Home Blog Page 3108

ಹಬ್ಬದ ಸಂಭ್ರಮದಲ್ಲಿ ಕೊರೊನಾ ನಿಯಂತ್ರಣ ಮರೆಯದಿರಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಕೋವಿಡ್-19 ನಡುವೆಯೂ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಹಬ್ಬಗಳ ಸಡಗರದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಾರ್ವಜನಿಕರು ಸಂಭ್ರಮದ ಸಂದರ್ಭದಲ್ಲಿ ಮೈಮರೆಯದೆ ಪ್ರತಿಯೊಬ್ಬರೂ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸುವುದರೊಂದಿಗೆ ಸಂಬಂಧಿಸಿದ ಅಧಿಕಾರಿಗಳು ಸೂಕ್ರ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದರು.
ಮಾರುಕಟ್ಟೆಗಳಲ್ಲಿ ಎಚ್ಚರಿಕೆ ಅಗತ್ಯ: ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬಗಳ ಖರೀದಿಗಾಗಿ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಬರುವ ಜನರಿಂದ ಜನದಟ್ಟಣೆ ಹೆಚ್ಚುವ ಸಾಧ್ಯತೆಗಳಿದ್ದು, ಮಾರುಕಟ್ಟೆಗಳಲ್ಲಿ ಹೆಚ್ಚು ಮುಂಜಾಗ್ರತೆ ಕೈಗೊಳ್ಳಬೇಕು. ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಗ್ರಾಹಕರು ಹಾಗೂ ಅಂಗಡಿ ಮುಂಗಟ್ಟುಗಳ ಮಾಲೀಕರು ಮಾಸ್ಕ್ ಧರಿಸಿ, ವ್ಯಕ್ತಿಗತ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಬೇಕು. ಹಬ್ಬದ ಆಚರಣೆಯಲ್ಲಿ ಕುಟುಂಬಗಳು ಕೊರೊನಾ ಸಂಕಷ್ಟಕ್ಕೊಳಗಾಗದಂತೆ ಕೋವಿಡ್ ಮುನ್ನೆಚ್ಚರಿಕೆ ವಹಿಸಬೇಕು.
ಸಾರ್ವಜನಿಕರು ಕೊರೊನಾ ಸೋಂಕು ನಿರ್ಲಕ್ಷಿಸದೆ, ಅದರಿಂದ ದೂರವಿರಲು ಪ್ರಯತ್ನಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಮನೆ ಕಾಮಗಾರಿ ಪೂರ್ಣಗೊಳಿಸಿ: ಕಳೆದ ವರ್ಷದ ಪ್ರವಾಹಪೀಡಿತ ಗ್ರಾಮಗಳ ಸಂತ್ರಸ್ತರಿಗೆ ಮಂಜೂರು ಆಗಿರುವ ಮನೆಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು. ಮನೆಗಳು ನಿರ್ಮಾಣದ ಯಾವ ಹಂತದಲ್ಲಿವೆ ಎಂದು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾಮಗಾರಿ ಮುಗಿಸುವಂತೆ ಸೂಚಿಸಬೇಕು.
