Home Blog Page 3216

ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ ಆರೋಪ; ಶ್ರೀರಾಮ ಸೇನೆಯಿಂದ ಶಾಲೆಗೆ ಮುತ್ತಿಗೆ, ಶಿಕ್ಷಕನ ಅಮಾನತ್ತಿಗೆ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ

ಒಂದೆಡೆ, ದೇಶದಾದ್ಯಂತ ಕೋಮುಗಲಭೆ ಪ್ರಕರಣಗಳು ಹೆಚ್ಚುತ್ತ, ಸಾರ್ವಜನಿಕರಿಗೆ, ಪೊಲೀಸ್ ಇಲಾಖೆಯವರಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ರಾಜ್ಯಾದ್ಯಂತ ಪ್ರತಿನಿತ್ಯ ಒಂದಿಲ್ಲೊಂದು ಇಂಥ ಕೋಮುಸೌಹಾರ್ದತೆ ಕದಡುವ ಪ್ರಕರಣಗಳು ವರದಿಯಾಗುತ್ತಿದ್ದು, ಗದಗದಲ್ಲಿ ಮಕ್ಕಳಿಗೆ ಶಾಂತಿ-ಸಹಬಾಳ್ವೆಯ ಪಾಠ ಹೇಳಬೇಕಿದ್ದ ಶಾಲಾ ಮುಖ್ಯೋಪಾಧ್ಯಾಯ ಒಬ್ಬರು ಮಕ್ಕಳಿಗೆ ಒಂದು ಧರ್ಮದ ಕುರಿತಾಗಿ ಪ್ರಬಂಧ ಬರೆಯಿಸಲು ಮುಂದಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಗದಗ ತಾಲೂಕಿನ ನಾಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ಪುಸ್ತಕವನ್ನು ನೀಡಿ, ಇದೇ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಎ.ಎಂ. ಬಿಜಾಪುರರ ವಿರುದ್ಧ ಶ್ರೀರಾಮ ಸೇನೆಯ ಆರೋಪಿಸಿ ಶಾಲೆಗೆ ನುಗ್ಗಿ ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹಮ್ಮದ್ ಪೈಗಂಬರ್ ಕುರಿತು ಉತ್ತಮ ಪ್ರಬಂಧ ಬರೆದ ವಿದ್ಯಾರ್ಥಿಗಳಿಗೆ ೫ ಸಾವಿರ ರೂ. ಬಹುಮಾನ ನೀಡುವದಾಗಿ ಘೋಷಿಸಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ, ಶಾಲೆಯಲ್ಲಿ ಇಸ್ಲಾಮೀಕರಣ, ಮತಾಂತರ ಮಾಡಲು ಹೊರಟಿದ್ದೀರಿ ಎಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಅಲ್ಲದೆ, ಶೈಕ್ಷಣಿಕ ಪಠ್ಯಪುಸ್ತಕದಲ್ಲಿ ಪೈಗಂಬರರ ಕುರಿತಾದ ಯಾವುದೇ ಪಠ್ಯವಿಲ್ಲ. ಸರ್ಕಾರವೂ ಇಂಥದೊಂದು ಸ್ಪರ್ಧೆ ಆಯೋಜಿಸಿ ಬಹುಮಾನ ನೀಡಿ ಎಂದು ನಿರ್ದೇಶನ ನೀಡಿಲ್ಲ. ಹೀಗಿದ್ದಾಗ, ಯಾವುದೇ ಆದೇಶವಿಲ್ಲದೇ ಕೋಮು ಸಂಘರ್ಷಕ್ಕೆ ಕಾರಣವಾಗಬಹುದಾದ ವಿಷಯದ ಬಗ್ಗೆ ಸ್ಪರ್ಧೆ ಏರ್ಪಡಿಸಿ, ಮಕ್ಕಳಲ್ಲಿ ಕೋಮು ದಳ್ಳುರಿಯ ಬೀಜ ಬಿತ್ತಲು ಹೊರಟಿದ್ದೇಕೆ ಎಂದು ಸೇನೆಯ ಕಾರ್ಯಕರ್ತರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಕೂಡಲೇ ಜಿಲ್ಲಾ ಪಂಚಾಯತ ಸಿಇಓ ಹಾಗೂ ಡಿಡಿಪಿಐ ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಬೇಕೆಂದು ಪಟ್ಟು ಹಿಡಿದರು ಎನ್ನಲಾಗಿದೆ. ಗಲಾಟೆ ನಡೆಯುತ್ತಿರುವ ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆಯ ಸಿಪಿಐ ಚಂದ್ರಶೇಖರ ಹರಿಹರ ಭೇಟಿ ನೀಡಿ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರ ಉತ್ತರದಿಂದ ಸಮಾಧಾನಗೊಳ್ಳದ ಶ್ರೀರಾಮ ಸೇನೆಯ ಕಾರ್ಯಕರ್ತರು ತಕ್ಷಣ ಮುಖ್ಯ ಶಿಕ್ಷಕ ಅಬ್ದುಲ್ ಹನೀಫ್‌ರನ್ನು ಅಮಾನತು ಮಾಡಬೇಕು ಮತ್ತು ಶಿಕ್ಷಣ ಇಲಾಖೆ ಹಾಗೂ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು.

