Home Blog Page 3107

ಹರಿಹರದಲ್ಲಿ ಕುಸ್ತಿ ಹಣಾಹಣಿ; ಗದಗ ಕುಸ್ತಿ ಕ್ಷೇತ್ರಕ್ಕೆ ಮತ್ತೊಂದು ಗರಿಮೆ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹಾವಳಿಯಿಂದಾಗಿ ಸ್ತಬ್ಧವಾಗಿದ್ದ ಕ್ರೀಡಾ ಚಟುವಟಿಕೆಗಳು ಎಂಟು ತಿಂಗಳ ಬಳಿಕ ಚುರುಕುಗೊಂಡಿದ್ದು, ಇದರಿಂದ ಮತ್ತೆ ಕುಸ್ತಿಯ ಸದ್ದು ಕೇಳ ತೊಡಗಿದಂತಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕ ರಾಜ್ಯ ಕುಸ್ತಿ ಅಸೋಶಿಯೆಶನ್ ಹಾಗೂ ನಾಡಮಂದ್ ಸಾವಲಿ ಗರಡಿ ಮನೆ ಸಹಯೋಗದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲಿ ಗದಗನ ಅಂತರಾಷ್ಟ್ರೀಯ ಕುಸ್ತಿಪಟು ಕುಮಾರಿ ಪ್ರೇಮಾ ಹುಚ್ಚಣ್ಣವರ ಬಂಗಾರದ ಪದಕ ಪಡೆದಿದ್ದಾರೆ.

ಕರ್ನಾಟಕ ಕಂಠೀರವ, ಕರ್ನಾಕ ಕೇಸರಿ, ಕರ್ನಾಟಕ ಕುಮಾರ, ಕರ್ನಾಟಕ ಕಿಶೋರ, ಒನಕೆ ಓಬವ್ವ, ವೀರರಾಣಿ ಕಿತ್ತೂರ ಚೆನ್ನಮ್ಮ ವಿಭಾಗದ ಹಿರಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಕುಮಾರಿ ಪ್ರೇಮಾ ಹುಚ್ಚಣ್ಣವರ ಬಂಗಾರದ ಪದಕದೊಂದಿಗೆ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆಯುವ ಮೂಲಕ ಗದಗ ಕುಸ್ತಿ ಕ್ಷೇತ್ರಕ್ಕೆ ಮತ್ತೊಂದು ಗರಿಮೆ ಸಿಕ್ಕಂತಾಗಿದೆ. ಕುಸ್ತಿ ತರಬೇತುದಾರ ಶರಣಗೌಡ ಬೇಲೇರಿ ಇದ್ದರು.

ಭಾರತ್ ಬಂದ್; ಬಣಗುಡುತ್ತಿರುವ ಎಪಿಎಂಸಿ

0

ವಿಜಯಸಾಕ್ಷಿ ಸುದ್ದಿ, ಗದಗ

ದೇಶದ ವಿವಿಧ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿರುವ ಹಿನ್ನಲೆ ಗದಗನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ, ವ್ಯಾಪಾರ ವಹಿವಾಟು ಬಂದ್ ಮಾಡಿದೆ.

ನಗರದ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳ ಎಪಿಎಂಸಿಯಲ್ಲಿ ವ್ಯಾಪಾರ, ವಹಿವಾಟು, ಸಂತೆ, ಖರೀದಿ ಮಾರುಕಟ್ಟೆ ಎಲ್ಲವನ್ನೂ ಬಂದ್ ಮಾಡುವ ಮೂಲಕ ಬೆಂಬಲ ಸೂಚಿಸಿದೆ.

ಎಪಿಎಂಸಿಯ ಹಮಾಲರು, ದಲ್ಲಾಳಿ ವರ್ತಕರು, ಖರೀದಿ ವರ್ತಕರು, ಕಾರ್ಮಿಕರು ಬಂದ್ ಆಚರಿಸುತ್ತಿದ್ದು, ಬಂದ್ ನಿಂದಾಗಿ ಎಪಿಎಂಸಿ ಆವರಣ ಬಣಗುಡುತ್ತಿದೆ.

