Home Blog Page 3179

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಎಚ್.ಕೆ ಪಾಟೀಲ: ಸೆ.3ರಂದು ಟರ್ಫ್ ಹಾಕಿ ಕ್ರೀಡಾಂಗಣ ಲೋಕಾರ್ಪಣೆ

0

ವಿಜಯಸಾಕ್ಷಿ ಸುದ್ದಿ, ಗದಗ

ಹಾಕಿ ಕ್ರೀಡೆಯಲ್ಲಿ ಗದಗ ಜಿಲ್ಲೆ ತನ್ನದೇ ಆದ ಇತಿಹಾಸ ಹೊಂದಿದೆ. ಕಲ್ಕತ್ತಾ, ಮುಂಬೈ ಬಿಟ್ಟರೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಹಾಕಿ ಕ್ರೀಡಾಪಟುಗಳನ್ನು ನೀಡಿರುವ ಹೆಮ್ಮೆ ನಮ್ಮ ಗದಗ ಜಿಲ್ಲೆಯದಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ ಪಾಟೀಲ ಹೇಳಿದರು.

ಬೆಟಗೇರಿಯ ಗಾಂಧೀ ನಗರದಲ್ಲಿ ನಿರ್ಮಾಣವಾದ ಸುಸಜ್ಜಿತ ಹಾಕಿ ಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಗದಗ-ಬೆಟಗೇರಿ ನಗರದ ಹೃದಯ ಭಾಗದಲ್ಲಿ ಅಂದಾಜು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಸುಸಜ್ಜಿತ ಟರ್ಫ್ ಹಾಕಿ ಕ್ರೀಡಾಂಗಣವು ಬರುವ ಸೆಪ್ಟೆಂಬರ 3ರಂದು ಮುಂಜಾನೆ 9 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಸುಸಜ್ಜಿತ ಹಾಕಿ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ನಾಗೇಂದ್ರ ಆಗಮಿಸಲಿರುವರು ಎಂದರು.

ಅದೇ ದಿನ ಮುಂಜಾನೆ 10 ಗಂಟೆಗೆ ಹಾಕಿ ಕ್ರೀಡಾಂಗಣದಲ್ಲಿ ಆರು ತಂಡಗಳು ಎ ಮತ್ತು ಬಿ ಗುಂಪುಗಳಾಗಿ ವಿಂಗಡಿಸಿ ಹಾಕಿ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ಮೊದಲ ಗುಂಪಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಹುಬ್ಬಳ್ಳಿಯ ಹಾಕಿ ಅಕಾಡೆಮಿ, ಬಿವಾಯ್‍ಎಎಸ್ತಂ ಡಗಳು ಹಾಗೂ ಮತ್ತೊಂದು ಗುಂಪಿನಲ್ಲಿ ಗದಗ-ಘಿI, ಎಸ್‍ಡಬ್ಲೂಆರ್ ಹುಬ್ಬಳ್ಳಿ ಹಾಗೂ ಬಿವಾಯ್‍ಎಎಸ್ ಬೆಂಗಳೂರು ತಂಡಗಳು ಸೆಣಸಲಿವೆ ಎಂದರು.

ಸುಸಜ್ಜಿತ ಹಾಕಿ ಕ್ರೀಡಾಂಗಣವು ಉತ್ತರ ಕರ್ನಾಟಕ ಭಾಗದಲ್ಲಿಯೇ ಪ್ರಥಮವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತ ಟರ್ಫ್ ಹಾಕಿ ಕ್ರೀಡಾಂಗಣ ಹೊಂದಿರುವುದು ಗದಗ ಜಿಲ್ಲೆ ಮಾತ್ರ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಈ ಹಾಕಿ ಕ್ರಿಡಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಯುವ ಕ್ರೀಡಾಪಟುಗಳನ್ನು ಹಾಗೂ
ತರಬೇತುದಾರರನ್ನು ಸನ್ಮಾನಿಸಲಾಗುವದು. ಟರ್ಫ್ ಹಾಕಿ ಕ್ರೀಡಾಂಗಣ ನಿರ್ಮಿಸಲು ಅಗತ್ಯ ಸಹಕಾರ ನೀಡಿದ ಐವರನ್ನು ಗೌರವಿಸಿ ಸನ್ಮಾನಿಸಲಾಗುವದು. ಅದೇ ದಿನ ಕಳಸಾಪುರ ರಸ್ತೆಯಲ್ಲಿನ ಒಳಾಂಗಣ ಕ್ರೀಡಾಂಗಣದ ಹಿಂದುಗಡೆ ನಿರ್ಮಾಣಗೊಂಡಿರುವ ಹೊಸ ಈಜುಕೊಳ ಕೂಡ ಮಧ್ಯಾಹ್ನ 12 ಗಂಟೆಗೆ ಸಚಿವ ನಾಗೇಂದ್ರ ಅವರು ಲೋಕಾರ್ಪಣೆಗೊಳಿಸುವರು ಎಂದು ಸಚಿವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ನೇ ಮಗೌಡ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಲೋಕಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಹಾಕಿ ತರಬೇತಿದಾರರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕ್ರೀಡಾ ಕೌಶಲ್ಯ ಪ್ರದರ್ಶಿಸಿದ ಸಚಿವ ಎಚ್.ಕೆ ಪಾಟೀಲ

ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣಕ್ಕೆ ಸಚಿವ ಡಾ. ಎಚ್.ಕೆ ಪಾಟೀಲ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ, ಹಾಕಿ ಕ್ರೀಡಾಪಟುಗಳು ತಮ್ಮ ಕೌಶಲ್ಯವನ್ನು ಸಚಿವರಿಗೆ ಪ್ರದರ್ಶಿಸಿದರು. ಸಚಿವ ಎಚ್.ಕೆ ಪಾಟೀಲ ಅವರು ಹಾಕಿ ಕ್ರೀಡಾಪಟುಗಳಿಗೆ ಕಮ್ಮಿ ಇಲ್ಲದಂತೆ ತಮ್ಮಲ್ಲಿ ಅಡಗಿರುವ ಹಾಕಿ ಕೌಶಲ್ಯವನ್ನು ಪ್ರದರ್ಶಿಸಿದರು. ಗುರಿ ಸಾಧನೆಗೆ ಮರಳಿ ಪ್ರಯತ್ನ ಮಾಡು ಎನ್ನುವಂತೆ ಸಚಿವರು ಚೆಂಡನ್ನು ನಿಖರವಾಗಿ ಬಾರಿಸುವ ಮೂಲಕ ಗೋಲು ಹೊಡೆದಿದ್ದು ಮೈದಾನದಲ್ಲಿ ನೆರೆದ ಕ್ರೀಡಾಪಟುಗಳನ್ನು ರೋಮಾಂಚನಗೊಳಿಸಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ವ ರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಲೋಕಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಹಾಕಿ ಕಿಟ್‍ನ್ನು ಸಚಿವ ಎಚ್.ಕೆ ಪಾಟೀಲ ವಿತರಿಸಿದರು.

ಲಾರಿಗೆ ಕ್ಯಾಂಟರ್ ಡಿಕ್ಕಿ; ಸ್ಥಳದಲ್ಲೇ ಚಾಲಕ ಸಾವು, ಮತ್ತೊಬ್ಬ ಗಂಭೀರ

ನಿಂರಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ……..

ವಿಜಯಸಾಕ್ಷಿ ಸುದ್ದಿ, ಗದಗ

ನಿಂತಿದ್ದ ಲಾರಿಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ರಾತ್ರಿ ನಡೆದಿದೆ.

ಸಮೀಪದ ಲಕ್ಷ್ಮೇಶ್ವರ ರಸ್ತೆಯ ಹುಬ್ಬಳ್ಳಿ -ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ (ಬೈಪಾಸ್) ಈ ಘಟನೆ ನಡೆದಿದ್ದು, ಕ್ಯಾಂಟರ್ ಚಾಲಕ ರಘು ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕ್ಲೀನರ್ ನಾಗಣ್ಣ ಎಂಬಾತನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತಪಟ್ಟ ಚಾಲಕ ಹಾಗೂ ಗಾಯಾಳು ಕ್ಲೀನರ್ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿಯ ಟೈರ್ ಬ್ಲಾಸ್ಟ್ ಆಗಿ ನಿಂತಿತ್ತು ಎನ್ನಲಾಗಿದೆ. ವೇಗವಾಗಿ ಹೊರಟಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳು ಕ್ಲೀನರ್ ನಾಗಣ್ಣ ಕ್ಯಾಂಟರ್ ನಲ್ಲಿ ಸಿಲುಕಿಕೊಂಡಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಆತನನ್ನು ಹೊರಗೆ ತಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ತರಕಾರಿ ತುಂಬಿದ್ದ ಕ್ಯಾಂಟರ್ ಧಾರವಾಡದಿಂದ ಆಂಧ್ರಪ್ರದೇಶಕ್ಕೆ ಹೊರಟಿತ್ತು ಎನ್ನಲಾಗಿದೆ.

ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಸವೇಶ್ವರ ಜಾತ್ರೆಯ ತೇರಿನ ಗಾಲಿ ಹಾಯ್ದು ವ್ಯಕ್ತಿ ಸಾವು

ರಥೋತ್ಸವದ ಗದ್ದಲದಲ್ಲಿ ನಡೆದ ಅವಘಡ….

ವಿಜಯಸಾಕ್ಷಿ ಸುದ್ದಿ, ಗದಗ

ಜಾತ್ರೆಯ ತೇರಿನ ಗಾಲಿ ಹಾಯ್ದು ವ್ಯಕ್ತಿವೊಬ್ಬ ಮೃತಪಟ್ಟ ದಾರುಣ ಘಟನೆ ನಿನ್ನೆ ಸಂಜೆ ಜರುಗಿದೆ.

ಘಟನೆಯಲ್ಲಿ ಯಲ್ಲಪ್ಪಗೌಡ ಅಲಿಯಾಸ್ ಮುತ್ತಪ್ಪ ತಂದೆ ಪರ್ವತಗೌಡ ಗೌಡ್ರ (42) ಮೃತಪಟ್ಟ ದುರ್ಧೈವಿ.

ಇದನ್ನೂ ಓದಿ ಕರ್ತವ್ಯಲೋಪ, ದುರ್ನಡೆತೆ ಆರೋಪ; ಪಿಎಸ್ಐ ನಿಖಿಲ್ ಕುಮಾರ್ ಸಸ್ಪೆಂಡ್

ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿ ಗ್ರಾಮದಲ್ಲಿ ನಿನ್ನೆ ಸಂಭ್ರಮದಿಂದ ಬಸವೇಶ್ವರ ಜಾತ್ರೆ ನಡೆದಿತ್ತು. ಜಾತ್ರೆಯ ಅಂಗವಾಗಿ ತೇರು ಎಳೆಯುವ ಗದ್ದಲದಲ್ಲಿ ತೇರಿನ ಗಾಲಿ ಹಾಯ್ದು ಈ ದುರ್ಘಟನೆ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪಗೌಡನನ್ನು ನರಗುಂದ ತಾಲೂಕಿನ ಶಿರೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನರಗುಂದ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಯಲ್ಲಪ್ಪಗೌಡ ಮೃತಪಟ್ಟಿದ್ದಾನೆ.

