Home Blog Page 31

ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರಿದ ಕಾರು; ಮುಂದೇನಾಯ್ತು?

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಕಲ್ ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಗಾಯಗೊಂಡ ವಿಕಾಸ್‌ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಸಂಪೂರ್ಣ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೊದಲ ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆ: ಮಂಟಪಕ್ಕೆ ನುಗ್ಗಿ ಗಂಡನಿಗೆ ಶಾಕ್ ಕೊಟ್ಟ ಹೆಂಡ್ತಿ!

0

ತುಮಕೂರು:- ಜಿಲ್ಲೆಯ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ಸಿನಿಮೀಯ ದೃಶ್ಯದಂತೆ ಹೋಲುವ ಅಚ್ಚರಿ ಘಟನೆ ಬೆಳಕಿಗೆ ಬಂದಿದೆ.

ತನಗೆ ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿ ಪತ್ನಿ ಶಾಕ್ ಕೊಟ್ಟಿದ್ದಾಳೆ. ಥೇಟ್​​ ಸಿನಿಮಾ ಶೈಲಿಯ ದೃಶ್ಯ ನೆರೆದಿದ್ದವರನ್ನು ಅಚ್ಚರಿಗೊಳಿಸಿದ್ದು, ಪತ್ನಿಗೆ ಗೊತ್ತಾಗದಂತೆ ಮತ್ತೊಂದು ಮದುವೆ ಮಾಡಲಾಗ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಲೇಪಾಕ್ಷಿ ಎಂಬಾಕೆಯನ್ನ ಹರಿಪ್ರಸಾದ್ ಎಂಬುವವರು 2014ರಲ್ಲಿ ಮದುವೆ ಆಗಿದ್ದರು. ಮದುವೆ ಬಳಿಕ 10 ವರ್ಷ ಸಂಸಾರವನ್ನೂ ನಡೆಸಿದ್ದರು. ಆ ಬಳಿಕ ಕೌಟುಂಬಿಕ ಕಲಹದ ಕಾರಣಕ್ಕೆ ದಂಪತಿ ಬೇರೆಯಾಗಿದ್ದರು. ಈ ನಡುವೆ ಲೇಪಾಕ್ಷಿಗೆ ಗೊತ್ತಾಗದಂತೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಯುವತಿಯ ಜೊತೆಗೆ ಮದುವೆಗೆ ಹರಿಪ್ರಸಾದ್​ ಮುಂದಾಗಿದ್ದಾರೆ. ಅದರಂತೆ ಯಡೆಯೂರಿನ SLN ಕಲ್ಯಾಣ ಮಂಟಪದಲ್ಲಿ ಇಂದು ಬೆಳಗ್ಗೆ ಪೊಲೀಸರ ಜೊತೆ ಲೇಪಾಕ್ಷಿ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಪತ್ನಿ ಕಂಡು ಹರಿಪ್ರಸಾದ್​​ ಕಕ್ಕಾಬಿಕ್ಕಿಯಾಗಿದ್ದರೆ, ನನಗೆ ಡಿವೋರ್ಸ್ ಕೊಡದೆ ಮೋಸ ಮಾಡಿದ್ದೀಯಾ ಅಂತ ಗಲಾಟೆ ತೆಗೆದ ಲೇಪಾಕ್ಷಿ ಕೊನೆಗೂ ಮದುವೆ ನಿಲ್ಲಿಸಿದ್ದಾರೆ. ಮತ್ತೊಂದು ಮದುವೆಯ ಆಸೆಯಲ್ಲಿ ಹಸೆಮಣೆ ಏರಿದ್ದ ಹರಿಪ್ರಸಾದ್​​, ತಾಳಿ ಕಟ್ಟದೆ ಪೊಲೀಸ್​​ ಠಾಣೆಗೆ ತೆರಳಿದ ಪ್ರಸಂಗ ನಡೆದಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಲೇಪಾಕ್ಷಿ ಕುಟುಂಬಸ್ಥರು ಹರೀಶ್​​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿಜಯನಗರ | ಹಂಪಿಯಲ್ಲಿ ಪ್ರವಾಸಿಗರ ಮೇಲೆ ಹೆಜ್ಜೆನು ದಾಳಿ!

0

ವಿಜಯನಗರ:  ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಪ್ರದೇಶದಲ್ಲಿ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ಹೆಜ್ಜೆನು ದಾಳಿ ನಡೆಸಿದ ಘಟನೆ ನಡೆದಿದೆ.

