Home Blog Page 3159

ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಹೈಕೋರ್ಟ್…ಒಂದೇ ದಿನದಲ್ಲಿ ವರದಿ ನೀಡುವಂತೆ ಲ್ಯಾಬ್ ಗಳಿಗೆ ಸೂಚಿಸಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾ ವಿಷಯದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಕೊರೊನಾ ಪರೀಕ್ಷೆ ಮಾಡಿಸಿ ಒಂದು ದಿನದೊಳಗೆ ವರದಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರವು ಎಲ್ಲಾ ಲ್ಯಾಬ್‌ ಗಳಿಗೆ 24 ಗಂಟೆಗಳಲ್ಲಿ ವರದಿ ನೀಡುವಂತೆ ಆದೇಶ ಹೊರಡಿಸಬೇಕು. ವರದಿ ನೀಡಲು ವಿಳಂಬ ಮಾಡಿದ ಲ್ಯಾಬ್ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಎ.ಎಸ್. ಓಕ ಮತ್ತು ನ್ಯಾ.ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸಿಬ್ಬಂದಿ ಸಾವನ್ನಪ್ಪಿರುವ ಕುರಿತು ಪ್ರಸ್ತಾಪಿಸಿದ ಪೀಠ, ಸೋಂಕಿತ ಚಾಲಕ ಮೇ. 10ರಂದು ಸಿವಿ ರಾಮನ್ ಜನರಲ್ ಆಸ್ಪತ್ರೆಯಲ್ಲಿ ಆರ್‌ ಟಿಪಿಸಿಆರ್ ಪರೀಕ್ಷೆಗೆ ಸ್ವ್ಯಾಬ್ ಕೊಟ್ಟಿದ್ದರು. ಆದರೆ, ಮೇ 12ರ ವರೆಗೆ ಸೋಂಕಿತ ಸಾವನ್ನಪ್ಪುವವರೆಗೂ ವರದಿ ನೀಡಿಲ್ಲ ಎಂದು ಹೇಳಲಾಗಿದ್ದು, ಈ ಹಿಂದೆ ವಿಚಾರಣೆ ಸಂದರ್ಭದಲ್ಲಿ 24 ಗಂಟೆಗಳಲ್ಲಿ ಪರೀಕ್ಷಾ ವರದಿ ಲಭ್ಯವಾಗುವಂತೆ ಲ್ಯಾಬ್‌ ಗಳಿಗೆ ಸೂಕ್ತ ನಿರ್ದೇಶನ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದರೆ, ನ್ಯಾಯಾಲಯದ ಆದೇಶವೇ ಪಾಲನೆಯಾಗಿಲ್ಲ ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.

ಕೊರೊನಾ ಟೈಂ ನಲ್ಲಿ ಪೊಲೀಸಪ್ಪನ ಟಫ್ ರೂಲ್ಸ್..!! ರೈತನಿಗೆ ನೀಡಿದ ಈ ಕಿರುಕುಳಕ್ಕೆ ರಾಜ್ಯವೇ ಆಕ್ರೋಶ!

ವಿಜಯಸಾಕ್ಷಿ ಸುದ್ದಿ, ಮೈಸೂರು

ಕೊರೊನಾ ಸಂದರ್ಭದಲ್ಲಿ ರೈತರಿಗೆ ತಮ್ಮ ಕೆಲಸ ಮಾಡಕೊಳ್ಳಲು ಸರ್ಕಾರವೇ ಅನುಮತಿ ನೀಡಿದೆ. ಆದರೆ, ಹಲವೆಡೆ ಮಾತ್ರ ಪೊಲೀಸರ ಕಾಟ ರೈತರನ್ನೂ ಬಿಡುತ್ತಿಲ್ಲ. ರೈತರೊಬ್ಬರಿಗೆ ಇಲ್ಲೊಬ್ಬ ಪೊಲೀಸಪ್ಪ ಮಾಡಿರುವ ಕಿರುಕುಳ ಕಂಡು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಮೀನಿಗೆ ತೆರಳುತ್ತಿದ್ದ ರೈತನ ಬೈಕ್ ಗೆ ಸಬ್ ಇನ್ಸಪೆಕ್ಟರ್ ಒಬ್ಬರು ಎಮಿಷನ್ ಟೆಸ್ಟ್ ಕೇಸ್ ಹಾಕಿದ್ದಾರೆ. ಜಮೀನಿನ ಲೀಸ್ ಡಾಕ್ಯುಮೆಂಟ್ ತೋರಿಸಿದ್ದರೂ ಪೊಲೀಸರು ರೈತನ ಬೈಕ್ ವಶಕ್ಕೆ ಪಡೆದಿದ್ದಾರೆ. ಅಷ್ಟೇ ಅಲ್ಲದೇ, ಬೆಳಿಗ್ಗೆ 6 ರಿಂದ 10ರ ವರೆಗೆ ಮಾತ್ರ ಓಡಾಟ ನಡೆಸಬೇಕು ಎಂದು ರೈತರಿಗೆ ಈ ಪೋಲೀಸ್ ಧಮ್ಕಿ ಹಾಕಿದ್ದಾರೆ.

