Home Blog Page 3160

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹುಟ್ಟು ಹಬ್ಬ ಆಚರಿಸಿಕೊಂಡ ಕಾಂಗ್ರೆಸ್ ಮುಖಂಡ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಹೀಗಾಗಿ ಸಭೆ- ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ. ಇಷ್ಟಿದ್ದರೂ ಕಾಂಗ್ರೆಸ್ ಪಕ್ಷದ ಮುಖಂಡರೂ, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಮಾಜಿ‌ ಸದಸ್ಯರೊಬ್ಬರು ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಇವರು ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುವ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ಪಾಲಿಕೆಯ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರು ಎಂಬುವವರೇ ಕೊವಿಡ್ ನಿಯಮ ಗಾಳಿಗೆ ತೂರಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಅಲ್ಲದೇ, ಈ ಪಾರ್ಟಿಯಲ್ಲಿ ಭಾಗವಹಿಸಿದ್ದ ಬಹುತೇಕರು ಮಾಸ್ಕ್ ಹಾಕಿಕೊಳ್ಳದೆ ಸಾಮಾಜಿಕ ಅಂತರ ಕಾಪಾಡದೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

ಅಲ್ತಾಫ್ ನವಾಜ್ ಕಿತ್ತೂರ ಅವರು ಹಳೇ ಹುಬ್ಬಳ್ಳಿಯ ಅಲ್ತಾಪ್ ಪ್ಲಾಟ್ ಮಸೀದಿಯಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಇಳಿ ಮುಖವಾಗುತ್ತಿದೆ‌. ಆದರೂ ಜಿಲ್ಲೆಯಲ್ಲಿ ಜೂ. 7ರವರೆಗೆ ಕಠಿಣ ಲಾಕ್ ಡೌನ್ ನ್ನು ಜಿಲ್ಲಾಡಳಿತ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಹುಟ್ಟು ಹಬ್ಬ ಆಚರಿಸಿಕೊಂಡಿರುವ ನಾಯಕರ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದಲ್ಲಿ ಆತಂಕ ಮೂಡಿಸುತ್ತಿದೆ ಬ್ಲ್ಯಾಕ್ ಫಂಗಸ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಒಂದೇ ದಿನ 38 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಒಟ್ಟು 51 ಜನರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಬ್ಲ್ಯಾಕ್ ಫಂಗಸ್ ಸೋಂಕು 1,370 ಜನರಿಗೆ ತಗುಲಿದೆ. ಇವರಲ್ಲಿ 27 ಜನರು ಗುಣಮುಖರಾದರೆ, 1,292 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ಬೆಂಗಳೂರು- 557, ಧಾರವಾಡ- 156, ಕಲಬುರ್ಗಿ- 104, ಬಾಗಲಕೋಟೆ-70, ವಿಜಯಪುರ- 57, ಬಳ್ಳಾರಿ- 42, ರಾಯಚೂರು- 46, ಶಿವಮೊಗ್ಗ- 38, ದಕ್ಷಿಣಕನ್ನಡ, ಮೈಸೂರು ತಲಾ 35, ಚಿತ್ರದುರ್ಗ 34, ದಾವಣಗೆರೆ 26, ಬೆಂಗಳೂರು ಗ್ರಾಮಂತರ 20, ಕೊಪ್ಪಳ 16, ಗದಗ 11, ಉಡುಪಿ 10, ತುಮಕೂರು 10, ಹಾಸನ 9 ಮತ್ತು ಹಾವೇರಿ 8 ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ.

ರಾಜ್ಯದ ಬಹುತೇಕ ಎಲ್ಲ ಭಾಗದಲ್ಲೂ ಬ್ಲ್ಯಾಕ್ ಫಂಗಸ್ ಹಬ್ಬಿದ್ದು, ಒಟ್ಟು 1370 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ.

