Home Blog Page 3121

ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ರಾಜ್ಯದಲ್ಲಿ ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಭತ್ತದ ಬೆಳೆಯನ್ನು ರೈತರು ನಾಟಿ ಮಾಡಿದ್ದಾರೆ. ಸರ್ಕಾರ ತಕ್ಷಣ ರೈತರ ಹಿತ ಕಾಪಾಡಿ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕು ಎಂದು ವಿಎಸ್‌ಎಸ್‌ಎನ್ ನಿರ್ದೇಶಕ ವಿಶ್ವನಾಥ ಮಾಲಿಪಾಟೀಲ್ ಒತ್ತಾಯಿಸಿದ್ದಾರೆ.
ಕೊರೋನಾ ಸೋಂಕಿನ ಸಂಕಷ್ಟದಲ್ಲಿಯೂ ಮಾರುಕಟ್ಟೆಯಲ್ಲಿ ಭತ್ತದ ಬೆಳೆಗೆ ಸೂಕ್ತ ಬೆಲೆ ಸಿಗುವ ಬಗ್ಗೆ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಭತ್ತದ ಬೆಳೆಗಳಿಗೆ ನಾನಾ ರೋಗಗಳು ಬರುತ್ತಿವೆ.
ಇದರಿಂದ ಈಗಾಗಲೇ ಅರ್ಧದಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸ್ಪಂದಿಸಬೇಕು. ಜೊತೆಗೆ ಸಿಎಂ ತಕ್ಷಣವೇ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವಿಶ್ವನಾಥ್ ಮಾಲಿಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಗಯ್ಯಸ್ವಾಮಿಯನ್ನು ನಗರಸಭೆ ನಾಮನಿರ್ದೇಶಿತ ಸದಸ್ಯನಾಗಿ ನೇಮಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಬಿಜೆಪಿಯ ನಿಷ್ಠಾವಂತ ಮುಖಂಡ ಸಂಗಯ್ಯಸ್ವಾಮಿ ಸಂಶೀಮಠ ಅವರಿಗೆ ಗಂಗಾವತಿ ನಗರಸಭೆಯ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸುವಂತೆ ಒತ್ತಾಯಿಸಿ ವೀರಶೈವ ಲಿಂಗಾಯತ ಯುವ ವೇದಿಕೆಯ ಪದಾಧಿಕಾರಿಗಳು ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಮನವಿ ಸಲ್ಲಿಸಿದರು.
ನಗರದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಶರಣಯ್ಯಸ್ವಾಮಿ ಮರಳಿಮಠ ನೇತೃತ್ವದಲ್ಲಿ ಶಾಸಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಇದೇ ವೇಳೆ ಶರಣಯ್ಯಸ್ವಾಮಿ ಮರಳಿಮಠ ಮಾತನಾಡಿ, ಸಂಗಯ್ಯಸ್ವಾಮಿ ಅವರು ಸುಮಾರು ೨೦ ವರ್ಷಗಳಿಂದಲೂ ಭಾರತೀಯ ಜನತಾ ಪಾರ್ಟಿಯಲ್ಲಿ ಹಗಲಿರುಳು ಶ್ರಮಿಸುತ್ತಾ ಬಂದಿದ್ದಾರೆ. ಅಲ್ಲದೇ ಹಿಂದೆಯೂ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಪಕ್ಷವನ್ನು ಕಟ್ಟಿದ್ದಾರೆ. ಅಲ್ಲದೆ, ಎರಡು ಬಾರಿ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡೂ ಬಾರಿಯ ಸೋತರೂ ಎದೆಗುಂದದೆ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿದ್ದಾರೆ ಎಂದರು.
ಸಂಗಯ್ಯಸ್ವಾಮಿ ಸದ್ಯ ವೀರಶೈವ ಲಿಂಗಾಯತ ಯುವ ವೇದಿಕೆಯ ನಗರ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ನಾಮನಿರ್ದೇಶನ ಮಾಡುವುದರ ಜೊತೆಗೆ ಜಂಗಮ ಸಮಾಜಕ್ಕೆ ಸ್ಥಾನಮಾನ ನೀಡಬೇಕೆಂದು ಅವರು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವಲಿಂಗಯ್ಯಸ್ವಾಮಿ ಹಿರೇಮಠ, ತಾಲೂಕು ಅಧ್ಯಕ್ಷ ಡಾ.ಮಹೇಶ ಹೊಸಮನಿ, ವೀರಶೈವ ಲಿಂಗಾಯತ ಯುವ ವೇದಿಕೆ ಮುಖಂಡರಾದ ವೀರಭದ್ರಯ್ಯ ಮೈಲಾಪೂರು ಹಿರೇಮಠ, ವಿ.ಜಿ.ಹಿರೇಮಠ, ವೀರಯ್ಯಸ್ವಾಮಿ ಸಂಶಿಮಠ, ಸೋಮನಾಥ ಸೇರಿದಂತೆ ಇತರರು ಇದ್ದರು.

