Home Blog Page 3184

ಹೋಳಿ ಹಬ್ಬ; ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

0

ವಿಜಯಸಾಕ್ಷಿ ಸುದ್ದಿ, ಗದಗ

ಹೋಳಿ ಹಬ್ಬದ ನಿಮಿತ್ತ ಗದಗ ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕೆಳಕಂಡ ನಗರ ಹಾಗೂ ಪಟ್ಟಣಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

ಮಾ.27ರ ಸಾಯಂಕಾಲ 6 ಗಂಟೆಯಿಂದ ಮಾ.29ರ ಮಧ್ಯರಾತ್ರಿವರೆಗೆ ಶಿರಹಟ್ಟಿ, ರೋಣ, ಗಜೇಂದ್ರಗಡ, ನರೇಗಲ್, ಮುಂಡರಗಿ, ಲಕ್ಷ್ಮೇಶ್ವರ ಠಾಣಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಿ ಆದೇಶಿಸಲಾಗಿದೆ.

ಮಾ.28ರ ಬೆಳಗ್ಗೆ 6 ರಿಂದ ಮಾ.29ರ ಮಧ್ಯರಾತ್ರಿವರೆಗೆ ಗದಗ ಗ್ರಾಮೀಣ, ಮುಳಗುಂದ ಭಾಗದಲ್ಲಿ ಮದ್ಯಮಾರಾಟ ನಿಷೇಧಿಸಿ ಆದೇಶಿಸಲಾಗಿದೆ.

ಮಾ.28ರ ಮಧ್ಯರಾತ್ರಿಯಿಂದ ಮಾ.30ರ ಮಧ್ಯರಾತ್ರಿವರೆಗೆ ನರಗುಂದ ಠಾಣಾ ವ್ಯಾಪ್ತಿಯಲ್ಲಿ ಮದ್ಯ ನಿಷೇಧಿಸಿ ಆದೇಶಿಸಲಾಗಿದೆ.
ಮಾ.31 ರ ಮಧ್ಯರಾತ್ರಿಯಿಂದ ಏ.2ರ ಬೆಳಗ್ಗೆ 6 ಗಂಟೆವರೆಗೆ ಗದಗ ಶಹರ ಠಾಣಾ ವ್ಯಾಪ್ತಿ ಹಾಗೂ ಮಾ.31ರ ಸಾಯಂಕಾಲ 6 ಗಂಟೆಯಿಂದ ಏ.2ರ ಬೆಳಗ್ಗೆ 6 ಗಂಟೆವರೆಗೆ ಬೆಟಗೇರಿ, ಬೆಟಗೇರಿ ಬಡವಾವಣೆ ಹಾಗೂ ಲಕ್ಷ್ಮೇಶ್ವರ ಶಹರ ಹಾಗೂ ಶಿಗ್ಲಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮೇಲ್ಕಂಡ ದಿನಾಂಕಗಳನ್ನು ಶುಷ್ಕ ದಿನ ಘೋಷಿಸಿದ್ದು, ನಿಗಧಿತ ಸ್ಥಳಗಳಲ್ಲಿ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.

ಗದಗನಲ್ಲಿ ಕೊರೊನಾ 2 ನೇ ಅಲೆ: ನಾಲ್ವರು ವಿದ್ಯಾರ್ಥಿಗಳು, ಓರ್ವ ಅಡುಗೆ ಸಿಬ್ಬಂದಿಗೆ ಸೋಂಕು ದೃಢ

0

ವಿಜಯಸಾಕ್ಷಿ ಸುದ್ದಿ ಗದಗ
ಜಿಲ್ಲೆಯ ರೋಣ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಹಾಗೂ ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ವಸತಿ ಶಾಲೆಯ ಬಹುತೇಕ ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಜ್ವರದಿಂದ ಅಸ್ವಸ್ಥವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಎಲ್ಲ ಮಕ್ಕಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಸುಮಾರು 175 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸ್ತವ್ಯ ಇದ್ದಾರೆ. ಇನ್ನು ಶಾಲೆಯಲ್ಲಿರುವ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಪಾಲಕರಲ್ಲಿ ಆತಂಕ ಮನೆ ಮಾಡಿದೆ.
ಅಲ್ಲದೇ, ಕೊರೊನಾ ಎರಡನೇ ಅಲೆ ಗದಗ ಜಿಲ್ಲೆಗೂ ವ್ಯಾಪಿಸುತ್ತಿರುವ ಶಂಕೆ ವ್ಯಕ್ತವಾಗುತ್ತಿದ್ದು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತದಿಂದ ಕಂಟೈನ್ಮೆಂಟ್ ಝೋನ್ ಮಾಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧಿಸಿದ ಕೊಪ್ಪಳ ಪೊಲೀಸರು

