Home Blog Page 3115

ಅಜಿತ್ ಪವಾರ್ ಗೆ ತಲೆನೇ ಇಲ್ಲಾ: ಸಚಿವ ಪ್ರಭು ಚವ್ಹಾಣ ಆಕ್ರೋಶ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬೆಳಗಾವಿ ನಮಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ವಿರುದ್ಧ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಗದಗನ ಪಶು ವೈದ್ಯಕೀಯ ವಿಶ್ವವಿದ್ಯಾಲಯ ದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾತನಾಡಿದ ಸಚಿವ ಪ್ರಭು ಚವ್ಹಾಣ, ಅಜಿತ್ ಪವಾರ್ ಗೆ ತಲೆನೇ ಇಲ್ಲಾ, ಆತ ಡಬಲ್ ಗೇಮ್ ವ್ಯಕ್ತಿ ಅಂತ ಕಿಡಿ ಕಾರಿದರು. ಗಡಿ ವಿಷಯದಲ್ಲಿ ರಾಜ್ಯದ ಒಂದಿಂಚು ಜಾಗೆಯನ್ನು ಬಿಟ್ಟು ಕೊಡಲ್ಲಾ ಎಂದರು.

ಕರ್ನಾಟಕದ ಜಾಗೆ ನಮ್ಮದು ಅನ್ನುವುದು ದಡ್ಡತನ ಪರಮಾವಧಿ‌. ಅಜಿತ್ ಪವಾರ್ ಡಬಲ್ ಸ್ಟ್ಯಾಂಡರ್ಡ್‌ ವ್ಯಕ್ತಿ, ಅವರಿಗೆ ತಲೆ ಇಲ್ಲಾ ರಾತ್ರೋರಾತ್ರಿ ನಾಯಕನಾದವನು. ಅಂತವನ ಮಾತಿಗೆ ಕಿಮ್ಮತ್ತು ಕೊಡುವುದು ಅಗತ್ಯವಿಲ್ಲಾ ಅಂತಾ ವಾಗ್ದಾಳಿ ನಡೆಸಿದರು.

ಗಡಿ ಬಗ್ಗೆ ಸಾಂಗ್ಲಿ, ಸೊಲ್ಲಾಪುರಗೆ ಬಂದು ಮಾತನಾಡುತ್ತೇನೆ ಎಂದು ಉದ್ದಟತನ ತೋರಿದ ಅಜಿತ ಪವಾರ್ ಗೆ ಧೈರ್ಯವಿದ್ದರೆ ಕರ್ನಾಟಕ ಕ್ಕೆ ಬಂದು ಮಾತನಾಡಲಿ ಎಂದು ಸವಾಲು ಹಾಕಿದರು.

ಅಜಿತ ಪವಾರನದು ಬರಿ ಬೆಂಕಿ ಹಚ್ಚುವ ಕೆಲಸ. ಅದೇ ಅವರ ಉದ್ಯೋಗ, ಮಹಾರಾಷ್ಟ್ರದಲ್ಲೂ ಬರಿ ಬೆಂಕಿ ಹಚ್ಚುವ ಕೆಲಸ ಮಾಡ್ತಾನೆ ಬಂದಿದ್ದಾರೆ. ಮಹಾರಾಷ್ಟ್ರ ಜನರೇ ಕಿಮ್ಮತ್ತು ಕೊಡಲ್ಲಾ, ಇನ್ನು ಕರ್ನಾಟಕ ಜನ ಕಿಮ್ಮತ್ತು ಕೊಡೊದೆ ಇರೋದು ಯಾವ ಲೆಕ್ಕ ಅಂತ ಸಚಿವ ಪ್ರಭು ವ್ಯಂಗ್ಯ ವಾಡಿದರು.

ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗ್ತಾ ಬಂದಿದೆ.
ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.

ಶಿರಾ, ಆರ್‌ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದ್ರೆ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗ್ತಾ ಬಂದಿದೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.
ಶಿರಾ, ಆರ್‌ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದ್ರೆ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ‌ಗದಗ: ಗೆಳೆಯರೊಂದಿಗೆ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರಲ್ಲಿ ಮುಳಗಿದ ದುರ್ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯ ತೀರ್ಥ ಹೊಂಡದಲ್ಲಿ ಈಜಲು ಹೋಗಿದ್ದ ಬ್ಯಾಡಗಿಯ ಹರ್ಷವರ್ಧನ ಅರಕೇರಿ (15) ಎಂಬಾತನೇ ನೀರಲ್ಲಿ ಮುಳಗಿದಾತ.

ದೀಪಾವಳಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಹರ್ಷವರ್ಧನ ಇಂದು ಪಕ್ಕದ ಮನೆಯ ಗೆಳೆಯರೊಂದಿಗೆ ಹೊಂಡಕ್ಕೆ ಈಜಲು ಹೋಗಿದ್ದ.

ಸುದ್ದಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರೊಂದಿಗೆ ಹರ್ಷವರ್ಧನಗಾಗಿ ಶೋಧ ಕಾರ್ಯ ನಡೆಸಿದ್ದು, ಕುಟುಂಬದವರ ಆಕ್ರಂದನ ಹೇಳತೀರಾದಾಗಿದೆ. ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಭವಿಷ್ಯದಲ್ಲಿ ತಂತ್ರಜ್ಞಾನ ಮತ್ತಷ್ಟು ಅಭಿವೃದ್ಧಿ: ಪ್ರಧಾನಿ ಮೋದಿ

ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೋವಿಡ್-19 ಕಾಲಘಟ್ಟದಲ್ಲಿ ಡಿಟಿಟಲ್ ತಂತ್ರಜ್ಞಾನ ಮತ್ತಷ್ಟು ಮುನ್ನೆಲೆಗೆ ಬಂದಿದೆ. ಭವಿಷ್ಯದಲ್ಲಿ ಇನ್ನಷ್ಟು ತಂತ್ರಜ್ಞಾನ ಅಭಿವೃದ್ಧಿ ಯಾಗಲಿದೆ. ಹೀಗಾಗಿ ನಮ್ಮ ಮಾಹಿತಿ ಮಾಹಿತಿ ಹಾಗೂ ದತ್ತಾಂಶ ಸಂರಕ್ಷಿಸಿಕೊಳ್ಳಲು‌ ಸೈಬರ್ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಆರಂಭವಾದ ಬೆಂಗಳೂರು ಟೆಕ್ ಸಮ್ಮೇಳನಕ್ಕೆ ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ ಯುಗದಲ್ಲಿ ನಾವಿದ್ದರೂ ಸೈಬರ್ ಭದ್ರತೆ ಹಾಗೂ ದತ್ತಾಂಶ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.
ಐದು ವರ್ಷದ ಹಿಂದೆ ಡಿಜಿಟಲ್ ಇಂಡಿಯಾ ಯೋಜನೆಗೆ ಚಾಲನೆ ನೀಡಲಾಯಿತು. ಈ ಕ್ಷೇತ್ರದಿಂದ ಜನರಿಗೆ ಹೆಚ್ಚಿನ ಲಾಭವಾಗುತ್ತಿದೆ. ಬಡ, ಮಧ್ಯಮ ವರ್ಗದ ಜತೆಗೆ ಮೇಲ್ವರ್ಗದವರಿಗೂ ಡಿಜಿಟಲ್ ಅನಿವಾರ್ಯವಾಗಿದೆ. ಒಂದೇ ಬಟನ್ ಕ್ಲಿಕ್ ನಿಂದ ರೈತರ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂ. ಸಬ್ಸಿಡಿ ಹಾಗೂ ಇತರ ಹಣಕಾಸನ್ನು ವರ್ಗಾಯಿಸಲಾಗಿದೆ. ಕಳೆದ ತಿಂಗಳು ದೇಶದಲ್ಲಿ 2 ಶತಕೋಟಿ ವಹಿವಾಟು ಡಿಜಿಟಲ್ ಮೂಲಕ ನಡೆದಿದೆ. ಇದನ್ನು ಗಮನಿಸಿದರೆ ನಮ್ಮ‌ಸರಕಾರ ತಂದಿರುವ ಯೋಜನೆ ಪ್ರತಿಯೊಬ್ಬರಿಗೂ ಅನುಕೋಲ ಮಾಡಿಕೊಟ್ಟಿದೆ. ತಂತ್ರಜ್ಞಾನದ ಹೊಸ ಸವಾಲುಗಳನ್ನು ಎದುರಿಸಿ ನವೀನ ಆವಿಷ್ಕಾರಕ್ಕೆ ಮುಂದಾಗಬೇಕು. ಜಾಗತಿಕ ಮಟ್ಟದಲ್ಲೂ ಭಾರತ ಹೆಚ್ಚಿನ ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದು, ಇದನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಸರಕಾರ ಎಲ್ಲ ರೀತಿಯ ನೆರವು ಹಾಗೂ ಸಹಕಾರವನ್ನು ನೀಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಸಿ.ನಾರಾಯಣಗೌಡ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗನಲ್ಲಿ ಬಡ್ಡಿ ಮಾಫಿಯಾ: ಗ್ರಾಪಂ ಮಾಜಿ ಅಧ್ಯಕ್ಷೆ ಆತ್ಮಹತ್ಯೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬಡ್ಡಿ ಮಾಫಿಯಾಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಸಂಗವ್ವ ಮೆಣಸಿನಕಾಯಿ (45) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದವರು.

