Home Blog Page 3129

ಬಿಂಕದಕಟ್ಟಿ Zoo ಗೆ ಧರ್ಮ, ಅರ್ಜುನ್ ಆಗಮನ; ಮೆರಗು ಹೆಚ್ಚಿಸಿದ ಜೋಡಿ ಸಿಂಹಗಳು

ವಿಜಯಸಾಕ್ಷಿ ಸುದ್ದಿ, ಗದಗ

ಕೇಂದ್ರ ಮೃಗಾಲಯ ಪ್ರಾಧಿಕಾರವು ಬಿಂಕದಕಟ್ಟಿ ಕಿರು ಮೃಗಾಲಯಕ್ಕೆ ಜೋಡಿ ಸಿಂಹಗಳ ಹಸ್ತಾಂತರಕ್ಕೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಎರಡು ಗಂಡು ಸಿಂಹಗಳು ಗದಗ ತಾಲೂಕಿನ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯಕ್ಕೆ ಗುರುವಾರ ತಡರಾತ್ರಿ ಆಗಮಿಸಿವೆ.

ಸಿಂಹಗಳಿಗಾಗಿ ಪ್ರಾಣಿ ಸಂಗ್ರಹಾಲಯದಲ್ಲಿ ನೈಸರ್ಗಿಕ ಆವಾಸ ಸ್ಥಾನದ ಮಾದರಿಯಲ್ಲೇ ವಿಶೇಷ ಪಂಜರ ಸಿದ್ದಪಡಿಸಲಾಗಿದೆ. ಸಿಂಹಗಳು ಸ್ವಚ್ಛಂದವಾಗಿ ವಿಹರಿಸಲು ಅನುಕೂಲಕರವಾದ ವಾತಾವರಣ ನಿರ್ಮಿಸಲಾಗಿದೆ. ಇದಕ್ಕಾಗಿ 1,000 ಚ.ಮೀ. ಸ್ಥಳ ಮೀಸಲಿಡಲಾಗಿದೆ. ಇದರಲ್ಲಿ ಕಲ್ಲಿನ ಬಂಡೆಗಳು, ನೀರಿನ ಹೊಂಡ, ಗಿಡ-ಮರಗಳಿರುವಂತೆ ವಿನ್ಯಾಸಗೊಳಿಸಲಾಗಿದೆ.

ಸಿಂಹಗಳೆರಡು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲೇ ಹುಟ್ಟಿ ಬೆಳೆದಿದ್ದರೂ ಬಯಲು ಸೀಮೆಯ ಪರಿಸರಕ್ಕೆ ಹೊಂದಿಕೊಳ್ಳುವವರೆಗೆ ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಇರುವುದಿಲ್ಲ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಸಿಂಹಗಳನ್ನು ೧೫-೩೦ ದಿನಗಳವರೆಗೆ ನಿಗಾದಲ್ಲಿಟ್ಟು, ಇಲ್ಲಿನ ಪರಿಸರಕ್ಕೆ ಹೊಂದಿಕೊಂಡ ಬಳಿಕ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು.

ಬಿಂಕದಕಟ್ಟಿ ಸಂಗ್ರಹಾಲಯದಲ್ಲಿ ಕತ್ತೆ ಕಿರುಬ ವೀಕ್ಷಿಸಲು ಗಾಜಿನ ಪರದೆಯ ವ್ಯವಸ್ಥೆ ಮಾಡಿದ್ದು, ಅದರಂತೆ ಸಿಂಹಗಳನ್ನು ವೀಕ್ಷಿಸಲು 39 ಎಂಎಂ
ಗಾಜಿನ ಪರದೆ ವ್ಯವಸ್ಥೆ ಮಾಡಲಾಗಿದೆ.
ಈ ಗಾಜುಗಳನ್ನು ಚಂಡಿಗಢದಿಂದ ತರಿಸಿಕೊಳ್ಳಲಾಗುತ್ತಿದೆ.