ನಗರ ನಿವಾಸಿಯಾಗಿರುವ ಪ್ರಶಾಂತ್ ಎಂಬುವವರಿಗೆ ಪೊಲೀಸಪ್ಪ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಜಮೀನಿನಲ್ಲಿ ಬಾಳೆ ಗಿಡ ಹಾಳಾಗುತ್ತಿದೆ ಬಿಡಿ ಸ್ವಾಮಿ ಎಂದರೂ ಪಿಎಸ್ ಐ ಮಾತ್ರ ತನ್ನ ಮೊಂಡಾಟ ಮೆರೆದಿದ್ದಾರೆ. ಹುಲ್ಲಳ್ಳಿ ಸಮೀಪದ ಹರದನಹಳ್ಳಿ, ಕಣ್ಣೇನೂರಿನಲ್ಲಿ ಜಮೀನನ್ನು ರೈತ ಪ್ರಶಾಂತ್ ಲೀಸ್ ಪಡೆದಿದ್ದರು. ಹೀಗಾಗಿ ಅವರು ಜಯಪುರ ಮಾರ್ಗವಾಗಿ ಜಮೀನಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಬೈಕ್ ವಶಕ್ಕೆ ಪಡೆದಿದ್ದರು.

ಜಯಪುರ ಸಬ್ ಇನ್ಸ್ಪೆಕ್ಟರ್ ರೈತನಿಗೆ ಕಿರುಕುಳ ನೀಡಿದ ಅಧಿಕಾರಿ. ಬೈಕ್ ವಶಕ್ಕೆ ಪಡೆದ ಒಂದು ದಿನದ ಬಳಿಕ ಎಮಿಷನ್ ಟೆಸ್ಟ್ ಇಲ್ಲ ಎಂದು ರೂ. 1 ಸಾವಿರ ದಂಡ ವಿಧಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ರೈತರಿಗೆ ಈ ರೀತಿ ಕಿರುಕುಳ ನೀಡಿದ್ದಕ್ಕೆ ಸದ್ಯ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಕೇವಲ ಒಂದೇ ನಗರದಲ್ಲಿ ಎಷ್ಟು ಜನ ಪೊಲೀಸರು ಸೋಂಕಿಗೆ ಒಳಗಾಗಿದ್ದಾರೆ ಗೊತ್ತಾ?

ವಿಜಯಸಾಕ್ಷಿ ಸುದ್ದಿ ಬೆಂಗಳೂರು

ಕೊರೊನಾ ವೈರಸ್ ನ ಎರಡನೆ ಅಲೆ ಪೊಲೀಸರನ್ನು ಮತ್ತಷ್ಟು ಹೈರಾಣಾಗಿಸಿದೆ.
ನಗರದಲ್ಲಿನ ಬರೋಬ್ಬರಿ 1,369 ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 12 ಜನ ಪೊಲೀಸರು ಈಗಾಗಲೇ ಮಹಾಮಾರಿಗೆ ಬಲಿಯಾಗಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಾರ್ಯಾಲಯದಿಂದ ಬಿಡುಗಡೆಯಾದ ದಾಖಲೆಗಳ ಪ್ರಕಾರ, ಬೆಂಗಳೂರಿನಲ್ಲಿ ಇಲ್ಲಿಯವರೆಗೆ 1,369 ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.
ಅದರಲ್ಲಿ 693 ಜನ ಮನೆಗಳಲ್ಲಿ ಕ್ವಾರೆಂಟೈನ್ ಗೆ ಒಳಗಾಗಿದ್ದಾರೆ. 16 ಜನ ಸಿಬ್ಬಂದಿ ಕೋವಿಡ್ ಕೇರ್ ಸೆಂಟರ್‌ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೇ ಸಾಮಾನ್ಯ ವಾರ್ಡ್ ನಲ್ಲಿ 15 ಜನ ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ 726 ಸಕ್ರೀಯ ಕೋವಿಡ್ ಪ್ರಕರಣಗಳಿವೆ ಎಂದು ಇಲಾಖೆ ತಿಳಿಸಿದೆ.

