ವಿಜಯಸಾಕ್ಷಿ ಸುದ್ದಿ ಕೊಪ್ಪಳ
ತೆಲುಗು ಚಿತ್ರರಂಗದ ನಟ, ನಿರ್ಮಾಪಕ ಶ್ರೀಕಾಂತ್, ಜಿಲ್ಲೆಯ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಹೇಮಗುಡ್ಡದ ಬಳಿಯಿರುವ ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯಿಸುತ್ತಿರುವ ಜೇಮ್ಸ್ ಚಿತ್ರ ಸಿನಿಮಾದ ಚಿತ್ರೀಕರಣ ತಾಲೂಕಿನ ಮಲ್ಲಾಪುರದಲ್ಲಿ ನಡೆಯುತ್ತಿದ್ದು, ಈ ಚಿತ್ರದಲ್ಲಿ ಶ್ರೀಕಾಂತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್ನಲ್ಲಿ ಪಾಲ್ಗೊಳ್ಳಲು ಶ್ರೀಕಾಂತ್ ಹೈದರಾಬಾದ್ನಿಂದ ಆಗಮಿಸಿದ್ದಾರೆ.
ಶ್ರೀಕಾಂತ್ ಮೂಲತಃ ಗಂಗಾವತಿ ತಾಲೂಕಿನ ಬಸವಪಟ್ಟಣ ನಿವಾಸಿಯಾದ ಇವರು, ಕಳೆದ ಎರಡು ದಶಕಗಳ ಹಿಂದೆಯೇ ಹೈದರಾಬಾದ್ಗೆ ವಲಸೆ ಹೋಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ಅಂಜನಾದ್ರಿ, ದುರ್ಗಾ ಪರಮೇಶ್ವರಿ ಬೆಟ್ಟಕ್ಕೆ ಟಾಲಿವುಡ್ ಸ್ಟಾರ್ ಶ್ರೀಕಾಂತ್ ಭೇಟಿ
ಕೊಪ್ಪಳ ಜಿ.ಪಂ.ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ಮತ್ತೆ ಅಧ್ಯಕ್ಷರಾಗಿ ಕೆ.ರಾಜಶೇಖರ ಹಿಟ್ನಾಳ ಆಯ್ಕೆ
ಬಿಎಸ್ಕೆ
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಜಿ.ಪಂ.ಅಧ್ಯಕ್ಷರಾಗಿದ್ದ ವಿಶ್ವನಾಥರಡ್ಡಿ ಅವಿಶ್ವಾಸದಿಂದ ಖಾಲಿ ಉಳಿದಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಕೆ.ರಾಜಶೇಖರ ಹಿಟ್ನಾಳ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ರಾಜಶೇಖರ ಹಿಟ್ನಾಳ, ಹಾಗೂ ಬಿಜೆಪಿಯಿಂದ ಗಂಗಮ್ಮ ಈಶಪ್ಪ ಗುಳಗಣ್ಣವರ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಜೆಪಿಯ ಗಂಗಮ್ಮ ಈಶಪ್ಪ ಗುಳಗಣ್ಣವರು ೫ ಮತಗಳು ಪಡೆದರೆ, ಕಾಂಗ್ರೆಸ್ನ ರಾಜಶೇಖರ ಹಿಟ್ನಾಳ ೨೩ ಮತಗಳನ್ನು ಪಡೆಯುವುದರ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಪ್ರಾದೇಶಿಕ ಆಯುಕ್ತ ಡಾ.ಎಂ.ವಿ.ಪ್ರಸಾದ್ ಘೋಷಣೆ ಮಾಡಿದ್ದಾರೆ.
೨೯ ಸ್ಥಾನ ಹೊಂದಿದ್ದ ಕೊಪ್ಪಳ ಜಿಲ್ಲಾ ಪಂಚಾಯತಿಯಲ್ಲಿ ಕಾಂಗ್ರೆಸ್ ೧೭, ಬಿಜೆಪಿ ೧೧, ಹಾಗೂ ಓರ್ವ ಪಕ್ಷೇತರ ಹೊಂದಿದ್ದರು. ಆದರೆ ಕಾಂಗ್ರೆಸ್ ಬಹುಮತವಿದ್ದ ಜಿ.ಪಂ.ಯಲ್ಲಿ ವಿಶ್ವನಾಥರಡ್ಡಿ ಹೊಸಮನಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ವಿಶ್ವನಾಥರಡ್ಡಿ ಅವರ ಅಧಿಕಾರದ ಅವಧಿ ಮುಗಿದರೂ ಕೂಡ ಅಧಿಕಾರ ಬಿಟ್ಟು ಕೊಡದೇ ಇದ್ದುದರಿಂದ ಬಿಜೆಪಿಯ ೮ ಜನ ಸದಸ್ಯರ ಬೆಂಬಲದೊಂದಿಗೆ ಕಾಂಗ್ರೆಸ್ನವರು ವಿಶ್ವನಾಥರಡ್ಡಿಯನ್ನು ಅವಿಶ್ವಾಸ ಮಾಡಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು.
ಆದರೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಬಹುಮತ ವಿದ್ದರೂ ಕೂಡ ರಾಜಶೇಖರ ಹಿಟ್ನಾಳ ಅವರು ಕಾಂಗ್ರೆಸ್ನ ೧೭ ಸದಸ್ಯರಲ್ಲಿ ೧೬ ಜನ ಸದಸ್ಯರು ಹಾಗೂ ಬಿಜೆಪಿಯ ೬ಜನ ಹಾಗೂ ಓರ್ವ ಪಕ್ಷೇತರ ಬೆಂಬಲದೊಂದಿಗೆ ೨೩ ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ವಿಶ್ವನಾಥರಡ್ಡಿ ಹೊಸಮನಿ ಗೈರು ಆಗಿದ್ದರು.
ಆದರೆ ಬಿಜೆಪಿ ೧೧ ಜನ ಸದಸ್ಯರಿದ್ದರೂ ಕೂಡ ೬ ಜ£ ಸದಸ್ಯರು ಕಾಂಗ್ರೆಸ್ನ ರಾಜಶೇಖರ ಪರ ಮತ ಹಾಕಿದ್ದರಿಂದ ಬಿಜೆಪಿಯ ಗಂಗಮ್ಮ ಈಶಣ್ಣ ಗುಳಗಣ್ಣವರ ೫ ಮತಗಳನ್ನು ಪಡೆದುಕೊಂಡು ಪರಾಭವಗೊಂಡರು.
ವಿಜಯೋತ್ಸವ:
ಜಿ.ಪಂ.ಅಧ್ಯಕ್ಷರಾಗಿ ಕೆ. ರಾಜಶೇಖರ ಹಿಟ್ನಾಳ ಅವರು ಆಯ್ಕೆಯಾಗುತ್ತಿದ್ದಂತೆ ಕಾರ್ಯಕರ್ತರಿಂದ ಬಾರಿ ವಿಜಯೋತ್ಸವ ಆಚರಿಸಿದರು.
ಜಿಲ್ಲಾಡಳಿತ ಎದುರಿಗೆ ರಸ್ತೆಯಲ್ಲಿ ಕೊರೋನಾ ಸೊಂಕು ಭಯವಿಲ್ಲದೆ ವಿವಿಧ ಗ್ರಾಮಗಳಿಂದ ಆಗಮಿಸಿ ಜಮಾಯಿಸಿದ್ದ ಸಾವಿರಾರು ಕಾರ್ಯಕರ್ತರು ವಿವಿಧ ವಾಧ್ಯಮೇಳಗಳ ಸದ್ದುನೊಂದಿಗೆ ಪಟಾಕಿ ಸಿಡಿಸಿ ಪಕ್ಷದ ಧ್ವಜವನ್ನು ಹಿಡಿದುಕೊಂಡು ವಿಜಯೋತ್ಸವ ಆಚರಿಸಿದರು.
ದುಷ್ಕರ್ಮಿಗಳಿಂದ ದಂಪತಿ ಮೇಲೆ ಹಲ್ಲೆ; ಪತ್ನಿ ಸ್ಥಳದಲ್ಲೇ ಸಾವು ಪತಿ ಸ್ಥತಿ ಗಂಭೀರ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ದಂಪತಿ ಮೇಲೆ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿದ್ದು, ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಪತಿ ಗಂಭೀರ ಗಾಯವಾಗಿ ಸ್ಥಿತಿ ಚಿಂತಾಜನಕವಾಗಿದ್ದು, ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೂಲತಃ ಜಮಖಂಡಿಯ ಖಾಸಗಿ ಬ್ಯಾಂಕ್ ಉದ್ಯೋಗಿ ತ್ರಿವೇಣಿ(28) ಮೃತ ಮಹಿಳೆ. ಐಡಿಎಫ್ ಸಿ ಬ್ಯಾಂಕ್ ಕಾರಟಗಿ ಶಾಖೆಯ ಉದ್ಯೋಗಿ ಯಲಬುರ್ಗಾ ತಾಲೂಕು ಮುಧೋಳ ಗ್ರಾಮದ ವಿನೋದ(35) ಗಂಭೀರವಾಗಿ ಗಾಯಗೊಂಡಿದ್ದಾನೆ.
