Home Blog Page 3095

ಕೊವಿಡ್-19: ಶುಕ್ರವಾರದ ಗದಗ ಜಿಲ್ಲೆಯ ಸ್ಥಿತಿಗತಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ನವೆಂಬರ್ 20 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 115598 ಜನ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು 119325 ಮಾದರಿಗಳಲ್ಲಿ 108347 ಮಾದರಿಗಳು (ನೆಗೆಟಿವ್) ನಕಾರಾತ್ಮಕವಾಗಿವೆ. 330 ಮಾದರಿಗಳ ವರದಿ ಬರಲು ಬಾಕಿ ಇದೆ.

ಜಿಲ್ಲೆಯಲ್ಲಿ ಇಂದಿನ 11 ಪ್ರಕರಣಗಳು ಸೇರಿದಂತೆ ಒಟ್ಟು 10648 ಕೊವಿಡ್-19 ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ
ಕೊವಿಡ್ ಸೋಂಕಿಗೆ 141 ಜನ ಮೃತಪಟ್ಟಿದ್ದು, ಇಂದಿನ ಆರು ಜನ ಸೇರಿದಂತೆ ಒಟ್ಟು 10443 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 64 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ; ಮೂವರು ಸ್ಥಳದಲ್ಲೇ ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕು ನಿಟ್ಟಾಲಿ ಕ್ರಾಸ್ ಬಳಿ ಮಿನಿ ಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರ ಕುಕನೂರು ತಾಲೂಕು ಬೆಣಕಲ್ ಗ್ರಾಮದ ಸಂತೋಷ ವುಂಕಿ(25) ಮತ್ತು ಮಿನಿ ಬಸ್ ನಲ್ಲಿದ್ದ ರಂಗಪ್ಪ ನಾಗಣ್ಣವರ(80), ಭೀಮವ್ವ ಗೋಡಿ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮಕ್ಕೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಬರುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ಒಳಗಾಗಿದೆ.

ನಿಟ್ಟಾಲಿ ಕಡೆಯಿಂದ ಬಂದ ಬೈಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಿದೆ. ನೂತನವಾಗಿ ನಿರ್ಮಿಸಿರುವ ರಸ್ತೆಗೆ ವೇಗ ನಿಯಂತ್ರಣಗಳನ್ನು ಅಳವಡಿಸದಿರುವುದೇ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶ್ರೀಧರ್ ತಿಳಿಸಿದ್ದಾರೆ. ಗಾಯಾಳುಗಳು ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ; ಮೂವರು ಸ್ಥಳದಲ್ಲೇ ಸಾವು

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಜಿಲ್ಲೆಯ ಕುಕನೂರು ತಾಲೂಕು ನಿಟ್ಟಾಲಿ ಕ್ರಾಸ್ ಬಳಿ ಮಿನಿ ಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಸವಾರ ಕುಕನೂರು ತಾಲೂಕು ಬೆಣಕಲ್ ಗ್ರಾಮದ ಸಂತೋಷ ವುಂಕಿ(25) ಮತ್ತು ಮಿನಿ ಬಸ್ ನಲ್ಲಿದ್ದ ರಂಗಪ್ಪ ನಾಗಣ್ಣವರ(80), ಭೀಮವ್ವ ಗೋಡಿ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮಕ್ಕೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಬರುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ಒಳಗಾಗಿದೆ.
ನಿಟ್ಟಾಲಿ ಕಡೆಯಿಂದ ಬಂದ ಬೈಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಿದೆ. ನೂತನವಾಗಿ ನಿರ್ಮಿಸಿರುವ ರಸ್ತೆಗೆ ವೇಗ ನಿಯಂತ್ರಣಗಳನ್ನು ಅಳವಡಿಸದಿರುವುದೇ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶ್ರೀಧರ್ ತಿಳಿಸಿದ್ದಾರೆ. ಗಾಯಾಳುಗಳು ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಜಿತ್ ಪವಾರ್ ಗೆ ತಲೆನೇ ಇಲ್ಲಾ: ಸಚಿವ ಪ್ರಭು ಚವ್ಹಾಣ ಆಕ್ರೋಶ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬೆಳಗಾವಿ ನಮಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ವಿರುದ್ಧ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಗದಗನ ಪಶು ವೈದ್ಯಕೀಯ ವಿಶ್ವವಿದ್ಯಾಲಯ ದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾತನಾಡಿದ ಸಚಿವ ಪ್ರಭು ಚವ್ಹಾಣ, ಅಜಿತ್ ಪವಾರ್ ಗೆ ತಲೆನೇ ಇಲ್ಲಾ, ಆತ ಡಬಲ್ ಗೇಮ್ ವ್ಯಕ್ತಿ ಅಂತ ಕಿಡಿ ಕಾರಿದರು. ಗಡಿ ವಿಷಯದಲ್ಲಿ ರಾಜ್ಯದ ಒಂದಿಂಚು ಜಾಗೆಯನ್ನು ಬಿಟ್ಟು ಕೊಡಲ್ಲಾ ಎಂದರು.

