Home Blog Page 3200

ಜ.13 ಮಧ್ಯಾಹ್ನ ಅಮವಾಸ್ಯೆ ಕಳೆದು ಒಳ್ಳೇ ಸಮಯ ಬರುತ್ತೆ, ಆಗ ಸಂಪುಟ ವಿಸ್ತರಣೆ ಆಗುತ್ತೆ: ಸಿಎಂ ಯಡಿಯೂರಪ್ಪ

ವಿಜಯಸಾಕ್ಷಿ ಸುದ್ದಿ, ಮೈಸೂರು

ಜ.13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ. ಅದು ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಅದು ಅವತ್ತಿಗೆ ಗೊತ್ತಾಗಲಿದೆ ಎಂದು ರವಿವಾರದ ದೆಹಲಿ ವರಿಷ್ಠರ ಭೇಟಿ ಮಾತುಕತೆಯ ಬಳಿಕವಿಂದು ಸಿಎಂ ಯಡಿಯೂರಪ್ಪ ಅವರು ಸಷ್ಪಪಡಿಸಿದರು.

ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿ ಅವರ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೂ ಚಾಲನೆ ನೀಡುವುದಕ್ಕಿಂತ ಮುನ್ನ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಜನವರಿ 13ರ ಮಧ್ಯಾಹ್ನ ಅಮವಾಸ್ಯೆ ಕಳೆಯುತ್ತದೆ. ಆ ನಂತರ ಒಳ್ಳೆಯ ಸಮಯ ಅಂತ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸಮಯ ಕೇಳಿಕೊಂಡು ನಿಮಗೂ ಸಮಯ ತಿಳಿಸುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಸಿಎಂ; ಸಚಿವ ಕಾರಜೋಳ ಸ್ಪಷ್ಟನೆ

ವಿಜಯಸಾಕ್ಷಿ ಸುದ್ದಿ, ಗದಗ

ಪೂರ್ಣಾವಧಿಗೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ‌ಗೋವಿಂದ ಕಾರಜೋಳ ಅವರು ಸ್ಪಷ್ಟಪಡಿಸಿದರು.

ಗದಗನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,
ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಸಿಎಂ ಆಗಿರುತ್ತಾರೆ. ಹಾಗಾಗಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.

ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು,
ಸಿಎಂ ಅವ್ರೇ ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ಅವತ್ತಿಗೆ ಗೊತ್ತಾಗಲಿದೆ ಎಂದು ಹೇಳಿದ್ದು, ಅಲ್ಲಿಯವರೆಗೆ ಕಾದು ನೋಡಿ ಎಂದ ಅವರು,ಯಾವುದೇ ಗೊಂದಲವಿಲ್ಲದೇ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು
ಡಿಸಿಎಂ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೋಣ ಶಾಸಕ ಕಳಕಪ್ಪ ಬಂಡಿ ಇದ್ದರು.