ಶ್ರೀರಾಮ ಸೇನಾದ ವಿಭಾಗೀಯ ಸಂಚಾಲಕ ರಾಜು ಖಾನಪ್ಪನವರ, ಮುಖಂಡರಾದ ಮಹೇಶ್ ರೋಖಡೆ ಸೇರಿದಂತೆ ಹಲವು ಕಾರ್ಯಕರ್ತರಿದ್ದರು.

ದುರದ್ದೇಶ ಇಲ್ಲ

ಈ ಹಿಂದೆ ಡಾ, ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ ಸೇರಿದಂತೆ ಹಲವು ಮಹನೀಯರ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಇದರ ಹಿಂದೆ ಯಾವುದೇ ದುರದ್ದೇಶ ಇಲ್ಲ ಎಂದು ಮುಖ್ಯ ಶಿಕ್ಷಕ ಬಿಜಾಪುರ ಪ್ರತಿಕ್ರಿಯೆ ನೀಡಿದರು.

ಪೊಲೀಸರ ಕಾರ್ಯಾಚರಣೆ; ಗದಗನಲ್ಲಿ ಮೂವರು ಪಿಎಫ್ಐ ಕಾರ್ಯಕರ್ತರ ಬಂಧನ

0

ವಿಜಯಸಾಕ್ಷಿ ಸುದ್ದಿ, ಗದಗ

ಇತ್ತೀಚೆಗೆ ದೇಶದೆಲ್ಲೆಡೆ ಎಸ್ಡಿಪಿಐ ಹಾಗೂ ಪಿಎಫ್ಐ ಮುಖಂಡರ ಮೇಲೆ ಎನ್ಐಎ ತನಿಖಾ ತಂಡ ದಾಳಿ ಮಾಡಿ ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಗದಗ ಶಹರ ಪೊಲೀಸರು ಇಬ್ಬರನ್ನು, ಬೆಟಗೇರಿ ಪೊಲೀಸರು ಓರ್ವ ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಶಹರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಜಯಂತ ಗೌಳಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರಹಮತ್ ನಗರದ ನಿವಾಸಿ ರುಸ್ತುಂ, ಕಾಗದಗಾರ ಓಣಿಯ ಸರ್ಫರಾಜ್ ಹಾಗೂ ಬೆಟಗೇರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುಬ್ಬಾಪೂರಮಠ ಅವರ ನೇತೃತ್ವದಲ್ಲಿ ಸನಾವುಲ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಈಗಾಗಲೇ ರುಸ್ತುಂ ‌ಗೌಂಡಿ ಹಾಗೂ ಸರ್ಫರಾಜ್ ದಂಡಿನ ತಹಸೀಲ್ದಾರ್ ಅವರ ಮುಂದೆ ಹಾಜರು ಪಡಿಸಿಲಾಗಿದ್ದು, ತಹಸೀಲ್ದಾರ್ ಕಿಶನ್ ಕಲಾಲ ಅವರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಬೆಟಗೇರಿಯ ಸನಾವುಲ್ಲ್ ಶಲವಡಿ ಎಂಬಾತನನ್ನು ವಶಕ್ಕೆ ಪಡೆದಿರುವ ಬೆಟಗೇರಿ ಪೊಲೀಸರು, ತೀವ್ರ ವಿಚಾರಣೆ ನಡೆಸಿದ್ದು, ಆತನನ್ನು ತಹಸೀಲ್ದಾರ್ ಅವರ ಮುಂದೆ ಹಾಜರು ಪಡಿಸಿಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶಹರ ಠಾಣೆ, ಬೆಟಗೇರಿ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸಗಳಿಸಿ; ಜಿ ಎಸ್ ಪಾಟೀಲ್

ವಿಜಯಸಾಕ್ಷಿ ಸುದ್ದಿ, ರೋಣ

ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಅವರು ಸೋಮವಾರ ತಮ್ಮ ನಿವಾಸದಲ್ಲಿ ಕೊತಬಾಳ ಗ್ರಾಪಂಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದರು.

ಕೊತಬಾಳ ಸೇರಿದಂತೆ ಗ್ರಾಪಂಗೆ ಒಳಪಡುವ ಗ್ರಾಮಗಳ ಜನ ಸಮುದಾಯ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರನ್ನಾಗಿ ಮಾಡುವ ಮೂಲಕ ಪಕ್ಷಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಿದ್ದಾರೆ. ಹೀಗಾಗಿ ನೂತವಾಗಿ ಆಯ್ಕೆಗೊಂಡ ಅಧ್ಯಕ್ಷರು, ಉಪಾದ್ಯಕ್ಷರು ಹಾಗೂ ಸದಸ್ಯರು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಆಯ್ಕೆಗೊಂಡ ಕಾಳಿಂಗಪ್ಪ ಉಪ್ಪಾರ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಕಮಲವ್ವ ಕೋಡಿಕೊಪ್ಪದ ಅವರನ್ನು ಸನ್ಮಾನಿಸಿದರು.

ಸೋಮವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ೮ ಸದಸ್ಯರಿಂದ ನಾಮಪತ್ರ ಸಲ್ಲಿಕೆಯಾಗಿ ಕೊನೆಗೆ ೭ ಸದಸ್ಯರು ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದುಕೊಂಡಿದ್ದರು. ಕೊನೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಳಿಂಗಪ್ಪ ಉಪ್ಪಾರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಮಲವ್ವ ಕೋಡಿಕೊಪ್ಪದ ಅವಿರೋಧವಾಗಿ ಅಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಾಪಂ ಇಒ ಸಂತೋಷ ಪಾಟೀಲ ಘೋಷಿಸಿದರು.

