Home Blog Page 3109

ಅಟ್ಟ ಮೇಲೆ ಒಲೆ ಉರಿತು, ಕೆಟ್ಟ ಮೇಲೆ ಬುದ್ದಿ ಬಂತು; ಹೆಚ್ಡಿಕೆಗೆ ಸಿಟಿ ರವಿ ಟಾಂಗ್

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ರೈತ ಚಳುವಳಿ ಬಗ್ಗೆ ಮಾತನಾಡಲ್ಲ, ರೈತರಿಗೆ ನಮ್ಮ ಸರ್ಕಾರ ಸಹಕಾರ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ರೈತರಿಗೆ ಕಿಸಾನ್ ಸಮ್ಮಾನ್, ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದೆ. ಸಾಯಿಲ್ ಹೆಲ್ತ್ ಕಾರ್ಡ್ ಮೂಲಕ ರೈತನ ಆದಾಯ ಡಬಲ್ ಮಾಡಿದ್ದೇವೆ.
ರೈತರು ಸತ್ಯ ಅರಿತುಕೊಳ್ಳಬೇಕು. ಅಲ್ಲದೇ, ಹಿಂದಿನ ಸರ್ಕಾರ ಮಾಡಿರುವ ಕೆಲಸ ನೋಡಿ ಎಂದರು.

ರೈತರಿಗೆ ಅತ್ಯಂತ ಹೆಚ್ಚು ಸಹಕಾರ ನೀಡಿದ್ದು ಬಿಜೆಪಿ, ದಲ್ಲಾಳಿಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ ಕ್ರಮವಹಿಸಿದೆ. ರೈತರ ಸಂಕಷ್ಟ ನಿವಾರಿಸುವುದೇ ನಮ್ಮ‌ಕೆಲಸ ಎಂದರು.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಟ್ಟ ಮೇಲೆ ಒಲೆ ಉರಿತು, ಕೆಟ್ಟ ಮೇಲೆ ಬುದ್ದಿ ಬಂತು ಎಂಬ ಗಾದೆ ಮಾತಿನ ಮೂಲಕ ಕುಮಾರಸ್ವಾಮಿ ಅವರಿಗೆ ಸಿಟಿ ರವಿ ಟಾಂಗ್ ಕೊಟ್ಟರು.

ಕಾಂಗ್ರೆಸ್ ಸಹವಾಸ ಮಾಡಬೇಡಿ, ಅದು ಉರಿಯುವ ಮನೆಯಾಗಿದೆ. ಬಿಜೆಪಿ ರಾಷ್ಟ್ರವಾದಿ ಪಕ್ಷ ದೇಶದ ಪರವಾಗಿದೆ ಎಂದ ಅವರು, ಸಿದ್ದರಾಮಯ್ಯ ಚಿತ್ರ ವಿಚಿತ್ರವಾಗಿ ಮಾತನಾಡುತ್ತಿದ್ದಾರೆ. ಗೋ ಹತ್ಯೆ ಸಂಬಂಧಿಸಿದಂತೆ ಕೆಟ್ಟ ಹೇಳಿಕೆ ಕೊಡುತ್ತಿದ್ದಾರೆ ಎಂದರು.

ಬಿಜೆಪಿಗೆ ಚುನಾವಣೆಯೇ ಮುಖ್ಯವಾಗಿದೆ. ಗ್ರಾಮ ಸ್ವರಾಜ್ ಕಾರ್ಯಕ್ರಮ ಬಗ್ಗೆ ಹೆಚ್ಡಿಕೆ ವ್ಯಂಗ್ಯ

ವಿಜಯಸಾಕ್ಷಿ ಸುದ್ದಿ, ಮೈಸೂರು

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಂತ್ರಿಗಳು ಗ್ರಾಮಗಳಿಗೆ‌ ಹೋಗುತ್ತಿದ್ದಾರೆ.
ಅವರಿಗೆ ಹಳ್ಳಿ ನೆನಪಾಗುತ್ತಿಲ್ಲ. ಚುನಾವಣೆಗಾಗಿ ಬಾಜಪ ಮುಖಂಡರು ಗ್ರಾಮ ಸ್ವರಾಜ್ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು

ಮೈಸೂರಿನಲ್ಲಿ ಮಾತನಾಡಿದ ಅವರು,
ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ತಾಲೂಕು ಕೇಂದ್ರಗಳಲ್ಲಿ ಮಾಡಬೇಡಿ. ಕಾಳಜಿಯಿದ್ದರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡಿ ಎಂದು ಸಲಹೆ ನೀಡಿದರು.