2024ರ ವಿಶ್ವಕಪ್ ನಲ್ಲಿ ಆಡುವ ತಂಡಗಳ ಸಂಖ್ಯೆ ಹೆಚ್ಚಿಸಿದ ಐಸಿಸಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಐಸಿಸಿಯು ಪುರುಷರ ವಿಶ್ವಕಪ್ ಕ್ರಿಕೆಟ್ ನ 2024 ರಿಂದ 2031ರ ವರೆಗಿನ ಶೆಡ್ಯೂಲ್ ಗಳನ್ನು ಬಿಡುಗಡೆ ಮಾಡಿದೆ.
ಇದರ ಪ್ರಕಾರ 2027 ಹಾಗೂ 2031ರಲ್ಲಿ 14 ತಂಟಗಳ ಟೂರ್ನಿ ನಡೆಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ. ಅಲ್ಲದೇ, ಮಿನಿ ವಿಶ್ವಕಪ್ ಎಂದೇ ಕರೆಯಿಸಿಕೊಳ್ಳುವ ಚಾಂಪಿಯನ್ಸ್ ಟ್ರೋಫಿಗೆ ಮಾನ್ಯತೆ ನೀಡುವ ಕುರಿತು ಕೂಡ ಐಸಿಸಿ ಹೇಳಿದೆ. ಈ ಟೂರ್ನಿಯನ್ನು 2025 ಹಾಗೂ 2029ರಲ್ಲಿ ಆಯೋಜಿಸಲಾಗುವುದು. ಈ ಟೂರ್ನಿಗಳಲ್ಲಿ 8 ತಂಡಗಳು ಭಾಗವಹಿಸಲಿವೆ ಎಂದು ಐಸಿಸಿ ತಿಳಿಸಿದೆ.


ಇತ್ತೀಚೆಗಷ್ಟೇ ಮುಕ್ತಾಯವಾಗಿರುವ ಐಸಿಸಿ ವಿಶ್ವಕಪ್ – 2019ರಲ್ಲಿ 10 ತಂಡಗಳು ಭಾಗವಹಿಸಿದ್ದವು. ಆದರೆ, ಅದಕ್ಕೂ ಮೊದಲು ನಡೆದಿದ್ದ 2019ರ ವಿಶ್ವಕಪ್ ನಲ್ಲಿ 14 ತಂಡಗಳು ಭಾಗವಹಿಸಿದ್ದವು. ಹೀಗಾಗಿ 2027 ಹಾಗೂ 2031ರಲ್ಲಿಯೂ 14 ತಂಟಗಳ ಟೂರ್ನಿ ನಡೆಸಲು ಐಸಿಸಿ ನಿರ್ಧರಿಸಿದೆ.

2027 ಹಾಗೂ 2031ರಲ್ಲಿ ನಡೆಯುವ ಪುರುಷರ ವಿಶ್ವಕಪ್ ಪಂದ್ಯಾವಳಿಯಲ್ಲಿ 14 ತಂಡಗಳಿಂದ ಒಟ್ಟು 54 ಪಂದ್ಯಗಳು ನಡೆಯಲಿವೆ. 2024, 2026, 2028, 2030ರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲ್ಲಿದ್ದು, 20 ತಂಡಗಳು ಭಾಗವಹಿಸಲಿವೆ. ಈ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ.

2015ರಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಲ್ಲಿ ನಡೆದ ವಿಶ್ವಕಪ್ ಸಂದರ್ಭದಲ್ಲಿ 14 ತಂಡಗಳು ಭಾಗವಹಿಸಿದ್ದವು. ಆದರೆ, 2019ರಲ್ಲಿ ನಡೆದ ವಿಶ್ವಕಪ್ ವೇಳೆ ತಂಡಗಳ ಸಂಖ್ಯೆಯನ್ನು 10ಕ್ಕೆ ಇಳಿಸಲಾಗಿತ್ತು. ಆಗ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

2021ರ ಟಿ20 ವಿಶ್ವಕಪ್ ಟೂರ್ನಿಗೆ ಯುಎಇನ ಮಧ್ಯ ಪ್ರಾಚ್ಯದಲ್ಲೊಂದು ಸ್ಥಳ ಸಿಗಬಹುದಾದ ಸಾಧ್ಯತೆ ಬಗ್ಗೆ ಗಮನ ಹರಿಸಿ ಎಂದು ಐಸಿಸಿ ಆಡಳಿತ ಮಂಡಳಿಯು ನಿರ್ವಹಣಾ ಸಮಿತಿಗೆ ಸೂಚಿಸಿದೆ. ಟೂರ್ನಿ ಟೂರ್ನಿ ಎಲ್ಲಿಯೇ ನಡೆದರೂ ಬಿಸಿಸಿಐಯೇ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅದರ ಆಯೋಜಕವೆನಿಸಿಕೊಳ್ಳುವುದು ಎಂದು ತನ್ನ ಅಧಿಕೃತ ಪ್ರಕಟಣೆಯಲ್ಲಿ ಐಸಿಸಿ ಹೇಳಿದೆ.

