Home Blog Page 3217

ಬಹಿರಂಗ ಪ್ರಚಾರ ಅಂತ್ಯ; ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ಸೋಮವಾರ 7 ಗಂಟೆಗೆ ಮತದಾನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 7 ಗಂಟೆಗೆ ಬಹಿರಂ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ವೇಳೆ ಯಾವ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಬಹಿರಂಗ ಪ್ರಚಾರ ಮಾಡಬಾರದು ಎಂದು ಚುನಾವಣಾ ಆಯೋಗ ಸೂಚಿಸಿದ್ದರು. ಅಭ್ಯರ್ಥಿಗಳು ಮಾತ್ರ ಯಾರ ಭಯವಿಲ್ಲದೇ ಅವಳಿ ನಗರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಈ ಕುರಿತು ಚುನಾವಣೆ ಅಧಿಕಾರಿಗಳಿಗೆ ಪತ್ರ ಬರೆದು ದೂರು‌ ನೀಡಿರುವ 29ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಸುಧಾಕರ ವೀರಾಪೂರ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದರೂ, ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ನಡೆಸಿದ್ದಾರೆ. ತಕ್ಷಣ ಬಹಿರಂಗ ಪ್ರಚಾರ ನಿಲ್ಲಸದೇ ಹೋದರೆ, ನಾವು ಬಹಿರಂಗ ಪ್ರಚಾರ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು,ಎಂಸಿಸಿ‌ ಅಧಿಕಾರಿಗಳಾದ ಬಿ.ಕಲ್ಲೇಶ್ ಅವರು ಪ್ರತಿಕ್ರಿಯಿಸಿ ‘ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಹೀಗಾಗಿ ಯಾರೂ ಬಹಿರಂಗ ಪ್ರಚಾರ ಮಾಡುವಂತಿಲ್ಲ. ಅವಳಿ‌ ನಗರದ ವಾರ್ಡ್ ನಂ.೨೯ಗೆ ಸಂಬಂಧಿಸಿದ ಆರ್ ಒ ಎನ್.ಟಿ.ನೆಗಳೂರು ಅವರಿಗೆ ಸೂಚಿಸಿಲಾಗಿದೆ. ಅಲ್ಲದೇ, ಸಿಪಿಐ ಅವರ ಗಮನಕ್ಕೂ ತಂದಿದ್ದು ಅವರು ಅಲ್ಲಿಗೆ ಹೋಗಿದ್ದಾರೆ’ ಎಂದು ತಿಳಿಸಿದರು.

’29ನೇ ವಾರ್ಡ್ ನಲ್ಲಿ ಬಹಿರಂಗ ಪ್ರಚಾರ ಮಾಡುತ್ತಿದ್ದಾರೆ ಎಂಬುವುದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತನೆ’ ಎಂದು ಬಡಾವಣೆ ಪೊಲೀಸರು ತಿಳಿಸಿದರು.

ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೆಸ್ ಬಾಹ್ಯ ಬೆಂಬಲ?

ವಿಜಯಸಾಕ್ಷಿ ಸುದ್ದಿ, ಗದಗ:

ನಗರಸಭೆಯ ಚುನಾವಣೆಗೆ ಇನ್ನೆರಡು ದಿನಗಳು ಬಾಕಿ ಇರುವಾಗಲೇ ಅವಳಿ ನಗರದ ವಾರ್ಡ್‌ವೊಂದರಲ್ಲಿ ಕಾಂಗ್ರೆಸ್ ಪಕ್ಷ ಪಕ್ಷೇತರ ಅಭ್ಯರ್ಥಿಗೆ ಬಾಹ್ಯ ಬೆಂಬಲ ಘೋಷಿಸಿದೆ ಎಂಬ ಊಹಾಪೋಹಗಳು ಶುಕ್ರವಾರ ಬೆಳಗ್ಗೆಯಿಂದ ಗದಗ-ಬೆಟಗೇರಿ ನಗರದಾದದ್ಯಂತ ಕೇಳಿ ಬರುತ್ತಿವೆ.