ಈ ಕುರಿತು ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಕರ್ತವ್ಯಲೋಪ, ದುರ್ನಡೆತೆ ಆರೋಪ; ಪಿಎಸ್ಐ ನಿಖಿಲ್ ಕುಮಾರ್ ಸಸ್ಪೆಂಡ್

ಎಸ್ಪಿ ಬಿ.ಎಸ್. ನೇಮಗೌಡ ಆದೇಶ..

ವಿಜಯಸಾಕ್ಷಿ ಸುದ್ದಿ, ಗದಗ

ಮೇಲಾಧಿಕಾರಿಗಳ ಆದೇಶಗಳಿಗೆ ತಾತ್ಸಾರ ಭಾವನೆ, ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ಹಾಗೂ ಕೆ.ಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಲು ಮುತುವರ್ಜಿ ವಹಿಸದೇ ಕರ್ತವ್ಯಲೋಪವೆಸೆಗಿರುವ ನರೇಗಲ್ ಠಾಣೆಯ ಪಿಎಸ್ಐ ಅವರನ್ನು ಸಸ್ಪೆಂಡ್ ಮಾಡಿ ಎಸ್ಪಿ ಆದೇಶ ಮಾಡಿದ್ದಾರೆ.

ನರೇಗಲ್ ಪಿಎಸ್ಐ ನಿಖಿಲಕುಮಾರ್ ಎಂ ಕಾಂಬ್ಳೆ ಅಮಾನತು ಆದ ಪಿಎಸ್ಐ.

ನರೇಗಲ್ ಪೊಲೀಸ್ ಠಾಣೆಗೆ ಪಿಎಸ್ಐ ಅಂತ ನಿಯುಕ್ತಿಗೊಳಿಸಿ ಆದೇಶದ ನಂತರ ನಿಯಮದಂತೆ ಹಿರಿಯ ಅಧಿಕಾರಿಗಳಿಗೆ ಕಾಲ್ ಆನ್ ಮಾಡಿ ಠಾಣೆಗೆ ವರದಿ ಮಾಡಿಕೊಂಡಿಲ್ಲ ಎನ್ನಲಾಗಿದೆ.

ಅಷ್ಟೇ ಅಲ್ಲದೆ ಅಧಿಕಾರ ವಹಿಸಿಕೊಂಡ ನಂತರ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕುರಿತು ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿಲ್ಲ. ಹಾಗೆಯೇ ಜುಲೈ 23 ರಿಂದ ಆಗಸ್ಟ್ 19 ರವರೆಗೆ ಕೆ.ಪಿ. ಆ್ಯಕ್ಟ್ ಅಡಿ ಕೇಸ್ ಮಾಡಲು ಮುತುವರ್ಜಿ ವಹಿಸದೆ ಮೇಲಾಧಿಕಾರಿಗಳಿಗೆ ದಿನನಿತ್ಯ ಯಾವುದೇ ಪ್ರಗತಿ ತೋರಿಸಿಲ್ಲ.

ಮೇಲಾಧಿಕಾರಿಗಳ ಆದೇಶ ಹಾಗೂ ಜ್ಞಾಪನೆ ಪಾಲನೆ ಮಾಡದೆ ಕರ್ತವ್ಯದಲ್ಲಿ ನಿರುತ್ಸಾಹ, ಬೇಜವಾಬ್ದಾರಿ ಪ್ರದರ್ಶಿಸಿ ಕರ್ತವ್ಯಲೋಪ ಎಸೆಗಿದ್ದು ಕಂಡು ಬಂದಿದೆ ಎಂಬ ವರದಿ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ನರೇಗಲ್ ಪಟ್ಟಣದ ಪ್ರೇಮ ಪ್ರಕರಣದಲ್ಲೂ ಹಿರಿಯ ಅಧಿಕಾರಿಗಳ ಜೊತೆಗೆ ಅಗೌರವದಿಂದ ಮಾತನಾಡಿದ ಆರೋಪವಿದೆ.

ಒಟ್ಟಿನಲ್ಲಿ ಮೇಲಾಧಿಕಾರಿಗಳಿಗೆ ಅಸಭ್ಯ ರೀತಿಯಲ್ಲಿ ಮಾತನಾಡಿ, ಅವರ ಆದೇಶ ಉಲ್ಲಂಘಿಸಿ, ಇಲಾಖೆಯ ನಿಯಮಗಳನ್ನು ನಿರ್ಲಕ್ಷಿಸಿ ಸಂಪೂರ್ಣವಾಗಿ ಕರ್ರವ್ಯದಲ್ಲಿ ದುರ್ನಡೆತೆ, ಬೇಜವಾಬ್ದಾರಿತನ, ನಿಷ್ಕಾಳಜಿತನ ಮತ್ತು ಲೋಪವೆಸಗಿರುವುದನ್ನು ನರಗುಂದ ಡಿಎಸ್‌ಪಿ ಅವರ ವರದಿ 1351/2023 ಹಾಗೂ 1353/2023 ಪ್ರಕಾರ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಿ ಎಸ್ಪಿ ಬಿ.ಎಸ್. ನೇಮಗೌಡ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ.ಸಿ.ವಿ ಕೆರಿಮನಿ ಇನ್ನಿಲ್ಲ

0


ಲಕ್ಷ್ಮೇಶ್ವರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ. ಸಿ.ವಿ ಕೆರಿಮನಿಯವರು ಸೊಮವಾರ ಸಂಜೆ ತಮ್ಮ 84ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ಪುಲಿಗೆರೆಯ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಸಿವಿಕೆ ಅವರು ಪತ್ನಿ, ಮೂವರು ಪುತ್ರಿಯರು, ಪುತ್ರ ಸೇರಿ ಅಪಾರ ಬಂಧುಗಳು, ಸಾಹಿತ್ಯಾಭಿಮಾನಿ ಬಳಗವನ್ನು ಅಗಲಿದ್ದಾರೆ.

