Home Blog Page 3204

ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ – ಶೋಭಾ ಕರಂದ್ಲಾಜೆ

0

ಬೆಂಗಳೂರು;- ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ, ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದರು. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ತಾವಿಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದರು.

ನಾನು ಕೇಂದ್ರದಲ್ಲೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ನನಗೆ ಯಾವ ವರಿಷ್ಠರಿಂದಲೂ, ಯಾವ ಸೂಚನೆಯೂ ಬಂದಿಲ್ಲ. ಯಾವ ಚರ್ಚೆಯೂ ಆಗಿಲ್ಲ. ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ನನ್ನ ಇಚ್ಛೆ ಇರುವುದು ಮುಂದಿನ ಬಾರಿಯೂ ಮೋದಿ ಪ್ರಧಾನಿ ಆಗಬೇಕು ಎಂಬುದು. ಆ ಕುರಿತೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ: ಸಿಎಂ ಸಿದ್ದರಾಮಯ್ಯ

0

ಮೈಸೂರು: ಇದು ಎಟಿಎಂ ಸರಕಾರ ಎಂಬ ಬಿಜೆಪಿ ಟ್ವೀಟ್ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ? ಕೋಟ್ಯಾಂತರ ರೂಪಾಯಿ ಹಣದಲ್ಲಿ ಆಪರೇಷನ್ ಕಮಲ ಮಾಡಿದವರು ನಮ್ಮ ಬಗ್ಗೆ ಮಾತಾಡುತ್ತಾರೆ ? ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ.

ಬಿಜೆಪಿಯವರು ಸಾಲ ಮಾಡಿ ಅರ್ಥಿಕವಾಗಿ ರಾಜ್ಯ ದಿವಾಳಿ ಮಾಡಿ ಹೋಗಿದ್ದಾರೆ. ಹಣ ಇರದಿದ್ದರು ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡೀಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿತ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ. ಹೈಕಮಾಂಡ್ ಗೆ ದುಡ್ಡು ಕಳಿಸುತ್ತೇವೆ ಎಂಬುದು ಸುಳ್ಳು. ನಾವು ಯಾರಿಗೂ ಒಂದು ಪೈಸೆ ಕೊಟ್ಟಿಲ್ಲ ಎಂದು ಹೇಳಿದರು.

ಮುಸ್ಲಿಂ ಯುವಕರಿಂದ ಪಾಕ್ ಪ್ರೇಮ: ಯುವಕರ ದುಷ್ಕೃತ್ಯಕ್ಕೆ ವ್ಯಾಪಕ ಖಂಡನೆ

0

ಬಾಗಲಕೋಟೆ:- ಜಿಲ್ಲೆಯ ಜಮಖಂಡಿ ನಗರದ ಮುಸ್ಲಿಂ ಯುವಕರು ವೈರಿ ರಾಷ್ಟ್ರ ಪಾಕಿಸ್ತಾನ ಪರ ಪ್ರೀತಿ ತೋರಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನಡೆದ ಪಾಕಿಸ್ತಾನದ ಹಾಗೂ ಅಫಘಾನಿಸ್ತಾನ ಕ್ರಿಕೆಟ್ ಪಂದ್ಯ ವೀಕ್ಷಣೆಗಾಗಿ ಜಮಖಂಡಿ ನಗರದ ಹರ್ಷಿದ್ ಅವಟಿ ಹಾಗೂ ಸ್ನೇಹಿತ ಯುವಕರು ಚೆನೈ ಗೆ ತೆರಳಿದ್ರು. ಅಲ್ಲಿ ವೈರಿರಾಷ್ಟ್ರ ಪಾಕಿಸ್ತಾನದ ಕ್ರಿಕೆಟ್ ಟೀಶರ್ಟ್ ಧರಿಸಿ, ಮುಖಕ್ಕೆ ಅಫಘನಿಸ್ತಾನದ ಧ್ವಜದ ಚಿತ್ರ ಹಾಕಿಕೊಂಡು ಸಂಭ್ರಮಿಸಿದ್ರು.

