ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಇಲ್ಲಿನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನ.2 ರಂದು ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳೆರೆಡು ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ.
ಇದರ ಬೆನ್ನಲ್ಲೆ ಕಾಂಗ್ರೆಸ್ ಸದಸ್ಯನೊಬ್ಬರನ್ನು ಅ.29ರ ರಾತ್ರಿ ಸಿನಿಮಿಯ ರೀತಿಯಲ್ಲಿಕಿಡ್ನಾಪ್ ಮಾಡಿದ್ದು, ಬಿಜೆಪಿ ಮುಖಂಡರೆ ಕಿಡ್ನಾಪ್ ಮಾಡಿರುವ ಆರೋಪ ಕೇಳಿ ಬಂದಿದೆ.
ನಗರಸಭೆ 7 ನೇ ವಾರ್ಡ್ ನ ಕಾಂಗ್ರೆಸ್ ಸದಸ್ಯ ಮನೋಹರಸ್ವಾಮಿ ಹಿರೇಮಠ ಕಿಡ್ನಾಪ್ ಆದವರು. ರಾತ್ರೊರಾತ್ರಿ ಸದಸ್ಯ ನಾಪತ್ತೆಯಾಗಿದ್ದು, ಆತನನ್ನು ನಾಲ್ಕೈದು ಜನರು ಎಳೆದೊಯ್ಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ಕೂಡಲೇ ಪೊಲೀಸ್ ಠಾಣೆಗೆ ಆಗಮಿಸದ ಕೈ ಮುಖಂಡರು ತಮ್ಮ ಸದಸ್ಯನನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ಮತ್ತೊಂದೆಡೆ ನಾಪತ್ತೆಯಾಗಿದ್ದ ಸದಸ್ಯ ಕಾರವಾರದ ಹಳಿಯಾಳ ಪೊಲೀಸ್ ಠಾಣೆಯಲ್ಲಿರುವುದು ಬೆಳಕಿಗೆ ಬಂದಿದೆ. ಅಲ್ಲದೇ
ಬಿಜೆಪಿ ಬೆಂಬಲಿತ ಯುವಕರು ಅಪಹರಣ ಮಾಡಿರುವುದು ಬಯಲಾಗಿದೆ.
ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಪಹರಣಕಾರರು ನ. 2ವರೆಗೂ ಸದಸ್ಯನನ್ನು ಅಜ್ಞಾತವಾಗಿಲಸು ಸಂಚು ರೂಪಿಸಿದ್ದರೆಂದು ತಿಳಿದು ಬಂದಿದೆ. ಮೂತ್ರ ವಿಸರ್ಜನೆ ನೆಪದಲ್ಲಿ ಕಾರಿನಿಂದ ಕೆಳಗಿಳಿದ ಸದಸ್ಯ ಅಪಹರಣಕಾರರಿಂದ ತಪ್ಪಿಸಿಕೊಂಡಿದ್ದಾನೆ. ಅಲ್ಲದೇ ಬೀಟ್ ಪೊಲೀಸರ ನೆರವಿನೊಂದಿಗೆ ಪೊಲೀಸ್ ಠಾಣೆ ಆಶ್ರಯ ಪಡೆದಿದ್ದಾರೆ. ಸದ್ಯ ಗಂಗಾವತಿ ನಗರಠಾಣೆ ಪೊಲೀಸರು ಹಳಿಯಾಳಕ್ಕೆ ತೆರಳಿದ್ದಾರೆ.
ನಗರಸಭೆ ಕಾಂಗ್ರೆಸ್ ಸದಸ್ಯನ ಅಪಹರಣ
ಕಂಪ್ಲಿಷನ್ ಸರ್ಟಿಫಿಕೇಟ್ ಗಾಗಿ ಲಂಚ: ಇಂಜಿನಿಯರ್ ಮೀರಾಜುದ್ದೀನ್ ಬಂಧನ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: 2018-19 ರ ಸಾಲಿನ ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೊಜನೂರ ಗ್ರಾಮದಲ್ಲಿ ಕೈಗೊಂಡಿದ್ದ ಸಾಮೂಹಿಕ ಶೌಚಾಲಯ ಕಾಮಗಾರಿಯ ಎಂ ಬಿ ಕಂಪ್ಲಿಷನ್ ಸರ್ಟಿಫಿಕೇಟ್ ಕೊಡಲು ಗುತ್ತಿಗೆದಾರರಿಂದ 15 ಸಾವಿರ ರೂ, ಲಂಚ ಕೇಳಿದ್ದ ಇಂಜಿನಿಯರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಶಿರಹಟ್ಟಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಜೂನಿಯರ್ ಇಂಜಿನಿಯರ್ ಮೀರಾಜುದ್ದೀನ್ ಅವರೇ ಲಂಚ ಪಡೆಯುವಾಗ ಸಿಕ್ಕಿ ಬಿದ್ದವರು.