ಮತ್ತೆ ಮುಂದುವರೆಯುವುದೇ ಲಾಕ್ ಡೌನ್!?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೆ ಲಾಕ್ ಡೌನ್ ಘೋಷಣೆ ಮಾಡಿದೆ. ಸದ್ಯ ಘೋಷಣೆಯಾಗಿರುವ ಲಾಕ್ ಡೌನ್ ನಿಂದಾಗಿ ಕೊರೊನಾ ಹತೋಟಿಗೆ ಬರುತ್ತಿದೆ. ಹೀಗಾಗಿ ಸರ್ಕಾರ ಲಾಕ್ ಡೌನ್ ಮುಂದುವರೆಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಲಾಕ್ ಡೌನ್ ಗೂ ಮುನ್ನ ಸರ್ಕಾರ ಜನತಾ ಕರ್ಫ್ಯೂ ಜಾರಿಗೊಳಿಸಿತ್ತು. ಆದರೆ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತ ಸಾಗಿತೇ ಹೊರತು, ಕಡಿಮೆಯಾಗಿರಲಿಲ್ಲ. ಕರ್ಫ್ಯೂ ಸಂದರ್ಭದಲ್ಲಿಯೂ ಜನ – ಜೀವನ ಎಂದಿನಂತೆಯೇ ಇತ್ತು. ಹೀಗಾಗಿ ಕೊರೊನಾ ಹತೋಟಿಗಾಗಿ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಇದು ಈಗಾಗಲೇ ಜಾರಿಯಾಗಿ 4 ದಿನಗಳು ಕಳೆಯುತ್ತಿವೆ. ಆದರೆ, ಅಷ್ಟರಲ್ಲಿಯೇ ಕೊರೊನಾ ಹತೋಟಿಗೆ ಬರಲು ಪ್ರಾರಂಭವಾಗಿದೆ. ಹೀಗಾಗಿ ಸರ್ಕಾರ ಸಂಪೂರ್ಣವಾಗಿ ಕೊರೊನಾ ಹತೋಟಿಗೆ ಬರುವವರೆಗೂ ಲಾಕ್ ಡೌನ್ ಘೋಷಿಸಲು ಚಿಂತನೆ ನಡೆಸಿದೆ.

ಅಲ್ಲದೇ, ಈಗಿರುವ ಲಾಕ್ ಡೌನ್ ನ್ನು ಇನ್ನಷ್ಟು ಕಠಿಣ ಮಾಡಬೇಕೆಂದು ಕೂಡ ಈಗಾಗಲೇ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸದ್ಯ ಲಾಕ್ ಡೌನ್ ಕಠಿಣವಾಗಿದ್ದರೂ ಜನರು ಅನಾವಶ್ಯಕವಾಗಿ ಹೊರಗೆ ಓಡಾಡುತ್ತಿದ್ದಾರೆ. ಪ್ರತಿದಿನ ದಿನಸಿ ಅಂಗಡಿ ಇದ್ದರು ಒಂದೇ ದಿನ ಎಲ್ಲ ಕೊಂಡುಕೊಳ್ಳಲು ಜನರು ಬರುತ್ತಿದ್ದಾರೆ. ಅಲ್ಲದೇ, ದಿನಂಪ್ರತಿ ಒಂದಿಲ್ಲೊಂದು ಕಾರಣ ಹೇಳಿ ಜನರು ಹೊರಗೆ ತಿರುಗಾಡುತ್ತಿದ್ದಾರೆ.

