Home Blog Page 3156

ಯಡಿಯೂರಪ್ಪ ಬೇಕು ಅಂತಾರೆ – ಆದರೆ ಎಲ್ಲರೂ ಸೂಟು, ಬೂಟು ಹೊಲಿಸಿಕೊಂಡಿದ್ದಾರೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸಿಎಂ ಯಡಿಯೂರಪ್ಪ ಅವರದ್ದು ಯಾರಿಗೂ ಬಗ್ಗುವ ವ್ಯಕ್ತಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳಲ್ಲಿ ಹಲವಾರು ತಂತ್ರಗಳು ಇರುತ್ತವೆ. ಇದರೊಂದಿಗೆ ರಾಜಕಾರಣದಲ್ಲಿ ಹೇಳುವುದೊಂದು, ಮಾಡುವುದೊಂದು ಎಂಬ ನೀತಿ ಅನುಸರಿಸುತ್ತಿರುತ್ತಾರೆ. ರಾಜಕಾರಣದಲ್ಲಿ ಯಡಿಯೂರಪ್ಪ ತಂತ್ರ ಬೇರೆ. ಇರುವುದರಲ್ಲಿ ಗಟ್ಟಿ ಮನುಷ್ಯ ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಾಯಕತ್ವದಲ್ಲಿ 104 ಸೀಟ್ ಬಂದಿವೆ. ಅವರ ನಾಯಕತ್ವದಡಿಯಲ್ಲಿಯೇ ನಮ್ಮ ಸ್ನೇಹಿತರು ಕೂಡ ಹೋಗಿದ್ದಾರೆ. ಈಗ ಸುಮ್ಮನೆ ಅವರನ್ನು ತಗೆದು ಹಾಕುವ ಮಾತು ಕೇಳಿ ಬರುತ್ತಿದೆ. ಆದರೆ, ಇದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಆದರೆ, ಗಟ್ಟಿ ಮನುಷ್ಯನ ಮುಂದೆ ಈ ತಂತ್ರ ಸುಲಭವಾಗಿ ಜಗ್ಗಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂದೆ ಎಲ್ಲರೂ ಯಡಿಯೂರಪ್ಪ ಬೇಕು ಅಂತಾರೆ. ಹಿಂದೆ ಎಲ್ಲರೂ ಸೂಟು – ಬೂಟು ಹೊಲಿಸಿಕೊಂಡು ಸಿದ್ಧರಾಗಿದ್ದಾರೆ.. ನನ್ನಂತಹ ವ್ಯಕ್ತಿಯಾಗಿದ್ದರೆ, ನಮ್ಮ ಪಕ್ಷ ಆಗಿದ್ದರೆ ಇಂತಹ ವ್ಯಕ್ತಿಗಳನ್ನು ಇರುವುದಕ್ಕೆ ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೇ, ಯಡಿಯೂರಪ್ಪ ತಂತ್ರವನ್ನು ಮೂರು ರೀತಿಯಲ್ಲಿ ವಿಶ್ಲೇಷಣೆ ಮಾಡಬಹುದು. ನನ್ನನ್ನ ಮುಟ್ಟಿ ನೋಡಿ ಎನ್ನಬಹುದು. ಪಕ್ಷದ ಶಿಸ್ತಿನ ಸಿಪಾಯಿ ಎನ್ನಬಹುದು. ನೀವೆ ಎಲ್ಲ ವಿಶ್ಲೇಷಣೆ ಮಾಡಿ ಎಂದಿರಬಹುದು ಎಂದು ಹೇಳಿದ್ದಾರೆ.

ನಮ್ಮಲ್ಲಿ ಸಿಎಂ ಬದಲಾವಣೆಯ ಮಾತೇ ಬಂದಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ

ವಿಜಯಸಾಕ್ಷಿ ಸುದ್ದಿ, ಮಂಗಳೂರು

ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶ. ಇದು ನಮ್ಮ ಪಕ್ಷದ ವಿಶೇಷತೆ ಎಂದು ಸಿಎಂ ಯಡಿಯೂರಪ್ಪ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರುವುದು ಆದರ್ಶ. ಯಡಿಯೂರಪ್ಪ ಅಧಿಕಾರಕ್ಕೆ ಅಂಟಿ ಕೂತವರಲ್ಲ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.