ಸತ್ಯ, ಪ್ರಾಮಾಣಿಕತೆಯ ವ್ಯಕ್ತಿಗೆ ಹೆಚ್ಚು ಗೌರವ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ
ಸಂಘ, ಸಂಸ್ಥೆ, ಸರಕಾರಿ ಸೇವೆ, ವಿದ್ಯಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಪ್ರಾಮಾಣಿಕತೆ, ಸತ್ಯ, ನಿಷ್ಠೆಯಿಂದ, ದುಡಿದರೇ ಸಮಾಜದಲ್ಲಿ ಹೆಚ್ಚು ಗೌರವ ಸಿಗುವುದು. ಅಂತಹ ಜೀವನವನ್ನು ಸೇವಾ ಅವಧಿಯಲ್ಲಿ ರೂಢಿಸಿಕೊಳ್ಳಬೇಕು ಎಂದು ಗದಗ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರು, ತಾಲೂಕಾ ಕೃಷಿಕ ಸಮಾಜ ಅಧ್ಯಕ್ಷರು, ಗದಗ ಜಿಲ್ಲಾ ಶ್ರೇಷ್ಠ ವರ್ತಕ ಪ್ರಶಸ್ತಿ ಪುರಸ್ಕೃತರು, ನಂಜನಗೂಡ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳಮಠ ಇಲ್ಲೂರ ತೋಟ ಗೌರವ ವಿಚಾರಣಾಕರ್ತ ನಾರಾಯಣ ಹ ಇಲ್ಲೂರ, ಹೇಳಿದರು.
ಇಲ್ಲಿಯ ರಾಯರ ಮಠದಲ್ಲಿ ಜ ಅನ್ನದಾನೀಶ್ವರ ವಿದ್ಯಾ ಸಮಿತಿಯಲ್ಲಿ 33 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಹಾಜಿ ಹುಸೇನಬಾಷುಸಾಬ ಮುಲ್ಲಾ ಅವರನ್ನು ಸನ್ಮಾನಿಸಿ ಮಾತನಾಡಿದರು.
ಮಂತ್ರಾಲಯ ರಾಯರ ಮಠಕ್ಕೂ ಮುಸ್ಲಿಂ ಸಮುದಾಯಕ್ಕೂ ಅನ್ಯೋನ್ಯ ಬಾಂಧವ್ಯವಿದೆ. ಮುಲ್ಲಾ ಮನೆತನಕ್ಕೂ ಇಲ್ಲೂರ ಮನೆತನಕ್ಕೂ ನೂರಾರೂ ವರ್ಷಗಳಿಂದ ಅವಿನಾನುಭಾವ ಸಂಬಂಧವಿದೆ. ಇಲ್ಲೂರ ಮನೆತನಕ್ಕೆ ಮುಲ್ಲಾ ಅವರ ಕೊಡುಗೆ , ಸೇವೆ ಅಮೂಲ್ಯವಾಗಿದೆಂದರು.
ಬೆಲ್ಲದ ಕಾಲೇಜ ಕಮಿಟಿ ಮಾಜಿ ಉಪಕಾರ್ಯಾಧ್ಯಕ್ಷ, ಪುರಸಭೆ ಮಾಜಿ ಸದಸ್ಯ ಕಾಂತರಾಜ ಹಿರೇಮಠ ಮಾತನಾಡಿ, ಭಕ್ತಿ, ಶ್ರದ್ಧೆ, ವಿಶ್ವಾಸ, ಸೇವೆಯಲ್ಲಿದ್ದರೇ ಸಮಾಜ ಪ್ರೋತ್ಸಾಹಿಸುವುದು ಎಂದು ತಿಳಿಸಿ, ಮುಲ್ಲಾ ಅವರ ಸೇವೆ ಇಂದಿನ ಸಮಾಜಕ್ಕೆ ಹಾಗೂ ಸೇವಾಕರ್ತರಿಗೆ, ನೌಕರರಿಗೆ ಮಾರ್ಗದರ್ಶನವಾಗಿದೆ ಎಂದರು.
ಅಂಜುಮನ್ ಏ ಇಸ್ಲಾಂ ಕಮೀಟಿ ಮಾಜಿ ಅಧ್ಯಕ್ಷರು, ತಾಲೂಕ ಮುಸ್ಲಿಂ ಹಿತರಕ್ಷಣಾ ವೇದಿಕೆ ಅಧ್ಯಕ್ಷ ನಬಿಸಾಬ ಕೆಲೂರ, ಪುರಸಭಾ ಸದಸ್ಯರು, ಹೋರಾಟಗಾರ ನಾಗರಾಜ ಹೊಂಬಳಗಟ್ಟಿ ಮಾತನಾಡಿ, ಮುಲ್ಲಾ ಅವರ ಸೇವೆಯನ್ನು ಪ್ರಶಂಸನೆ ಮಾಡಿದರು.
