Home Blog Page 3217

Bengaluru: ರಾಜ್ಯದ ವಿವಿಧ ಜಿಲ್ಲೆಗಳಿಗೂ BMTC ಸಂಚಾರ

0

ಬೆಂಗಳೂರು;- ರಾಜ್ಯದಾದ್ಯಂತ ಪ್ರಯಾಣಿಕರ ಅಗತ್ಯತೆಗಳಿಗೆ ಅನುಸಾರವಾಗಿ ವಿವಿಧ ಊರುಗಳ ನಡುವೆ ಬಿಎಂಟಿಸಿ ವಿಶೇಷ ಬಸ್‌ಗಳನ್ನು ಆರಂಭಿಸುತ್ತಿದೆ. ಈ ದಸರಾಕ್ಕೆ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ರಾಜ್ಯ ಮತ್ತು ಅಂತಾರಾಜ್ಯ ಗಳಿಗೆ ಬಿಡಲಾಗಿದೆ. ಆದರೂ ಸಹ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕೆಎಸ್​ಆರ್​​ಟಿಸಿ ಜೊತೆಗೆ ಬಿಎಂಟಿಸಿ ಬಸ್​ಗಳನ್ನು ಸಹ ರಾಜ್ಯದ ಇತರೆ ಜಿಲ್ಲೆಗಳಿಗೆ ಸಂಚಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಅಕ್ಟೋಬರ್ 23ರಂದು ಆಯುಧ ಪೂಜೆ ಹಾಗೂ ಅ.24 ವಿಜಯದಶಮಿ ಹಿನ್ನಲೆಯಲ್ಲಿ ಜನರು ಬೆಂಗಳೂರಿನಿಂದ ಬೇರೆ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಅಕ್ಟೋಬರ್ 21, 22 ಮತ್ತು 23ರ ವರಿಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್​ಗಳು ಸಂಚರಿಸಲಿವೆ. ಇದರೊಂದಿಗೆ ಇಷ್ಟು ದಿನ ಬೆಂಗಳೂರಿಗೆ ಸೀಮತವಾಗಿದ್ದ ಬಿಎಂಟಿಸಿ ಬಸ್​ಗಳು ಇದೀಗ ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಗೂ ಹೋಗಲಿವೆ.

ಅಕ್ಟೋಬರ್-10 ರಂದು ಕೆಎಸ್‌ಆರ್ಟಿಸಿಯಲ್ಲಿ ನಡೆದ ಸಭೆ ನಿರ್ಧಾರದಂತೆ ಬಿಎಂಟಿಸಿ ಬಸ್ ಓಡಿಸಲು ಸೂಚನೆ ನೀಡಲಾಗಿದೆ. ಕೆಎಸ್‌ಆರ್ಟಿಸಿ ಮನವಿ ಆಧಾರದ ಮೇಲೆ ಹೊರ ಜಿಲ್ಲೆಗಳಿಗೂ ಬಸ್ ಓಡಿಸಲು ಬಿಎಂಟಿಸಿ ತೀರ್ಮಾನಿಸಿದೆ. ದಾವಣಗೆರೆ, ಶಿವಮೊಗ್ಗ, ಹೊಸದುರ್ಗ,ಬಳ್ಳಾರಿ, ಹಾಸನ, ಮತ್ತು ಧರ್ಮಸ್ಥಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಪೂರ್ವ, ಉತ್ತರ, ದಕ್ಷಿಣ, ಹಾಗೂ ಈಶಾನ್ಯ ವಲಯದ ಡಿಪೋಗಳಿಂದ ನಿತ್ಯ 100 ಬಸ್​ ಗಳು ಓಡಾಡಲಿವೆ

ಕಾಂಗ್ರೆಸ್ ಸೇರ್ಪಡೆಗೆ ನಮ್ಮ ಕ್ಷೇತ್ರದಲ್ಲಿ ಯಾವುದೇ ಅಡ್ಡಿ ಇಲ್ಲ – ಎಂ.ಪಿ.ಕುಮಾರಸ್ವಾಮಿ

0

ಬೆಂಗಳೂರು;- ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಕ್ಷೇತ್ರದಲ್ಲಿ ಯಾವುದೇ ಅಡ್ಡಿ ಆತಂಕ ಇಲ್ಲ ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ನಮ್ಮ ಕ್ಷೇತ್ರದಲ್ಲಿ ಯಾವುದೇ ಅಡ್ಡಿ ಆತಂಕ ಇಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೊರರಾಜ್ಯ ಪ್ರವಾಸದಲ್ಲಿದ್ದಾರೆ. ಅವರು ಬಂದಾಕ್ಷಣ ಸೇರ್ಪಡೆ ದಿನಾಂಕ ನಿಗದಿಯಾಗಲಿದೆ. ಈ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮ ಕ್ಷೇತ್ರದಲ್ಲಿ ನನ್ನ ಪಕ್ಷ ಸೇರ್ಪಡೆ ಕಾರ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು

ಮೂಡಿಗೆರೆಯ ಕೈ ಶಾಸಕಿ ನಯನಾ ಮೋಟಮ್ಮ, ಸ್ಥಳೀಯ ಕೈ ಮುಖಂಡರು ಕುಮಾರಸ್ವಾಮಿ ಪಕ್ಷ ಸೇರ್ಪಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಪಕ್ಷ ಸೇರ್ಪಡೆ ವಿಳಂಭವಾಗುತ್ತಿದೆ ಎನ್ನಲಾಗುತ್ತಿದೆ.ಮಹಿಷ ದಸರಾ ಆಚರಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಮೈಸೂರು ಸಂಸದ ಪ್ರತಾಪಸಿಂಹ ವಿಚಾರಧಾರೆಯನ್ನು ಖಂಡಿಸಿದರು. ಮಹಿಷ ನಮ್ಮ ಕುಲದ ನಾಯಕ, ದಲಿತ ಹಿಂದುಳಿದ ಸಮುದಾಯಗಳ ಸ್ವಾಭಿಮಾನದ ಪ್ರತೀಕ. ಇಲ್ಲಿಯವರೆಗೆ ಅವರು ಹೇಳಿದಂತೆ ಅಸ್ಪೃಷ್ಯರಾಗಿಯೇ ದೇವಸ್ಥಾನದ ಹೊರಗೆ ನಿಂತು ಅವರ ನೀತಿ ನಡವಳಿಕೆ ಪಾಲಿಸಿದ್ದೆವು ಎಂದರು.

ಜಮೀನೊಂದರಲ್ಲಿ ಕಬ್ಬಿಣದ ಅದಿರಿನ ಅಕ್ರಮ ಸಂಗ್ರಹ: ತಹಸೀಲ್ದಾರ ನೇತೃತ್ವದಲ್ಲಿ ದಾಳಿ

0

ಗದಗ: ಗದಗ ಜಿಲ್ಲೆ ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ಹೀಗೆ ಅನೇಕ ಕ್ಷೇತ್ರಗಳಲ್ಲಿ ಸಂಪದ್ಭರಿತವಾಗಿದೆ. ಪ್ರಾಕೃತಿಕವಾಗಿಯೂ ಬೆಲೆಕಟ್ಟಲಾಗದ ಪಂಚ ಖನಿಜ ಸಂಪತ್ತು ಹೊಂದಿದೆ. ಇಲ್ಲಿನ ಪ್ರಾಕೃತಿಕ ಸಂಪತ್ತಿಗೆ ಬೆಲೆ ಕಟ್ಟಲೂ ಆಗದು. ಇದೇ ಉದ್ದೇಶದಿಂದ ಅಕ್ರಮ ದಂಧೆಕೋರರ ಕಣ್ಣು ಎಂದಿಗೂ ಗದಗ ಜಿಲ್ಲೆಯ ಮೇಲಿದೆ.

ಈ ಹಿಂದೆಯೂ ಗದಗ ತಾಲೂಕಿನ ಹಲವು ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮ ಕಬ್ಬಿಣದ ಅದಿರು ಬಗೆದು ಮಾರಿ, ಅದೆಷ್ಟೋ ಕುಳಗಳು ಕೋಟ್ಯಾಧೀಶರಾಗಿದ್ದಾರೆ. ಅಂದು ದೊಡ್ಡ ದೊಡ್ಡ ಗಣಿ ಕುಳಗಳು ಜೈಲು ಸೇರಿದ ಬಳಿಕ ಸಣ್ಣಪುಟ್ಟ ದಂಧೆಕರೋರರು ಸುಮ್ಮನಾಗಿದ್ದರು. ಆದರೆ, ಈಗ ಮತ್ತೆ ಸದ್ದಿಲ್ಲದೇ ಚಿಗುರತೊಡಗಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿ, ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ದೂರಿನ ಆಧಾರದಲ್ಲಿ ಅಕ್ರಮ ಕಬ್ಬಿಣದ ಅದಿರು ಸಂಗ್ರಹ ಅಡ್ಡೆ ಮೇಲೆ ದಾಳಿ ಮಾಡಿದ್ದು, ಅಪಾರ ಪ್ರಮಾಣದ ಕಬ್ಬಿಣದ ಅದಿರು ವಶಕ್ಕೆ ಪಡೆದುಕೊಂಡಿದ್ದಾರೆ.