ನಂತ್ರ ತಾವು ಹಾಕಿಕೊಂಡಿರುವ ಪಾಕ್ ಪಾಕ್ ಟೀಶರ್ಟ್ ಇರುವ ಪೊಟೊಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ರು. ಈ ಯುವಕರ ಕಿಡಿಗೇಡಿತನಕ್ಕೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳು ಹಾಗೂ ಹಿಂದೂಪರ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲೇ ಈ ಕಿಡಿಗೇಡಿ ಯುವಕರ ವಿರುದ್ಧ ಆಕ್ರೋಶ ಹೊರಹಾಕಿದ್ರು. ಟಿಪ್ಪು ಮೇಲಿನ ಪ್ರೇಮ ಒಕೆ ಪಾಕಿಸ್ತಾನ ಪ್ರೇಮ ಯಾಕೆ, ಗುಲಾಮರೆ ನಿಮ್ಮ ಬಾಂದವರ ಪ್ರೇಮ ಯಾರ ಮೇಲಿದೆ ಎಂಬ ಬರಹಳನ್ನ ಬರೆದು ಕಿಡಿಗೇಡಿ ಯುವಕರಿಗೆ ತರಾಟೆಗೆ ತಗೆದುಕೊಂಡಿದ್ದಾರೆ.

ಈ ದೇಶದಲ್ಲಿದ್ದು ಪಾಕಿಸ್ತಾನದ ಕ್ರಿಕೆಟ್ ಟಿ-ಶರ್ಟ್ ಧರಿಸಲು ನಿಮಗೆ ನಾಚಿಕಯಾಗಲ್ವಾ? ನೀವು ಹುಷಾರ್ ಆಗಿರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಧ್ಯ ಕಿಡಿಗೇಡಿ ಯುವಕರ ವಿರುದ್ಧ ಜಿಲ್ಲೆಯ ಹಿಂದೂ ಸಂಘಟನೆಗಳು ವ್ಯಾಪಕ ಖಂಡನೆ ಮಾಡಿದ್ದಲ್ಲದೇ, ದೇಶದ್ರೋಹದಡಿ ಇವ್ರ ವಿರುದ್ಧ ದೂರು ದಾಖಲಿಸಿ ಎಂದು ಪೊಲೀಸ್ ಇಲಾಖೆಗೆ ಆಗ್ರಹಿಸುತ್ತಿದ್ದಾರೆ.

ಅನಾವಶ್ಯಕ ವಿವಾಧಗಳಿಗೆ ಮಾಧ್ಯಮಗಳು ಪ್ರಚಾರ ಕೊಡ್ತಿದ್ದಾರೆ: ಸಚಿವ ಎಚ್ ಕೆ ಪಾಟೀಲ್

0

ಗದಗ: ಯಾವುದಾದರೂ ಜಿಲ್ಲೆ ಮಾಡೋದ್ರಿಂದ ಭೂಮಿ ಬೆಲೆ ಏರಿಕೆ ಆಗಲ್ಲ ಎಂದು ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಿಸುವ ವಿಚಾರ ಕುರಿತು ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಜಿಲ್ಲೆಯಲ್ಲಿ ಅಭಿವೃದ್ಧಿ ಆಗುತ್ತೆ, ಯಾವ ಜಿಲ್ಲೆಯಲ್ಲಿ ರಚನಾತ್ಮಕ ಕೆಲಸ ಆಗುತ್ತೆ ಅಲ್ಲಿ ಆಸ್ತಿ ಮೌಲ್ಯ ಜಾಸ್ತಿಯಾಗಿ ಆಗಸೂಕ್ತವಾದ ಬೆಲೆ ಏರಿಕೆ ಆಗುತ್ತೆ.