ಪಕ್ಷದಲ್ಲಿ ಇಂಥಹ ಯಾವುದೇ ಚರ್ಚೆಗಳಿಲ್ಲ. ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ.
ಯಡಿಯೂರಪ್ಪ ನಮ್ಮ ಸರ್ವ ಸಮ್ಮತಿಯ ನಾಯಕ. ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ರಾಷ್ಟ್ರೀಯ ನಾಯಕರು ಹೇಳಿದ್ದಾರೆ. ಇಂಥಹ ಚರ್ಚೆಗಳು ಅಪ್ರಸ್ತುತ. ಸದ್ಯ ಕೋವಿಡ್ ನಿರ್ವಹಣೆ ನಮ್ಮ ಜವಾಬ್ದಾರಿ. ಆದರೆ, ಆದರ್ಶ ಹೇಳಿಕೆಯನ್ನು ಸಿಎಂ ಕೊಟ್ಟಿದ್ದಾರೆ. ಪಕ್ಷ ಮತ್ತು ‌ರಾಷ್ಡ್ರೀಯ ನಾಯಕರ ಮುಂದೆ ಈ ಚರ್ಚೆಯೇ ಇಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಸಿಎಂ ಆದ ಮೇಲೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದರು. ಇಂತಹ ಮಾತುಗಳ ನೋವಿನಿಂದ ಸಿಎಂ ಈ ಹೇಳಿಕೆ ನೀಡಿರಬಹುದು. ನಾನೊಬ್ಬ ಕಾರ್ಯಕರ್ತ ಎಂಬ ನೆಲೆಯಲ್ಲಿ ಅವರು ಇವತ್ತು ಸಂದೇಶ ಕೊಟ್ಟಿದ್ದಾರೆ. ಪರ್ಯಾಯ ನಾಯಕತ್ವದ ಬಗ್ಗೆ ಅವರು ಸಹಜ ಹೇಳಿಕೆ ನೀಡಿದ್ದಾರೆ. ನಮ್ಮಲ್ಲಿ ಹತ್ತಾರು ನಾಯಕರಿದ್ದಾರೆ ಎಂದು ಒಬ್ಬ ಹಿರಿಯರಾಗಿ ಹೇಳಿದ್ದಾರೆ ಎಂದು ಹೊಗಳಿದ್ದಾರೆ.

ನಮ್ಮ ಪಕ್ಷದಲ್ಲಿ ಯಾವುದೇ ರೇಬಲ್ ಗಳಿಲ್ಲ. ಈ ಕುರಿತು ಎಲ್ಲರಿಗೂ ಈಗಾಗಲೇ ಹೇಳಲಾಗಿದೆ. ಏನೇ ನೋವುಗಳಿದ್ದರೂ ಮಾತುಕತೆ ಮಾಡಲು ಸೂಚಿಸಿದ್ದೇವೆ. ನೋವುಗಳು, ಹತಾಶೆ ಸರ್ಕಾರ ನಡೆಸುವ ಸಂದರ್ಭದಲ್ಲಿ ಸಹಜ. ಅವುಗಳನ್ನು ಸರಿ ಮಾಡುವ ಪ್ರಯತ್ನಗಳು ನಡೆದಿವೆ. ಆದರೆ, ನಮ್ಮಲ್ಲಿ ಸಿಎಂ ಬದಲಾವಣೆ ಚರ್ಚೆಯಿಲ್ಲ, ಗೊಂದಲ, ಅಪಸ್ವರಗಳಿಲ್ಲ. ಮುಂದಿನ ತಿಂಗಳು ಮತ್ತೊಮ್ಮೆ ಶಾಸಕರ ಸಭೆ ನಡೆಯಲಿದೆ. ಆ ಸಂದರ್ಭದಲ್ಲಿ ಅಪಸ್ವರಗಳಿದ್ದರೆ ಬಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಹಸ್ತಕ್ಷೇಪವೇ ಬಿಎಸ್ ವೈ ಪದತ್ಯಾಗಕ್ಕೆ ಕಾರಣ – ಹಳ್ಳಿ ಹಕ್ಕಿ!