ಭಾರತ್ ಬಂದ್: ಗದಗನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್  ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಗರದ ವಿವಿಧೆಡೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ನಗರದ ಗಾಂಧಿ ವೃತ್ತ, ಮುಳಗುಂದ ನಾಕಾ, ಚೆನ್ನಮ್ಮ ವೃತ್ತದಲ್ಲಿ ಸೂಕ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಭಾರತ್ ಬಂದ್ ಗೆ ಜಿಲ್ಲೆಯಲ್ಲಿ ಹಲವು ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಎಂಟು ಗಂಟೆಯವರೆಗೂ ನಗರದಲ್ಲಿ ಬಂದ್ ವಾತಾವರಣ ಕಂಡು ಬರುತ್ತಿಲ್ಲ. ಎಂದಿನಂತೆ ವಾಹನ ಸಂಚಾರ ಇದೆ.

ಗ್ರಾ.ಪಂ. ಚುನಾವಣೆ: ಮೊದಲ ದಿನ ಐವರಿಂದ ನಾಮಪತ್ರ ಸಲ್ಲಿಕೆ

ವಿಜಯಸಾಕ್ಷಿ ಸುದ್ದಿ, ಗದಗ

ಜಿಲ್ಲೆಯ ಮೊದಲ ಹಂತದ 53 ಗ್ರಾಮ ಪಂಚಾಯತಿಗಳ 801 ಸ್ಥಾನಗಳ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಉಮೇದುವಾರಿಕೆ ಸಲ್ಲಿಕೆಯ ಮೊದಲ ದಿನವಾದ ಸೋಮವಾರದಂದು 5 ನಾಮಪತ್ರಗಳು ಸಲ್ಲಿಕೆಯಾಗಿವೆ.

ಗದಗ ತಾಲ್ಲೂಕಿನಲ್ಲಿ 04 ಮತ್ತು ಶಿರಹಟ್ಟಿ ತಾಲ್ಲೂಕಿನಲ್ಲಿ 01 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿಗಳ ಚುನಾವಣಾ ವಿಭಾಗ ತಿಳಿಸಿದೆ.

ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ; ಎಸ್ಪಿ ಯತೀಶ್

0

ವಿಜಯಸಾಕ್ಷಿ ಸುದ್ದಿ, ಗದಗ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿಂದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದರು.

ಜಿಲ್ಲೆಯಲ್ಲಿ ಜನಜೀವನ ಯಥಾವತ್ತಾಗಿರುತ್ತದೆ. ಪ್ರತಿಭಟನೆಯ ವೇಳೆ ಯಾರೂ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಬಾರದು. ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡೆತಡೆಯನ್ನುಂಟು ಮಾಡಬಾರದು. ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸುವುದಿದ್ದರೆ ಸಲ್ಲಿಸಬಹುದು ಎಂದು ಎಸ್ಪಿ ಯತೀಶ್ ಎನ್. ಹೇಳಿದರು.

ಬೇಡಿಕೆ ಈಡೇರಿಸುವಂತೆ ರೈತಸೇನೆ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಗದಗ

ದೆಹಲಿಯಲ್ಲಿ ರೈತರ ಹೋರಾಟ ಕ್ಷಣಕ್ಷಣಕ್ಕೂ ಕಾವು ಪಡೆದುಕೊಳ್ಳುತ್ತಿದ್ದಂತೆ ಜಿಲ್ಲೆಯಲ್ಲೂ ಅನ್ನದಾತರ ಹೋರಾಟದ ಕಿಚ್ಚು ಜೋರಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರೈತಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ನೂರಾರು ರೈತರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಲುವುಗಳನ್ನು ಖಂಡಿಸಿ ಜಿಲ್ಲಾಡಳಿತ ಭವನದ ಎದುರು ಹೋರಾಟ ನಡೆಸಿದರು.