ಉತ್ತರ ಕರ್ನಾಟಕದಲ್ಲೇ ಬಿಂಕದಕಟ್ಟಿ ಮೃಗಾಲಯವು ಎರಡು ವರ್ಷಗಳ ಹಿಂದಷ್ಟೇ ಜೋಡಿ ಹುಲಿಗಳನ್ನು ಹೊಂದಿರುವ ಖ್ಯಾತಿ ಪಡೆದಿತ್ತು. ಇದೀಗ ಜೋಡಿ ಸಿಂಹಗಳು ಆಗಮಿಸುವ ಮೂಲಕ ಮೃಗಾಲಯದ ಮೆರಗನ್ನು ಇನ್ನಷ್ಟು ಹೆಚ್ಚಿಸಿವೆ.

ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಇದ್ರೂ ತಪ್ಪದ BRTS ಬಸ್ ಅಪಘಾತಗಳು

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಎರಡು ದಿನಗಳ ಹಿಂದಷ್ಟೇ ಮಹಿಳೆಯ ತಲೆಯ ಮೇಲೆ ಹರಿದಿದ್ದ ಚಿಗರಿ ಬಸ್ ಇಂದು ಮತ್ತೊಂದು ಅಪಘಾತಕ್ಕೆ ಕಾರಣವಾಗಿದೆ. ಇಂದು ಚಿಗರಿ ಬಸ್ಸೊಂದು ಬೈಕ್ ಸವಾರ ನ ಮೇಲೆ ಎರಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸದಾ ಒಂದಿಲ್ಲ ಒಂದು ಅಪಘಾಕ್ಕೆ ಹೆಸರಾಗಿರುವ ಇಲ್ಲಿನ ಬಿ ಆರ್ ಟಿ ಎಸ್ ಚಿಗರಿ ಬಸ್ ಸಂಚಾರದ ನಿರ್ಭಂದಿತ ರಸ್ತೆಯಲ್ಲಿ ಸಂಚರಿಸದಿದ್ದರು ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳುವ ಮುನ್ನ ನೂರು ಬಾರಿ ಯೋಚಿಸಿ ನಡೆದರೂ ಕೂಡ “ನಜರ್ ಹಟಿ ದುರ್ಘಟನಾ ಘಟಿ” ಎಂಬುವಂತಾಗಿದೆ.

ಬೈಕ್ ಸವಾರ ಹಾಗೂ ಚಿಗರಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಅಮರನಗರ ನಿವಾಸಿ ಮಹೇಶ್ ಹೊಸಮನಿ (೩೦) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದರೆ ಬಿ ಆರ್ ಟಿ ಎಸ್ ಚಿಗರಿ ಬಸ್ ಸಂಚಾರ ಅವೈಜ್ಞಾನಿಕವಾಗಿದೆ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ಭಾರಿ ಅನಾಹುತ

ವಿಜಯಸಾಕ್ಷಿ ಸುದ್ದಿ, ಗದಗ

ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ನಡೆದಿದೆ.

ಬ್ರೇಕ್ ಫೇಲ್ ಆಗಿ ಅಪಘಾತಕ್ಕಿಡಾಗುತ್ತಿದ್ದ ಕೆಎಸ್ ಆರ್ಟಿಸಿ ಬಸ ನ್ನು ಚಾಲಕ ಸಿದ್ದಪ್ಪ ಗುದ್ದಿನ ಅವರು ತಮ್ಮ ಸಮಯ ಪ್ರಜ್ಞೆಯಿಂದ ದಿಬ್ಬಕ್ಕೆ ಹತ್ತಿಸಿ ನಿಲ್ಲಿಸಿದ್ದಾರೆ.

ಶಿರಹಟ್ಟಿ‌ಯಿಂದ ಮುಂಡರಗಿ ಪಟ್ಟಣಕ್ಕೆ ಬರುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿದ್ದನ್ನು ಮನಗಂಡ ಚಾಲಕ ಸಿದ್ದಪ್ಪ ಕ್ಷಣಮಾತ್ರದಲ್ಲಿ ಎಚ್ಚೆತ್ತುಕೊಂಡು ರಸ್ತೆಗೆ ಹೊಂದಿಕೊಂಡ ಗುಡ್ಡಕ್ಕೆ ಬಸ್ ಏರಿಸಿ ಪ್ರಯಾಣಿಕರ ಪ್ರಾಣ ರಕ್ಷಣೆ ಮಾಡಿದ್ದಾರೆ.

ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಬಸ್ ನಿಯಂತ್ರಣ ಮಾಡಿದ ಚಾಲಕ ಸಿದ್ದಪ್ಪ ಅವರ ಧೈರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಿಮ್ಸ್‌ನಲ್ಲಿ ಫುಡ್ ಪಾಯಿಸನ್: 14 ವಿದ್ಯಾರ್ಥಿಗಳು ಅಸ್ವಸ್ಥ

ವಿಜಯಸಾಕ್ಷಿ ಸುದ್ದಿ, ಗದಗ

ವಿಷಪೂರಿತ ಆಹಾರ ಸೇವಿಸಿದ್ದ 14 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಮ್ಸ್ ಕಾಲೇಜಿನ ಶಾರದಾ ಕ್ಯಾಂಟೀನ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ.

ಈಗಾಗಲೇ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ತೀವ್ರವಾಗಿ ಅಸ್ವಸ್ಥಗೊಂಡಿರುವ 11 ಜನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳು ಜಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ರಾತ್ರಿ ಕಾಲೇಜಿನಲ್ಲಿರುವ ಶಾರದಾ ಕ್ಯಾಂಟಿನ್‌ನಲ್ಲಿ ಅನ್ನ ಸಾಂಬಾರ ಸೇವಿಸಿದ್ದು, ಈ ವೇಳೆ ಅಸ್ವಸ್ಥಗೊಂಡಿದ್ದಾರೆ. ಅಲ್ಲದೇ, ವಿಷಪೂರಿತ ಆಹಾರ ಸೇವಿಸಿದ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ವಾಂತಿ ಬೇದಿಯಂತಹ ಸಮಸ್ಯೆಗಳಾಗಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಜಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ದಾವಣಗೆರೆ ಜಿಲ್ಲಾ ಬೈಲಪತ್ತಾರ್ ಸಮುದಾಯದ ವತಿಯಿಂದ ನಗರಕ್ಕೆ ಭೇಟಿ ನೀಡಿದ್ದ ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.

ನಗರದ ಬಂಬೂಬಜಾರ್ ವಿಠ್ಠಲ ಮಂದಿರಲ್ಲಿ ನಡೆದ ಕಾರ್ಯಕ್ರಮದಲ್ಲಿ, ದಾವಣಗೆರೆ ಜಿಲ್ಲಾ ಬೈಲ್ ಪತ್ತಾರ್ ಸಂಘದ ಅಧ್ಯಕ್ಷ ಅಪ್ಪಣ್ಣ ಬೈಲ್ ಪತ್ತಾರ್, ಗೌರವಾಧ್ಯಕ್ಷ ನಿಂಗಪ್ಪ, ಉಪಾಧ್ಯಕ್ಷ ಮಾರುತಿ, ಕಾರ್ಯದರ್ಶಿ ರಾಜು, ಪರಮೇಶ್ ಸೇರಿದಂತೆ ಇತರೆ ಪದಾಧಿಕಾರಿಗಳು, ನಿಗಮಕ್ಕೆ ಶೀಘ್ರವಾಗಿ ಸಮುದಾಯದ ಸದಸ್ಯರನ್ನು ನೇಮಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಿಗಮದ ನಿರ್ದೇಶಕ ಲಕ್ಷ್ಮಣ ಶಿಕಾರಿಪುರ, ಬೈಲಪತ್ತಾರ್ ಸಂಘದ ರಾಜ್ಯಾಧ್ಯಕ್ಷ ಪ್ರಕಾಶ್ ಬೈಲಪತ್ತಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪಾಕಿಸ್ತಾನಿ ಫೈಟರ್‌ ನನ್ನು ಮಣ್ಣು ಮುಕ್ಕಿಸಿದ ಬೆಂಗಳೂರಿನ ಫೈಟರ್‌ ಮೊಹಮ್ಮದ್‌ ಫರಾದ್ ಗೆ ಸನ್ಮಾನ

