಳಿಸಿ 25 ಗ್ರಾಂ ಬಂಗಾರದ ಸರ
ಕದ್ದೊಯ್ದಿದ್ದಾರೆ.

ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಚಿವ ಸ್ಥಾನದ ಕುರಿತು ಮಹೇಶ್ ಕುಮಠಳ್ಳಿ ಹೊಸ ಬಾಂಬ್

0

ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ: ಸಚಿವ ಸ್ಥಾನದ ವಿಸ್ತರಣೆ ಅಥವಾ ಪುನರ್ ರಚನೆಯ ಗೊಂದಲದ ನಡುವೆಯೇ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಎಮ್ ಟಿ ಬಿ ನಾಗರಾಜ್, ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಆದರೆ ನನಗೆ ಕೊಳಗೇರಿ ನಿಗಮ ಮಂಡಳಿ ಕೊಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ಕೊಡಬಹುದು ಎಂದು ಇನ್ನೂ ಕೂಡಾ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರಿದ ಹಿನ್ನೆಲೆಯಲ್ಲಿ ಮಹೇಶ್ ಕುಮಠಳ್ಳಿ ಅವರಿಗೆ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ನಾವು ಬಿಜೆಪಿಗೆ ಬರುವಾಗ ಹದಿನೇಳು ಜನರ ಟೀಮ್ ಇತ್ತು ಈಗ ಎಲ್ಲ ಬಿಜೆಪಿ ಟೀಮ್. ಹನ್ನೊಂದು ಜನರಿಗೆ ಸಚಿವ ಸ್ಥಾನ ಕೊಟ್ಟಾಗ, ನನ್ನನ್ನು ಸಚಿವನಾಗಿಸುವ ಭರವಸೆ ಕೊಟ್ಟಿದ್ದರು ಆದರೆ ಯಾವ ತೊಂದರೆ ಇದೆಯೋ ಗೊತ್ತಿಲ್ಲ. ನಾನು ಕೂಡ ಸಚಿವ ಸ್ಥಾನಕ್ಕಾಗಿ ಮನವಿ ಮಾಡಿದ್ದೇನೆ ಎಂದರು.

ಪಕ್ಷದ ವರಿಷ್ಠರೂ ಕೂಡ ಭರವಸೆ ಕೊಟ್ಟಿದ್ದಾರೆ.
ಜವಾಬ್ದಾರಿ ಇರುವ ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ. ಬಹುತೇಕ ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ಸಿದ್ಧರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ:ಸಚಿವ ಸೋಮಣ್ಣ ಟಾಂಗ್

0

ವಿಜಯಸಾಕ್ಷಿ ಸುದ್ದಿ, ಗದಗ: ಮಾಜಿ ಸಿಎಂ ಸಿದ್ಧರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ಟಾಂಗ್ ನೀಡಿದ್ದಾರೆ. ಬಿಜೆಪಿಯ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತಾನಾಡಿದರು.

ಸಿಎಂ ಬದಲಾವಣೆಯಾಗುತ್ತಾರೆ ಎನ್ನುವ ಸಿದ್ಧರಾಮಯ್ಯ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಎಲ್ಲರಿಗೂ ರಾತ್ರಿ ಕನಸು ಬೀಳುತ್ತೆ, ಆದರೆ ಸಿದ್ದರಾಮಯ್ಯಗೆ ಹಗಲು ಕನಸು ಬೀಳುತ್ತೆ. ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದರು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟ ಪಡಿಸಿದರು.

ಶಾಸಕ ಯತ್ನಾಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ ನಮ್ಮ ಪಕ್ಷದ ಹಿರಿಯ ಶಾಸಕರು ಮಾಜಿ ಕೇಂದ್ರ ಮಂತ್ರಿಯಾಗಿದ್ದವರು. ಹೈಕಮಾಂಡ್ ಈ ಕುರಿತು ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಒಂದು ಕೊನೆ ಅಂತ ಇದ್ದೇ ಇರುತ್ತೆ. ಈ ಸಮಾಜದಿಂದ ಬಂದ ಸಿಎಂ ಗಳು ಎಲ್ಲ ವರ್ಗದ ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಯಡಿಯೂರಪ್ಪ ಅವ್ರು ಮಾಡ್ತಾಯಿದ್ದಾರೆ. ಯತ್ನಾಳ ಬುದ್ದಿವಂತ ಇದ್ದಾರೆ ನಾಳೆ ವಿಜಯಪುರ ಕ್ಕೆ ಹೋಗ್ತಾಯಿದ್ದೀನಿ ಮಾತಾಡ್ತೀನಿ ಎಂದರು.

ಎಲ್ಲವನ್ನೂ ಹೈಕಮಾಂಡ ನೋಡ್ತಾಯಿದೆ. ಸಾವಿರ ಬಾರಿ ಸುಳ್ಳು ಹೇಳಿದ್ರೇ ಸುಳ್ಳೇ ಒಂದು ಬಾರಿ ಹೇಳಿದರೂ ಸುಳ್ಳೇ. ಲಿಂಗಾಯತ ಸಮಾಜದ ಸಿಎಂ ಬದಲಾವಣೆ ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ವಾರಸುದಾರರಿಲ್ಲದ ಮನೆಯಾಗಿದೆ: ಕಾರಜೋಳ ವಾರ್

0

ವಿಜಯಸಾಕ್ಷಿ ಸುದ್ದಿ, ಗದಗ: ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ವಾರಸುದಾರರಿಲ್ಲದ ಮನೆಯಂತಾಗಿದೆ ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ನಗರದಲ್ಲಿ ಆಯೋಜಿಸಿರುವ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅವಸಾನದ ಅಂಚಿಗೆ ತಲುಪಿದೆ. ಕಾಂಗ್ರೆಸ್ ವಾರಸುದಾರರಿಲ್ಲದ ಮನೆಯಂತಾಗಿದೆ. ಕಾಂಗ್ರೆಸ್ ಲೀಡರ್ ಲೆಸ್ ಪಾರ್ಟಿಯಾಗಿದೆ. ಎಂದರು.

ಮುಖ್ಯಮಂತ್ರಿ ಗಾದಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ದಿನಾಲೂ ಕನಸು ಕಾಣುತ್ತಿದ್ದಾರೆ. ದೇಶದಲ್ಲಿ ರಾಹುಲ್ ಗಾಂಧಿ ನೂರಕ್ಕೆ ನೂರು ಪ್ರಧಾನ ಮಂತ್ರಿ ಆಗಲ್ಲ. ರಾಜ್ಯದಲ್ಲಿಯೂ ಇನ್ನು ಕಾಂಗ್ರೆಸ್ ನಿಂದ ಯಾರೇ ಆಗಲಿ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದು ವ್ಯಂಗ್ಯವಾಡಿದರು.

error: Content is protected !!