ರೈತ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು, ಶಾಶ್ವತ ಖರೀದಿ ಕೇಂದ್ರ ತೆರೆಯಬೇಕು, ಕೇಂದ್ರದ ಕೃಷಿನೀತಿ ಕೈಬಿಡಬೇಕು ಎಂದು ಹೀಗೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ರೈತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಒಲೆ ಹೂಡಿ ಅಡುಗೆ ಮಾಡಿ ಉಪಹಾರ ತಯಾರಿಸುವ ಮೂಲಕ ಧರಣಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಗೆ ಶಾಶ್ವತವಾಗಿ ಖರೀದಿ ಕೇಂದ್ರ ಸ್ಥಾಪಿಸಬೇಕು. ಎರಡು ತಿಂಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಇನ್ನೂವರೆಗೂ ಖರೀದಿ ಕೇಂದ್ರ ತೆರೆದಿಲ್ಲ. ಕೂಡಲೇ ನರಗುಂದದಲ್ಲಿ ಗೋವಿನಜೋಳ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ರೈತಸೇನಾ ರಾಜ್ಯಾಧ್ಯಕ್ಷ ವಿರೇಶ್ ಸೊಬರದಮಠ ಆಗ್ರಹಸಿದರು.

ಭಾರತ್ ಬಂದ್‌ಗೆ ರೈತಸೇನೆ ಬೆಂಬಲ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡುವಂತೆ ಕರೆ ನೀಡಿರುವ ಭಾರತ್ ಬಂದ್‌ಗೆ ಕರ್ನಾಟಕ ರೈತಸೇನೆ ಬೆಂಬಲ ನೀಡಲಿದೆ. ರಾಜ್ಯದ ನಾಲ್ಕು ಜಿಲ್ಲಾ ೧೧ ತಾಲ್ಲೂಕು ಕೇಂದ್ರಗಳಲ್ಲಿ ಬೆಂಬಲಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಜಿಲ್ಲಾಧಿಕಾರಿ ಭರವಸೆ

ಗೋವಿನಜೋಳ ಖರೀದಿ ಕೇಂದ್ರ ಹಾಗೂ ಖರೀದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ಶೀಘ್ರದಲ್ಲೇ ನರಗುಂದದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಸೊಬರದಮಠ ತಿಳಿಸಿದರು.

ರೈತರ ಹೋರಾಟಕ್ಕೆ ಎಸ್‌ಯುಸಿಐ ಬೆಂಬಲ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನುಬೆಂಬಲಿಸಿ ಕೊಪ್ಪಳದ ಕೇಂದ್ರ ಬಸ್ ನಿಲ್ದಾಣದ ಎದುರುಗಡೆ ಗಡಿಯಾರಕಂಬ, ಎಪಿಎಂಸಿ, ಮಾರ್ಕೆಟ್, ಲೇಬರ್ ಸರ್ಕಲ್, ಮುಂತಾದ ಕಡೆ ರೈತ ವಿರೋಧಿ ಕಾನೂನುಗಳು ಇತ್ಯಾದಿ ಕುರಿತು ರೈತರ ಜನೈಕ್ಯ ಹೋರಾಟಕ್ಕೆ ಸಜ್ಜುಗೊಳಿಸುವಂತ ಸಾರ್ವಜನಿಕ ಸಭೆ ಮಾಡಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸದಸ್ಯರಾದ ಶರಣು ಪಾಟೀಲ್ ನವೆಂಬರ್ ೨೬ರರಿಂದ ಕೇಂದ್ರ ಸರ್ಕಾರವು ಕೃಷಿ ಕಾನೂನುಗಳಿಗೆ ತಂದಿರುವ ಕೃಷಿ-ವಿರೋಧಿ ಮತ್ತು ಜನ ವಿರೋಧಿ ತಿದ್ದುಪಡಿಗಳನ್ನು ಹಿಮ್ಮೆಟ್ಟಿಸಲು ದೆಹಲಿಯ ಅಸಾಧ್ಯವಾದ ಚಳಿ, ಭದ್ರತಾ ಪಡೆಗಳ ಲಾಠಿ ಏಟು, ಅಶ್ರುವಾಯು ಗುಂಡಗಳಿಗೆ ಹೆದೆಹೊಡ್ದಿ. ಅಸಾಧಾರಣ ಮಹೋನ್ನತ ಹೋರಾಟವನ್ನ ಮತ್ತು ರೈತರ ಬೃಹತ ದ್ವನಿಯನ್ನ ದಿಲ್ಲಿಯಿಂದ ಜಗತ್ತಿಗೆ ಕೇಳುವಂತೆ ಘರ್ಜಿಸಿದ್ದಾರೆ. ಕ್ರೂರ ಸರ್ಕಾರ ಮತ್ತು ಪೊಲೀಸರ ದೌರ್ಜನ್ಯಗಳನ್ನು ದಿಟ್ಟವಾಗಿ ಎದುರಿಸಿ ಚಳವಳಿಯನ್ನು ಮುಂದುವರಿಸಿರುವ ರೈತರಿಗೆ ಅಭಿನಂದನೆಗಳನ್ನು ಸಲ್ಲಿಸಿತ್ತೇವೆ ಎಂದರು.

