Home Blog Page 3145

ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಎಸ್ಪಿ ಯತೀಶ್ ಎನ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕೊರೋನಾ ವೈರಸ್ ತಡೆಗಟ್ಟಲು ಜಿಲ್ಲಾ ಎಸ್ಪಿ ಯತೀಶ್ ಎನ್ ಖುದ್ದು ಬೀದಿಗಿಳಿದು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ನಗರದ ಟಾಂಗಾ ಕೂಟ್ ಸರ್ಕಲ್ ನಲ್ಲಿ ಎಸ್ಪಿ ಯತೀಶ್ ಎನ್, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರಿಗೆ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರದ ಅವಶ್ಯಕತೆಯನ್ನು ವಿವರಿಸಿ ಹೇಳುವ ಮೂಲಕ ಕೊರೋನಾ ತಡೆಯ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ರೋಟರಿ ಸಂಸ್ಥೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸ್ಥಳದಲ್ಲಿಯೇ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸೋಪ್ ವಿತರಣೆ ಮಾಡಿ, ಇವುಗಳನ್ನು ಖಡ್ಡಾಯವಾಗಿ ಬಳಕೆ ಮಾಡವೇಕೆಂದು ಮನವಿ ಮಾಡಿದರು.

ಈ ವೇಳೆ ಡಿವೈಎಸ್ಪಿ S K ಪ್ರಹ್ಲಾದ್, ನಗರ ಠಾಣೆ ಸಿಪಿಐ ಪಿ ವಿ ಸಾಲಿಮಠ್, ಗ್ರಾಮೀಣ ಠಾಣೆ ಸಿಪಿಐ ರವಿಕುಮಾರ್ ಕಪ್ಪತ್ತನವರ, ಬೆಟಗೇರಿ ಸಿಪಿಐ ಬಿರಾದಾರ್, ಪಿಎಸ್ಐಗಳಾದ ಪ್ರಕಾಶ್ D, G T ಜಕ್ಕಲಿ ಕಮಲಮ್ಮ ದೊಡ್ಡಮನಿ, ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಗೌಡ ಧರ್ಮಾಯತ, ಕಾರ್ಯದರ್ಶಿ ಚಂದ್ರಮೌಳಿ ಜಾಲಿ, ಡಾ. ರಾಜಶೇಖರ್ ಬಳ್ಳಾರಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿನ್ನೀರಿನಲ್ಲಿ ಕೊಚ್ಟಿ ಹೋಗುತ್ತಿದ್ದ 15 ದಿನದ ಹಸುಗೂಸು ರಕ್ಷಣೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಯಾದಗಿರಿ: ಭೀಮಾ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ 15 ದಿನಗಳ ಹಸುಗೂಸನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬಸ್ಥರನ್ನು ಸ್ಥಳಾಂತರಿಸುವಾಗ ತೆಪ್ಪ ಅಲುಗಾಡಿ ಕೂಸು ನದಿಗೆ ಬಿದ್ದಿತ್ತು.

ಗ್ರಾಮದ ತವಕಲ್ ಹಾಗೂ ರಜಿಯಾ ದಂಪತಿಯ ಗಂಡು ಮಗು ಇದಾಗಿದ್ದು, ಹಿನ್ನೀರಿನಿಂದಾಗಿ ಗ್ರಾಮ ಜಲಾವೃತವಾದ್ದರಿಂದ ಮಗು ಸಮೇತ ದಂಪತಿಯನ್ನು ತೆಪ್ಪದಲ್ಲಿ ಸ್ಥಳಾಂತರ ಮಾಡಲಾಗುತ್ತಿತ್ತು.

ಈ ವೇಳೆ ಅವಘಡ ನಡೆದಿದ್ದು, ಸ್ಥಳೀಯರು ಹಾಗೂ ಮೀನುಗಾರರು ಸೇರಿ ಮಗುವನ್ನು ರಕ್ಷಣೆ ಮಾಡಿದ್ದಾರೆ.

