Home Blog Page 3120

ಮದುವೆಗಳಲ್ಲಿ ಹೆಚ್ಚು ಜನ ಸೇರಿದರೆ ಕಠಿಣ ಕ್ರಮ; ಶ್ರೀನಿವಾಸಮೂರ್ತಿ

ಕೋವಿಡ್ ನಿಯಮ ಉಲ್ಲಂಘನೆ ಬೇಡ

ವಿಜಯಸಾಕ್ಷಿ ಸುದ್ದಿ, ಗದಗ

ಮದುವೆ ಸಮಾರಂಭಗಳಿಗೆ ಸರ್ಕಾರ ನಿಗದಿಪಡಿಸಿದ ಸಂಖ್ಯೆಗಿಂತ ಅಧಿಕ ಜನ ಸೇರಿದರೆ ವಧು-ವರ, ಪಾಲಕರು ಮತ್ತು ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಹೇಳಿದರು.

ಗದಗ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದ ತಾಲೂಕಿನ ಕಲ್ಯಾಣ ಮಂಟಪ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮದುವೆ ಸಮಾರಂಭಗಳಿಗೆ ಪೂರ್ವಾನುಮತಿ ಪಡೆದು ನಿಯಮಾನುಸಾರ ಅವಕಾಶವಿರುವಂತೆ ತೆರೆದ ಪ್ರದೇಶಗಳಲ್ಲಿ 200 ಜನ ಹಾಗೂ ಸಭಾಂಗಣ ಅಥವಾ ಒಳಾಂಗಣಗಳಲ್ಲಿ 100 ಜನರಿಗೆ ಮೀರದಂತೆ ಮಾತ್ರ ಜನರು ಭಾಗವಹಿಸಬಹುದು. ಕೋವಿಡ್ 2ನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಜಾತ್ರೆ, ಧಾರ್ಮಿಕ ಆಚರಣೆಗಳಿಗೆ ಅವಕಾಶವಿಲ್ಲ ಎಂದರು.

ಸರ್ಕಾರದ ಮಾರ್ಗಸೂಚಿಗಳನ್ನು ಪ್ರಚುರಪಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ನಿಯಮ ಪಾಲಿಸದವರಿಗೆ ದಂಡ ವಿಧಿಸುವ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಇದೆಲ್ಲಕ್ಕಿಂತ ಮುಖ್ಯ ಸಾರ್ವಜನಿಕರು ಕೋವಿಡ್ ಸಾಂಕ್ರಾಮಿಕ ರೋಗದ ಗಂಭೀರತೆಯನ್ನು ಅರ್ಥ ಮಾಡಿಕೊಂಡು ಸರ್ಕಾರ ನೀಡಿರುವ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಸೋಂಕು ನಿಯಂತ್ರಣ ಮಾಡುವಲ್ಲಿ ಸಹಕಾರ ನೀಡಬೇಕು.

ಕೋವಿಡ್ ಸೋಂಕಿನ 2ನೇ ಅಲೆಯು ಹೆಚ್ಚು ಬೇಗವಾಗಿ ಒಬ್ಬರಿಂದ ಇನ್ನೊಬ್ಬರಿಗೆ ತಗಲುತ್ತಿದೆ. ಸಾರ್ವಜನಿಕರು ಉದಾಸೀನತೆ ಹಾಗೂ ನಿರ್ಲಕ್ಷ್ಯ ತೋರದೇ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಮತ್ತು ಕನಿಷ್ಠ ಸಾಮಾಜಿಕ ಅಂತರ ಕಾಪಾಡಬೇಕು. ಆಗಾಗ ಸೋಪು, ಸ್ಯಾನಿಟೈಸರ್‍ನಿಂದ ಕೈಗಳನ್ನು ತೊಳೆಯಬೇಕು. ಇವುಗಳ ಪಾಲನೆಯಿಂದ ಮಾತ್ರ ತಮ್ಮ ಹಾಗೂ ಕುಟುಂಬದ ಆರೋಗ್ಯವನ್ನು ಕಾಪಾಡಬಹುದಾಗಿದೆ. ಅಲ್ಲದೇ ಕೋವಿಡ್ ವೈರಸ್‍ನಿಂದ ಸುರಕ್ಷಿತವಾಗಿ ಇದ್ದು, ಜೀವಹಾನಿ ತಡೆಯಬಹುದಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ತಿಳಿಸಿದರು.

ಶಹರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ (ಸಿ.ಪಿ.ಐ) ಪಿ.ವಿ. ಸಾಲಿಮಠ ಮಾತನಾಡಿ, ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಹೊರಡಿಸಿರುವ ಆದೇಶಕ್ಕನುಗುಣವಾಗಿ ಮಾತ್ರ ಸಾಮಾಜಿಕ ಆಚರಣೆಗಳು, ಸಮಾರಂಭಗಳು, ಮದುವೆ, ಇತರೆ ಸಮಾರಂಭ ಏರ್ಪಡಿಸಲು ಷರತ್ತು ಬದ್ಧ ಅವಕಾಶವಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿಕೊಂಡು, ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಪ್ರಕಾರ ಕ್ರಮ ವಹಿಸಲಾಗುವುದು. ಜನತೆ ಈ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದರು.