ಈ ಕೋವಿಡ್ ಸಂಕಷ್ಟದ ಸಮಯದಲ್ಲಿ ಯಾವುದೇ ಚರ್ಚೆಯಿಲ್ಲದೆ ಕೇಂದ್ರ ಬಿಜೆಪಿ ಸರ್ಕಾರವು ರೈತವಿರೋಧಿ ಕಾಯಿದೆಗಳನ್ನು ಜಾರಿಗೆ ತಂದಿದೆ . ತಮ್ಮ ವಿರೋಧವನ್ನು ವ್ಯಕ್ತ ಪಡಿಸಲು ದೆಹಲಿ ಚಲೋಗೆ ಮುಂದಾದ ರೈತರನ್ನು ಮತ್ತು ಮುಖಂಡರನ್ನು ಬಲವಂತದಿಂದ ತಡೆಯಲಾಗಿದೆ , ಬಂಧಿಸಲಾಗಿದೆ . ಅಶ್ರುವಾಯು , ಜಲಫಿರಂಗಿಗಳನ್ನು ಪ್ರಯೋಗಿಸಿ ಅನ್ನದಾತರ ಮೇಲೆ ದೌರ್ಜನ್ಯ ಎಸಗಲಾಗಿದೆ . ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಕ್ಕೂ ತಡೆಯೊಡ್ಡಲಾಗಿದೆ . ಇಂತಹ ಸಂದರ್ಭದಲ್ಲಿ ಇಡೀ ದೇಶದ ಜನತೆ ರೈತರಿಗೆ ಬೆಂಬಲವಾಗಿ ನಿಲ್ಲಬೇಕಿದೆ ಎಂದು ಕರೆ ನೀಡಿದರು.