ಹಿಂದುಳಿದ ‘ಎ ವರ್ಗಕ್ಕೆ ಮೀಸಲಾಗಿದ್ದ ವಾರ್ಡ್ ನಂ.28ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದಂತಹ ವಾತಾವರಣ ಇರಲಿಲ್ಲ. ಈ ಕಾರಣಕ್ಕಾಗಿಯೇ ಅಭ್ಯರ್ಥಿ ಘೋಷಿಸುವಲ್ಲಿ ತಡವಾಗಿತ್ತು. ಬಿಜೆಪಿಯ ಭದ್ರಕೋಟೆಯಾಗಿರುವ ಈ ವಾರ್ಡ್‌ನಲ್ಲಿ ಬಿಜೆಪಿಯ ಕಾರ್ಯಕರ್ತ ಬದ್ರಿ ಅಲಿಯಾಸ್ ವೀರಭದ್ರಪ್ಪ ಡಂಬಳ ಅವರ ಪತ್ನಿ ಮಹಾಲಕ್ಷ್ಮೀಗೆ ಟಿಕೆಟ್ ಕೇಳಿದ್ದ. ಆದರೆ, ಮಹಾಲಕ್ಷ್ಮೀಗೆ ಟಿಕೆಟ್ ಸಿಕ್ಕಿರಲಿಲ್ಲ. ಮಾಜಿ ಸದಸ್ಯ ಅನಿಲ್ ಅಬ್ಬಿಗೇರಿಗೆ ಟಿಕಟ್ ನೀಡಿತ್ತು. ಇದರಿಂದಾಗಿ ಆಕ್ರೋಶಗೊಂಡ ಬದ್ರಿ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾನೆ. ಇದರಿಂದ ಪಕ್ಷದ ಮುಖಂಡರಿಗೆ ಇರುಸು ಮುರುಸಾಗಿ ನಾಮಪತ್ರ ವಾಪಸ್ ಪಡೆಯುಲು ಸಾಕಷ್ಟು ಒತ್ತಡ ಹಾಕಿದ್ದರೂ, ಹಿಂಪಡೆಯದೇ ಅಂತಿಮವಾಗಿ ಕಣದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾನೆ.

ಆದರೆ, ಆರಂಭದಲ್ಲಿ ಅಷ್ಟೇನೂ ಪ್ರಭಾವಿಯಾಗಿ ಕಾಣಿಸಿಕೊಳ್ಳದ ಪಕ್ಷೇತರ ಅಭ್ಯರ್ಥಿ ಮಹಾಲಕ್ಷ್ಮೀ ಇದೀಗ ಮತದಾರರನ್ನು ಸೆಳೆಯುವಲ್ಲಿ ಮುಂದಾಗಿದ್ದು, ಇವರಿಗೆ ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲ ಮುಖಂಡರು ಬೆಂಬಲಿಸಿ ಕೈ ಸುಟ್ಟುಕೊಳ್ಳುವಂತಾಗಿದೆ.

ಕಾಂಗ್ರೆಸ್‌ನವರು ಹಣ ಕೊಟ್ಟರೇ?

ಶುಕ್ರವಾರ ಮುಂಜಾನೆಯಿಂದಲೂ ವಾರ್ಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಯ ಪತಿ ಹಣ ಪಡೆದಿದ್ದೇ ಸುದ್ದಿ. ಇಂತಹ ಒಂದು ಸುದ್ದಿ ಮೊದಲು ಎಲ್ಲಿ ಉದಯಿಸಿತೋ ಗೊತ್ತಿಲ್ಲ. ಆದರೆ, ವಾರ್ಡ್ ಸೇರಿ ಇಡೀ ಅವಳಿ ನಗರದೆಲ್ಲೆಡೆ 28ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೆಸ್‌ನವರು ಹಣ ಕೊಟ್ಟಿದ್ದಾರೆ ಮತ್ತು ಬಾಹ್ಯ ಬೆಂಬಲ ನೀಡಿದ್ದಾರೆ ಎನ್ನುವ ವದಂತಿ ಹಬ್ಬಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಹಾಲಕ್ಷ್ಮೀ ವೀರಭದ್ರಪ್ಪ ಡಂಬಳ ಅವರು, ‘ಇದು ಕೇವಲ ಗಾಳಿ ಸುದ್ದಿ, ಯಾರು ಭೇಟಿಯೂ ಆಗಿಲ್ಲ. ಯಾರು ಬೆಂಬಲವನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

‘ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ನಾವು ಯಾವುದೇ ಬೆಂಬಲ ಕೊಟ್ಟಿಲ್ಲ. ಯಾರಿಗೂ ಬಾಹ್ಯ ಬೆಂಬಲ ನೀಡಿಲ್ಲ. ಈ ಆರೋಪವೆಲ್ಲ ಸತ್ಯಕ್ಕೆ ದೂರವಾಗಿದ್ದು, ಎರಡೂ ಪಕ್ಷಗಳ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವೆಂಕನಗೌಡ ಆರ್. ಗೋವಿಂದಗೌಡ್ರ ಆರೋಪ ತಳ್ಳಿ ಹಾಕಿದರು.