ಆದ್ರೆ ಅನಾವಶ್ಯಕ ವಿವಾಧಗಳಿಗೆ ಮಾಧ್ಯಮಗಳು ಪ್ರಚಾರ ಕೊಡ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಜಿಲ್ಲೆ ಹೆಚ್ಚು ಕಡಿಮೆ ಆಗುವುದರಿಂದ ಬೆಂಗಳೂರು ಸಮೀಪ ದೂರ ವ್ಯಾತ್ಯಾಸವಾಗುತ್ತಾ..? ವಿಷಯ ಬರಲಿ, ಚರ್ಚೆ ಆಗಲಿ ಆಗ ರಿಯಾಕ್ಷನ್ ಮಾಡೋಣ. ಬೇಕಾದ್ರೆ ಸ್ವಾರ್ಥದ ಕಾರಣಗಳು ಏನು ಅಂತ ಡಿಕೆಶಿ, ಎಚ್ ಡಿಕೆ ಅವರನ್ನೇ ಕೇಳಿ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು

ರಾಮನಗರ ಜಿಲ್ಲೆಗೆ ಏನು ಮಾಡಬೇಕು ಎಂಬ ನೀಲಿ ನಕ್ಷೆ ಇದೆ: ಡಿ.ಕೆ.ಶಿವಕುಮಾರ್

0

ಮೈಸೂರು: ಕನಕಪುರದ ಜನ ತಮ್ಮ ಆಸ್ತಿಗಳನ್ನು ಮಾರಿಕೊಳ್ಳಬೇಡಿ. ಆಸ್ತಿ, ಜಮೀನು ಉಳಿಸಿಕೊಳ್ಳುವಂತೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ರಾಮನಗರ ಜಿಲ್ಲೆಯಲ್ಲಿರುವ ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕನಕಪುರವನ್ನು ಬೆಂಗಳೂರಿಗೆ ಸೇರಿಸುವುದಾಗಿ ಹೇಳಿರುವ ಡಿ.ಕೆ.ಶಿವಕುಮಾರ್ ಹೇಳಿಕೆ ಹಿಂದೆ ದುರುದ್ದೇಶವಿದೆ ಎಂದು ಬೇನಾಮಿ ಆಸ್ತಿ ಬಾಂಬ್ ಸಿಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್,

ಕುಮಾರಸ್ವಾಮಿ ಅವರು ಸಿಎಂ ಆಗಿದ್ದವರು, ಪ್ರಜ್ಞಾವಂತರು ಎಂದಿಕೊಂಡಿದ್ದೆ. ಆದರೆ ಅವರಿಗೆ ಕಾಮನ್ ಸೆನ್ಸ್ ಇಲ್ಲ.

ದೇಶಕ್ಕೆ ವಿದ್ಯಾವಂತರು, ಬುದ್ಧಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಬೇಕು ಎಂದು ಟಾಂಗ್ ನೀಡಿದ್ದಾರೆ. ರಾಮನಗರ, ಕನಕಪುರ, ಚನ್ನಪಟ್ಟಣದ ಜನ ಭೂಮಿಯನ್ನು ಮಾರಿಕೊಂಡು ಹೋಗಬೆಡಿ.

ಮುಂದಿನ ದಿನಗಳಲ್ಲಿ ಒಳ್ಳೆ ಬೆಲೆ ಬರಲಿದೆ ಎಂದು ಹೇಳಿದ್ದೇನೆ. ಕೋವಿಡ್ ನಂತರ ನಮ್ಮ ಜನ ಭೂಮಿ ಮಾರಿಕೊಳ್ಳುತ್ತಿದ್ದಾರೆ. ಇದು ನಿಲ್ಲಬೇಕು. ಕನಕಪುರ ಮಾತ್ರವಲ್ಲ ರಾಮನಗರ, ಚನ್ನಪಟ್ಟಣ ಎಲ್ಲವೂ ಬೆಂಗಳೂರಿಗೆ ಸೇರಿದ್ದು. ನಾವೆಲ್ಲರೂ ಬೆಂಗಳೂರಿನವರೇ.