ಕೇಂದ್ರವು ಅಂಗೀಕರಿಸಿದ ಎಪಿಎಂಸಿ ತಿದ್ದುಪಡಿ , ಅಗತ್ಯ ವಸ್ತುಗಳ ತಿದ್ದುಪಡಿ ಮತ್ತು ಗುತ್ತಿಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳು ನಮ್ಮ ದೇಶದ ಸಣ್ಣ ಮತ್ತು ಮಧ್ಯಮ ರೈತರನ್ನು ಸರ್ವನಾಶಗೊಳಿಸಲಿವೆ . ಸರ್ಕಾರಿ ನಿಯಂತ್ರಣದ ಎಪಿಎಂಸಿಗಳು ಇಲ್ಲವಾದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಯೂ ಲಭಿಸುವುದಿಲ್ಲ . ಅಗತ್ಯ ವಸ್ತುಗಳ ಪಟ್ಟಿಯಿಂದ ದಿವಸ ಧಾನ್ಯ , ಬೇಳೆ ಕಾಳು , ಆಹಾರ ಪದಾರ್ಥಗಳನ್ನು ಕೈಬಿಟ್ಟಿರುವುದರಿಂದ ಇವುಗಳ ದಾಸ್ತಾನು , ಕೃತಕ ಅಭಾವ ಮತ್ತು ಬೆಲೆ ಏರಿಕೆಯಿಂದ ಜನಸಾಮಾನ್ಯರೆಲ್ಲರೂ ಸಂಕಷ್ಟಕ್ಕೆ ಒಳಗಾಗುತ್ತಾರೆ . ಗುತ್ತಿಗೆ ಕೃಷಿಯಿಂದ ರೈತರು ಬಂಡವಾಳಿಗರ ಕಪಿಮುಷ್ಠಿಯಲ್ಲಿ ಸಿಲುಕುವುದಲ್ಲದೆ , ಆಹಾರ ಬೆಳೆಗಳ ಉತ್ಪಾದನೆ ಕಡಿತಗೊಂಡು , ವಾಣಿಜ್ಯ ಬೆಳೆಗಳು ಹೆಚ್ಚಾಗುವ ಅಪಾಯವಿದೆ . ಭಾರಿ ಕಾರ್ಪೊರೇಟ್ ಕಂಪೆನಿಗಳಿಗೆ ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸುವ ಕಾಯಿದೆಗಳು ಇವಾಗಿವೆ . ರಾಜ್ಯದಲ್ಲಿ ಕೂಡ ಭೂಮಿತಿ ಕಾಯಿದೆಗೂ ತಿದ್ದುಪಡಿ ತಂದು ಬಡರೈತರ ಭೂಮಿಯನ್ನು ಕಬಳಿಸಲು ಅನುಕೂಲ ಮಾಡಲಾಗಿದೆ . ಜಾಗತೀಕರಣದ ಜಾರಿಯ ಮೂರು ದಶಕಗಳಲ್ಲಿ ಈಗಾಗಲೇ ೩ ಲಕ್ಷಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರು ವಿವರಿಸಿದರು.

ಆದ್ದರಿಂದ ಈ ಕಾಯಿದೆಗಳನ್ನು ಹಿಮ್ಮೆಟ್ಟಿಸಲು ರೈತರು ಹೋರಾಟದ ಹಾದಿ ಹಿಡಿದಿದ್ದಾರೆ . ಈ ಹೋರಾಟಕ್ಕೆ ಬೆಂಬಲಿಸಿ ಎಸ್.ಯು.ಸಿ.ಐ.ಕಮ್ಯುನಿಸ್ಟ್ ಪಕ್ಷವು ಜನಜಾಗೃತಿ ಮೂಡಿಸುತ್ತಾ ಹೋರಾಟದ ಕಟ್ಟುತ್ತಿದೆ . ಪಕ್ಷದ ರೈತ ಮುಂದಳವಾದ ಎಐಕೆಕೆಎಂಎಸ್ ( ಆರ್ ಕೆಎಸ್ ) ರಾಷ್ಟ್ರ ಮಟ್ಟದಲ್ಲಿ ಈ ಹೋರಾಟದ ಭಾಗವೇ ಆಗಿದೆ . ದೇಶದ ಹಲವು ರಾಜ್ಯಗಳಲ್ಲಿ ನಮ್ಮ ನಾಯಕರನ್ನು ಬಂಧಿಸಲಾಗಿದೆ . ಇಂತಹ ಕಠಿಣ ಪರಿಸ್ಥಿತಿಯಲ್ಲಿ ಬೇಡಿಕೆಗಳು ಈಡೇರುವವರೆಗೂ ರಾಜ್ಯದ ಜನತ ರೈತರ ಪರವಾಗಿ ನಿಲ್ಲಬೇಕು ” ಎಂದು ಅವರು ಮನವಿ ಮಾಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನ ಬಿಡುಗಡೆಗಾಗಿ ಆಗ್ರಹಿಸಿ ಮುಸ್ಲಿಂ ಚಿಂತಕರ ಚಾವಡಿ ಮನವಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರೆಸಬೇಕು, ಸದರಿ ಯೋಜನೆಗಳನ್ನು ಮುಂದುವರಿಸಲು ಬೇಕಾಗುವ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಚಿಂತಕರ ಚಾವಡಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಯವರ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ ಮುಸ್ಲಿಂ ಚಿಂತಕರ ಚಾವಡಿಯ ಪದಾಧಿಕಾರಿಗಳು ಕರ್ನಾಟಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ ಸಮುದಾಯಗಳ ಜನಪರ ಕಲ್ಯಾಣ ಯೋಜನೆಗಳಿಗೆ ನಿಗದಿಗೊಳಿಸಲಾದ ಅನುದಾನ ಕಡಿತಗೊಳಿಸಿರುವದನ್ನು ಈ ಮೂಲಕ ತೀವ್ರವಾಗಿ ಖಂಡಿಸಿತು.