ಗದಗ ತಾಲೂಕಿನ ನರಸಾಪೂರ ಗ್ರಾಮದ ಗುತ್ತಿಗೆದಾರ ರವಿಕುಮಾರ್ ನಿಡಗುಂದಿ, ಗೊಜನೂರು ಗ್ರಾಮದಲ್ಲಿ ಎರಡು ಲಕ್ಷ ರೂ, ವೆಚ್ಚದಲ್ಲಿ ಸಾಮೂಹಿಕ ಶೌಚಾಲಯ ನಿರ್ಮಾಣ ಮಾಡಿದ್ದರು. ಆದರೆ ಕಾಮಗಾರಿಯ ಎಂ ಬಿ ಹಾಗೂ ವರ್ಕ್ ಕಂಪ್ಲಿಷನ್ ಸರ್ಟಿಫಿಕೇಟ್ ಕೊಡಲು ಸತಾಯಿಸಲಾಗಿತ್ತು. ಅಷ್ಟೇ ಅಲ್ಲ ಎಂ ಬಿ ಹಾಗೂ ಕಂಪ್ಲಿಷನ್ ಸರ್ಟಿಫಿಕೇಟ್ ಕೊಡಲು ಪಂಚಾಯತ್ ರಾಜ್ ಇಂಜನಿಯರಿಂಗ್ ಉಪವಿಭಾಗದ ಜ್ಯೂನಿಯರ್ ಇಂಜಿನಿಯರ್ 16 ಸಾವಿರ ರೂ, ಲಂಚ ಕೇಳಿದ್ದರು. ಕೊನೆಗೂ 15 ಸಾವಿರ ರೂ,ಗಳಿಗೆ ಸೆಟ್ಲ್ ಆಗಿತ್ತು. ಈ ಕುರಿತು ಗುತ್ತಿಗೆದಾರ ರವಿಕುಮಾರ್ ಎಸಿಬಿಗೆ ದೂರು ನೀಡಿದ್ದರು.
ಎಸಿಬಿ ಡಿಎಎಸ್ಪಿ ವಾಸುದೇವ ಎನ್ ರಾಮ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಲಂಚದ ಹಣ ಪಡೆಯುತ್ತಿದ್ದಾಗ ಜ್ಯೂನಿಯರ್ ಇಂಜಿನಿಯರ್ ಮೀರಾಜುದ್ದೀನ್ ಅವರನ್ನು ಹಣ ಸಮೇತ ಬಂಧಿಸಲಾಗಿದೆ.
ದಾಳಿಯಲ್ಲಿ ಇನ್ಸ್ಪೆಕ್ಟರ್ ಗಳಾದ ವಾಯ್ ಎಸ್ ಧರಣಾನಾಯಕ್, ರವೀಂದ್ರ ಕುರಬಗಟ್ಟಿ, ಸಿಬ್ಬಂದಿ ಎಮ್ ಎಮ್ ಅಯ್ಯನಗೌಡರ, ಆರ್ ಎಚ್ ಹೆಬಸೂರು, ಎಮ್ ಎನ್ ಕರಿಗಾರ, ಎನ್ ಎಸ್ ತಾಯಣ್ಣವರ, ಈರಣ್ಣ ಜಾಲಿಹಾಳ, ವೀರೇಶ್ ಜೋಳದ ಹಾಗೂ ತಾರಪ್ಪ ಇದ್ದರು.
ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ
ವಿಜಯಸಾಕ್ಷಿ ಸುದ್ದಿ ಗದಗ
ಇಲ್ಲಿನ ಪಂಚಾಕ್ಷರಿ ನಗರದಲ್ಲಿರುವ ಮನೆಯೊಂದರಲ್ಲಿ ಶಾರ್ಟ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡು, ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ.
ಚಂದ್ರು ಅಸಂಗಿ ಅವರ ಮನೆಯಲ್ಲಿ ಗುರುವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಗಾಬರಿಗೊಂಡ ಕುಟುಂಬದ ಸದಸ್ಯರು ಮನೆಯಿಂದ ಹೊರ ಬಂದಿದ್ದಾರೆ. ಅಷ್ಟೊತ್ತಿಗೆ ಬೆಂಕಿ ಕೆನ್ನಾಲಿಗೆ ಮನೆಯನ್ನು ವ್ಯಾಪಿಸಿದೆ. ಗೃಹ ಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ರಾಜೀವ ಗಾಂಧಿ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಸ್ತಿ ವಿಸರ್ಜಿಸಲು ಹೋದ ವ್ಯಕ್ತಿ ನೀರುಪಲು
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬದಾಮಿ: ತಂದೆಯ ಅಸ್ತಿ ವಿಸರ್ಜಿಸಲು ಹೋಗಿದ್ದ ವೇಳೆ ವ್ಯಕ್ತಿಯೊಬ್ಬ ನೀರು ಪಾಲಾಗಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಗಜೇಂದ್ರಗಡದ ಮಹಾಂತೇಶ್ ಯಾದವ್(೪೫) ಮೃತ ದುರ್ದೈವಿಯಾಗಿದ್ದು, ತನ್ನ ತಂದೆಯ ೧೧ ದಿನದ ಅಸ್ತಿಯನ್ನು ಚೊಳಚಗುಡ್ಡದ ಬಳಿ ಮಲಪ್ರಭ ನದಿಗೆ ವಿಸರ್ಜನೆ ಮಾಡುವ ವೇಳೆ ಕಾಲುಜಾರಿ ಮಲಪ್ರಭ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.