ವಿಜಯಸಾಕ್ಷಿ ಸುದ್ದಿ, ಮೈಸೂರು

ರಾಜ್ಯದಲ್ಲಿ ಬಿಜೆಪಿ ಬಲಗೊಳ್ಳಲು ಸಿಎಂ ಯಡಿಯೂರಪ್ಪ ಅವರ ಶ್ರಮ ಸಾಕಷ್ಟಿದೆ. ಆದರೆ, ಸಿಎಂ ಹೇಳಿಕೆ ನಿರೀಕ್ಷಿತ. ಇದು ಬಹಳಷ್ಟು ದಿನಗಳ ಹಿಂದೆಯಿಂದಲೂ ನಡೆಯುತ್ತಿದೆ ಎಂದು ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ವಿಷಯವಾಗಿ ಸಿಎಂ ಹೇಳಿದ್ದು ದೊಡ್ಡ ಮಾತು. ಕಾಂಗ್ರೆಸ್ ಹಾಗೂ ಬಿಜೆಪಿಗೆ ದೆಹಲಿಯೇ ಹೈಕಮಾಂಡ್. ಅದಕ್ಕಾಗಿಯೇ ಬೊಮ್ಮಾಯಿ ಹಾಗೂ ವಿಜಯೇಂದ್ರ ದೆಹಲಿಗೆ ತೆರಳಿದ್ದರು ಎಂದು ಹೇಳಿದ್ದಾರೆ.

ನನಗೆ ಪರ್ಯಾಯ ನಾಯಕ ಇಲ್ಲ ಎಂಬುವುದು ಸುಳ್ಳು ಎಂಬ ಹೇಳಿಕೆ ಸ್ವಾಗತರ್ಹ. ರಾಜ್ಯದ ಆಡಳಿತ, ಜನರ, ಅಭಿವೃದ್ಧಿ ಹಿತದೃಷ್ಟಿಯಿಂದ ಹೈಕಮಾಂಡ್ ಮಾತಿಗೆ ಮೀರಲ್ಲ ಎಂಬ ಹೇಳಿಕೆ ಕೂಡ ಸ್ವಾಗತಿಸುವಂತದ್ದಾಗಿದೆ. ವಯಸ್ಸಿನ ಕಾರಣಕ್ಕೆ ಸಿಎಂ ಅವರನ್ನು ಬದಲಾಯಿಸಲಾಗುತ್ತಿದೆ. ಆರೆಸ್ಸೆಸ್ ಕೂಡ ಬಿಎಸ್ ವೈ ಅವರ ಮನವೊಲಿಸಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷವು ವಯಸ್ಸಿನ ಲಕ್ಷ್ಮಣ ರೇಖೆ ವಿಧಿಸಿಕೊಂಡಿದೆ. ಇದು ಅಡ್ವಾಣಿ, ಜೋಷಿ ಸೇರಿದಂತೆ ಎಲ್ಲರಿಗೂ ಅನ್ವಯ ಆಗಿದೆ. ಆದರೆ, ಯಡಿಯೂರಪ್ಪ ಅವರಿಗೆ ವಿಶೇಷ ಆದ್ಯತೆ ನೀಡಲಾಗಿತ್ತು. ಆದರೆ, ಪಕ್ಷವನ್ನ ಬಲಪಡಿಸುವ ಹಾಗೂ ಎಲ್ಲರನ್ನೂ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನು ಅದಕ್ಷ, ಅಪ್ರಾಮಾಣಿಕ ಎಂದು ಹೇಳುತ್ತಿದ್ದರು. ಆದರೆ, ನಾವೆಲ್ಲ ಬಿಎಸ್‌ವೈ ಮೇಲಿನ ವಿಶ್ಚಾಸಕ್ಕೆ‌ ಬಿಜೆಪಿಗೆ ಸೇರಿದ್ದೇವೆ. ಆದರೆ, ವಯಸ್ಸಿನ ಆಧಾರದ ಮೇಲೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಹೈಕಮಾಂಡ್ ಸೂಚನೆ ಪಾಲಿಸುವುದು ನಾಯಕರ ಕರ್ತವ್ಯ ಎಂದು ಹೇಳಿದ್ದಾರೆ.