ಇಳಿ ವಯಸ್ಸಿನಲ್ಲಿಯೂ ಸಾಹಿತ್ಯಿಕ, ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಕ್ಷೇತ್ರದ ಸೇವೆಯಲ್ಲಿ ತೊಡಗಿಸಿಕೊಂಡು ದಣಿವರಿಯದ ಕನ್ನಡ ಕಾಯಕಯೋಗಿದ್ದ ಸಿವಿಕೆ, ಪುಲಿಗೆರೆ ಸಾಂಸ್ಕೃತಿಕ ಲೋಕದ ರಾಯಭಾರಿಯಂತಿದ್ದರು.

ಮೂಲತಃ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದವರು. ಲಕ್ಷ್ಮೇಶ್ವರದ ಪುರಸಭಾ ಕಾಲೇಜಿನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕರಾಗಿ, ಭಾಷೆಯ ಜ್ಞಾನ-ಅಭಿಮಾನ ಮೊಳಗಿಸಿದರು.

ಹಂಪಿ ಕನ್ನಡ ವಿ.ವಿ. ಆಡಳಿತ ಸದಸ್ಯರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಕಾಲೇಜು ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾಗಿ, ಅಭ್ಯಾಸ ಮಂಡಳಿ ಸದಸ್ಯರಾಗಿ, ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯ.

ಗದಗ ಜಿಲ್ಲೆಯ ಮಾಹಿತಿಯನ್ನು ನೀಡುವ ಹಲವಾರು ಅರ್ಥಪೂರ್ಣ ಕೃತಿಗಳನ್ನು ಸಂಪಾದಿಸಿ, ಗದಗ ಜಿಲ್ಲೆಯ ಜನರಿಗೆ ಮಹದುಪಕಾರಗೈದಿದ್ದಾರೆ. ಇತ್ತೀಚಿಗೆ ಪ್ರಕಟಗೊಂಡ `ಗದಗ ಜಿಲ್ಲೆ ಒಂದು ಅಧ್ಯಯನ’ ಕೃತಿ ಗದಗ ಜಿಲ್ಲೆಯ ಸಮಗ್ರ ಮಾಹಿತಿಯನ್ನು ನೀಡುವ ಪ್ರಮುಖ ಆಕರ ಗ್ರಂಥವಾಗಿ ಹೊರಹೊಮ್ಮಿದೆ.

ಎರಡು ಅವಧಿಗೆ ಲಕ್ಷ್ಮೇಶ್ವರದ ರೋಟರಿ ಕ್ಲಬ್ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಗಳನ್ನು ನೆರವೇರಿಸಿದ್ದರು. 1999 ರಲ್ಲಿ ಸಿಂಗಾಪೂರದಲ್ಲಿ ಜರುಗಿದ ಜಾಗತಿಕ ರೋಟರಿ ಸಮಾವೇಶದಲ್ಲಿ ಪಾಲ್ಗೊಂಡಿದ್ದು, ರಾಷ್ಟ್ರೀಯ ಸಾಕ್ಷರತಾ ಆಂದೋಲನದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರೊ.ಸಿ.ವಿ.ಕೆರಿಮನಿಯವರ ಸಾಧನೆಗೆ ಶರೀಫ ಪ್ರಶಸ್ತಿ, ಉತ್ತಮ ಎನ್‌ಎಸ್ ಅಧಿಕಾರಿ, ರಾಜ್ಯಮಟ್ಟದ ಮನುಕುಲ ಪ್ರಶಸ್ತಿಗಳೊಂದಿಗೆ, 2012ನೇ ಸಾಲಿನ ಕರ್ನಾಟಕ ಸರಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು.

ಸಂತಾಪ: ಸಿವಿಕೆ ಅವರ ನಿಧನಕ್ಕೆ ನಾಡಿನ ವಿವಿಧ ಮಠಾಧೀಶರು, ಸಾಹಿತಿಗಳು, ರಾಜಕಾರಣಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಆ 29ರ ಮಂಗಳವಾರ ಮಧ್ಯಾಹ್ನ ಅಂತ್ಯ ಸಂಸ್ಕಾರ ಲಕ್ಷ್ಮೇಶ್ವರದಲ್ಲಿ ನೆರವೇರಲಿದೆ.

ಗಾಂಜಾ ಬೆಳೆದ ಆರೋಪಿಗೆ 2 ವರ್ಷ ಜೈಲು, 25 ಸಾವಿರ ರೂ. ದಂಡ

ವಿಜಯಸಾಕ್ಷಿ ಸುದ್ದಿ, ಗದಗ

ತನ್ನ ಸ್ವಂತ ಲಾಭಕ್ಕೋಸ್ಕರ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ತಾಂಡಾದಿಂದ ಶಿಂಗಟರಾಯನಕೆರೆ ತಾಂಡಾಕ್ಕೆ ಹೋಗುವ ಕಚ್ಚಾ ರಸ್ತೆಯ ಬಳಿಯಿರುವ ಸರ್ವೆ ನಂ. 212/2ರಲ್ಲಿ ಒಟ್ಟು 180 ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆಸಲಾಗಿತ್ತು.


21.10.2016 ರಂದು ಆರೋಪಿತ ಅಮರಪ್ಪ ಈಶ್ವರಪ್ಪ ಲಮಾಣಿ ಸಿಕ್ಕಿಬಿದ್ದಿದ್ದು, ಇವನಿಂದ ಸುಮಾರು 11 ಕೆಜಿ 900 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು, ಆರೋಪಿಯ ವಿರುದ್ಧ ಗದಗ ಉಪವಿಭಾಗದ ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.


ಸಾಕ್ಷಿ ವಿಚಾರಣೆ ನಡೆಸಿದ ಗದುಗಿನ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಎಸ್‌ ಶೆಟ್ಟಿ ಇವರು ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಆಗಸ್ಟ್‌ 17ರಂದು ಶಿಕ್ಷೆ ವಿಧಿಸಿದ್ದಾರೆ.

ಎನ್‌ಡಿಪಿಎಸ್‌ ಕಾಯ್ದೆಯ ಕಲಂ 20(ಎ)(ಬಿ) (2)(ಸಿ), 8(ಸಿ) ಅಡಿಯಲ್ಲಿ 2 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ಬಸವನಗೌಡ ದೊಡ್ಡಗೌಡ್ರ ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

ಲಕ್ಷ್ಮೇಶ್ವರ ಪೊಲೀಸರ ಮಿಂಚಿನ ಕಾರ್ಯಾಚರಣೆ; ಸಿನಿಮೀಯ ರೀತಿಯಲ್ಲಿ ಕಾರು ಕಳ್ಳನ ಬಂಧನ

15 ಲಕ್ಷ ರೂ. ಮೌಲ್ಯದ 3 ವಾಹನಗಳು ವಶಕ್ಕೆ…ಎಸ್ಪಿ ಬಿ.ಎಸ್. ನೇಮಗೌಡ ಪ್ರಶಂಸೆ…

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ

ಅಂತರ್‌ರಾಜ್ಯಗಳಲ್ಲಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಉಂಬಳಬೈಲ್‌ದ ಸೈಯದ್ ಇರ್ಫಾನ್ ಅಲಿಯಾಸ್ ನಿಹಾಲ್‌ನನ್ನು ಲಕ್ಷ್ಮೇಶ್ವರ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ.

ಬಂಧಿತನಿಂದ 3 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಹಿನ್ನಲೆಯಲ್ಲಿ ಆತ ಕದ್ದ ಕಾರುಗಳನ್ನು ಮಾರಾಟ ಮಾಡಲು ಲಕ್ಷ್ಮೇಶ್ವರದ ರಂಭಾಪುರಿ ನಗರದಲ್ಲಿದ್ದಾನೆಂಬ ಸುಳಿವು ಪಡೆದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತು.

ಪೊಲೀಸರನ್ನು ಕಂಡು ತಪ್ಪಿಸಿಕೊಂಡು  ಹೋಗುತ್ತಿರುವಾಗ ಪೊಲೀಸರು ತಮ್ಮ ವಾಹನದಲ್ಲಿ ಬೆನ್ನಟ್ಟಿ ಹಿಡಿದು, ವಿಚಾರಣೆಗೊಳಪಡಿಸಿ ಆತನಿಂದ ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂದಾಜು 5 ಲಕ್ಷ ರೂ. ಮೌಲ್ಯದ ಮಹೀಂದ್ರಾ ಸ್ಕಾರ್ಪಿಯೋ, ಅಂದಾಜು 7 ಲಕ್ಷ ರೂ.ಗಳ ಮಾರುತಿ ಬ್ರಿಝಾ, 3 ಲಕ್ಷ ರೂ.ಗಳ ಕಿಮ್ಮತ್ತಿನ ಮಾರುತಿ ಇಕೋ ವ್ಯಾನ್ ಸೇರಿ ಒಟ್ಟು 15 ಲಕ್ಷ ರೂ. ಮೌಲ್ಯದ ಮೂರು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರು ಕಳ್ಳನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಸಿಪಿಐ ಎಸ್.ಎಂ ಶಿರಗುಪ್ಪಿ, ಪಿಎಸ್‌ಐ ಯೂಸುಫ್ ಜಮೂಲಾ, ಕ್ರೈಮ್ ಪಿಎಸ್‌ಐ ವಿ.ಜಿ ಪವಾರ, ಎಎಸ್‌ಐ ಎಮ್.ಎ ಮೌಲ್ವಿ, ಟಿ.ಕೆ ರಾಠೋಡ, ವೈ.ಎಸ್ ಕುಬಿಹಾಳ, ಎಸ್.ಎಸ್ ಮಕಾನದಾರ, ಜಿ.ಎಂ ಬೂದಿಹಾಳ,