ಸಭೆಯಲ್ಲಿ ತಾಲೂಕಿನ ಇಲಾಖೆ ಅಧಿಕಾರಿಗಳು, ಪೊಲೀಸ ಇಲಾಖೆಯ ಗ್ರಾಮೀಣ ಠಾಣೆ ಹಾಗೂ ಬೆಟಗೇರಿ ಠಾಣೆಯ ವೃತ್ತ ನಿರೀಕ್ಷಕರು, ಕಲ್ಯಾಣ ಮಂಟಪದ ಮಾಲೀಕರು, ವ್ಯವಸ್ಥಾಪಕರು ಹಾಜರಿದ್ದರು.

ಕೊರೋನಾ; ಗದಗ ಜಿಲ್ಲೆಯ ಭಾನುವಾರದ ಸಂಪೂರ್ಣ ಅಪ್ಡೇಟ್

0

ವಿಜಯಸಾಕ್ಷಿ ಸುದ್ದಿ, ಗದಗ

ಎಪ್ರಿಲ್ 18 ಭಾನುವಾರ ಜಿಲ್ಲೆಯಲ್ಲಿ 48 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗದಗ ನಗರದಲ್ಲಿಯೇ ಅತಿ ಹೆಚ್ಚು ಅಂದರೆ 34 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಗರ ಪ್ರದೇಶದಲ್ಲಿ ಸೋಂಕು ತನ್ನ ಅಟಾಟೋಪ ಮುಂದುವರೆಸಿದೆ. ಮುಂಡರಗಿಯ 00, ನರಗುಂದದ 03, ರೋಣ ತಾಲೂಕಿನಲ್ಲಿ-06, ಹಾಗೂ ಶಿರಹಟ್ಟಿ ತಾಲೂಕಿನ-05 ಜನರಿಗೆ ಸೋಂಕು ತಗುಲಿದೆ.

ಭಾನುವಾರ 48 ಜನರಿಗೆ ಸೋಂಕು ತಗುಲುವ ಮೂಲಕ ಗದಗ ಜಿಲ್ಲೆಯಲ್ಲಿ ಇದುವರೆಗೂ 11589 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್ ನಿಂದ 141 ಜನರು ಮೃತಪಟ್ಟಿದ್ದಾರೆ. ಇಂದು 19 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಇದುವರೆಗೂ 11226 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 222 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 321 ಜನರ ವರದಿ ಬರಲು ಬಾಕಿ ಇದ್ದು, ಇದುವರೆಗೂ ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ 320116 ಮಾದರಿಗಳಲ್ಲಿ 308206 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಐಪಿಎಲ್ ಬೆಟ್ಟಿಂಗ್; ವಿನಾಯಕ, ಕಿರಣ, ಮನೋಜ್ ಸೇರಿ ಐವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಐಪಿಎಲ್ ಸುರುವಾಗಿದ್ದೇ ತಡ ಐಪಿಎಲ್ ತಂಡಗಳ ಸೋಲು ಗೆಲುವಿನ ಕುರಿತು ಜಿಲ್ಲೆಯಲ್ಲಿ ಬೆಟ್ಟಿಂಗ್ ಜೋರಾಗಿದೆ. ಅದರಲ್ಲೂ ಗದಗ ನಗರದಲ್ಲಿ ಹೇಳೂರು ಕೇಳೋರು ಇಲ್ಲದಂತೆ ಆಗಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ.

ನಿನ್ನೆ ನಗರದ ಖಾನತೋಟದ ಅಂಗಡಿಯೊಂದರ ಮುಂದೆ ಎಸ್ ಆರ್ ಎಚ್ ಹಾಗೂ ಮುಂಬೈ ಇಂಡಿಯನ್ಸ್ ಮದ್ಯ ನಡೆದ ಕ್ರಿಕೆಟ್ ಪಂದ್ಯದ ಮೊದಲೇ ಅದರ ಸ್ಕೋರು ಹಾಗೂ ಫಲಿತಾಂಶದ ಮೇಲೆ ಬೆಟ್ಟಿಂಗ್ ನಲ್ಲಿ ತೊಡಗಿದ್ದವರ ಮೇಲೆ ನಗರ ಠಾಣೆಯ ಪಿಎಸ್ಐ ಪ್ರಕಾಶ್ ಡಿ ಹಾಗೂ ಸಿಬ್ಬಂದಿ ದಾಳಿ ಬಂಧಿಸಿದ್ದಾರೆ. ಬಂಧಿತರನ್ನು ವ್ಯಾಪಾರಸ್ಥರಾದ ಸುದರ್ಶನ ಶಂಕರ ಗಾಂಜಿ, ವಿನಾಯಕ ಬಾಸ್ಕರಸಾ ಹಬೀಬ, ಕಿರಣ ರವಿ ಬದಿ, ಮನೋಜ್ ಮಂಜುನಾಥ್ ಕಬಾಡಿ, ಪುನೀತ್ ಚಂದುಲಾಲ್ ಭಾಂಡಗೆ ಎನ್ನಲಾಗಿದೆ.