ಹಂಪಿಯ ಆನೆಯಾಳದ ಬಳಿ ಹೋಗುವ ದಾರಿಯಲ್ಲಿ ಹೆಜ್ಜೆನು ದಾಳಿ ಸಂಭವಿಸಿದ್ದು, ಇದರಿಂದ ಕೆಲಕಾಲ ಭಾರೀ ಆತಂಕ ಉಂಟಾಯಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿಲ್ಲ. ಹೆಜ್ಜೆನು ಕಡಿತಕ್ಕೆ ಭಯಗೊಂಡ ಪ್ರವಾಸಿಗರು ಹಾಗೂ ವೃದ್ಧರು ಸ್ಥಳದಿಂದ ಓಡಿ ತಪ್ಪಿಸಿಕೊಂಡರು.

ಹೆಜ್ಜೆನುಗಳಿಂದ ಪಾರಾಗಲು ಕೆಲವರು ಟವಲ್‌ಗಳು, ವೇಲ್‌ಗಳನ್ನು ದೇಹದ ಮೇಲೆ ಮುಚ್ಚಿಕೊಂಡು ಓಡಿದ ದೃಶ್ಯಗಳು ಕಂಡುಬಂದವು. ಸಮಯಕ್ಕೆ ಎಚ್ಚರಿಕೆ ವಹಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ. ಘಟನೆಯ ಬಳಿಕ ಪ್ರವಾಸಿಗರು ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಕನಕಪುರ| ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಆತಂಕಗೊಂಡ ಗ್ರಾಮಸ್ಥರು

0

ರಾಮನಗರ:- ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕನಕಪುರದ ತಾಲೂಕಿನ ಕಾಡುಶಿವನಹಳ್ಳಿ ಬಳಿ ಬಂದಿರುವ 40 ಕಾಡಾನೆಗಳು, ಅಕ್ಕಪಕ್ಕದ ಜಮೀನುಗಳಲ್ಲಿ ದಾಂಧಲೆ ನಡೆಸಿವೆ. ಶನಿವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಕಾಡಾನೆ ಹಿಂಡು ನೋಡಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ರಾತ್ರಿ ಕಾಡಾನೆಗಳನ್ನ ವಾಪಸ್ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟೊಟ್ಟಿಗೆ 40 ಕಾಡಾನೆಗಳು ಓಡಾಡುವ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯ ಕಿರುಕುಳ; ಮನನೊಂದ ಗೃಹಿಣಿ ಸೂಸೈಡ್!

0

ಬೀದರ್:- ವೇಶ್ಯಾವಾಟಿಕೆ ಮಾಡುವಂತೆ ಕಿರುಕುಳ ಕೊಡುತ್ತಿದ್ದ ಅತ್ತೆಯಿಂದ ಮಾನಸಿಕವಾಗಿ ನೊಂದಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.

22 ವರ್ಷದ ಅಂಜನಾಬಾಯಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಮೃತಪಟ್ಟಿದ್ದಾರೆ. ಗಂಡ ಶೇಖರ್, ಅತ್ತೆ ಅರುಣಾಬಾಯಿ, ಮಾವ ಚಂದ್ರಕಾಂತ ಅವರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ವಿಜಯ್‌ ಕುಮಾರ್‌ ಬಸವಕಲ್ಯಾಣ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಅತ್ತೆ ಅರುಣಾಬಾಯಿ ತನ್ನ ಮಗಳಿಗೆ ವೇಶ್ಯವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್‌ ಕುಮಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Gold Rate Today: ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್; ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

0

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಆಗಿದೆ.

ಚಿನ್ನದ ಬೆಲೆ ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದ್ದು, ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರವರಿ 8ಕ್ಕೆ):-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ.

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,745 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.

ಗದಗ | ಬೆಳ್ಳಂಬೆಳಿಗ್ಗೆ ಸ್ಕೂಟಿಗೆ ಬೆಂಕಿ – ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ವಾಹನ!

0

ಗದಗ: ನಗರದ ಜುಮ್ಮಾ ಮಸೀದಿ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಸ್ಕೂಟಿಗೆ ಅಚಾನಕ್ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಸ್ಕೂಟಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿ ಹೋಗಿದೆ.

ಬೆಂಕಿಗೀಡಾದ ಸ್ಕೂಟಿ ಚಿನ್ನದ ಅಂಗಡಿ ಮಾಲೀಕರೊಬ್ಬರಿಗೆ ಸೇರಿದ್ದಾಗಿ ತಿಳಿದು ಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆ ನಡೆದ ಸ್ಥಳ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಸೇರಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಆನೇಕಲ್| ಕಾಡಾನೆ ದಾಳಿಗೆ ರೈತ ಸಾವು, ಮಗ ಗಂಭೀರ!