ರಾಜ್ಯದಲ್ಲಿ ವಿಸ್ತರಣೆಯಾಗುವುದೇ ಲಾಕ್ ಡೌನ್?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿನ ಆರ್ಭಟ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯದಲ್ಲಿ ಜೂ. 7ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆ ನಂತರವೂ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ಕುರಿತು ಚರ್ಚೆಗಳು ರಾಜ್ಯ ಸರ್ಕಾರದಲ್ಲಿ ನಡೆಯುತ್ತಿವೆ. ಇಂದು ಸರ್ಕಾರ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈಗಾಗಲೇ ಲಾಕ್ ಡೌನ್ ಕುರಿತು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ಇಂದು ಉನ್ನತ ಮಟ್ಟದ ತಜ್ಞರ ಜೊತೆ ಲಾಕ್ ಡೌನ್ ಕುರಿತು ಸಿಎಂ ಅವರು ತಮ್ಮ ಕೃಷ್ಣಾ ನಿವಾಸದಲ್ಲಿ ಸಂಜೆ 4.30ಕ್ಕೆ ಸಭೆ ನಡೆಸಲಿದ್ದಾರೆ. ಆ ನಂತರ ಸಂಜೆ 6ಕ್ಕೆ ಕೊರೊನಾ ತಜ್ಞರು ನೀಡಿರುವ ವರದಿ ಕುರಿತು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವರು ಪ್ರಮುಖ ಸಚಿವರು ಜೂ. 7ರ ನಂತರವೂ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಒಲವು ತೋರಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ ಅವರು ಜೂ. 7ರ ನಂತರ ಹಂತ ಹಂತವಾಗಿ ಅನ್ ಲಾಕ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಹೀಗಾಗಿ ತಜ್ಞರ ವರದಿಯೊಂದಿಗೆ ಸಚಿವರ ಅಭಿಪ್ರಾಯಗಳ ಕುರಿತು ಸಂಜೆ ಚರ್ಚೆಯಾಗಲಿದೆ. ಈ ಸಂದರ್ಭದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಬೇಕಾ? ಬೇಡವಾ? ಎಂಬುವುದನ್ನು ನಿರ್ಧರಿಸುವ ಸಾಧ್ಯತೆ ಇದೆ.

ತಜ್ಞರು, ಕೊರೊನಾ ಸೋಂಕನ್ನು ನಿಯಂತ್ರಿಸಲು ಇವರು ಏಕೈಕ ಮಾರ್ಗ ಲಾಕ್ ಡೌನ್ ಮಾತ್ರ. ಹೀಗಾಗಿ ಲಾಕ್ಡೌನ್ ಅನ್ನು ಕಟ್ಟು ನಿಟ್ಟಾಗಿ ಜಾರಿಗೆ ತನ್ನಿ ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಅಲ್ಲದೆ, ಜೂನ್ ಕೊನೆಯವರೆಗೆ ಲಾಕ್ ಡೌನ್ ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆಯೇ ದಟ್ಟವಾಗಿದೆ.

ಈಗಾಗಲೇ ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಜೂ. 7ರ ನಂತರ ಲಾಕ್ ಡೌನ್ ಸಡಿಲಿಕೆ ಮಾಡಿ, ಹಂತ ಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಬೇಕು ಎಂದು ಆರ್ಥಿಕ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನೂ ಬಹುತೇಕ ಸಚಿವರು ಲಾಕ್ ಡೌನ್ ವಿಸ್ತರಣೆಯ ಕುರಿತು ಸಲಹೆ ನೀಡಿದ್ದಾರೆ. ಹೀಗಾಗಿ ಇಂದಿನ ಸಭೆಯಲ್ಲಿ ಲಾಕ್ ಡೌನ್ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ.