ಗದಗ ತಾಲೂಕಿನ ದುಂದೂರು ಗ್ರಾಮದ ಸಮೀಪದ ಜಮಿನೊಂದರಲ್ಲಿ ಅಕ್ರಮವಾಗಿ ಕಬ್ಬಿಣದ ಅದಿರು ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ತಹಸೀಲ್ದಾರ ನೇತೃತ್ವದಲ್ಲಿ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ ಅದಿರು ಸಂಪತ್ತನ್ನು ವಶಕ್ಕೆ ಪಡೆದಿದ್ದಾರೆ.

ರಾತ್ರೋರಾತ್ರಿ ಗುಡ್ಡಗಳನ್ನು ಅಗೆದು, ಹೆದ್ದಾರಿಯ ಪಕ್ಕದಲ್ಲಿಯೇ ಇರುವ ರೈತರ ಜಮೀನುಗಳಲ್ಲಿ ಅಕ್ರಮವಾಗಿ ಅದಿರು ಸಂಗ್ರಹ ಮಾಡುತ್ತಿದ್ದಾರೆ ಎನ್ನಲಾಗಿದೆ.ಇಲ್ಲಿಂದಲೇ ಕಬ್ಬಿಣದ ಅದಿರನ್ನು ಗ್ರೇಡಿಂಗ್ ಮಾಡಿ, ಸಾಗಾಟ ಮಾಡಲು ತಯಾರಿ ನಡೆಸಿದ್ದಾರೆ ಎಂಬ ಕುರಿತು ಗದಗ ಜಿಲ್ಲಾಡಳಿತಕ್ಕೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಗದಗ ತಹಸೀಲ್ದಾರ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ದಾಳಿ ಮಾಡಿ, ಅಪಾರ ಪ್ರಮಾಣದಲ್ಲಿ ಸಂಗ್ರಹಿಸಲಾಗಿದ್ದ ಕಬ್ಬಿಣದ ಅದಿರಿನ ಅಕ್ರಮ ಸಂಗ್ರಹವನ್ನು ವಶಕ್ಕೆ ಪಡೆದಿದ್ದಾರೆ.

ದುಂದೂರಿನ ಸರ್ವೇ ನಂ. 35/1+2ಬಿನಲ್ಲಿ ಸುಮಾರು 201 ಕ್ಯೂಬಿಕ್ ಮೀಟರ್‌ನಷ್ಟು ಅಕ್ರಮ ಕಬ್ಬಿಣದ ಅದಿರು ಸಂಗ್ರಹ ಮಾಡಿರುವುದು ಕಂಡುಬಂದಿದ್ದು, ಎಲ್ಲವನ್ನೂ ವಶಕ್ಕೆ ಪಡೆಯಲಾಗಿದೆ. ಉಮರ ಬಬ್ಲು ಎಂಬ ವ್ಯಕ್ತಿಯೊಬ್ಬರು ಅಕ್ರಮ ಕಬ್ಬಿಣ ಅದಿರು ಸಂಗ್ರಹ ಮಾಡಿದ್ದು ತಿಳಿದು ಬಂದಿದೆ ಎಂದು ತಹಸೀಲ್ದಾರರು ಮಾಹಿತಿ ನೀಡಿದ್ದಾರೆ.ಈ ಜಮೀನಿನಲ್ಲಿ ಸಂಗ್ರಹಿಸಿದ್ದ ಕಬ್ಬಿಣದ ಅದಿರಿನ ಮಾದರಿಯನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳಿಸಲಾಗಿದ್ದು, ಈ ಕುರಿತು ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ ಎನ್ನಲಾಗಿದೆ.