ರಾಜೀನಾಮೆ ಕೊಡುತ್ತಾರೆ, ಅವರು ತೆಗೆದುಕೊಳ್ಳುತ್ತಾರೆ ಎನ್ನುವುದಕ್ಕಿಂತ ಹೈಕಮಾಂಡ್ ತೀರ್ಮಾನ ಮುಖ್ಯ. ಎಲ್ಲರನ್ನು ಪ್ರೀತಿಸುವ, ಒಟ್ಟಿಗೆ ಕೊಂಡೊಯ್ಯುವ ಸಾಮಾನ್ಯ ಜ್ಞಾನ ಇರುವವರೇ ಸಾಕು ರಾಜ್ಯವನ್ನು ಮುನ್ನಡೆಸಲು. ಕೈ, ಬಾಯಿ, ಶುದ್ದಿ ಇರುವವರು, ಬುದ್ದಿವಂತರು ಸಾಕು. ಒಂದೊಂದು ನಾಯಕತ್ವ ಕುಟುಂಬಗಳಿಂದಲೇ ಹೋಗಿವೆ. ಏನೇ ಆಗಲಿ, ವಿಜಯೇಂದ್ರ ಅವರ ಹಸ್ತಕ್ಷೇಪವೇ ಪದತ್ಯಾಗಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಎಸ್ಸೆಸ್ಸೆಲ್ಸಿ, ಪಿಯುಸಿ ರಿಪೀಟರ್ಸ್ ಗೆ ನಡೆಯಲಿದೆ ಪರೀಕ್ಷೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದೆ.ಮಹಾಮಾರಿಯಿಂದಾಗಿ ಈಗಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಆದೇಶಿಸಲಾಗಿದೆ. ಆದರೆ, ಸದ್ಯ ಶಿಕ್ಷಣ ಇಲಾಖೆ ಈಗ ಮತ್ತೊಂದು ಎಡವಟ್ಟಿನ ನಿರ್ಧಾರಕ್ಕೆ ಮುಂದಾಗಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ದ್ವಿತೀಯ ಪಿಯುಸಿ ರಿಪೀಟರ್ಸ್ ಗೆ ಆತಂಕ ಶುರುವಾಗಿದೆ. ದ್ವಿತೀಯ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಬೇಕಿದೆ.

ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ರಿಪೀಟರ್ಸ್ ಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಜುಲೈ ಕೊನೆಯ ಅಥವಾ ಆಗಷ್ಟ್ ಮೊದಲ ವಾರದಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳಇಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಕೊರೊನಾ 3ನೇ ಅಲೆ ಆಗಷ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಬರುವ ಸಾಧ್ಯತೆ ಇದ್ದರೂ ಸರ್ಕಾರ ಈ ರೀತಿಯ ನಿರ್ಧಾರಕ್ಕೆ ಮುಂದಾಗಿದೆ.

ಈ ವರ್ಷ 76,387 ಪುನರಾವರ್ತಿತ ಹಾಗೂ 17,477 ಖಾಸಗಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಪರೀಕ್ಷೆಗೆ ನೊಂದಣಿ ಮಾಡಲಾಗಿದೆ. ಒಂದು ವೇಳೆ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಸೋಂಕು ಹೆಚ್ಚಾದರೆ, ಪ್ರಶ್ನೆಗಳ ಸಂಖ್ಯೆಯಲ್ಲಿ ಕಡಿತ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ 50 ಅಂಕಗಳ ಪರೀಕ್ಷೆ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ. ಆ 50 ಅಂಕಗಳನ್ನೇ ಡಬಲ್ ಮಾಡಿ ಫಲಿತಾಂಶ ನೀಡಲು ಮುಂದಾಗಿದೆ. ಅಲ್ಲದೇ, ಸಾಧ್ಯವಾದರೆ, 5 ಅಂಕಗಳ ಗ್ರೇಸ್ ಮಾರ್ಕ್ಸ್ ನೀಡಲು ಪಿಯು ಬೋರ್ಡ್ ಚಿಂತನೆ ನಡೆಸಿದೆ. ಒಂದು ಗಂಟೆಯ ಬದಲಾಗಿ 30 ನಿಮಿಷಕ್ಕೆ ಪರೀಕ್ಷೆ ನಡೆಸುವ ಚಿಂತನೆ ನಡೆದಿದೆ. ಒಂದು ಕೊಠಡಿಯಲ್ಲಿ 8 ರಿಂದ 10 ವಿದ್ಯಾರ್ಥಿಗಳನ್ನು ಕೂಡಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ.

ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬ- 777 ಚಾರ್ಲಿ ಸಿನಿಮಾದ ಟೀಸರ್ ಬಿಡುಗಡೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿನಯದ ಬಹುನಿರೀಕ್ಷೆಯ 777 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
ಈ ಟೀಸರ್ ಮೂಲಕ ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಕೆರಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಚಿತ್ರ 5 ಭಾಷೆಗಳಲ್ಲಿ ತೆರೆಗೆ ಅಪ್ಪಳಿಸಲು ಸಿದ್ಧವಾಗುತ್ತಿದೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಜನರನ್ನು ತಲುಪಲಿದೆ. ಇನ್ನೂ ವಿಶೇಷ ಎಂದರೆ ಈ ಚಿತ್ರ ಮಲಯಾಳಂನಲ್ಲಿಯೂ ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಅಲ್ಲದೇ, ಅಲ್ಲಿಯೂ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

‘777 ಚಾರ್ಲಿ’ ನಾಯಿ ಮತ್ತು ಮನುಷ್ಯನ ನಡುವಿನ ಭಾವನಾತ್ಮಕ ಸಂಬಂಧದ ಕುರಿತು ತಿಳಿಸಲಿದೆ. ಈ ಚಿತ್ರ ಕೂಡ ಚಂದನವನದಲ್ಲಿನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗೆ ಈ ಚಿತ್ರ ಕೂಡ ಜನರ ಕೈಗೆ ಸಿಗುತ್ತಿತ್ತು. ಆದರೆ, ಕೊರೊನಾದಿಂದಾಗಿ ಈ ಅಭಿಮಾನಿಗಳಿಗೆ ನಿರಾಸೆ ಮೂಡುವಂತಾಗಿದೆ. ಸದ್ಯ ಟೀಸರ್ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗುತ್ತಿದೆ.

ರಾಜೀನಾಮೆಗೆ ಸಿದ್ಧರಾದರಾ ಯಡಿಯೂರಪ್ಪ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಹೈಕಮಾಂಡ್ ವಿಶ್ವಾಸ ಇರುವವರೆಗೂ ನಾನು ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದು, ಪರೋಕ್ಷವಾಗಿ ರಾಜೀನಾಮೆಗೆ ಮುಂದಾಗಿದ್ದಾರೆಯೇ? ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದೆ. ನನಗೆ ಎಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರೆಯುವಂತೆ ಸೂಚಿಸುತ್ತಾರೆಯೋ ಅಲ್ಲಿಯವರೆಗೆ ನಾನು ಅಧಿಕಾರದಲ್ಲಿ ಇರುತ್ತೇನೆ. ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ, ಕೂಡಲೇ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ರಾಜೀನಾಮೆ ನೀಡಿದರೂ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸದ್ಯ ಹೈಕಮಾಂಡ್ ಗೆ ನನ್ನ ಮೇಲೆ ವಿಶ್ವಾಸವಿದೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಮೇಲಿನವರಿಗೆ ವಿಶ್ವಾಸ ಇರುವವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಸಿಎಂ ಅವರ ಮಾತು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದ್ದು, ಸಿಎಂ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆಯೇ? ಅಲ್ಲದೇ, ಹೈಕಮಾಂಡ್ ಈ ಕುರಿತು ಸೂಚನೆ ನೀಡಿದೆಯೇ? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಸತ್ಯಾಂಶ ಇನ್ನಷ್ಟೇ ದಿನಗಳಲ್ಲಿ ತಿಳಿದು ಬರಲಿದೆ.