ಅವ್ವನೂ ಇಲ್ಲ, ಅಪ್ಪಾನೂ ಇಲ್ಲ, ಅವ್ವನ ಹೊಟ್ಟ್ಯಾನ ಪಾಪುನೂ ಇಲ್ಲ ಎಂದು ಬಿಕ್ಕಿ ಬಿಕ್ಕಿ ಅಳುತ್ತಿರುವ ತಬ್ಬಲಿ ಮಗು

ವಿಜಯಸಾಕ್ಷಿ ಸುದ್ದಿ, ರಾಯಚೂರು

ಮಹಾಮಾರಿ ರಾಜ್ಯದಲ್ಲಿ ಸಾಕಷ್ಟು ಪ್ರಾಣಗಳನ್ನು ಬಲಿ ಪಡೆದಿದೆ. ಇದರಿಂದಾಗಿ ಹಲವು ಕುಟುಂಬಗಳು ಬೀದಿಗೆ ಬಂದಿವೆ. ಹಲವು ಮಕ್ಕಳು ಅನಾಥರಾಗಿದ್ದಾರೆ. ಈ ಹೆಮ್ಮಾರಿಯಿಂದ ಜಿಲ್ಲೆಯಲ್ಲಿನ ಒಂದು ಮಗು ಕೂಡ ತಬ್ಬಲಿಯಾಗಿದೆ.

ದೇವದುರ್ಗದ ನಾಲ್ಕು ವರ್ಷದ ಪುಟ್ಟ ಬಾಲಕ ಗಿರೀಶ್ ಒಂದೇ ತಿಂಗಳ ಅಂತರಲ್ಲಿ ತಂದೆ – ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥನಾಗಿದ್ದಾನೆ. ಮಹಾಮಾರಿಯಿಂದಾಗಿ ತಂದೆ ದೇವೇಂದ್ರಪ್ಪ ಏ. 27ರಂದು ಸಾವನ್ನಪ್ಪಿದ್ದರೆ, ತಾಯಿ ಚಂದ್ರಕಲಾ ಮೇ. 14ರಂದು ಸಾವನ್ನಪ್ಪಿದ್ದರು.

ಕೊರೊನಾದಿಂದ ಒದ್ದಾಡುತ್ತಿದ್ದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಚಂದ್ರಕಲಾ ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಮಹಾಮಾರಿಯ ಅಟ್ಟಹಾಸದ ಎದುರು ವೈದ್ಯರ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಹೀಗಾಗಿ ಚಂದ್ರಕಲಾ ಅವರು ಉಳಿಯಲಿಲ್ಲ. ಅದರೊಂದಿಗೆ ಮಗುವೂ ಉಳಿಯಲಿಲ್ಲ. ಇದರಿಂದಾಗಿ ಈ ದಂಪತಿಯ ಮೊದಲ ಮಗ ಅನಾಥವಾಗಿದ್ದಾನೆ.

ದೇವದುರ್ಗದ ಗೌಸ್ ಮೊಹಮದ್ ಕಾಲೋನಿ ನಿವಾಸಿಗಳಾದ ದೇವೇಂದ್ರಪ್ಪ ಹಾಗೂ ಚಂದ್ರಕಲಾ ಸಾವಿನಿಂದಾಗಿ ಅವರ ಮಗುವಿಗೆ ದಿಕ್ಕು ತೋಚದಂತಾಗಿದೆ. ಸದ್ಯ ಈ ಮಗು ಅಜ್ಜ, ಅಜ್ಜಿ ಹಾಗೂ ಚಿಕ್ಕಪ್ಪನ ಆಶ್ರಯದಲ್ಲಿ ಬೆಳೆಯುತ್ತಿದೆ.

ಗಾಳಿ ಪಟ ಹಾರಿಸಲು ಹೋಗಿದ್ದ ಬಾಲಕ ಕೆರೆಯಲ್ಲಿ ಬಿದ್ದು ಸಾವು!