ಬಂಧಿತರಿಂದ ಕೇವಲ 520 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊರೋನಾ ವ್ಯಾಪಕವಾಗಿದೆ, ಕೆ-ಸೆಟ್ ಮುಂದೂಡಿ; ಪರೀಕ್ಷಾರ್ಥಿಗಳ ಆಗ್ರಹ

ಭವಿಷ್ಯ ರೂಪಿಸಿಕೊಳ್ಳಲು ಜೀವ ಪಣಕ್ಕಿಡುವುದು ಸರಿಯೇ?

ವಿಜಯಸಾಕ್ಷಿ ವಿಶೇಷ
ಕೊಪ್ಪಳ: ಏಪ್ರಿಲ್ 11ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆಯನ್ನು ಅನಿವಾರ್ಯ ಎನ್ನುವ ಕಾರಣ ನೀಡಿ ಮುಂದೂಡಲಾಗಿತ್ತು. ಬಹುಶಃ ಪರೀಕ್ಷೆ ಇನ್ನೊಂದೆರಡು ತಿಂಗಳು ಮುಂದಕ್ಕೆ ಎಂದು ಊಹಿಸಿದ್ದ ಪರೀಕ್ಷಾರ್ಥಿಗಳ ಲೆಕ್ಕಾಚಾರ ತಲೆ ಕೆಳಗಾಗಿತ್ತು. ಏಪ್ರಿಲ್ 25ರಂದು ಕೆ-ಸೆಟ್ ಪರೀಕ್ಷೆ ಮರುನಿಗದಿಯಾಗಿದ್ದು, ಇದೀಗ ಆತಂಕ ತಂದೊಡ್ಡಿದೆ.

ಕೆ-ಸೆಟ್ ಪರೀಕ್ಷೆ ಬಗ್ಗೆ ಇರುವ ಆತಂಕ ಅಧ್ಯಯನಕ್ಕೆ ಸಂಬಂಧಿಸಿದ್ದಲ್ಲ. ಬದಲಾಗಿ ಜೀವಕ್ಕೆ ಸಂಬಂಧಿಸಿದ್ದು. ಈಗಾಗಲೇ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಹೆಚ್ಚುತ್ತಲೇ ಇವೆ. ಆಸ್ಪತ್ರೆ, ಆಕ್ಸಿಜನ್ ಕೊರತೆ ಕುರಿತು ಅಲ್ಲಲ್ಲಿ ವರದಿಯಾಗುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇಂಥ ಸಂದರ್ಭದಲ್ಲಿ ಮತ್ತೇ ಪರೀಕ್ಷೆ ನಿಗದಿ ಮಾಡಿರುವುದು ತುಘಲಕ್ ದರ್ಬಾರ್ ನೆನಪಿಸುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಪರೀಕ್ಷಾರ್ಥಿಗಳು ಆಕ್ಷೇಪಿಸಿದ್ದಾರೆ.

ಇಡೀ ರಾಜ್ಯದಲ್ಲಿ 11 ಕೇಂದ್ರಗಳಲ್ಲಿ ಮಾತ್ರ ಕೆ-ಸೆಟ್ ಪರೀಕ್ಷೆಗಳು ನಡೆಯುವುದರಿಂದ ಪರೀಕ್ಷಾರ್ಥಿಗಳಿಗೆ ತೊಂದರೆ ಕಟ್ಟಿಟ್ಟ ಬುತ್ತಿ. ಒಂದು ಕಡೆ ಕೊರೋನಾ ಕಾಟವಾದರೆ ಮತ್ತೊಂದೆಡೆ ಬಸ್ಗಳ ತೊಂದರೆ. ಹಾಗೊಂದು ವೇಳೆ ಪರೀಕ್ಷೆ ನಿಗದಿಯಾದರೆ ಸಹಸ್ರಾರು ರೂಪಾಯಿ ವ್ಯಯಿಸಿ ಖಾಸಗಿ ವಾಹನಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬರಬೇಕು.