ಜಡೆ ಜಗಳ ಅಂತ್ಯಗೊಳಿಸಿದ ಸರ್ಕಾರ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೊರೊನಾ ಸಂದರ್ಭದಲ್ಲಿ ಈ ಇಬ್ಬರೂ ಅಧಿಕಾರಿಗಳ ನಡುವೆ ಸಂಘರ್ಷ ಉಂಟಾಗಿತ್ತು. ಹೀಗಾಗಿ ಈ ಜಡೆ ಜಗಳ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಮೈಸೂರು ನೂತನ ಜಿಲ್ಲಾಧಿಕಾರಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಡಾ. ಬಗಾದಿ ಗೌತಮ್ ನೇಮಕಗೊಂಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಆಡಳಿತ ವ್ಯವಸ್ಥಾಪಕ ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ಕೊರೊನಾ ನಿರ್ವಹಣೆ ವಿಷಯದಲ್ಲಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್, ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಕೆಲಸ ಮಾಡಿದರೂ ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ನಮ್ಮನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಶಿಲ್ವಾ ನಾಗ್ ಆರೋಪಿಸಿದ್ದರು.

ಬಹುತೇಕ ಜನ ಪ್ರತಿನಿಧಿಗಳು ಕೂಡ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೊಂದೆಡೆ ಶಿಲ್ಪಾ ನಾಗ್ ಆರೋಪಕ್ಕೆ ರೋಹಿಣಿ ಸಿಂಧೂರಿ, ಆರೋಪ ಆಧಾರ ರಹಿತವಾಗಿದೆ. ನನ್ನಿಂದ ಕಿರುಕುಳ ನಡೆದಿದೆ ಎನ್ನುವುದು ಸುಳ್ಳು ಎಂದು ಹೇಳಿದ್ದರು.

ಕನ್ನಡಿಗರ ಆಕ್ರೋಶದಿಂದ ಬುದ್ಧಿ ಕಲಿತ ಅಮೇಜಾನ್ ಕಂಪನಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕನ್ನಡಿಗರ ಆಕ್ರೋಶದಿಂದಾಗಿ ಅಮೇಜಾನ್ ಗೆ ಬುದ್ಧಿ ಬಂದಿದೆ. ಭಾರತದ ಅತ್ಯಂತ ಕೊಳಕು, ಅಸಹ್ಯ ಭಾಷೆ ಕನ್ನಡ ಎಂದು ಸರ್ಚ್ ನಲ್ಲಿ ತೋರಿಸಿದ್ದ ಗೂಗಲ್, ಗೂಗಲ್ ಗೆ ಕನ್ನಡಿಗರು ತಕ್ಕ ಪಾಠ ಕಲಿಸಿದ್ದಾರೆ. ವಿಶ್ವದ ಅತಿದೊಡ್ಡ ಇ – ಕಾಮರ್ಸ್ ಕಂಪನಿಯಾಗಿರುವ ಅಮೇಜಾನ್ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೆನಡಾದ ಅಮೇಜಾನ್ ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ನಲ್ಲಿ ಕನ್ನಡ ಧ್ವಜದ ಚಿತ್ರ, ಅಶೋಕ ಚಕ್ರದ ಲಾಂಛನವಿರುವ ಮಹಿಳೆಯರ ಒಳ ಉಡುಪುಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಈ ಕುರಿತು ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಕನ್ನಡಪರ ಸಂಘಟನೆಗಳು, ಕನ್ನಡಿಗರು, ಸಚಿವರು ಆಕ್ರೋಶ ಹೊರ ಹಾಕಿದ್ದರು. ಸದ್ಯ ಆ ಚಿತ್ರವನ್ನು ಅಮೇಜಾನ್ ಈಗ ತೆಗೆದು ಹಾಕಿದೆ.

ವಿಮೆನ್ಸ್ ಫ್ಲ್ಯಾಗ್ ಆಫ್ ಕರ್ನಾಟಕ ಒರಿಜಿನಲ್ ಡಿಸೈನ್ ಎಂಬ ಹೆಸರಿನಲ್ಲಿ ಅಮೇಜಾನ್, ಈ ಬಿಕಿನಿಯನ್ನು ಮಾರಾಟ ಮಾಡಲು ಪ್ರಯತ್ನಿಸಿತ್ತು. ಇದಕ್ಕ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಫ್ಲಾಗ್ ಡಿಸೈನ್ನ ಪ್ರಾಡಕ್ಟ್ ಎಂದು ನಮೂದಿಸಲ್ಪಟ್ಟಿದ್ದ ಕನ್ನಡ ಧ್ವಜವಿರುವ ಮಹಿಳೆಯರ ಒಳಉಡುಪುಗಳನ್ನು ಮಾರಾಟ ಮಾಡಲು ಪ್ರಯತ್ನಿಸಿದ ಅಮೇಜಾನ್ ಗೆ ಟ್ಯಾಗ್ ಮಾಡಿ ವಿರೋಧಿಸಲಾಗಿತ್ತು.