ಸದ್ಯದ ಲಾಕ್ ಡೌನ್ ಮೇ. 24ರ ವರೆಗೂ ಇರಲಿದೆ. ಈ ಲಾಕ್ ಡೌನ್ ನ್ನು ಇನ್ನಷ್ಟು ಕಠಿಣಗೊಳಿಸಿ, ಇನ್ನಷ್ಟು ದಿನ ಲಾಕ್ ಡೌನ್ ಮುಂದುವರೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ – ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಲ್ಭಣಗೊಂಡಿದ್ದರ ಪರಿಣಾಮ ಇಂದು ಹಾಗೂ ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಣಾಮ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿನ ಜನರಿಗೆ ಈಗಾಗಲೇ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈ ಜಿಲ್ಲೆಯಲ್ಲಿ ಇಂದು ಹಾಗೂ ನಾಳೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿ ಇಂದು ಯೆಲ್ಲೋ ಅಲರ್ಟ್ ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ನಾಳೆ ಕೊಡಗಿನಲ್ಲಿ 204 ಮೀ.ಮೀನಷ್ಟು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಬಾಗಮಂಡಲ, ಕೋರಂಗಾಲ ಸುತ್ತಮುತ್ತ ಭಾರೀ ಮಳೆ ಸಾಧ್ಯತೆ ಇದೆ ಎಂದು ಆಟೋಗಳಲ್ಲಿ ಮೈಕ್ ಕಟ್ಟಿ ಜಿಲ್ಲಾಡಳಿತ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ. ಎರಡು ದಿನಗಳ ಕಾಲ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಹ ಸೂಚನೆ ನೀಡಿದೆ.

ಜಗತ್ತಿನಲ್ಲಿ ಯಾರೂ ಸರ್ವಜ್ಞರಿಲ್ಲ….ನ್ಯಾಯಾಲಯ ನಿಂದಿಸಿ ಕ್ಷಮೆ ಕೇಳದೆ, ಮತ್ತೆ ಉದ್ಧಟತನ ಮೆರೆದರಾ ಸಿ.ಟಿ. ರವಿ?

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

ನ್ಯಾಯಾಲಯದ ಕುರಿತು ನನಗೆ ಅಪಾರ ಗೌರವವಿದೆ. ನಾನು ನ್ಯಾಯಾಲಯದ ಬಗ್ಗೆ ಅಗೌರವದ ಮಾತುಗಳನ್ನು ಹೇಳಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಬಗ್ಗೆ ನಮಗೆ ಗೌರವ ಯಾವಾಗಲೂ ಇರುತ್ತದೆ. ನ್ಯಾಯಧೀಶರು ಸರ್ವಜ್ಞರಲ್ಲ ಎಂದು ಹೇಳಿದ್ದೇನೆ. ಅವರು ಕೂಡ ತಾಂತ್ರಿಕ ಸಮಿತಿಯ ವರದಿ ಆಧರಿಸಿ ನಿರ್ದೇಶನ ನೀಡುತ್ತಾರೆ. ಸುಪ್ರೀಂಕೋರ್ಟ್ ಹೇಳಿಯೇ ಟೆಕ್ನಿಕಲ್ ಕಮಿಟಿ ನೇಮಿಸಿದೆ ಎಂದಿದ್ದೇನೆ. ನನ್ನ ಹೇಳಿಕೆಯಲ್ಲಿ ಅಗೌರವ, ಅಪನಂಬಿಕೆಯ ಹುಟ್ಟಿಸುವ ಹೇಳಿಕೆ ಏನಿಲ್ಲ ಎಂದು ಹೇಳಿದ್ದಾರೆ.

ಸರ್ವಜ್ಞ ಅಲ್ಲದ ಅಪನಂಬಿಕೆಯ ಪದವೇ, ನಿಂದನೆಯ? ಟೀಕೆಯೇ? ಏನೂ ಅಲ್ಲ. ನಾನು ಭಾವಿಸಿದಂತೆ ಜಗತ್ತಿನ 780 ಕೋಟಿ ಜನರಲ್ಲಿಯೂ ಎಲ್ಲ ಬಲ್ಲ ಸರ್ವಜ್ಞರಿಲ್ಲ. ನನ್ನ ಒಂದೊಂದು ಶಬ್ಧಕ್ಕೂ ನಾನು ಕಮಿಟಿಡ್ ಇದ್ದೇನೆ. ಯಾರೂ ತಪ್ಪು ಗ್ರಹಿಸಬಾರದು ಎಂದು ಹೇಳಿದ್ದಾರೆ.