ವಿಜಯಸಾಕ್ಷಿ ಸುದ್ದಿ, ಗದಗ

ಗಾಳಿ ಪಟ ಹಾರಿಸಲು ಹೋಗಿದ್ದ ಬಾಲಕ ಕಾಲು ಜಾರಿ ಕೆರೆಯ ಪಾಲಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಿನ್ನೆ ಸಂಜೆ ಕೆರೆಯ ದಡದಲ್ಲಿ ಬಾಲಕ ಗಾಳಿ ಪಟ ಹಾರಿಸಲು ಹೋಗಿದ್ದ. ಈ ಸಂದರ್ಭದಲ್ಲಿ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದಾನೆ. ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಭೀರಪ್ಪ ಹನುಮಪ್ಪ ಹೊನ್ನೂರ್(5) ಸಾವನ್ನಪ್ಪಿದ ದುರ್ದೈವಿ ಬಾಲಕ. ಗ್ರಾಮದಲ್ಲಿನ ಕುಡಿಯುವ ನೀರಿನ ಕೆರೆಯಲ್ಲಿಯೇ ಈ ಬಾಲಕ ಬಿದ್ದಿದ್ದಾನೆ.
ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಮೃತ ದೇಹವನ್ನು ಸ್ಥಳೀಯರು ಕೆರೆಯಿಂದ ಹೊರ ತೆಗೆದಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಲಾಕ್ ಡೌನ್ ನಿಂದಾಗಿ ಬಾಗಿಲು ಹಾಕಿರುವ ಪುಸ್ತಕ ಮಳಿಗೆಗೆ ಬೆಂಕಿ!

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಕೊರೊನಾ ಲಾಕ್ ಡೌನ್ ನಿಂದಾಗಿ ಸದ್ಯ ಅಂಗಡಿ – ಮುಂಗಟ್ಟುಗಳು ಬಂದ್ ಆಗಿವೆ. ಅದರಲ್ಲಿಯೂ ಲಾಕ್ ಡೌನ್ ಘೋಷಣೆಯಾದಾಗಿನಿಂದಲೂ ಬುಕ್ ಸ್ಟಾಲ್ ಗಳು ಬಾಗಿಲನ್ನೇ ತೆರೆದಿಲ್ಲ. ಹೀಗೆ ಬಾಗಿಲು ಹಾಕಿದ್ದ ಬುಕ್ ಸ್ಟಾಲ್ ಗೆ ಬೆಂಕಿ ಬಿದ್ದಿದ್ದು, ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಈ ಘಟನೆನ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿಯ ಬಿವಿಬಿ ಎಂಜನೀಯರಿಂಗ್ ಕಾಲೇಜಿನ ಎದುರಿಗಿರುವ ಕಾಂಪ್ಲೆಕ್ಸ್ ನಲ್ಲಿನ ರೂಪಾ ಬುಕ್ ಸ್ಟಾಲ್ ಮಳಿಗೆಗೆ ಬೆಂಕಿ ಹತ್ತಿದ್ದು, ಒಳಗಿರುವ ಎಲ್ಲ ಬಗೆಯ ಪುಸ್ತಕಗಳು ಹಾಗೂ ವಸ್ತುಗಳು ಸುಟ್ಟು ಕರಕಲಾಗಿವೆ.
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಕೂಡೇ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದರಿಂದ ಸಮಯಕ್ಕೆ ಸಾರಿಯಾಗಿ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಪೂರ್ಣ ಲಾಕ್ ಡೌನ್ ಗೂ ಮುನ್ನ ಖರೀದಿಗೆ ಮುಗಿಬಿದ್ದ ಜನ; 10 ಗಂಟೆ ವರೆಗೂ ಅವಳಿ ನಗರದಲ್ಲಿ ಜನಜಂಗುಳಿ

ವಿಜಯಸಾಕ್ಷಿ ಸುದ್ದಿ, ಗದಗ

ಜಿಲ್ಲೆಯಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಕಠಿಣ ಹಾಗೂ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಹೀಗಾಗಿ ಬೆಳಿಗ್ಗೆ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ, ಜನ ಮಾತ್ರ ಎಷ್ಟೇ ಹೇಳಿದರೂ ಮೈ ಮರೆಯುವುದನ್ನು ಮಾತ್ರ ಬಿಡಲಿಲ್ಲ.