ಶ್ರೀಶೈಲಪ್ಪ ಚಕ್ರಣ್ಣವರ್ ಮತ್ತು ಈಕೆಯ ಪತ್ನಿ ಯಶೋಧಾ ಚಕ್ರಣ್ಣವರ ಮತ್ತು ಮಂಜುನಾಥ್ ಹಿರೇಮಠ ಎಂಬುವರು ಸಂಗವ್ವ ಮೆಣಸಿನಕಾಯಿ ಪತಿ ಈರಪ್ಪನಿಗೆ ಬಡ್ಡಿ ರೂಪದಲ್ಲಿ ಹಣ ನೀಡಿದ್ದರು. ಅದಕ್ಕಾಗಿ ಮೂರು ಎಕರೆ ಜಮೀನನ್ನು ಅಡ ಇಡಲಾಗಿತ್ತು. ಅಡ ಇಟ್ಟಿದ್ದ ಜಮೀನನ್ನು ಶ್ರೀಶೈಲಪ್ಪ ಚಕ್ರಣ್ಣವರ ಬೇರೆ ಯವರಿಗೆ ಮಾರಿದ್ದಾರೆ.

ಜಮೀನನ್ನು ಮೋಸದಿಂದ ಕಿತ್ತುಕೊಂಡಿದ್ದು, ಹಾಗೂ ಹಣ ಕೊಡುವಂತೆ ಬೆದರಿಕೆ ಹಾಕಿದ್ದರಿಂದ ನೊಂದಿದ್ದ ಸಂಗವ್ವ ಮೆಣಸಿನಕಾಯಿ ಶನಿವಾರ ಸೀಮೆ ಎಣ್ಣೆ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ತೀವ್ರ ಗಾಯಗೊಂಡಿದ್ದ ಸಂಗವ್ವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ ಮೃತಪಟ್ಟಿದ್ದಾರೆ.

2015 ರಲ್ಲಿ ಮೃತ ಸಂಗವ್ವಳ ಪತಿ ಈರಪ್ಪನಿಗೆ ಶ್ರೀಶೈಲಪ್ಪ ಚಕ್ರಣ್ಣವರ ಸುಮಾರು 5 ಲಕ್ಷ ರೂ. ಬಡ್ಡಿ ಸಾಲ ಕೊಟ್ಟಿದ್ದರು. ಬಡ್ಡಿ ಸಾಲಕ್ಕೆ ಪ್ರತಿಯಾಗಿ ತಮ್ಮ ಹೊಲವನ್ನು ಕಬ್ಜಾಕ್ಕೆ ಪಡೆದಿದ್ದರು. ಕಬ್ಜಾಕ್ಕೆ ಪಡೆಯುವಾಗ ಸಹಿ ಮಾಡಿಸಿಕೊಂಡಿದ್ದನ್ನೇ ಬಳಸಿಕೊಂಡು 3 ಎಕರೆ ಜಮೀನನ್ನು ಬೇರೆಯವರಿಗೆ ಮಾರಿದ್ದಾರೆ. ಪಹಣಿ ಪತ್ರದಲ್ಲಿ ಬೇರೆಯವರ ಹೆಸರು ದಾಖಲಾಗಿದೆ.