ಸಮಾರಂಭದಲ್ಲಿ ಗೋವಿಂದರಾಜ ಹೆಗ್ಗಡಾಳ, ಪುರಸಭಾ ಸದಸ್ಯ ರಾಜಾಭಕ್ಷಿ ಬೆಟಗೇರಿ, ಶಿವಪ್ಪ ಚಿಕ್ಕಣ್ಣವರ, ಸಂತೋಷ ಹಿರೇಮನಿ, ಧ್ರುವ ಹೂಗಾರ, ಗೌಸ ಮೋದಿನ ಮಕಾಂದಾರ, ಮೌಲಾಸಾಬ ಬಾಗವಾನ, ಮಲ್ಲೇಶ ಹರಿಜನ, ಸಂಗಪ್ಪ ಕಂಬಳ್ಯಾಳ, ಸುರೇಶ ಹಲವಾಗಲಿ, ಹಾಜಿ ಬಾಬುಸಾಬ ನಾಗರಹಳ್ಳಿ, ಎ ಕೆ ಮುಲ್ಲಾನವರ, ಎಂ ಎಚ್ ತಳಗಡೆ, ಶಿವರಾಜ ಅಸುಂಡಿ, ನಾಗರಾಜ ಹಾನಗಲ್ಲ, ಕೃಷ್ಣ ಆರ್ ಸಾವುಕಾರ, ಮಂಜಪ್ಪ ದಂಡಿನ, ಪ್ರವೀಣ ವಡ್ಡಟ್ಟಿ, ನಿಂಗರಾಜ ಮೇಗಲಮನಿ, ಶಿವಾನಂದ ದೊಡ್ಡಮನಿ, ಕಾಸೀಂಮಸಾಬ ಕೊಕ್ಕರಗುಂದಿ, ಗಣೇಶ ಹಾತಲಗೇರಿ, ಮೊದಲಾದವರಿದ್ದರು. ಪತ್ರಕರ್ತ ದಿಲೀಪಕುಮಾರ ಜೋಶಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಶಿಕ್ಷಕರಿಗೂ ಪ್ಯಾಕೇಜ್ ಘೋಷಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕಾರ್ಮಿಕ ವಲಯಕ್ಕೆ ಕೊರೋನಾ ಪ್ಯಾಕೇಜ್ ನೀಡಿದಂತೆ ನಮಗೂ ವಿಶೇಷ ಪರಿಹಾರದ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಬಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ತಾಲೂಕು ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮನೋಜ್ ಸ್ವಾಮಿ ಹಿರೇಮಠ ನೇತೃತ್ವದಲ್ಲಿ ಜಿಲ್ಲೆಯ ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿದ ನೂರಾರು ಶಿಕ್ಷಕರು, ಬಿಇಒ ಸೋಮಶೇಖರಗೌಡ ಅವರಿಗೆ ಮನವಿ ಸಲ್ಲಿಸಿ ಸರ್ಕಾರಕ್ಕೆ ತಲುಪಿಸುವಂತೆ ತಿಳಿಸಿದರು.
ಈ ಕುರಿತು ಮಾತನಾಡಿದ ಮನೋಜ್ ಸ್ವಾಮಿ, ಕೊವಿಡ್ -19 ಬಂದ ನಂತರ ಅನೇಕ ವರ್ಗಗಳಿಗೆ, ಕಾರ್ಮಿಕರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಿರುವುದು ಶ್ಲಾಘನೀಯ, ಆದರೆ ಕೊವಿಡ್ -19 ಬಂದ ನಂತರ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಖಾಸಗಿ ಶಾಲಾ ಶಿಕ್ಷಕರು ಸಂಬಳವಿಲ್ಲದ ಅಕ್ಷರಶಃ ಬೀದಿಗೆ ಬಂದಿರುವುದು ತಮ್ಮ ಗಮನಕ್ಕೂ ಬಂದಿದೆ. ರಾಜ್ಯದಲ್ಲಿ ಅನೇಕ ಕಡೆ ಅಕ್ಷರ ಕಲಿಸುವ ಶಿಕ್ಷಕರು ತಮ್ಮ ಜೀವನ ನಿರ್ವಹಣೆಗಾಗಿ ಬೀದಿ – ಬೀದಿಗಳಲ್ಲಿ ತರಕಾರಿ ಮಾರಾಟ ಮಾಡಿದ್ದಾರೆ.
ಮನೆ ಬಾಡಿಗೆಗಾಗಿ ಕೂಲಿ ನಾಲಿ ಮಾಡುವ ಪರಿಸ್ಥಿತಿ ಬಂದಿರುವುದು ದುರಂತವೇ ಸರಿ. ತಮ್ಮ ನೇತೃತ್ವದ ಸರ್ಕಾರ ಬಂದಾಗಲೆಲ್ಲ ನೌಕರರ ಹಿತ ಕಾಪಾಡುತ್ತಿರುವುದು ಹೆಮ್ಮೆಯ ವಿಷಯ. ಆದರೆ ಈ ಕೊವಿಡ್ -19 ಅನುದಾನರಹಿತ ಶಿಕ್ಷಕರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದ್ದು, ನಮ್ಮ ಸರ್ಕಾರದ ಮೇಲೆ ಅಪಾರ ನಂಬಿಕೆ ಇಟ್ಟಿರುವ ಖಾಸಗಿ ಶಾಲಾ ಶಿಕ್ಷಕರ ಹಿತ ಕಾಪಾಡುತ್ತೀರಿ ಎನ್ನುವ ನಂಬಿಕೆಯಿದ್ದು ಮಾರ್ಚ ತಿಂಗಳಿನಿಂದ ಇಲ್ಲಿಯವರೆಗೆ ಮತ್ತು ಮುಂದೆ ಶಾಲೆಗಳು ಯಾವಾಗ ಆರಂಭವಾಗುತ್ತವೆ ಎಂದು ಬಕಪಕ್ಷಿಯಂತೆ ಕಾಯುತ್ತಿರುವ ಖಾಸಗಿ ಶಿಕ್ಷಕರಿಗೆ / ಶಿಕ್ಷಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇವೆ ಎಂದರು.