ಈ ಮೊದಲು ಯಲಬುರ್ಗಾ ತಾಲೂಕು ಮುಧೋಳ ಗ್ರಾಮದಲ್ಲಿನ ಸಹಕಾರಿ ಬ್ಯಾಂಕ್ ವೊಂದರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ತ್ರಿವೇಣಿ ಮತ್ತು ವಿನೋದ ಪ್ರೀತಿಸಿ ಮದುವೆಯಾಗಿದ್ದರು. ಮದುವೆ ನಂತರ ಮೃತ ತ್ರಿವೇಣಿ ಬಳ್ಳಾರಿ ಜಿಲ್ಲೆ ಸಿರುಗುಪ್ಪ ಶಾಖೆಗೆ ವರ್ಗಾವಣೆ ತೆಗೆದುಕೊಂಡಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಮರ್ಯಾದೆ ಹತ್ಯೆ: ದುಷ್ಕರ್ಮಿಗಳು ಇವರ ಮನೆ ಹತ್ತಿರವೇ ಬಂದು ಹಲ್ಲೆ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರಿಗೆ ದೊರೆತ ಫುಟೇಜ್ ನಲ್ಲಿ ಆರೋಪಿಗಳ ಚಹರೆ ಸ್ಪಷ್ಟವಾಗಿ ಕಾಣುತ್ತಿಲ್ಲ ಎನ್ನಲಾಗಿದೆ. ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದು, ಮಹಿಳೆಯ ಕುಟುಂಬದವರಿಗೆ ಈ ಮದುವೆಗೆ ವಿರೋಧವಿತ್ತು. ಈ ಹಿನ್ನೆಲೆಯಲ್ಲಿ ಇದು ಮರ್ಯಾದೆ ಹತ್ಯೆ ಇರಬಹುದು ಎನ್ನಲಾಗಿದೆ.
ಸ್ಥಳಕ್ಕೆ ಎಸ್ಪಿ ಟಿ.ಶ್ರೀಧರ, ಗಂಗಾವತಿ ಡಿವೈಎಸ್ಪಿ ಆರ್.ಎಸ್. ಉಜ್ಜಿನಕೊಪ್ಪ, ಗಂಗಾವತಿ ಗ್ರಾಮೀಣ ಸಿಪಿಐ ಉದಯರವಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಜನನ-ಮರಣ ಪ್ರಮಾಣ ಪತ್ರದಲ್ಲಿ ಸರಿಯಾದ ಮಾಹಿತಿ ನಮೂದಿಸಿ: ಸಿದ್ರಾಮೇಶ್ವರ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಜನನ ಮತ್ತು ಮರಣ ಪ್ರಮಾಣ ಪತ್ರದಲ್ಲಿ ಹೆಸರು, ಲಿಂಗ, ದಿನಾಂಕ, ಸ್ಥಳ ತಪ್ಪಾಗಿ ನಮೂದಾಗದಂತೆ ಎಚ್ಚರ ವಹಿಸಿ ಸರಿಯಾದ ಮಾಹಿತಿಯನ್ನು ನಮೂದಿಸಿ, ಕಾನೂನು ರೀತಿಯಲ್ಲಿ ಪ್ರಮಾಣ ಪತ್ರ ನೀಡಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ ಹೇಳಿದರು.
ಶನಿವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆದ ನಾಗರಿಕ ನೋಂದಣಿ ಪದ್ಧತಿ ನಿಯಮಗಳು ಹಾಗೂ ಇ-ಜನ್ಮ ತಂತ್ರಾಂಶದ ನಿರ್ವಹಣೆ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಿರುವಾಗ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ಮತ್ತು ಮರಣ ಹೊಂದಿದ ಅನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತವಾದ ದಾಖಲೆಗಳಾಗಿದ್ದು, ಈ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ವ್ಯಕ್ತಿಯ ನಿಖರ ಮಾಹಿತಿಯನ್ನು ಸಂಬಂಧಪಟ್ಟವರಿಂದ ಪಡೆದು ಪರಿಶೀಲಿಸಿ, ನಮೂನೆಯಲ್ಲಿ ಭರ್ತಿ ಮಾಡಿ ಆನ್ಲೈನ್ನಲ್ಲಿ ದಾಖಲಿಸಿ, ನಮೂನೆ ಅಂಗೀಕಾರಗೊಂಡ ಅನಂತರ ಪ್ರಮಾಣ ಪತ್ರ ನೀಡಬೇಕು ಎಂದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಕೃಷ್ಣಮೂರ್ತಿ ದೇಸಾಯಿ ಮಾತನಾಡಿ, ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಅಗತ್ಯದ ಬಗ್ಗೆ ಅರಿವು ಮೂಡಿಸಬೇಕು. ಆರೋಗ್ಯ ಕಾರ್ಡ್ ಮತ್ತು ತಾಯಿ ಕಾರ್ಡ್ನಲ್ಲಿ ಸಂಭಾವ್ಯ ಹೆರಿಗೆ ವಾರಗಳನ್ನು ನೀಡಲಾಗಿದ್ದು, ಇದು ಉಪಯುಕ್ತ ದಾಖಲಾತಿಯಾಗಿದೆ. ಹೆರಿಗೆಯ ಬಳಿಕ ಮಗುವಿನ ಜನನ ನೋಂದಣಿಯನ್ನು ಕಡ್ಡಾಯವಾಗಿ ಕನ್ನಡದಲ್ಲಿ ಮಾಡಬೇಕು. ಇದರ ಪ್ರತಿಯೊಂದು ಮಾಹಿತಿ ನೀಡುವ ಮಾಹಿತಿದಾರರ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು. ನಿರ್ಜೀವ ಜನನವಾದಲ್ಲಿ ನಮೂನೆ-4ರಲ್ಲಿ ಭರ್ತಿ ಮಾಡಿ, ಆನ್ಲೈನ್ನಲ್ಲಿ ನಮೂದಿಸಬೇಕು ಎಂದು ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಕುಗಿ ತಾಲ್ಲೂಕು ವೈದ್ಯಾಧಿಕಾರಿ ಶರಣಬಸಪ್ಪ, ಕುಷ್ಟಗಿ, ಯಲಬುರ್ಗಾ ತಾಲ್ಲೂಕಿನ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಪಟ್ಟಣ ಪಂಚಾಯತ್, ಪುರಸಭೆ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಕೋವಿಡ್ ಜಾಗೃತಿ ಜನಾಂದೋಲನ ಜಾಥಾಕ್ಕೆ ನ್ಯಾ. ರೇಖಾ ಚಾಲನೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕೋವಿಡ್-19 ಹರಡುವಿಕೆ ತಡೆಗಟ್ಟುವುದಕ್ಕಾಗಿ ಜಾಗೃತಿ ಮೂಡಿಸಲು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅ. 17ರಂದು ಹಮ್ಮಿಕೊಳ್ಳಲಾದ ‘ಕೋವಿಡ್-19 ಪ್ರಚಾರಾಂದೋಲನ’ ‘ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ’ ಜನಾಂದೋಲನ ಜಾಥಾಕ್ಕೆ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಅಧ್ಯಕ್ಷೆ ಬಿ.ಎಸ್. ರೇಖಾ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಹಾಗೂ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು.