ಸರಕಾರ ಬಂದ ಮೇಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ರದ್ದು ಮಾಡಲಾಗಿದೆ. 2019-20ನೇ ಸಾಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು 1897.00ಕೋ.ರೂ.ಗಳಿಂದ 1571.00ಕೋ.ರೂ.ಗೆ ಕಡಿಮೆಗೊಳಿಸಿದೆ.

2020-22ನೇ ಸಾಲಿನಲ್ಲಿ ತಮ್ಮ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ 1177.00 ಕೋ.ರೂ. ಗಳಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ 1055.00ಕೋ.ರೂ. ಗಳಿಗೆ ನಿಗದಿಗೊಳಿಸಿದೆ.

ಇತ್ತೀಚಿಗೆ ಮತ್ತೆ 1055.00 ಕೋ.ರೂ.ಗಳಷ್ಟಿದ್ದ ಅನುದಾನದಲ್ಲಿ 50.00ಕೋ.ರೂ. ಅನುದಾನ ಕಡಿತಗೊಳಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಳೆದ 5 ವರ್ಷಗಳಿಂದ ಜಾರಿಯಲ್ಲಿಟ್ಟಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳನ್ನು ಈಗ ಅನುದಾನ ಕಡಿತಗೊಳಿಸಿರುವುದರಿಂದ ಜಾರಿಗೊಳಿಸದೆ ನಿಲ್ಲಿಸಿದೆ. ಹಿಂದಿನ ಸರಕಾರಗಳು ಜಾರಿಯಲ್ಲಿಟ್ಟಿದ್ದ ಕಾಲೋನಿ ಅಭಿವೃದ್ದಿ ಯೋಜನೆ, ಶಾದಿಭಾಗ್ಯ ಯೋಜನೆಗಳನ್ನು ರದ್ದುಗೊಳಿಸಿದೆ.

ಇವೆಲ್ಲಕ್ಕಿಂತ ಪ್ರಮುಖ ಯೋಜನೆಗಳಾದ, ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ 2019-20ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ಇರುವದು ವಿದ್ಯಾರ್ಥಿಗಳಿಗೆ ಸಾಕಷ್ಟು ಆರ್ಥಿಕ ತೊಂದರೆಯಾಗುತ್ತಿದೆ. ಅರ್ಜಿ ಸಲ್ಲಿಸಿದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗಲೂ ಅನುದಾನ ಬಿಡುಗಡೆಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯನಮಾನವಾಗಿದೆ.

ವಿದ್ಯಾರ್ಥಿಗಳು ಪಾಲಕರು ಆತಂಕದಲ್ಲಿದ್ದಾರೆ. ಈ ಕೂಡಲೇ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೆಕು ಮತ್ತು ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಚಿಂತಕರ ಚಾವಡಿಯ ರಾಜ್ಯ ಉಪಾಧ್ಯಕ್ಷ ರಾಜಾಬಕ್ಷಿ ಎಚ್.ವಿ, ಕೆ.ಎಂ.ಸಯ್ಯದ್, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಚಿಕನ್ ಪೀರಾ, ಟಿಪ್ಪು ಸುಲ್ತಾನ್ ಕಮಿಟಿಯ ಅಧ್ಯಕ್ಷ ಮೈಲೈಕ್ ಜಿಲಾನ್,ಸೈಯದ್ ಮೊಹಮ್ಮದ್ ಹುಸೇನಿ(ಚೋಟು), ಮುನೀರ್ ಸಿದ್ದಿಕಿ, ಮೊಹ್ಮದ್ ಅಲೀಮುದ್ದೀನ್, ಸಲಿಂ ಮಂಡಲಗೇರಿ, ಸಲಿಂ ಅಳವಂಡಿ, ಎ.ಎಚ್.ಅತ್ತನೂರ, ಜಾಫರ್ ಫಹಿಮಾಶಿ, ಡಾ.ಪಾಶಾ ಎಚ್.ವಿ, ಪೀರಸಾಬ ಬೆಳಗಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಾಸ್ಕ್ ಧರಿಸದವರಿಗೆ ದಂಡ