ಈ ಬಾರಿ ಸುಮಾರು 79 ಸಾವಿರ ಅಭ್ಯರ್ಥಿಗಳು ವಿವಿಧ ವಿಷಯಗಳಲ್ಲಿ ಕೆ-ಸೆಟ್ ಬರೆಯಲಿದ್ದು ಗ್ರಾಮೀಣ ಭಾಗದ ಸುಮಾರು 40 ಸಾವಿರ ಪರೀಕ್ಷಾರ್ಥಿಗಳು ಬಸ್ಗಳಿಲ್ಲದೇ ಖಾಸಗಿ ವಾಹನಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಬರುವ ಅನಿವಾರ್ಯತೆ ಬಂದೊದಗಿದೆ. ಜೊತೆಗೆ ಪರೀಕ್ಷಾ ಕೇಂದ್ರಗಳು ಕೆಲ ಗ್ರಾಮೀಣ ಭಾಗಗಳಿಗೆ ದೂರ ಇರುವುದರಿಂದ ಒಂದು ದಿನ ಮುಂಚಿತವಾಗಿ ಪರೀಕ್ಷಾ ಕೇಂದ್ರ ಇರುವ ಊರುಗಳಿಗೆ ತಲುಪಬೇಕಿದೆ.
ಊರು ತಲುಪಿದ ಮೇಲೆ ಉಳಿದುಕೊಳ್ಳಲು ವ್ಯವಸ್ಥೆಯ ಖಚಿತತೆ ಇಲ್ಲ. ಏಕೆಂದರೆ ಬೆಂಗಳೂರು ಸೇರಿದಂತೆ ಹಲವೆಡೆ ಹೊಟೇಲ್ಗಳಲ್ಲೂ ಸಹ ಕೊರೋನಾ ರೋಗಿಗಳಿಗಾಗಿ ಬೆಡ್ ಹಾಕಲಾಗಿದೆ. ವಸತಿ ಗೃಹಗಳು ಬುಕ್ ಆಗಿವೆ. ಹೀಗಾದರೆ ಪರೀಕ್ಷಾರ್ಥಿಗಳು ಎಲ್ಲಿ ಉಳಿದುಕೊಳ್ಳಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಕೊರೋನಾ ಬಂದರೆ ಏನು ಗತಿ?

ಕೆ-ಸೆಟ್ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಭವಿಷ್ಯ ಮುಖ್ಯ ನಿಜ, ಆದರೆ ಜೀವಕ್ಕಿಂತ ದೊಡ್ಡದೇನಿಲ್ಲ. ಬದುಕಿದ್ದರೆ ತಾನೇ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಪರೀಕ್ಷೆಯ ಕಾರಣಕ್ಕಾಗಿ ಬಂದು ಕೊರೋನಾ ಅಂಟಿಕೊಂಡರೆ ಮುಂದೇನು ಗತಿ? ಎಂಬ ಆತಂಕ ಪರೀಕ್ಷಾರ್ಥಿಗಳನ್ನು ಕಾಡತೊಡಗಿದೆ.

ತಡವಾದರೂ ಅಚ್ಚುಕಟ್ಟಾಗಿ ನಡೆಯಲಿ:
ಕಳೆದ ಸಲವೂ ಕೆ-ಸೆಟ್ ಪರೀಕ್ಷೆ ಹೀಗೇ ಆಗಿತ್ತು. ಏಪ್ರಿಲ್ನಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೊರೋನಾ ಹಾವಳಿ ಒಂದು ಹಂತಕ್ಕೆ ತಹಬದಿಗೆ ಬಂದ ಮೇಲೆ ನಡೆದಿತ್ತು. ಈ ಸಲವೂ ಕಳೆದ ವರ್ಷದಂತೆ ಆಗಲಿ. ಕೆ-ಸೆಟ್ ಕೇಂದ್ರವು ಪರೀಕ್ಷಾರ್ಥಿಗಳ ಬದುಕಿನ ಜೊತೆ ಚೆಲ್ಲಾಟವಾಡದಿರಲಿ. ಏಪ್ರಿಲ್ 25ರ ಬದಲು ಡಿಸೆಂಬರ್ನಲ್ಲೇ ಪರೀಕ್ಷೆ ನಡೆಸುವುದು ಸೂಕ್ತ

ಚೈತ್ರ ಕಲ್ಮಠ, ಪರೀಕ್ಷಾರ್ಥಿ

ಮುಂದುವರೆದ ಕೊರೋನಾ ಆರ್ಭಟ; ಶನಿವಾರ 37 ಜನರಿಗೆ ಸೋಂಕು

0

ವಿಜಯಸಾಕ್ಷಿ ಸುದ್ದಿ, ಗದಗ

ಎಪ್ರಿಲ್ 17 ಶನಿವಾರ ಜಿಲ್ಲೆಯಲ್ಲಿ 37 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗದಗ ನಗರದಲ್ಲಿಯೇ ಅತಿ ಹೆಚ್ಚು ಅಂದರೆ 23 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಗರ ಪ್ರದೇಶದಲ್ಲಿ ಸೋಂಕು ತನ್ನ ತೀವ್ರತೆ ಹೆಚ್ಚು ಮಾಡಿದೆ. ಮುಂಡರಗಿಯ 02, ನರಗುಂದದ 03, ರೋಣ ತಾಲೂಕಿನಲ್ಲಿ-04, ಹಾಗೂ ಶಿರಹಟ್ಟಿ ತಾಲೂಕಿನ-05 ಜನರಿಗೆ ಸೋಂಕು ತಗುಲಿದೆ.

ಶನಿವಾರ 37 ಜನರಿಗೆ ಸೋಂಕು ತಗುಲುವ ಮೂಲಕ ಗದಗ ಜಿಲ್ಲೆಯಲ್ಲಿ ಇದುವರೆಗೂ 11541 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್ ನಿಂದ 141 ಜನರು ಮೃತಪಟ್ಟಿದ್ದಾರೆ. ಇಂದು 19 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಇದುವರೆಗೂ 11207 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 193 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 180 ಜನರ ವರದಿ ಬರಲು ಬಾಕಿ ಇದ್ದು, ಇದುವರೆಗೂ ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ 318286 ಮಾದರಿಗಳಲ್ಲಿ 306565 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಧಿಕಾರಿಗಳು ಬಡ್ಡಿ ವ್ಯವಹಾರ ಮಾಡ್ತಾರೆ ಹೊರತು ಜನರ ತೊಂದರೆಗೆ ಸ್ಪಂದಿಸಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

-ಜಿಲ್ಲಾ ಕೇಂದ್ರದ ಅಧಿಕಾರಿಗಳಿಗೆ ಬಯೋಮೆಟ್ರಿಕ್ ಮಾಡಬೇಕು

ಅಂಬೇಡ್ಕರ್ ನಿಗಮದ ಅಧಿಕಾರಿಯನ್ನ ಅಮಾನತುಗೊಳಿಸಿ

ಜಿಲ್ಲಾಮಟ್ಟದ ಅಧಿಕಾರಿಗಳು ವಾರದಲ್ಲಿ ಎರಡು ದಿನಗಳು ಮಾತ್ರ ಕಚೇರಿಯಲ್ಲಿ ಇರುತ್ತಾರೆ. ಇನ್ನುಳಿದ ದಿನ ಊರಿಗೆ ಹೋಗಿ ಬಡ್ಡಿ ವ್ಯವಹಾರ ಮಾಡ್ತಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಗರಂ ಆದರು.

ಕೊಪ್ಪಳದ ಕಿಮ್ಸ್‌ನಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ‌ ಪರಿಶೀಲನೆ ಮಾಡಿದ ಅವರು, ಜಿಲ್ಲಾಮಟ್ಟದ ಅಧಿಕಾರಿಗಳ ಬೇಜವಾಬ್ದಾರಿತನದ ಉತ್ತರದಿಂದ ಕೆಂಡಾಮಂಡಲರಾಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಇರುವುದೇ ಇಲ್ಲ. ಇನ್ನು ಮುಂದೆ ಅವರಿಗೂ ಬಯೋಮೆಟ್ರಿಕ್ ವ್ಯವಸ್ಥೆ ಮಾಡಬೇಕು. ಅಂದಾಗ ಮಾತ್ರ ಜಿಲ್ಲಾಮಟ್ಟದ ಅಧಿಕಾರಿಗಳು ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಾದರೂ ಕಚೇರಿಯಲ್ಲಿ ಇರುತ್ತಾರೆ ಎಂದು ಸಚಿವರು ಸಲಹೆ ನೀಡಿದರು.

ಅಂಬೇಡ್ಕರ್ ನಿಗಮದ ಅಧಿಕಾರಿ ಕಳೆದ ಕೆಡಿಪಿ ಸಭೆಯಲ್ಲಿ ಕಾಮಗಾರಿಯೊಂದರ ಕುರಿತು ಇಂದಿನ ಸಭೆಯಲ್ಲೂ ಮಾಹಿತಿ ನೀಡುವಲ್ಲಿ ತಡಬಡಾಯಿಸಿದ್ದರಿಂದ ಸಚಿವರು ಜಿಪಂ ಸಿಇಓ ಅವರನ್ನು ತರಾಟೆಗೆ ತೆಗೆದುಕೊಂಡರು. ಜಿಪಂ ಸಿಇಓ ಅವರು ಅಂಬೇಡ್ಕರ್ ನಿಗಮದ ಅಧಿಕಾರಿಗೆ ಡೆಡ್‌ಲೈನ್ ನೀಡಿದರೂ ಉದಾಸೀನ ಮಾಡಿರುವುದಾಗಿ ದೂರಿದರು. ಹಾಗಾಗಿ ಅಂಬೇಡ್ಕರ್ ನಿಗಮದ ಅಧಿಕಾರಿಯನ್ನು ಅಮಾನತುಗೊಳಿಸುವ, ಅಧಿಕಾರಿಯ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿ ಎಂದು ಸಚಿವ ಬಿ.ಸಿ.ಪಾಟೀಲರು ತಿಳಿಸಿದರು.