ರಾಮನಗರ ಜಿಲ್ಲೆಗೆ ಏನು ಮಾಡಬೇಕು ಎಂಬ ನೀಲಿ ನಕ್ಷೆ ಇದೆ. ರಾಮನಗರ ಬೆಂಗಳೂರಿಗೆ ಸೇರಿದ್ದು. ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

ದಾರುಣ ಘಟನೆ: ಆಟವಾಡುತ್ತಿದ್ದ 14 ತಿಂಗಳ ಮಗು ಕಾಲುವೆಗೆ ಬಿದ್ದು ಸಾವು

0

ಕೊಪ್ಪಳ: ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದ ಧಾರುಣ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ನಲ್ಲಿ ನಡೆದಿದೆ.

ವಿಜಯೇಂದ್ರ ಮೃತ ಮಗು. ಶಿವಾನಂದ ಹಾಗೂ ಶಿಲ್ಪಾ ದಂಪತಿಯ ಮಗು ಇದಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾಲುವೆಗೆ ಬಿದ್ದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ, ದಂಧೆಗೆ ವೈದ್ಯರೇ ಸಾಥ್

0

ಬೆಂಗಳೂರು;- ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ, ಮಂಡ್ಯ ಜಿಲ್ಲೆ ಕೂಳೇನಹಳ್ಳಿಯ ನಯನ್‌ಕುಮಾರ್, ಪಾಂಡವಪುರ ತಾಲೂಕಿನ ಸುಂಕದನ್ನೂರು ಗ್ರಾಮದ ನವೀನ್‌ಕುಮಾರ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಟಿ.ಎಂ.ವೀರೇಶ್ ಬಂಧಿತರು. ಈ ದಂಧೆಯಲ್ಲಿ ವೈದ್ಯರು ಸಹ ಇದ್ದು, 15 ರಿಂದ 20 ಸಾವಿರ ರೂಪಾಯಿ ಪಡೆದುಕೊಂಡು ಈ ದಂಧೆಗೆ ಸಾಥ್ ನೀಡುತ್ತಿದ್ದರು.

ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ದಂಧೆ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದ ಇನ್‌ಸ್ಪೆಕ್ಟರ್‌ ಎಂ.ಪ್ರಶಾಂತ್ ಅವರು, ಕೂಡಲೇ ಪಿಎಸ್‌ಐ ಮಂಜುನಾಥ್‌, ಬೈಯಪ್ಪನಹಳ್ಳಿ ಠಾಣೆ ಪಿಎಸ್‌ಐ ಮಂಜುನಾಥ್, ಎಎಸ್‌ಐಗಳಾದ ಗೋವಿಂದರಾಜು, ನಾಗಯ್ಯ ಒಳಗೊಂಡ ತಂಡ ರಚಿಸಿಕೊಂಡು ದಂಧೆಕೋರರ ಬೆನ್ನುಹತ್ತಿದ್ದಾಗ ಆರೋಪಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ.

ಇತ್ತೀಚೆಗೆ ಹಳೇ ಮದ್ರಾಸ್‌ ರಸ್ತೆ ಕಡೆಯಿಂದ ಗರ್ಭಿಣಿಯನ್ನು ಪರೀಕ್ಷೆಗೆ ಕರೆದೊಯ್ಯಲು ವೀರೇಶ್ ತಂಡ ಬರುವ ಖಚಿತ ಮಾಹಿತಿ ಪಿಐ ಪ್ರಶಾಂತ್ ತಂಡಕ್ಕೆ ಸಿಕ್ಕಿದೆ. ತಕ್ಷಣವೇ ಕಾರ್ಯಾಚರಣೆಗಿಳಿದ ಪೊಲೀಸರು, ಹಳೇ ಮದ್ರಾಸ್‌ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಅಲ್ಲಿಗೆ ಬಂದ ದಂಧೆಕೋರರು, ಪೊಲೀಸರನ್ನು ಕಂಡು ಭೀತಿಯಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಇದರಿಂದ ಮತ್ತಷ್ಟು ಅನುಮಾನಗೊಂಡ ಪೊಲೀಸರು, ಕೂಡಲೇ ಆ ಕಾರನ್ನು ಬೈಕ್‌ಗಳಲ್ಲಿ ಸ್ಪಲ್ಪದೂರ ಬೆನ್ನಹತ್ತಿ ಹೋಗಿ ತಡೆದಿದ್ದಾರೆ. ಬಳಿಕ ಕಾರಿನಲ್ಲಿದ್ದ ಶಿವಲಿಂಗೇಗೌಡ, ನಯನ್ ಹಾಗೂ ಗರ್ಭಿಣಿಯನ್ನು ಠಾಣೆ ಕರೆತಂದು ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ.