ಕರ್ನಾಟಕದ ಜಾಗೆ ನಮ್ಮದು ಅನ್ನುವುದು ದಡ್ಡತನ ಪರಮಾವಧಿ‌. ಅಜಿತ್ ಪವಾರ್ ಡಬಲ್ ಸ್ಟ್ಯಾಂಡರ್ಡ್‌ ವ್ಯಕ್ತಿ, ಅವರಿಗೆ ತಲೆ ಇಲ್ಲಾ ರಾತ್ರೋರಾತ್ರಿ ನಾಯಕನಾದವನು. ಅಂತವನ ಮಾತಿಗೆ ಕಿಮ್ಮತ್ತು ಕೊಡುವುದು ಅಗತ್ಯವಿಲ್ಲಾ ಅಂತಾ ವಾಗ್ದಾಳಿ ನಡೆಸಿದರು.

ಗಡಿ ಬಗ್ಗೆ ಸಾಂಗ್ಲಿ, ಸೊಲ್ಲಾಪುರಗೆ ಬಂದು ಮಾತನಾಡುತ್ತೇನೆ ಎಂದು ಉದ್ದಟತನ ತೋರಿದ ಅಜಿತ ಪವಾರ್ ಗೆ ಧೈರ್ಯವಿದ್ದರೆ ಕರ್ನಾಟಕ ಕ್ಕೆ ಬಂದು ಮಾತನಾಡಲಿ ಎಂದು ಸವಾಲು ಹಾಕಿದರು.

ಅಜಿತ ಪವಾರನದು ಬರಿ ಬೆಂಕಿ ಹಚ್ಚುವ ಕೆಲಸ. ಅದೇ ಅವರ ಉದ್ಯೋಗ, ಮಹಾರಾಷ್ಟ್ರದಲ್ಲೂ ಬರಿ ಬೆಂಕಿ ಹಚ್ಚುವ ಕೆಲಸ ಮಾಡ್ತಾನೆ ಬಂದಿದ್ದಾರೆ. ಮಹಾರಾಷ್ಟ್ರ ಜನರೇ ಕಿಮ್ಮತ್ತು ಕೊಡಲ್ಲಾ, ಇನ್ನು ಕರ್ನಾಟಕ ಜನ ಕಿಮ್ಮತ್ತು ಕೊಡೊದೆ ಇರೋದು ಯಾವ ಲೆಕ್ಕ ಅಂತ ಸಚಿವ ಪ್ರಭು ವ್ಯಂಗ್ಯ ವಾಡಿದರು.

ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗ್ತಾ ಬಂದಿದೆ.
ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.

ಶಿರಾ, ಆರ್‌ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದ್ರೆ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗ್ತಾ ಬಂದಿದೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.
ಶಿರಾ, ಆರ್‌ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದ್ರೆ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ‌ಗದಗ: ಗೆಳೆಯರೊಂದಿಗೆ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರಲ್ಲಿ ಮುಳಗಿದ ದುರ್ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯ ತೀರ್ಥ ಹೊಂಡದಲ್ಲಿ ಈಜಲು ಹೋಗಿದ್ದ ಬ್ಯಾಡಗಿಯ ಹರ್ಷವರ್ಧನ ಅರಕೇರಿ (15) ಎಂಬಾತನೇ ನೀರಲ್ಲಿ ಮುಳಗಿದಾತ.

ದೀಪಾವಳಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಹರ್ಷವರ್ಧನ ಇಂದು ಪಕ್ಕದ ಮನೆಯ ಗೆಳೆಯರೊಂದಿಗೆ ಹೊಂಡಕ್ಕೆ ಈಜಲು ಹೋಗಿದ್ದ.

ಸುದ್ದಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರೊಂದಿಗೆ ಹರ್ಷವರ್ಧನಗಾಗಿ ಶೋಧ ಕಾರ್ಯ ನಡೆಸಿದ್ದು, ಕುಟುಂಬದವರ ಆಕ್ರಂದನ ಹೇಳತೀರಾದಾಗಿದೆ. ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಭವಿಷ್ಯದಲ್ಲಿ ತಂತ್ರಜ್ಞಾನ ಮತ್ತಷ್ಟು ಅಭಿವೃದ್ಧಿ: ಪ್ರಧಾನಿ ಮೋದಿ

ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೋವಿಡ್-19 ಕಾಲಘಟ್ಟದಲ್ಲಿ ಡಿಟಿಟಲ್ ತಂತ್ರಜ್ಞಾನ ಮತ್ತಷ್ಟು ಮುನ್ನೆಲೆಗೆ ಬಂದಿದೆ. ಭವಿಷ್ಯದಲ್ಲಿ ಇನ್ನಷ್ಟು ತಂತ್ರಜ್ಞಾನ ಅಭಿವೃದ್ಧಿ ಯಾಗಲಿದೆ. ಹೀಗಾಗಿ ನಮ್ಮ ಮಾಹಿತಿ ಮಾಹಿತಿ ಹಾಗೂ ದತ್ತಾಂಶ ಸಂರಕ್ಷಿಸಿಕೊಳ್ಳಲು‌ ಸೈಬರ್ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಆರಂಭವಾದ ಬೆಂಗಳೂರು ಟೆಕ್ ಸಮ್ಮೇಳನಕ್ಕೆ ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ ಯುಗದಲ್ಲಿ ನಾವಿದ್ದರೂ ಸೈಬರ್ ಭದ್ರತೆ ಹಾಗೂ ದತ್ತಾಂಶ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.
ಐದು ವರ್ಷದ ಹಿಂದೆ ಡಿಜಿಟಲ್ ಇಂಡಿಯಾ ಯೋಜನೆಗೆ ಚಾಲನೆ ನೀಡಲಾಯಿತು. ಈ ಕ್ಷೇತ್ರದಿಂದ ಜನರಿಗೆ ಹೆಚ್ಚಿನ ಲಾಭವಾಗುತ್ತಿದೆ. ಬಡ, ಮಧ್ಯಮ ವರ್ಗದ ಜತೆಗೆ ಮೇಲ್ವರ್ಗದವರಿಗೂ ಡಿಜಿಟಲ್ ಅನಿವಾರ್ಯವಾಗಿದೆ. ಒಂದೇ ಬಟನ್ ಕ್ಲಿಕ್ ನಿಂದ ರೈತರ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂ. ಸಬ್ಸಿಡಿ ಹಾಗೂ ಇತರ ಹಣಕಾಸನ್ನು ವರ್ಗಾಯಿಸಲಾಗಿದೆ. ಕಳೆದ ತಿಂಗಳು ದೇಶದಲ್ಲಿ 2 ಶತಕೋಟಿ ವಹಿವಾಟು ಡಿಜಿಟಲ್ ಮೂಲಕ ನಡೆದಿದೆ. ಇದನ್ನು ಗಮನಿಸಿದರೆ ನಮ್ಮ‌ಸರಕಾರ ತಂದಿರುವ ಯೋಜನೆ ಪ್ರತಿಯೊಬ್ಬರಿಗೂ ಅನುಕೋಲ ಮಾಡಿಕೊಟ್ಟಿದೆ. ತಂತ್ರಜ್ಞಾನದ ಹೊಸ ಸವಾಲುಗಳನ್ನು ಎದುರಿಸಿ ನವೀನ ಆವಿಷ್ಕಾರಕ್ಕೆ ಮುಂದಾಗಬೇಕು. ಜಾಗತಿಕ ಮಟ್ಟದಲ್ಲೂ ಭಾರತ ಹೆಚ್ಚಿನ ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದು, ಇದನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಸರಕಾರ ಎಲ್ಲ ರೀತಿಯ ನೆರವು ಹಾಗೂ ಸಹಕಾರವನ್ನು ನೀಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಸಿ.ನಾರಾಯಣಗೌಡ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗನಲ್ಲಿ ಬಡ್ಡಿ ಮಾಫಿಯಾ: ಗ್ರಾಪಂ ಮಾಜಿ ಅಧ್ಯಕ್ಷೆ ಆತ್ಮಹತ್ಯೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬಡ್ಡಿ ಮಾಫಿಯಾಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಸಂಗವ್ವ ಮೆಣಸಿನಕಾಯಿ (45) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದವರು.