ಕೊರೊನಾ ಎಗ್ಗಿಲ್ಲದೆ ಜನರ ಪ್ರಾಣ ಕಿತ್ತುಕೊಂಡು ಹೋಗುತ್ತಿದ್ದರೂ ಕೂಡ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿ ಬಿದ್ದಿದ್ದರು. ನಗರದ ನಾಮ ಜೋಶಿ ರೋಡ್ ನಲ್ಲಿ ಜನ ಜಂಗುಳಿಯೇ ತುಂಬಿತ್ತು. ಇಲ್ಲಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿರುವ ಜನರು ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಮರೆತು ಅಗತ್ಯ ವಸ್ತುಗಳನ್ನು ಖರೀದಿಸಿದ್ದಾರೆ.

ಗದಗ- ಬೆಟಗೇರಿ ಅವಳಿ ನಗರದ ಜನರು ಸೇರಿದಂತೆ ಗ್ರಾಮೀಣ ಭಾಗದ ಜನರು ಕೂಡ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರು. ಹೀಗಾಗಿ ಮಾರುಕಟ್ಟೆಗಳು ಜನ ಜಾತ್ರೆಯಂತಾಗಿತ್ತು. ಬಹುತೇಕರು ಮಾಸ್ಕ್ ಗಳನ್ನೇ ಹಾಕಿಕೊಂಡು ಬಂದಿರಲಿಲ್ಲ. ಸಾಮಾಜಿಕ ಅಂತರವಂತೂ ಇವರಿಗೆ ಸಂಬಂಧವೇ ಇಲ್ಲ ಎಂಬಂತೆ ವರ್ತಿಸಿದ್ದಾರೆ.

ಸರ್ಕಾರ ಹಾಗೂ ಜಿಲ್ಲಾಡಳಿತ ಹಲವು ಕಾರ್ಯಕ್ರಮಗಳ ಮೂಲಕ ಹಾಗೂ ಲಾಕ್ ಡೌನ್ ಮೂಲಕ ಜನರಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರೂ ಜನರು ಮಾತ್ರ ಸುಧಾರಿಸುತ್ತಿಲ್ಲ. ಅಧಿಕಾರಿಗಳು ಎಷ್ಟೇ ಬುದ್ಧಿ ಹೇಳಿದರೂ ಜನ ಮಾತ್ರ ತಮ್ಮ ವರ್ತನೆಯಿಂದಲೇ ಎಲ್ಲವನ್ನೂ ಖರೀದಿಸಿ ಮನೆಗಳತ್ತ ಮುಖ ಮಾಡಿದರು.

ಇಂದಿನಿಂದ ಮತ್ತೆ ಜಿಲ್ಲೆಯಲ್ಲಿ ಜೂ. 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಇರಲಿದೆ.

ಕೊರೊನಾ ಸಂಕಷ್ಟ, ಕುಟುಂಬ ಕಲಹ; 15ನೇ ಮಹಡಿಯಿಂದ ಜಿಗಿದ ವ್ಯಕ್ತಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ಮನೆಯಲ್ಲಿನ ಕಲಹಕ್ಕೆ ಮನನೊಂದು ಅಪಾರ್ಟ್ ಮೆಂಟ್ ವೊಂದರ 15ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿ ಕಾರ್ಪೋ ರೆಸಿಡೆನ್ಸ್ ನಲ್ಲಿ ನಡೆದಿದೆ.

ಇಲ್ಲಿಯ ಕೋರಮಂಗಲದ ನಿವಾಸಿ ವಿವೇದ್ ಮಧುಸೂದನ್ ವೈದ್ಯ (61) ಸಾವನ್ನಪ್ಪಿದ ವ್ಯಕ್ತಿ. ಫ್ಲ್ಯಾಟ್ ಖರೀದಿಸುವ ನೆಪದಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ ನಿನ್ನೆ ಬೆಳಿಗ್ಗೆ ತೆರಳಿದ್ದ ಮಧುಸೂದನ್, ಸೂಪರ್ ವೈಸರ್ ಗೆ ಫ್ಲ್ಯಾಟ್ ತೋರಿಸುವಂತೆ ಹೇಳಿದ್ದರು.