ಈ ಸಂಧರ್ಭದಲ್ಲಿ ಸಂಘದ ಕಾರ್ಯದರ್ಶಿ ಬೊಗೇಶ್ ದೇಶಪಾಂಡೆ, ಸಹ ಕಾರ್ಯದರ್ಶಿ ವೀರುಪಾಕ್ಷಗೌಡ ಪೊಲೀಸ್ ಪಾಟೀಲ್, ಸಂಘಟನಾ ಕಾರ್ಯದರ್ಶಿ ಕರುಣಾಕರ್ ಹೂಗಾರ, ಪದಾಧಿಕಾರಿಗಳಾದ ಹುಲಗಪ್ಪ.ಎ, ಬಸವರಾಜ ಕುಂಬಾರ್, ಸಿದ್ದಯ್ಯ ಹಿರೇಮಠ, ಸಿದ್ದಯ್ಯ ತೊಂಡಿಹಾಳ್, ಕೃಷ್ಣ ಜೋಷಿ, ಅನಿಲ್ ಕುಮಾರ್.ಕೆ, ಪ್ರದೀಪ್, ಕೆಂಚಪ್ಪ, ಪ್ರವೀಣಕುಮಾರ್, ಸೋಮಶೇಖರ್, ಕನಕಾಚಲ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು..
 

ಮಹಿಳೆ ಮೇಲೆ ಚಿರತೆ ದಾಳಿ, ಸ್ಥಿತಿ ಗಂಭೀರ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ:
ಜಾನುವಾರುಗಳನ್ನು ಮೇಯಿಸಲು ಬೆಟ್ಟದ ಪ್ರದೇಶಕ್ಕೆ ತೆರಳಿದ್ದ ಮಹಿಳೆ ಚಿರತೆ ದಾಳಿಗೆ ತುತ್ತಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪೂರ ಗ್ರಾಮದ ಬಳಿ ನಡೆದಿದೆ.
ಚಿಕ್ಕರಾಂಪುರ ಗ್ರಾಮದ ಮಾಬಮ್ಮ (55) ಗಾಯಾಗೊಂಡಿದ್ದು, ಇವರ ಕತ್ತು, ಕಿವಿ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮುಂಜಾನೆಯ ಸಮಯದಲ್ಲಿ ಜಾನುವಾರು ಮೇಯಿಸಲು ಬೆಟ್ಟಕ್ಕೆ ಹೋಗಿದ್ದಾರೆ.
ಇದನ್ನು ಕಂಡು ಹೊಂಚು ಹಾಕಿದ್ದ ಚಿರತೆ ಏಕಾಏಕಿ ಮಹಿಳೆ ಮೇಲೆ ದಾಳಿ ಮಾಡಿದೆ. ಇದಕ್ಕೆ ಎದೆಗುಂದದೆ ಮಹಿಳೆ ಚಿರತೆಯಿಂದ ತಪ್ಪಿಸಿಕೊಂಡು ಗ್ರಾಮದ ಕಡೆ ಚೀರುತ್ತಾ ಬಂದಿದ್ದಾಳೆ.
ತಕ್ಷಣ ಗಮನಿಸಿದ ಸ್ಥಳೀಯರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಪರಣ್ಣ ಮನವಳ್ಳಿ, ಗಾಯಾಳು ಮಹಿಳೆಗೆ ಸಾಂತ್ವನ ಹೇಳಿದರು. ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆಯೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಸಭೆ ಚುನಾವಣೆಗೆ ಶೀಘ್ರ ಮುಹೂರ್ತ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗದಗ ಬೆಟಗೇರಿ ನಗರಸಭೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಹುತೇಕ ಸರಿದಿದ್ದು, 2018ರಲ್ಲಿ ಪ್ರಕಟಗೊಂಡ ವಾರ್ಡ್‌ವಾರು ಮೀಸಲಾತಿ ಅನ್ವಯವೇ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.
ನಗರಸಭೆ 35 ವಾರ್ಡ್‌ಗಳ ವಾರ್ಡ್‌ವಾರು ಮೀಸಲಾತಿ ಅವೈಜ್ಞಾನಿಕವಾಗಿದೆ. ಕೇವಲ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. 16 ತಿಂಗಳ ವಿಚಾರಣೆ ನಂತರ ಹೈಕೋರ್ಟ್ ಮೊರೆ ಹೋದವರು ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಹೀಗಾಗಿ ಹೈಕೋರ್ಟ್ ಈ ಪ್ರಕರಣವನ್ನು ವಜಾಗೊಳಿಸಿದೆ.