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: ಜೋಳದ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋವಿನ ಜೋಳದ ಬೆಳೆ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಸಂಜೀವಪ್ಪ ದೇವಪ್ಪ ಗುಂಡಿಕೇರಿ ಬಂಧಿತ ಆರೋಪಿಯಾಗಿದ್ದಾನೆ.

ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದ ಜಮೀನಿನಲ್ಲಿ ಗೋವಿನ ಜೋಳದ ಮಧ್ಯೆ ಬೆಳೆದಿದ್ದ 1.250 ಕೆಜಿ ಗಾಂಜಾ ಬೆಳೆಯನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿತನನ್ನು ಮಾಲು ಸಮೇತ ಬಂಧಿಸಿದ್ದಾರೆ.

ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಳೆದ ಒಂದು ವಾರದ ಹಿಂದೆ ಜಾನುವಾರು ಮೇಯಿಸಲು ಹೋಗಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ರಾಂಪುರ ಗ್ರಾಮದ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಗುರುವಾರ ಬೆಳಗಿನ‌ ವೇಳೆ ಆನೆಗೊಂದಿ ಬಳಿ‌ ಇರಿಸಲಾಗಿದ್ದ ಬೋನಿಗೆ ಬಿದ್ದಿದೆ.

ಗ್ರಾಮಸ್ಥರ ಆಕ್ರೋಶದ ನಡುವೆ ನಾಲ್ಕು ಬೋನ್‌ಗಳನ್ನು ಅರಣ್ಯ ಇಲಾಖೆ ಅಳವಡಿಸಿತ್ತು.

ಮೂರ್ನಾಲ್ಕು ಚಿರತೆಗಳಿವೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ: ಶೇಖರಗೌಡ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ:
ನಾಡಿನಾದ್ಯಂತ ಸಾಹಿತಿಗಳು, ಕಸಾಪ ಸದಸ್ಯರು ಹಾಗೂ ಮಠಾಧೀಶರು ಸೇರಿದಂತೆ ಪ್ರತಿಯೊಬ್ಬರು ತೋರುತ್ತಿರುವ ಪ್ರೀತಿಯನ್ನು ನೋಡಿದರೇ ನನಗೆ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ ಹೇಳಿದರು.

ಕೊಪ್ಪಳದಲ್ಲಿ ಬುಧವಾರ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳನ್ನು ಭೇಟಿಯಾಗಿ, ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೆಲ್ಲುವ ವಿಶ್ವಾಸ ಹೆಚ್ಚುತ್ತಿದೆ ಎಂದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಭ್ಯರ್ಥಿಯಾಗಿರುವ ನಾನು ರಾಜ್ಯದ ಬಹುತೇಕ ಜಿಲ್ಲೆಗಳನ್ನು ಸುತ್ತಾಡಿದ್ದೇನೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಕರ್ನಾಟಕ, ಬೆಂಗಳೂರು ಭಾಗದ ಜಿಲ್ಲೆಗಳು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಾನು ನಿರೀಕ್ಷೆ ಮಾಡಿದ್ದಕ್ಕೂ ಮೀರಿ ಸಾಹಿತಿಗಳು, ಕನ್ನಡಾಭಿಮಾನಿಗಳು, ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ತುಂಬು ಮನಸ್ಸಿನಿಂದ ಸ್ವಾಗತಿಸುತ್ತಿದ್ದಾರೆ ಎಂದರು.