ಕಣ್ಣೆದುರೇ ಇಷ್ಟೆಲ್ಲಾ ನಡೆಯುತ್ತಿದ್ದರೂ ಗಣಿ ಇಲಾಖೆಯ ಅಧಿಕಾರಿಗಳು ಅದ್ಯಾಕೋ ದಂಧೆಕೋರರ ಉಸಾಬರಿಗೆ ಹೋಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಗದಗ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಗುಡ್ಡಗಳಲ್ಲಿ ಕಬ್ಬಿಣದ ಅದಿರು ಯಥೇಚ್ಛವಾಗಿದೆ. ಹೀಗಿರುವಾಗ, ಅಲ್ಲಿಂದಲೂ ರಾತ್ರೋರಾತ್ರಿ ಗಣಿಗಾರಿಕೆ ನಡೆಸಿ, ಇಲ್ಲಿ ತಂದು ಸಂಗ್ರಹಿಸಿ ಗ್ರೇಡಿಂಗ್ ಮಾಡುತ್ತಿದ್ದಾರೆ ಎಂಬ ಅನುಮಾನಗಳೂ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ. ಗಣಿ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಹೆಸರು ಹೇಳಲಿಚ್ಚಿಸದ ಗ್ರಾಮಸ್ಥರೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಗಂಡ-ಹೆಂಡತಿ ನಡುವೆ ಜಗಳ: ಮಗನ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

0

ಮಂಡ್ಯ: ಗಂಡ-ಹೆಂಡತಿ ನಡುವೆ ಜಗಳ ಶುರುವಾಗಿ ಮಗನ ಜೊತೆ ಸೇರಿ ಗಂಡನನ್ನೇ ಪತ್ನಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಚಾಪುರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಚಾಪುರದೊಡ್ಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಉಮೇಶ್ (50) ಎನ್ನಲಾಗಿದೆ.

ಪತ್ನಿ ಸವಿತಾ, ಮಗ ಶಶಾಂಕ್ ರಿಂದ ಕೃತ್ಯವೆಸಗಲಾಗಿದೆ. ಮೂರು ತಿಂಗಳ ಇದೆ ಗಂಡನನ್ನ ತೊರೆದು ಬೆಂಗಳೂರಿನಲ್ಲಿ ಮಗನ ಜೊತೆ ವಾಸವಾಗಿದ್ದ ಸವಿತಾ ರಾತ್ರಿ ಪಿತೃಪಕ್ಷ ಹಬ್ಬ ಮಾಡಲು ಊರಿಗೆ ಬಂದಿದ್ದ ಸವಿತಾ. ಚಾಪುರದೊಡ್ಡಿ  ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ಪತ್ನಿಯನ್ನ ಮನೆಯೊಳಗೆ ಸೇರಿಸದರು. ಈ ವೇಳೆ ಮತ್ತೆ ಪತ್ನಿ ಸವಿತಾ ಹಾಗೂ ಮಗ ಶಶಾಂಕ್ ಅವರುಗಳೊಂದಿಗೆ ಜಗಳ ನಡೆದು ದೊಣ್ಣೆ ಹಾಗೂ ಮಚ್ಚುಗಳಿಂದ ಇಬ್ಬರು ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ.

ತೀವ್ರ ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಉಮೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಸವಿತಾ ಹಾಗೂ ಶಶಾಂಕ್ ಸ್ಥಳದಿಂದ ಪರಾರಿಯಾಗಿದ್ದರು. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಇನ್ಸ್ಪೆಕ್ಟರ್ ವೆಂಕಟೇಗೌಡ, ಬೆಸಗರಹಳ್ಳಿ ಪೋಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ: ಡಾ. ಶರಣಪ್ರಕಾಶ ಪಾಟೀಲ್

0

ಕಲಬುರಗಿ: ಸೇಡಂ ಮತಕ್ಷೇತ್ರದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್ ರ ಹೆಸರು ಪ್ರಸ್ತಾಪಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಈಗಾಗಲೇ ನಾನು ಮಾಧ್ಯಮದವರಿಗೆ ಈ ಬಗ್ಗೆ ಹೇಳಿದ್ದೇನೆ. ಆ ವ್ಯಕ್ತಿ ಯಾರು ಎನ್ನುವುದು ನನಗೆ ಗೊತ್ತಿಲ್ಲ. ಅವರ ಮುಖವನ್ನು ನೋಡುತ್ತಿರುವುದು ಇದೇ ಮೊದಲ ಬಾರಿಗೆ. ನನಗೂ ಅದಕ್ಕೂ ಸಂಬಂಧ ಇಲ್ಲ‌” ಎಂದರು. ಸುಖಾ ಸುಮ್ಮನೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನನಗೆ ಗೊತ್ತಿಲ್ಲ. ಯಾಕೆ ನನ್ನ ಹೆಸರು ಹೇಳಿದ ಎನ್ನುವುದೂ ಗೊತ್ತಿಲ್ಲ. ಪೊಲೀಸ್ ತನಿಖೆಯಲ್ಲಿ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಸೂಸೈಡ್ ಕೇಸ್’ಗೆ ಬಿಗ್ ಟ್ವಿಸ್ಟ್

0

ಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು…ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದ. ಆದ್ರೆ, ಇದೀಗ ಈ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸ್ವತಃ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲಾಗಿದೆ..