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಭಾಗ್ಯನಗರದ ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮದಲ್ಲಿ ಲಕ್ಷಾಂತರ ರೂಪಾಯಿ ಲಪಟಾಯಿಸಿ , ಕಳೆದ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಪ್ಪಳ ಪೋಲಿಸರು ಬಂದಿಸಿದ್ದಾರೆ.
2003ರಲ್ಲಿ ಭಾಗ್ಯನಗರದ ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ ಸಬ್ ಸೆಂಟರ್ನಲ್ಲಿ ಜ್ಯೂನಿಯರ್ ಅಸಿಸ್ಟಂಟ ಕೆಲಸ ಮಾಡುತ್ತಿದ್ದ ಹಾಸನ ಮೂಲದ ಜಿ.ಮಂಜುನಾಥ 2002 ರಿಂದ ಜುಲೈ 2003 ರ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಒಟ್ಟು 16 , ಬೇಲ್ಸ್ಗಳು ಅಂದಾಜು 2,12,100 ಬೆಲೆಯ ವಸ್ತುಗಳನ್ನು ನಂಬಿಕೆ ದ್ರೋಹ ಮಾಡಿ ವಂಚನೆ ಮಾಡಿದ್ದರ ಕುರಿತು ಕೆ.ಎಕ್ಸ್ , ಥಾಮಸ್ , ಯೋಜನಾ ಆಡಳಿತಾಧಿಕಾರಿ 30-07-2005 ರಂದು ದೂರು ನೀಡಿದ್ದರು.
ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ 2005ರಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ಮಾಡಿ 2010ರಲ್ಲಿ ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. 2011ರಲ್ಲಿ ಪ್ರಕರಣವನ್ನು ಎಲ್ ಪಿಸಿಎಂದು ಘೋಷಣೆ ಮಾಡಲಾಗಿತ್ತು.
ಇತ್ತೀಚಿಗೆ ನಗರದ ಸಿಪಿಐ ಮಾರುತಿ ಗುಳ್ಳಾರಿಯವರ ನೇತೃತ್ವದ ನಾಗಪ್ಪ ಪಿ.ಎಸ್.ಐ ( ಕಾ & ಸು ) ., ಸೂರ್ಯಕಾಂತಪ್ಪ ಸಿಹೆಚಸಿ . ರಾಜಶೇಖರ ಹೆಚಸಿ ತಂಡ ಆರೋಪಿಯ ಜಾಡನ್ನು ಹಿಡಿದು ಬೆಂಗಳೂರಿಗೆ ತೆರಳಿತ್ತು. ಕೊನೆಗೂ ಜಯನಗರದಲ್ಲಿ ಇದ್ದ ಆರೋಪಿತನನ್ನು ಬಂದಿಸಿ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತಂಡಗಕ್ಕೆ ಎಸ್ಪಿ ಟಿ.ಶ್ರಿ ಧರ ಅಭಿನಂದನೆ ಸಲ್ಲಿಸಿದ್ದಾರೆ.

ಒಂದು ಲಕ್ಷ ವ್ಯೂವ್ ಪಡೆದ ತ್ರಿಕೋನ ಟೀಸರ್; ತೆಲಗು, ತಮಿಳು ಭಾಷೆಯಲ್ಲೂ ಚಿತ್ರ ಬಿಡುಗಡೆ

ವಿಜಯಸಾಕ್ಷಿ ಸುದ್ದಿ ಬೆಂಗಳೂರು
ವಿಭಿನ್ನ ಕಥೆ, ಥ್ರಿಲ್ಲಿಂಗ್ ಎಲಿಮೆಂಟ್ಸ್, ಸಾಹಸ ಇದೆಲ್ಲದರ ಮಿಶ್ರಣವಿರುವ ಒಂದು ಇಟ್ರೆಂಸ್ಟಿಂಗ್ ಸಿನಿಮಾ ಸಿನಿಮಾ ಅಂಗಳದಲ್ಲಿ ಸೆನ್ಷೇಶನ್ ಕ್ರಿಯೇಟ್ ಮಾಡಲು ರೆಡಿಯಾಗಿದೆ.
ಅಂದ್ಹಾಗೆ ಈ ತ್ರಿಕೋನ ಸಿನಿಮಾಗೆ ಚಂದ್ರಕಾಂತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಜಶೇಖರ್ ಕಥೆ ಬರೆದು ಬಂಡವಾಳ ಹಾಕಿರುವ ತ್ರಿಕೋನ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಸಖತ್ ಒಳ್ಳೆ ರೆಸ್ಪಾನ್ಸ್ ಸಿಗ್ತಿದೆ.