ಗ್ರಾ.ಪಂ.ಚುನಾವಣೆಯಲ್ಲಿ ಹಣದ ಹೊಳೆ, ಬರುವ ಚುನಾವಣೆಯಲ್ಲಿ ಆಸ್ತಿ ಮಾರಬೇಕು: ಶಾಸಕ ಗೌರಿಶಂಕರ

ವಿಜಯಸಾಕ್ಷಿ ಸುದ್ದಿ, ತುಮಕೂರು

ವಿಧಾನಸಭಾ ಚುನಾವಣೆಯಲ್ಲಿ ಅಷ್ಟೋ ಇಷ್ಟೋ ಖರ್ಚು ಮಾಡಿ ಎಂಎಲ್ಎ ಆಗ್ತಿದ್ವಿ. ಗ್ರಾ.ಪಂ. ಚುನಾವಣೆ ನಡೆದಿದ್ದು ನೋಡಿದ್ರೆ ಭಯ ಆಗುತ್ತೆ. ನಾನಾಗಲಿ ಕೃಷ್ಣಪ್ಪಣ್ಣ ಆಗಲಿ ಚುನಾವಣೆಗೆ ದುಡ್ಡು ಎಲ್ಲಿಂದ ತರೋದು. ಕೃಷ್ಣಪ್ಪರೇ ನೀವು ಒಂದು ಆಸ್ತಿ ರೆಡಿ ಮಾಡಿ, ನಾನು ನಮ್ಮಪ್ಪನ ಒಂದು ಆಸ್ತಿ ಮಾರುತ್ತೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ ಆತಂಕ ವ್ಯಕ್ತಪಡಿಸಿದರು.

ತುರುವೇಕೆರೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಒಬ್ಬೊಬ್ಬರು ಖರ್ಚು ಮಾಡಿರೋ ರೇಟ್ ಲೆಕ್ಕ ಹಾಕಿದ್ರೆ, ಒಂದು ಸೀಟ್ ಗೆ ಒಂದು ಕೋಟಿ ಎಲ್ಲಣ್ಣ ತರೋದು. ಮೂರು ತಾಲ್ಲೂಕು ಚುನಾವಣೆಗೆ ಖರ್ಚು ಮಾಡುವ ಹಣನಾ ಒಂದು ಪಂಚಾಯಿತಿಗೆ ಖರ್ಚು ಮಾಡಿದ್ದಾರೆ. ಹೀಗೆ ಮಾಡಿದ್ರೆ ಯಾವ ಮನೆ ಹಾಳು ಮಾಡಿಕೊಳ್ಳಬೇಕು, ಕೆಲಸ ಹೇಗೆ ಮಾಡೋದು ಎಂದು ಪ್ರಶ್ನಿಸಿದರು.

ನನ್ನ ಸೋಲಿಸೋಕೆ ಸಾಲುಗಟ್ಟಿ ನಿಂತಿದ್ದಾರೆ. ನಮ್ಮನ್ನ ತೆಗೆಯೋರು ಯಾರು.?. ನೀವು ತೆಗೆಯಬೇಕು ಇಲ್ಲಾ, ದೇವರು ತೆಗೆಯಬೇಕು.
ಬಿಜೆಪಿ ನನ್ನ ಮೇಲೆ ಬಿಟ್ಟು ತೆಗೆಯುವುದಕ್ಕೆ ಆಗುವುದಿಲ್ಲ.
ನಮ್ಮ ತಾಲ್ಲೂಕು 25 ವರ್ಷಗಳಿಂದ ಜೆಡಿಎಸ್ ಭದ್ರಕೋಟೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಪಳಗಿರುವುದು ದೇವೇಗೌಡ್ರ ಗರಡಿಯಲ್ಲಿ. ತಾತ ಶ್ರೀಕೃಷ್ಣ ಪರಮಾತ್ಮ ಇದ್ದ ಹಾಗೆ ಚುನಾವಣೆ ಹೇಗೆ ಮಾಡಬೇಕು ಅಂತಾ ಹೇಳಿಕೊಟ್ಟಿದ್ದಾರೆ ಎಂದು ಶಾಸಕ ಗೌರಿಶಂಕರ ಅಭಿಪ್ರಾಯ ಪಟ್ಟರು.

ಹಕ್ಕಿ ಜ್ವರವಿಲ್ಲ, ಬಿಂದಾಸ್ ಆಗಿ ಕೋಳಿ ತಿನ್ನಿ; ಸಚಿವ ಪ್ರಭು ಚವ್ಹಾಣ

ವಿಜಯಸಾಕ್ಷಿ ಸುದ್ದಿ, ಬೀದರ್

ರಾಜ್ಯದಲ್ಲಿ ಹಕ್ಕಿ ಜ್ವರವಿಲ್ಲ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವಾಹ ಸ್ಪಷ್ಟಡಿಸಿದರು.

