Home Blog Page 3091

ಪರೀಕ್ಷೆಯಿಲ್ಲದೆ ವಿದ್ಯಾರ್ಥಿಗಳ ಪಾಸ್ – ಸಂಭ್ರಮಾಚರಣೆ!

ವಿಜಯಸಾಕ್ಷಿ ಸುದ್ದಿ, ತುಮಕೂರು

ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.
ತಿಪಟೂರು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಸ್ ಆಗಿದ್ದಕ್ಕೆ ಸಂಭ್ರಮಾಚರಣೆ ಆಚರಿಸಿದ್ದಾರೆ. ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.

ತಾವೆಲ್ಲ ಪಾಸ್ ಆಗಿದ್ದಕ್ಕೆ ಕುಂಬಳಕಾಯಿ, ತೆಂಗಿನಕಾಯಿ ಒಡೆದು ವಿದ್ಯಾರ್ಥಿಗಳು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ಅಲ್ಲದೇ, ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಕಾಲೇಜಿನ‌ ಗೇಟ್ ಮುಂದೆ ವಿದ್ಯಾರ್ಥಿಗಳು ಸಂಭ್ರಮಾಚರಣೆ ಆಚರಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಜಯಕಾರ ಹಾಕಿದ್ದಾರೆ.

ಮಹಾಮಾರಿಗೆ ಬಲಿಯಾದ ಐದು ದಿನಗಳ ಬಾಣಂತಿ!

ವಿಜಯಸಾಕ್ಷಿ ಸುದ್ದಿ, ಮಂಡ್ಯ

ಮಹಾಮಾರಿಗೆ 5 ದಿನಗಳ ಬಾಣಂತಿ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗೆಜ್ಜಲಗೆರೆ ಗ್ರಾಮದ ಶಿಲ್ಪಶ್ರೀ ಸೋಂಕಿಗೆ ಬಲಿಯಾದ ಮಹಿಳೆ. ನಗರದಲ್ಲಿನ ಮಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.

ತಾಯಿಯನ್ನು ಕಳೆದುಕೊಂಡು ಐದು ದಿನದ ಮಗು ತಬ್ಬಲಿಯಾಗಿದೆ. ಶಿಲ್ಪಶ್ರೀ (32) ಕೊರೊನಾಗೆ ಬಲಿಯಾದ ಬಾಣಂತಿ. ಮಹಿಳೆಯಲ್ಲಿ ಕಳೆದ ಒಂದು ವಾರದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಕಳೆದ ಐದು ದಿನಗಳ ಹಿಂದೆಯೇ ಮಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಶಿಲ್ಪಶ್ರೀ ಜನ್ಮ ನೀಡಿದ್ದರು. ಸದ್ಯ 5 ದಿನಗಳ ಮಗುವನ್ನು ಬಿಟ್ಟು ತಾಯಿ ಇಹಲೋಕ ತ್ಯಜಿಸಿದ್ದು, ಮಗು ತಬ್ಬಲಿಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಡಿವಿಎಸ್! ಕುತೂಹಲಕ್ಕೆ ಕಾರಣವಾದ ಭೇಟಿ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ವಿಚಾರ ಬಹಳ ಸದ್ದು ಮಾಡುತ್ತಿರುವ ಕಾರಣಕ್ಕೆ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಭೇಟಿ ನೀಡಿದ್ದಾರೆ. ಅದಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಪ್ರಧಾನಿ ಮೋದಿ ಅವರು ದೆಹಲಿಯ ತಮ್ಮ ನಿವಾಸಕ್ಕೆ ಕರೆಸಿಕೊಂಡು ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕೆಲ ಸಚಿವರ, ಶಾಸಕರ ಅಸಮಾಧಾನ, ನಾಯಕತ್ವ ಬದಲಾವಣೆ ಮಟ್ಟದಲ್ಲಿನ ಚರ್ಚೆ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಅರುಣ್ ಸಿಂಗ್ ಅವರು ಇಂದು ಮಧ್ಯಾಹ್ನ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನವೇ ಡಿವಿಎಸ್ ರಿಂದ ಪ್ರಧಾನಿ ಮೋದಿ ಭೇಟಿಯಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಭೇಟಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ತರಬಹುದು ಎಂದು ಹೇಳಲಾಗುತ್ತಿದೆ.

ಅಪಘಾತದಲ್ಲಿ ಒಂದೇ ಕುಟುಂಬದ 10 ಜನ ಸಾವು!