ಈ ಹಿನ್ನೆಲೆಯಲ್ಲಿ 30-07-2018 ರಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಹೊರಡಿಸಿದ ವಾರ್ಡ್‌ವಾರು ಮೀಸಲಾತಿ ಅನ್ವಯ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೇ ರಾಜ್ಯ ಚುನಾವಣೆ ಆಯೋಗ ವಾರ್ಡ್‌ವಾರು ಮತದಾರರ ಪಟ್ಟಿಯನ್ನು ತಯಾರಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದು ಶೀಘ್ರವೇ ಚುನಾವಣೆ ನಡೆಯುವುದು ಖಾತ್ರಿಯಾದಂತಾಗಿದೆ.
ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟಗೊಂಡ ಬೆನ್ನಲ್ಲೆ ನಗರಸಭೆ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೆ. 29ರಂದು ರಾಜ್ಯ ಚುನಾವಣೆ ಆಯೋಗ ಪತ್ರ ಬರೆದಿದೆ.

ನ.5ರೊಳಗೆ ವಾರ್ಡ್‌ವಾರು ಮತದಾರರ ಪಟ್ಟಿ ಅಂತಿಮವಾಗಬೇಕು. ಚುನಾವಣೆ ಆಯೋಗದಿಂದ ಯಾವುದೇ ಸಮಯದಲ್ಲೂ ಚುನಾವಣೆ ಘೋಷಿಸಬಹುದು. ನಗರದಲ್ಲಿ ಮೂಲಭೂತ ಸೌಕರ್ಯಗಳಿಂದ ಜನತೆ ವಂಚಿತರಾಗಿದ್ದಾರೆ. ಜನರ ಯಾವುದೇ ಸಮಸ್ಯೆಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಚುನಾವಣೆ ಶೀಘ್ರ ಘೋಷಣೆಯಾದರೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ನಾನು ಕೂಡ ಆಕಾಂಕ್ಷಿಯಾಗಿದ್ದೇನೆ. ಸ್ಥಳೀಯರ ಜೊತೆ ಚರ್ಚಿಸಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಕೈಗೊಳ್ಳುವೆ.
-ಮಂಜು ಮುಳಗುಂದ, ನಗರಸಭಾ ಮಾಜಿ ಸದಸ್ಯ, ಗದಗ

ಮೀಸಲಾತಿ ಪ್ರಕಟ: ಚುನಾವಣೆಗೆ ಮುನ್ನವೇ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿರುವುದರಿಂದ ಮೀಸಲಾತಿ ಅಡಿಯಲ್ಲಿ ಬರುವ ಆಕಾಂಕ್ಷಿಗಳು ಚುನಾವಣೆಗೆ ನಿಲ್ಲಲು ಹಾತೊರೆಯುವಂತಾಗಿದೆ.
ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಒಂದೆಡೆಯಾದರೆ, ಅನೇಕ ವರ್ಷಗಳಿಂದ ನಗರಸಭೆಯ ಆಡಳಿತದ ಭಾಗವಾಗಿದ್ದ ಮಾಜಿ ಸದಸ್ಯರಿಗೆ ತೀವ್ರ ನಿರಾಸೆ ಮೂಡಿಸಿದೆ.

ನಗರಸಭೆ ವಶಕ್ಕೆ ಯತ್ನ
ಅಖಂಡ ಧಾರವಾಡ ಜಿಲ್ಲೆಯಿಂದ ಬೇರ್ಪಟ್ಟ ನಂತರವೂ ಗದಗ ಬೆಟಗೇರಿ ನಗರಸಭೆ ಅನೇಕ ವರ್ಷಗಳ ಕಾಲ ಕಾಂಗ್ರೆಸ್ ವಶದಲ್ಲಿಯೆ ಇದೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವದಲ್ಲಿರುವುದು ಜಿಲ್ಲೆಯ ಮೂವರು ಶಾಸಕರು, ಸಂಸದರು ಬಿಜೆಪಿಯಿಂದ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ನಗರಸಭೆಯಲ್ಲಿ ಕಮಲ ಅರಳಿಸಲು ಬಿಜೆಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಮುಖಂಡರು ತೆರೆ ಮರೆಯಲ್ಲಿ ನಗರಸಭೆ ವಶಕ್ಕೆ ಯೋಜನೆ ರೂಪಿಸಿದ್ದಾರೆ. ಇತ್ತ ಜಿಲ್ಲೆಯಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಭೀತಿಯಲ್ಲಿ ಕಾಂಗ್ರೆಸ್ ಸಹ ನಗರಸಭೆಯನ್ನು ತನ್ನ ವಶದಲ್ಲಿಯೇ ಇಟ್ಟುಕೊಳ್ಳಲು ಮುಂದಾಗಿದ್ದು, ಕಾಂಗ್ರೆಸ್ ನಾಯಕರು ಸಹ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ.

ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಂಪ್ಲಿ
ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲೂಕನ್ನು ಸೇರ್ಪಡೆಗೊಳಿಸಬೇಕೆಂದು ಕಂಪ್ಲಿ ತಾಲೂಕು ವಿಜಯನಗರ ಜಿಲ್ಲೆಗೆ ಸೇರ್ಪಡೆ ಹೋರಾಟ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ನೂತನ ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲೂಕು ಸೇರ್ಪಡೆ ಕುರಿತಂತೆ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಪಟ್ಟಣದ ತಹಸೀಲ್ದಾರ್ ಗೌಸಿಯಾಬೇಗಂ ಅವರಿಗೆ ಸಲ್ಲಿಸಲಾಯಿತು.
ನಂತರ ಮಾತನಾಡಿದ ಹೋರಾಟ ಸಮಿತಿಯ ಅಧ್ಯಕ್ಷ ಕರೇಕಲ್ ಶಂಕ್ರಪ್ಪ, ಈ ಹಿಂದೆಯೇ ಕಂಪ್ಲಿ ತಾಲೂಕನ್ನು ನೂತನ ವಿಜಯನಗರ ಜಿಲ್ಲೆಗೆ ಸೇರಿಸಬೇಕೆಂದು ಪಟ್ಟಣದ ಸಂಘ-ಸಂಸ್ಥೆಗಳೂ ಹೋರಾಟ ನಡೆಸಿದ್ದವು. ಆರಂಭದಲ್ಲಿ ಕಂಪ್ಲಿ ತಾಲೂಕು ತಾಲೂಕುಗಳ ಪಟ್ಟಿಯಲ್ಲಿತ್ತು. ಆದರೆ ನಂತರ ಇದನ್ನು ಕೈ ಬಿಡಲಾಗಿತ್ತು. ಇತ್ತೀಚೆಗೆ ಸಹ ಕಂಪ್ಲಿಯನ್ನು ನೂತನ ಜಿಲ್ಲೆಯಲ್ಲಿ ಸೇರಿಸಲಾಗಿತ್ತು. ಆದರೆ ಇದೀಗ ಪುನಃ ಕಂಪ್ಲಿ ತಾಲೂಕನ್ನು ನೂತನ ಜಿಲ್ಲೆಯಿಂದ ಕೈ ಬಿಟ್ಟಿರುವ ಬಗ್ಗೆ ಮಾಹಿತಿ ಇದೆ. ತಾಲೂಕು ವಿಜಯನಗರ ಜಿಲ್ಲೆಗೆ ಸೇರ್ಪಡೆ ಆಗದಿದ್ದಲ್ಲಿ ಪಟ್ಟಣದಲ್ಲಿ ಹಂತಹಂತವಾಗಿ ಹೋರಾಟ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಇಟ್ಗಿ ವಿರೂಪಾಕ್ಷಿ, ಆದೋನಿ ರಂಗಪ್ಪ, ಅಗಳಿ ಪಂಪಾಪತಿ, ಸಜ್ಜೇದ ಸಿದ್ದಲಿಂಗಪ್ಪ, ರುದ್ರಪ್ಪ, ಎನ್.ಎಂ. ಪತ್ರೆಯ್ಯಸ್ವಾಮಿ, ಕೊಟ್ರೇಶ್ ಕುಮಾರ್, ಬಿ.ವೆಂಕಟೇಶ್, ಬಿ.ಸಂಗಪ್ಪ, ಜಿ.ಶಿವಪ್ಪ, ಬಿ.ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸರಕಾರಿ ಶಾಲಾ ಪ್ರಭಾರಿ ಮುಖ್ಯಶಿಕ್ಷಕಿ ಅಮಾನತು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಂಪ್ಲಿ
ಪಟ್ಟಣದ ೩ನೇ ವಾರ್ಡ್ ಇಂದಿರಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ, ಪ್ರಭಾರಿ ಮುಖ್ಯಶಿಕ್ಷಕಿ ವಿದ್ಯಾವತಿ ಅವರನ್ನು ಅಮಾನತುಗೊಳಿಸಿ ಬಳ್ಳಾರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಸ್ತು ಪ್ರಾಧಿಕಾರಿ ಹಾಗೂ ಉಪನಿರ್ದೇಶಕ ಸಿ.ರಾಮಪ್ಪ ಆದೇಶ ಹೊರಡಿಸಿದ್ದಾರೆ.
ಶಾಲೆಯ ಸಹ ಶಿಕ್ಷಕಿ ವಿದ್ಯಾವತಿ ಕಳೆದ ವರ್ಷದಿಂದ ಸರಿಯಾಗಿ ಶಾಲೆಗೆ ಬಾರದೇ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅಮಾನತುಗೊಂಡಿದ್ದಾರೆ.
ಕರ್ತವ್ಯ ಲೋಪ ಕುರಿತು ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ನೀಡಿದ ದೂರನ್ನು ಅವಲೋಕಿಸಿ ಶಿಕ್ಷಣ ಸಂಯೋಜಕ ಟಿ.ಕೆ. ವೆಂಕಟೇಶ ರೆಡ್ಡಿ, ಸಿಆರ್‌ಪಿ ಜೆ.ಕೆ. ಮಂಜಪ್ಪ ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕಿಯ ಕರ್ತವ್ಯ ಲೋಪ ಕಂಡು ಬಂದಿರುವುದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ.