ಈ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕೋಳಿ ತಿನ್ನುವವರೆಗೆ ಯಾವುದೇ ಆತಂಕವಿಲ್ಲ. ಬಿಂದಾಸ್ ಆಗಿ ಕೋಳಿ ತಿನ್ನಿ ಎಂದರು.

ಕೇರಳದ ಗಡಿಯಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಿ ತೀವ್ರ ನಿಗಾವಹಿಸಲಾಗಿದೆ. ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಚಿವ ಪ್ರಭು ಚೌವಾಹ ಹೇಳಿದರು.

ಯಲಬುರ್ಗಾ ಶಾಸಕ ಆಚಾರ್‌ಗೆ ಒಲಿದು ಬಂತಾ ಮಂತ್ರಿ ಭಾಗ್ಯ? ಶಾಸಕ ಹಾಲಪ್ಪ ಆಚಾರ್ ನಿವಾಸಕ್ಕೆ ಡಿಸಿಎಂ ಸವದಿ ದಿಢೀರ್ ಭೇಟಿ

-ಈಗ ಮಂತ್ರಿಯಾಗಿ, ಮುಂದಿನ ಸಲ ಕ್ಷೇತ್ರ ಬಿಟ್ಟು ಕೊಡಬೇಕೆಂಬ ಕಂಡಿಷನ್?

ವಿಜಯಸಾಕ್ಷಿ ವಿಶೇಷ ಸುದ್ದಿ,
ಕೊಪ್ಪಳ: ಸಂಪುಟ ಪುನರ್ರಚನೆ ಅಥವಾ ವಿಸ್ತರಣೆ ಕುರಿತು ಸಿಎಂ ಬಿಎಸ್‌ವೈ ದೆಹಲಿ ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದ್ದು, ಬಿಎಸ್‌ವೈ ಬಯಸಿರುವ ನೂತನ ಮಂತ್ರಿಗಳ ಪಟ್ಟಿಯಲ್ಲಿ ಯಲಬುರ್ಗಾ ಕ್ಷೇತ್ರದ ಶಾಸಕ ಹಾಲಪ್ಪ ಬಸಪ್ಪ ಆಚಾರ್ ಹೆಸರು ಸಹ ಇದೆ ಎನ್ನಲಾಗಿದೆ.

ರವಿವಾರ ಸಂಜೆ ಡಿಸಿಎಂ ಲಕ್ಷ್ಮಣ ಸವದಿ ಶಾಸಕ ಹಾಲಪ್ಪ ಆಚಾರ್ ಅವರ ಮಸಬಹಂಚಿನಾಳ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಕೆಲ ಕಾಲ ಚರ್ಚಿಸಿ ತೆರಳಿರುವುದು ಜಿಲ್ಲೆಗೆ ಮಂತ್ರಿಭಾಗ್ಯ ಸಿಗುವ ಕನಸಿಗೆ ರೆಕ್ಕೆ ಪುಕ್ಕ ಕಟ್ಟಿದಂತಾಗಿದೆ.

ಶಾಸಕ ಹಾಲಪ್ಪ ಆಚಾರ್ ಅವರನ್ನು ಸಚಿವರನ್ನಾಗಿಸುವ ಮೂಲಕ ಮುಂದಿನ ಚುನಾವಣೆಗೆ ಕ್ಷೇತ್ರ ಬಿಟ್ಟುಕೊಡಬೇಕೆಂಬ ಮಾತುಕತೆ ನಡೆಯಿತು ಎನ್ನಲಾಗಿದೆ. ಶಾಸಕರ ಪ್ರತಿಕ್ರಿಯೆ ಪಡೆಯಲು ಸಾಕಷ್ಟು ಪ್ರಯತ್ನಿಸಿದರೂ ಕರೆ ಸ್ವೀಕರಿಸಲಿಲ್ಲ.