ವಿ.ಆರ್.ಗುಡಿಸಾಗರ, ತಾಪಂ ಮಾಜಿ ಸದಸ್ಯ ಶಿದ್ಲಿಂಗಪ್ಪ ಯಾಳಗಿ, ಗ್ರಾಪಂ ಸದಸ್ಯರಾದ ವೀರಣ್ಣ ಯಾಳಗಿ, ಫಕ್ಕೀರಪ್ಪ ಗುಳಗುಳಿ, ಶರಣಪ್ಪ ದೊಡ್ಮನಿ, ಪಾರ್ವತಿ ಬಿಸಾಟಿ, ಸುರೇಶ ಸೇರಿದಂತೆ ಅನೇಕ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರ ದುರ್ಮರಣ

0

ವಿಜಯಸಾಕ್ಷಿ ಸುದ್ದಿ, ಬೀದರ್

ಬಟ್ಟೆ ಒಗೆಯಲೆಂದು ಕೆರೆಯ ಬಳಿ ತೆರಳಿದ್ದ ಸಂದರ್ಭದಲ್ಲಿ ಇಬ್ಬರು ಮಕ್ಕಳು ಈಜಲು ಹೋಗಿ, ಮಕ್ಕಳೂ ಸೇರಿದಂತೆ ರಕ್ಷಣೆಗೆ ಧಾವಿಸಿದ ಉಳಿದಿಬ್ಬರೂ ಸೇರಿ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೀದರ್ ತಾಲೂಕಿನ ಕಂಗಟಿ ಗ್ರಾಮದ ಕರೆಯಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಆನಂದ, ಪ್ರಜ್ವಲ್, ಸುನೀತಾ, ನಾಗೇಶ್ ಎಂದು ತಿಳಿದುಬಂದಿದೆ. ಎಲ್ಲರೂ ಸೇರಿ ದಸರಾ ಹಬ್ಬದ ತಯಾರಿಗಾಗಿ ಕೆರೆಯ ಬಳಿ ಹೆಚ್ಚಿನ ಬಟ್ಟೆ ಒಗೆಯಲೆಂದು ತೆರಳಿದ್ದರು.

ಈ ಸಂದರ್ಭದಲ್ಲಿ ಮಕ್ಕಳಿಬ್ಬರು ಕೆರೆಯಲ್ಲಿ ಈಜಾಟವಾಡುತ್ತಿದ್ದರು ಎನ್ನಲಾಗಿದ್ದು, ಆಯತಪ್ಪಿ ನೀರಿನಲ್ಲಿ ಬಿದ್ದಾಗ ಅವರ ರಕ್ಷಣೆಗೆ ಮುಂದಾದ ಪಾಲಕರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಜನವಾಡ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ನವರಾತ್ರಿ ಉತ್ಸವ; ದೇವಸ್ಥಾನಗಳಲ್ಲಿ ದೇವಿಗಳ ಘಟಸ್ಥಾಪನೆ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ


ನಾಡಹಬ್ಬವಾದ ನವರಾತ್ರಿ ಉತ್ಸವ ನಿಮಿತ್ತ ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಶ್ರೀ ದೇವಿಯ ಘಟಸ್ಥಾಪನೆ ನಡೆಯಿತು. ಪಟ್ಟಣದ ಹಳೆಹುಡ ಓಣಿಯಲ್ಲಿ ಮತ್ತು ಚಿಂದಿಪೇಟಿ ಓಣಿಯ ರೇಣುಕಾ ಯಲ್ಲಮ್ಮಾ ಹಾಗೂ ಬೋಗೇರಿ ಓಣಿಯ ಸುಂಕಾಪೂರ ಮನೆತನದ ದೇವಿ ದೇವಸ್ಥಾನದಲ್ಲಿ 9ದಿನಗಳ ಕಾಲ ಪುರಾಣ ಪ್ರವಚನ ಪ್ರಾರಂಭವಾಗಿದ್ದು, ಬೆಳಿಗ್ಗೆಯಿಂದ ದೇವಸ್ಥಾನಗಳಲ್ಲಿ ದೇವಿ ಮೂರ್ತಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಅಭಿಷೇಕ ನಡೆಯಿತು.

ಕೆರೆಗಳು ನಾಶವಾಗದಂತೆ ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ; ವಿಜಯಲಕ್ಷ್ಮೀ ಚಲವಾದಿ

ವಿಜಯಸಾಕ್ಷಿ ಸುದ್ದಿ, ನರೇಗಲ್

ಕೆರೆ ನೀರು ಕೃಷಿ ಜಮೀನಿನ ತೇವಾಂಶ ಉಳಿಸುತ್ತಾ ಬಂದಿದೆ. ಇಂತಹ ಅಂಶಗಳು ಇಂದಿನ ಯುವ ಪೀಳಿಗೆಗೆ ಅರಿವಾಗಬೇಕು. ಸ್ವಚ್ಛಗೊಳಿಸಿದ ಕೆರೆಯಲ್ಲಿ ಸಾರ್ವಜನಿಕರು ತ್ಯಾಜ್ಯ, ಪ್ಲಾಸ್ಟಿಕ್, ಕಸ ಸೇರಿದಂತೆ ಅನುಪಯುಕ್ತ ವಸ್ತುಗಳನ್ನು ಚೆಲ್ಲದಂತೆ ಜಾಗೃತಿ ವಹಿಸುವುದು ಅಗತ್ಯವಾಗಿದೆ ಎಂದು ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಚಲವಾದಿ ಹೇಳಿದರು.