ನ್ಯಾಯಾಧೀಶರ ವಿರುದ್ಧ ಮಾತನಾಡಿರುವ ಸಿ.ಟಿ. ರವಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು

ವಿಜಯಸಾಕ್ಷಿ ಸುದ್ದಿ, ಮೈಸೂರು

ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಹೇಳಿಕೆ ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆಗೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಸಿ.ಟಿ. ರವಿ ಅವರ ಹೇಳಿಕೆಗೆ ನಗರದಲ್ಲಿ ಪ್ರತಿಭಟನೆ ವ್ಯಕ್ತವಾಗಿದೆ.

ಸಿ.ಟಿ. ರವಿ ಅವರು ಇತ್ತೀಚೆಗೆ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ, ನಗರದಲ್ಲಿನ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಬಳಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಸಿಟಿ ರವಿ ಅವರ ವಿರುದ್ಧ ಪಾಲಿಕೆ ಸದಸ್ಯ ಲೋಕೇಶ್ ಪಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಒಬ್ಬ ನ್ಯಾಯಾಧೀಶರ ವಿರುದ್ಧ ಇಂತಹ ಹೇಳಿಕೆ ನೀಡುವುದು ತಪ್ಪು. ನ್ಯಾಯಾಧೀಶರನ್ನು ಲೇವಡಿ ಮಾಡಿರುವ ಸಿ.ಟಿ. ರವಿ ಅವರ ವಿರುದ್ಧ ಕ್ರಮ ಜರುಗಿಸಬೇಕು. ನ್ಯಾಯಾಧೀಶರು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹೇಳಿರುವ ಮಾತನ್ನು ಸಿ.ಟಿ. ರವಿ ಅಲ್ಲಗಳೆದು ಈ ರೀತಿ ಮಾತನಾಡಿದ್ದು, ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಬ್ಬ ಗೌರವಯುತ ನ್ಯಾಯಾಧೀಶರ ಬಗ್ಗೆ ಈ ರೀತಿಯ ಹೇಳಿಕೆಗಳನ್ನು ನೀಡುವುದು ತಪ್ಪು. ಈ ರೀತಿಯ ಹೇಳಿಕೆಗಳನ್ನು ನೀಡಿರುವ ಸಿ.ಟಿ. ರವಿ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿ

ವಿಜಯಸಾಕ್ಷಿ ಸುದ್ದಿ, ಭೋಪಾಲ್

ಕೊರೊನಾ ಮಹಾಮಾರಿಯಿಂದ ಈಗಾಗಲೇ ಇಡೀ ದೇಶವೇ ಕಂಗಾಲಾಗಿದೆ. ಆದರೆ, ಹಲವು ಪಾಪಿಗಳು ಇಂತಹ ಸನ್ನಿವೇಶವನ್ನೇ ಉಪಯೋಗಿಸಿಕೊಂಡು ಅವಾಂತರಗಳನ್ನು ಸೃಷ್ಟಿಸುತ್ತಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ 43 ವರ್ಷದ ಮಹಿಳೆಯೊಬ್ಬರು ಏ. 6ರಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ನರ್ಸ್ ಒಬ್ಬ, ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಅತ್ಯಾಚಾರ ಎಸಗಿದ ವ್ಯಕ್ತಿಯ ಮೇಲೆ ಮಹಿಳೆ ದೂರು ದಾಖಲಿಸಿದ್ದರು. ವೈದ್ಯರಿಗೆ ಈ ಕುರಿತು ಹೇಳಿಕೆ ನೀಡಿವಾಗ ಆರೋಪಿಯನ್ನು ಕೂಡ ಅವರು ಗುರುತಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಅತ್ಯಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಆರೋಗ್ಯ ಸ್ಥಿತಿ ಹದಗೆಡಲು ಆರಂಭಿಸಿದೆ. ಗಂಭೀರತೆಯನ್ನು ಅರಿತು ಕೂಡಲೇ ಆಕೆಯನ್ನು ವೆಂಟಿಲೇಟರ್ ಗೆ ಸ್ಥಳಾಂತರ ಮಾಡಲಾಯಿತು. ಆದರೆ ಅದೇ ದಿನ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತೋಷ್(40) ಎಂದು ಗುರುತಿಸಲಾಗಿದೆ. ಸದ್ಯ ಬಂಧಿತ ಆರೋಪಿಯನ್ನು ಭೋಪಾಲ್ ನ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ.