ನಾನು ನೆಪ ಮಾತ್ರ ಎನ್ನುವಂತೆ ಅವರೇ ಸ್ವಯಂ ಪ್ರೇರಣೆಯಿಂದ ಈಗಾಗಲೇ ನನ್ನ ಪರವಾಗಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಇದರಿಂದ ನನಗೆ ಅತೀವ ವಿಶ್ವಾಸ ಮೂಡಿದ್ದು, ಇನ್ನು ಹೆಚ್ಚು ಹೆಚ್ಚು ಬೆಂಬಲ ಪಡೆಯುವುದಕ್ಕಾಗಿ ಸುತ್ತಾಟ ನಡೆಸಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ ಎನ್ನುವುದು ಇದುವರೆಗೂ ಸಾಮಾನ್ಯ ವರ್ಗವನ್ನು ಮತ್ತು ಗ್ರಾಮೀಣ ಪ್ರದೇಶವನ್ನು ತಲುಪಿಲ್ಲ ಎನ್ನುವ ಆರೋಪ ಇದ್ದು, ಇದನ್ನು ತೊಡೆದು ಹಾಕಬೇಕು ಎನ್ನುವುದೇ ಹೆಬ್ಬಯಕೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇನ್ನಷ್ಟು ಅರ್ಥಪೂರ್ಣ ಮಾಡುವುದು ಮತ್ತು ನೂತನ ಬರಹಗಾರರನ್ನು ಗುರತಿಸುವ ಪ್ರಯತ್ನ ಮಾಡಬೇಕು ಎಂದುಕೊಂಡಿದ್ದೇನೆ.

ಇದೆಲ್ಲಕ್ಕಿಂತ ಮಿಗಿಲಾಗಿ ಸಾಹಿತ್ಯ ಸಮ್ಮೇಳನ ಕೇವಲ ಒಂದು ವರ್ಗದ ಸಮ್ಮೇಳನವಾಗದೆ ಅದನ್ನು ಇಡೀ ನಾಡಿನ ಜನಜಾತ್ರೆ ಮಾಡಬೇಕಾಗಿದೆ. ಅದಕ್ಕೊಂದು ಸಾಮಾಜಿಕ ಜಾಗೃತಿಯ ಸ್ಪರ್ಶ ನೀಡಬೇಕಾಗಿದೆ. ಈ ರೀತಿಯ ಕನಸು ಕಟ್ಟಿಕೊಂಡಿರುವ ನಾನು ಅವಕಾಶವನ್ನು ನೀಡುವಂತೆ ಮನವಿ ಮಾಡಿದ್ದಕ್ಕೆ ಉತ್ತಮ ಪ್ರತಿಕ್ರಿಯೇ ಮತ್ತು ಪ್ರೀತಿ ವ್ಯಕ್ತವಾಗುತ್ತಿರುವುದರಿಂದ ನನ್ನ ಉತ್ಸಾಹ ಇಮ್ಮಡಿಯಾಗಿದೆ ಎಂದು ತಿಳಿಸಿದರು.

ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಹ ನನಗೆ ಆಶಿರ್ವಾದ ಮಾಡಿದ್ದು ಸಂತೋಷವಾಗಿದೆ. ಅವರ ಆಶಿರ್ವಾದ ಇರುವುದು ನನ್ನ ಹೋರಾಟಕ್ಕೆ ನೂರಾನೆ ಬಲ ಬಂದಿದೆ ಎಂದರು.

ಕಸಪಾ ಕೊಪ್ಪಳ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ, ಶರಣೇಗೌಡ ಪೊಲೀಸ್ ಪಾಟೀಲ್, ರಾಮಚಂದ್ರ ಗೊಂಡಬಾಳ, ಚನ್ನಪ್ಪ ಕಡ್ಡಿಪುಡಿ, ಈಶಪ್ಪ ದಿನ್ನಿ, ನಾಗರಾಜನಾಯಕ ಡೊಳ್ಳಿನ, ರುದ್ರೇಶ ಅರಾಳ, ಹಾಲಯ್ಯ ಹುಡೇಜಾಲಿ, ವೀರೇಶ ತಾಳಿಕೋಟಿ, ಹಾವೇರಿ ಎಂ. ಎಸ್. ದಂಡಿನ್ ಮೊದಲಾದವರು ಇದ್ದರು.

ಬಿಟಿ ಹತ್ತಿಯಲ್ಲಿ ಗಾಂಜಾ ಬೆಳೆ; ಆರೋಪಿ ಅಂದರ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬಿಟಿ ಹತ್ತಿ ಬೆಳೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿ ಯೊಬ್ಬನನ್ನು ಮುಳಗುಂದ ಪೊಲೀಸರು ಬಂಧಿಸಿದ್ದಾರೆ.