ಬಳಿಕ ಈ ಆರೋಪಿಗಳ ಮಾಹಿತಿ ಆಧರಿಸಿ ಮಂಡ್ಯ-ಪಾಂಡಪುರ ರಸ್ತೆಯಲ್ಲಿದ್ದ ಅಲೆಮನೆ ಮೇಲೆ ಪೊಲೀಸರು ಕ್ಷಿಪ್ರ ದಾಳಿ ನಡೆಸಿದಾಗ ಇನ್ನುಳಿದ್ದಿಬ್ಬರು ಸೆರೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ದಂಧೆಕೋರರ ಅಡ್ಡೆಯಾದ ಪಾಂಡಪುರ ರಸ್ತೆಯ ಅಲೆಮನೆ ಮೇಲೆ ದಾಳಿ ನಡೆಸಿದಾಗ ಐದಕ್ಕೂ ಹೆಚ್ಚಿನ ಗರ್ಭೀಣಿಯರು ಪತ್ತೆಯಾಗಿದ್ದಾರೆ. ಆ ಮಹಿಳೆಯರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಈ ಹೆಣ್ಣು ಭ್ರೂಣ ಲಿಂಗ ಪತ್ತೆ ದಂಧೆಗೆ ಕೆಲ ವೈದ್ಯರು ಸಹ ಸಾಥ್ ಕೊಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಚಿವ ಸತೀಶ್‌ ಜಾರಕಿಹೊಳಿ ಮೂಲಕ ನನ್ನ ಬಂಡಾಯಕ್ಕೆ ಉತ್ತರ ಸಿಕ್ಕಿದೆ – ರಮೇಶ್‌ ಜಾರಕಿಹೊಳಿ

0

ಬೆಳಗಾವಿ;- ನನ್ನ ಬಂಡಾಯಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಮೂಲಕ ಉತ್ತರ ಸಿಕ್ಕಿದೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,, ಈ ಹಿಂದೆ ನಾನು ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದಾಗ ಜನ ನನ್ನನ್ನು ಬೈಯ್ದಿದ್ದರು. ನನ್ನನ್ನು ಬೈಯ್ದಿದ್ದವರಿಗೆ ಈಗ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮೂಲಕ ಉತ್ತರ ಸಿಕ್ಕಿದೆ. ನಾನು ಏಕೆ ಬಂಡಾಯವೆದ್ದಿದ್ದೆ ಎಂಬುದು ಗೊತ್ತಾಗಿದೆ ಎಂದರು.

ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ವೇಳೆಯೇ ಸತೀಶ್‌ ಜಾರಕಿಹೊಳಿ ಪರಿಸ್ಥಿತಿ ಈ ರೀತಿಯಾಗಿದೆ. ಇನ್ನು ಬೇರೆಯವರು ಮುಖ್ಯಮಂತ್ರಿಯಾದರೆ ಅವರ ಪರಿಸ್ಥಿತಿ ಏನು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದುಕೊಳ್ಳುವ ರೀತಿ ನೋಡಿದರೆ ಅವರು ಮೊದಲಿನಂತಿಲ್ಲ. ಹಾಗಾಗಿ, ಸಿದ್ದರಾಮಯ್ಯನವರಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಮಾತಿನ ದರ್ಪ, ಗಂಭೀರತೆ ಈಗ ಕಾಣುತ್ತಿಲ್ಲ. ಏಕೆ ಹೀಗೆ ಮಾಡುತ್ತಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ, ಅವರ ಬಗ್ಗೆ ಅಪಾರ ಗೌರವವಿದೆ. ಬಹುಶಃ ಹೈಕಮಾಂಡ್‌ ಹಾಗೂ ಕೆಲವರು ಅವರನ್ನು ಮುಕ್ತವಾಗಿ ಬಿಟ್ಟಿಲ್ಲ ಎಂದು ದೂರಿದರು. ಡಿಸಿಎಂ ಡಿ.ಕೆ.ಶಿವಕುಮಾರ ಇರುವವರೆಗೂ ನಮಗೆ ಪ್ರತಿಪಕ್ಷವಾಗಿ ವರದಾನ ಎಂದು ಇದೇ ವೇಳೆ ತಿಳಿಸಿದರು.

ಹಳ್ಳಿಕಾರ್ ವರ್ತೂರು ಸಂತೋಷ್ ಅರೆಸ್ಟ್; FSL ವರದಿ ಬಳಿಕ ಮತ್ತೊಂದು ಆಯಾಮದಲ್ಲಿ ತನಿಖೆ

0

ಬೆಂಗಳೂರು;- ಬಿಗ್ ಬಾಸ್ ಸೀಸನ್ 10 ರ ಸ್ಪಪ್ಧಿಯಾಗಿದ್ದ ವರ್ತೂರ್ ಸಂತೋಷ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ FSL ವರದಿ ಬಂದ ಬಳಿಕ ಮತ್ತೊಂದು ಆಯಾಮದಲ್ಲಿ ತನಿಖೆ ನಡೆಸಲಾಗುವುದು.

ಒಂದು ವೇಳೆ ಇದು ಹುಲಿಯದ್ದೇ ಉಗುರು ಅಂತ ಎಫ್​ಎಸ್​ಎಲ್​ ವರದಿ ಬಂದರೇ ವರ್ತೂರ್​ ಸಂತೋಷ್​​ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಪ್ರಕರಣದ ತನಿಖೆ ಮತ್ತೊಂದು ಆಯಾಮದಲ್ಲಿ ನಡೆಯಲಿದೆ.

ಎಫ್​ಎಸ್​ಎಲ್​ ವರದಿಯಲ್ಲಿ ಎಷ್ಟು ವರ್ಷದ ಹುಲಿ ಉಗುರು? ಯಾವ ಜಾತಿಯ ಹುಲಿ ? ಸೇರಿದಂತೆ ಮತ್ತಿತ್ತರ ಮಾಹಿತಿ ಲಭ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕಗ್ಗಲಿಪುರ ಅರಣ್ಯಾಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಹುಲಿ ಉಗುರನ್ನು ಸಂತೋಷ್​ಗೆ ನೀಡಿದ್ದು ಯಾರು? ಯಾರು ಮಾರಿದರು? ಇದರ ಮೂಲ ಎಲ್ಲಿ ಎಂಬ ಮಾಹಿತಿಗಳನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ.

ಎಫ್​​ಎಸ್​​ಎಲ್​ ವರದಿ ಮತ್ತು ತಾವು ನಡೆಸಿದ ತನಿಖೆಯ ವರದಿಯನ್ನು ಕಗ್ಗಲಿಪುರ ಅರಣ್ಯಾಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಹುಲಿ ಸಂರಕ್ಷಣಾ ಪ್ರಾಧಿಕಾರಗಳಿಗೆ ಹಸ್ತಾಂತರ ಮಾಡಲಿದ್ದಾರೆ. ಈ​​ ವರದಿಗಳನ್ನು ಆಧರಿಸಿ ಪ್ರಾಧಿಕಾರಗಳು ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳ ದತ್ತಾಂಶವನ್ನು ಪರಿಶೀಲನೆ ಮಾಡಲಿದ್ದಾರೆ.