//ಬಡವ ರಾಸ್ಕಲ್
ಸಿನಿಮಾ ವಿಮರ್ಶೆ// ಮಧ್ಯಮ ವರ್ಗದ ಹುಡುಗನ ಕಥೆ-ವ್ಯಥೆ

0

ಬಸವರಾಜ ಕರುಗಲ್.
ಬಡವರ ಮಕ್ಕಳನ್ನ ಹೀರೋ ಆಗೋಕೆ ಎಲ್ರಪ್ಪಾ ಬಿಡ್ತಿರಾ? ಹಿಂದೆಯಿಂದಾನೇ ಹೊಡೆದು ಬಿಡ್ತಿರಲ್ಲ ಎನ್ನುವ ಜಬರ್‌ದಸ್ತ್ ಡೈಲಾಗ್, ಫೈಟ್ ಜೊತೆ ಎಂಟ್ರಿ ಕೊಡೊ ನಟ ರಾಕ್ಷಸ, ಡಾಲಿ ಧನಂಜಯ್ ಇಡೀ ಸಿನಿಮಾದುದ್ದಕ್ಕೂ ನಗಸ್ತಾರೆ, ಅಳಸ್ತಾರೆ. ಬಡವ ರಾಸ್ಕಲ್ ಮಧ್ಯಮ ವರ್ಗದ ಹುಡುಗನ ಪ್ರೀತಿಯ ಕಥೆ ಮತ್ತು ವ್ಯಥೆ.

ಕಚಗುಳಿ, ಸೆಂಟೆಮೆಂಟ್ ಇರದಿದ್ದರೆ ಈ ಸಿನಿಮಾ ಕಥೆ ಮಾಮೂಲಿ ಲವ್ ಸ್ಟೋರಿ ಥರಾ ಆಗಿ ಬಿಡುವ ಅಪಾಯ ಇತ್ತು. ನಿರ್ದೇಶಕ ಶಂಕರ್ ಗುರು ಸಿನಿಮಾನ ಅಪಾಯದ ಅಂಚಿನಿಂದ ಮೇಲೆತ್ತಿ, ಮಧ್ಯಮ ವರ್ಗದ ಮನೆಯಲ್ಲಿ‌ ನಿತ್ಯ ನಡೆಯುವ ಎಳೆಯನ್ನ ಹೆಣೆದು ಉಪಾಯದಿಂದ ಪ್ರೇಕ್ಷಕರನ್ನು ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಇಲ್ಲಿ ಸೀಟಿನಂಚಿಗೆ ಕುಳಿತು ನೋಡುವ ದೃಶ್ಯಗಳಿಲ್ಲ, ಆದರೆ ಸೀಟಿಗೊರಗಿ ನಕ್ಕು ನಲಿಯುವ ದೃಶ್ಯಗಳಿಗಂತು‌ ಕೊರತೆ ಇಲ್ಲ.

ಶ್ರೀಮಂತ ಮನೆತನದ ಹುಡುಗಿಗೂ ಆಟೋ ಡ್ರೈವರ್ ಮಗನಿಗೂ ಲವ್ವು. ಒಂದು ಸಣ್ಣ ಕಾರಣಕ್ಕೆ ಬ್ರೇಕಪ್ಪು. ಕಾರಣ ತಿಳ್ಕೊಬೇಕಂದ್ರೆ ಬಡವ ರಾಸ್ಕಲ್‌ನನ್ನ ಥೇಟರ್‌ನಲ್ಲೇ ನೋಡಬೇಕು. ಕ್ಲೈಮಾಕ್ಸ್ ಹೊರತುಪಡಿಸಿ ಇಡೀ ಸಿನಿಮಾ ಫ್ಲ್ಯಾಶ್‌ಬ್ಯಾಕ್‌ನಲ್ಲಿದ್ದು, ಟ್ವಿಸ್ಟ್ ಕೊಡುವ, ನಗಿಸುವ, ಅಳಿಸುವ ಫ್ಲ್ಯಾಶ್‌ಬ್ಯಾಕ್‌ನಲ್ಲೇ ಕಥೆನ ಹೇಳ್ತಾ ಹೋಗಿರೋದು ಕನ್ನಡದ ಪ್ರೇಕ್ಷಕರಿಗೆ ಹೊಸತೇನಲ್ಲವಾದರೂ, ಸವಕಲು ಅನ್ನಿಸದ ಹಾಗೆ ಬಡವ ರಾಸ್ಕಲ್ ನೋಡಿಸ್ಕೊಂಡು ಹೋಗ್ತಾನೆ.