ಚನ್ನಪ್ಪ ನಾಗಪ್ಪ ಆರೇರ್ ಎಂಬಾತನೇ ಬಂಧಿತ ಆರೋಪಿ. ಮುಳಗುಂದ ಸಮೀಪದ ಯಲಿಶಿರುಂದ ರಸ್ತೆಯಲ್ಲಿ ಇರುವ ತನ್ನ ಜಮೀನಿನಲ್ಲಿ ಕಳೆದ ಹಲವು ದಿನಗಳಿಂದ ಬಿಟಿ ಹತ್ತಿ ಬೆಳೆಯ ಮಧ್ಯ ಈ ಗಾಂಜಾ ಗಿಡಗಳನ್ನು ಬೆಳೆದಿದ್ದ ಎನ್ನಲಾಗಿದೆ.

ಖಚಿತ ಮಾಹಿತಿ ‌ಪಡೆದ ಮುಳಗುಂದ ಪೊಲೀಸರು ದಾಳಿ ನಡೆಸಿ‌ 17 ಸಾವಿರ ರೂ ಮೌಲ್ಯದ ಗಾಂಜಾಗಿಡಗಳನ್ನು ಜಪ್ತಿ ಮಾಡಿದ್ದಾರೆ.

ಪಿಎಸ್ಐ ಸಚಿನ್ ಅಲಮೇಲಕರ್, ಎಎಸ್ ಐ ಎ ಕೆ ಮಾಳವಾಡ, ಸಿಬ್ಬಂದಿಗಳಾದ ಎಚ್ ಐ ಕಲ್ಲಣ್ಣವರ್, ಪ್ರಭಯ್ಯ ಕೊಡಬಾಳಮಠ, ಬಿ ಸಿ ಕೋಳಿವಾಡ, ಎನ್ ಎನ್ ದಳವಾಯಿ, ಡಿ ಐ ತಹಸೀಲ್ದಾರ ಈ ಕಾರ್ಯಾಚರಣೆಯಲ್ಲಿ ಇದ್ದರು.

ಗಂಗಾವತಿಯಲ್ಲಿ ಕೃಷಿ ವಿವಿ ಸ್ಥಾಪಿಸಿ; ಜಿಲ್ಲಾ ಮಂತ್ರಿ ನೇತೃತ್ವದಲ್ಲಿ ಕೊಪ್ಪಳ ಶಾಸಕ, ಸಂಸದರಿಂದ ಸಿಎಂಗೆ ಪ್ರಸ್ತಾವನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಗಂಗಾವತಿಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ವಿಶ್ವ‌ವಿದ್ಯಾಲಯ ಸ್ಥಾಪಿಸಬೇಕು ಎಂದು ಕೊಪ್ಪಳ‌ ಜಿ‌ಲ್ಲಾ ಉಸ್ತುವಾರಿ ಹಾಗೂ ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಶಾಸಕ, ಸಂಸದರು ಸಿಎಂ ಯಡಿಯೂರಪ್ಪ ಅವರಿಗೆ ಬುಧವಾರ ಪ್ರಸ್ತಾವನೆ ಸಲ್ಲಿಸಿದರು.

ಗಂಗಾವತಿ ತಾಲೂಕು ನೀರಾವರಿ ಮತ್ತು ಒಣಭೂಮಿ ಹೊಂದಿರುವ ಪ್ರದೇಶವಾಗಿದ್ದು, ಇಲ್ಲಿನ ಮಣ್ಣು ಮತ್ತು ನೀರು ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸೂಕ್ತವಾಗಿದೆ. ಅಲ್ಲದೇ ಜಿಲ್ಲೆಯ ಕೃಷಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದೆ.