ತನ್ನ ಪತಿ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಲಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪತಿಯ ಆತ್ಮಹತ್ಯೆ ಕೇಸ್ ನಲ್ಲಿ ಯಾರ ಮೇಲೆ ಕೂಡಾ ಅನುಮಾನ ಇಲ್ಲ ಎಂದು ಉಲ್ಲೇಖವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ನಾನೇ ಪ್ರಧಾನಿ ಮೋದಿ, ಅಮಿತ್ ಶಾಗೆ ಹೇಳಿ ರಾಜೀನಾಮೆ ಕೊಟ್ಟೆ: K.S.ಈಶ್ವರಪ್ಪ

0

ರಾಯಚೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಶರಣಪ್ರಕಾಶ್​​ ಪಾಟೀಲ್ ರಾಜೀನಾಮೆಗೆ K.S.ಈಶ್ವರಪ್ಪ ಆಗ್ರಹಿಸಿದ್ದಾರೆ. ನನ್ನ ಹೆಸರು ಬರೆದಿಟ್ಟು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಕಾಂಗ್ರೆಸ್​ ನಾಯಕರು ನನ್ನ ರಾಜೀನಾಮೆಗೆ ಪಟ್ಟು ಹಿಡಿಯಲಿಲ್ಲ.

ನಾನೇ ಪ್ರಧಾನಿ ಮೋದಿ, ಅಮಿತ್ ಶಾಗೆ ಹೇಳಿ ರಾಜೀನಾಮೆ ಕೊಟ್ಟೆ. ತನಿಖೆ ಬಳಿಕ ನಿರ್ದೋಷಿ ಎಂದು ತೀರ್ಮಾನ ಆಯ್ತು. ‘ನಾನು ಸಚಿವ ಶರಣಪ್ರಕಾಶ್​​ ಪಾಟೀಲ್​ ದೋಷಿ ಅಂತಾ ಹೇಳಲ್ಲ, ಅವರ ಹೆಸರು ಬರೆದಿಟ್ಟು ಸತ್ತಿರುವುದರಿಂದ ರಾಜೀನಾಮೆ ಕೊಡಲಿ. ನಿರ್ದೋಷಿಯಾದ ಬಳಿಕ ನಂತರ ಮಂತ್ರಿ ಆಗಲಿ ಎಂದರು.

Breaking: ಖಾಕಿ ಎದುರೇ ಸಿಗರೇಟ್ ಸೇದಿದ ರೌಡಿ – ಕ್ಯಾರೆ ಎನ್ನದ ಪೊಲೀಸ್ ಸಿಬ್ಬಂದಿ

0

ಬೆಂಗಳೂರು;- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧೂಮಪಾನಿಗಳಿಂ ಸಾರ್ವಜನಿಕರಿಗೆ ತೊಂದರೆಯಾಗ್ತಿದೆ. ಹೀಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಈಗಾಗಲೆ 960 ಕ್ಕೂ ಹೆಚ್ಚು ಕೋಟ್ಪಾ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.ಕೆಳ ಹಂತದ ಸಿಬ್ಬಂದಿಯಿಂದ ಕಾಯ್ದೆಯ ಪಾಲನೆಯಾಗ್ತಿದ್ಯಾ..?ಈ ವಿಡಿಯೋ ನೋಡಿದ್ರೆ ಇಲ್ಲ ಎನ್ನಬಹುದು. ಹೌದು ಕೋಳ ಹಾಕಿಸಿಕೊಂಡ ರೌಡಿ, ಪೊಲೀಸರ ಮುಂದೆ ಸಿಗರೇಟ್ ಸೇದುತ್ತಿದ್ದಾನೆ.