ಬಡ್ಡಿ ವ್ಯವಹಾರ ದಲ್ಲಿ ಮೋಸ ಮಾಡಿ ಜಮೀನನ್ನು ಬೇರೆ ಯವರಿಗೆ ಮಾರಿದ್ದರಿಂದ ಬೇಸತ್ತ ಸಂಗವ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಮೃತಳ ಪತಿ ಈರಪ್ಪ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ.ಟಿ.ಬಿ.‌ಸೊಲಬಕ್ಕನವರ ನಿಧನ

ವಿಜಯಸಾಕ್ಷಿ ಸುದ್ದಿ ಹಾವೇರಿ
ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ರಂಗಕರ್ಮಿ, ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ.ಟಿ.ಬಿ. ಸೊಲಬಕ್ಕನವರ (73) ಗುರುವಾರ ಬೆಳಗಿನ ಜಾವ ನಿಧನರಾದರು.
ಈಚೆಗೆ ಅನಾರೋಗ್ಯ ಕಾರಣದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಗುರುವಾರ ಬೆಳಗ್ಗೆ 2.40ರ ಸುಮಾರಿಗೆ ನಿಧನರಾದರು.
ಮೃತರು ಪತ್ನಿ ಸಾವಿತ್ರೆಮ್ಮ, ಪುತ್ರಿ ವೇದಾರಾಣಿ, ಪುತ್ರ ರಾಜಹರ್ಷ ಹಾಗೂ ಅಳಿಯ, ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಶಿಗ್ಗಾಂವಿಯ ರಾಕ್ ಗಾರ್ಡನ್ ಪಕ್ಕದಲ್ಲಿ ನೆರವೇರಲಿದೆ.

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಿ: ಅಬ್ದುಲ್ ರಜಾಕ್ ನದಾಫ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕರ್ನಾಟಕದಲ್ಲಿ ಮುಸ್ಲಿಂ ಜನಸಂಖ್ಯೆಯಲ್ಲಿ ಬರುವ ಸುಮಾರು ಅರ್ಧದಷ್ಟು ಪಿಂಜಾರ, ನದಾಫ ಇರುವ ಸಮುದಾಯಕ್ಕೆ ಆಂಧ್ರದಲ್ಲಿ ಈಚೆಗೆ ಮಾಡಿರುವಂತೆ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಕರ್ನಾಟಕ ಪಿಂಜಾರ್/ನದಾಫ/ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಅಬ್ದುಲ್‌ರಜಾಕ್ ನದಾಫ ಆಗ್ರಹಿಸಿದರು.

ಕೊಪ್ಪಳದ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮುಸ್ಲಿಂ ಸಮುದಾಯದಲ್ಲಿ ಅರ್ಧದಷ್ಟು ಜನಸಂಖ್ಯೆ ಪಿಂಜಾರ ನದಾಫ, ಮನ್ಸೂರಿ, ದುದೇಕುಲಾ ಸಮಯದಾಯವಿದ್ದು, ಈವರೆಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರ ಸೌಲಭ್ಯಗಳಿಂದ ವಂಚಿತವಾಗಿದೆ ಎಂದು ದೂರಿದರು.

ಅಲೆಮಾರಿ ಎಂದು ಗುರುತಿಸಿರುವ ಈ ಸಮುದಾಯದ ಜನರಿಗೆ ಸದ್ಯ ಪ್ರವರ್ಗ 1ಕ್ಕೆ ಮೀಸಲಾತಿ ಸೌಲಭ್ಯಗಳು ಎಲ್ಲ ಜಿಲ್ಲೆಯಲ್ಲಿ ಸಿಗುತ್ತಿಲ್ಲ. 2009-10ರಲ್ಲಿ ಡಾ.ಸಿ.ಎಸ್.ದ್ವಾರಕನಾಥ ಆಯೋಗವು ಸರಕಾರಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂಬ ಅಂಶ ಇದೆ. ವರದಿಯನ್ನಾಧರಿಸಿ ಈಗಾಗಲೇ ವಿಶ್ವಕರ್ಮ, ಲಂಬಾಣಿ, ಭೋವಿ, ಉಪ್ಪಾರ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗಿದೆ. ಆದರೆ ಪಿಂಜಾರ ಅಭಿವೃದ್ಧಿ ನಿಗಮ‌ ಸ್ಥಾಪನೆಗೆ ಮುಂದಾಗದಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬರುವ ದಿನಗಳಲ್ಲಿ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಹುಸೇನ್‌ಸಾಬ್ ನದಾಫ, ಸನ್ನೀಕ್ ಕುರಗೋಡ ಇದ್ದರು.