ಜಿಲ್ಲೆಯಲ್ಲಿ ಎರಡು ಕೃಷಿ ಸಂಶೋಧನಾ ಕೇಂದ್ರಗಳು, ಒಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಒಂದು ಕೃಷಿ ವಿಜ್ಞಾನ ಕೇಂದ್ರವಿದ್ದು, ಒಟ್ಟು 19 ವಿಜ್ಞಾನಿಗಳು ಮತ್ತು 20 ಬೋಧಕೇತರ ಸಿಬ್ಬಂದಿ ಇದ್ದಾರೆ. ಕೃಷಿ‌ ವಿವಿ ಸ್ಥಾಪನೆಗೆ ಬೇಕಾದ ಎಲ್ಲಾ ಅನುಕೂಲತೆ ಇದೆ. ಕೃಷಿಗೆ ಪೂರಕವಾದ ವಾತಾವರಣವನ್ನು ಹೊಂದಿರುವ ಕೊಪ್ಪಳ ಜಿಲ್ಲೆಯಲ್ಲಿ ಕೃಷಿ‌ ವಿವಿ ಅಗತ್ಯವಿರುತ್ತದೆ ಎಂದು ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.

ಜಿಲ್ಲೆಯ ವಿದ್ಯಾರ್ಥಿಗಳು ಕೃಷಿ ಪದವಿ ಹೊಂದಲು 140 ಕಿ.ಮೀ. ದೂರದ ರಾಯಚೂರು ಇಲ್ಲವೇ 220 ಕಿ.ಮೀ ದೂರದ ಧಾರವಾಡಕ್ಕೆ ಹೋಗಬೇಕಿದೆ. ಇದರಿಂದ ಕೃಷಿ ಪದವಿ ತಂತ್ರಜ್ಞಾನ ಸಂಬಂಧ ಅಧ್ಯಯನಕ್ಕೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಕೊಪ್ಪಳದಲ್ಲಿಯೇ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವುದರಿಂದ ಅನುಕೂಲವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಗಂಗಾವತಿ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕೃಷಿ ವಿವಿ ಸ್ಥಾಪಿಸಲು ಬೇಕಾದ ಭೂಪ್ರದೇಶ ಹಾಗೂ ನೀರಾವರಿ ಸೌಲಭ್ಯವಿರುತ್ತದೆ. ನೂತನ ಕೃಷಿ ಮಹಾವಿದ್ಯಾಲಯಕ್ಕೆ ಅಗತ್ಯವಾದ ಪ್ರಯೋಗಾಲಯಗಳು, ವಸತಿ ನಿಲಯ, ವಡ್ಡರಹಟ್ಟಿ ಕ್ಯಾಂಪ್ ಡಿಎಟಿಸಿಯಲ್ಲಿ ಲಭ್ಯವಿದ್ದು, ಇವುಗಳನ್ನು ನೂತನ ಕೃಷಿ ಮಹಾವಿದ್ಯಾಲಯಕ್ಕೆ ಅವಶ್ಯಕತೆಯಿದ್ದಲ್ಲಿ ಬಳಸಿಕೊಳ್ಳಬಹುದಾಗಿದೆ.

ಅಲ್ಲದೇ ಗಂಗಾವತಿ ನಗರವು ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲು ಸುಸಜ್ಜಿತ ರೈಲು ಹಾಗೂ ಸಾರಿಗೆ ಸಂಪರ್ಕವನ್ನೂ ಸಹ ಹೊಂದಿದೆ. ಇಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವುದರಿಂದ ಜಿಲ್ಲೆಯ ವಿದ್ಯಾರ್ಥಿ ಹಾಗೂ ರೈತ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಬಿ.ಸಿ.ಪಾಟೀಲರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪ್ರಸ್ತಾವನೆ ಸಲ್ಲಿಕೆಗೂ ಮುನ್ನ ವಿಕಾಸಸೌಧದ ಕೃಷಿ ಮಂತ್ರಿಗಳ ಕಚೇರಿಯಲ್ಲಿ ಕೃಷಿ ವಿವಿ ಸ್ಥಾಪನೆ ಸಂಬಂಧ ಸಭೆ ನಡೆಯಿತು. ಸಭೆಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಶಾಸಕರಾದ ಹಾಲಪ್ಪ ಆಚಾರ್, ಬಸವರಾಜ ದಡೆಸುಗೂರ, ಪರಣ್ಣ ಮನವಳಿ ಇದ್ದರು.