0

ವಿಜಯಸಾಕ್ಷಿ ಸುದ್ದಿ, ಕಂಪ್ಲಿ

ಪಟ್ಟಣದಲ್ಲಿ ಮಾಸ್ಕ್ ಧರಿಸದೇ ವಾಹನಗಳನ್ನು ಚಲಾಯಿಸುವ, ರಸ್ತೆಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಮತ್ತು ಮಾಸ್ಕ್ ಧರಿಸದ ಅಂಗಡಿಗಳ ಮಾಲೀಕರು ಸೇರಿದಂತೆ ಗ್ರಾಹಕರಿಗೆ ಸ್ಥಳೀಯ ಪಿಎಸ್‍ಐ ಮತ್ತು ಸಿಬ್ಬಂದಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ತವ್ಯ ನಿರತರಾಗಿದ್ದ ಪಿ.ಎಸ್.ಐ ಮೌನೇಶ್ ಉ ರಾಥೋಡ್ ಮತ್ತು ಸಿಬ್ಬಂದಿ ಮಾಸ್ಕ್ ಧರಿಸದೇ ವಾಹನ ಚಲಾಯಿಸುತ್ತಿದ್ದವರನ್ನು ತಡೆದು 100 ರೂ.ಗಳ ದಂಡ ವಿಧಿಸಿದರು. ಜೊತೆಗೆ ಮಾಸ್ಕ್‌ಗಳನ್ನು ಹಾಕಿಕೊಳ್ಳದೇ ಅಂಗಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದ ಮಾಲೀಕರಿಗೆ ಹಾಗೂ ವಸ್ತುಗಳನ್ನು ಖರೀದಿಸುತ್ತಿದ್ದ ಗ್ರಾಹಕರಿಗೂ ದಂಡವನ್ನು ವಿಧಿಸಿದರು. ವಿಶೇಷವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪಾದಾಚಾರಿಗಳಿಗೆ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸುವಂತೆ ಮನವಿ ಮಾಡಿದರು.

ಪಿಎಸ್‍ಐ ಮೌನೇಶ್ ಉ ರಾಥೋಡ್ ಮಾತನಾಡಿ, ಮಹಾಮಾರಿ ಕೊರೊನಾ ವೈರಸ್ ಹಬ್ಬುತ್ತಿರುವ ವೇಗ ಕಡಿಮೆಯಾಗುತ್ತಿದೆಯಾದರೂ ವೈರಸ್‍ನ ಎರಡನೇ ಅಲೆ ವ್ಯಾಪಕವಾಗಿ ಹರಡಬಹುದಾದ ಸಾಧ್ಯತೆಗಳಿವೆ. ಅದರೂ ವಾಹನ ಸವಾರರು ಮತ್ತು ಸಾರ್ವಜನಿಕರು ಮಾಸ್ಕ್ ಧರಿಸದಿರುವುದು ಸರಿಯಲ್ಲ. ಪೊಲೀಸರಿಗೆ ಅಲ್ಲದಿದ್ದರೂ ನಿಮ್ಮ ಹಾಗೂ ನಿಮ್ಮ ಕುಟುಂಬದ ಆರೋಗ್ಯಕ್ಕಾಗಿ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸುವಂತೆ ಮನವಿ ಮಾಡಿದರು.

