Home Blog Page 3108

ಕೇಂದ್ರ ಸೂಚಿಸಿದಾಗ ಸಂಪುಟ ವಿಸ್ತರಣೆ: ಬಿಎಸ್‌ವೈ

-ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ.

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಹಲವು ದಿನಗಳಿಂದ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ನನೆಗುದಿ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ತಿಳಿಸಿದಾಗ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

ಕೊಪ್ಪಳದ ಬಸಾಪುರ ಏರ್‌ಸ್ಟ್ರಿಪ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಸಂಪುಟ ಪುನರ್ರಚನೆ ಇಲ್ಲ, ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದರು.

ರಾಜ್ಯದ ಬಿಜೆಪಿ ಸಚಿವರು, ಶಾಸಕರ ಜೊತೆ ಯುವರಾಜ್ ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ. ಆದರೆ ಯುವರಾಜ ಪ್ರಕರಣ ತನಿಖೆ ಹಂತದಲ್ಲಿದೆ. ತನಿಖೆ ಮುಗಿದ ನಂತರ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದರು.

ಕೋವಿಡ್ ಕಾರಣ, ಅತಿವೃಷ್ಟಿ, ಬರಗಾಲದ ಆಪತ್ತುಗಳಿಂದಾಗಿ ನಿರೀಕ್ಷಿಸಿದಷ್ಟು ಸರಕಾರದಿಂದ ಕೆಲಸ ಮಾಡಲಾಗಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಸರಿ ಇಲ್ಲ. 40-50 ಸಾವಿರ ಬಜೆಟ್ ಖೋತಾ ಆಗಿದೆ. ಇವೆಲ್ಲವೂ ರಾಜ್ಯದ ಜನತೆಗೆ ಗೊತ್ತಿದೆ. ಜನರು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ವಿವರಿಸಿದರು.

ದೇಶದಲ್ಲಿ ಮೊದಲ ಟಾಯ್ಸ್ ಕ್ಲಸ್ಟರ್ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡ್ತಿದಿವಿ. ಕೆಲಸ ಆರಂಭವಾದ ಬಳಿಕ ಪ್ರಧಾನಿ ಮೋದಿಯವರಿಂದ ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ಪಾಟೀಲ, ಆನಂದ್ ಸಿಂಗ್, ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ‌ ದಡೆಸೂಗುರು ಮತ್ತಿತರರು ಇದ್ದರು.

ಅಜ್ಜನ ಜಾತ್ರೆಯ ತೇರೆಳೆಯೋದು ಪಕ್ಕಾ!? -ಮೂರೇ ದಿನಕ್ಕೆ ಸೀಮಿತವಾಗಲಿದೆಯಾ ಜಾತ್ರಾ ಮಹೋತ್ಸವ!

ವಿಜಯಸಾಕ್ಷಿ ವಿಶೇಷ ಸುದ್ದಿ, ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ, ಉತ್ತರದ ಸಿದ್ಧಗಂಗೆ ಎಂದೇ ಖ್ಯಾತವಾಗಿರುವ ಕೊಪ್ಪಳ ಗವಿಮಠದ ಅಜ್ಜನ ಜಾತ್ರಾ ಮಹೊತ್ಸವದ ತೇರೆಳೆಯೋದು ಬಹುತೇಕ ಪಕ್ಕಾ ಆಗಿದೆ.

ಅಧಿಕೃತವಾಗಿ ಈವರೆಗೆ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲವಾದರೂ ಇಂದು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಮತ್ತು ರಾಘವೇಂದ್ರ ಹಿಟ್ನಾಳರವರು ಭೇಟಿ ನೀಡಿ ಇದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

ಗವಿಮಠದ ಜಾತ್ರೆ, ಭಕ್ತರ ಜಾತ್ರೆ. ಭಕ್ತರ ತೀರ್ಮಾನವೇ ನಮ್ಮ ತೀರ್ಮಾನ ಎಂದು ಶ್ರೀಗಳು ಹೇಳಿದ್ಧಾರೆ ಎನ್ನಲಾಗಿದೆ. ಪ್ರತಿಸಲದಂತೆ ಆದ್ದೂರಿಯಾಗಿ ಮಾಡದಿದ್ದರೂ ಸಂಕ್ಷಿಪ್ತವಾಗಿ ರಥೋತ್ಸವ ಕಾರ್ಯಕ್ರಮ ಹಾಗೂ ಮೂರು ದಿನ ದಾಸೋಹ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ.

ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಚಿಂತನಾಗೋಷ್ಠಿಗಳನ್ನು ಹಾಗೂ ಹಾಸ್ಯ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಾತ್ರೆಯಲ್ಲಿ ಯಾವುದೆ ರೀತಿಯ ಅಂಗಡಿಗಳು ಮತ್ತು ವಸ್ತು ಪ್ರದರ್ಶನಗಳಿಗೆ ಅವಕಾಶ ನೀಡುವುದಿಲ್ಲ. ಮಳೇಮಲ್ಲೇಶ್ವರದಿಂದ ನಡೆಯುತ್ತಿದ್ದ ಜಾಥಾ ಸಹ ರದ್ದಾಗಿದೆ. ಭಕ್ತಾದಿಗಳು ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಮಾಸ್ಕ್ ಧರಿಸಿ ಬರುವಂತಹ ವ್ಯವಸ್ಥೆ ಮಾಡಿ ಜಾತ್ರೆಯನ್ನು ನಡೆಸೋಣ ಎನ್ನುವ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

ಆದರೆ ಇದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಜಿಲ್ಲಾಧಿಕಾರಿಗಳು ಈ ಸಲ ಜಾತ್ರೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದ್ದರು. ಹೀಗಾಗಿ ಇಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಸಭೆ ನಡೆಸಿದ ನಂತರ ಯಾವ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಮನೆ ಮಾಡಿದೆ.

ಜಿಲ್ಲಾಧಿಕಾರಿಗಳು ಜಾತ್ರೆ ನಡೆಯುವ ಕುರಿತು ಜ.12ರಂದು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೂ ಗವಿಮಠದಿಂದ ಅಧಿಕೃತವಾಗಿ ಘೋಷಣೆಯಾಗುವವರೆಗೆ ಎಲ್ಲವೂ ಇನ್ನೂ ಅನಿರ್ದಿಷ್ಟವಾಗಿದೆ ಎಂದೇ ಹೇಳಬಹುದು.


ಜ.11ರಂದು ಮಹತ್ವದ ಸಭೆ
ಇದೇ ತಿಂಗಳ 11ರಂದು ಮತ್ತೊಮ್ಮೆ ಅಧಿಕಾರಿಗಳ, ಮಠದ ಭಕ್ತರ, ರಥೋತ್ಸವ ಸಂಘಟಕರ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.

ಅಜ್ಜನ ಜಾತ್ರೆಯ ತೇರೆಳೆಯೋದು ಪಕ್ಕಾ!?

0

ಮೂರೇ ದಿನಕ್ಕೆ ಸೀಮಿತವಾಗಲಿದೆಯಾ ಜಾತ್ರಾ ಮಹೋತ್ಸವ!

ವಿಜಯಸಾಕ್ಷಿ ವಿಶೇಷ ಸುದ್ದಿ, ಕೊಪ್ಪಳ:
ದಕ್ಷಿಣ ಭಾರತದ ಕುಂಭಮೇಳ, ಉತ್ತರದ ಸಿದ್ಧಗಂಗೆ ಎಂದೇ ಖ್ಯಾತವಾಗಿರುವ ಕೊಪ್ಪಳ ಗವಿಮಠದ ಅಜ್ಜನ ಜಾತ್ರಾ ಮಹೊತ್ಸವದ ತೇರೆಳೆಯೋದು ಬಹುತೇಕ ಪಕ್ಕಾ ಆಗಿದೆ.

ಅಧಿಕೃತವಾಗಿ ಈವರೆಗೆ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲವಾದರೂ ಇಂದು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಮತ್ತು ರಾಘವೇಂದ್ರ ಹಿಟ್ನಾಳರವರು ಭೇಟಿ ನೀಡಿ ಇದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

ಗವಿಮಠದ ಜಾತ್ರೆ, ಭಕ್ತರ ಜಾತ್ರೆ. ಭಕ್ತರ ತೀರ್ಮಾನವೇ ನಮ್ಮ ತೀರ್ಮಾನ ಎಂದು ಶ್ರೀಗಳು ಹೇಳಿದ್ಧಾರೆ ಎನ್ನಲಾಗಿದೆ. ಪ್ರತಿಸಲದಂತೆ ಆದ್ದೂರಿಯಾಗಿ ಮಾಡದಿದ್ದರೂ ಸಂಕ್ಷಿಪ್ತವಾಗಿ ರಥೋತ್ಸವ ಕಾರ್ಯಕ್ರಮ ಹಾಗೂ ಮೂರು ದಿನ ದಾಸೋಹ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ.

ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಚಿಂತನಾಗೋಷ್ಠಿಗಳನ್ನು ಹಾಗೂ ಹಾಸ್ಯ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಾತ್ರೆಯಲ್ಲಿ ಯಾವುದೆ ರೀತಿಯ ಅಂಗಡಿಗಳು ಮತ್ತು ವಸ್ತು ಪ್ರದರ್ಶನಗಳಿಗೆ ಅವಕಾಶ ನೀಡುವುದಿಲ್ಲ. ಮಳೇಮಲ್ಲೇಶ್ವರದಿಂದ ನಡೆಯುತ್ತಿದ್ದ ಜಾಥಾ ಸಹ ರದ್ದಾಗಿದೆ. ಭಕ್ತಾದಿಗಳು ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಮಾಸ್ಕ್ ಧರಿಸಿ ಬರುವಂತಹ ವ್ಯವಸ್ಥೆ ಮಾಡಿ ಜಾತ್ರೆಯನ್ನು ನಡೆಸೋಣ ಎನ್ನುವ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

ಆದರೆ ಇದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಜಿಲ್ಲಾಧಿಕಾರಿಗಳು ಈ ಸಲ ಜಾತ್ರೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದ್ದರು. ಹೀಗಾಗಿ ಇಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಸಭೆ ನಡೆಸಿದ ನಂತರ ಯಾವ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಮನೆ ಮಾಡಿದೆ.

ಜಿಲ್ಲಾಧಿಕಾರಿಗಳು ಜಾತ್ರೆ ನಡೆಯುವ ಕುರಿತು ಜ.12ರಂದು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೂ ಗವಿಮಠದಿಂದ ಅಧಿಕೃತವಾಗಿ ಘೋಷಣೆಯಾಗುವವರೆಗೆ ಎಲ್ಲವೂ ಇನ್ನೂ ಅನಿರ್ದಿಷ್ಟವಾಗಿದೆ ಎಂದೇ ಹೇಳಬಹುದು.

ಜ.11ರಂದು ಮಹತ್ವದ ಸಭೆ
ಇದೇ ತಿಂಗಳ 11ರಂದು ಮತ್ತೊಮ್ಮೆ ಅಧಿಕಾರಿಗಳ, ಮಠದ ಭಕ್ತರ, ರಥೋತ್ಸವ ಸಂಘಟಕರ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.

ದೇವೇಗೌಡರದ್ದು ಹಗಲುಗನಸು, ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಬಿಗ್ ಝೀರೋ: ಬಿ ಸಿ ಪಾಟೀಲ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಮುಂದಿನ‌ ಚುನಾವಣೆಯಲ್ಲಿ ಜೆಡಿಎಸ್‌ನ್ನು ಅಧಿಕಾರಕ್ಕೆ ತಂದೇ ಕಣ್ಣು ಮುಚ್ಚುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ದೇವೇಗೌಡರದ್ದು ಹಗಲುಗನಸು ಎಂದು ವ್ಯಂಗ್ಯವಾಡಿದರು.

ಕೊಪ್ಪಳದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಜೆಡಿಎಸ್‌ಗೆ 40 ಸ್ಥಾನ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಾಲ್ಕು ಸೀಟು ಬರೋದು ಕಷ್ಟ ಇದೆ. ತಮ್ಮ ಪಕ್ಷದ ಶಾಸಕರು ಬಿಟ್ಟು ಹೋಗ್ತಾರೆ ಅಂತಾ ದೇವೆಗೌಡರು ಆ ರೀತಿ ಹೇಳಿರಬಹುದು. ಈಗಾಗಲೇ ಕಾಂಗ್ರೆಸ್, ಬಿಜೆಪಿ‌ ಅಂತಾ ಒಬ್ಬೊಬ್ಬರು ಜೆಡಿಎಸ್ ಬಿಟ್ಟು ಹೋಗ್ತಾ ಇದ್ದಾರೆ ಎಂದು ಪಾಟೀಲ್ ಲೇವಡಿ ಮಾಡಿದರು.