ಬರದ ಪರಿಸ್ಥಿತಿ: ಮಳೆರಾಯನಿಗಾಗಿ ಕತ್ತೆ ಮದುವೆ ಮಾಡಿದ ರೈತರು

0

ಗದಗ;- ಮಳೆಯಿಲ್ಲದೇ ಜಿಲ್ಲೆಯಲ್ಲಿ ಬರ ತಾಂಡವವಾಡುತ್ತಿದೆ. ಆದರೆ ಮಳೆಗಾಗಿ ನಡೆಯುತ್ತಿರುವ ಪ್ರಾರ್ಥನೆ ಮಾತ್ರ ಇನ್ನೂ ನಿಂತಿಲ್ಲ. ರೈತರು ಹಿಂಗಾರು ಮಳೆಗಾಗಿ ವಿವಿಧ ಸಾಂಪ್ರದಾಯಿಕ ಆಚರಣೆಗಳ ಮೊರೆ ಹೋಗುತ್ತಿದ್ದಾರೆ. ಈಗ ಕತ್ತೆಗಳ ಮದುವೆ ಮಾಡಿದರೆ ಮಳೆರಾಯ ನಗುಬೀರಿ ಮಳೆ ಸುರಿಸಿ ತಂಪೆರೆಯುತ್ತಾನೆ ಎಂಬ ರೈತರ ನಂಬಿಕೆ ಇನ್ನೂ ಜೀವಂತವಾಗಿದೆ.

ಅಂದಹಾಗೆ ಗದಗ ತಾಲ್ಲೂಕು ತಿಮ್ಮಾಪೂರ ಗ್ರಾಮದಲ್ಲಿ ಮಳೆರಾಯನ ಕೃಪೆಗಾಗಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಹುಡೇದ ಲಕ್ಷ್ಮಿ ದೇವಸ್ಥಾನದಲ್ಲಿ ಕತ್ತೆಯ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಿದರು.

ಮದುವೆಯ ಹಿನ್ನೆಲೆಯಲ್ಲಿ ಸಾಂಪ್ರದಾಯದ ಪ್ರಕಾರ ಬಾಸಿಂಗವನ್ನು ಮಹಿಳೆಯರು ಹೂಗಾರರ ಮನೆಯಿಂದ ತಂದರೆ. ಪುರುಷರು ಅರಿಶಿಣ ಶಾಸ್ತ್ರವನ್ನು ಮಾಡಿ ಸುರುಗಿ ನೀರನ್ನು ಹಾಕಿದರು.
ಬಳಿಕ ಮಾಂಗಲ್ಯ ಧಾರಣೆ ಮಾಡಿ ಗ್ರಾಮಸ್ಥರು ಅಕ್ಷತೆಯನ್ನು ಹಾಕುವುದರ ಮೂಲಕ ಕತ್ತೆಗಳಿಗೆ ಸಾಂಪ್ರದಾಯಕವಾಗಿ ಮದುವೆ ಮಾಡಿ ಸಂಭ್ರಮಿಸಿದರು. ಮದುವೆ ನಂತರ ಕತ್ತೆಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಈ ಮೂಲಕ ಕತ್ತೆಗಳ ಮದುವೆ ನೋಡಿ ವರುಣನಿಗೆ ನಗು ಬಂದು ಧರೆಗೆ ಇಳಿಯುತ್ತಾನೆ. ಆ ಮೂಲಕ ಭೂಮಿತಾಯಿ ಮಡಿಲನ್ನು ತಂಪುಗೊಳಿಸಿ ಎಲ್ಲಾ ಸಕಲ ಜೀವರಾಶಿಗಳ ದಾಹ ನೀಗಿಸುತ್ತಾನೆ ಅಂತ ರೈತರು ನಂಬಿಕೆಯಾಗಿದೆ.

error: Content is protected !!