ಸದ್ಯ ಯುಟ್ಯೂಬ್ ನಲ್ಲಿ ತ್ರಿಕೋನ ಟೀಸರ್ ಒಂದು ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಪೊಲೀಸ್ ಪರ್ಕಿ ಪ್ರೋಡಕ್ಷನ್ ಬ್ಯಾನರ್ ನಡಿ ಸಿನಿಮಾ ಮೂಡಿಬರುತ್ತಿದ್ದು, ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಸಿನಿಮಾ ತಯಾರಾಗುತ್ತಿದೆ.
ಸಿನಿಮಾದ ಹೆಸರೇ ಹೇಳುವಂತೆ ಇಂದು ಮೂರು ಕಥೆಗಳನ್ನ ಒಳಗೊಂಡ ಸಿನಿಮಾವಾಗಿದ್ದು, ಅಹಂ, ಶಕ್ತಿ ಮತ್ತು ತಾಳ್ಮೆ ಇವುಗಳ ಮೇಲೆ ಕಥೆ ನಿಂತಿದೆ. ಈ ಸಿನಿಮಾವನ್ನ ನಾಲ್ಕು ಹಂತದಲ್ಲಿ 50 ದಿನಗಳ ಕಾಲ ಬೆಂಗಳೂರು, ಸುಬ್ರಮಣ್ಯ, ಕಡಬ, ಪುತ್ತೂರು, ಮಂಗಳೂರು, ಸಕಲೇಶಪುರದಲ್ಲಿ ಶೂಟಿಂಗ್ ಮಾಡಲಾಗಿದೆ. ಈ ಚಿತ್ರಕ್ಕೆ ಸುರೇಂದ್ರನಾಥ್ ಸಂಗೀತ ನೀಡಿದ್ದು, ಶ್ರೀನಿವಾಸ್ ಛಾಯಾಗ್ರಹಣವಿದ್ದು, ಜೀವನ್ ಪ್ರಕಾಶ್.ಎನ್ ಸಂಕಲನವಿದೆ.

ಚಿತ್ರದಲ್ಲಿ ರಾಜ್ ವೀರ್, ಅಚ್ಯುತರಾವ್, ಸುಧಾರಾಣಿ, ಸುರೇಶ್ ಹೆಬ್ಳಿಕರ್, ಲಕ್ಷ್ಮೀಘಿ, ಸಾಧುಕೋಕಿಲ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಡಿ ಬಿಲ್ಡಿಂಗ್ ನಲ್ಲಿ ಎರಡು ಬಾರಿ ಮಿ.ಕರ್ನಾಟಕ, ಒಮ್ಮೆ ಮಿ.ಇಂಡಿಯಾ ಪ್ರಶಸ್ತಿ ಪಡೆದಿರುವ ಬಳ್ಳಾರಿಯ ಮಾರುತೇಶ್ ನೆಗೆಟಿವ್ ಶೇಡ್ ನಲ್ಲಿ ಮಿಂಚಿದ್ದಾರೆ.