ಭೂ ಸೇನಾ ನಿಗಮದಡಿ ಯಲಬುರ್ಗಾ ಭಾಗದಲ್ಲಿ ಸುಮಾರು 63 ಕೋಟಿ ರೂಪಾಯಿ ಅವ್ಯವಹಾರದ ದೂರುಗಳಿವೆ. ಜೊತೆಗೆ ಭೂಸೇನೆಯ ಅಧಿಕಾರಿಗಳೇ ಅವ್ಯವಹಾರದ ತನಿಖೆ‌ ನಡೆಸಿದಾಗ ಸುಮಾರು 7-8 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ವರದಿ ನೀಡಿದ್ದಾರೆ ಎಂದು ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ದೂರಿದರು.

ಇದಕ್ಕೆ ಉತ್ತರಿಸಿದ ಭೂಸೇನಾ ನಿಗಮದ ಕಾರ್ಯನಿರ್ವಾಹಕ ಅಭಿಯಂತರ ಚಿಂಚೋಳಿಕರ್, ಅದು ಈ ಹಿಂದೆ ಇದ್ದ ಅಧಿಕಾರಿಗಳಿಂದ ಆಗಿದ್ದು, ಅದನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದರು.

ಭೂ ಸೇನಾ ನಿಗಮದವರು ಅನುದಾನ ಬಂದಾಗ ಮಾತ್ರ ಕಾಮಗಾರಿ ನಡೆಸುತ್ತಾರೆ. ಅನುದಾನ ಮುಗಿದ ಬಳಿಕ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತಾರೆ. ಮತ್ತೇ ಅನುದಾನ ಬಂದ ಮೇಲೆ ಕಾಮಗಾರಿ ಶುರು ಮಾಡೊ ಪರಿಪಾಠ ರೂಢಿಸಿಕೊಂಡಿದ್ದಾರೆ. ಮೊದಲು ಇದನ್ನು ಕೈಬಿಡಿ. ಕಾಮಗಾರಿ ಪೂರ್ಣಗೊಳಿಸಿ ಆನಂತರ ಸರಕಾರದ ಅನುದಾನವನ್ನು ಕ್ಲೇಮ್ ಮಾಡಿ ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು.

ಸಭೆಯಲ್ಲಿ ಶಾಸಕರಾದ ಬಸವರಾಜ ದಢೇಸೂಗೂರು, ಪರಣ್ಣ ಮುನವಳ್ಳಿ, ರಾಘವೇಂದ್ರ ಹಿಟ್ನಾಳ, ಅಮರೇಗೌಡ ಬಯ್ಯಾಪುರ, ಸಂಸದ ಕರಡಿ ಸಂಗಣ್ಣ, ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಜಿಪಂ ಉಪಾಧ್ಯಕ್ಷ ಬೀನಾ ಬೇಗಂ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಸಿಇಓ ರಘುನಂದನ್ ಮೂರ್ತಿ, ಎಸ್‌ಪಿ ಟಿ.ಶ್ರೀಧರ್, ಎಸಿ ನಾರಾಯಣರಡ್ಡಿ‌ ಕನಕರಡ್ಡಿ, ಎಡಿಸಿ ಎಂ.ಪಿ. ಮಾರುತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಎಂಎಲ್ಎ ಪುತ್ರ ಎಂದು ಹೇಳಿಕೊಂಡು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಖದೀಮನ ಸೆರೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಎಂಎಲ್ಎ ಮಗ ಎಂದು ನಂಬಿಸಿ ಯುವತಿಯನ್ನು ಮರಳು ಮಾಡಿ, ಅವಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಯುವಕನನ್ನು ಬಂಧಿಸಲಾಗಿದೆ. ಯುವತಿಯೊಂದಿಗಿನ ಖಾಸಗಿ ಕ್ಷಣಗಳ ವಿಡಿಯೋ ಪಾಲಕರ ಮೊಬೈಲ್ಗೆ ಹಾಕಿ, ಹಣ ಕೀಳಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಸಿಂಧನೂರು ಮೂಲದ ಯುವತಿ ತಾವರಗೇರಾ ಅಜ್ಜಿ ಮನೆಯಲ್ಲಿದ್ದಳು. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಬಾಗೋಡಿಯ ಯುವಕನೊಂದಿಗೆ ಟಿಕ್ಟಾಕ್ ಮೂಲಕ ಪರಿಚಯವಾಗಿದ್ದಳು. ಈತ ಶಾಸಕ ಅಭಯ ಪಾಟೀಲ ಅವರ ಮಗ, ಚಂದು ಪಾಟೀಲ್ ಎಂದು ಹೇಳಿಕೊಂಡು ಮದುವೆಯಾಗುವಂತೆ ಪೀಡಿಸಿದ್ದಾನೆ.