ಮಹಾಮಂಡಳದ ತಾಲ್ಲೂಕು ಕಾರ್ಯಾಧ್ಯಕ್ಷರಾಗಿ ಸಯ್ಯದ್ ನದಾಫ ನೇಮಕ

0

ವಿಜಯಸಾಕ್ಷಿ ಸುದ್ದಿ, ನವಲಗುಂದ

ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ನವಲಗುಂದ ತಾಲ್ಲೂಕು ಕಾರ್ಯಾಧ್ಯಕ್ಷರಾಗಿ ಸಯ್ಯದ್ ನದಾಫ ನೇಮಕ ನೇಮಕಾಗೊಂಡಿದ್ದಾರೆ.

ಇಂದು ನಡೆದ ಕಾರ್ಯಕ್ರಮದಲ್ಲಿ ಆದೇಶ ಪ್ರತಿಯೊಂದನ್ನು ನೀಡಿ ಸನ್ಮಾನಿಸಿ ಮಾತನಾಡಿದ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ.ಅಬ್ದುಲ್ ರಜಾಕ್ ನದಾಫ್, ಸಧ್ಯದ ದಿನಮಾನದಲ್ಲಿ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಹೋರಾಟ ಹಾಗೂ ಸಂಘಟನೆ ಅನಿವಾರ್ಯ ಆಗಿರುವುದು ತಮಗೆ ತಿಳಿದ ವಿಷಯ.

ಪಿಂಜಾರ್ ಸಮಾಜದ ಶ್ರೇಯೋಭಿವೃದ್ಧಿಗೆ ಸಂಘಟನೆಯ ಮೂಲಕ ಘನ ಸರ್ಕಾರದ ಗಮನ ಸೆಳೆಯುವುದು ಅವಶ್ಯಕ ಹಾಗೂ ಅನಿವಾರ್ಯ. ಈ ನಿಟ್ಟಿನಲ್ಲಿ ಸಮಾಜದ ಯುವ ಹೋರಾಟಗಾರ ಸಯ್ಯದ್ ನದಾಫ ಇವರು ತಮ್ಮ ಕ್ರಿಯಾಶೀಲತೆ ಮತ್ತು ಸಂಘಟನೆಗೆ ತಮ್ಮ ಕಾರ್ಯ ವೈಖರಿ ಹಾಗೂ ಸಮರ್ಪಣಾ ಭಾವನೆಯನ್ನು ಗೌರವಿಸಿ ತಮ್ಮನ್ನು ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ನವಲಗುಂದ ತಾಲೂಕು ಕಾರ್ಯಾಧ್ಯಕ್ಷರಾಗಿ ಸಯ್ಯದ್ ನದಾಫ
ಇವರ ನೇಮಕ ಬಹಳ ಸಂತೋಷ ವೆನಿಸುತ್ತದೆ ಎಂದು ಹೇಳಿದರು.

ತಮ್ಮ ಆಯ್ಕೆಯ ಉದ್ದೇಶ ಸಮುದಾಯದ ಸಂಘಟನೆ ಹಿನ್ನೆಲೆ, ಹೋರಾಟ, ಸಂಘಟನ ಚಾತುರ್ಯ ಹಾಗೂ ನಾನಾ ಜವಾಬ್ದಾರಿ ನಿರ್ವಹಣೆ ಮೂಲಕ ಈಗಾಗಲೇ ತಾಲ್ಲೂಕಿನಲ್ಲಿ ಗುರುತಿಸಿಕೊಂಡವರು ಎಂದು ಡಾ. ಅಬ್ದುಲ್ ರಜಾಕ್ ಹೇಳಿದರು.