ಜಿಮ್ಸ್ ನಲ್ಲಿ ಹೆಜ್ಜೇನು ದಾಳಿ: ಮೂವರು ಪರೀಕ್ಷಾ ದಳದ ವೈದ್ಯರು ಅಸ್ವಸ್ಥ

ವಿಜಯಸಾಕ್ಷಿ ಸುದ್ದಿ, ಗದಗ

ನಗರದ ಹೊರವಲಯದಲ್ಲಿರುವ ಜಿಮ್ಸ್ ನಲ್ಲಿ ಹೆಜ್ಜೇನು ದಾಳಿ ಮಾಡಿದ ಪರಿಣಾಮವಾಗಿ ಮೂವರು ಪರೀಕ್ಷಾ ಸ್ಕ್ವಾಡ್ ಗಳು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಜಿಮ್ಸ್‌ನ ‘ಬಿ’ ಬ್ಲಾಕ್‌ ನ ಮೂರನೇ ಮಹಡಿಯಲ್ಲಿ ಈ ಘಟನೆ ನಡೆದಿದ್ದು, ಪರೀಕ್ಷಾ ಕರ್ತವ್ಯಕ್ಕೆ ಹಾಜರಾಗಿದ್ದ ವೈದ್ಯರಾದ ದೆಹಲಿಯ ಡಾ.ಸೌಮಿಲ್ ಪಿ.ಮರ್ಜಂಟ್ ಹಾಗೂ ವಿ.ಕೆ ರಂಗಾ ಅವರು ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡಿದ್ದಾರೆ. ಅದರಂತೆ ಬೆಂಗಳೂರಿನ ಡಾ.ರವಿರಾಜ್ ಕೆ.ಜಿ. ತೀವ್ರ ಅಸ್ವಸ್ಥಗೊಂಡಿದ್ದಾರೆ.

ಸದ್ಯ ಮೂವರಲ್ಲಿ ಇಬ್ಬರು ವೈದ್ಯರು ಜಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ಅಸ್ವಸ್ಥಗೊಂಡ ಓರ್ವ ವೈದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಜಿಮ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ
ಪ್ರಯೋಗಾಲಯದ ಅಂತಿಮ
ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಸ್ಕ್ವಾಡ್ ಗಳಾಗಿ ಹೆಜ್ಜೇನು ದಾಳಿಯಿಂದ ಗಾಯಗೊಂಡಿರುವ ಈ ಮೂವರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏಕಿ ಹೆಜ್ಜೇನು ದಾಳಿ ಮಾಡಿವೆ.

ಇವುಗಳಿಂದ ತಪ್ಪಿಸಿಕೊಳ್ಳಲು ಓಡಿ ರಸ್ತೆಗೆ ಬಂದರೂ ಬಿಡದ ಜೇನು ಹುಳುಗಳು ಕಚ್ಚಿ ಗಾಯಗೊಳಿಸಿವೆ.
ಇನ್ನು ಹೆಜ್ಜೇನು ದಾಳಿಯಿಂದ ಜಿಮ್ಸ್ ಆವರಣದಲ್ಲಿ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಹುಲಕೋಟಿಯಲ್ಲಿ ಗಾಂಜಾ ಗಮ್ಮತ್ತು; ಸೈಬರ್ ಪೊಲೀಸರಿಂದ ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ತಾಲೂಕಿನ ಹುಲಕೋಟಿ ಗ್ರಾಮದ ಬಸ್‌ ನಿಲ್ದಾಣದ ಹತ್ತಿರ ಅನಧಿಕೃತವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಣ್ಣಿಗೇರಿಯ ಸರ್ಕಾರಿ ಆಸ್ಪತ್ರೆಯ ಹತ್ತಿರದ ನಿವಾಸಿ ಯಲ್ಲಪ್ಪ ಪರಶುರಾಮ ಗೊಲ್ಲರ ಹಾಗೂ ಪುರಸಭೆ ಹತ್ತಿರದ ನಿವಾಸಿ ಶಿವಾನಂದ ಮಹೇಶ ಪುರದೀಶ್ವರಮಠ ಅವರನ್ನು ಬಂಧಿಸಲಾಗಿದೆ.

ಬಂಧಿತ ಇಬ್ಬರು ಆರೋಪಿತರು ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುವ ವೇಳೆ ಸೈಬರ್ ಠಾಣೆಯ ಇನ್ಸ್ಪೆಕ್ಟರ್ ಟಿ ಮಹಾಂತೇಶ್ ಹಾಗೂ ಸಿಬ್ಬಂದಿ ದಾಳಿಯ ವೇಳೆ ಸಿಕ್ಕಿ ಬಿದ್ದಿದ್ದು, ಬಂಧಿತರಿಂದ ಸುಮಾರು ೨೦೩೦ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಟಕಾ ಬುಕ್ಕಿ; ಮಿಸ್ಕಿನ್ ಗದಗ ಜಿಲ್ಲೆಯಿಂದ ಗಡಿಪಾರು

ವಿಜಯಸಾಕ್ಷಿ ಸುದ್ದಿ, ಗದಗ

ಇಲ್ಲಿನ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಲ್ಲಾ ಓಣಿಯ ನಿವಾಸಿ
ರಾಜನಸಾ ರಾಮನಾಥಸಾ ಮಿಸ್ಕಿನ್ ಎಂಬ 63 ವರ್ಷದ ವ್ಯಕ್ತಿಯನ್ನು ಆರು ತಿಂಗಳವರೆಗೆ ಗದಗ ಜಿಲ್ಲೆಯಿಂದ ಗಡಿಪಾರು ಮಾಡಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಆದೇಶಿಸಿದ್ದಾರೆ.