ಸುಮಾರು ಮೂರು ಕಿಮಿ ದೂರದಲ್ಲಿ ನಾಗರಾಳ ಎಸ್ ಪಿ ಬಳಿ, ಮಹಾಂತೇಶ್ ಶವ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲಾ ಅಗ್ನಿಶಾಮಕ ಜಿಲ್ಲಾ ಅಧಿಕಾರಿ, ಮಲ್ಲಿಕಾರ್ಜುನಪ್ಪ, ಪ್ರಧಾನ ಸಹಾಯಕ ಅಗ್ನಿಶಾಮಕ ಅಧಿಕಾರಿ, ಹಾಗೂ ಬದಾಮಿ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಮೂರು ತಾಸು ಕಾರ್ಯಾಚರಣೆ ನಡೆಸಿ ಮಹಾಂತೇಶ್ ಮೃತದೇಹ ಹೊರತೆಗೆದಿದ್ದಾರೆ.
ಬದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಟ್ರೆಕ್ಚರ್ ನಲ್ಲಿ ಬಂದು ಮತಚಲಾವಣೆ ಮಾಡಿದ ಪದವೀಧರ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಪದವೀಧರನೊಬ್ಬ ಮತಗಟ್ಟೆಗೆ ಸ್ಟ್ರೆಕ್ಚರ್ ನಲ್ಲಿ ಬಂದು ಮತ ಚಲಾವಣೆ ಮಾಡಿದ್ದಾನೆ.
ಇಲ್ಲಿನ ಪುಟ್ಟರಾಜ ನಗರ ನಿವಾಸಿ ಮರ್ದಾನ್ ಅಲಿ ದೊಡ್ಡಮನಿ ಅಂಬುಲೆನ್ಸ್ ನಲ್ಲಿ ಮತಗಟ್ಟೆ ಸಂಖ್ಯೆ
೫೯ ಕ್ಕೆ ಆಗಮಿಸಿ, ಮತ ಚಲಾಯಿಸಿದರು.

ನಾಲ್ಕು ದಿನಗಳ ಹಿಂದೆ ಅಪಘಾತಕ್ಕೀಡಾಗಿದ್ದ ಮರ್ದಾನ್ ಅಲಿ ಕಾಲು ಮುರಿದಿದ್ದರಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ಮಾಡಬೇಕು ಎಂದು ವೈದ್ಯರ ಬಳಿ ಮನವಿ ಮಾಡಿದ್ದರು. ಹೀಗಾಗಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಅವರನ್ನು ಮತಗಟ್ಟೆಗೆ ಕರೆದುಕೊಂಡು ಬರಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ, ಅನಿಲ್ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ ಮತ್ತಿತರರು ಇದ್ದರು.
ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ ಸಂಕನೂರ -ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದೆಲ್ಲೆಡೆ ಬಿಜೆಪಿ ಅಲೆ -ಸಚಿವರು, ಸಂಸದರು, ಶಾಸಕರು, ಕಾರ್ಯಕರ್ತರಿಂದ ಭರ್ಜರಿ ಪ್ರಚಾರ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ವಿಧಾನ ಪರಿಷತ್ತಿನಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಪ್ರತಿನಿಧಿಯಾಗಿ ಆರು ವರ್ಷಗಳಲ್ಲಿ ಅಗಾಧವಾದ ಸಾಧನೆ ಮಾಡಿರುವ ಪ್ರೊ| ಎಸ್.ವಿ. ಸಂಕನೂರ, ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಸದನದ ಒಳಗೆ ಹಾಗೂ ಹೊರಗೆ ಅವಿರತವಾಗಿ ಶ್ರಮಿಸಿದ್ದಾರೆ. ಅವರಿಗೆ ನ್ಯಾಯ ದೊರಕಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದ್ದಾರೆ. ಕ್ಷೇತ್ರದ ಮತದಾರರ ಜತೆಗೆ ನಿರಂತರ ಸಂಪರ್ಕದಲ್ಲಿರುವ ಅವರು ಎರಡನೇ ಅವಧಿಗೆ ಪುನರಾಯ್ಕೆಗೊಳ್ಳುವ ವಿಶ್ವಾಸದಲ್ಲಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಬಿ.ಸಿ. ಪಾಟೀಲ, ಸಿ.ಸಿ. ಪಾಟೀಲ, ಬಿ. ಶ್ರೀರಾಮುಲು ಹಾಗೂ ಶಿವರಾಮ ಹೆಬ್ಬಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಯುವ ಮುಖಂಡ ಅನಿಲ ಮೆಣಸಿನಕಾಯಿ ಮುಂತಾದ ದಿಗ್ಗಜರು ಸಂಕನೂರು ಪರ ಪ್ರಚಾರ ಕೈಗೊಂಡಿದ್ದಾರೆ.