ಶ್ರೀಶೈಲಪ್ಪ ಚಕ್ರಣ್ಣವರ್ ಮತ್ತು ಈಕೆಯ ಪತ್ನಿ ಯಶೋಧಾ ಚಕ್ರಣ್ಣವರ ಮತ್ತು ಮಂಜುನಾಥ್ ಹಿರೇಮಠ ಎಂಬುವರು ಸಂಗವ್ವ ಮೆಣಸಿನಕಾಯಿ ಪತಿ ಈರಪ್ಪನಿಗೆ ಬಡ್ಡಿ ರೂಪದಲ್ಲಿ ಹಣ ನೀಡಿದ್ದರು. ಅದಕ್ಕಾಗಿ ಮೂರು ಎಕರೆ ಜಮೀನನ್ನು ಅಡ ಇಡಲಾಗಿತ್ತು. ಅಡ ಇಟ್ಟಿದ್ದ ಜಮೀನನ್ನು ಶ್ರೀಶೈಲಪ್ಪ ಚಕ್ರಣ್ಣವರ ಬೇರೆ ಯವರಿಗೆ ಮಾರಿದ್ದಾರೆ.

ಜಮೀನನ್ನು ಮೋಸದಿಂದ ಕಿತ್ತುಕೊಂಡಿದ್ದು, ಹಾಗೂ ಹಣ ಕೊಡುವಂತೆ ಬೆದರಿಕೆ ಹಾಕಿದ್ದರಿಂದ ನೊಂದಿದ್ದ ಸಂಗವ್ವ ಮೆಣಸಿನಕಾಯಿ ಶನಿವಾರ ಸೀಮೆ ಎಣ್ಣೆ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ತೀವ್ರ ಗಾಯಗೊಂಡಿದ್ದ ಸಂಗವ್ವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ ಮೃತಪಟ್ಟಿದ್ದಾರೆ.

2015 ರಲ್ಲಿ ಮೃತ ಸಂಗವ್ವಳ ಪತಿ ಈರಪ್ಪನಿಗೆ ಶ್ರೀಶೈಲಪ್ಪ ಚಕ್ರಣ್ಣವರ ಸುಮಾರು 5 ಲಕ್ಷ ರೂ. ಬಡ್ಡಿ ಸಾಲ ಕೊಟ್ಟಿದ್ದರು. ಬಡ್ಡಿ ಸಾಲಕ್ಕೆ ಪ್ರತಿಯಾಗಿ ತಮ್ಮ ಹೊಲವನ್ನು ಕಬ್ಜಾಕ್ಕೆ ಪಡೆದಿದ್ದರು. ಕಬ್ಜಾಕ್ಕೆ ಪಡೆಯುವಾಗ ಸಹಿ ಮಾಡಿಸಿಕೊಂಡಿದ್ದನ್ನೇ ಬಳಸಿಕೊಂಡು 3 ಎಕರೆ ಜಮೀನನ್ನು ಬೇರೆಯವರಿಗೆ ಮಾರಿದ್ದಾರೆ. ಪಹಣಿ ಪತ್ರದಲ್ಲಿ ಬೇರೆಯವರ ಹೆಸರು ದಾಖಲಾಗಿದೆ.

ಬಡ್ಡಿ ವ್ಯವಹಾರ ದಲ್ಲಿ ಮೋಸ ಮಾಡಿ ಜಮೀನನ್ನು ಬೇರೆ ಯವರಿಗೆ ಮಾರಿದ್ದರಿಂದ ಬೇಸತ್ತ ಸಂಗವ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಮೃತಳ ಪತಿ ಈರಪ್ಪ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

error: Content is protected !!