ಮನೆ ಮಂಜೂರಾಗಿದ್ದರೂ ಮನೆ ನಿರ್ಮಿಸದ ಫಲಾನುಭವಿಗಳಿಗೆ ಸೂಕ್ತ ಕಾನೂನು ಕ್ರಮ ವಹಿಸಬೇಕು. ಹಾಗೂ ಕಳೆದ ವರ್ಷ ಮನೆ ಹಾನಿ ಪರಿಹಾರ ಕುರಿತು ಸ್ವೀಕೃತವಾದ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು. ಪ್ರಸಕ್ತ ಸಾಲಿನ ನೆರೆ ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಅರ್ಹ ಕುಟುಂಬಗಳಿಗೆ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಒ ಡಾ. ಆನಂದ ಕೆ., ಡಿಎಚ್‌ಓ ಡಾ. ಸತೀಶ್ ಬಸರಿಗೀಡದ, ತಹಶೀಲ್ದಾರರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಕೊರೊನಾ ತಡೆಗಟ್ಟಲು ಸಾರ್ವಜನಿಕರಿಂದ ಪ್ರತಿಜ್ಞೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪೊಲೀಸ್ ಇಲಾಖೆಯ ಆಶ್ರಯದಲ್ಲಿ ಕೊರೊನಾ ವೈರಸ್ ನಿಯಂತ್ರಿಸಲು ಜನಾಂದೋಲನ ಪ್ರತಿಜ್ಞಾ ವಿಧಿಯನ್ನು ಪಿಎಸ್‌ಐ ಬಸವರಾಜ ಕೊಳ್ಳಿ ಬೋಧಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎ.ಡಿ. ಸಾಮುದ್ರಿ, ಆರೋಗ್ಯ ಸಹಾಯಕ ಎಸ್.ಎಫ್. ಅಂಗಡಿ, ಎಸ್.ಎನ್. ಪಾಟೀಲ, ಮಂಜುನಾಥ ಜಾಲಿಹಾಳ, ರೋಣ ಮಂಡಲ ಬಿಜೆಪಿ ಅಧ್ಯಕ್ಷ ಮುತ್ತು ಕಡಗದ ತಾ.ಪಂ ಸದಸ್ಯ ಅಂದಾನಪ್ಪ ದೊಡ್ಡಮೇಟಿ, ಅಶೋಕ ಬೇವಿನಕಟ್ಟಿ, ನಿಂಗಪ್ಪ ಕಣವಿ, ಅಂದಪ್ಪ ವೀರಾಪೂರ, ಹನಮಂತ ದ್ವಾಸಲ್, ಬಸವರಾಜ ವೀರಾಪೂರ, ಯಲ್ಲಪ್ಪ ಮಣ್ಣೊಡ್ಡರ, ಅಲ್ಲಾಭಕ್ಷಿ ನದಾಫ, ರಾಜೇಶ ಅಂಗಡಿ ಪಾಲ್ಗೊಂಡಿದ್ದರು.
 

ಸಂಕನೂರ ಶಿಕ್ಷಣ ಕ್ಷೇತ್ರದ ಅಪಾರ ಅನುಭವಿ: ಮೆಣಸಿನಕಾಯಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿ, ಶಿಕ್ಷಕರು, ನೌಕರರು ಹಾಗೂ ಪದವೀಧರರ ಶ್ರೇಯೋಭಿವೃದ್ಧಿಗಾಗಿ ಸದಾ ಹೋರಾಟ ಮಾಡುತ್ತ ಬಂದು, ವಿಧಾನ ಪರಿಷತ್ ಸದಸ್ಯರಾಗಿ, ಈ ಕ್ಷೇತ್ರದ ಸಮರ್ಥ ಧ್ವನಿಯಾಗಿ, ಆರು ವರ್ಷಗಳ ಕಾಲ ಅನೇಕ ಸಾಧನೆಗಳನ್ನು ಸಾಕಾರಗೊಳಿಸಿದ ಪ್ರೊ. ಎಸ್.ವಿ. ಸಂಕನೂರ ಅವರನ್ನು ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಆರಿಸಿ ತರಬೇಕು ಎಂದು ಬಿಜೆಪಿಯ ಯುವ ನಾಯಕ ಅನಿಲ ಪಿ. ಮೆಣಸಿನಕಾಯಿ ಹೇಳಿದರು.