ಸಚಿವರು ನೆರೆ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಯಾವ ಇಲಾಖೆಗೆ ಯಾವ ಮಂತ್ರಿ ಇದ್ದಾರೆಂಬುವುದೇ ಗೊತ್ತಾಗುತ್ತಿಲ್ಲ. ಅದಕ್ಕಾಗಿ ಕನಿಷ್ಠ ಅರ್ಧ ಗಂಟೆಯಾದರೂ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಎಂದು ಹೆಚ್ಡಿಕೆ ವ್ಯಂಗ್ಯವಾಡಿದರು.

ಮಂತ್ರಿಗಳು ಗ್ರಾಮಗಳಲ್ಲಿನ‌ ಸಮಸ್ಯೆ ಬಗ್ಗೆ ಮಾತನಾಡುವುದನ್ನು ನಾನು ಎಲ್ಲೂ ಕಂಡಿಲ್ಲ. ಇವರಿಗೆ ಚುನಾವಣೆಯೇ ಮುಖ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಬೆಳಗಾವಿ ಪ್ರವಾಸ ಮಾಡುತ್ತಿದ್ದು,
ಕೇವಲ ಕೋರ್ ಕಮಿಟಿ ಸಭೆಗಾಗಿ ಹೋಗಿ ವಾಪಸ್ ಆಗುತ್ತಿದ್ದಾರೆ. ಬೆಳಗಾವಿಯಲ್ಲಿ ನೆರೆಯಿಂದಾಗಿರುವ ನಷ್ಟಕ್ಕೆ ಇನ್ನೂವರೆಗೂ ಪರಿಹಾರ ನೀಡಿಲ್ಲ. ಎಲ್ಲ‌ ಮಂತ್ರಿಗಳು ಅಲ್ಲಿಯೇ ಇದ್ದಾರೆ. ಆದರೂ ಅಲ್ಲಿನ ಸಮಸ್ಯೆ ಕೇಳುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಮಂತ್ರಿಗಳು ಅರ್ಧರಾತ್ರಿಯಲ್ಲಿ ಐಶ್ವರ್ಯ ಸಿಕ್ಕಂತೆ ವರ್ತಿಸುತ್ತಿದ್ದಾರೆ; ಹೆಚ್ ಡಿಕೆ ಕಿಡಿ

ವಿಜಯಸಾಕ್ಷಿ ಸುದ್ದಿ, ಮೈಸೂರು

ಜನರ ಕಷ್ಟಗಳಿಗೆ ಸ್ಪಂದಿಸಿ ಎಂದು ಉಸ್ತುವಾರಿ ಕೊಟ್ಟಿದ್ದರೆ, ಕೆಲ ಮಂತ್ರಿಗಳಿಗೆ ಅರ್ಧರಾತ್ರಿಯಲ್ಲಿಯೇ ಐಶ್ವರ್ಯ ಸಿಕ್ಕವರಂತೆ ಆಡುತ್ತಿದ್ದಾರೆ.
ಆಕಾಶನೇ ಕೈಗೆ ಸಿಕ್ಕಿದೆ ಎಂದು ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ತರವಲ್ಲದ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ನಗೆಪಾಟಲಿಗೆ ಇಡಾಗಬೇಡಿ. ದುಂದುವೆಚ್ಚದ ಮೂಲಕ ಸರ್ಕಾರದ ಹೊರೆಯನ್ನ ಯಾಕೆ ಹೆಚ್ಚಿಸುತ್ತೀರಾ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ
2006 ರಲ್ಲಿ ಕಷ್ಟಪಟ್ಟು ಕೆಲಸ ಮಾಡಿದೆ, ಅದರ ಫಲವನ್ನು ಯಾರೋ ಉಂಡರು ಎಂದು ಅಸಮಾಧಾನ ಹೊರ ಹಾಕಿದರು.