ಕೇಸ್ ಗೆಂದು ಕರೆ ತಂದಾಗ ಪೊಲೀಸರ ಮುಂದೆಯೇ ರೌಡಿಯೊಬ್ಬನ ಕೃತ್ಯ ನಡೆದಿದೆ. ರಾಜಾರೋಷವಾಗಿ ಸಿಗರೇಟ್ ಸೇದುತ್ತಿದ್ದರು ಸಿಬ್ಬಂದಿ ಕ್ಯಾರೆ ಎಂದಿಲ್ಲ. ಕುಖ್ಯಾತ ರೌಡಿಶೀಟರ್ ರಾಹುಲ್ @ ಸ್ಟಾರ್ ರಾಹುಲ್ ನಿಂದ ಕೃತ್ಯ ನಡೆದಿದೆ. ಇನ್ನೂ ಮೀಸೆ ಚಿಗುರದ ಯುವಕ ಅದಾಗಲೇ ಹತ್ತಾರು ಕೇಸುಗಳನ್ನ ಮಾಡಿರುವ ನಟೋರಿಯಸ್.

ಮತ್ತೊಬ್ಬ ನಟೋರಿಯಸ್ ರೌಡಿ ಕುಳ್ಳು ರಿಜ್ವಾನ್ ಸಹಚರನಾಗಿರುವ ಸ್ಟಾರ್ ನವೀನ್ . ಈ ಹಿಂದೆ ಪೊಲೀಸರಿಗೆ ತಾಕತ್ ಇದ್ರೆ ನನ್ನ ಹಿಡಿರಿ ಎಂದು ವಿಡಿಯೋ ಬಿಟ್ಟಿದ್ದ. ವೇಳೆ ಆಗಿನ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ಇನ್ಸ್ ಪೆಕ್ಟರ್ ಗಳ ತಂಡ ಅವನನ್ನ ಹುಡುಕಿ ಕಾಲಿಗೆ ಗುಂಡು ನುಗ್ಗಿಸಿದ್ದರು ಇಂತಹ ನಟೋರಿಯಸ್ ರೌಡಿಗಳಿಗೆ ಯಾವುದೇ ಕೋಟ್ಪಾ ಕಾಯ್ದೆ ಅನ್ವಯವಾಗಲ್ವ …? ಎಂಬ ಪ್ರಶ್ನೆ ಮೂಡಿದೆ.ಸದ್ಯ ಸ್ಟಾರ್ ರಾಹುಲ್ ವಿಡಿಯೋ ನೋಡಿಯಾದ್ರು ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ.

ಹಾಡಹಗಲೇ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ..! ಆರೋಪಿಯ ಬಂಧನ

0

ತುಮಕೂರು: ಆಟೋ ಚಾಲಕನೊಬ್ಬ ಹಾಡಹಗಲೇ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ಸೈಯದ್ (40) ಎಂದು ಗುರುತಿಸಲಾಗಿದ್ದು, ಈತ ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಆರೋಪಿ ಸೈಯದ್, ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನ ಪುಸಲಾಯಿಸಿದ್ದಾನೆ.

ಬಳಿಕ ತನ್ನ ಆಟೋದಲ್ಲಿ ನಿರ್ಜನಕ್ಕೆ ಪ್ರದೇಶಕ್ಕೆ ಕರೆದೊಯ್ದು ಆಟೋದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇತ್ತ ಸೈಯದ್ ಬಾಲಕಿಯನ್ನು ಕರೆದೊಯ್ದಿರುವ ವಿಚಾರ ತಿಳಿದು ಸಾರ್ವಜನಿಕರು ಆತನನ್ನು ಹಿಂಬಾಲಿಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಇತ್ತ ಬಾಲಕಿಯನ್ನ ರಕ್ಷಿಸಿ ಆರೋಪಿಯನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಾಲಕಿ ಅನಾಥಳಾಗಿದ್ದು, ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದಳು.

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

0

ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆಉತ್ತರಿಸಿದ ಸಚಿವರು, ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ,ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಡಿ ಧ್ಚನಿಯಲ್ಲಿ ಸ್ಪಷ್ಟಪಡಿಸ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವರು ಹೇಳಿದರು.

ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೆ ಕೇಳಿ ಎಂದ ಹೆಬ್ಬಾಳಕರ್, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ
ಡಿ.ಕೆ. ಶಿವಕುಮಾರ್ ರನ್ನು ಯಾಕೆ ಎಳೆದು ತರ್ತೀರಾ ಎಂದು ಮಾಧ್ಯಮದವರನ್ನ ಪ್ರಶ್ನಿಸಿದರು. ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಎಂಎಲ್ಎಗಳು ಗೆಲ್ಲುವುದಕ್ಕೆ ತಮ್ಮದೇ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು.

error: Content is protected !!