ಅವರು ಶುಕ್ರವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪದವೀಧರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಧುರಿಣರಾದ ರಾಜು (ತೋಟಪ್ಪ) ಕುರಡಗಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಕೋವಿಡ್-19 ನಡುವೆಯೂ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುತ್ತಿರುವರು. ಬಿಜೆಪಿ ಸರ್ಕಾರಗಳ ಸಾಧನೆ ಹಾಗೂ ಕಳೆದ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಪ್ರೊ. ಸಂಕನೂರ ಅವರ ಸಾಧನೆಗಳನ್ನು ಪದವೀಧರ ಮತದಾರರು ಗಮನಿಸಿದ್ದಾರೆ. ಖಂಡಿತ ಈ ಬಾರಿ ಹೆಚ್ಚು ಮತಗಳನ್ನು ನೀಡುವ ಮೂಲಕ ಅವರನ್ನು ಮತ್ತೆ ಆರಿಸಿ ತರುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಬಿಜೆಪಿ ಯುವ ನಾಯಕ ಅಮರನಾಥ ಗಡಗಿ, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪದವೀಧರ ಮತದಾರರು ಪಾಲ್ಗೊಂಡಿದ್ದರು.

ಗದಗನಲ್ಲಿ ಗೂಳಿ ಕಾಳಗ; ಬಿಡಾಡಿಗಳ ಕಾದಾಟ ಕಂಡು ಅವಾಕ್ಕಾದ ಸಾರ್ವಜನಿಕರು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅವಳಿ ನಗರದಲ್ಲಿ ಬಿಡಾಡಿಗಳ ಕಾಟ ಹೆಚ್ಚಾಗಿದ್ದು, ಪ್ರತಿದಿನವೂ ಈ ಬಿಡಾಡಿಗಳ ಕಾದಾಟ ನಡೆಯೋದು ಸಹಜವಾಗಿದೆ.

ಇಂದೂ ಸಹ ಇದೇ ಘಟನೆ ನಗರದ ಹಳೆ ಡಿಸಿ ಆಫೀಸ್ ಸರ್ಕಲ್ ಬಳಿ ನಡೆದಿದೆ.

ಮದವೇರಿದ ಎರಡು ಗೂಳಿಗಳು, ತಲೆಗೆ ತಲೆ ಡಿಕ್ಕಿ ಹೊಡೆಸಿ ಗುಟುರು ಹಾಕುತ್ತಾ ಕಾದಾಟ ನಡೆಸಿದವು. ಇನ್ನು ಇದನ್ನು ಕಂಡು ಸುತ್ತಮುತ್ತಲಿದ್ದ ಜನ ಅವಾಕ್ಕಾಗಿ ನಿಂತಿದ್ದರು.

ಕೊನೆಗೆ ಅವುಗಳಲ್ಲಿ ಒಂದು ಗೂಳಿ ಸೋಲೊಪ್ಪಿಕೊಂಡು ಫುಟ್ ಪಾತ್ ಮೇಲೆ ಬಂದಾಗ, ಮತ್ತೊಂದು ಗೂಳಿ ಅದಕ್ಕೆ ಡಿಕ್ಕಿ ಹೊಡೆಯಿತು. ಈ ವೇಳೆ ಫುಟ್ ಪಾತ್ ಮೇಲೆ ನಿಲ್ಲಿಸಿದ್ದ ಮೂರು ಬೈಕ್ ಗಳು ಜಖಂಗೊಂಡಿವೆ.