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ವೇಶ್ಯಾವಾಟಿಕೆಗೆ ಬಳಸಿದ ಆರೋಪಿತರಿಗೆ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳ ರೈಲು ನಿಲ್ದಾಣದ ಹತ್ತಿರದ ರಸ್ತೆ ಮೇಲೆ ನಿಂತುಕೊಂಡಿದ್ದ ಗಂಗಾವತಿ ನಿವಾಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ವೇಶ್ಯಾವಾಟಿಕೆಗೆ ಬಳಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತರಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರ(ಪೋಕ್ಸೋ) ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

2014 ರ ನವೆಂಬರ್ 18 ರಂದು ಸಂಜೆ 6 ಗಂಟೆಗೆ ಕೊಪ್ಪಳ ರೈಲು ನಿಲ್ದಾಣದ ಮುಂದೆ ರಸ್ತೆ ಮೇಲೆ ನಿಂತಿದ್ದ ಅಪ್ರಾಪ್ತ ಬಾಲಕಿಯನ್ನು ಆಂಧ್ರಪ್ರದೇಶದ ಪರವೀನ್ ಗಂ.ಜಯರಾಮ ಎಂಬ ಮಹಿಳೆ ಅಪಹರಿಸಿ, ಆಂಧ್ರಪ್ರದೇಶದ ಪೆನಗೊಂಡ ನಗರದಲ್ಲಿನ ತನ್ನ ಮನೆಗೆ ಕರೆದೊಯ್ದು, ಬಾಲಕಿಯನ್ನು ಕೂಡಿ ಹಾಕಿ ರಾಮು ತಂ. ಬಾಬು ಮತ್ತು ಇತರರಿಂದ ಹಣ ಪಡೆದು ಬಾಲಕಿಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದ ಆರೋಪವು ತನಿಖೆಯಲ್ಲಿ ಸಾಬೀತಾಗಿದ್ದರಿಂದ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಆರೋಪಿತರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ ಆರೋಪಿತರ ಮೇಲಿನ ಆರೋಪಗಳು ಸಾಬೀತಾಗಿದ್ದು, ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ವೇಶ್ಯಾವಾಟಿಕೆಗೆ ಪ್ರಚೋದಿಸಿದ್ದ ಆರೋಪಕ್ಕಾಗಿ ಪರವೀನ್ ಗಂ.ಜಯರಾಮ ಎಂಬ ಮಹಿಳೆಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 45,000 ದಂಡ ಮತ್ತು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕಾಗಿ ರಾಮು ತಂ. ಬಾಬು ಎಂಬ ವ್ಯಕ್ತಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.25,000 ಗಳ ದಂಡವನ್ನು ವಿಧಿಸಿ ಶಂಕರ ಎಂ.ಜಾಲವಾದಿ, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರು(ಪೋಕ್ಸೋ), ಕೊಪ್ಪಳ ಇವರು ತೀರ್ಪು ಹೊರಡಿಸಿರುತ್ತಾರೆ.

ಸರ್ಕಾರದ ಪರವಾಗಿ ಎಂ.ಎ ಪಾಟೀಲ, ಕೆ. ನಾಗರಾಜ ಆಚಾರ್, ಸವಿತಾ ಎಂ.ಶಿಗ್ಲಿ ಹಾಗೂ ಅಂಬಣ್ಣ ಸರ್ಕಾರಿ ಅಭಿಯೋಜಕರು ಕೊಪ್ಪಳ ಇವರು ಪ್ರಕರಣ ನಡೆಸಿದ್ದು, ಸರ್ಕಾರಿ ಅಭಿಯೋಜಕರಾದ ಬಂಡಿ ಅಪರ್ಣ ಮನೋಹರ ಇವರು ವಾದ ಮಂಡಿಸಿದ್ದರು ಎಂದು ಸರ್ಕಾರಿ ಅಭಿಯೋಜಕರ ಕಚೇರಿ ಪ್ರಕಟಣೆ ತಿಳಿಸಿದೆ.