ಸ್ಥಳೀಯ ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಸೋಮವಾರ ಪ್ರಧಾನ ಮಂತ್ರಿ ನರೆಂದ್ರ ಮೋದಿ ಅವರ ೭೨ನೇ ಜನ್ಮದಿನದ ಪ್ರಯುಕ್ತ ಪಟ್ಟಣದ ಐತಿಹಾಸಿಕ ಹಿರೇಕೆರೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ಹಿರಿಯರು ನಿರ್ಮಿಸಿರುವ ಕೆರೆಗಳನ್ನು ನಾಶ ಮಾಡದೆ ಸಂರಕ್ಷಿಸಲು ಪಣತೊಡೋಣ. ಕೆರೆಗಳನ್ನು ನಾಶಪಡಿಸಿದರೆ ಜಲ ಸಂಪತ್ತು ನಾಶವಾದಂತೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೆರೆ ಸ್ವಚ್ಛತೆ ಮಾಡುತ್ತಿರುವುದು ಮೆಚ್ಚುಗೆಯ ವಿಷಯವಾಗಿದೆ. ಕೆರೆಗಳನ್ನು ಉಳಿಸುವುದು ಎಲ್ಲರ ಜವಾಬ್ದಾರಿಯಾಗಬೇಕು.

ನೀರನ್ನು ಅವಶ್ಯಕತೆ ಇದ್ದಷ್ಟು ಬಳಸಬೇಕು. ವ್ಯರ್ಥ ಮಾಡಿದರೆ ಮುಂದೊಂದು ದಿನ ವ್ಯಥೆ ಪಡಬೇಕಾಗುತ್ತದೆ. ಕೆರೆಗಳು ಜಲ ಮೂಲವಾಗಿ ಬಳಕೆಯಾಗುತ್ತಾ ಬಂದಿವೆ. ಇತ್ತೀಚೆಗೆ ಕೆರೆಗಳು ಕಸದ ತೊಟ್ಟಿಯಂತಾಗುತ್ತಿದೆ. ಇದನ್ನು ತಪ್ಪಿಸಲು ಕೆರೆ ಸ್ವಚ್ಛತೆಗೆ ಆದ್ಯತೆ ನೀಡುವ ಕಾರ್ಯವನ್ನು ಆರಂಭಿಸಲಾಗಿದೆ ಎಂದರು.

ಪ.ಪಂ ಮಾಜಿ ಸದಸ್ಯ ಶಶಿಧರ ಸಂಕನಗೌಡ್ರ ಮಾತನಾಡಿ, ನರೇಂದ್ರ ಮೋದಿ ಜೀ ಅವರು ಕಳೆದ ಎಂಟು ವರ್ಷಗಳಿಂದ‌ ದೇಶದಲ್ಲಿ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಬದ್ಧವಾಗಿ ನಿಂತಿದ್ದಾರೆ ಎಂದರು.

ಪ.ಪಂ ಉಪಾಧ್ಯಕ್ಷ ಶ್ರೀಶೈಲಪ್ಪ ಬಂಡಿಹಾಳ, ಕುಮಾರಸ್ವಾಮಿ ಕೋರಧ್ಯಾನಮಠ, ಮಲ್ಲಿಕಸಾಬ ರೋಣದ, ಈರಪ್ಪ ಜೋಗಿ, ಮಲ್ಲಿಕಾರ್ಜುನಗೌಡ ಭೂಮನಗೌಡ್ರ, ಫಕೀರಪ್ಪ ಮಳ್ಳಿ, ಫಕೀರಪ್ಪ ಬಂಬ್ಲಾಪೂರ, ಅಕ್ಕಮ್ಮ ಮಣ್ಣೊಡ್ಡರ, ಜ್ಯೋತಿ ಪಾಯಪ್ಪಗೌಡ್ರ, ವಿಶಾಲಾಕ್ಷಿ ಹೊಸಮನಿ, ಸುಮಿತ್ರಾ ಕಮಲಾಪೂರ, ಮಂಜುಳಾ ಹುರಳಿ, ಆರ್.ಜಿ. ಪಾಟೀಲ, ಯಲ್ಲಪ್ಪ ಮಣ್ಣೊಡ್ಡರ, ನಿಂಗಪ್ಪ ಚಲವಾದಿ, ಮೌನೇಶ ಹೊಸಮನಿ, ಮಹೇಶ ಶಿವಶಿಂಪರ, ಸಂತೋಷ ಕಡೆತೋಟದ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

`ನಿಮ್ಮ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಹೇಳುವುದು ಡರ್ಟಿ ಪಾಲಿಟಿಕ್ಸಾ?’