ಗದಗ ಬೆಟಗೇರಿ ಅವಳಿ ನಗರಾದಾದ್ಯಂತ ಈ ಬಿಡಾಡಿಗಳ ಕಾಟ ಹೆಚ್ಚಾಗಿದ್ದು, ಇದನ್ನು ಸರಿಪಡಿಸಿ ಎಂದು ನಗರಸಭೆಗೆ ಹಲವು ಬಾರಿ ಸಾರ್ವಜನಿಕರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಇನ್ನಾದರೂ ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳು ಬಿಡಾಡಿಗಳ ಸಮಸ್ಯೆ ಬಗೆಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ದಸರಾ, ಈದ್ ಮಿಲಾದ್ ಅಂಗವಾಗಿ ಶಾಂತಿ ಸಭೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ
ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಶುಕ್ರವಾರ ದಸರಾ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಸ್‌ಐ ಬಸವರಾಜ ಕೊಳ್ಳಿ ಮಾತನಾಡಿ, ದಸರಾ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ, ಸರ್ಕಾರ ಹೊರಡಿಸಿರುವ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಅನುಸರಿಸಬೇಕಾಗಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸಿಕೊಂಡು ತಮ್ಮ ತಮ್ಮ ಮನೆಗಳಲ್ಲಿ ಹಬ್ಬವನ್ನು ಆಚರಿಸಬೇಕು. ಠಾಣಾ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮಗಳ ನಾಗರಿಕರು ಎಚ್ಚರಿಕೆಯಿಂದ ಹಬ್ಬ ಹರಿದಿನಗಳನ್ನು ಮಾಡಬೇಕಾಗಿದೆ ಎಂದರು.
ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಎ.ಎ. ನವಲಗುಂದ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ, ಈ ರೋಗ ಮಾತ್ರ ಹತೋಟಿಗೆ ಬರುವ ಲಕ್ಷಣಗಳನ್ನು ಗೋಚರಿಸುತ್ತಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಕೊರೊನಾ ವೈರಸ್ ಬಗ್ಗೆ ಜಾಗೃತಿಗೊಂಡು ಪ್ರಸಕ್ತ ಸಾಲಿನ ಎಲ್ಲ ಹಬ್ಬಗಳನ್ನು ಮನೆಯಲ್ಲಿಯೇ ಆಚರಿಸಬೇಕಾಗಿದೆ ಎಂದರು.
ಅಬ್ಬಿಗೇರಿ ಗ್ರಾಮದ ಹಿರಿಯರಾದ ಅಂದಪ್ಪ ವೀರಾಪೂರ, ರೋಣ ಮಂಡಲ ಬಿಜೆಪಿ ಅಧ್ಯಕ್ಷ ಮುತ್ತು ಕಡಗದ ಮಾತನಾಡಿ, ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಕಡಿಮೆಯಾಗುತ್ತಿದೆ. ಇದು ಸಂತೋಷದ ವಿಷಯವಾಗಿದೆ. 10 ವರ್ಷದ ಒಳಗಿನ ಚಿಕ್ಕ ಮಕ್ಕಳು ಹಾಗೂ ವೃದ್ಧರು ಹಬ್ಬದ ಸಮಯದಲ್ಲಿ ಹೊರಗೆ ಬರುವಾಗ ಅಥವಾ ಹಬ್ಬವನ್ನು ಆಚರಣೆ ಮಾಡುವ ವೇಳೆ ಮಾಸ್ಕ್ ಧರಿಸಿಕೊಂಡು ಆಚರಿಸಬೇಕು ಎಂದರು.