ಬಿಜೆಪಿ ಅವರು ನನ್ನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು,
ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ದೊಡ್ಡ ಶೂನ್ಯ.
ಇದನ್ನು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ.
ಅವರು ಚಾಲ್ತಿಯಲ್ಲಿದ್ದಾರೆ, ಅದಕ್ಕೆ ಅವರ ಬಗ್ಗೆ ಮಾತನಾಡ್ತಾರೆ. ಇನ್ನುಳಿದವರ ಚಾಲ್ತಿಯಲ್ಲಿ ಇಲ್ಲ ಅದಕ್ಕೆ ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಶಿಕ್ಷೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಶ್ಯಾಮ ಕನ್ನಾಳ ಎಂಬ ವ್ಯಕ್ತಿಯ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಸಂಗನಾಳ ಗ್ರಾಮದ ಶ್ಯಾಮ ಕನ್ನಾಳ ಎಂಬ ಆರೋಪಿತನು ಅಪ್ರಾಪ್ತ ವಯಸ್ಸಿನ ಬಾಲಕಿ ತಮ್ಮೂರಿನ ಹೊರವಲಯದಲ್ಲಿ ಬಹಿರ್ದೆಸೆಗೆ ಹೋದಾಗ ಅವಳಿಗೆ ಪುಸಲಾಯಿಸಿ ಅಪಹರಣ ಮಾಡಿಕೊಂಡು ಹೋಗಿ ಸಂಗನಾಳ ಶಾಲೆಯ ಹತ್ತಿರ ಆಕೆಗೆ ಅತ್ಯಾಚಾರ ಮಾಡಿರುವ ಆರೋಪವು ತನಿಖೆಯಲ್ಲಿ ಸಾಬೀತಾಗಿದ್ದರಿಂದ ಕುಷ್ಟಗಿಯ ಸಿಪಿಐ ಗಿರೀಶ ರೋಡ್ಕರರವರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 07 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 35 ಸಾವಿರಗಳ ದಂಡ ವಿಧಿಸಿ, ದಂಡದ ಮೊತ್ತದಲ್ಲಿ ರೂ. 20 ಸಾವಿರಗಳನ್ನು ಬಾಧಿತಳಿಗೆ ನೀಡುವಂತೆ ನ್ಯಾಯಾಧೀಶರು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮಲಪ್ರಭಾ ನದಿಯ ತೀರದಲ್ಲಿ ಮೊಸಳೆ ಪ್ರತ್ಯಕ್ಷ: ಗ್ರಾಮಸ್ಥರ ಆತಂಕ

0

ವಿಜಯಸಾಕ್ಷಿ ಸುದ್ದಿ,ಗದಗ

ಪ್ರವಾಹದ ಅಲೆಗೆ ತತ್ತರಿಸಿ ಹೋಗಿದ್ದ ಜಿಲ್ಲೆಯ ಮಲಪ್ರಭಾ ನದಿ ತೀರದ ಜನರಿಗೀಗ ಮತ್ತೊಂದು ಆತಂಕ ಸೃಷ್ಟಿಯಾಗಿದೆ.

ನೆರೆ ಬಂದು ಹೋಗಿ ತಿಂಗಳುಗಳೇ ಕಳೆದಿದ್ದು, ರೋಣ ತಾಲ್ಲೂಕಿನ ಮೆಣಸಗಿ ಗ್ರಾಮದ ಮಲಪ್ರಭಾ ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದ ಜನರು ಭಯಭೀತರಾಗಿದ್ದಾರೆ.

ಆತಂಕಗೊಂಡಿರುವ ಗ್ರಾಮಸ್ಥರು ರೋಣ ಅರಣ್ಯ ವಲಯ ಅಧಿಕಾರಿಗಳಿಗೆ‌ ಮಾಹಿತಿ ನೀಡಿದ್ದು, ಮೊಸಳೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಅಲ್ಲದೇ, ನದಿ ತೀರದತ್ತ ಯಾರೂ ಹೋಗದಂತೆ ಎಚ್ಚರಿಕೆ ಡಂಗುರ ಸಾರಿದ್ದಾರೆ.

ಈ ಹಿಂದೆಯೂ ಇದೇ ಭಾಗದ ಹೊಳೆಆಲೂರು ಗ್ರಾಮದ ಪಕ್ಕ ಮೊಸಳೆ ಪ್ರತ್ಯಕ್ಷವಾಗಿತ್ತು. ಮೂರು ದಿನಗಳ ನಂತರ ಮೊಸಳೆ ನಿಗೂಢವಾಗಿ ಸಾವನ್ನಪ್ಪಿತ್ತು.