ಸಾಯಿಕುಮಾರ್ ಅಂತ ಹೆಸರು ಇಟ್ಕೊಂಡು ಒಂದೇ ಒಂದು ಡೈಲಾಗ್ ಇಲ್ವಲ್ಲೊ..!, ನರಕಕ್ಕೆ ಕಳಿಸಿದ್ರೂ ವಂಡರ್‌ಲಾ ಮಾಡ್ಕೊಂಡ್ ಬಿಡ್ತಾರೆ..ಹೀಗೆ ಇಂಥ
ಗಟ್ಟಿಯಾದ, ಕಚಗುಳಿ ಇಡುವ ಮಾತುಗಳು, ಮಾಸ್, ಅಲ್ಲಲ್ಲಿ ಡಬ್ಬಲ್ ಮೀನಿಂಗ್ ಡೈಲಾಗ್‌ಗಳು ಚಿತ್ರದ ಓಟಕ್ಕೆ ಪೂರಕವಾಗಿವೆ. ವಾಸುಕಿ ವೈಭವ್ ಸಂಗೀತದಲ್ಲಿ ಮೂಡಿ ಬಂದಿರೊ “ಉಡುಪಿ ಹೋಟಲು, ಮೂಲೆ ಟೇಬಲು” ರೋಮ್ಯಾಂಟಿಕ್ ಆಗಿಯೂ ಇಷ್ಟ ಆಗುತ್ತದೆ. ಉಳಿದ ಹಾಡುಗಳಿಗೂ ಗುನುಗುನಿಸುವ ಗುಣ ಇದೆ. ಛಾಯಾಗ್ರಾಹಕ ಪ್ರೀತ್ ಜಯರಾಮನ್ ಸಿನಿಮಾ ರಿಚ್ ಆಗಿ ಮೂಡಿ ಬರುವಂತೆ ಶ್ರಮಿಸಿದ್ದು ಎದ್ದು ಕಾಣುತ್ತದೆ. ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಲೇ ಸಿನಿಮಾ ನಿರ್ದೇಶಿಸುವ ಕನಸು ಕಂಡಿದ್ದ ಶಂಕರ ಗುರು ಮೊದಲ ಪ್ರಯತ್ನದಲ್ಲೇ ಸಿಕ್ಸರ್ ಹೊಡೆದಿದ್ದಾರೆ. ಆದರೆ ಈ ಸಿಕ್ಸರ್ ಚಿತ್ರತಂಡಕ್ಕೆ ಎಷ್ಟರಮಟ್ಟಿಗೆ ಪ್ರಯೋಜನವಾಗುತ್ತೆ ಕಾದು ನೋಡಬೇಕು.

ರಂಗಾಯಣ ರಘು ಮತ್ತು ತಾರಾ ಮಧ್ಯಮ ವರ್ಗದ ದಂಪತಿಯಾಗಿ ಅಭಿನಯದಲ್ಲಿ ಮತ್ತೊಮ್ಮೆ ಗೆದ್ದಿದ್ದಾರೆ. ಬಡವ ರಾಸ್ಕಲ್ ಮೂಲಕ ನಟ ರಾಕ್ಷಸನಾಗಿರೊ ಡಾಲಿ ಧನಂಜಯ್ ಪಾತ್ರಕ್ಕೆ ಜೀವ ತುಂಬಿದ್ದು, ಉಳಿದ ಕಲಾವಿದರು ಸ್ಕ್ರೀನ್‌ನಲ್ಲಿ ಸ್ಪೇಸ್ ಕೊಟ್ಟಿದ್ದಾರೆ. ನಟರಾಗಿ ಸರ್ಕಸ್ ಮಾಡಿರೊ ಡಾಲಿ ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದಾರೆ. ಸ್ಪರ್ಶ ರೇಖಾ ಮೊದಲ ಬಾರಿಗೆ ನೆಗೆಟಿವ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಕ್ಕಟ್‌ನ ನಾಗಭೂಷಣ್ ನಾಯಕನ ಗೆಳೆಯನಾಗಿ ಕಚಗುಳಿ ಇಡುತ್ತಲೇ ಇಷ್ಟವಾಗುತ್ತಾರೆ. ಕಾಮಿಡಿ ಆ್ಯಕ್ಟರ್ ಚೇರ್‌ಗೆ ಟವಲ್ ಹಾಕಿ ಮೀಸಲಿರಿಸಿದ್ದಾರೆ.