ಸಿಬ್ಬಂದಿಗಳಾದ ಎಮ್.ಎ ಶೇಖ್, ಎಮ್.ಡಿ ಲಮಾಣಿ, ಆರ್.ಎಸ್ ಯರಗಟ್ಟಿ, ಪಾಂಡುರಂಗರಾವ್, ಎಮ್.ಎಸ್ ಬಳ್ಳಾರಿ, ಪ್ರಕಾಶ ಮ್ಯಾಗೇರಿ, ಆನಂದಸಿಂಗ್ ದೊಡಮನಿ, ಸಿ.ಎಸ್ ಮಠಪತಿ, ಡಿ.ಎಸ್ ನದಾಫ್, ಬಿ.ಆರ್ ಗ್ರಾಮಪುರೋಹಿತ್, ಆನಂದ ಕಮ್ಮಾರ, ಎಚ್.ಐ ಕಲ್ಲಣ್ಣವರ, ಎನ್.ಹೆಚ್ ಮಠಪತಿ, ಸೋಮು ವಾಲ್ಮೀಕಿ, ಸಂಜು ಕೊರಡೂರ, ಮದ್ದು ಧಾರವಾಡ, ಮಹಾಂತೇಶ ಐಗಾರ, ಮಲ್ಲಿಕಾರ್ಜುನ ಅಂಗಡಿ, ಕೆ. ಮುಕಾಶಿ, ಅಪ್ಪಣ್ಣ ರಾಠೋಡ ಇವರ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮತ್ತು ಡಿಎಸ್‌ಪಿಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕರ್ತವ್ಯಲೋಪ; ಮತ್ತೊಬ್ಬ ಗ್ರಾಮ ಆಡಳಿತ ಅಧಿಕಾರಿ ಪಾಟೀಲ ಸಸ್ಪೆಂಡ್, ಡಿಸಿ ಆದೇಶ

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಆದೇಶ

ವಿಜಯಸಾಕ್ಷಿ ಸುದ್ದಿ, ಗದಗ

ಬಿ.ಎಲ್‌.ಓ. ಗಳಿಗೆ ಮೇಲ್ವಿಚಾರಕರ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಗದಗ ತಾಲೂಕಿನ ಹುಲಕೋಟಿ ಗ್ರಾಮ ಆಡಳಿತ ಅಧಿಕಾರಿ ಶ್ರೀಮತಿ ವಿ.ಬಿ ಪಾಟೀಲ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮತಗಟ್ಟೆ ಸಂಖ್ಯೆ 137ರಿಂದ 145 ರವರೆಗಿನ ಬಿಎಲ್ ಓ ಗಳಿಗೆ ಮೇಲ್ವಿಚಾರಕರಾಗಿ ನೇಮಿಸಲಾಗಿದೆ.

ಇದನ್ನೂ ಓದಿ ಬಿಎಲ್‌ಓ ಕರ್ತವ್ಯಕ್ಕೆ ಗೈರು: ಗ್ರಾಮ ಆಡಳಿತ ಅಧಿಕಾರಿ ಶಿರೂರು ಸಸ್ಪೆಂಡ್; ಡಿಸಿ ಆದೇಶ

ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023-24 ನೇದ್ದಕ್ಕೆ ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಹೊರಡಿಸಿದೆ. ಹೀಗಾಗಿ ವೇಳಾಪಟ್ಟಿಯಂತೆ ಪ್ರಸ್ತುತ ಪೂರ್ವ ಪರಿಷ್ಕರಣೆ ಚಟುವಟಿಕೆಗಳು ಜರುಗುತ್ತಿದ್ದು, ಅದರಂತೆ ಮತಗಟ್ಟೆ ಅಧಿಕಾರಿಗಳು ಮನೆ ಮನೆ ಸಮೀಕ್ಷೆ ಕಾರ್ಯ ಜರುಗಿಸಿ ಮತದಾರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಿರುತ್ತಾರೆ. ಈ ಕುರಿತಂತೆ ಹುಲಕೋಟಿ ಗ್ರಾಮ ಆಡಳಿತ ಅಧಿಕಾರಿ ಶ್ರೀಮತಿ ವಿ.ಬಿ.ಪಾಟೀಲ ಇವರನ್ನು ಮತಗಟ್ಟೆ ಸಂಖ್ಯೆ 137 ರಿಂದ 145ರವರೆಗಿನ ಬಿ.ಎಲ್.ಓ. ಗಳಿಗೆ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿಗಳು ದಿ.19-08-23ರಂದು ಮತಗಟ್ಟೆ ಸಂಖ್ಯೆ 137 ರಿಂದ 145 ಭೇಟಿ ನೀಡಿದ್ದರು. ಆದರೆ ಈ ಮತಗಟ್ಟೆ ಬಿ.ಎಲ್.ಓ ಗಳು ಆಯೋಗದ ನಿಗದಿತ ನಮೂನೆ -03ನ್ನು ಕಾಲೋಚಿತಗೊಳಿಸಿದ್ದು ಕಂಡು ಬಂದಿಲ್ಲ.

ಅಲ್ಲದೇ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಸರಿಯಾಗಿ ನಿರ್ವಹಿಸಿದ್ದು ಕಂಡು ಬಂದಿಲ್ಲ. ಹಾಗೂ ನಿಗದಿತ ಪ್ರಮಾಣದಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಿರುವುದಿಲ್ಲ. ಈ ಕುರಿತಂತೆ ದಿ. 21.07.2023ರಿಂದ 21.8.2023 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರ ಪಟ್ಟಿಯ ಕುರಿತಂತೆ ಮತಗಟ್ಟೆ ಸಂಖ್ಯೆ 137ರಿಂದ 145ರವರೆಗಿನ ಬಿ.ಎಲ್.ಓ. ಗಳ ಕಾರ್ಯವೈಖರಿ ಹಾಗೂ ಪ್ರಗತಿ ಕಾರ್ಯದ ಕುರಿತು ಹುಲಕೋಟಿ ಗ್ರಾಮ ಆಡಳಿತ ಅಧಿಕಾರಿ ಶ್ರೀಮತಿ ವಿ.ಬಿ ಪಾಟೀಲ ಸರಿಯಾಗಿ ಮೇಲ್ವಿಚಾರಣೆ ಜರುಗಿಸದೇ ತೀವ್ರ ಕರ್ತವ್ಯ ಲೋಪವೆಸಗಿದ್ದಾರೆ.