0

ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಮಾರ್ಚ್‌ 11 ರಂದು ಬಹ್ರೇನ್‌ ನಲ್ಲಿ ನಡೆದ ಎಂಎಂಎ (ಮಿಕ್ಸಡ್‌ ಮಾರ್ಷಲ್‌ ಆರ್ಟ್ಸ್‌) ಫೈಟ್‌ ನಲ್ಲಿ ಬೆಂಗಳೂರಿನ ಫೈಟರ್‌ ಮೊಹಮ್ಮದ ಫರಾದ್‌ ಪಾಕಿಸ್ತಾನಿ ಫೈಟರ್‌ ಉಲೂಮಿ ಕರೀಮ್‌ ಅವರನ್ನು ನಾಕ್‌ಔಟ್‌ ಮಾಡಿ ಗೆಲವು ಸಾಧಿಸಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹಾಗೂ ದೇಶದ ಪತಾಕೆಯನ್ನು ಹಾರಿಸಿದ ಬೆಂಗಳೂರಿನ ಫೈಟರ್‌ ಗೆ ಇಂದು ಕರ್ನಾಟಕ ಸ್ಟೇಟ್‌ ಫುಟ್‌ಬಾಲ್‌ ಅಸೋಸಿಯೇಷನ್‌, ನಲಪಾಡ್‌ ಅಕಾಡೆಮಿ ಹಾಗೂ ಬೌರಿಂಗ್‌ ಇನ್ಸಿಟ್ಯೂಟ್‌ ಜಂಟಿಯಾಗಿ ಇಂದು ಸನ್ಮಾನಿಸಿದವು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಫೈಟರ್‌ ಮೊಹಮ್ಮದ ಫರಾದ್*, ಎಂಎಂಎ ಇತ್ತೀಚೆಗೆ ಜಗತ್ತಿನಾದ್ಯಂತ ಬಹಳಷ್ಟು ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದೆ. ಈ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಹಳಷ್ಟು ದೈಹಿಕ ಶ್ರಮ ಹಾಗೂ ಶಕ್ತಿಯ ಅಗತ್ಯವಿದೆ. ನಿಜವಾದ ಫೈಟ್‌ ನಲ್ಲಿ ಅದರಲ್ಲೂ ನಮ್ಮ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನಿ ಫೈಟರನ್ನು ನಾಕ್‌ಔಟ್‌ ಮಾಡಿ ಗೆಲವು ಸಾಧಿಸಿದ್ದು ಬಹಳ ಸಂತಸ ತಂದಿದೆ. ನನ್ನ ಗೆಲುವನ್ನು ಗುರುತಿಸಿ ಕರ್ನಾಟಕ ಸ್ಟೇಟ್‌ ಫುಟ್‌ಬಾಲ್‌ ಅಸೋಸಿಯೇಷನ್‌, ನಲಪಾಡ್‌ ಅಕಾಡೆಮಿ ಹಾಗೂ ಬೌರಿಂಗ್‌ ಇನ್ಸಿಟ್ಯೂಟ್‌ ನನ್ನ ಊರಿನಲ್ಲಿ ಸನ್ಮಾನಿಸುತ್ತಿರುವುದು ಬಹಳ ಖುಷಿಯ ವಿಷಯವಾಗಿದೆ ಎಂದರು.
ಕರ್ನಾಟಕ ಸ್ಟೇಟ್‌ ಫುಟ್‌ಬಾಲ್‌ ಅಸೋಸಿಯೇಷನ್‌ ಅಧ್ಯಕ್ಷರ ಹಾಗೂ ಶಾಸಕ ಎನ್‌ ಎ ಹ್ಯಾರಿಸ್ ಮಾತನಾಡಿ, ದೈಹಿಕ ಶಕ್ತಿಯನ್ನು ಬೇಡುವ ಕ್ರೀಡೆ ಮಿಕ್ಸಡ್‌ ಮಾರ್ಷಲ್‌ ಆರ್ಟ್ಸ್‌, ಇಂತಹ ಕ್ರೀಡೆಯಲ್ಲಿ ನಮ್ಮ ನಗರದ ಹುಡುಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಬಹಳ ಹೆಮ್ಮೆಯ ಸಂಗತಿ. ಇಂತಹ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕಾಗಿರುವುದು ನಮ್ಮ ಅದ್ಯ ಕರ್ತವ್ಯ. ಈ ಹಿನ್ನಲೆಯಲ್ಲಿ ಫುಟ್‌ಬಾಲ್‌ ಅಸೋಸಿಯೇಷನ್‌ ವತಿಯಿಂದ ಸನ್ಮಾನ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಬೇಕಾದ ಪ್ರೋತ್ಸಾಹ ನೀಡುವುದಕ್ಕೂ ಸಿದ್ದರಿದ್ದೇವೆ. ಮೊಹಮ್ಮದ್‌ ಫರಾದ್‌ ಸಾಧನೆ ಇನ್ನು ಹಲವರಿಗೆ ಸ್ಪೂರ್ತಿಯಾಗಲಿ ಹಾಗೂ ಹೆಚ್ಚು ಹೆಚ್ಚು ಯುವ ಜನಾಂಗ ಇಂತಹ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.
ನಲಪಾಡ್‌ ಅಕಾಡೆಮಿಯ ನಿರ್ದೇಶಕ ಓಮರ್‌ ನಲಪಾಡ್‌ ಹ್ಯಾರಿಸ್‌, ಆಲ್‌ ಇಂಡಿಯಾ ಎಂಎಂಎ ಫೆಡರೇಷನ್‌ ನ ಪ್ರಧಾನ ಕಾರ್ಯದರ್ಶಿ ಹಾಗೂ ತರಬೇತಿ ನೀಡಿದ ಅಬ್ದುಲ್‌ ಮುನೀರ್, ಆಲ್‌ ಇಂಡಿಯಾ ಎಂಎಂಎ ಫೆಡರೇಷನ್‌ ನ ಅಧ್ಯಕ್ಷ ಆದಿತ್ಯ, ಬೌರಿಂಗ್‌ ಇನ್ಸಿಟ್ಯೂಟ್ ನ ಅಧ್ಯಕ್ಷರಾದ ರೂಪ್‌ ಗೋಲ್ಖಾನಿ ಉಪಸ್ಥಿತರಿದ್ದರು.

ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಕಿರ್ಲೋಸ್ಕರ್ ನೇಮಕ

ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆ ಉನ್ನತೀಕರಣ ಯೋಜನೆಗಳಿಗೆ ಮತ್ತು ಆರೋಗ್ಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್ ಆರ್ ನಿಧಿಯನ್ನು ಕ್ರೋಢೀಕರಿಸಲು ಸರ್ಕಾರ ರಚಿಸಿರುವ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ನೇಮಕ ಮಾಡಿರುವ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸ್ತಾಂತರ ಮಾಡಿದರು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಉಪಸ್ಥಿತರಿದ್ದರು.

ಪೊಲೀಸರ ದಾಳಿ, ಸ್ಫೋಟಕ ವಸ್ತುಗಳ ಜಪ್ತಿ; ಆರೋಪಿ ಶಿವರಡ್ಡಿ ಸುಬ್ಬಾರಡ್ಡಿ ತಮ್ಮನೇನೆ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಕಲ್ಲಿನ ಕ್ವಾರಿಯಲ್ಲಿ ಸ್ಫೋಟಕ ವಸ್ತುಗಳನ್ನು ಉಪಯೋಗಿಸಿ ಗಣಿಗಾರಿಕೆ ನಡೆಸುವ ಉದ್ದೇಶದಿಂದ ಅಕ್ರಮವಾಗಿ ಬೈಕ್ ಮೇಲೆ ಸಾಗಾಟ ಮಾಡುತ್ತಿದ್ದ ಮೂಲತಃ ಆಂದ್ರಪ್ರದೇಶದ ಮೋಕ್ಸಗುಂಡಮ್ಮನ ಶಿವರಡ್ಡಿ ಸುಬ್ಬಾರಡ್ಡಿ ತಮ್ಮನೇನೆ ಎಂಬಾತನನ್ನು ಶಿರಹಟ್ಟಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಖಚಿತ ಮಾಹಿತಿ ಪಡೆದ ಶಿರಹಟ್ಟಿ ಸಿಪಿಐ ವಿಕಾಸ ಪಿ ಲಮಾಣಿ ಹಾಗೂ ಸಿಬ್ವಂದಿಗಳು ದಾಳಿ ಮಾಡಿ ಸುಮಾರು 23 ಸಾವಿರ ರೂ, ಮೌಲ್ಯದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