ವಿಜಯಸಾಕ್ಷಿ ಸುದ್ದಿ, ಮೈಸೂರು

ಪ್ರಧಾನಿ ನರೇಂದ್ರ ಮೋದಿ ಹೋದ ಕಡೆಯಲ್ಲೆಲ್ಲಾ ಬಿಜೆಪಿ ಸೋತಿದೆ. ಪಂಜಾಬ್, ತೆಲಂಗಾಣ, ಕೇರಳ ರಾಜ್ಯಗಳಲ್ಲಿ ಬಿಜೆಪಿ ಸೋತಿಲ್ವೇನ್ರೀ? ಅವರು ಕೂಡ ಸೋಲ್ತಾರೆ. ಇದು ಕೇವಲ ರಾಜಕಾರಣಕ್ಕಾಗಿ ಹೇಳಿಕೆ ಕೊಡುತ್ತಿರುವದು. ಮುಖ್ಯಮಂತ್ರಿಗಳ `ರಾಜಕಾರಣದಲ್ಲಿ ನಾನು ಕರ್ಣನಿದ್ದಂತೆ’ ಎಂಬ ಮಾತುಗಳು ಅವರ ಭಂಡತನವನ್ನು ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಟುವಾಗಿ ಪ್ರತ್ಯುತ್ತರ ನೀಡಿದರು.

ಅವರು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಡರ್ಟಿ ಪಾಲಿಟಿಕ್ಸ್ ವಿಚಾರವಾಗಿ ಮಾತನಾಡುತ್ತ, ರಾಜ್ಯಕ್ಕೆ ರಾಹುಲ್ ಗಾಂಧಿ ಬಂದರೆ ಬಿಜೆಪಿಗೇ ಲಾಭವಿದೆ ಎನ್ನುವ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಕೇವಲ ಭಂಡರು ಮಾತ್ರ ಆ ರೀತಿ ಮಾತನಾಡುವುದು. ಟೀಕೆಗಳಿಗೂ, ನಮಗೂ ಸಂಬಂಧವಿಲ್ಲ ಎನ್ನುವ ಭಾವನೆಯಿರುವವರು ಹಾಗೆ ಮಾತನಾಡುತ್ತಾರೆ. ನಾವು ಎಂದಿಗೂ ಕೀಳುಮಟ್ಟದ ರಾಜಕಾರಣ ಮಾಡಿಲ್ಲ. ಬಿಜೆಪಿ ಸರ್ಕಾರದವರು ರಾಜಕಾರಣ ಮಾಡುವ ಉದ್ದೇಶದಿಂದಲೇ ಮಾತನಾಡುತ್ತಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ‍್ಯ ತಂದುಕೊಟ್ಟಿದ್ದಾರೆ. ಮಹಾತ್ಮ ಗಾಂಧೀಜಿಯನ್ನು ಕೊಂದವರನ್ನು ಇವರು ಆರಾಧಿಸುತ್ತಾರೆ. ಗಣೇಶನ ಮೆರವಣಿಗೆಯಲ್ಲಿ ನಾಥೂರಾಂ ಗೋಡ್ಸೆಯ ಫೋಟೊ ಇಟ್ಟುಕೊಂಡು ಓಡಾಡುತ್ತಾರೆ. ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ? ಈಗ ಇವರಿಗೆ ಡರ್ಟಿ ಪಾಲಿಟಿಕ್ಸ್ ಅಂದರೆ ಏನೆಂದೇ ಗೊತ್ತಿಲ್ಲದವರಂತೆ ಮಾತನಾಡುತ್ತಾರೆ. ನಿಮ್ಮ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಹೇಳುವುದು ಡರ್ಟಿ ಪಾಲಿಟಿಕ್ಸಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಪ್ರತ್ಯುತ್ತರ ನೀಡಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆಯಲ್ಲಿ ಬಿದ್ದು ಹೊರಳಾಡಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು

0

ರಸ್ತೆ ದುರಸ್ತಿ ಮಾಡಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ

ಪಟ್ಟಣದಲ್ಲಿ ಹಾದು ಹೋಗಿರುವ ಕೈಗಾ-ಇಳಕಲ್ ರಾಜ್ಯ ಹೆದ್ದಾರಿ ಸೇರಿ ಪಟ್ಟಣ ಮತ್ತು ತಾಲೂಕಿನ ಬಹುತೇಕ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಜನತೆ ಪಡಬಾರದ ಯಾತನೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ರಸ್ತೆಗಳನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ತಾಲೂಕು ಘಟಕದಿಂದ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಹೊಸ ಬಸ್ ನಿಲ್ದಾಣದ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ ನಡೆಸಿದ ಪ್ರತಿಭಟನಾಕಾರರು ಪಿಡಬ್ಲೂಡಿ ಮತ್ತು ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಶಾಸಕ ರಾಮಣ್ಣ ಲಮಾಣಿ ಅವರ ವಿರುದ್ಧ ಘೋಷಣೆ ಕೂಗಿದರು.