ಅಷ್ಟೇ ಅಲ್ಲದೇ ಸರಕಾರಿ ನೌಕರನಿಗೆ ತಕ್ಕುದಲ್ಲದ ರೀತಿಯಲ್ಲಿ ನಡೆದುಕೊಂಡು ಪ್ರಜಾ ಪ್ರಾತಿನಿಧ್ಯ ಕಾಯ್ದೆ, 1950 ಕಲಂ 32 ಹಾಗೂ ಕರ್ನಾಟಕ ರಾಜ್ಯ ನಾಗರಿಕ ಸೇವಾ ನಡತೆ ನಿಯಮಗಳು 2021 ರ ನಿಯಮ 3ರಲ್ಲಿನ (1)(2)(3)ಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ವಿವರಿಸಲಾಗಿದೆ.

ಹೀಗಾಗಿ ಹುಲಕೋಟಿ ಗ್ರಾಮ ಆಡಳಿತ ಅಧಿಕಾರಿ ಶ್ರೀಮತಿ ವಿ.ಬಿ. ಪಾಟೀಲ ಅವರನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ)ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ವಿಚಾರಣೆ ಕಾಯ್ದಿರಿಸಿ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಗದಗ ತಹಸೀಲ್ದಾರ ಅವರ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡತಕ್ಕದಲ್ಲ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಆದೇಶ ಹೊರಡಿಸಿದ್ದಾರೆ.

ವಿಧಿ-ವಿಧಾನಗಳೊಂದಿಗೆ ಕೋತಿಯ ಅಂತ್ಯಕ್ರಿಯೆ…

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ

ಗ್ರಾಮದಲ್ಲಿ ಯಾವುದೇ ವ್ಯಕ್ತಿಗಳು ರಾತ್ರಿ ವೇಳೆ ಮರಣ ಹೊಂದಿದರೆ ಅಹೋರಾತ್ರಿ ಭಜನೆ ಮಾಡಿ, ಮುಂಜಾನೆ ಮೆರವಣಿಗೆ ಮೂಲಕ ಅಂತ್ಯಸಂಸ್ಕಾರ ಮಾಡುವುದುಂಟು. ಆದರೆ ಇಲ್ಲಿಯ ಮಾರುತಿ ನಗರದಲ್ಲಿ ಕೋತಿಯೊಂದು ಸಂಜೆ ವೇಳೆ ಸಾವನ್ನಪ್ಪಿದ್ದು, ಮನುಷ್ಯರಂತೆಯೇ ವಿಧಿ-ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಇಲ್ಲಿಯ ಮಾರುತಿ ನಗರದ ಆಂಜನೇಯ ಭಜನಾ ಸಂಘದ ಕಾರ್ಯಕರ್ತರೇ ಈ ಎಲ್ಲ ವಿಧಿ-ವಿಧಾನಗಳನ್ನು ನೆರವೇರಿಸಿ ಸಾವನ್ನಪ್ಪಿದ ಕೋತಿಯ ಅಂತ್ಯಕ್ರಿಯೆ ಮಾಡಿದ್ದಾರೆ.

ಆಂಜನೇಯ ದೇವಾಸ್ಥಾನದ ಹತ್ತಿರ ಶುಕ್ರವಾರ ಸಂಜೆ 7ರ ಹೊತ್ತಿಗೆ ಕೋತಿಯೊಂದು ಆಕಸ್ಮಿಕವಾಗಿ ಸಾವನಪ್ಪಿತ್ತು. ಭಜನಾ ಸಂಘದ ಕಾರ್ಯಕರ್ತರು ದೇವಸ್ಥಾನ ಹತ್ತಿರ ಕುರ್ಚಿಯಲ್ಲಿ ಕುಳ್ಳಿರಿಸಿ, ವಿಧಿ-ವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. ಅಹೋರಾತ್ರಿ ಭಜನಾ ಪದಗಳನ್ನು ಹಾಡುತ್ತಾ ಜಾಗರಣೆಯನ್ನೂ ನಡೆಸಿದರು.


ಶನಿವಾರ ಮುಂಜಾನೆ 7ಕ್ಕೆ ಮೆರವಣಿಗೆ ಮೂಲಕ ಪಕ್ಕದ ಜಮೀನಿನಲ್ಲಿ ಧಾರ್ಮಿಕ ವಿಧಿ-ವಿದಾನಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಿ, ಮೃತ ಕೋತಿಯ ಆತ್ಮಕ್ಕೆ ಶಾಂತಿ ಕೋರಲಾಯಿತು ಎಂದು ಭಜನಾ ಸಂಘದ ಹಿರಿಯರು, ಗ್ರಾ ಪಂ ಸದಸ್ಯರಾದ ಲಕ್ಷ್ಮಣ ಗುಡಸಲಮನಿ, ಶಿವಪ್ಪ ಬಳಿಗೇರ ತಿಳಿಸಿದ್ದಾರೆ.