ಮೂವರು ಸಂಸದರು, 19 ಶಾಸಕರು, ಮೂವರು ವಿಧಾನ ಪರಿಷತ್ ಸದಸ್ಯರು, ಜಿ.ಪಂ. ಹಾಗೂ ತಾ.ಪಂ.ಗಳ ಅಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯ ಮುಖಂಡರು, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೂ ಹಗಲಿರುಳೂ ಕ್ಷೇತ್ರದಾದ್ಯಂತ ಸಂಚರಿಸಿ ಸಂಕನೂರ ಅವರ ಗೆಲುವಿಗಾಗಿ ದುಡಿಯುತ್ತಿದ್ದಾರೆ. ಬೇರುಮಟ್ಟದಲ್ಲಿ ಪಕ್ಷ ಸಂಘಟನೆ ಬಲವಾಗಿರುವ ಕಾರಣ ತಮ್ಮ ಗೆಲುವೇನೂ ಕಷ್ಟವಾಗಲಾರದು. ಅಲ್ಲದೆ, ಧಾರವಾಡ ಜಿಲ್ಲೆಯಲ್ಲಿ ಬಿಜೆಪಿಯಿಂದ ಕಾಲ್ ಸೆಂಟರ್ ಆರಂಭಿಸಿದ್ದು, ಕಾರ್ಯಕರ್ತರು ಸುಮಾರು 13 ಸಾವಿರಕ್ಕೂ ಅಧಿಕ ಮತದಾರರ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ, ಅವರಿಗೆ ಕರೆ ಮಾಡಿ ಹಾಗೂ ಸಂದೇಶಗಳನ್ನು ಕಳುಹಿಸಿ ಗೆಲುವಿಗೆ ಪ್ರಯತ್ನಿಸುತ್ತಿದ್ದಾರೆ ಎಂದು ಸಂಕನೂರ ಹೇಳಿದ್ದಾರೆ.
ಅಪಾರ ಅನುಭವಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಪ್ರೊ| ಸಂಕನೂರು ಅವರು ಮತದಾರರ ಮೊದಲ ಪ್ರಾಶಸ್ತ್ಯದ ಆಯ್ಕೆಯೂ ಆಗಲಿದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ, ರಾಜ್ಯದ 36 ಇಲಾಖೆಗಳಲ್ಲಿ ಖಾಲಿಯಾಗಿರುವ ಸುಮಾರು ಎರಡು ಲಕ್ಷ ಹುದ್ದೆಗಳ ಭರ್ತಿಗೆ ಸದನದಲ್ಲಿ ಒತ್ತಾಯಿಸಿರುವ ಸಂಕನೂರ, ಸುಮಾರು 35 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಭಡ್ತಿ, ವಿಶೇಷ ಭತ್ಯೆ, ವೇತನ ತಾರತಮ್ಯ ನಿವಾರಣೆ, ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಮುಂತಾದ ಸಮಸ್ಯೆಗಳ ನಿವಾರಣೆಗೆ ಪ್ರಯತ್ನಿಸಿದ್ದಾರೆ.

ಮತಕ್ಷೇತ್ರದ ವ್ಯಾಪ್ತಿಯ ಗದಗ, ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡದಲ್ಲಿ ಉದ್ಯೋಗ ಮೇಳಗಳನ್ನು ಸಂಘಟಿಸಿರುವ ಸಂಕನೂರ ಅವರು, 1,955 ಪದವೀಧರರಿಗೆ ಉದ್ಯೋಗ ಕಲ್ಪಿಸಿದ್ದಾರೆ. ಪದವಿ ಹಾಗೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ, ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ 7ನೇ ಯುಜಿಸಿ ವೇತನ ಜಾರಿ ಮಾಡುವಲ್ಲಿ ಹಾಗೂ ತಾಂತ್ರಿಕ, ವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿಗೆ 7ನೇ ಎಐಸಿಟಿಇ ವೇತನ ಶ್ರೇಣಿ ಜಾರಿಗೆ ಮತಿತು ವೈದ್ಯಕೀಯ ಸಿಬ್ದಂದಿಗೆ ಎನ್.ಪಿ.ಎಸ್. ಯೋಜನೆ ಜಾರಿ ಮಾಡಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.