ಈ ವಾರ ಕನ್ನಡದಲ್ಲೇ ಮೂರ್ನಾಲ್ಕು ಸಿನಿಮಾಗಳು ರಿಲೀಸ್ ಆಗಿವೆ. ಅವುಗಳಲ್ಲಿ ಬಡವ ರಾಸ್ಕಲ್ ಸಿನಿಮಾ ನೋಡಿದರೆ ಕೊಟ್ಟ ದುಡ್ಡಿಗೆ ಮೋಸವಿಲ್ಲ ಅನ್ನಬಹುದು, ಆದರೆ ಪೈಸಾ ವಸೂಲ್ ಸಿನಿಮಾ ಅಂತ ಹೇಳೋದು ಕೊಂಚ ಕಷ್ಟಾನೇ..!

ರೇಟಿಂಗ್: ***

ಗದಗ ಜಿಲ್ಲೆಯ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ಸಮೀಕ್ಷೆ

ಆರ್‌ಡಿಪಿಆರ್‌ನಿಂದ ಯಾದಗಿರಿ, ಗದಗ ಜಿಲ್ಲೆಯ ಮಕ್ಕಳ ಅಪೌಷ್ಟಿಕತೆ ಕುರಿತು ಅಧ್ಯಯನ

ದುರಗಪ್ಪ ಹೊಸಮನಿ

ವಿಜಯಸಾಕ್ಷಿ ಸುದ್ದಿ, ಗದಗ:

ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕೇಂದ್ರ ಸರ್ಕಾರ ಶಾಲಾ ಮಕ್ಕಳಲ್ಲಿನ ಪೌಷ್ಟಿಕಾಂಶ ವೃದ್ಧಿಸಲು, ಕಲಿಕೆಯ ಪ್ರಮಾಣ ಹೆಚ್ಚಾಗಬೇಕು, ಮಕ್ಕಳು ಹೆಚ್ಚು ಶಕ್ತಿಯುತವಾಗಿ ಬೆಳೆಯಬೇಕು ಎಂಬ ದೃಷ್ಟಿಯಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲಾಗುತ್ತಿದೆ. ತಜ್ಞರ ಪ್ರಕಾರ 8-15 ವಯಸ್ಸಿನ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಕಾಡುತ್ತಿದೆ ಎಂಬ ಕಾರಣದಿಂದಾಗಿ ರಾಜ್ಯ ಸರ್ಕಾರ ಹೊಸ ಪ್ರಯೋಗ ನಡೆಸಿದೆ.

ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುತ್ತಿದೆ. ಗದಗ ಜಿಲ್ಲೆಗೂ ಯೋಜನೆ ವಿಸ್ತರಿಸುವಂತೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಯಾದಗಿರಿ, ಗದಗ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ವಿಶ್ವವಿದ್ಯಾಲಯ ಅಧ್ಯಯನ ಕೈಗೊಂಡಿದೆ.

ಯಾದಗಿರಿ ಅಧ್ಯಯನ ಜಿಲ್ಲೆ

ಶಾಲಾ ಮಕ್ಕಳು ಹೆಚ್ಚು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿರುವ ಯಾದಗಿರಿಯನ್ನು ಅಧ್ಯಯನ ಜಿಲ್ಲೆಯನ್ನಾಗಿ ಆಯ್ಕೆ ಮಾಡಿದೆ. ಅದರಂತೆ ಗದಗವನ್ನು ಕಂಟ್ರೋಲ್ ಜಿಲ್ಲೆಯನ್ನಾಗಿ ಆಯ್ದುಕೊಂಡಿರುವ ವಿಶ್ವವಿದ್ಯಾಲಯವು ಎರಡೂ ಜಿಲ್ಲೆಗಳ 60 ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮಕ್ಕಳ ಆರೋಗ್ಯದ ಸ್ಥಿತಿಗತಿ, ರಕ್ತಹೀನತೆ, ಎತ್ತರ, ತೂಕ ಮತ್ತಿತರ ಅಂಶಗಳನ್ನು ಇಟ್ಟುಕೊಂಡು ಮೂಲ ಸಮೀಕ್ಷೆ ನಡೆಸಿ ಪೂರ್ಣಗೊಳಿಸಿದೆ.