ನಾಗರಪಂಚಮಿ ದಿನವೇ ನಾಗರಹಾವಿಗೆ ಹಾಲಿನ ಬದಲು ನೀರು ಕುಡಿಸಿದ ಭೂಪ…!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ

ನಾಡಿಗೆ ದೊಡ್ಡ ನಾಗರಪಂಚಮಿ ಹಬ್ಬದ ದಿನ ಎಲ್ಲೆಡೆ ಕಲ್ಲ ನಾಗರ ಮೂರ್ತಿಗೆ ಹಾಲೆರೆಯುವದು ಸಾಮಾನ್ಯ. ಪ್ರತ್ಯಕ್ಷವಾಗಿ ಕಂಡರೆ ಜೀವಭಯದಲ್ಲಿ ಮಾರುದ್ಧ ಜಿಗಿಯುವರೇ ಹೆಚ್ಚು, ಮತ್ತು ನಾಗದೇವರೆಂದು ಪೂಜಿಸಿ ಕೈಮುಗಿದು ದೂರ ಹೋಗುವರುಗೇನು ಕಡಿಮೆ ಇಲ್ಲ.

ಆದರೆ ನಾಗರಪಂಚಮಿ ದಿನವೇ ಎರಡು ಕಡೆ ನಾಗರ ಹಾವುಗಳು ಪ್ರತ್ಯಕ್ಷವಾಗಿದ್ದು, ನಾಗರಹಾವಿಗೆ ಹಾಲಿನ ಬದಲು ನೀರು ಕುಡಿಸಿ ಸರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟು ಬರಲಾಗಿದೆ. ಹಾಲಿನ ಬದಲಿಗೆ ಹಾವಿಗೆ ನೀರು ಕುಡಿಸಿದ ಲಕ್ಷ್ಮೇಶ್ವರ ಪಟ್ಟಣದ ಸಾಗರ ಧರಣಿ ಎಂಬ ಭೂಪನೇ ಅಂತಹ ಸಾಹಸ ಮೆರೆದಾತ.

ಪಟ್ಟಣದ ಜಂತ್ಲಿ ಬಸವೇಶ್ವರ ದೇವಸ್ಥಾನದ ಹೊಸಮನಿ ಎಂಬುವರ ಮನೆಯಲ್ಲಿ ಸುಮಾರು ೫/೬ ಅಡಿ ಉದ್ದದ ನಾಗರಹಾವು ಪ್ರತ್ಯಕ್ಷವಾಗಿದೆ. ಹಾವು ನೋಡಿದ ಮನೆಯವರು ಗಾಬರಿಗೊಂಡಿದ್ದಾರೆ. ದೂರದಿಂದಲೇ ಭಕ್ತಿಯಿಂದ ಪೂಜೆ ಮಾಡಿ ಹೊರ ಹೋಗುವಂತೆ ಪ್ರಾರ್ಥಿಸಿದ್ದಾರೆ. ಅಷ್ಟಾರಲ್ಲಾಗಲೇ ಸಾಗರಗೆ ಪೋನ್ ಮುಖಾಂತರ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ ಬಿಎಲ್‌ಓ ಕರ್ತವ್ಯಕ್ಕೆ ಗೈರು: ಗ್ರಾಮ ಆಡಳಿತ ಅಧಿಕಾರಿ ಶಿರೂರು ಸಸ್ಪೆಂಡ್; ಡಿಸಿ ಆದೇಶ

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಸಾಗರ, ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಸೆಪ್ಟಿಕಲ್ ಕೋಬ್ರಾ ಎನ್ನಲಾಗುವ ನಾಗರಹಾವನ್ನು ತಮ್ಮ ಚಾಣಾಕ್ಷತದಿಂದ ತನ್ನ ಹಿಡಿತಕ್ಕೆ ತೆಗೆದುಕೊಂಡು ಕೆಲಹೊತ್ತು ಆಟವಾಡಿಸಿ ಬಾಟಲಿಯಿಂದ ನೀರು ಕುಡಿಸಿ ಬಳಿಕ ಸುರಕ್ಷಿತವಾಗಿ ಬಿಟ್ಟು ಬಂದಿದ್ದಾನೆ.

ಕೆಲ ಹೊತ್ತಿನ ಬಳಿಕ ಲಕ್ಷ್ಮೇಶ್ವರ ತಾಲೂಕಿನ ಕುಂದ್ರಳ್ಳಿತಾಂಡಾದ ಮನೆಯಲ್ಲಿ ನಾಗರಹಾವು ಬಂದಿದೆ ಎಂಬ ಸುದ್ದಿ ತಿಳಿದು ಅಲ್ಲಿಗೂ ತೆರಳಿದ ಸಾಗರ ಧರಣಿ, ಅದನ್ನು ಸಹ ಕ್ಷಣಾರ್ಧದಲ್ಲಿಯೇ ಹಿಡಿದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾನೆ. ಯುವಕನ ಧೈರ್ಯ ಮತ್ತು ಬುದ್ದಿವಂತಿಕೆಯಿಂದ ಹಾವನ್ನು ಹಿಡಿಯುತ್ತಿರುವದನ್ನು ನೋಡಿದ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದುವರೆಗೂ ಹತ್ತಾರು ಜಾತಿಯ ಅನೇಕ ಹಾವುಗಳನ್ನು ಹಿಡಿದು ಹಲವಾರು ಕುಟುಂಬಗಳ ನೆಮ್ಮದಿಗೆ ಕಾರಣವಾಗಿರುವ ಸಾಗರ ಧರಣಿ ಸ್ನೇಕ ಸಾಗರ ಎಂದೇ ತಾಲೂಕಿನ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ. ನಾಗದೇವತೆಗಳನ್ನು ಆತನನ್ನು ಕಾಪಾಡಲಿ ಎಂಬುದು ಸ್ಥಳೀಯರು ಹಾರೈಸಿದ್ದಾರೆ.

error: Content is protected !!