ಭವಿಷ್ಯದ ಯೋಜನೆಗಳು
ಎನ್.ಪಿ.ಎಸ್. ಬದಲು ಓ.ಪಿ.ಎಸ್. ಜಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿಗೆ ಪಿಂಚಣಿ ಯೋಜನೆ ಜಾರಿ, ಅತಿಥಿ ಉಪನ್ಯಾಸಕರಿಗೆ ಗೌರವ ಧನ ಹೆಚ್ಚಳ, ಪಶ್ಚಿಮ ಬಂಗಾಳ ರಾಜ್ಯ ಮಾದರಿಯಲ್ಲಿ ಸೇವಾ ಭದ್ರತೆ ಒದಗಿಸುವುದು, 1995ರ ಬಳಿಕ ಆರಂಭವಾಗಿರುವ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು, ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಉದ್ಯೋಗ ಮೇಳಗಳನ್ನು ಸಂಘಟಿಸಿ, ಯುವಸಮುದಾಯಕ್ಕೆ ಉದ್ಯೋಗ ಒದಗಿಸಿಕೊಡುವುದು ತಮ್ಮ ಭವಿಷ್ಯದ ಯೋಜನೆಗಳೆಂದು ಹೇಳಿರುವ ಪ್ರೊ| ಸಂಕನೂರ, ಕೇಂದ್ರ ಹಾಗೂ ರಾಜ್ಯ ಎರಡೂ ಕಡೆಗಳಲ್ಲಿ ಬಿಜೆಪಿ ಸರಕಾರವೇ ಇರುವುದರಿಂದ ತಮ್ಮ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಅನುಕೂಲವಾಗುತ್ತದೆ.

ಹಲವು ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಶೀಘ್ರ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸಂಕನೂರ ತಿಳಿಸಿದ್ದಾರೆ.
ಸಂಕನೂರ ಪರ ಅಲೆ
ಸರಳ, ಸಜ್ಜನಿಕೆಯ ವ್ಯಕ್ತಿಯಾಗಿರುವ ಸಂಕನೂರ ಅವರು ಸದಾ ಜನರೊಂದಿಗೇ ಇದ್ದು, ಅವರ ಎಲ್ಲ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ಜನಪ್ರತಿನಿಧಿ. ಯಾರ ಜೊತೆಗೂ ವಿರೋಧ ಕಟ್ಟಿಕೊಳ್ಳದೆ ಸದಾ ನಗುಮೊಗದಿಂದಲೇ ಎಲ್ಲರೊಂದಿಗೂ ವ್ಯವಹರಿಸುತ್ತಾರೆ.

ಕಳೆದ ಬಾರಿ 14,000 ಮತಗಳ ಅಂತರದಿಂದ ಸಂಕನೂರ ಗೆದ್ದಿದ್ದರು. ಈ ಬಾರಿ ಅವರ ಪ್ರತಿಯೊಂದು ಪ್ರಚಾರ ಸಭೆಯಲ್ಲೂ ಸುಮಾರು 500ಕ್ಕಿಂತ ಹೆಚ್ಚು ಜನರು ಭಾಗವಹಿಸಿರುವ ಕಾರಣ, ಅವರ ಗೆಲುವಿನ ಅಂತರ 25 ಸಾವಿರವನ್ನು ದಾಟುವ ನಿರೀಕ್ಷೆ ಕ್ಷೇತ್ರದಲ್ಲಿ ವ್ಯಕ್ತವಾಗಿದೆ.
ಎಸ್.ವಿ. ಸಂಕನೂರ ಅವರು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರಡ. ವಿಧಾನ ಪರಿಷತ್ ಸದಸ್ಯರಾಗಿ ಆರು ವರ್ಷಗಳ ಕಾಲ ಪರಿಷತ್ ಒಳಗೆ ಮತ್ತು ಹೊರಗೆ ಪದವೀಧರರ ಜೊತೆಗೆ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ಸಂಕನೂರ ಅವರ ವೈಯಕ್ತಿಕ ಸೇವೆ, ಸರಕಾರದ ಸಾಧನೆ ಸಂಕನೂರು ಅವರ ಗೆಲುವಿಗೆ ಕಾರಣವಾಗಲಿವೆ.