ಆರೋಗ್ಯ ರಕ್ಷಣೆ ಮಾಡಿಕೊಳ್ಳಿ: ಜಾಥಾಕ್ಕೆ ಚಾಲನೆ ನೀಡಿ, ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ನ್ಯಾ.ಬಿ.ಎಸ್. ರೇಖಾ, ಕೋವಿಡ್-೧೯ ಹರಡುವಿಕೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ನ್ಯಾಯಾಲಯ, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಮುಖಗವಸು (ಮಾಸ್ಕ್) ಹಾಕಿಕೊಳ್ಳದಿದ್ದರೆ ತಿಳಿಹೇಳಿ, ಜಾಗೃತಿ ಮೂಡಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ‘ಕೋವಿಡ್-19 ಪ್ರಚಾರಾಂದೋಲನ’ ‘ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ’ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗವು ಶ್ರೀಮಂತ, ಬಡವ ಎಂಬ ಭೇದವಿಲ್ಲದೆ ಎಲ್ಲರನ್ನೂ ಕಾಡುತ್ತಿದೆ. ಔ?ಧ ಲಭ್ಯವಾಗುವ ತನಕ ಜಾಗ್ರತೆಯಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡಿ, ರೋಗದ ವಿರುದ್ಧ ಹೋರಾಡಬೇಕು ಎಂದರು.
ತ್ವರಿತಗತಿ ವಿಶೇ? ನ್ಯಾಯಾಲಯ-೧ (ಪೋಕ್ಸೋ ನ್ಯಾಯಾಲಯ)ದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಸ್.ಎಂ. ಜಾಲವಾದಿ, ಹಿರಿಯ ಸಿವಿಲ್ ನ್ಯಾಯಾಧೀಶರು (ಸಿಜೆಎಂ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಕುಮಾರ ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ (ಜೆ.ಎಂ.ಎಫ್.ಸಿ. ನ್ಯಾಯಾಲಯ) ಮನು ಶರ್ಮಾ, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನ ಉದಯ ಕುಲಕರ್ಣಿ, ವಕೀಲರು ಮತ್ತು ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ವತಿಯಿಂದ ಮಾಸ್ಕ್ ವಿತರಿಸಲಾಯಿತು.
ಹೆಬ್ಬಾಳ ಗ್ರಾಮದ ಜನತೆಗೆ ಮೂಲಸೌಕರ್ಯ ಒದಗಿಸಲು ಕರವೇ ಆಗ್ರಹ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಶಿರಹಟ್ಟಿ
ಶನಿವಾರ ತಾಲೂಕಾ ಕರವೇ ಘಟಕದ ವತಿಯಿಂದ ಹೆಬ್ಬಾಳ ಗ್ರಾಮದ ಸಾರ್ವಜನಿಕರಿಗೆ ಮೂಲಸೌಕರ್ಯಗಳನ್ನು ಪೂರೈಸಬೇಕೆಂದು ಗ್ರಾಪಂ ಪಿಡಿಓಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ತಾಲೂಕಾಧ್ಯಕ್ಷ ಬಸವರಾಜ ವಡವಿ, ಹೆಬ್ಬಾಳ ಗ್ರಾಮದಲ್ಲಿ ಅನೇಕ ರಸ್ತೆಗಳು ಹದಗೆಟ್ಟಿದ್ದು, ಇರುವ ಚರಂಡಿಗಳನ್ನು ಸ್ವಚ್ಛಗೊಳಿಸದೇ ಹಾಗೇ ಬಿಟ್ಟಿದ್ದಾರೆ. ಈಗಾಗಲೇ ನೀಡಿರುವ ಆಶ್ರಯ ಮನೆಗಳು ಹಕ್ಕಪತ್ತದಲ್ಲಿರುವ ಅಳತೆಗಳಂತೆ ಫಲಾನುಭವಿಗಳಿಗೆ ನೀಡಬೇಕು. ಆಶ್ರಯ ಪ್ಲಾಟ್ನಿಂದ ಹೋಗುವ ಚರಂಡಿಯ ನೀರು ಪಕ್ಕದಲ್ಲಿರುವ ಕೃಷಿ ಭೂಮಿಗೆ ಹೋಗುವುದರಿಂದ ಬೆಳೆ ಹಾಳಾಗಿ ರೈತರಿಗೆ ತೊಂದರೆಯಾಗುತ್ತಿದೆ.