ವಿಜಯಸಾಕ್ಷಿ ಸುದ್ದಿ, ಆನಂದ

ಕಾರ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 10 ಜನರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬೆಳ್ಳಂಬೆಳಿಗ್ಗೆ ಗುಜರಾತ್‌ನ ಆನಂದ್ ಜಿಲ್ಲೆಯ ಇಂದ್ರನಾಜ್ ಗ್ರಾಮದ ಸಮೀಪ ನಡೆದಿದೆ.

ಕಾರಿನಲ್ಲಿದ್ದ ಒಂದೇ ಕುಟುಂಬದ 10 ಜನರು ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಮಕ್ಕಳೂ ಇದ್ದರು. ವೇಗವಾಗಿ ಬಂದ ಟ್ರಕ್ ಎದುರಿಗೆ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘತಾಕ್ಕೊಳಗಾದ ಕಾರು ವಾಟಾಮನ್ ಗೆ ಹೋಗುತ್ತಿತ್ತು. ಇನ್ನು ಡಿಕ್ಕಿ ಹೊಡೆದ ಈ ಟ್ರಕ್ ವಾಟಾಮನ್ ಕಡೆಯಿಂದ ಬರುತ್ತಿತ್ತು. ಈ ವೇಳೆ ಮುಖಾಮುಖಿಯಾಗಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಕಾರಿನೊಳಗೆ ಸಿಲುಕಿರುವ ಶವಗಳನ್ನು ಹೊರತೆಗೆಯುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿತ್ತು. ಇದೀಗ ಮೃತರ ಗುರುತು ಪತ್ತೆಹಚ್ಚುವ ಕೆಲಸ ನಡೆದಿದೆ.

ಶಿಕ್ಷಕಿಯರು ಮನೆಯಲ್ಲಿಯೇ ಕುಳಿತು ಕಾರ್ಯ ನಿರ್ವಹಿಸಬೇಕು!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಶಿಕ್ಷಕಿಯರಿಗೆ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಇರುವ ಹಿನ್ನೆಲೆಯಲ್ಲಿ ಶಿಕ್ಷಕಿಯರಿಗೆ ಮನೆಯಲ್ಲಿಯೇ ಕುಳಿತು ಕೆಲಸ ನಿರ್ವಹಿಸಲು ಸರ್ಕಾರ ಅವಕಾಶ ನೀಡಿದೆ. ಸಂಚಾರಕ್ಕೆ ಅನಾನುಕೂಲತೆ ಇರುವ ಹಿನ್ನೆಲೆಯಲ್ಲಿ ಶಿಕ್ಷಕಿಯರಿಗೆ ಸರ್ಕಾರ ಈ ರೀತಿಯ ಅವಕಾಶ ಮಾಡಿಕೊಟ್ಟಿದೆ.
ಅಲ್ಲದೇ, ಕೊರೊನಾ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಓಡಾಟಕ್ಕೆ ಸದ್ಯ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಶಿಕ್ಷಕರಿಗೆ ಸಾಲೆಗಳ ಹಾಜರಾತಿಗೆ ಕಾಲಾವಕಾಶ ನೀಡಲಾಗಿದೆ. ಸಂಚಾರಕ್ಕೆ ಅನಾನುಕೂಲತೆ ಇರುವ ಕಾರಣ ಶಿಕ್ಷಕಿಯರಿಗೆ ವಿನಾಯಿತಿ ನೀಡಲಾಗಿದೆ.

ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕಿಯರನ್ನು ಹೊರತು ಪಡಿಸಿ ಸಂಚಾರಕ್ಕ ಅನಾನುಕೂಲತೆ ಇರುವ ಶಿಕ್ಷಕಿಯರು ಜೂ. 21ರ ವರೆಗೆ ಮನೆಯಿಂದಲೇ ಕುಳಿತು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ತೆರವುಗೊಂಡ ಜಿಲ್ಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕೆಂದು ಸರ್ಕಾರ ಸೂಚಿಸಿದೆ.

ಪೊಲೀಸ್ ಠಾಣೆಯಲ್ಲಿ ಹಾವು ಪ್ರತ್ಯಕ್ಷ; ಬೆಚ್ಚಿಬಿದ್ದ ಪೊಲೀಸರು

ವಿಜಯಸಾಕ್ಷಿ ಸುದ್ದಿ, ಗದಗ

ವಿಷಕಾರಿ ಹಾವೊಂದು ಪ್ರತ್ಯಕ್ಷವಾಗಿ ಕೆಲಕಾಲ ಪೊಲೀಸರು ಆತಂಕಗೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ‌ ನಡೆದಿದೆ.