ಮರಾಠ ಸಮುದಾಯದ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಗೆ ಕರವೇ ತೀವ್ರ ಖಂಡನೆ

0

ವಿಜಯಸಾಕ್ಷಿ ಸುದ್ದಿ ಗಂಗಾವತಿ
ರಾಜ್ಯ ಸರ್ಕಾರವು ಮರಾಠ ಸಮುದಾಯದ ಅಭಿವೃದ್ಧಿಗಾಗಿ ಪ್ರಾಧಿಕಾರ ಸ್ಥಾಪನೆಗೆ ಅಸ್ತು ಎಂದಿರುವುದು ತೀವ್ರ ಖಂಡನೀಯವಾಗಿದೆ ಎಂದು ಕರವೇ ಕೊಪ್ಪಳ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ ಕಿಡಿ ಕಾರಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮರಾಠರು ಕರ್ನಾಟಕದ ನಾಡು – ನುಡಿ , ನೆಲ – ಜಲ , ಭಾಷೆಯ ವಿಷಯದಲ್ಲಿ ಕನ್ನಡಿಗರ ವಿರುದ್ಧ ಧ್ವನಿ ಎತ್ತುವ ಮೂಲಕ ಗಡಿ ನಾಡು ಬೆಳಗಾವಿಯಲ್ಲಿ ಮಹಾರಾಷ್ಟ್ರದ ಜೊತೆಗೆ ಕೈಜೋಡಿಸುವ ಮೂಲಕ ಕನ್ನಡ ನಾಡಿಗೆ ತೀವ್ರವಾಗಿ ಅವಮಾನವೆಸಗಿರುತ್ತಾರೆ . ಇಂತಹ ಸಮಾಜದ ಅಭಿವೃದ್ಧಿಗಾಗಿ ನಮ್ಮ ರಾಜ್ಯ ಸರ್ಕಾರ ೫೦ ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಟ್ಟು ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಸ್ತು ಎಂದಿರುವುದು ತೀವ್ರ ವಿಷಾದನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ಸಂಘಟನೆಗಳು ಹುಟ್ಟಿಕೊಂಡಿರುವುದೇ ಕನ್ನಡಿಗರ ವಿರುದ್ಧ ಧ್ವನಿ ಎತ್ತಲು. ರಾಜ್ಯದ ಗಡಿ ವಿಷಯದಲ್ಲಿ ಮಹಾರಾಷ್ಟ್ರವು ಬೆಳಗಾವಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ಇಲ್ಲಿಯವರೆಗೆ ಹಿಂದಿನ ಸರ್ಕಾರಗಳು ವೊಟ್ ಬ್ಯಾಂಕ್ ರಾಜಕಾರಣ ಮಾಡುವ ಮೂಲಕ ಮೂಲೆಗುಂಪಾಗಿವೆ. ತಮ್ಮ ಸರ್ಕಾರವು ಕೂಡ ಇದೇ ದಾರಿ ಹಿಡಿದಿರುವುದು ತುಂಬಾ ನೋವಿನ ಸಂಗತಿಯಾಗಿದೆ. ಪ್ರತಿ ಬಾರಿ ನಮ್ಮ ಕನ್ನಡ ರಾಜ್ಯೋತ್ಸವ ದಿನದಂದು ಕಪ್ಪುಬಾವುಟ ಪ್ರದರ್ಶಿಸುವ ಇಂತಹ ಸಂಘಟನೆಗಳು ಹಾಗೂ ಸಮುದಾಯಕ್ಕೆ ನಮ್ಮ ರಾಜ್ಯದ ಅನುದಾನದ ಅವಶ್ಯಕತೆ ಇದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ಕನ್ನಡಿಗರಿಗೆ ಅವಮಾನ, ದಬ್ಬಾಳಿಕೆ, ದೌರ್ಜನ್ಯ ಎಲ್ಲವನ್ನು ಮರೆತು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುತ್ತಿರುವುದನ್ನು ಕೂಡಲೇ ರಾಜ್ಯ ಸರ್ಕಾರ ಇದೇ ನವೆಂಬರ್ -೨೭ ರೊಳಗೆ ಕೈಬಿಡಬೇಕು . ಇಲ್ಲವಾದಲ್ಲಿ ನಮ್ಮ ಕರವೇ ಸಂಘಟನೆಯು ರಾಜ್ಯಾಧ್ಯಂತ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಕರ್ನಾಟಕ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

error: Content is protected !!