ಕೇಂದ್ರ ಸರ್ಕಾರ‌ ಕರ್ನಾಟಕವನ್ನು ಲೆಕ್ಕಕ್ಕಿಟ್ಟಿಲ್ಲ. ಅವರು ರಾಜ್ಯದಲ್ಲಿ ‌ಬಿಜೆಪಿ ಮುಖ್ಯಮಂತ್ರಿ‌ ಇದ್ದಾರೆಂಬುವುದನ್ನು ಅನ್ನೋದನ್ನ ಮರೆತಿದ್ದಾರೆ.
ರಾಜ್ಯ ಸರ್ಕಾರ ಮಾಡಿರುವ ನಿಗಮ ಹಾಗೂ ಪ್ರಾಧಿಕಾರದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯಲ್ಲಿ ಏನಿದೆ? ಕೆಲವು ನಿಗಮ ಮಂಡಳಿಗಲ್ಲಿ 50 ಲಕ್ಷ ರೂ.ಕೂಡಾ ಇಲ್ಲ. ಆದರೂ ಅವುಗಳ ಅಭಿವೃದ್ಧಿಗೆ ಕೋಟಿ ಕೋಟಿ ಬೇಕಾಗಿದೆ. ಇಂತಹ ಸಂದರ್ಭಗಳಲ್ಲಿ ಸರ್ಕಾರ ತೆಗೆದುಕೊಳ್ಳುವ ತೀರ್ಮಾನ ರಾಜ್ಯವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ ಎಂದರು.

ಸಿದ್ದರಾಮಯ್ಯ ಕದ್ದುಮುಚ್ಚಿ ಭೇಟಿ ಮಾಡೋದು ನನಗೆ ಗೊತ್ತಿಲ್ಲವೇ?; ಎಚ್ ಡಿಕೆ ಹೊಸ ಬಾಂಬ್

ವಿಜಯಸಾಕ್ಷಿ ಸುದ್ದಿ, ಮೈಸೂರು

ಸಿದ್ದರಾಮಯ್ಯ ಕದ್ದುಮುಚ್ಚಿ ಯಾರನ್ನೊ ಭೇಟಿ ಮಾಡಿದ್ದಾರೆ. ಅವರು ಯಾರನ್ನ ಭೇಟಿ ಮಾಡಿದ್ದಾರೆ? ಯಾವಾಗ ಭೇಟಿ ಮಾಡಿದ್ದಾರೆಂಬುವುದು ನನಗೆ ಗೊತ್ತಿಲ್ಲವೇ? ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸ್ಪೋಟಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಥರ ನಾನು ಕದ್ದುಮುಚ್ಚಿ ಭೇಟಿ ಮಾಡುವುದಿಲ್ಲ ಎಂದರು.

ನಾನು ಎಲ್ಲರನ್ನು ನೇರವಾಗಿ ಮತ್ತು ಮುಂಜಾನೆ ವೇಳೆಯಲ್ಲೇ ಎಲ್ಲರ ಮುಂದೆ ಭೇಟಿ ಮಾಡುತ್ತೇನೆ. ಸಿದ್ದರಾಮಯ್ಯನವರ ರೀತಿ ಕದ್ದುಮುಚ್ಚಿ ಭೇಟಿ ಮಾಡುವುದಿಲ್ಲ ಎಂದು ಹೇಳಿರುವ ಕುಮಾರಸ್ವಾಮಿ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದರು.

ಇದರೊಂದಿಗೆ ಸಿದ್ದರಾಮಯ್ಯನವರು ಯಾರನ್ನ ಭೇಟಿ ಮಾಡುತ್ತಾರೆ? ಅವರು ಯಾರಿರಬಹುದು ಎಂಬ ಗುಸು ಗುಸು ಚರ್ಚೆಗಳಿಗೆ ಹೆಚ್ ಡಿಕೆ ಅವರ ಹೇಳಿಕೆ ನಾಂದಿ ಹಾಡಿದಂತಾಗಿದೆ.

ಕರ್ನಾಟಕ ಬಂದ್ : ಕೊಪ್ಪಳ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

0

ಹೋರಾಟಗಾರರ ಬಂಧನ-ಬಿಡುಗಡೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ಕೊಪ್ಪಳದಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂದು ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಕೊಪ್ಪಳದ ಕೇಂದ್ರಿಯ ಬಸ್ ನಿಲ್ದಾಣದ ಮುಂದೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಲಾರಿ ಸಂಚಾರ ತಡೆಹಿಡಿದರು. ಬಸ್‌ನ ಮುಂದೆ ಅಡ್ಡ ಮಲಗಿ ಪ್ರತಿಭಟಿಸಿದರು. ರಾಜ್ಯ ಸರ್ಕಾರ ಮತ್ತು ಶಾಸಕ ಬಸವರಾಜ ಪಾಟೀಲ್ ಯತ್ನಾಳ ವಿರುದ್ಧ ಘೋಷಣೆ ಕೂಗಿದರು.