ಠಾಣೆಯಲ್ಲಿ ಆರೋಪಿಗಳನ್ನು ಇಡುವ ಸೆಲ್ ಬಳಿಯ ಶೌಚಾಲಯದಲ್ಲಿ ಹುರುಪಂಜರ್ ಎಂಬ ವಿಷಕಾರಕ ಹಾವು ಪೇದೆಯೊಬ್ಬರಿಗೆ ಕಾಣಿಸಿಕೊಂಡಿದೆ. ಗಾಬರಿ ಬಿದ್ದ ಪೇದೆ ಎಲ್ಲ ಸಿಬ್ಬಂದಿಗೆ ಹೇಳಿದಾಗ ಕೆಲಕಾಲ‌ ಆತಂಕದ ವಾತಾವರಣ ‌ನಿರ್ಮಾಣವಾಯಿತು.

ತಕ್ಷಣವೇ ಸಮೀಪದಲ್ಲಿ ಇರುವ ಸ್ನೇಕ್ ರಹಮಾನ್ ಗೆ ಕರೆ ಮಾಡಿದ್ದಾರೆ. ಸ್ನೇಕ್ ರೆಹಮಾನ್ ಹಾಗೂ ಮಗ ತೌಶೀಫ್ ಇಬ್ಬರು ಕಾರ್ಯಚರಣೆ ನಡೆಸಿ ಹಾವು ಹಿಡಿದರು. ಸುಮಾರು ಅರ್ಧ ಗಂಟೆಗಳ ಕಾಲ‌ ಕಾಡಿಸಿದ ಹಾವು ಕೊನೆಗೂ ಸ್ನೇಕ್ ರೆಹಮಾನ್ ಕೈಗೆ ಸಿಕ್ಕಿಬಿತ್ತು. ಹಾವು ಸಿಕ್ಕ ನಂತರ ಸಿಬ್ಬಂದಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಈ ಕುರಿತು ವಿಜಯಸಾಕ್ಷಿ ಗೆ ಮಾಹಿತಿ ‌ನೀಡಿರುವ ಸ್ನೇಕ್ ರೆಹಮಾನ್, ಈ ಹಾವು ಸುಮಾರು ದಿನಗಳಿಂದ ಶೌಚಾಲಯದಲ್ಲಿ ನೆಲೆಸಿತ್ತು. ಆದರೆ ಯಾರ ಗಮನಕ್ಕೂ ‌ಬಂದಿಲ್ಲ. ಆದರೆ ಇವತ್ತು ರಾತ್ರಿ ಹೊರಗೆ ಬಿದ್ದಿದ್ದರಿಂದ ಪೊಲೀಸರ ಕಣ್ಣಿಗೆ ಬಿದ್ದಿದೆ. ಕರೆ ಬಂದ ತಕ್ಷಣವೇ ಹಾಜರಾಗಿ‌ ಹಾವು ಹಿಡಿದು ನರೇಗಲ್ ರಸ್ತೆಯ ಎಕ್ಕಿಹಳ್ಳದ ಸರುವಿನಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ ಎಂದರು.

ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಹಾವು ಪ್ರತ್ಯಕ್ಷ; ಬೆಚ್ಚಿಬಿದ್ದ ಪೊಲೀಸರು

ವಿಜಯಸಾಕ್ಷಿ ಸುದ್ದಿ, ಗದಗ

ವಿಷಕಾರಿ ಹಾವೊಂದು ಪ್ರತ್ಯಕ್ಷವಾಗಿ ಕೆಲಕಾಲ ಪೊಲೀಸರು ಆತಂಕಗೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ‌ ನಡೆದಿದೆ.

ಠಾಣೆಯಲ್ಲಿ ಆರೋಪಿಗಳನ್ನು ಇಡುವ ಸೆಲ್ ಬಳಿಯ ಶೌಚಾಲಯದಲ್ಲಿ ಹುರುಪಂಜರ್ ಎಂಬ ವಿಷಕಾರಕ ಹಾವು ಪೇದೆಯೊಬ್ಬರಿಗೆ ಕಾಣಿಸಿಕೊಂಡಿದೆ. ಗಾಬರಿ ಬಿದ್ದ ಪೇದೆ ಎಲ್ಲ ಸಿಬ್ಬಂದಿಗೆ ಹೇಳಿದಾಗ ಕೆಲಕಾಲ‌ ಆತಂಕದ ವಾತಾವರಣ ‌ನಿರ್ಮಾಣವಾಯಿತು.