ಸಲಿಂಗಕಾಮಕ್ಕಾಗಿ ಬಾಲಕನ ಕಿಡ್ನಾಪ್ ಮಾಡಿದ್ದ ವ್ಯಕ್ತಿಗೆ 10 ವರ್ಷ ಜೈಲು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಸಲಿಂಗಕಾಮಕ್ಕಾಗಿ ಕೊಪ್ಪಳದ ಗವಿಮಠ ಹಾಸ್ಟೇಲ್‌ನಿಂದ ಬಾಲಕನನ್ನು ಅಪಹರಿಸಿದ್ದ ಅಪರಾಧಿಗೆ 10 ವರ್ಷ ಜೈಲು ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

2018ರಲ್ಲಿ ಮೂವರು ವಿದ್ಯಾರ್ಥಿಗಳಿಗೆ ಮೊಬೈಲ್ ತೋರಿಸುವ ಆಮಿಷವೊಡ್ಡಿ ಗದಗ, ಕಲಬುರ್ಗಿ, ತಿರುಪತಿ, ರಾಯಚೂರು, ಬೆಂಗಳೂರು ಸೇರಿದಂತೆ ನಾನಾ ಊರುಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ತಿರುಗಾಡಿದ್ದ ಅಪರಾಧಿ ಶರಣಪ್ಪ ಕೆಂಬಾವಿ, ವಿದ್ಯಾರ್ಥಿಗಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದ. ಬೆಂಗಳೂರಿನಲ್ಲಿ ಇದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ನೀಡಲಾಗಿತ್ತು.

ಇದುವರೆಗೂ ಪ್ರಕರಣದ ವಿಚಾರಣೆಯನ್ನು ಕೂಲಂಕಷವಾಗಿ ಆಲಿಸಿದ ಕೊಪ್ಪಳದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಂ.ಜಲವಾದಿಯವರು ಆರೋಪ ಸಾಬೀತಾಗಿದ್ದನ್ನು ತಿಳಿಸಿ ಪ್ರಕರಣದ ಆರೋಪಿಯನ್ನು ಅಪರಾಧಿ ಎಂದು ತೀರ್ಮಾನಿಸಿ 10 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ ಸೇರಿ ಮೂವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ನಗರದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿತರು ಪರಾರಿಯಾಗಿರುವ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ, ಚಾಲಕ ಸಿದ್ದಲಿಂಗಯ್ಯ ಮರಿಯಮ್ಮನವರ, ಪ್ರಮೋದ್ ಮಾನೇದ ಬಂಧಿತ ಆರೋಪಿಗಳಾಗಿದ್ದಾರೆ. ವಾಹನ ಮಾಲೀಕ ನಾಗರಾಜ್ ಹಾಗೂ ಗೋದಾಮಿನ ಮಾಲೀಕ ನಾಗರಾಜ್ ಮುರಗಿ ಪರಾರಿಯಾಗಿದ್ದಾರೆ.

ಆರೋಪಿತರು ಜಿಲ್ಲಾಡಳಿತ ಭವನದ ಎದುರಿಗಿರುವ ಕನ್ನಡ ಸಾಹಿತ್ಯ ಭವನದ ಹತ್ತಿರದ ಗೋದಾಮೊಂದರಿಂದ ಅಕ್ರಮ ಅಕ್ಕಿ ಸಾಗಿಸುತ್ತಿದ್ದರು. ಈ ವೇಳೆ ಪೊಲೀಸ್ ಇಲಾಖೆಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಸಂಖ್ಯೆ 112 ಕ್ಕೆ ಕರೆ ಬಂದಿದ್ದು, ಖಚಿತ ಮಾಹಿತಿ ಆಧಾರಿಸಿ ಎಆರ್‌ಎಸ್‌ಐ ಬಿ.ವಿ. ಮಲ್ಲನಗೌಡರ ನೇತೃತ್ವದಲ್ಲಿ ಸಿಎಚ್‌ಸಿ ಎಸ್.ಎ. ಬಸಾಪೂರ್ ಅವರು ದಾಳಿ ನಡೆಸಿದ್ದಾರೆ.