ರಾಜನಸಾ ಮಿಸ್ಕಿನ್ ಈತನು ಸಮಾಜಕ್ಕೆ ಧಕ್ಕೆಯಾಗುವಂತಹ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಕೃತ್ಯಗಳಾದ ಮಟಕಾ ಜೂಜಾಟ ಆಡುವ ಮತ್ತು ಆಡಿಸುವ ಪ್ರವೃತ್ತಿಯಲ್ಲಿ ತೊಡಗಿಕೊಂಡಿದ್ದ. ಅಲ್ಲದೇ, ಇದೇ ಪ್ರವೃತ್ತಿಯನ್ನು ಮುಂದುವರೆಸುಕೊಂಡು ಹೋಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಹಾಗೂ ಸಮಾಜಘಾತುಕ ಕಾರ್ಯ ನಿಯಂತ್ರಿಸುವ ಸಲುವಾಗಿ ಗದಗ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಗದಗ ಉಪವಿಭಾಗದ ಸರಹದ್ದಿನಿಂದ ಮಾ.23 ರಿಂದ ಸೆಪ್ಟಂಬರ್ 22ರವರೆಗೆ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿದ್ದಾರೆ. ತಕ್ಷಣದಿಂದಲೇ ಯಾದಗಿರಿ ಜಿಲ್ಲೆಗೆ ಸ್ಥಳಾಂತರಿಸುವಂತೆ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಅವರಿಗೆ ನಿರ್ದೇಶಿಸಿದ್ದಾರೆ.

ಅಲ್ಲದೇ, ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 61ರ ಪ್ರಕಾರ ಆರೋಪಿತನನ್ನು ಬಂಧಿಸಿ, ಪೊಲೀಸ್ ಸುಪರ್ದಿಯಲ್ಲಿ ಪಡೆದು ನಿಗದಿಪಡಿಸಿದ ಜಿಲ್ಲೆಗೆ ಸ್ಥಳಾಂತರಿಸುವಂತೆ ಎಸಿ ರಾಯಪ್ಪ ಹುಣಸಗಿ ಸೂಚನೆ ನೀಡಿದ್ದಾರೆ.

ಇದರಿಂದ ಪ್ರಸ್ತುತ ವರ್ಷದಲ್ಲಿ ಅಪರಾಧಿಕ ಪ್ರವೃತ್ರಿಯುಳ್ಳ ಇಂತಹ ಒಟ್ಟು ನಾಲ್ವರನ್ನು ಗದಗ ಜಿಲ್ಲೆಯಿಂದ ಗಡಿಪಾರು ಮಾಡಿದಂತಾಗಿದೆ ಎಂದು ಜಿಲ್ಲಾ ಪೊಲೀಸ್ ಕಾರ್ಯಾಲಯ ತಿಳಿಸಿದೆ.

ಜಮೀನು ವಿವಾದ; ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಬರ್ಭರ ಹತ್ಯೆ!

0

ವಿಜಯಸಾಕ್ಷಿ ಸುದ್ದಿ ಚಿಕ್ಕಬಳ್ಳಾಪುರ
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಕಾರ್ಯದರ್ಶಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅವುಲನಾಗೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ರಾಮಾಂಜಿ ಕೊಲೆಯಾದ ದುರ್ದೈವಿಯಾಗಿದ್ದು, ಆತನ ಪತ್ನಿ ಮಂಜುಳಾ ಗೆ ಗಂಭೀರ ಗಾಯವಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಬಂಡಿಕೊಡಗೇನಹಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ ರಾಮಾಂಜಿ ಕಾರ್ಯನಿರ್ವಹಿಸುತ್ತಿದ್ದರು. ಗಾಯಾಳುವಾಗಿರುವ ಆತನ ಪತ್ನಿ ಮಂಜುಳಾಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ಕಾರಣರಾಗಿರಬಹುದು ಎನ್ನುವ ಅನುಮಾನದ ಹಿನ್ನೆಲೆಯಲ್ಲಿ 4 ಜನರನ್ನು ವಶಕ್ಕೆ ಪಡೆದಿರೋದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜಮೀನು ನೋಂದಣಿಗೆ ಲಂಚ; ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ

ತಾಲೂಕಿನ ಕಲಕೇರಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ತೊಗರಿಕಟ್ಟಿ ಎಂಬುವವರು ಐದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.