ಗೋವಾದಲ್ಲಿ ಕೇವಲ 4 ದಿನಗಳಲ್ಲಿ ಆಕ್ಸಿಜನ್ ಇಲ್ಲದೆ ಎಷ್ಟು ಜನ ಸಾವನ್ನಪ್ಪಿದ್ದಾರೆ ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಪಣಜಿ

ಆಕ್ಸಿಜನ್ ಕೊರತೆಯಿಂದಾಗಿ ಕೇವಲ ನಾಲ್ಕು ದಿನಗಳಲ್ಲಿ ಗೋವಾದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬರೋಬ್ಬರಿ 74 ಜನ ಸಾವನ್ನಪ್ಪಿರುವ ಘಟನೆ ನಡದಿದೆ.
13 ಜನ ಶುಕ್ರವಾರ(ಮೇ.14)ರಂದು ಸಾವನ್ನಪ್ಪಿದ್ದಾರೆ ಎಂದು ಮಾಜಿ ಡಿಸಿಎಂ ವಿಜಯ್ ಸರ್ದೇಸಾಯಿ ಬಹಿರಂಗ ಪಡಿಸಿದ್ದಾರೆ.

ಆಕ್ಸಿಜನ್ ಕೊರತೆಯಿಂದಾಗಿ ಗುರುವಾರವೇ ಬೆಳಿಗ್ಗೆ 15 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಬುಧವಾರ 20 ಜನ ಹಾಗೂ ಮಂಗಳವಾರ 26 ಜನ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಮೆಡಿಕಲ್ ಆಕ್ಸಿಜನ್ ಲಭ್ಯತೆಯ ಕೊರತೆಯಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್ ಸರಬರಾಜು ಕೊರತೆ ಇಲ್ಲ. ಮೇ 1ರಿಂದ 10ರ ವರೆಗೆ ರಾಜ್ಯವು ಮಹಾರಾಷ್ಟ್ರದ ಕೊಲ್ಹಾಪುರದಿಂದ ನಿಗದಿಪಡಿಸಿದ್ದ 110 ಮೆಟ್ರಿಕ್ ಟನ್ ಗಳಲ್ಲಿ ಕೇವಲ 66.74 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಪಡೆದಿರುವುದಾಗಿ ಕೂಡ ಗೋವಾ ಸರ್ಕಾರ ಹೇಳಿದೆ.

ಹಸಿದವರಿಗೆ ಅನ್ನ ನೀಡಿ ಬಸವ ಜಯಂತಿ ಆಚರಿಸಿದ ಶಿರಹಟ್ಟಿ ಪಿಎಸ್ಐ ನವೀನ್ ಜಕ್ಕಲಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಪಟ್ಟಣದಲ್ಲಿ ಬಸವ ಜಯಂತಿ ಪ್ರಯುಕ್ತ ಪಿಎಸ್ಐ ನವೀನ್ ಜಕ್ಕಲಿ, ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಊಟ ಕಲ್ಪಿಸುವುದರ ಮೂಲಕ ಬಡವರ ಹಸಿವನ್ನು ನೀಗಿಸುವ ಕೆಲಸವನ್ನು ಮಾಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಕಠಿಣ ಕರ್ಫ್ಯೂ ಕರ್ತವ್ಯದಲ್ಲೂ ಸಹ ಬಿಡುವು ಮಾಡಿಕೊಂಡು ಇಂತಹ ಮಾನವೀಯತೆಯನ್ನು ಮೆರೆಯುವಂತಹ ಹಲವಾರು ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸಾರ್ವಜನಿಕ ವಲಯದಲ್ಲಿ ಪಿಎಸ್ಐ ನವೀನ ಜಕ್ಕಲಿ ಪ್ರಸಂಸೆಗೆ ಪಾತ್ರರಾಗಿದ್ದಾರೆ.

error: Content is protected !!