ಯುವಕನ ಮಾತಿಗೆ ಮರುಳಾಗಿ ಕಳೆದ ಮಾರ್ಚ್ ನಲ್ಲಿ ಗೋವಾದಲ್ಲಿ ಬೀಚ್ ಸುತ್ತಾಡಿದ್ದು, ಆಕೆಯನ್ನು ಲೈಂಗಿಕವಾಗಿ ಸಹ ಬಳಸಿಕೊಂಡಿದ್ದಾನೆ. ಈ ಎಲ್ಲವನ್ನು ಫೋಟೋ, ವಿಡಿಯೋ ಮಾಡಿಕೊಂಡಿದ್ದ ಯುವಕ, ಯುವತಿಯ ಪಾಲಕರಿಗೆ ಕಳುಹಿಸಿ 9 ಲಕ್ಷ ರೂ. ಬೇಡಿಕೆ ಇಟ್ಟಿದ್ದಾನೆ.
ಈ ಹಿನ್ನೆಲೆಯಲ್ಲಿ ಯುವತಿ ಪಾಲಕರ ತಾವರಗೇರಾ ಪೊಲೀಸ್ ಠಾಣೆಗೆ ನೀಡಿದ ದೂರಿನ‌ ಮೇರೆಗೆ ಆರೋಪಿ ಮಹ್ಮದ್ ಚಾಂದ್ ಪಾಷಾ ಅಲಿಯಾಸ್ ಚಂದು ಪಾಟೀಲ ನನ್ನು ವಶಕ್ಕೆ ತೆಗೆದುಕೊಂಡು ಕುಷ್ಟಗಿಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಕುಷ್ಟಗಿ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ತಿಳಿಸಿದ್ದಾರೆ

ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಹುಬ್ಬಳ್ಳಿಯಿಂದ ಗಂಗಾವತಿ ರೈಲು ದಿನ ನಿತ್ಯ ಓಡಾಡುವುದು ಸಾರ್ವಜನಿಕರಿಗೆ ಅನುಕೂಲವಾಗಿರುವುದು ನಿಜ.
ಆದರೆ ಕಾರಟಗಿ ರಾಯಚೂರುವರೆಗೂ ತಲುಪುವುದು ಯಾವಾಗ? . ಗಂಗಾವತಿ, ಕಂಪ್ಲಿ, ಸಿಂಧನೂರು, ರಾಯಚೂರು ಭಾಗದ ಜನರಿಗೆ ಪ್ರಯಾಣದ ದರದ ಜೊತೆಗೆ ಸಮಯವೂ ಉಳಿತಾಯವಾಗುತ್ತದೆ.
ಆದರೆ ದಿನ ನಿತ್ಯ ಸಾವಿರಾರು ಪ್ರಯಾಣಿಕರು ಓಡಾಡುತ್ತಿದ್ದರೂ ಮೂಲಭೂತ ಸೌಕರ್ಯವಿಲ್ಲದೆ ಪರದಾಡುವಂತ ಪರಿಸ್ಥಿತಿ ಈ ಭಾಗದ ಪ್ರಯಾಣಿಕರಿಗೆ ಆಗಿದೆ ಎಂದು ಎಐಡಿವೈಓ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಗಡ್ಡಿ ದೂರಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗಿಣಿಗೇರಿಯಿಂದ ಮಾರ್ಗ ಬದಲಾಣೆ ಆದ ಮೇಲೆ ಬೂದುಗುಂಪ, ಜಬ್ಬಲಗುಡ್ಡ, ಬೆಣಕಲ್, ಈ ಮೂರು ಸ್ಟೇಷನ್ ಗಳು ಊರಿಂದ ದೂರವಿದ್ದು ಯಾವುದೇ ಮೂಲಭೂತ ಸೌಕರ್ಯಗಳೇ ಇಲ್ಲ, ಮುಖ್ಯವಾಗಿ ರಾತ್ರಿ ಟೈಮ್ ಪ್ಲಾಟ್ ಫಾರ್ಮ್ನಲ್ಲಿ ಒಂದು ಲೈಟ್ ಸಹ ಇಲ್ಲ ಸುತ್ತ ಕತ್ತಲು ಗುಡ್ಡ ಹತ್ತಿರದಲ್ಲಿದೆ ಕಾಡುಪ್ರಾಣಿಗಳ ಅಪಾಯ, ಮಹಿಳೆಯರು, ಮಕ್ಕಳು, ವೃದ್ದರಿಗೆ ಅಪಾಯ ಕಟ್ಟಿಟ್ಟ ಬುತ್ತಿ, ಅನಾಹುತಗಳು ಆಗುವ ಆತಂಕ ಸ್ಥಳೀಯರಿಗೆ ಕಾಡುತ್ತಿದೆ ಎಂದು ಅವರು ದುಗುಡ ತೋಡಿಕೊಂಡಿದ್ದಾರೆ.
ಮುಖ್ಯವಾಗಿ ಲೈಟ್ ಜೊತೆ ಕುಡಿಯುವ ನೀರು ಇಲ್ಲ‌. ಗಂಗಾವತಿ ಬಿಟ್ಟು ಮೂರು ಸ್ಟೇಷನಲ್ಲಿ ಟಿಕೆಟ್ ಕೊಡುವವರು ಇಲ್ಲ, ಇಂತ ಜಟಿಲ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ಕೇವಲ ಟ್ರೈನ್ ಬಿಟ್ಟು ಮೂಲಭೂತ ಸೌಕರ್ಯ ಒದಗಿಸಿಲ್ಲದಿರುವುದು ದುರಂತವೆ ಸರಿ. ಜನಪ್ರತಿನಿದಿನಗಳು, ಸಂಬಂಧಪಟ್ಟ ಅಧಿಕಾರಿಗಳು ಕೊಡಲೇ ಗಮನಹರಿಸಬೇಕು. ರಾತ್ರಿ ಟ್ರೈನ್ ಹೋಗುವ ಸಂದರ್ಭದಲ್ಲಿ ಆರಕ್ಷಕ ಸಿಬ್ಬಂದಿಗಳನ್ನು ಮೂರು ಸ್ಟೇಟಿನಲ್ಲಿ ನಿಯೋಜಿಸಿಬೇಕು.
ಸಾರ್ವಜನಿಕರಿಗೆ ತೊಂದರೆ ಆಗುವ ಮುಂಚೆಯೇ ತುರ್ತಾಗಿ ಕ್ರಮ ಕೈಗೊಂಡು ಪ್ರಯಾಣಿಕರು ನಿರ್ಭಿಡತೆಯಿಂದ ಓಡಾಡಲು ವ್ಯವಸ್ಥೆ ಕಲ್ಪಿಸಬೇಕು, ಕಳೆದ ಒಂದು ವಾರದಿಂದ ಸಾರಿಗೆ ನೌಕರರು ಮುಷ್ಕರ ದಿಂದ ಜನಸಾಮಾನ್ಯರು ರೈಲ್ವೆಗೆ ಹೆಚ್ಚು ಅವಲಂಬಿತವಾಗಿದ್ದರೆ. ಹಾಗಾಗಿ ಕೂಡಲೇ ರೈಲ್ವೆ ಯಲ್ಲಿ ಓಡಾಡುವ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಮುಂದುವರಿದ ಕೊರೋನಾ ಆರ್ಭಟ; ಶುಕ್ರವಾರವೂ 34 ಜನರಿಗೆ ಸೋಂಕು