ತಕ್ಷಣವೇ ಸಮೀಪದಲ್ಲಿ ಇರುವ ಸ್ನೇಕ್ ರಹಮಾನ್ ಗೆ ಕರೆ ಮಾಡಿದ್ದಾರೆ. ಸ್ನೇಕ್ ರೆಹಮಾನ್ ಹಾಗೂ ಮಗ ತೌಶೀಫ್ ಇಬ್ಬರು ಕಾರ್ಯಚರಣೆ ನಡೆಸಿ ಹಾವು ಹಿಡಿದರು. ಸುಮಾರು ಅರ್ಧ ಗಂಟೆಗಳ ಕಾಲ‌ ಕಾಡಿಸಿದ ಹಾವು ಕೊನೆಗೂ ಸ್ನೇಕ್ ರೆಹಮಾನ್ ಕೈಗೆ ಸಿಕ್ಕಿಬಿತ್ತು. ಹಾವು ಸಿಕ್ಕ ನಂತರ ಸಿಬ್ಬಂದಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಈ ಕುರಿತು ವಿಜಯಸಾಕ್ಷಿ ಗೆ ಮಾಹಿತಿ ‌ನೀಡಿರುವ ಸ್ನೇಕ್ ರೆಹಮಾನ್, ಈ ಹಾವು ಸುಮಾರು ದಿನಗಳಿಂದ ಶೌಚಾಲಯದಲ್ಲಿ ನೆಲೆಸಿತ್ತು. ಆದರೆ ಯಾರ ಗಮನಕ್ಕೂ ‌ಬಂದಿಲ್ಲ. ಆದರೆ ಇವತ್ತು ರಾತ್ರಿ ಹೊರಗೆ ಬಿದ್ದಿದ್ದರಿಂದ ಪೊಲೀಸರ ಕಣ್ಣಿಗೆ ಬಿದ್ದಿದೆ. ಕರೆ ಬಂದ ತಕ್ಷಣವೇ ಹಾಜರಾಗಿ‌ ಹಾವು ಹಿಡಿದು ನರೇಗಲ್ ರಸ್ತೆಯ ಎಕ್ಕಿಹಳ್ಳದ ಸರುವಿನಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ ಎಂದರು.

ಕೊರೊನಾ; ಗದಗ ಜಿಲ್ಲೆಯ ಜನರಿಗೆ ಮಂಗಳವಾರವೂ ಮುಂದುವರಿದ ಶುಭ ಸುದ್ದಿ!

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಇಂದು 21 ಜನರಿಗೆ ಸೋಂಕು ತಗುಲಿದೆ. ಇಂದು ಕೂಡ ಕೋವಿಡ್ ನಿಂದ ಯಾವುದೇ ಸಾವಿನ ವರದಿ ಆಗಿಲ್ಲ.

ಇಂದು 21 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 25446 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -09, ಮುಂಡರಗಿ-03, ನರಗುಂದ-02, ರೋಣ-02, ಶಿರಹಟ್ಟಿ-05, ಹೊರಜಿಲ್ಲೆಯ-00 ಸೇರಿದಂತೆ 21 ಪ್ರಕರಣಗಳು ದೃಢಪಟ್ಟಿವೆ.

ಇಂದು 88 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 24582 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 576 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 80 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಅಂದರ್-ಬಾಹರ್ ಜೂಜಾಟ; ಸರಕಾರಿ ನೌಕರ, ವರ್ತಕರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಓರ್ವ ಸರಕಾರಿ ನೌಕರ, ನಾಲ್ಕು ಜನ ವರ್ತಕರು ಹಾಗೂ ಖಾಸಗಿ ನೌಕರನೊಬ್ಬ ಸೇರಿದಂತೆ ಒಂಬತ್ತು ಜನರ ತಂಡವೊಂದು ಇಸ್ಪೀಟ್ ಎಲೆಗಳ ಸಹಾಯದಿಂದ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹರದಗಟ್ಟಿ ರಸ್ತೆಯಲ್ಲಿರುವ ಅಗಸ್ಥ್ಯತೀರ್ಥ ಹತ್ತಿರದ ಸಾರ್ವಜನಿಕ ರಸ್ತೆಯ ಮೇಲೆ ಅಂದರ-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಲಕ್ಷ್ಮೇಶ್ವರ ಠಾಣೆಯ ಪಿಎಸ್‌ಐ ಶಿವಕುಮಾರ ಲೋಹಾರ್ ಹಾಗೂ ಸಿಬ್ಬಂಧಿ ದಾಳಿ ಒಂಬತ್ತು ಜನರನ್ನು ಬಂಧಿಸಿ ಅವರಿಂದ 3800 ರೂ, ಗಳನ್ನು ವಶಪಡಿಸಿಕೊಂಡಿದ್ದಾರೆ.