102 ಜಿಲಿಟಿನ್ ಕಡ್ಡಿ, 21 ಎಲೆಕ್ಟ್ರಾನಿಕ್ ಡಿಟೊನೇಟರ್, ಬೈಕ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ.

ಚಿಕ್ಕೋಡಿಯ ವಿನಯ ಟ್ರೇಡರ್ಸ್ ನಲ್ಲಿ ಈ ಸ್ಫೋಟಕಗಳನ್ನು ಖರೀದಿ ಮಾಡಲಾಗಿದ್ದು, ವಿನಯ ಟ್ರೇಡರ್ಸ್ ಮೇಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೋವಿಡ್-19 ನಿಯಂತ್ರಣ, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ; ಡಿಸಿ ಸುಂದರೇಶ್ ಬಾಬು

ವಿಜಯಸಾಕ್ಷಿ ಸುದ್ದಿ, ಗದಗ

ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೋವಿಡ್-19 ಪ್ರಕರಣಗಳು ಎರಡನೇ ಅಲೆಯ ಭೀತಿಯನ್ನು ಸೃಷ್ಟಿಸುತ್ತಿದ್ದು, ಇದನ್ನು ತಡೆಗಟ್ಟಲು ಕೋವಿಡ್-19 ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡುವುದು ಇತ್ಯಾದಿಗಳ ಕುರಿತು ಆರೋಗ್ಯ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು.

ವಿವಿಧ ಸಮಾರಂಭಗಳು ಹಾಗೂ ಆಚರಣೆಯ ಸಂದರ್ಭದಲ್ಲಿ ಹೆಚ್ಚು ಸಾರ್ವಜನಿಕರು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯವು ಹೆಚ್ಚಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ ಈ ಕೆಳಕಂಡಂತೆ ಸೂಚಿಸಿದ ಸಂಖ್ಯೆಯನ್ನು ಮೀರದಂತೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಆಚರಣೆಗಳು, ಸಮಾರಂಭಗಳು ಜರುಗುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ವ್ಯಕ್ತಿಗೆ 3.25ಸ್ಕ್ವೇರ್ ಮೀಟರ್ ಮಾನದಂಡವನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ಮದುವೆಗೆ ತೆರೆದ ಪ್ರದೇಶಗಳಲ್ಲಿ 500 ಜನರು ಹಾಗೂ ಸಭಾಂಗಣಗಳು, ಹಾಲ್‌ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 200 ಜನರು ಮೀರದಂತೆ ಪ್ರವೇಶಕ್ಕೆ ಅವಕಾಶವಿದೆ.

ಜನ್ಮದಿನ ಹಾಗೂ ಇತರ ಆಚರಣೆಗಳಲ್ಲಿ ತೆರೆದ ಪ್ರದೇಶಗಳಲ್ಲಿ 100 ಜನರಿಗೆ ಹಾಗೂ ಸಭಾಂಗಣ , ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 50 ಜನರು ಮೀರದಂತೆ ಅವಕಾಶವಿದೆ.