ಪಟ್ಟಣದ ಕೊಪ್ಪಳ ಕ್ರಾಸ್ ಬಳಿ ಮುಂಡರಗಿ ತಾಲೂಕಿನ ಪೇಠಾಲೂರ ಗ್ರಾಮದ ಸೋಮನಗೌಡ ಕರಿಗೌಡ ಅವರಿಂದ ಲಂಚ ಸ್ವೀಕರಿಸುತ್ತಿರುವಾಗ ಸಿಕ್ಕಿ ಬಿದ್ದಿದ್ದಾರೆ.

ಖರೀದಿಸಿದ ಜಮೀನಿನ ನೋಂದಣಿ ಮಾಡಲು ಮಾಡಲು ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ಐದು ಸಾವರಿ ರೂ. ಬೇಡಿಕೆ ಇಟ್ಟಿದ್ದ. ಹೀಗಾಗಿ ಹಣ ಸ್ವೀಕಾರ ಮಾಡುವಾಗ ಪೊಲೀಸ್ ಅಧೀಕ್ಷಕ ಬಿ.ಎಸ್.ನ್ಯಾಮಗೌಡ ಅವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್‌ಪಿ ವಾಸುದೇವ ರಾಮ್ ಅವರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ವೈ.ಎಸ್ ಧರಣನಾಯಕ್, ಆರ್.ಎಫ್.ದೇಸಾಯಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿ ಜಗದೀಶ್ ತೊಗರಿಕಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಠಾಣೆಯ ಪಕ್ಕದ ಬಾರ್ ನಲ್ಲಿ ಎರಡು ಗುಂಪುಗಳ ಮಧ್ಯ ಮಾರಾಕಾಸ್ತ್ರಗಳಿಂದ ಮಾರಾಮಾರಿ

ವಿಜಯಸಾಕ್ಷಿ ಸುದ್ದಿ, ಗದಗ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಲಾಂಗ್, ಕಬ್ಬಿಣ ಸಲಾಕೆ, ಬಡಿಗೆಯಿಂದ ಹೊಡೆದಾಡಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದಿದೆ.

ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕುಮಾರ ಬಾರ್‌ನಲ್ಲಿ ಮದ್ಯ ಪ್ರೀಯರು ಹಾಗೂ ಬಾರ್ ಸಪ್ಲಾಯರ್ ನಡುವೆ
ಮಾರಾಮಾರಿಯಾಗಿದೆ.

ಮದ್ಯವ್ಯಸನಿ ಗ್ರಾಹಕರು, ಪಾನಮತ್ತಿನಲ್ಲಿ ಟೇಬಲ್ ಬಡೆದಿದ್ದಾರೆ. ಆದರೆ, ಸಪ್ಲಾಯರ್‌ಗಳು ಬೇಗನೆ ಬಾರದಕ್ಕೆ ಪುನಃ ಜೋರಾಗಿ ಕೂಗಾಡಿದ್ದಾರೆ. ನಂತರ ಬಂದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಆವೇಶದಲ್ಲಿ ಮದ್ಯ ಪ್ರೀಯರು ಹಾಗೂ ಬಾರ್ ಸಪ್ಲಾಯರ್ ಕಬ್ಬಿಣ ರಾಡ್, ಕಟ್ಟಿಗೆ ಹಾಗೂ ಲಾಂಗ್‌ನಿಂದ ಹೊಡೆದಾಡಲು ಆರಂಭಿಸಿದ್ದಾರೆ. ಈ ವೇಳೆ ಎರಡು ಗುಂಪಿನವರಿಗೂ ಗಾಯಗಳಾಗಿವೆ.

ವಿಷಯ ತಿಳಿದ ರೋಣ ಪೊಲೀಸರು ಎರಡೂ ಗುಂಪಿನವರನ್ನೂ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

error: Content is protected !!