ಇನ್ನೂ ಮಹಾಮಂಡಳದ ಕಾರ್ಯಾಧ್ಯಕ್ಷರಾಗಿ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿದ ಸಯ್ಯದ್ ನದಾಫ್, ಹೋರಾಟದ ಜೊತೆ ತಾಲ್ಲೂಕಿನಲ್ಲಿ ಸಂಘಟನೆಗೆ ಒತ್ತು ನೀಡಲಾಗುವುದು, ಅಷ್ಟೇ ಅಲ್ಲ ಈ ತಾಲೂಕು ಕಾರ್ಯಧ್ಯಕ್ಷ ಹುದ್ದೆ ಸಂಘಟನ ಕಾರ್ಯಕ್ಕೆ ವರದಂತೆ ಹೌದು. ಹಾಗಾಗಿ ಮಹಾಮಂಡಳದ ಪದಾಧಿಕಾರಿಗಳೊಂದಿಗೆ ಹೋರಾಟದ ಚಟುವಟಿಕೆಗಳೊಂದಿಗೆ ಸಂಘಟನೆಗೆ ಒತ್ತು ನೀಡುವ ಹೊಣೆಗಾರಿಕೆ ಹೆಚ್ಚಾಗಿರುತ್ತದೆ.
ಎಂದರು.

ಸಮುದಾಯದ ಸಂಘಟನೆ ಮಹಾಮಂಡಳದ ಸಿದ್ಧಾಂತ ಪ್ರತಿ ಪಾದಿಸಿ ಯುವಜನತೆ ಸೇರಿದಂತೆ ತಳಮಟ್ಟದಿಂದ ಸಮುದಾಯವನ್ನು ಕಟ್ಟಿ ಗಟ್ಟಿಗೊಳಿಸಿ ಸಂಘಟನೆ ಬಲಪಡಿಸುತ್ತೇನೇ ಎಂದು ಸಯ್ಯದ್ ಹೇಳಿದರು.

ಈ ಸಂದರ್ಭದಲ್ಲಿ ಸಮುದಾಯದ ಹಿರಿಯರಾದ ಖಾದರಸಾಬ್ ನದಾಫ್, ಪೀರಸಾಬ್ ನದಾಫ್, ನಬಿಸಾಬ ನದಾಫ್, ರಾಜು ನದಾಫ್, ಬಸನಗೌಡ ಪಾಟೀಲ್, ರಾಜು ಕೊಣ್ಣೂರ್ ಹಾಗೂ ಸಮುದಾಯದ ಹಿರಿಯರು, ಮುಖಂಡರು ಉಪಸ್ಥಿತರಿದ್ದರು.

ಗುಜರಾತ್‌ನ ಹನುಮ ದೇಗುಲಕ್ಕೆ ಅಂಜನಾದ್ರಿಯ ಶಿಲೆ, ಮೂರ್ತಿ ಒಯ್ದ ರಾಜ್ಯಪಾಲರು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಗುಜರಾತ್‌ನ ಆನಂದ್ ಜಿಲ್ಲೆಯ ರಾಜ್ಯಪಾಲರ ಸ್ವಗ್ರಾಮ ಲಂಬಾವೇಲಾದಲ್ಲಿ ನಿರ್ಮಾಣ ಆಗುತ್ತಿರುವ ಆಂಜನೇಯನ ದೇಗುಲಕ್ಕೆ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶಿಲೆ ಹಾಗೂ ಹನುಮ ಮೂರ್ತಿಯನ್ನು ರಾಜ್ಯಪಾಲ ವಜೂಭಾಯಿ ರೂಢಬಾಯಿ ವಾಲಾ ತೆಗೆದುಕೊಂಡು ತೆರಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ರಾಮಭಕ್ತರು ಎಷ್ಟಿದ್ದಾರೊ, ಅಷ್ಟೇ ಹನುಮಭಕ್ತರೂ ಇದ್ದಾರೆ. ಅಂತೆಯೇ ಹನುಮನಿಗೆ ನಿತ್ಯಪೂಜೆ, ಭಕ್ತಕೋಟಿ ನಡೆದುಕೊಳ್ಳುತ್ತಾರೆ. ನಮ್ಮ ಸ್ವಗ್ರಾಮದಲ್ಲಿ ನಿರ್ಮಾಣ ಆಗುತ್ತಿರುವ ಆಂಜನೇಯನ ದೇವಸ್ಥಾನಕ್ಕೆ ಹನುಮ ಜನಿಸಿದ ಸ್ಥಳ ಅಂಜನಾದ್ರಿಯ ಶಿಲೆ, ಮೂರ್ತಿಯನ್ನು ಒಯ್ಯಲಾಗುತ್ತಿದೆ ಎಂದರು.