– ಅನಿಲ ಮೆಣಸಿನಕಾಯಿ, ಬಿಜೆಪಿ ಯುವ ಮುಖಂಡ
ಎಚ್ಕೆ ಪಾಟೀಲರಿಗೆ ಮೋದಿ ಬಗ್ಗೆ ಮಾತಾಡುವ ನೈತಿಕತೆ ಇಲ್ಲ; ಅನಿಲ್ ಮೆಣಸಿನಕಾಯಿ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಪ್ರಧಾನಿ ನರೇಂದ್ರ ಮೋದಿ ಅವರು 2 ಕೋಟಿ ಉದ್ಯೋಗ ಸೃಷ್ಟಿ ಮಾಡಿಲ್ಲ. ದೇಶದ ಜನರಿಗೆ ಮೋದಿ ಸುಳ್ಳು ಹೇಳುತ್ತಿರುವ ಬಗ್ಗೆ ಶಾಸಕ ಎಚ್.ಕೆ. ಪಾಟೀಲ ಅವರು, ಗದಗ ಮತಕ್ಷೇತ್ರದ ಜನರಿಗೆ ಹೇಳಿರುವ ಸುಳ್ಳುಗಳ ಬಗ್ಗೆಯೂ ಮಾತನಾಡಲಿ ಎಂದು ಬಿಜೆಪಿ ಯುವ ಮುಖಂಡ ಅನಿಲ ಮೆಣಸಿನಕಾಯಿ ವಾಗ್ದಾಳಿ ನಡೆಸಿದರು.
ಉದ್ಯೋಗ ಸೃಷ್ಟಿ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ ಎಂದು ಎಚ್.ಕೆ. ಪಾಟೀಲ ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ನಾಯಕರಾಗಿ ಬಿಂಬಿಸಿಕೊಳ್ಳುತ್ತಿರುವ ಎಚ್.ಕೆ. ಪಾಟೀಲ ಮೊದಲು ಗದಗ ಕ್ಷೇತ್ರದ ಜನರಿಗೆ ಎಷ್ಟು ಸುಳ್ಳು ಹೇಳಿದ್ದಾರೆ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ತಮ್ಮ ಅಧಿಕಾರಾವಧಿಯಲ್ಲಿ ಕೇವಲ ಸುಳ್ಳು ಹೇಳುತ್ತಲೆ ಬಂದಿರುವ ಪಾಟೀಲರಿಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.
ಸಾರ್ವಜನಿಕ ಲೆಕ್ಕ ಪರಿಶೋಧನೆ ಸಮಿತಿ ಅಧ್ಯಕ್ಷರಾಗಿ ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡುವ ಎಚ್.ಕೆ. ಪಾಟೀಲ, ತಾವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣದಲ್ಲಿ ಭ್ರಷ್ಟಾಚಾರದ ಆಗಿದೆ ಎನ್ನುವ ಆರೋಪದ ಬಗ್ಗೆ ಯಾವುದೇ ತನಿಖೆಗೆ ಒತ್ತಾಯಿಸುವುದಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಉದ್ಯೋಗ ಸೃಷ್ಟಿ ಮಾಡಿಲ್ಲ ಎಂದು ಆರೋಪಿಸುವ ಶಾಸಕರು, ಬಿಜೆಪಿ ಫೋಸ್ಕೋ ನಿರ್ಮಾಣಕ್ಕೆ ಮುಂದಾದಾಗ ಅದನ್ನು ಓಡಿಸುವ ಕೆಲಸವನ್ನು ಎಚ್.ಕೆ. ಪಾಟೀಲ ಮಾಡಿದ್ದಾರೆ. ಆ ಮೂಲಕ ಸ್ಥಳೀಯ ತಾಂತ್ರಿಕ ಪದವೀಧರರಿಗೆ ಉದ್ಯೋಗ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿದರು.
ದೇಶದ ಬೆಳವಣಿಗೆ ಬಗ್ಗೆ ದೂರದೃಷ್ಟಿ ಹೊಂದಿರಬೇಕು. ಅಂಥ ದೃಷ್ಟಿಕೋನ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವಿಶ್ವವೇ ಮೆಚ್ಚುಗೆ ಸೂಚಿಸುತ್ತದೆ. ಅಂಥ ಪ್ರಧಾನಿ ಬಗ್ಗೆ ಮಾತಾಡುವ ನೈತಿಕತೆ ಎಚ್. ಕೆ. ಪಾಟೀಲ ಅವರಿಗಿಲ್ಲ ಎಂದು ತಿಳಿಸಿದರು.
ಮನೆ ಮಾಡಿದ ದಸರಾ ಸಂಭ್ರಮ, ಗದಗ ಮಾರ್ಕೆಟ್ ಫುಲ್ ರಶ್
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೂವು ಹಣ್ಣು ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನಜಾತ್ರೆಯೇ ನೆರೆದಿತ್ತು.