ತಾ.ಪಂ ಸದಸ್ಯ ಅಂದಾನಪ್ಪ ದೊಡ್ಡಮೇಟಿ, ಅಶೋಕ ಬೇವಿನಕಟ್ಟಿ, ನಿಂಗಪ್ಪ ಕಣವಿ, ಯಲ್ಲಪ್ಪ ಮಣ್ಣೊಡ್ಡರ, ಅಲ್ಲಾಭಕ್ಷಿ ನದಾಫ, ರಾಜೇಶ ಅಂಗಡಿ, ಸಂತೋಷ ಹನಮಸಾಗರ, ಎಂ.ಕೆ. ಕಾಳಗಿ, ಅಂದಾನಯ್ಯ ಮಾಲಗಿತ್ತಿಮಠ, ಮಲ್ಲರಡ್ಡಿ ರಡ್ಡೇರ, ರಕ್ಷಿತಗೌಡ ಪಾಟೀಲ, ಎಸ್.ಎಫ್. ಅಂಗಡಿ, ಕೃಷ್ಣಾ ಜುಟ್ಲದ, ಶಿವನಗೌಡ ಪಾಟೀಲ, ಮಹೇಶ ಶಿವಶಿಂಪರ, ಹನಮಂತಪ್ಪ ದ್ವಾಸಲ್, ಮಹೇಶ ಬಾಗಲಿ, ಶರಣಪ್ಪಗೌಡ ಕರಮುಡಿ, ಹುಸೇನಸಾಬ ಮಾಕಿ, ಬಾಬುಸಾಬ ರಾಹುತ, ಎಂ.ಎಚ್. ಜಾಲಿಹಾಳ, ಈರಪ್ಪ ಜೋಗಿ, ಸತೀಶ ಮಾಳವಾಡ, ಸಂತೋಷ ಕಡೆತೋಟದ, ಬಸವರಾಜ ವೀರಾಪೂರ, ಕಾಶೀಮಸಾಬ ದೊಟ್ಟಿಹಾಳ, ನಿಂಗಪ್ಪ ಹೊನ್ನಾಪೂರ, ಹಟೇಲಸಾಬ ಲತೀಪನವರ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು. ನಾಗರಾಜ ಮಂಗಳೂರ ನಿರ್ವಹಿಸಿದರು.
 

ಖಾಲಿ ಕ್ವಾಟ್ರು..’ಹಾಡಿಗೆ ಕುಷ್ಟಗಿ ಪುರಸಭೆ ಕಾಂಗ್ರೆಸ್ ಸದಸ್ಯರ ನೃತ್ಯ‌; ವಿಡಿಯೋ ವೈರಲ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕುಷ್ಟಗಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಅಜ್ಞಾತ ಪ್ರದೇಶಕ್ಕೆ ಪ್ರವಾಸ ತೆರಳಿದ್ದ ಕಾಂಗ್ರೆಸ್ ಸದಸ್ಯರು ಸಿನಿಮಾ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯರು, ಸದಸ್ಯೆಯರ ಪತಿಯಂದಿರು ಹಾಗು ಪುತ್ರರು ಈ ವೇಳೆ ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ.

ಮಳೆಯಿಂದ ಜನರು ಹಲವು ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಇವುಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಹೀಗೆ ಮೋಜು, ಮಸ್ತಿಯಲ್ಲಿ ತೊಡಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹರಪನಹಳ್ಳಿ
ಕುಡಿಯುವ ನೀರಿಗೆ ಆಗ್ರಹಿಸಿ ತಾಲೂಕಿನ ಮತ್ತಿಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂದೆ ಖಾಲಿ ಕೊಡಗಳ ಹಿಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಯನ್ನುದ್ದೇಶಿಸಿ ಮೈದೂರು ರಾಮಣ್ಣ ಮಾತನಾಡಿ, ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಮತ್ತಿಹಳ್ಳಿ, ಎನ್. ಶಿರನಹಳ್ಳಿ, ಆಲದಹಳ್ಳಿ, ಹಗರಿಶಿರನಹಳ್ಳಿ ಮತ್ತು ಪುಣ್ಯ ನಗರ ಗ್ರಾಮಗಳಲ್ಲಿ ಹಲವಾರು ವರ್ಷಗಳಿಂದ ನೀರಿನ ಸಮಸ್ಯೆ ಇದ್ದೆ ಇದೆ. ಆದರೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಸಾಧ್ಯವಾಗಿತ್ತಿಲ್ಲ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ಮಂತ್ರಿಗಳು ಹಾಗೂ ಶಾಸಕರು ಜಿಲ್ಲಾ ಪಂಚಾಯತ ಸಿಇಓ ಅವರು ಮತ್ತಿಹಳ್ಳಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿದೆ. ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ತುಂಬಾ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದೇವೆ ಎಂದು ಗ್ರಾಮದ ಜನರು ಪಂಚಾಯತಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಸುಮಾರು ಹತ್ತು ಸಾವಿರ ಜನರಿಗೆ ಕುಡಿಯುವ ನೀರು ಸೇರಿದಂತೆ ಸ್ವಚ್ಚತೆ ಬೀದಿ ದೀಪ ನಿರ್ವಹಣೆ ಮತ್ತು ಅಭಿವೃದ್ಧಿ ಕುಂಠಿತವಾಗಿದೆ. ಕಳೆದ ಎರಡು ತಿಂಗಳಿಂದ ಗ್ರಾಮಪಂಚಾಯಿತಿ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತ್‌ಗೆ ಆಲೆದು ಅಲೆದು ಸುಸ್ತಾಗಿ, ನೀರು ತರುವ ಬಂಡಿ ಹಾಗೂ ಖಾಲಿ ಕೊಡಗಳೊಂದಿಗೆ ಗ್ರಾಮಸ್ಥರು ಪಂಚಾಯತಿ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ನಿರ್ಗಮಿತ ಅಧ್ಯಕ್ಷೆ ಚೆನ್ನಮ್ಮ ರಾಮಣ್ಣ, ಮೈದೂರು ರಾಮಣ್ಣ, ಡಿ ಶೇಖರಪ್ಪ, ಎಂ ಕೋಟ್ಯಪ್ಪ, ಮರಳುಸಿದ್ದಪ್ಪ, ಸಿದ್ದಪ್ಪ, ಚಂದ್ರೇಗೌಡ, ಕೋಟ್ರೇಶ, ಎರಿತಾತಾ, ನಿಂಗಜ್ಜ, ಶಿವಣ್ಣ, ಕರಿಯವ್ವ, ಬಸಮ್ಮ, ಕೆ ಸಿದ್ದಪ್ಪ, ಬಸವರಾಜ, ಕೆ ಶಿವಕುಮಾರ್, ಕೊಟ್ರೇಶ್, ಉಳ್ಳೇರ್ ಕೊಟ್ರಪ್ಪ, ಕೆಂಚಪ್ಪ, ಗಣೇಶ, ನಾಗಪ್ಪ, ಎಂ ನಾಗರಾಜ್, ನಾಗೇಂದ್ರಪ್ಪ, ಮಂಜಪ್ಪ, ಹಾಲಪ್ಪ, ಮರಿಯಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.

ಮಾನವ ಜನ್ಮ ಪುಣ್ಯದಿಂದ ಬಂದದ್ದು, ಸಾರ್ಥಕವಾಗಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ
ಪುಣ್ಯದಿಂದ ಬಂದ ಮಾನವ ಜನ್ಮ ಸಾರ್ಥಕವಾಗಲು ಪರಂಪರೆ, ಸಂಸ್ಕಾರ ಹಾಗೂ ಧರ್ಮದ ಪುನರುತ್ಥಾನಕ್ಕೆ ಸಮರ್ಪಿಸಿಕೊಳ್ಳಬೇಕಿದೆ ಎಂದು ಡಾ.ಕೊಟ್ಟೂರ ಬಸವೇಶ್ವರ ಶಿವಾಚಾರ್ಯರು ಹೇಳಿದರು.