ನಿನ್ನ ಕೆಲಸವನ್ನು ನಿಷ್ಕಲ್ಮಶವಾಗಿ ಮಾಡು, ಪ್ರತಿಫಲವನ್ನು ಭಗವಂತನಿಗೆ ಬಿಡು ಎನ್ನುವುದಕ್ಕೆ ಮಾರುತಿ ಸಾಕ್ಷಿ. ಇಲ್ಲಿನ ಅಂಜನಾದ್ರಿ ಪೂಜಾ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಲಾರೆ. ಇಲ್ಲಿನ ಆಡಳಿತ ಅದನ್ನು ಬಗೆ ಹರಿಸುತ್ತದೆ ಎಂದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಎಸ್ಪಿ ಡಿ. ಶ್ರೀಧರ್, ಸಂಸದ ಸಂಗಣ್ಣ ಕರಡಿ, ಶಾಸಕ ಪರಣ್ಣ ಮುನವಳ್ಳಿ, ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಇದ್ದರು.

ಗಣರಾಜ್ಯೋತ್ಸವದ ಅಂಗವಾಗಿ ಜೆಸ್ಕಾಂ ಕ್ರೀಡಾಕೂಟಕ್ಕೆ ಚಾಲನೆ

0

ವಿಜಯಸಾಕ್ಷಿ ಸುದ್ದಿ ಕಾರಟಗಿ
ಪಟ್ಟಣದ ಕೆಪಿಟಿಸಿಎಲ್ ಮತ್ತು ಜೇಸ್ಕಾಂ ವತಿಯಿಂದ ಕಾರಟಗಿ ಉಪವಿಭಾಗದ ಆವರಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಅಧಿಕಾರಿಗಳ ಮತ್ತು ನೌಕರರು ಹಾಗೂ ಗುತ್ತಿಗೆದಾರರು ಮತ್ತು ಗ್ರಾಮ-ವಿದ್ಯುತ್-ಪ್ರತಿನಿಧಿಗಳ ಉಪಸ್ಥಿತಿಯಲ್ಲಿ 2021ನೇ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅರುಣ್ ಕುಮಾರ್ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಕ್ರೀಡಾಕೂಟವನ್ನು ಕ್ರಿಕೆಟ್ ಆಡುವುದರ ಮೂಲಕ ಪ್ರಾರಂಭಿಸಲಾಯಿತು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಾಗರಾಜ ಕುರೇಕೊಪ್ಪ ಮತ್ತು ಗಂಗಾವತಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಲ್ಲಾಭಕ್ಷಿ ಗುತ್ತಿಗೆದಾರರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (659) ಅಧ್ಯಕ್ಷ ನರಸಪ್ಪ. ಮತ್ತು ನವಲಿ ಶಾಖಾಧಿಕಾರಿಗಳಾದ ನಾಗಪ್ಪ, ಶ್ರೀರಾಮನಗರದ ಪ್ರಸಾದ್ ಮತ್ತು ಶಂಕ್ರಮ್ಮ ಪ್ರಭಾವತಿ ಕ್ರೀಡಾಕೂಟದಲ್ಲಿ ಎಲ್ಲಾ ಕೆಪಿಟಿಸಿಎಲ್ ಮತ್ತು ಜೆಸ್ಕಾಂ ಸಿಬ್ಬಂದಿ ವರ್ಗ ಲೈನ್ ಮ್ಯಾನ್ ಗಳು ಭಾಗವಹಿಸಿದ್ದರು.