ಗದಗ ನಗರದ ತರಕಾರಿ ಮಾರ್ಕೆಟ್, ಗ್ರೇನ್ ಮಾರ್ಕೆಟ್, ಬಟ್ಟೆ ಹಾಗೂ ಹೂವಿನ ಮಾರ್ಕೆಟ್ ಜನಜಂಗುಳಿಯಿಂದ ಕೂಡಿತ್ತು. ಪೂಜಾ ಸಾಮಗ್ರಿ, ಹೂವು, ಹಣ್ಣು, ಕಿರಾಣಿ ಸಾಮಗ್ರಿಗಳ ಖರೀದಿಗೆ ಜನರು ಮನೆಯಿಂದ ಮಾರ್ಕೆಟ್ ಗೆ ಮುಗಿಬಿದ್ದಿದ್ದಾರೆ.

ಇನ್ನು ಹಬ್ಬದ ಹಿನ್ನೆಲೆಯಲ್ಲಿ ಹೂವು ಹಣ್ಣುಗಳ ಬೆಲೆ ದುಬಾರಿಯಾಗಿತ್ತು. ಸೇಬು 100 ರೂ. ಇದ್ದಿದ್ದು ಇಂದು 200 ರೂ.ಗೆ ತಲುಪಿತ್ತು. ಹೂವು ಮತ್ತು ಪೂಜಾ ಸಾಮಗ್ರಿಗಳೂ ಇಂದು ದುಬಾರಿಯಾಗಿದ್ವು.
ದುಬಾರಿಯಾದರೂ ಹಬ್ಬ ಆಚರಿಸುವ ತವಕದಲ್ಲಿ ಜನ ಸಾಮಗ್ರಿಗಳನ್ನು ಕೊಳ್ಳಲು ಮುಗಿಬಿದ್ದಿದ್ದರು. ಆದರೆ ಕೊರೊನಾ ಮುಂಜಾಗ್ರತಾ ಕ್ರಮಗಳ ನಿಯಮಗಳನ್ನು ಯಾರು ಅನುಸರಿಸಲಿಲ್ಲಾ ಅನ್ನೋದು ವಿಪರ್ಯಾಸ.
ಹುಲಕೋಟಿಯಲ್ಲಿ ಅಬಕಾರಿ ಪೊಲೀಸರ ದಾಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಪರಾರಿ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕಳೆದ ಹಲವು ದಿನಗಳಿಂದ ಹುಲಕೋಟಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ದಾಳಿ ಮಾಡಿರುವ ಅಬಕಾರಿ ಪೊಲೀಸರು, 80 ಸಾವಿರ ರೂ, ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದು, ಮಹಿಳೆ ಪರಾರಿಯಾಗಿದ್ದಾರೆ.
ಪರಾರಿಯಾಗಿರುವ ಮಹಿಳೆಯನ್ನು ದೇವಕ್ಕ ನಾರಾಯಣ ಬೆಳ್ಳಿಕೊಪ್ಪ ಎಂದು ಗುರುತಿಸಲಾಗಿದ್ದು, 80 ಸಾವಿರ ರೂ, ಮೌಲ್ಯದ ನಾಲ್ಕು ಕೆ.ಜಿ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸಿಬ್ಬಂದಿಗಳಾದ ಗುರುರಾಜ್ ವಸ್ತ್ರದ, ಚಂದ್ರು ರಾಠೋಡ್, ನಜೀರ ಖುದಾವಂದ, ಸುರೇಶ್ ಮಳೇಕರ್, ಸವಿತಾ ಕೋಳಿವಾಡ ಪಾಲ್ಗೊಂಡಿದ್ದರು.
ಚುನಾವಣಾ ಪ್ರಚಾರಕ್ಕೆ ವರ್ಚುವಲ್ ರ್ಯಾಲಿ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರಕ್ಕೀಗ ವರ್ಚುವಲ್ ರ್ಯಾಲಿ ಬಳಕೆಯಾಗುವ ಮೂಲಕ ಡಿಜಿಟಲ್ ಟಚ್ ಬಂದಿದೆ. ಹೌದು ಶನಿವಾರ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ ಹಾಗೂ ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ ವರ್ಚುವಲ್ ರ್ಯಾಲಿ ಮೂಲಕ ಪ್ರಜ್ಞಾವಂತ ಮತದಾರರನ್ನು ಸಂಪರ್ಕಿಸಿದರು.