ಇಂದು ಮಾಸ್ಕ್ ಧರಿಸದೇ ಇರುವ 150ಕ್ಕೂ ಅಧಿಕ ಜನರಿಂದ ತಲಾ 100 ರೂಗಳಂತೆ ದಂಡ ವಿಧಿಸಿ 15 ಸಾವಿರೂಗಳನ್ನು ಸಂಗ್ರಹಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಎಎಸ್‍ಐಗಳಾದ ಕೆ.ಎನ್.ಹಗರಪ್ಪ, ಪರಶುರಾಮಪ್ಪ, ತ್ಯಾಗರಾಜ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಎಐಟಿಯುಸಿ ಕಾರ್ಮಿಕ ಸಂಘಟನೆಯಿಂದ ಶೇಖರಗೌಡರಿಗೆ ಬೆಂಬಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು

ಏಪ್ರಿಲ್ 2021ರಲ್ಲಿ ನಡೆಯಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲರನ್ನು ಬೆಂಬಲಿಸಿದೆ ಎಂದು ಎಐಟಿಯುಸಿ ಹಾಗೂ ರಾಜ್ಯ ಕೆ ಎಸ್ ಆರ್ ಟಿ ಸಿ ಸ್ಟ್ಯಾಪ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ ಸುಬ್ಬರಾವ್ ಘೋಷಿಸಿದ್ದಾರೆ.
ಬೆಂಗಳೂರಿನ ಕೇಂದ್ರ ಕಚೇಯಲ್ಲಿ ಕೆ ಎಸ್ ಆರ್ ಟಿ ಸಿ, ಬಿ ಎಂ ಟಿ ಸಿ ನೌಕರರ ಸಭೆಯಲ್ಲಿ ಶೇಖರಗೌಡ ಅವರಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಅನೇಕ ಕಾರಣಗಳಿಂದ ಅನ್ಯಾಯಕ್ಕೆ ಒಳಗಾಗಿದೆ. ಅವರಿಗೆ ರಾಜಕೀಯ ಹಾಗೂ ಸಾಂಸ್ಕೃತಿಕವಾಗಿ ಸಿಕ್ಕಬೇಕಾದ ಸ್ಥಾನಮಾನ ಸಿಕ್ಕಿಲ್ಲ.

105 ವರ್ಷವಾದರೂ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಲ್ಲಿನವರು ಒಬ್ಬರೂ ಅಧ್ಯಕ್ಷರಾಗಿಲ್ಲ. ಈ ಸಾರಿ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಅನುಭವಿ, ಪ್ರಾಮಾಣಿಕ ಸಜ್ಜನ ಶೇಖರಗೌಡ ಮಾಲಿಪಾಟೀಲರು ಸ್ಪರ್ಧಿಸುತ್ತಿದ್ದು ಅವರನ್ನು ಗೆಲ್ಲಿಸಬೇಕು. ಸಾಹಿತ್ಯ ಪರಿಷತ್ತು ಕನ್ನಡಿಗರ ಆಶಯಗಳನ್ನು ಈಡೇರಿಸುವ ಸಂಸ್ಥೆಯಾಗಿ ಎತ್ತರಕ್ಕೆ ಬೆಳೆಯಬೇಕು ಎಂದು ಆಶಯ‌ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಕೆ ಎಸ್ ಆರ್ ಟಿ ಸಿ ನೌಕರರ ಸಹಕಾರ ಸಂಘದ ಅಧ್ಯಕ್ಷ ವೆಂಕಟೇಶ್, ಬೆಂಗಳೂರು ನಗರ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ. ತಿಮ್ಮೇಶ್, ಸಾಹಿತಿ ಆರ್ ಜಿ‌ ಹಳ್ಳಿ ನಾಗರಾಜ, ದ್ವಾರನಕುಂಟೆ ಪಾತಣ್ಣ, ಉಪನ್ಯಾಸಕರಾದ ಡಾ. ಕಾಂತರಾಜಪುರ ಸುರೇಶ, ಡಾ. ವಸಂತಕುಮಾರ ಉಪಸ್ಥಿತರಿದ್ದರು.

error: Content is protected !!