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಕೆನಡಾದ ಅಮೇಜಾನ್ ಸಂಸ್ಥೆ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಅಮೇಜಾನ್ ಕ್ಷಮೆ ಯಾಚಿಸದಿದ್ದರೆ ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದಿದ್ದರು.

2 ದಿನಗಳ ಹಿಂದಷ್ಟೇ ಗೂಗಲ್ನಲ್ಲಿ ವೆಬ್ ಸೈಟ್ ಲಿಂಕ್ವೊಂದು ಕನ್ನಡ ಭಾರತದ ಅತ್ಯಂತ ಕೊಳಕು ಭಾಷೆ ಎಂದು ತೋರಿಸುತ್ತಿತ್ತು. ಭಾರತದ ಅಗ್ಲಿಯೆಸ್ಟ್ ಭಾಷೆ ಯಾವುದು ಎಂದು ಸರ್ಚ್ ಮಾಡಿದರೆ ಗೂಗಲ್ ನಲ್ಲಿ ಕನ್ನಡ ಎಂದು ತೋರಿಸುತ್ತಿತ್ತು. ಇದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಗೂಗಲ್ ಕ್ಷಮೆಯಾಚಿಸಿತ್ತು. ಅದರಲ್ಲಿಯೂ ಕನ್ನಡದಲ್ಲಿಯೇ ಕ್ಷಮೆ ಕೇಳಿತ್ತು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆರಾಯನ ಅಬ್ಬರ ಇರಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಬೆಂಗಳೂರಿನಲ್ಲಿ ಎರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಳೆ ಇಳಿಕೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ವರ್ಷ ಸಿಲಿಕಾನ್ ಸಿಟಿಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಬಿಬಿಎಂಪಿ ಅಧಿಕಾರಿಗಳು ಸೂಕ್ತವಾಗಿ ಸಿದ್ಧರಾಗಬೇಕಾದ ಅನಿವಾರ್ಯತೆ ಇದೆ.

ಕೊರೊನಾ ದುರಂತ; ಒಂದೇ ಕುಟುಂಬದ ಮೂವರು ಸಾವು!

ವಿಜಯಸಾಕ್ಷಿ ಸುದ್ದಿ, ವಿಜಯನಗರ

ಕೊರೊನೊದಿಂದಾಗಿ ಇಡೀ ಕುಟುಂಬವೇ ದುರಂತ ಸಾವು ಕಂಡಿದ್ದು, ಕುಟುಂಬದಲ್ಲಿ ಸ್ಮಶಾನ ಮೌನ ಆವರಿಸಿದೆ. ಒಂದೇ ಕುಟುಂಬದ ಮೂವರು ಕೇವಲ ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ್ದಾರ. ಈ ಘಟನೆ ಹೊಸಪೇಟೆ ನಗರದಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ರಾಜ್ಯ ಕಾರ್ಯದರ್ಶಿ ಕ್ಯಾರೋಲಿನ್ ಲೂಸಿಯಾ ಸ್ಮೀತ್ ಅವರು, ಕಳೆದ ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದರು. ಮರುದಿನವೇ ಅವರ ಸಹೋದರ ಶ್ಯಾವಿಯೋ ಸ್ಮೀತ್ ಕೂಡ ಸಾವನ್ನಪ್ಪಿದ್ದಾರೆ.

ಇಬ್ಬರು ಮಕ್ಕಳ ಸಾವಿನ ಸುದ್ದಿ ಕೇಳಿ ಸಹಿಸಿಕೊಳ್ಳದ ತಂದೆ ಬೇರಿ ಸ್ಮೀತ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

error: Content is protected !!