ಈ ಸಂದರ್ಭದಲ್ಲಿ ಸೂಪರ್ ವೈಸರ್ ಕಮಲೇಶ್ ಅವರು 15ನೇ ಮಹಡಿಯಲ್ಲಿರುವ ಫ್ಲ್ಯಾಟ್ ತೋರಿಸಿದ್ದಾರೆ. ಈ ಸಂದರ್ಭದಲ್ಲಿ ಫೋಟೋ ತೆಗೆಯಬೇಕು ನೀವು ಹೋಗಿ ಎಂದು ಕಮಲೇಶ್ ಗೆ ಹೇಳಿದ್ದಾರೆ. ಅವರು ಹೋಗುತ್ತಿದ್ದಂತೆಯೇ ಮಧುಸೂದನ್ ಕಟ್ಟಣಡದಿಂದ ಕೆಳಗೆ ಜಿಗಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಕಮಲೇಶ್, ಕೂಡಲೇ ಸ್ಥಳದಲ್ಲಿದ್ದ ಸಿಬ್ಬಂದಿಗಳನ್ನು ಕರೆದಿದ್ದಾರೆ. ಅಲ್ಲದೇ, ವಿವೇಕ್ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ವ್ಯಕ್ತಿಗೆ ಕಳೆದ 10 ವರ್ಷಗಳ ಹಿಂದೆಯೇ ಪತ್ನಿ ವಿಚ್ಛೇದನ ನೀಡಿದ್ದರು. ಸದ್ಯ ವಿಚ್ಛೇದಿತ ಪತ್ನಿ ಹಾಗೂ ಮಕ್ಕಳು ವಿದೇಶದಲ್ಲಿ ನಲೆಸಿದ್ದಾರೆ. ಪತ್ನಿ ವಿಚ್ಛೇದನ ನೀಡಿದಾಗಿನಿಂದಲೂ ಮಧುಸೂದನ್ ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಆರ್ಥಿಕ ತೊಂದರೆಯಲ್ಲಿರುವ 3 ಸಾವಿರ ಸಿನಿಮಾ ಕಾರ್ಮಿಕರ ಬೆನ್ನಿಗೆ ನಿಂತ ನಟ ಯಶ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾದಿಂದಾಗಿ ಎಲ್ಲ ವರ್ಗದ ಜನರ ಬದುಕು ಬೀದಿಗೆ ಬಂದು ನಿಂತಿದೆ. ಸದ್ಯ ಲಾಕ್ ಡೌನ್ ಜಾರಿಯಲ್ಲಿರುವುದರಿಂದಾಗಿ ಚಿತ್ರರಂಗದ ಕಾರ್ಮಿಕರು ಮತ್ತು ತಂತ್ರಜ್ಞರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.  ನಟ ಯಶ್ ಅವರು ಚಿತ್ರರಂಗದ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಯಶ್, ಕನ್ನಡ ಚಿತ್ರರಂಗದ ಮೂರು ಸಾವಿರ ಕಾರ್ಮಿಕರಿಗೆ ತಲಾ ರೂ. 5 ಸಾವಿರದಂತೆ  ಬರೋಬ್ಬರಿ 3 ಸಾವಿರ ಜನರಿಗ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. “ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಬುಡಮೇಲು ಮಾಡಿದ್ದು, ಕಳೆದ ಒಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಇದು ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವವನ ಜೊತೆ ನಿಲ್ಲುವ ಸಮಯವಾಗಿದೆ.

ಹಾಗಾಗಿ, 3000ಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ಮೂರು ಸಾವಿರ ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ.

ತಕ್ಷಣವೇ ತೊಂದರೆಯಲ್ಲಿರುವ 3000 ಕ್ಕೂ ಅಧಿಕ ಕಾರ್ಮಿಕರ ಖಾತೆಗೆ ತಲಾ 5 ಸಾವಿರ ರೂಪಾಯಿ ಜಮಾ ಮಾಡಲಾಗುವುದು ಎಂದು ಯಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!