ಜಸ್ಟಿಸ್ ಫಾರ್ ಮನಿಷಾ ವಾಲ್ಮೀಕಿ ಅಭಿಯಾನ: ಕೊಪ್ಪಳದಲ್ಲಿ ಕಾಂಗ್ರೆಸ್‌ ಎಸ್ಸಿ ಘಟಕದ ಪ್ರತಿಭಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಅತ್ಯಾಚಾರಕ್ಕೆ ಒಳಗಾಗಿ ದಾರುಣವಾಗಿ ಪ್ರಾಣ ತ್ಯಾಗ ಮಾಡಿದ ಮನಿಷಾ ವಾಲ್ಮೀಕಿ ಹತ್ಯೆಗೈದ ವಿಕೃತ ಕಾಮಿ ಕೋಮುವಾದಿ ಕಿಡಿಗೇಡಿಗಳನ್ನು ಗಲ್ಲಿಗೇರಿಸಲಿ ಅಥವಾ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಕೊಪ್ಪಳದಲ್ಲಿಂದು ಕಾಂಗ್ರೆಸ್‌ನ ಎಸ್ಸಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಅಶೋಕ ಸರ್ಕಲ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಅತ್ಯಾಚಾರಗೈದವರ ಆಸ್ತಿ-ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಸಾವಿಗೀಡಾದ ಮನಿಷಾ ವಾಲ್ಮೀಕಿ ಕುಟುಂಬಕ್ಕೆ ಪರಿಹಾರ ಕೊಡಬೇಕು. ಮತ್ತು ಕೇಂದ್ರ ಸರ್ಕಾರದ ವತಿಯಿಂದ 5 ಕೋಟಿ ರೂಪಾಯಿಗಳ ಮೊತ್ತದ ಪರಿಹಾರವನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ದೇಶದ ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ಭಾರದ ಹಾಗೇ ಸಂವಿಧಾನಾತ್ಮಕವಾಗಿ ಇಚ್ಛಾಶಕ್ತಿಯನ್ನು ಗೌರವಾನ್ವಿತ ರಾಷ್ಟ್ರಪತಿಗಳು ಎತ್ತಿ ಹಿಡಿಯಬೇಕೆಂದು JUSTICE FOR MANISHA VALMIKI “ ಎಂಬ ಅಭಿಯಾನದ ಮೂಲಕ ರಾಷ್ಟ್ರಪತಿಗಳಿಗೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ್ ಹಿಟ್ನಾಳ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಗಾಳೆಪ್ಪ ಪೂಜಾರ, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್, ಕಾಟನ್ ಪಾಷಾ , ಸಲಿಂ ಅಳವಂಡಿ, ಶಿವಕುಮಾರ ಶೆಟ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಳೆಗೆ ಕುಸಿದ ಮನೆ, ವೃದ್ಧೆ ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರೋಣ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಪರಿಣಾಮ ವೃದ್ಧೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ನಡೆದಿದೆ.

ಶಂಕ್ರವ್ವ ನಿಂಗನಗೌಡ ಭೀಮನಗೌಡ್ರೆ(70) ಮೃತ ದುರ್ದೈವಿಯಾಗಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಗೆ ಹಳೆಯ ಮನೆ ಕುಸಿದಿದೆ.

ನಸುಕಿನ ವೇಳೆ ಮನೆ ಕುಸಿದ ಪರಿಣಾಮ ವೃದ್ಧೆ ಬಚಾವಾಗಲು ಸಾಧ್ಯವಾಗಿಲ್ಲ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

error: Content is protected !!