ಡಿಕೆಶಿಗೆ ಜನ ಬೆಂಬಲವಿಲ್ಲ, ಸಿದ್ರಾಮಯ್ಯನವರೇ ಅವರ ಕಾರ್ಯಶೈಲಿ ಒಪ್ಪುತ್ತಿಲ್ಲ: ಸಂಸದೆ ಶೋಭಾ

ವಿಜಯಸಾಕ್ಷಿ ಸುದ್ದಿ, ಮಂಗಳೂರು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೋತು, ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಹಾಗಾಗಿ ಡಿಕೆಶಿ ಸಿದ್ದರಾಮಯ್ಯ ಆತಂಕಗೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಕುಟಕಿದರು.

ಮಂಗಳೂರಿನಲ್ಲಿ ಈ ಮೇಲಿನಂತೆ ಹೇಳಿದ ಅವರು, ಕೊರೊನಾದಂತಹ ಸಂದಿಗ್ದ ಸ್ಥಿತಿಯಲ್ಲಿಯೂ ಬಿಜೆಪಿ ನೇತೃತ್ವದ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಅನಾವಶ್ಯಕವಾದ ಆರೋಪ ಮಾಡುತ್ತಿದೆ ಎಂದು ಆರೋಪಿಸಿದರು.

ಡಿಕೆಶಿ ಬಿಜೆಪಿ ಯಾತ್ರೆ ಅನುಸರಿಸೋಕೆ ಹೋಗಿದ್ದಾರೆ. ಅವರಿಗೆ
ಜನಬೆಂಬಲ‌ವಿಲ್ಲ. ಸಿದ್ದರಾಮಯ್ಯನವರೇ ಡಿಕೆಶಿ ಕಾರ್ಯಶೈಲಿ ಒಪ್ಪುತ್ತಿಲ್ಲ.
ಕಾಂಗ್ರೆಸ್ ನಲ್ಲಿ ಗೊಂದಲವಿದ್ದು,
ಗೊಂದಲ ಮರೆಮಾಚಲು ಬಿಜೆಪಿ ಮೇಲೆ ಅನಗತ್ಯ ಆರೋಪ ಮಾಡುತ್ತಿದೆ ಎಂದು ದೂರಿದರು.

ಸಿದ್ದರಾಮಯ್ಯ ಗೋಮಾಂಸ ಸೇವನೆ ಹೇಳಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದರು, ಒಂದು ಸಮುದಾಯವನ್ನು ಓಲೈಸಲು ಸಿದ್ದರಾಮಯ್ಯ ಪ್ರಯತ್ನ ಪಡುತ್ತಿದ್ದು, ನಾಟಕವಾಡುತ್ತಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರೇ ಗೊಂದಲದಲ್ಲಿದ್ದಾರೆ ಎಂದು
ಹೇಳಿದರು.

ಬೈಕ್ ಗೆ ಟಿಪ್ಪರ್ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು: ಗ್ರಾಮಸ್ಥರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ

ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ.

ಅಡವಿಸೋಮಾಪೂರ ಗ್ರಾಮದ ಪೀರಸಾಬ ಕುಮನೂರ (55) ಸ್ಥಳದಲ್ಲೆ ಮೃತಪಟ್ಟಿರುವ ದುರ್ದೈವಿ.

ರಸ್ತೆ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ BSCPL ಒಡೆತನದ ವಾಹನ ಇದಾಗಿದ್ದು, ನಿತ್ಯ ಸಾಮರ್ಥ್ಯಕ್ಕಿಂತ ಮಿತಿಮೀರಿ ಮಣ್ಣು ಸಾಗಿಸುತ್ತಿವೆ. ಟಿಪ್ಪರ್ ಗಳ ಹಾವಳಿಯಿಂದ ಇಲ್ಲಿನ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.

ಇನ್ನು ಬೈಕ್ ಗೆ ಡಿಕ್ಕಿ ಹೊಡೆದದ್ದರಿಂದ ಸ್ಥಳೀಯರು ರಸ್ತೆ ತಡೆ ನಡೆಸಿ
BSCPL ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.

error: Content is protected !!