ಪೊಲೀಸರು ಮತ್ತು ಪಿಡಬ್ಲ್ಯೂ ಡಿ ಇಲಾಖೆ ಅಧಿಕಾರಿಗಳು ಪ್ರತಿಭಟನೆ ಕೈಬಿಡುವಂತೆ ಕೇಳಿದರೂ ಕಾರ್ಯಕರ್ತರು ರಸ್ತೆಯಲ್ಲಿ ಬಿದ್ದು ಹೊರಳಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ತಾಲೂಕಾ ಅಧ್ಯಕ್ಷ ಇಸ್ಮಾಯಿಲ್ ಆಡೂರ, ಕೈಗಾ-ಇಳಕಲ್ ರಾಜ್ಯ ಹೆದ್ದಾರಿಯಲ್ಲಿ ಮೊಣಕಾಲುದ್ದ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಮಳೆಗಾಲದಲ್ಲಿ ಹತ್ತಾರು ಸಮಸ್ಯೆಗಳಾದರೆ ಉಳಿದಂತೆ ರಸ್ತೆಗಳು ಧೂಳುಮಯವಾಗಿರುತ್ತವೆ.

ಪಟ್ಟಣದ ಮುಖ್ಯ ಬಜಾರ್ ರಸ್ತೆ ಹದಗೆಟ್ಟು ವರ್ಷಗಳೇ ಕಳೆದಿವೆ. ತಾಲೂಕಿನ ಗದಗ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ, ಲಕ್ಷ್ಮೇಶ್ವರದಿಂದ ದೇವಿಹಾಳ, ಬಾಲೆಹೊಸೂರ, ಸೂರಣಗಿ, ದೊಡ್ಡೂರ, ಯತ್ತಿನಹಳ್ಳಿ ಸೇರಿ ಬಹುತೇಕ ಗ್ರಾಮೀಣ ರಸ್ತೆಗಳ ಸ್ಥಿತಿ ಅಯೋಮಯವಾಗಿದೆ. ಸರ್ಕಾರಿ ಬಸ್‌ಗಳು ಬಂದ್ ಆಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆಯಾಗಿದೆ. ಇಡೀ ತಾಲೂಕಿನ ಜನರು ರಸ್ತೆಗಳ ಅವ್ಯವಸ್ಥೆಯ ಬಗ್ಗೆ ರೋಸಿಹೋಗಿದ್ದಾರೆ.

ಈ ನಡುವೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಯರ‍್ರಾಬರ‍್ರಿ ಸಂಚರಿಸುವ ಎಂಸ್ಯಾಂಡ್, ಖಡಿ ಸಾಗಿಸುವ ಟಿಪ್ಪರ್-ಲಾರಿಗಳ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ. ಲೋಕೋಪಯೋಗಿ ಇಲಾಖೆಯ ಸಚಿವರು ಜಿಲ್ಲೆಯವರಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಸಕರು ನಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸದನದಲ್ಲಿ ಗಟ್ಟಿಧ್ವನಿಯಿಂದ ಕೇಳುವ ಮನಸ್ಥಿತಿಯವರಂತೂ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಬಿ.ಎಸ್ ಹಳ್ಳದ ಮನವಿ ಸ್ವೀಕರಿಸಿದರು.

ಸಂಘಟನಾ ಕಾರ್ಯದರ್ಶಿ ಇಶಾಕಬಾಶಾ ಹರಪನಹಳ್ಳಿ, ರಮೇಶ ಲಮಾಣಿ, ರಮೇಶ ಹಂಗನಕಟ್ಟಿ, ಗೋಪಿ ನಾಯಕ, ಗೌಸ್‌ಮೋದಿನ ಸವಣೂರ, ಹಾಲಪ್ಪ ಭಂಡಾರಿ, ಯಲ್ಲಪ್ಪ ಹಂಜಗಿ, ಅಭಿಷೇಕ್ ಸಾತಪುತೆ, ಸುಲೇಮಾನ ಆಡೂರ, ಅಬ್ದುಲ್ ಖಾದರ್ ಕೊಪ್ಪಳ, ಸೋಹಿಲ್ ಬಂಕಾಪುರ, ಲುಕ್ಮನ ಬೆಟಗೇರಿ, ನಾಸೀರ ಸಿದ್ದಿ, ಗೋಪಿ ನಾಯಕ, ಖಾದರಭಾಷಾ ರಿತ್ತಿ, ಬಸು ಲಮಾಣಿ, ಮಾನಪ್ಪ ನಾಯಕ, ಬಸವರಾಜ ಮೇಲ್ಮುರಿ ಸೇರಿದಂತೆ ಇತರರು ಇದ್ದರು.

ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಹಾನಿ

0

ವಿಜಯಸಾಕ್ಷಿ ಸುದ್ದಿ, ಗದಗ

ತೋಟದಲ್ಲಿ ನಿರ್ಮಿಸಿದ್ದ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿಯ ಪರಿಣಾಮವಾಗಿ ಕೃಷಿ ಉಪಕರಣಗಳು ಭಸ್ಮವಾದ ಘಟನೆ ಜಿಲ್ಲೆಯ ರೋಣ ತಾಲೂಕಿನಲ್ಲಿ ಜರುಗಿದೆ.

ಈ ದನದ ಕೊಟ್ಟಿಗೆ ರೋಣ ತಾಲೂಕಿನ ಸೋಮನಕಟ್ಟಿ ಗ್ರಾಮದ ರೈತ ಹಸನಸಾಬ್ ಬೆನಹಾಳ ಎಂಬುವರಿಗೆ ಸೇರಿದೆ.

ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಟಗರಿಗೂ ಗಾಯವಾಗಿದ್ದು, ಮೇವು, ಹೊಟ್ಟು ಹಾಗೂ ಕೃಷಿ ಸಲಕರಣೆಗಳು ಸುಟ್ಟು ಭಸ್ಮವಾಗಿವೆ. ಇದರಿಂದಾಗಿ ರೈತ ಹಸನಸಾಬ್‌ನಿಗೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ತಿಳಿದು ಬಂದಿದೆ.

ಸಕಾಲದಲ್ಲಿ ಆಗಿಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೌರ ಕಾರ್ಮಿಕರ ಸೇವೆ ಅನನ್ಯ; ವಿಜಯಲಕ್ಷ್ಮಿ ಚಲವಾದಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ

ಜನರ  ಆರೋಗ್ಯ ಚೆನ್ನಾಗಿರಬೇಕು, ನಗರ ಸ್ವಚ್ಛವಾಗಿರಬೇಕು ಎಂದು ಪರಿಶ್ರಮ ಪಡುವ ಪೌರ ಕಾರ್ಮಿಕರ ಸೇವೆ ಹಾಗೂ ಸಮಾಜದ ಸೌಖ್ಯ ಕಾಪಾಡುವ ಸಲುವಾಗಿ ಅವರು ನಿರ್ವಹಿಸುತ್ತಿರುವ ಕಾರ್ಯ ನಿಜಕ್ಕೂ ಶ್ರೇಷ್ಠ ಮತ್ತು ಶ್ಲಾಘನೀಯ ಎಂದು ಪ.ಪಂ ಅಧ್ಯಕ್ಷೆ  ವಿಜಯಲಕ್ಷ್ಮಿ ಚಲವಾದಿ ಹೇಳಿದರು.

ಸ್ಥಳೀಯ ಪಟ್ಟಣ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘ ಹಾಗೂ ಪಟ್ಟಣ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಜರುಗಿದ ೧೧ನೇ ವರ್ಷದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೌರ ಕಾರ್ಮಿಕರಿಲ್ಲದಿದ್ದರೆ ಪಟ್ಟಣದ ನಾಗರಿಕರು ಆ ದಿನವನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ಪ್ರತಿ ದಿನ ಪಟ್ಟಣವನ್ನು ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಪೌರ ಕಾರ್ಮಿಕರ ಸೇವೆಯನ್ನು ಪ್ರತಿಯೊಬ್ಬರು ಗುರುತಿಸಬೇಕು. ಸಮಾಜದ ಆರೋಗ್ಯ ಕಾಪಾಡುವಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು. ಅವರಿಗೆ ನ್ಯಾಯಯುತವಾಗಿ ಎಲ್ಲಾ ರೀತಿಯ ಸೌಲಭ್ಯ ದೊರಕುವಂತಾಗಬೇಕು.

ನಾಗರಿಕತೆ ಬೆಳೆದಂತೆ ಜನರ ಅವಶ್ಯಕತೆ ಜತೆಗೆ, ಪೌರ ಕಾರ್ಮಿಕರ ಜವಾಬ್ದಾರಿ ಹಾಗೂ ಕರ್ತವ್ಯ ಕೂಡ ಹೆಚ್ಚಾಗುತ್ತಿದೆ. ಪೌರಕಾರ್ಮಿಕರಿಗೆ ಭತ್ಯ, ವೇತನ, ಅಧುನಿಕ, ವೈಜ್ಞಾನಿಕ ಸೌಲಭ್ಯ, ಸೌಕರ್ಯಗಳು ಸಮರ್ಪಕವಾಗಿ ಸಿಗಬೇಕು. ನಗರಸಭೆ ಅವರ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದರು.

ಕ.ರಾ.ಪೌ.ಸೇ.ನೌ. ಸೇವಾ ಸಂಘದ ರಾಜ್ಯ ಕಾರ್ಯದರ್ಶಿ ಸಿದ್ದು ಹುಣಸಿಮರದ ಮಾತನಾಡಿ, ಪೌರಕಾರ್ಮಿಕರ ಸೇವೆ ಅನನ್ಯವಾದ ಸೇವೆಯಾಗಿದ್ದು, ಇಂತಹ ಕಾರ್ಮಿಕರಿಗೆ ನಾವು ಗೌರವ ಕೊಡದೆ ಅಗೌರವದಿಂದ ನಡೆಸಿಕೊಳ್ಳುವುದು ಸರಿಯಲ್ಲ.ನಾವೆಲ್ಲಾ ನಮ್ಮ ನಮ್ಮ ಮನೆಗಳಲ್ಲಿ ಬೆಚ್ಚಗೆ ಮಲಗಿರುವಾಗ ತಾವು ಬೀದಿಯಲ್ಲಿ ನಿಂತು ನಾವು ಹಾಕಿರುವ ಕಸವನ್ನು ಸ್ವಚ್ಚಮಾಡುವ ಕೆಲಸ ಮಾಡುತ್ತಿರುತ್ತಾರೆ.