ಇದೇ ಸಂದರ್ಭದಲ್ಲಿ ಶಾಸಕ ಯತ್ನಾಳ ಅಣಕು ಶವ ಯಾತ್ರೆ ನಡೆಸಿದರು. ಶಾಸಕ ಯತ್ನಾಳ ಶವ ಇಟ್ಟು ಕಾರ್ಯಕರ್ತರು ಆಡಿಕೊಂಡು ಅತ್ತರು. ಗ್ರಾಮೀಣ ಪ್ರದೇಶದಲ್ಲಿ ಮೃತಪಟ್ಟಾಗ ಅಳುವುದನ್ನು ಮಿಮಿಕ್ರಿ ಮಾಡಿದ ಕಾರ್ಯಕರ್ತರು ನಂತರ ಅಶೋಕ ಸರ್ಕಲ್ ನಲ್ಲಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮರಾಠಾ ಪ್ರಾಧಿಕಾರ ರದ್ದು ಮಾಡಲು ಆಗ್ರಹಿಸಿದರಲ್ಲದೇ ಯತ್ನಾಳ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದರು ಗೂಂಡಾ ಸರಕಾರಕ್ಕೆ ದಿಕ್ಕಾರ ಎಂದು ಘೋಷಣೆ ಕೂಗಿದರು.

ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲು ಹೊರಟಿದ್ದ ಹೋರಾಟಗಾರರನ್ನು ಬಸವೇಶ್ವರ ಸರ್ಕಲ್ ನಲ್ಲಿ ಪೋಲಿಸರು ಬಂಧಿಸಿ ಕರೆದೊಯ್ದರು.

ಈ ಸಂದರ್ಭದಲ್ಲಿ ರೈತ ಸಂಘಟನೆ ಮತ್ತು ಕೂಲಿ ಕಾರ್ಮಿಕ ಸಂಘಟನೆಯವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬೆಳಗಿನ ಜಾವದಿಂದಲೇ ಕೊಪ್ಪಳದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕ್ರಮೇಣ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಜನಸಂಚಾರ ಎಂದಿನಂತೆ ಇತ್ತು. ಜನರೂ ಸಹ ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಕಂಡು ಬಂತು. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕೆ.ಎಸ್.ಕೊಡತಗೇರಿ, , ಆರ್.ವಿಜಯಕುಮಾರ್, ವಿರೂಪಾಕ್ಷಗೌಡ, ಅರ್ಜುನ ನಾಯಕ್, ರಾಜಶೇಖರ ರೆಡ್ಡಿ, ಚನ್ನಬಸವ ಜೇಕಿನ್, ರಮೇಶ ಕೋಟಿ, ರೈತ ಸಂಘಟನೆಯ ಶರಣಪ್ಪ ಕೊತ್ವಾಲ, ನಾಸೀರ್ ಕಂಠಿ, ಹನುಮಂತ ಹಳ್ಳಿಕೇರಿ ಮತ್ತಿತರರು ಇದ್ದರು.

ಬಸ್ ತಡೆದು ಪ್ರತಿಭಟನೆ; ಕನ್ನಡಪರ ಹೋರಾಟಗಾರರ ಬಂಧನ

0

ವಿಜಯಸಾಕ್ಷಿ ಸುದ್ದಿ, ಗದಗ

ನಗರಾದ್ಯಂತ ಕರ್ನಾಟಕ ಬಂದ್ ಕ್ಷಣ ಕ್ಷಣಕ್ಕೂ ತೀವ್ರತೆ ಪಡೆದುಕೊಳ್ಳುತ್ತಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಗೊಳಿಸುವಂತೆ ಆಗ್ರಹಸಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೋಯ್ದಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು, ದಿಢೀರನೇ ಡಿಸಿ ಕಚೇರಿಯ ಮುಂಭಾಗದಲದಲಿರುವ ಗದಗ-ಹುಬ್ಬಳ್ಳಿ ರಸ್ತೆ ಕಡೆ ಎದ್ದು ಬಂದು ಬಸ್ ತಡೆದಿದ್ದಾರೆ.