ಎಲ್ಲಾ ವಾರ್ಡುಗಳಲ್ಲಿ ಕುಡಿಯುವ ನೀರಿನ ಪೈಪಲೈನ್ ದುರಸ್ತಿಯಾಗಬೇಕು. ಗ್ರಾಪಂ ಪಿಡಿಓ ವಾರದಲ್ಲಿ 3 ದಿನ ಮಾತ್ರ ಕರ್ತವ್ಯಕ್ಕೆ ಬರುತ್ತಿದ್ದು ಖಾಯಂ ಪಿಡಿಓ ನೇಮಕವಾಗಬೇಕು. ಈ ಎಲ್ಲ ಬೇಡಿಕೆಗಳು 7 ದಿನಗಳಲ್ಲಿ ಈಡೇರಬೇಕು ಇಲ್ಲದೇ ಇದ್ದಲ್ಲಿ ಕರವೇ ತಾಲೂಕಾ ಘಟಕದ ವತಿಯಿಂದ ತಾಲೂಕಾ ಪಂಚಾಯತ ಕಚೇರಿ ಮುಂದೆ ಹೋರಾಟ ಮಾಡಲಾಗುವುದೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಪದವೀಧರರ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ: ಸಂಕನೂರ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ
ಪದವೀಧರರು, ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಗುರಿಯೊಂದಿಗೆ ಪಶ್ಚಿಮ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಕ್ಷೇತ್ರ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಆಯೋಜಿಸುವ ಮೂಲಕ ನಿರುದ್ಯೋಗ ಸಮಸ್ಯೆಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುವೆ ಎಂದು ಪಶ್ಚಿಮ ಪದವೀಧರರ ಕ್ಷೇತ್ರ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹೇಳಿದರು.
ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮತ್ತು ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಮತಯಾಚನೆ ಮಾಡಿ ಅವರು ಮಾತನಾಡಿದರು.
ಕಳೆದ ಅವಧಿಯಲ್ಲಿ ಧಾರವಾಡದಲ್ಲಿ ಎರಡು, ಗದಗ, ಹಾವೇರಿ ಹಾಗೂ ಕಾರವಾರದಲ್ಲಿ ಒಟ್ಟು ೫ ಬಾರಿ ಉದ್ಯೋಗ ಮೇಳ ನಡೆಸಿದ್ದು,1,955 ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕಾಲ್ಪನಿಕ ವೇತನ ಸೌಲಭ್ಯ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿರುವೆ. 40 ವರ್ಷಗಳಿಂದ ಜನರ ಸಂಪರ್ಕದಲ್ಲಿದ್ದೇನೆ. ಈ ಕ್ಷೇತ್ರಕ್ಕೆ ನಾನು ಹೊಸಬನಲ್ಲ. ಶಿಕ್ಷಕರ, ಪದವೀಧರರ ಸಮಸ್ಯೆಗಳ ಕುರಿತು ಸದನದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಮತ್ತು ನಮ್ಮ ಬಿಜೆಪಿ ಸರ್ಕಾರ ಇದ್ದಾಗಲೂ ಸಾಕಷ್ಟು ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಿದ್ದೇನೆ.
ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಪ್ಯಾಕೇಜ್ ನೀಡುವಂತೆ ಆಗ್ರಹಿಸಿದ್ದೇನೆ. ಪಶ್ಚಿಮ ಪದವೀಧರರ ಮತಕ್ಷೇತ್ರ ಬಹಳ ದೊಡ್ಡದಾಗಿದ್ದು, ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪ್ರಚಾರ ಮಾಡಲು ಕಾಲಾವಕಾಶ ಸಾಲುತ್ತಿಲ್ಲ. ಈ ಚುನಾವಣೆಯ ಅಭ್ಯರ್ಥಿ ನಾನಲ್ಲ ನೀವು ಎಂದು ಭಾವಿಸುವ ಮೂಲಕ ಮತ್ತೊಮ್ಮೆ ತಮ್ಮ ಸೇವೆ ಮಾಡಲು ಆಶೀರ್ವಾದ ಮಾಡಬೇಕಿದೆ ಎಂದರು.