ಆರೋಪಿಗಳು ಅಕ್ರಮವಾಗಿ ಅಕ್ಕಿ ತುಂಬಿದ್ದ ವಾಹನವನ್ನು ಬೆನ್ನಟ್ಟಿದ ಪೊಲೀಸರು ಮೂವರು ಆರೋಪಿತರನ್ನು ಬಂಧಿಸಿ, 50 ಕೆ.ಜಿ. ತೂಕದ 80 ಚೀಲಗಳನ್ನು ವಶಪಡಿಸಿಕೊಂಡು ಗದಗ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಹೆಚ್ಚಿನ ತನಿಖೆ ಕೈಗೊಂಡ ಗ್ರಾಮೀಣ ಸಿಪಿಐ ರವಿ ಕಪ್ಪತ್ತನವರ, ಸಾಹಿತ್ಯ ಭವನದ ಹತ್ತಿರವಿರುವ ಗೋದಾಮಿನ ಮೇಲೆ ದಾಳಿ ನಡೆಸಿ, ಅಲ್ಲಿ ಸಂಗ್ರಹಿಸಿಟ್ಟಿದ್ದ 2,79,000 ರೂ. ಮೌಲ್ಯದ 126 ಕ್ವಿಂಟಾಲ್ ಅಕ್ಕಿ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದ್ದು, ಆರೋಪಿಗಳು ಎಲ್ಲಿಗೆ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.

ಶೂನ್ಯಕ್ಕೆ ಬಂದಿಳಿದ ಕೊರೊನಾ! ಜಿಲ್ಲೆಯಲ್ಲಿವೆ ಇನ್ನೂ 53 ಸಕ್ರೀಯ ಪ್ರಕರಣಗಳು

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:

2020ರ ಮೇ ತಿಂಗಳಲ್ಲಿ ಜಿಲ್ಲೆಗೆ ಕಾಲಿಟ್ಟ ಕೊರೊನಾ ಪ್ರಕರಣಗಳು, ಜೂನ್‌ನಿಂದ ನಿರಂತರವಾಗಿ ಹೆಚ್ಚಳವಾಗುತ್ತಲೇ ಬಂದವು. ಡಿಸೆಂಬರ್‌ನಿಂದ ಇಳಿಮುಖವಾದ ಕೊರೊನಾ ಪತ್ತೆ ಪ್ರಕರಣಗಳು 2021ರ ಜನೇವರಿ 7ರಂದು ಶೂನ್ಯಕ್ಕೆ ಬಂದು ನಿಂತಿದೆ‌.

ಜಿಲ್ಲೆಯಲ್ಲಿ ಇನ್ನೂ 53 ಸಕ್ರೀಯ ಪ್ರಕರಣಗಳಿದ್ದು, ಜನರು ಕೊಂಚ ನೆಮ್ಮದಿ ಪಡುವಂತಾಗಿದೆ.

ಧಾರವಾಡ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಾಚರಣೆ: ಶ್ರೀಗಂಧ ಕಳ್ಳರ ಬಂಧನ

0

ವಿಜಯಸಾಕ್ಷಿ ಸುದ್ದಿ ಧಾರವಾಡ: ಜಿಲ್ಲಾ ಅರಣ್ಯ ಇಲಾಖೆ ಸಿಬ್ಬಂದಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಸಾಗಿಸುತ್ತಿದ್ದ ಐವರನ್ನು ಬಂಧಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಕಾರವಾರ, ಧಾರವಾಡ ಜಿಲ್ಲೆಗಳಲ್ಲಿನ ಗಂಧದ ತುಂಡುಗಳನ್ನು ಕಳ್ಳರು ಗೂಡ್ಸ್ ವಾಹನದಲ್ಲಿ ಸಾಗಾಣೆ ಮಾಡುತ್ತಿದ್ದರು.

ಬಂಧಿತ ಐವರೂ ಬೆಳಗಾವಿ ಮೂಲದವರಾಗಿದ್ದಾರೆ. ಬಂಧಿತರಿಂದ 400 ಕೆಜಿ ಶ್ರೀಗಂಧದ ವಶ
ಒಂದು ಗೂಡ್ಸ್ ವಾಹನ ಮತ್ತು ಶಿಫ್ಟ್ ಕಾರು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಂಡಿರುವ ವಸ್ತುಗಳ ಮೌಲ್ಯ ಒಟ್ಟು 70 ಲಕ್ಷವಾಗಿದೆ.

error: Content is protected !!