ಕೊನೆಗೆ ಸಹ ಶಿಕ್ಷಕಿ ವಿದ್ಯಾವತಿ ಅವರನ್ನು ಅಮಾನತುಗೊಳಿಸಲಾಗಿದೆ. ಶಾಲೆಯ ಪ್ರಭಾರವನ್ನು ಮುಂದಿನ ಆದೇಶದವರೆಗೆ ಸಿ.ಆರ್.ಪಿ. ಜೆ.ಕೆ.ಮಂಜಪ್ಪ ಅವರಿಗೆ ನೀಡಲಾಗಿದೆ.

ಪುರಸಭೆ ಮೀಸಲಾತಿ ಪ್ರಕಟ; ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಂಪ್ಲಿ
ಬಹುನಿರೀಕ್ಷಿತ ಸ್ಥಳೀಯ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟಗೊಂಡಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
2019ರ ನವೆಂಬರ್ 12 ರಂದು ಪುರಸಭೆಯ 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ನ.14ರಂದು ಮತಗಳ ಎಣಿಕೆ ನಡೆದಿತ್ತು. ಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಭಾಜಪ ಅಭ್ಯರ್ಥಿಗಳು ಹಾಗೂ 10 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದರು. ಈ ಮುಂಚೆ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.
ಸಾಮಾನ್ಯ ಮಹಿಳೆಗೆ ಮೀಸಲಾದ ಕಂಪ್ಲಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಎರಡು ಪಕ್ಷದಿಂದ ಜಯ ಗಳಿಸಿರುವ 10 ಮಹಿಳೆಯರು ಅರ್ಹರಿದ್ದರೂ ಸಹಿತ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಸಾಮಾನ್ಯ ವರ್ಗದ ಮಹಿಳೆ 14ನೇ ವಾರ್ಡಿನಿಂದ ಜಯಗಳಿಸಿರುವ ಶಾಂತಲಾ ವಿ. ವಿದ್ಯಾಧರ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಬಹುಮತ ಪಡೆದಿರುವ ಭಾಜಪದಲ್ಲಿ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಗೆದ್ದಿರುವ ಏಕೈಕ ಮಹಿಳೆ 14ನೇ ವಾರ್ಡಿನ ಶಾಂತಲಾ ವಿ.ವಿದ್ಯಾಧರ. ಆದರೆ ಈ ಪಕ್ಷದಿಂದ ಜಯ ಗಳಿಸಿರುವ ಉಳಿದ ಐವರು ಮಹಿಳಾ ಅಭ್ಯರ್ಥಿಗಳಲ್ಲಿ 11ನೇ ವಾರ್ಡಿನ ಪಾರ್ವತಿ, 19ನೇ ವಾರ್ಡಿನ ಗಂಗಮ್ಮ ಉಡೇಗೋಳ್, 21ನೇ ವಾರ್ಡಿನ ಎಚ್.ಹೇಮಾವತಿ ಎಚ್.ಪಿ. ಚಂದ್ರು ಸಹಿತ ಆಕಾಂಕ್ಷಿಗಳಾಗಿದ್ದಾರೆ.
ಇದೀಗ ಸಾಮಾನ್ಯ ಮಹಿಳಾ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಿರುವುದರಿಂದ ಹಾಗೂ ಬಹುವರ್ಷಗಳ ನಂತರ ವೀರಶೈವ ಲಿಂಗಾಯತ ಧರ್ಮದ ಅಭ್ಯರ್ಥಿ ಇರುವುದರಿಂದ ಇವರಿಗೆ ಅಧ್ಯಕ್ಷ ಸ್ಥಾನ ಸಿಗಬಹುದೆನ್ನುವ ಮಾತುಗಳು ಕೇಳಿ ಬರುತ್ತಿರುವುದರ ಜೊತೆಗೆ ಭಾಜಪ ಬಹುಮತ ಹೊಂದಿರುವ ಹಿನ್ನೆಲೆಯಲ್ಲಿ ಬಹುತೇಕ ಅಧ್ಯಕ್ಷರಾಗಿ ಆಯ್ಕೆಯಾಗಬಹುದಾಗಿದೆ.