0

ವಿಜಯಸಾಕ್ಷಿ ಸುದ್ದಿ, ಗದಗ

ಎಪ್ರಿಲ್ 16 ಶುಕ್ರವಾರವೂ ಜಿಲ್ಲೆಯಲ್ಲಿ 34 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗದಗ ನಗರದಲ್ಲಿಯೇ ಅತಿ ಹೆಚ್ಚು ಅಂದರೆ 27 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಗರ ಪ್ರದೇಶದಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಕಂಡು ಬರುತ್ತದೆ. ಮುಂಡರಗಿಯ 00, ನರಗುಂದದ 00, ರೋಣ ತಾಲೂಕಿನಲ್ಲಿ-03, ಹಾಗೂ ಶಿರಹಟ್ಟಿ ತಾಲೂಕಿನ-04 ಜನರಿಗೆ ಸೋಂಕು ತಗುಲಿದೆ.

ಶುಕ್ರವಾರ 34 ಜನರಿಗೆ ಸೋಂಕು ತಗುಲುವ ಮೂಲಕ ಗದಗ ಜಿಲ್ಲೆಯಲ್ಲಿ ಇದುವರೆಗೂ 11504 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್ ನಿಂದ 141 ಜನರು ಮೃತಪಟ್ಟಿದ್ದಾರೆ. ಇಂದು 20 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಇದುವರೆಗೂ 11188 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 175 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 280 ಜನರ ವರದಿ ಬರಲು ಬಾಕಿ ಇದ್ದು, ಇದುವರೆಗೂ ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ 316348 ಮಾದರಿಗಳಲ್ಲಿ 304564 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊರೋನಾ ಸೋಂಕು ಹೆಚ್ಚಳ; ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಸಾಂಕ್ರಾಮಿಕ ರೋಗವು ರಾಜ್ಯದಾದ್ಯಂತ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಒಂದೆಡೆ ಗುಂಪು ಗುಂಪಾಗಿ ಸೇರುವುದನ್ನು ತಡಗಟ್ಟಲು ಹಾಗೂ ಸಾರ್ವಜನಿಕರಿಗೆ ಈ ಸಾಂಕ್ರಾಮಿಕ ರೋಗವು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ 2021 ರ ಎಪ್ರಿಲ್ ಮಾಹೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಹಳ್ಳಿಗಳಿಗೆ ಭೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸ್ಥಗಿತಗೊಳಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.

ಸರಕಾರದ ಸುತ್ತೋಲೆಯನ್ವಯ ಗದಗ ಜಿಲ್ಲೆಯಲ್ಲಿ ಏಪ್ರಿಲ್ 17 ರಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!