ವರ್ಚುವಲ್ ರ್ಯಾಲಿಗೆ ಮತದಾರರು ಸ್ವಯಂ ಪ್ರೇರಿತರಾಗಿ ಸಂಪರ್ಕವಾಗುವ ಮೂಲಕ ರ್ಯಾಲಿ ಯಶಸ್ವಿಗೊಳಿಸಿದರು. ಈ ವೇಳೆ ಮತದಾರರ ಬಳಿ ಮಾತನಾಡಿದ ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ, ಕೊವಿಡ್ ಪರಿಸ್ಥಿತಿಯಿದ್ದರೂ ಸಹ ನಾವು ಸರ್ಕಾರದ ನಿಯಮಗಳ ಪಾಲನೆಯೊಂದಿಗೆ ಮತದಾರರನ್ನು ಸಂಪರ್ಕ ಮಾಡಿದ್ದೇವೆ. ಆದರೂ ಸಹ ವರ್ಚುವಲ್ ರ್ಯಾಲಿ ಮೂಲಕವೂ ಪ್ರಜ್ಞಾವಂತರ ಸಂಪರ್ಕದ ಪ್ರಯತ್ನವಾಗಿ ಇಂದು ಈ ರ್ಯಾಲಿ ನಡೆಯುತ್ತಿದೆ ಎಂದರು. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಹಾಗೂ ಮಾಡುತ್ತಿರುವ ಬದಲಾವಣೆಗಳನ್ನು ನಿಮ್ಮ ಗಮನಕ್ಕೆ ತರುವ ಉದ್ದೇಶದಿಂದ ವರ್ಚುವಲ್ ರ್ಯಾಲಿ ಮಾಡಲಾಗುತ್ತಿದೆ.
ರಾಜ್ಯದಲ್ಲಿಯೂ ಬದಲಾವಣೆ ನಡೆಯುತ್ತಿದ್ದು, ಸಿಎಂ ಬಿಎಸ್ವೈ ಅವರೂ ಸಹ ಮೋದಿಯವರಂತೆ ಹಗಲಿರುಳು ಶ್ರಮ ವಹಿಸಿ ದುಡಿಯುತ್ತಿದ್ದಾರೆ. ಕೊವಿಡ್-19 ಹಾಗೂ ನೆರೆ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಜನರಿಗೆ ಸಹಾಯಹಸ್ತ ಚಾಚಿದ್ದಾರೆ ಎಂದರು.

ದೇಶದಲ್ಲಿ ಜಾರಿಯಾಗಿರುವ ನೂತನ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಾರಿ ಮಾಡುವ ಉದ್ದೇಶ ಸಿಎಂ ಬಿಎಸ್ವೈ ಅವರಿಗಿದೆ. ಅವರ ಕೈ ಬಲಪಡಿಸಬೇಕಿದ್ದರೆ, ವಿಧಾನಪರಿಷತ್ನಲ್ಲಿಯೂ ಸಹ ಬಿಜೆಪಿಗೆ ಹೆಚ್ಚಿನ ಸ್ಥಾನಗಳ ಅವಶ್ಯಕತೆಯಿದೆ. ಹೀಗಾಗಿ ಎಸ್ ವಿ ಸಂಕನೂರ ಅವರ ಗೆಲುವಿಗೆ ಎಲ್ಲರೂ ಸಹಕರಿಸಬೇಕೆಂದು ವರ್ಚುವಲ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಮತದಾರರಲ್ಲಿ ವಿನಂತಿಸಿಕೊಂಡರು.
ಇದೇ ವೇಳೆ ಮತದಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ, ಎಪಿಎಂಸಿ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲಾಗಿದೆ. ಇದರಿಂದುಂಟಾಗುವು ಅನುಕೂಲತೆಗಳನ್ನು ತಿಳಿಸುವುದು ಬಿಟ್ಟು ಬಿಜೆಪಿ ವಿರುದ್ಧ ಕಾಂಗ್ರೆಸ್ನವರು ಆರೋಪ ಮಾಡುವುದರಲ್ಲಿಯೇ ನಿರತರಾಗಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಹ ಕೈಗಾರಿಕಾ ಕ್ಲಸ್ಟರ್ ನಿರ್ಮಾಣಕ್ಕಾಗಿ ಈಗಾಗಲೇ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬ್ಲೂ ಪ್ರಿಂಟ್ ತಯಾರು ಮಾಡಿದ್ದಾರೆ. ಕೈಗಾರಿಕಾ ಕ್ಲಸ್ಟರ್ಗಳ ನಿರ್ಮಾಣದಿಂದ ಆಯಾ ಜಿಲ್ಲೆಗಳಲ್ಲಿನ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆಂದು ವಿವರಿಸಿದರು.

ಯಾವುದೇ ಬಗೆಯ ಕಾನೂನು ಹಾಗೂ ನೂತನ ನೀತಿಗಳಿಗೆ ವಿಧಾನ ಪರಿಷತ್ನಲ್ಲಿನ ಅನುಮೋದನೆಯೂ ಪ್ರಮುಖವಾಗಿದ್ದು, ನಮ್ಮ ಸಂಖ್ಯೆಯನ್ನು ಹೆಚ್ಚಿಸಲು ಪಕ್ಷದ ಅಭ್ಯರ್ಥಿ ಎಸ್ ವಿ ಸಂಕನೂರ ಅವರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ವರ್ಚುವಲ್ ರ್ಯಾಲಿಯಲ್ಲಿ ಹಲವು ಯುವ ಪದವೀಧರರು ಭಾಗವಹಿಸಿದ್ದರು.