ಇನ್ನು ಕಾಂಗ್ರೆಸ್ ಪಕ್ಷವು 10 ಸ್ಥಾನಗಳಲ್ಲಿ ಜಯ ಗಳಿಸಿದ್ದು, ಅದರಲ್ಲಿಯೂ ಅಧ್ಯಕ್ಷ ಆಕಾಂಕ್ಷಿಗಳಿದ್ದು, ಸ್ಥಳೀಯ ಶಾಸಕರು ಕೈಗೊಳ್ಳುವ ನಿರ್ಣಯದ ಮೇಲೆ ಪುರಸಭೆ ಆಡಳಿತ ಚುಕ್ಕಾಣಿ ಯಾರಿಗೆ ಎನ್ನುವುದು ತಿಳಿಯಲಿದೆ. ಉಪಾಧ್ಯಕ್ಷ ಸ್ಥಾನ ಬಿಸಿಎ ವರ್ಗಕ್ಕೆ ಮೀಸಲಾಗಿದ್ದು, ಈ ವರ್ಗದಿಂದ ಇಬ್ಬರು ಮುಸ್ಲಿಂ ಪುರುಷರು, ಒಬ್ಬ ಮಹಿಳೆ ಹಾಗೂ ಸಾಮಾನ್ಯ ಕ್ಷೇತ್ರದಿಂದ ಇಬ್ಬರು ಪುರುಷರು ಆಯ್ಕೆಯಾಗಿದ್ದರೂ ಸಹಿತ ಭಾಜಪ ಬಹುಮತ ಹೊಂದಿರುವುದರಿಂದ ಈ ಪಕ್ಷದ ಕೆ.ನಿರ್ಮಲ ಅಥವಾ ಹೂಗಾರ ರಮೇಶ್ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ಭಾಜಪಕ್ಕೆ ಸಂಪೂರ್ಣ ಬಹುಮತ ಇರುವುದರಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಅದೇ ಪಕ್ಷದಿಂದ ಆಗಬಹುದೆನ್ನುವ ಮಾತುಗಳು ಕೇಳಿಬರುತ್ತಿದ್ದರೂ ಸಹಿತ ರಾಜಕಾರಣದಲ್ಲಿ ಏನೂ ಆಗಬಹುದೆನ್ನುವ ಮಾತುಗಳನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಆದರೂ ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

ಸಹಕಾರ ಕ್ಷೇತ್ರಕ್ಕೆ ಸಿದ್ದನಗೌಡ ಪಾಟೀಲರ ಸೇವೆ ಸ್ಮರಣೀಯ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಏಷಿಯಾ ಖಂಡದಲ್ಲಿಯೇ ಮೊಟ್ಟಮೊದಲ ನೋಂದಾಯಿತ ಕಣಗಿನಹಾಳ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವುದರ ಮೂಲಕ ಸಹಕಾರ ಕ್ಷೇತ್ರಕ್ಕೆ ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲರ ಸೇವೆ ಸ್ಮರಣೀಯ ಎಂದು ಕೊಪ್ಪಳದ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಡಿ.ಬಿ.ಗಡೇದ ತಿಳಿಸಿದ್ದಾರೆ.
ನಗರದ ಕೊಪ್ಪಳದ ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಕೊಪ್ಪಳ ತಾಲೂಕು ಸರಕಾರಿ ಪದವಿಪೂರ್ವ ಕಾಲೇಜು ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಣಗಿನಹಾಳದಲ್ಲಿ ೨೦೦೫ರಲ್ಲಿ ಸಹಕಾರ ಸಂಘದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಸಿದ್ದನಗೌಡ ಪಾಟೀಲರ ಹೆಸರಿನಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು. ಇಂದು ಸಹಕಾರ ಕ್ಷೇತ್ರ ಎಲ್ಲ ರಂಗಗಳಲ್ಲಿ ಬೆಳೆದು ಬಂದಿರುವುದು ಸಂತಸದ ಸಂಗತಿ. ಕೊಪ್ಪಳದಲ್ಲಿಯೂ ಸಹಿತ ಕೊಪ್ಪಳ ತಾಲೂಕು ಸರಕಾರಿ ಪದವಿಪೂರ್ವ ಕಾಲೇಜು ನೌಕರರ ಪತ್ತಿನ ಸಹಕಾರ ಸಂಘ ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಸಂಘದ ಅಧ್ಯಕ್ಷ ಎ.ವಿ. ಉಪಾಧ್ಯಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊಪ್ಪಳ ಜಿಲ್ಲಾ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಸೋಮನಗೌಡ ಎಂ.ಪಾಟೀಲ, ತಾಲೂಕು ಅಧ್ಯಕ್ಷ ಪತ್ರೇಪ್ಪ ಛತ್ರಿಕಿ, ಭಾಗ್ಯನಗರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ರಾಜಶೇಖರ ಪಾಟೀಲ ಉಪಸ್ಥಿತರಿದ್ದರು.
ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐ.ಎಂ. ಚಿಕ್ಕರೆಡ್ಡಿ, ಎಂ.ಶಂಶುದ್ದೀನ್, ಮೊಯಿನುದ್ದೀನ್ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟರಾವ್ ದೇಸಾಯಿ, ಆರ್.ಎಸ್.ಸರಗಣಚಾರ್ ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಉತ್ತಮ ಅಂಕ ಪಡೆದ ಅದಿತಿ ಬೋಸ್ಲೆ, ಪ್ರಮೋದ ಕಂಡ್ರಿ, ವೇದಾ ತೊಣಿಸಿಹಾಳ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜಶೇಖರ ಅಂಗಡಿ ಸ್ವಾಗತಿಸಿದರು. ಎಚ್.ಎಸ್.ಬಾರಕೇರ ನಿರೂಪಿಸಿದರು. ರಾಚಪ್ಪ ಜಿ.ಕೇಸರಬಾವಿ ವಂದಿಸಿದರು.

error: Content is protected !!