ರೋಣ ಬಿಜೆಪಿ ಮಂಡಲ ಅಧ್ಯಕ್ಷ ಮುತ್ತಣ್ಣ ಕಡಗದ, ಉಮೇಶ ಸಂಗನಾಳಮಠ, ಶಶಿಧರ ಸಂಕನಗೌಡ್ರ, ಆನಂದ ಕುಲಕರ್ಣಿ, ಬಸವರಾಜ ವಂಕಲಕುಂಟಿ, ನಿಂಗಪ್ಪ ಕಣವಿ, ಯಲ್ಲಪ್ಪ ಮಣ್ಣೊಡ್ಡರ, ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ, ಡಾ| ಜಿ.ಬಿ. ಹುಲ್ಲೂರ, ವೈ.ಸಿ. ಪಾಟೀಲ, ಎನ್.ಎಂ. ಪವಾಡಿಗೌಡ್ರ, ಜಿ.ಜಿ. ಕೋಟಿ, ಜಿ.ಎಸ್. ಮಠಪತಿ, ಪ.ಪಂ ಸದಸ್ಯರಾದ ಶ್ರೀಶೈಲಪ್ಪ ಬಂಡಿಹಾಳ, ಫಕೀರಪ್ಪ ಮಳ್ಳಿ, ಈರಪ್ಪ ಜೋಗಿ, ಕುಮಾರಸ್ವಾಮಿ ಕೋರಧ್ಯಾನಮಠ, ಮೌನೇಶ ಹೊಸಮನಿ, ಜ್ಯೋತಿ ಪಾಯಪ್ಪಗೌಡ್ರ, ಮಂಜುಳಾ ಹುರಳಿ ಸೇರಿದಂತೆ ಸಿಬ್ಬಂದಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.
ಹೊಲದಲ್ಲಿ ಬೆಳೆದಿದ್ದ ಹತ್ತಿ ಗಿಡ ಕೊಯ್ದು ಹಾನಿ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ
ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಬಸಪ್ಪ ಚಂದ್ರ ಅವರ ಜಮೀನಿನಲ್ಲಿ ಬೆಳೆದ ಹತ್ತಿಯಲ್ಲಿ ಒಂದು ಎಕರೆದಷ್ಟನ್ನು ದುಷ್ಕರ್ಮಿಗಳು ಕೊಯ್ದು ಹಾಕಿದ ಘಟನೆ ಅ. 16 ರ ಮಧ್ಯರಾತ್ರಿ ನಡೆದಿದೆ.
ಸಾಲ-ಸೋಲ ಮಾಡಿ ತಮ್ಮ ಹೊಲದಲ್ಲಿ ಹತ್ತಿ ಬೆಳೆದಿರುವ ಬಡ ರೈತ ಬಸಪ್ಪ ಚಂದ್ರ ಅವರು ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದಾರೆ, ಈ ಬಾರಿ ಅವರ ಸಹೋದರ ಭಗವಂತ ಚಂದ್ರ ಅವರ ಒಂದು ಎಕರೆ ಜಮೀನು ಲಾವಣಿ ಪಡೆದು ಅದನ್ನು ಉಳುಮೆ ಮಾಡಿ ಹತ್ತಿ ಬಿತ್ತಿದ್ದರು. ಒಟ್ಟು 2.10 ಎಕರೆಯಲ್ಲಿ ಸುಮಾರು ಒಂದು ಎಕರೆಯಷ್ಟು ಹತ್ತಿ ಬೆಳೆಯನ್ನು ಗಿಡಗಳ ಸಮೇತ ದುಷ್ಕರ್ಮಿಗಳು ಕೊಯ್ದು ಹಾಕಿದ್ದಾರೆ.
ಹಿರೇಕೊಪ್ಪ ಕ್ಷೇತ್ರದ ತಾಪಂ. ಸದಸ್ಯ ಗಿರೀಶ ನೀಲರಡ್ಡಿ, ಕನ್ನಡ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ವಿಜಯ ಕೋತಿನ ಹಾಗೂ ಗ್ರಾಮಸ್ಥರಾದ ರಾಮಣ್ಣ ಕಮಕೇರಿ, ಕೃಷ್ಟಪ್ಪ ಸತರಡ್ಡಿ, ಗೋಪಾಲ ಸತರಡ್ಡಿ, ನಾರಾಯಣ ಬಾಲರಡ್ಡಿ ಜಮೀನಿಗೆ ತೆರಳಿ, ಹಾಳಾದ ಹತ್ತಿ ಬೆಳೆ ಪರಿಶೀಲಿಸಿದರು. ಸ್ಥಳೀಯ ಪೊಲೀಸ್ ಠಾಣೆಗೆ ಬಸಪ್ಪ ಚಂದ್ರ ದೂರು ದಾಖಲಿಸಿದ್ದಾರೆ. ಸಿಪಿಐ ಡಿ.ಬಿ. ಪಾಟೀಲ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಹೊಲದಲ್ಲೇ ಕೊಳೆಯುತ್ತಿದೆ ಶೇಂಗಾ ಬೆಳೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಮಳೆಯಾದರೆ ಕೇಡಲ್ಲ, ಮನೆ ಮಗ ಉಂಡರೆ ಕೇಡಲ್ಲ ಎನ್ನುವ ಗಾದೆ ಮಾತು ಈ ಬಾರಿ ರೈತರ ಪಾಲಿಗೆ ಸುಳ್ಳಾಗುವಂತೆ ಕಾಣುತ್ತಿದೆ. ಏಕೆಂದರೆ, ಅತಿಯಾದ ಮಳೆಯಿಂದ ಮುದ್ರಣ ಕಾಶಿ ಗದಗ ಜಿಲ್ಲೆಯ ಅನ್ನದಾತರು ಸಂಕ?ಕ್ಕೆ ಈಡಾಗಿದ್ದಾರೆ. ಫಸಲು ಕೈ ಸೇರುವ ಸಮಯದಲ್ಲಿ ಅತಿಯಾದ ಮಳೆಯಿಂದ ಬೆಳೆ ಜಮೀನಿನಲ್ಲಿ ಕೊಳೆಯುವಂತಾಗಿದೆ.