ಸಮೀಪದ ಸೂಡಿ ಗ್ರಾಮದ ಜುಕ್ತಿಹಿರೇಮಠದ ಲಿಂ.ಗುರು ಉಮಾಪತಿ ಶಿವಾಚಾರ್ಯರ 73ನೇ ಪುಣ್ಯಾರಾಧನೆ ಹಾಗೂ ೪೪ ನೇ ಸರಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊರೋನಾ ವೈರಸ್ ಜಗತ್ತಿನಾದ್ಯಂತ ಹಬ್ಬಿ ಮನುಷ್ಯರು ಮನೆ ಬಿಟ್ಟು ಬಾರದ ದುಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಹಬ್ಬಗಳು, ಜಾತ್ರೆಗಳು ಸಂಕ್ಷಿಪ್ತವಾಗಿ ಆಚರಣೆಯಾಗಿರುವುದು ನೋವಿನ ಸಂಗತಿ. ಬರಗಾಲ ಹಾಗೂ ಅತಿವೃಷ್ಠಿಯ ಸಂದರ್ಭದಲ್ಲಿ ಭಕ್ತರು ಕುಗ್ಗಿರಲಿಲ್ಲ. ಆದರೆ ದೇವರು ಕೊಟ್ಟು ಹಾಗೂ ಕಸಿದು ನೋಡುತ್ತಾನೆ ಎಂದು ಭಕ್ತ ಸಮೂಹ ಜಗತ್ತಿಗೆ ಎದುರಾಗಿರುವ ಸಂಕಷ್ಟ ಸಂದರ್ಭದಲ್ಲಿ ಸಂಕ್ಷಿಪ್ತ ಜಾತ್ರೆ ಹಾಗೂ ಹಬ್ಬಗಳಲ್ಲಿ ಸಂಕಷ್ಟ ಪರಿಹಾರಕ್ಕೆ ಪ್ರಾರ್ಥಿಸುತ್ತಿದ್ದಾರೆ ಎಂದರು.
ಮಾನವ ಸಂಬಂಧಗಳು ಹಾಗೂ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ದಿನಮಾನದಲ್ಲಿ ಮಾನವೀಯತೆಗೆ ಮಹತ್ವ ನೀಡಲು ಬಂದಿರುವ ಕಾಲಘಟ್ಟವಾಗಿದೆ. ಹೀಗಾಗಿ ಜಗತ್ತಿಗೆ ಎದುರಾಗಿರುವ ಕಂಟಕ ದೂರವಾಗಲಿ ಎಂದು ಮಠದಿಂದ ಪ್ರಾರ್ಥಿಸುತ್ತೇವೆ ಎಂದರು.
ಕೊರೋನಾ ಮುಂಜಾಗ್ರತ ಕ್ರಮವಾಗಿ ಸೂಡಿಯ ಪ್ರಾಥಮಿಕ ಆರೋಗ್ಯ ಇಲಾಖೆಯಿಂದ ಮಠಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೆಸರ್ ಹಾಗೂ ದೇಹದ ಉಷ್ಣ ತಪಾಸಣೆ ಮಾಡಲಾಯಿತು. ಕೊರೋನಾ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪಾಲಿಸಲು ಪಂಚಾಯ್ತಿ ಹಾಗೂ ಗಜೇಂದ್ರಗಡ ಪೊಲೀಸ್ ಠಾಣೆಯ ಸಹಕಾರವನ್ನು ಮಠದಿಂದ ಪಡೆಯಲಾಗಿತ್ತು.
ಈ ವೇಳೆ ಉಮೇಶ ಲಮಾಣಿ, ರಾಜು ಮುರಗಿ, ಸುನೀಲ ಮಾರನಬಸರಿ, ನವೀನ ಹೆಬ್ಬಾರೆ ಸೇರಿ ಇತರರು ಇದ್ದರು.

ಪ್ರಥಮ ಪ್ರಾಶಸ್ತ್ಯದ ಮತ ನೀಡಲು ಮನವಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ನರೇಗಲ್ಲ 
ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರ ಪ್ರಚಾರ ನಡೆಸಲಾಯಿತು.
ಈ ವೇಳೆ ರೋಣ ಮಂಡಲ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಮಲ್ಲು ಮಾದರ ಮಾತನಾಡಿ, ಪದವೀಧರ ಹಾಗೂ ಶಿಕ್ಷಕರ ಪರವಾಗಿ ಸದನದಲ್ಲಿ ಸಾಕಷ್ಟು ಯೋಜನೆಗಳ ಬಗ್ಗೆ ನಿರಂತರ ಹೋರಾಟ ಮಾಡುತ್ತಿರುವ ಏಕೈಕ ಜನಪ್ರತಿನಿಧಿಯಾಗಿ ಎಸ್.ವಿ. ಸಂಕನೂರ ಉತ್ತಮ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಆದ್ದರಿಂದ ಪ್ರಸಕ್ತ ಚುನಾವಣೆಯಲ್ಲಿ ಪದವೀಧರರು ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಿ, ಸೇವೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕು ಎಂದರು.