ಪೊಲೀಸರು ಎಷ್ಟೇ ಹೇಳಿದರು ಕೇಳದ ಕಾರ್ಯಕರ್ತರನ್ನು ಬಂಧಿಸಿ ಕೊನೆಗೆ ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು.

ಟಿಪ್ಪುಸುಲ್ತಾನ್ ಸರ್ಕಲ್ ನಲ್ಲಿ ಹೈಡ್ರಾಮಾ; ಕೂದಲೆಳೆ ಅಂತರದಲ್ಲಿ ಪಾರಾದ ಕರವೇ ಕಾರ್ಯಕರ್ತರು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕರವೇ ಕಾರ್ಯಕರ್ತರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಚೆನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತುರು ಟಿಪ್ಪು ಸುಲ್ತಾನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರ ಪ್ರತಿಕೃತಿ ದಹಿಸಲು ಯತ್ನಿಸಿದರು. ಪ್ರತಿಕೃತಿ ದಹಿಸದಂತೆ ಪೊಲೀಸರು ತಡೆಯಲು ಯತ್ನಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕರವೇ ಕಾರ್ಯಕರ್ತರ ನಡುವೆ ನೂಕು ನುಗ್ಗಲು ನಡೆಯಿತು.

ಕೈಯಲ್ಲಿದ್ದ ಪ್ರತಿಕೃತಿ ಕಸಿಯಲು ಯತ್ನಿಸಿದ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರ್ಯಕರ್ತರು ಪರದಾಡಿದರು. ಕೆಲ ಹೊತ್ತು ಟಿಪ್ಪು ಸುಲ್ತಾನ್ ವೃತ್ತದಲ್ಲಿ ಹೈಡ್ರಾಮಾ ನಡೆಯಿತು. ಎಷ್ಟೇ ಪ್ರಯತ್ನಸಿದರು ಹಿಡಿದ ಹಠ ಬಿಡದ ಕರವೇ ಕಾರ್ಯಕರ್ತರು ಯತ್ನಾಳ ಅವರ ಪ್ರತಿಕೃತಿ ದಹಿಸಿದರು. ನಂತರ ಪೊಲೀಸರು ನೀರು ಸುರಿದು ಬೆಂಕಿ ನಂದಿಸಿದರು.

ಪ್ರತಿಕೃತಿ ದಹಿಸಲು ಪೆಟ್ರೋಲ್ ಸುರಿದ ಕಾರ್ಯಕರ್ತರು ಬೆಂಕಿ ಹಚ್ಚಿದರು. ಈ ವೇಳೆ ಒಮ್ಮೆಲೆ ಹೊತ್ತಿಕೊಂಡ ಬೆಂಕಿ ಆಳೆತ್ತರಕ್ಕೆ ದಗ್ಗಂತೆ ಉರಿಯಿತು. ಪಕ್ಕದಲ್ಲೇ ಇದ್ದ ಕಾರ್ಯಕರ್ತರು ದಢೀರ್ ಅಂತಾ ಹಿಂದೆ ಸರಿದಿದ್ದರಿಂದಾಗಿ ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದೆ. ಇದರಿಂದ ಕೊದಲೆಳೆ ಅಂತರದಲ್ಲಿ ಕರವೇ ಕಾರ್ಯಕರ್ತರು ಪಾರಾಗಿದ್ದಾರೆ.

ಕರವೇ ಜಿಲ್ಲಾಧ್ಯಕ್ಷ ಹನಮಂತ ಅಬ್ಬಿಗೇರಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ನಿಂಗನಗೌಡ ಮಾಲೀಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಗೋಡಿ, ಕರವೇ ಮುಖಂಡರಾದ ಹನುಮಂತ ಪೂಜಾರ, ಬಸವರಾಜ ಮೇಟಿ, ವಿರುಪಾಕ್ಷಿ ಹಿತ್ತಲಮನಿ, ಆಶು ಜೂಲಗುಡ್ಡ, ನಾಗಪ್ಪ ಅಣ್ಣಿಗೇರಿ, ಮಹಾದೇವಿ ದೊಡ್ಡಗೌಡರ ಸೇರಿದಂತೆ ಅನೇಕರು ಇದ್ದರು.