ನಿಧನ, ಶವಸಂಸ್ಕಾರಗಳಿಗೆ ತೆರೆದ ಪ್ರದೇಶಗಳಲಿ 100 ಜನರು ಹಾಗೂ ಸಭಾಂಗಣಗಳು, ಹಾಲ್, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 50 ಜನರಿಗೆ ಅವಕಾಶವಿದೆ. ಇತರೆ ಸಮಾರಂಭಗಳಿಗೆ ಹಾಲ್‌ನ ವಿಸ್ತೀರ್ಣಕ್ಕೆ ಅನುಗುಣವಾಗಿ 100 ಜನರು ಮೀರದಂತೆ, ಧಾರ್ಮಿಕ ಆಚರಣೆಗಳು, ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನರು ಮೀರದಂತೆ, ರಾಜಕೀಯ ಆಚರಣೆಗಳು, ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನರು ಮೀರದಂತೆ ಅವಕಾಶವಿರುತ್ತದೆ.

ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ವಿಧಿಸಿದ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆತ್ತವರೊಂದಿಗೆ ಕಿರಿಕ್; ಚಿಕ್ಕಪ್ಪನನ್ನೇ ಕೊಲೆಗೈದ ಮಗ

ವಿಜಯಸಾಕ್ಷಿ ಸುದ್ದಿ, ಗದಗ

ಹೆತ್ತ ತಾಯಿ-ತಂದೆಗೆ ಅವಾಚ್ಯವಾಗಿ ನಿಂದಿಸುತ್ತಿದ್ದ ಚಿಕ್ಕಪ್ಪನನ್ನೇ ಯುವಕನೋರ್ವ ಚಾಕುವಿನಿಂದ ಇರಿದು ಕೊಲೆಗೈದ ದುರ್ಘಟನೆ ಗದಗನ ಬೆಟಗೇರಿಯಲ್ಲಿ ನಡೆದಿದೆ.

ಬೆಟಗೇರಿಯ ಕುರಹಟ್ಟಿ ಪೇಟೆಯ ಮೈಲಾರ ಲಿಂಗಪ್ಪನ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಮಂಜುನಾಥ್ ಗದುಗಿನ ಕೊಲೆಯಾದ ದುರ್ಧೈವಿ.

ಪ್ರವೀಣ ಗದುಗಿನ ಎಂಬಾತನೇ ಕೊಲೆಗೈದ ಆರೋಪಿ ಎನ್ನಲಾಗಿದೆ. ಈ ಕುರಿತು ಬೆಟಗೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊಲೆಯಾದ ಮಂಜುನಾಥ್, ಆರೋಪಿ ಪ್ರವೀಣ್ ಇಬ್ಬರು ಸಂಬಂಧಿಕರಾಗಿದ್ದು, ವರೆಸೆಯಲ್ಲಿ ಕಾಕಾ,ಮಗ ಎನ್ನಲಾಗಿದೆ.

ಆದರೆ ಇಬ್ಬರು ಬಾರ್ ಬೆಂಡಿಂಗ್ ಕೆಲಸ ಮಾಡುತಿದ್ದರು. ಕೊಲೆಯಾದ ಮಂಜುನಾಥ್, ಆರೋಪಿ ಪ್ರವೀಣನ ತಂದೆ ತಾಯಿಯ ಜೊತೆಗೆ ಆಗಾಗ ಜಗಳ ಮಾಡುತ್ತಿದ್ದನಂತೆ, ಹೀಗಾಗಿ ಇದರಿಂದ ಚಿಕ್ಕಪ್ಪನ ವರ್ತನೆಗೆ ಬೇಸತ್ತು ಕೊಲೆ ಮಾಡಿದ್ದಾನೆ ಅಂತ ಪೊಲೀಸ ಮೂಲಗಳಿಂದ ತಿಳಿದುಬಂದಿದೆ.

ಸುದ್ದಿ ತಿಳಿದ ಬೆಟಗೇರಿ ಠಾಣೆಯ ಪಿಎಸ್ಐ ರಾಜೇಶ್ ಬಟಕುರ್ಕಿ ಸಿಬ್ಬಂದಿ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ‌ಪರಿಶೀಲನೆ ನಡೆಸಿ ಆರೋಪಿ ಪ್ರವೀಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

error: Content is protected !!