ನಾವು ಕಣ್ಣುಬಿಡುವ ಮೊದಲೇ ನಗರವನ್ನು ಸ್ವಚ್ಚಗೊಳಿಸಿ ಮನಸ್ಸಿಗೆ ಮುದ ನೀಡುವ ಇವರಿಗೆ ನಾವು ಏನು ಕೊಟ್ಟರೂ ಕಡಿಮೆಯೇ ಆಗಿದೆ. ಏನು ಕೊಡದಿದ್ದರೂ ಪರವಾಗಿಲ್ಲ ಕನಿಷ್ಟ ಗೌರವವನ್ನು ಕೊಡಬೇಕು, ಕೊರೋನಾದಂತಹ ಕಠಿಣ ಸಂದರ್ಭದಲ್ಲಿ ಎಲ್ಲರೂ ಭೀತಿಗೊಳಗಾಗಿ ಜೀವವನ್ನು ಕೈಲಿಡಿದು ಬದುಕುತ್ತಿರುವಾಗ, ಸಾವಿಗೂ ಹೆದರದೆ, ಭೀತಿಯನ್ನು ಹತ್ತಿರಕ್ಕೂ ಬಿಟ್ಟುಕೊಳ್ಳದೆ ಕಾಯಕದಲ್ಲೇ ಕೈಲಾಸ ಕಂಡ ಏಕೈಕ ಸೇವಕ ವರ್ಗವೆಂದರೆ ಅದು ಪೌರಕಾರ್ಮಿಕ ವರ್ಗವಾಗಿದೆ.

ಕೊರೋನಾ ಆರೈಕೆ ಕೇಂದ್ರಗಳ ತ್ಯಾಜ್ಯಗಳನ್ನು ವಿಂಗಡಣೆ ಮಾಡಲೂ ಹಿಂಜರಿಯದ ಇವರು ಕಣ್ಣಮುಂದಿರುವ ನಿಜವಾದ ದೈವಗಳಾಗಿ ಕಾರ್ಯವನ್ನು ನಿರ್ವಹಿಸಿದ್ದಾರೆ ಎಂದರು.

ಕ.ರಾ.ಪೌ.ಸೇ.ನೌ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಚಂದ್ರ ಕಜ್ಜಿ, ಪ.ಪಂ ಮುಖ್ಯಾಧಿಕಾರಿ ಹನಮಂತಪ್ಪ ಮಣ್ಣೊಡ್ಡರ, ಪ.ಪಂ ಸದಸ್ಯರಾದ ದಾವುದಲಿ ಕುದರಿ, ಜ್ಯೋತಿ ಪಾಯಪ್ಪಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ವೇಳೆ ಪೌರ ಕಾರ್ಮಿಕರಿಗೆ ಮತ್ತು ಶಿಕ್ಷಣದಲ್ಲಿ ಹೆಚ್ಚು ಅಂಕ ಪಡೆದ ಪೌರ ಕಾರ್ಮಿಕರ ಮಕ್ಕಳಿಗೆ ಸನ್ಮಾನಿಸಲಾಯಿತು. ನಂತರ ಸಂಗೀತ ಕಾರ್ಯಕ್ರಮ ಜರುಗಿತು.

ಪ.ಪಂ ಉಪಾಧ್ಯಕ್ಷ ಶ್ರೀಶೈಲಪ್ಪ ಬಂಡಿಹಾಳ, ಕ.ರಾ.ಪೌ.ಸೇ.ನೌ. ಸೇವಾ‌ ಸಂಘ ನರೇಗಲ್ಲ ಘಟಕದ ಅಧ್ಯಕ್ಷ ನೀಲಪ್ಪ ಚಳ್ಳಮರದ, ಸ್ಥಾಯಿ ಸಮಿತಿಯ ಚೇರಮ್ ಫಕೀರಪ್ಪ ಮಳ್ಳಿ, ಕ.ರಾ.ಪೌ.ಸೇ.ನೌ. ಸೇವಾ ಸಂಘದ ಜಿಲ್ಲಾಧ್ಯಕ್ಷ ರಮೇಶ ಹಲಗಿಯವರ, ಕ.ರಾ.ಪೌ.ಸೇ.ನೌ. ಸೇವಾ ನರೇಗಲ್ಲ ಘಟಕದ ಉಪಾಧ್ಯಕ್ಷ ಶಂಕ್ರಪ್ಪ ದೊಡ್ಡಣ್ಣವರ, ಪ.ಪಂ ಸದಸ್ಯರಾದ ಕುಮಾರಸ್ವಾಮಿ ಕೋರಧ್ಯಾನಮಠ, ಮಲ್ಲಕಸಾಬ ರೋಣದ, ಮಲ್ಲಿಕಾರ್ಜುನಗೌಡ ಭೂಮನಗೌಡ್ರ, ಫಕೀರಪ್ಪ ಬಂಬ್ಲಾಪೂರ, ರಾಚಯ್ಯ ಮಾಲಗಿತ್ತಿಮಠ, ಈರಪ್ಪ ಜೋಗಿ, ಮುತ್ತಪ್ಪ, ಅಕ್ಕಮ್ಮ ಮಣ್ಣೊಡ್ಡರ, ವಿಶಾಲಾಕ್ಷಿ ಹೊಸಮನಿ, ಬಸಮ್ಮ ಧರ್ಮಾಯತ, ಶಕುಂತಲಾ ಧರ್ಮಾಯತ ಸೇರಿದಂತೆ ಪ.ಪಂ ಪೌರಕಾರ್ಮಿಕರು ಹಾಗೂ ಸಿಬ್ಬಂದಿಗಳು ಇದ್ದರು. ಮುತ್ತು ಹೂಗಾರ ಕಾರ್ಯಕ್ರಮ ನಿರೂಪಿಸಿದರು.

error: Content is protected !!