ಜಿಲ್ಲೆಯಲ್ಲಿ ತೀವ್ರಗೊಂಡ ಹೋರಾಟ; ವಾಹನ ತಡೆದು ಕರವೇ ಪ್ರತಿಭಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಮರಾಠಾ ಪ್ರಾಧಿಕಾರದ ಹೆಸರಲ್ಲಿ ಕನ್ನಡಿಗರನ್ನು ನಿಂದಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದರು, ವಾಹನ ಸಂಚಾರ ಎಂದಿನಂತೆ ನಡೆದಿತ್ತು. ಇದರಿಂದ ಆಕ್ರೋಶಗೊಂಡ ಕರವೇ ಕಾರ್ಯಕರ್ತರು ಲಾರಿ ಅಡ್ಡಗಟ್ಟಿ ಚಾಲಕರನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಪೊಲೀಸರ ಮಧ್ಯೆ ವಾಕ್ಸಮರ ನಡೆಯಿತು. ರಾಜ್ಯ ಸರ್ಕಾರ, ಮಹಾರಾಷ್ಟ್ರ ಪರವಾಗಿ ಕೆಲಸ ಮಾಡಬೇಡಿ. ಕನ್ನಡಿಗರ ಪರ ಕೆಲಸ ಮಾಡಿ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.
ಇದರಿಂದ ಚೆನ್ನಮ್ಮ ವೃತ್ತದಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡೆತಡೆಯುಂಟಾಯಿತು. ಲಾರಿ ಮೇಲೆ ಕಲ್ಲು ತೂರಲು ಯತ್ನಿಸಿದ ಕಾರ್ಯಕರ್ತರನ್ನು ತಡೆದು ಪರಿಸ್ಥಿತಿ ತಿಳಿಗೊಳಿಸಿದರು.

ಅಲ್ಲದೇ, ಡಿಫೋದಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ಗದಗ-ಡೋಣಿ ಬಸ್ ಹಿಂದಿರುಗಿಸಿದರು. ಡಿಪೋದಿಂದ ಯಾವುದೇ ಬಸ್ ಬಿಡಬಾರದು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ಈಗಾಗಲೇ ತೆಗೆದಿರುವ ಹೋಟೆಲ್ಗಳನ್ನು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಕರವೇ ಕಾರ್ಯಕರ್ತರು ಯತ್ನಿಸಿದರು. ಅಂಗಡಿ ಮುಚ್ಚುವಂತೆ ಮನವಿ ಮಾಡಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿಬೇಡಿ. ಅವರಿಗೆ ಆಸಕ್ತಿ ಇದ್ದರೆ ಮುಚ್ಚುತ್ತಾರೆ ಎಂದರು.

ಇದರಿಂದ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಬೆಂಬಲಿಸಿ ಮಾಡುತ್ತಿರುವ ಹೋರಾಟ ತೀವ್ರತೆ ಪಡೆದುಕೊಂಡಂತಾಗಿದೆ.

ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಹೋರಾಟಗಾರರು; ಪೊಲೀಸರ ಜೊತೆಗೆ ಮಾತಿನ ಚಕಮಕಿ

0

ವಿಜಯಸಾಕ್ಷಿ ಸುದ್ದಿ, ಗದಗ

ಮರಾಠ ಅಬಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿಂದು ಬೆಳ್ಳಂಬೆಳಗ್ಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ನಗರದ ಮುಳಗುಂದ ನಾಕಾದಲ್ಲಿ ಮಾನವ ಸರಪಳಿ ನಿರ್ಮಿಸಿ ಗದಗ-ಹುಬ್ಬಳ್ಳಿ ರಸ್ತೆ ತಡೆದು ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು. ಈ ಮೂಲಕ ಪ್ರತಿಭಟನೆಯ ಕಾವು ಜೋರಾಗಿತ್ತು.