ಅಮರೇಶ ಜಾಲಿಹಾಳ, ಅಬ್ದುಲ್‌ಸಾಹೇಬ ಹೊಸಳ್ಳಿ, ಪರಶುರಾಮ ಮಾದರ, ಶರಣಪ್ಪ ಕುಂದಗೋಳ, ಮಂಜುನಾಥ ದಳವಾಯಿ, ಬಸವರಾಜ ಹುಡೇದ, ಫಕೀರಪ್ಪ ಮಾದರ, ಯಮನಪ್ಪ ಮಾದರ, ಪ್ರಸನ ಸ್ಥಾವರಮಠ, ನೀಲಪ್ಪ ಮಾದರ, ರಾಮಣ್ಣ ಮಾದರ, ಶಿವಾನಂದ ಮರಗಣ್ಣವರ, ಬಸವರಾಜ ಮಾರನಬಸರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರಿದ್ದರು.
 

ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ, ಪರಿಸರ ಜಾಗೃತಿ ಪತ್ರ ಬಿಡುಗಡೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹುಬ್ಬಳ್ಳಿ
ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ವೀರರಾಣಿ ಕಿತ್ತೂರ ಚೆನ್ನಮ್ಮ ಅವರ ೧೯೭ನೇ ವಿಜಯೋತ್ಸವದ ಶುಭ ಸಂದರ್ಭದಲ್ಲಿ ನಗರದ ರಾಣಿ ಚೆನ್ನಮ್ಮಾಜಿ ಪ್ರತಿಮೆಗೆ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು ಹಾಗೂ ಪರಿಸರ ಜಾಗೃತಿ ಕರಪತ್ರ ಬಿಡುಗಡೆಗೊಳಿಸಲಾಯಿತು.
ವಾಕರಸಾ ನಿಗಮದ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ರೈತ ಮುಖಂಡ ವಿಕಾಸ ಸೊಪ್ಪಿನ, ವೀರಣ್ಣ ಕಲ್ಲೂರ, ಪಾಲಿಕೆ ಮಾಜಿ ಸದಸ್ಯ ರಾಜಣ್ಣ ಕೊರವಿ, ಮಾತನಾಡಿದರು. ಸಾಹಿತಿ ಪ್ರೊ ಎಸ್.ವಿ. ಪಟ್ಟಣಶೆಟ್ಟಿ, ಅಧ್ಯಕ್ಷತೆ ವಹಿಸಿದ್ದರು. ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಗ್ರಂಥಪಾಲಕ ಸುರೇಶ ಡಿ. ಹೊರಕೇರಿ ಸ್ವಾಗತಿಸಿ, ನಿರೂಪಿಸಿದರು. ಗೀತಾ ಮುಳ್ಳೊಳ್ಳಿ ವಂದಿಸಿದರು.
ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಎಸ್.ಐ. ನೇಕಾರ, ಆನಂದ ಘಟಪನದಿ, ಮೃತ್ಯುಂಜಯ ಮಟ್ಟಿ, ಡಾ. ಬಸವಕುಮಾರ ತಲವಾಯಿ, ಸದಾಶಿವಚೌಶೆಟ್ಟಿ, ರತ್ನಾಚೌಶೆಟ್ಟಿ, ಸಿ.ಜಿ.ಧಾರವಾಡ ಶೆಟ್ಟರ ಮುಂತಾದವರು ಇದ್ದರು.

error: Content is protected !!