ವರ್ತಕರಾದ ಸಾಗರ ಮಂಜುನಾಥ್ ಹಂಜಗಿ, ಪರಶುರಾಮ ಫಕ್ಕೀರಪ್ಪ ಹಂಜಗಿ, ವಿನಾಯಕ ರವಿ ಬಳ್ಳಾರಿ, ಆಕಾಶ ಭರಮಪ್ಪ ಬಂಡಾರಿ, ಸರಕಾರಿ ನೌಕರ ನವೀನ ಮಂಜುನಾಥ್ ಕಾಂಬಳೆ, ಖಾಸಗಿ ನೌಕರ ರಾಜು ಪರಮೇಶ್ ಸಾತಪೊತೆ, ಸೇಲ್ಸ್‌ಮೆನ್‌ ನಾಗರಾಜ್ ಯಲ್ಲಪ್ಪ ಕಾಂಬಳೆ ಹಾಗೂ ಅಮಿತ ಪರಶುರಾಮ ಮುಳಗುಂದ, ಗದಗ ನಿವಾಸಿ ಕುಂಟಪ್ಪ ದೊಡ್ಡದುರಗಪ್ಪ ವಿಭೂತಿ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಅನ್ ಲಾಕ್ 2.0ಗೆ ಸಿದ್ಧತೆ! ಯಾವುದಕ್ಕೆಲ್ಲ ಸಿಗಲಿದೆ ಅವಕಾಶ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಮಹಾಮಾರಿಯಿಂದಾಗಿ ಲಾಕ್ ಡೌನ್ ಹೇರಲಾಗಿತ್ತು. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಈಗಾಗಲೇ ರಾಜ್ಯದ 19 ಜಿಲ್ಲೆಗಳಲ್ಲಿ ಹಲವು ಸಡಿಲಿಕೆಗಳನ್ನು ರಾಜ್ಯ ಸರ್ಕಾರ ಮಾಡಿದೆ. ಇದರೊಂದಿಗೆ ಅನ್ ಲಾಕ್ 2.0ಗೂ ಸಿದ್ಧತೆ ನಡೆದಿದೆ ಎನ್ನಲಾಗಿದೆ.

ಮಹಾಮಾರಿ ರಾಜ್ಯದ ಆರ್ಥಿಕತೆಯನ್ನು ಸಂಪೂರ್ಣವಾಗಿ ನುಂಗಿ ಹಾಕಿದೆ. ಬಡವರ ಪರಿಸ್ಥಿತಿ ಕೂಡ ಇದರಿಂದಾಗಿ ಶೋಚನೀಯವಾಗಿದೆ. ಇನ್ನೊಂದೆಡೆ ಕೊರೊನಾ ಹತೋಟಿಗೆ ಬರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಆರ್ಥಿಕತೆಗೆ ಪುನರ್ ಜೀವ ಕೊಡಲು ಮುಂದಾಗಲಾಗಿದೆ. ಈ ನಿಟ್ಟಿನಲ್ಲಿ ಜೂ. 21ರಿಂದ ರಾಜ್ಯಾದ್ಯಂತ ಅನ್ ಲಾಕ್ 2.0 ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಸಾರಿಗೆ ಸಂಚಾರ, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲು ರಾಜ್ಯ ಸರ್ಕಾರದ ಮಟ್ಟದಲ್ಲಿ ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತದೆ.

ಜೂ. 21ರಿಂದ ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದ್ದು, ಶೇ. 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇದರೊಂದಿಗೆ ಶಾಪಿಂಗ್ ಮಾಲ್, ಥಿಯೇಟರ್, ಜಿಮ್, ಚಿನ್ನದ ಅಂಗಡಿ, ಬಟ್ಟೆ ಅಂಗಡಿ ಸೇರಿದಂತೆ ವಾಣಿಜ್ಯ ಮಳಿಗೆ ತೆರೆಯಲು ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರು ಕುಳಿತುಕೊಂಡು ತಿಂಡಿ ತಿನ್ನಲು ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಆದರೆ, ಮೂರನೇ ಅಲೆಯ ಭಯ ಇರುವುದರಿಂದಾಗಿ ಈ ಎಲ್ಲ ಚಟುವಟಿಕೆಗಳನ್ನು ನಡೆಸಲು ದಿನಕ್ಕೆ ಕೇವಲ 8 ಗಂಟೆಯ ಅವಧಿ ನಿಗದಿಪಡಿಸುವ ಸಾಧ್ಯತೆ ಇದೆ. ಎಲ್ಲ ವ್ಯವಹಾರಗಳು ಕೋವಿಡ್ ನಿಯಮದಂತೆ ನಡೆಸಲು ಸರ್ಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸುವ ಸಾಧ್ಯತೆ ಇದೆ.

error: Content is protected !!