ಮುದ್ರಣ ಕಾಶಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ಉಂಟಾಗಿದೆ. ಫಸಲು ಪಡೆಯುವ ವೇಳೆಯಲ್ಲಿ ಅತಿಯಾದ ಮಳೆ ಸುರಿದಿದ್ದರಿಂದ ಬೆಳೆದು ನಿಂತಿರುವ ಹಾಗೂ ಕಿತ್ತು ಹಾಕಿರುವ ಶೇಂಗಾ ಜಮೀನಿನಲ್ಲಿ ಕೊಳೆಯುತ್ತಿದೆ. ತಮಗೆ ಸೂಕ್ತ ಪರಿಹಾರ ನೀಡುವಂತೆ ಅನ್ನದಾತರು ಒತ್ತಾಯ ಮಾಡುತ್ತಿದ್ದಾರೆ.
ಹೌದು. ಗದಗ ಜಿಲ್ಲೆಯ ಅನ್ನದಾತರು ತತ್ತರಿಸಿ ಹೋಗಿದ್ದಾರೆ. ಅತಿಯಾದ ಮಳೆಯಿಂದ ಬೆಳೆದ ಬೆಳೆ ಜಮೀನಿನಲ್ಲಿ ಕೊಳೆಯುವಂತಾಗಿದೆ.
ಸರ್ಕಾರ ನೆರವಿಗೆ ಬರಲಿ
ಈ ಬಾರಿ ಸಕಾಲಕ್ಕೆ ಉತ್ತಮ ಮಳೆಯಾಗಿದ್ದು, ಬೆಳೆಗಳು ಸಮೃದ್ಧವಾಗಿ ಬೆಳೆದಿದ್ದವು. ಇನ್ನೇನು ಫಸಲು ಕೈ ಸೇರುವ ಸಮಯದಲ್ಲಿ ವರುಣನ ಆರ್ಭಟಕ್ಕೆ ಬೆಳೆದ ಬೆಳೆ ಜಮೀನಿನಲ್ಲಿ ಕೊಳೆಯುವಂತಾಗಿದೆ. ಬೆಳೆ ನಾಶವಾಗಿದ್ದು, ಸರ್ಕಾರ ನಮ್ಮ ನೆರವಿಗೆ ಬರಲಿ ಎಂದು ಬೆಳೆ ಹಾನಿ ಅನುಭವಿಸಿದ ರೈತ ರುದ್ರಗೌಡ ಪಾಟೀಲ ಆಗ್ರಹಿಸಿದ್ದಾರೆ.
ಅಂದ ಹಾಗೆ ಗದಗ ಜಿಲ್ಲೆಯ ಮುಳಗುಂದ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಮುಂತಾದ ಭಾಗಗಳ ರೈತರು ಬೆಳೆದ ಶೇಂಗಾ ನಾಶವಾಗಿದೆ. ಫಸಲು ಕೊಡುವ ಸಮಯವಾದ್ದರಿಂದ ರೈತರು ಶೇಂಗಾ ಕಟಾವು ಮಾಡಿ ರಾಶಿ ಮಾಡಿ, ಮಾರಾಟ ಮಾಡುವ ಸಿದ್ಧತೆಯಲ್ಲಿದ್ದರು. ಆದರೆ, ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರೈತರು, ರೈತ ಕಾರ್ಮಿಕರು ಜಮೀನುಗಳಿಗೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶೇಂಗಾ ಬೆಳೆ ಜಮೀನಿನಲ್ಲಿ ಕೊಳೆಯುತ್ತಿದೆ. ಅತಿಯಾದ ಮಳೆಯಿಂದ ಇನ್ನುಳಿದ ಶೇಂಗಾ ಕಟಾವು ಮಾಡದ ಸ್ಥಿತಿ ನಿರ್ಮಾಣವಾಗಿದೆ. ಒಂದು ಎಕರೆ ಶೇಂಗಾಕ್ಕೆ 15ರಿಂದ 20 ಸಾವಿರ ರೂಪಾಯಿ ಖರ್ಚು ಮಾಡಿದರೂ ಬೆಳೆದ ಬೆಳೆ ರೈತರ ಕೈಗೆ ಬರುತ್ತಿಲ್ಲ. ಹೀಗಾಗಿ ಅತಿವೃಷ್ಟಿ ಪರಿಹಾರ ನೀಡಬೇಕೆಂದು ರೈತರು ಒತ್ತಾಯ ಮಾಡುತ್ತಿದ್ದಾರೆ.