0

ಆನೇಕಲ್:- ತಮಿಳುನಾಡು – ಕರ್ನಾಟಕ ಗಡಿ ಭಾಗದ ಬ್ಯಾಲದ ಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ.

ಮೃತ ರೈತನನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಬೈಕ್‌ನಲ್ಲಿ ಮಗನೊಂದಿಗೆ ತೆರಳುತ್ತಿದ್ದ ವೆಂಕಟೇಶ್‌ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೆಯನ್ನು ಕಾಡಿಗೆ ಓಡಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಗಂಗನಹಳ್ಳಿ ಬಳಿ ರೈತನ ಮೃತದೇಹವನ್ನು ಮುಖ್ಯರಸ್ತೆಯಲ್ಲಿ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಪ್ರಸಂಗವೂ ಜರುಗಿದೆ.

ಕಂಠ ಪೂರ್ತಿ ಕುಡಿದು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ; ಪ್ರಶ್ನಿಸಿದ ಕ್ಯಾಬ್ ಚಾಲಕನಿಗೆ ಮದ್ಯದ ಬೆರಳು ತೋರಿಸಿದ ಯುವತಿಯರು!

0

ಬೆಂಗಳೂರು:- ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ಕಂಠಪೂರ್ತಿ ಮದ್ಯ ಸೇವಿಸಿ ಹಾದಿ ಬೀದಿಯಲ್ಲಿ ಇಬ್ಬರು ಯುವತಿಯರು ರಂಪಾಟ ನಡೆಸಿದ ಘಟನೆ ಜರುಗಿದೆ.

ದ್ವಿಚಕ್ರ ವಾಹನದಲ್ಲಿದ್ದ ಕಂಠ ಪೂರ್ತಿ ಕುಡಿದ್ದಿದ್ದ ಯುವತಿಯರು, ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಕ್ಯಾಬ್‌ ಚಾಲಕನಿಗೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ.

ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕೆಲ ಕ್ಷಣ ಟ್ರಾಫಿಕ್‌ ಜಾಮ್‌ ಆಗಿ ಜನರು ಸೇರಿದ್ದಾರೆ.

ಜನ ಸೇರುತ್ತಿದ್ದಂತೆ ಸ್ಥಳದಿಂದ ಇಬ್ಬರೂ ಪರಾರಿಯಾಗಲು ಯತ್ನಿಸಿದ್ದಾರೆ. ಪರಾರಿಯಾಗುತ್ತಿದ್ದಂತೆ ಸ್ಥಳೀಯರು ಬೆನ್ನಟ್ಟಿ ಯುವತಿಯರನ್ನು ಹಿಡಿದಿದ್ದಾರೆ. ನಂತರ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಯುವತಿಯರು ಅಸಭ್ಯ ವರ್ತನೆ ತೋರಿದ್ದಾರೆ. ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಇಬ್ಬರನ್ನು ಪೋಲೀಸರು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿ ಕಳುಹಿಸಿದ್ದಾರೆ.

ಕೈಕೊಟ್ಟ ಪ್ರಿಯತಮೆ; ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಸೂಸೈಡ್!

0

ಬೆಂಗಳೂರು:- ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸಿದ ಯುವತಿ ಕೈ ಕೊಟ್ಟ ಹಿನ್ನೆಲೆ ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

26 ವರ್ಷದ ಕಿರಣ್ ಮೃತ ಬಾಡಿ ಬಿಲ್ಡರ್. ಮೃತ ಕಿರಣ್ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಳು. ಇದರಿಂದ ಮನನೊಂದ ಕಿರಣ್ ಮನೆಗೆ ಬಂದು ರೂಂನ ಬಾಗಿಲು ಲಾಕ್ ಮಾಡಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಡೋರ್ ಓಪನ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯುವತಿಗೆ ಮದುವೆಯ ನಿಶ್ಚಯವಾಗಿರುವ ವಿಷಯ ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿರುವ ಕಿರಣ್, ಆತ್ಮಹತ್ಯೆಗೆ ಪ್ರೇಯಸಿ ಹಾಗೂ ಆಕೆಯ ತಾಯಿಯೇ ಕಾರಣ ಅಂತಾ ಬರೆದಿದ್ದು, ತನ್ನ ಮೊಬೈಲ್ ಪಾಸ್‌ವರ್ಡ್ ಅನ್ನು ಕೂಡ ಪತ್ರದಲ್ಲಿ ಉಲ್ಲೇಖಿಸಿ ಬಳಿಕ ನೇಣಿಗೆ ಶರಣಾಗಿದ್ದಾನೆ.

error: Content is protected !!