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿರುವ ಕನ್ನಡಪರ ಹೊರಾಟಗಾರರು ತಮಟೆ ಭಾರಿಸಿ, ಘೋಷಣೆ ಕೂಗುವ ಮೂಲಕ ಕನ್ನಡ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮರಾಠ ಅಭಿವೃದ್ಧಿ ನಿಗಮ ಹಿಂಪಡೆಯುವಂತೆ ಆಗ್ರಹಿಸಿದ ಅವರು, ಬಾಯಿ ಬಾಯಿ ಬಡೆದುಕೊಂಡು ಬೊಬ್ಬೆ ಹೊಡೆದು ಹೋರಾಟ ನಡೆಸಿದರು.

ನಗರದ ಮುಳಗುಂದ ನಾಕಾದಲ್ಲಿ ಟೈರಿಗೆ ಬೆಂಕಿ ಹಚ್ಚಲು ಸಿದ್ಧತೆ ಮಾಡಿಕೊಂಡಿದ್ದ ಸಂಘಟನೆ ಕಾರ್ಯಕರ್ತರಿಂದ ನಗರಸಭೆ ಸಿಬ್ಬಂದಿಗಳಳು ಟೈರ್ ಗಳನ್ನು ವಶಕ್ಕೆ ಪಡೆದರು. ಗದಗ-ಹುಬ್ಬಳ್ಳಿ ರಸ್ತೆ ತಡೆ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು.

ಅದರಂತೆ ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಜಿಲ್ಲೆಯಲ್ಲಿ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಅಹಿತರ ಘಟನೆಗಳು ಸಂಭವಿಸದಂತೆ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇನ್ನೂ ನಗರದಲ್ಲಿ ಬಸ್ ಸಂಚಾರ, ವಾಹನ ಓಡಾಟ, ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಜನಜೀವನ ಎಂದಿನಂತೆ ಇದೆ.

ರಾಜ್ಯಪಾಲರು ಈ ಸರಕಾರವನ್ನು ವಜಾಗೊಳಿಸಲಿ: ತಂಗಡಗಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರಕಾರ ಅಧಿಕಾರ ಉಳಿಸಿಕೊಳ್ಳಲು ಸಮಯ ಪೋಲು ಮಾಡುತ್ತಿದೆಯೇ ವಿನಃ ಅಭಿವೃದ್ಧಿಯತ್ತ ಕಿಂಚಿತ್ತೂ ಗಮನ ನೀಡುತ್ತಿಲ್ಲ. ಇಂಥ ಬೇಜವಾಬ್ದಾರಿ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಲಿ. ಸ್ಥಿರ ಸರಕಾರ ಆಡಳಿತ ನಡೆಸಲು ಅವಕಾಶ ಮಾಡಿಕೊಡಲಿ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ತಿಳಿಸಿದರು.

ಕೊಪ್ಪಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ ಮೊದಲು ತಮ್ಮದನ್ನು ನೋಡಿಕೊಳ್ಳಲಿ. ಗೆದ್ದ ಪಕ್ಷವನ್ನು ಬಿಟ್ಟು ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋದ ಇವರು ಹೇಡಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಲ ತೀರಿಸಲಾಗದೇ ಗೌರವದ ಕಾರಣಕ್ಕಾಗಿ ಅನ್ನದಾತ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾನೆ. ಸರಕಾರ ಮತ್ತು ಜನಪ್ರತಿನಿಧಿಗಳು ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಸಚಿವ ಬಿ.ಸಿ.ಪಾಟೀಲರಿಗೆ ಯಾವುದೇ ಜವಾಬ್ದಾರಿ ಇಲ್ಲ. ದಯಮಾಡಿ ಬಿಜೆಪಿ ಬಿ.ಸಿ.ಪಾಟೀಲರ ರಾಜೀನಾಮೆ ಪಡೆದು ಮನೆಗೆ ಕಳಿಸಲಿ ಎಂದು ಅವರು ಒತ್ತಾಯಿಸಿದರು.

ರಾಜ್ಯದಲ್ಲಿ ಸರಕಾರ ಇದ್ದರೂ ಸತ್ತಂತಿದೆ. ಇಂಥ ಬೇಜವಾಬ್ದಾರಿ ಮಂತ್ರಿಗಳನ್ನು ಮಂತ್ರಿಮಂಡಲದಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರು ಬೇಜವಾಬ್ದಾರಿ ಆಡಳಿತ ನಡೆಸುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದೆ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು.

error: Content is protected !!