ಬೆಂಬಲ ಬೆಲೆ, ವಿಮೆ ಕೊಡಿಸಲಿ: ಈ ಭಾಗದ ಹೆಸರು ಬೆಳೆ ಭಾಗಶಃ ಭೂತಾಯಿಯ ಮಡಿಲು ಸೇರಿ, ರೈತರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದರು. ಶೇಂಗಾ ಬೆಳೆ ಸಮೃದ್ಧವಾಗಿ ಬೆಳದಿದ್ದು, ಆರ್ಥಿಕವಾಗಿ ಲಾಭ ಆಗುತ್ತದೆ ಎನ್ನುವ ಲೆಕ್ಕಾಚಾರದಲ್ಲಿರುವಾಗ ಸತತ ಮಳೆಯಾಗಿದ್ದರಿಂದ ಶೇಂಗಾ ಬೆಳೆ ಜಮೀನಿನಲ್ಲಿ ಕೊಳೆಯುತ್ತಿದೆ. ಇನ್ನು ಹತ್ತಿ, ಮೆಣಸಿನಕಾಯಿ, ಗೋವಿನ ಜೋಳ, ಈರುಳ್ಳಿ ಬೆಳೆ ಸಹ ಅತಿಯಾದ ಮಳೆಯಿಂದ ಹಳದಿ ರೋಗಕ್ಕೆ ತುತ್ತಾಗಿವೆ. ಈಗ ಶೇಂಗಾ ಕಟಾವು ಮಾಡುವ ಸಮಯ. ಆದರೆ, ನಿರಂತರ ಮಳೆಯಿಂದ ಶೇಂಗಾ ನಾಶವಾಗಿದೆ. ಅಳಿದುಳಿದ ಶೇಂಗಾವನ್ನು ರಾಶಿ ಮಾಡಬೇಕು ಅಂದರೆ ಶೇಂಗಾ ಜೊತೆಗೆ ಮಣ್ಣು ಬರುತ್ತಿದೆ. ಹೀಗಾಗಿ ರೈತರು ಶೇಂಗಾ ಬೆಳೆಯ ರಾಶಿಯನ್ನು ಮಾಡಲು ಪರದಾಡುತ್ತಿದ್ದಾರೆ. ಸಾಲ ಸೋಲ ಮಾಡಿ ಬೆಳೆದ ಬೆಳೆ ಮಣ್ಣಲ್ಲಿ ಮಣ್ಣಾಗುತ್ತಿದೆ. ಶೇಂಗಾ ಬೆಳೆ ವಿಮೆ ಮಾಡಿಸಲಾಗಿದ್ದು, ಸರ್ಕಾರ ನಮಗೆ ವಿಮೆ ಹಾಗೂ ಶೇಂಗಾ ಬೆಳೆಗೆ ಬೆಂಬಲ ಬೆಲೆ ನೀಡಿ ಖರೀದಿ ಮಾಡಬೇಕು ಎಂದು ಬೆಳೆ ಹಾನಿಯಾದ ರೈತ ಚಂದ್ರಶೇಖರಗೌಡ ಆಗ್ರಹಿಸಿದ್ದಾರೆ.
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ: ಸಲಗರೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಜಿಲ್ಲಾ ಸಮೀಕ್ಷಾ ಘಟಕದ ಕಚೇರಿ ಆವರಣದಲ್ಲಿ ನಡೆದ ಸಾರ್ವಜನಿಕರ ಮೇಲೆ ತಂಬಾಕು ಪದಾರ್ಥಗಳ ದು?ರಿಣಾಮಗಳ ಕುರಿತ ಬೀದಿ ನಾಟಕ ಜನಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜೆ. ಸಲಗರೆ ಉದ್ಘಾಟಿಸಿ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಿದರು..
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಬಸರೀಗಿಡದ ಮಾತನಾಡಿ, ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣದ ಕುರಿತು ಬೀದಿ ನಾಟಕಗಳ ಮೂಲಕ ಜನ ಜಾಗೃತಿ ಮೂಡಿಸಲಾಗುತ್ತಿದೆ. ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಸೂಲಿ ಮಾಡಲಾಗುತ್ತಿದೆ ಎಂದರು.
ಅಡವಿಸೋಮಾಪುರದ ಸಿದ್ಧಲಿಂಗೇಶ್ವರ ಜಾನಪದ ಕಲಾ ತಂಡದವರು ಬೀದಿ ನಾಟಕ ಪ್ರಸ್ತುತ ಪಡಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಜಗದೀಶ ನುಚ್ಚಿನ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚವ್ಹಾಣ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು. ಎಸ್.ಎಸ್. ಪೀರಾ ಕಾರ್ಯಕ್ರಮ ನಿರೂಪಿಸಿದರು. ಬಸಮ್ಮ ಚಿತ್ತರಗಿ ವಂದಿಸಿದರು.