ವಿಶ್ವವಿದ್ಯಾಲಯದ ಒಟ್ಟು 80 ವಿದ್ಯಾರ್ಥಿಗಳು, 10ಕ್ಕೂ ಹೆಚ್ಚು ಅಧ್ಯಾಪಕರು ಸಮೀಕ್ಷೆ ನಡೆಸಿದ್ದು, ಸೆಂಟರ್ ಫಾರ್ ರಿಸರ್ಚ್ ಇನೋವೇಶನ್ ಆಂಡ್ ಇವ್ಯಾಲುವೇಶನ್‌ನ ಸಹಾಯಕ ನಿರ್ದೇಶಕ ಗಿರೀಶ್ ದೀಕ್ಷಿತ್ ಅವರ ನೇತೃತ್ವದಲ್ಲಿ ಅಧ್ಯಯನ ನಡೆದಿದೆ.

ಗದಗ ಕಂಟ್ರೋಲ್ ಜಿಲ್ಲೆ

ಮಧ್ಯಾಹ್ನದ ಊಟದ ಜೊತೆಗೆ ವಾರದಲ್ಲಿ ಮೂರು ದಿನ ಮೊಟ್ಟೆ ನೀಡಲಾಗುತ್ತಿದೆ. ಅಲ್ಲದೆ, ಮಕ್ಕಳಲ್ಲಿ ಪೌಷ್ಟಿಕಾಂಶ ಬೆಳೆಸಲಿಕ್ಕೆ ಸಹಕಾರಿಯಾಗಲಿದೆ ಎಂಬ ಕಾರಣಕ್ಕಾಗಿ ಡಿ. 1ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ದೃಷ್ಟಿಯಿಂದ ರಾಜ್ಯದ ಶೈಕ್ಷಣಿಕ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾಲೋಚನೆ ನಡೆಸಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಅಧ್ಯಯನದ ಜವಾಬ್ದಾರಿ ನೀಡಿದ್ದರು.

ವಿಶ್ವವಿದ್ಯಾಲಯವು ಒಂದು ತಿಂಗಳಿಂದ ಎಲ್ಲ ಸಿದ್ಧತೆ ನಡೆಸಿ, ಅಧ್ಯಾಪಕರು, ತಜ್ಞರು, ವಿದ್ಯಾರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಮೂಲ ಸಮೀಕ್ಷೆ ಮಾಡಿದ್ದಾರೆ. ಇದರೊಂದಿಗೆ ವಾಸ್ತವಿಕ ಅಂಶವನ್ನು ಅರ್ಥೈಸಿಕೊಳ್ಳುವ ಸಲುವಾಗಿ ಗದಗವನ್ನು ಕಂಟ್ರೋಲ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು ಎರಡೂ ಜಿಲ್ಲೆಗಳಲ್ಲಿ ಮೂಲ ಸಮೀಕ್ಷೆ ಮುಕ್ತಾಯಗೊಂಡಿದೆ.

4500 ವಿದ್ಯಾರ್ಥಿಗಳ ಸಮೀಕ್ಷೆ

ಯಾದಗಿರಿ, ಗದಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸೇರಿ ಪ್ರತಿ ಜಿಲ್ಲೆಯಲ್ಲೂ 30 ಶಾಲೆಗಳನ್ನು ಆಯ್ಕೆ ಮಾಡಿಕೊಂಡಿದೆ. 4500 ವಿದ್ಯಾರ್ಥಿಗಳಲ್ಲಿ ಅವರ ಆಹಾರ-ವಿಹಾರ ಪದ್ಧತಿ, ಊಟ ವ್ಯವಸ್ಥೆ, ವ್ಯಕ್ತಿಗತ ಮಾಹಿತಿ, ಆರೋಗ್ಯ ಸ್ಥಿತಿಗತಿ ಸೇರಿ ಇತರ ಮಾಹಿತಿಗಳನ್ನು ದಾಖಲಿಸುವ ಮೊದಲ ಹಂತದ ಸಮೀಕ್ಷಾ ಕಾರ್ಯ ಮುಗಿದಿದೆ. ಇದರ ಅನಂತರ ಮಿಡ್‌ಲೈನ್ ಪ್ರಾಸೆಸ್ ರಿವ್ಯಾಲ್ಯೂವೇಶನ್ ಮಾಡಲಾಗುತ್ತದೆ. ಬಳಿಕ 2022 ಮಾರ್ಚ್‌ನಲ್ಲಿ ಅಂತಿಮ ಸಮೀಕ್ಷೆ ನಡೆಸಿ ಅಧ್ಯಯನದ ಸಂಪೂರ್ಣ ದತ್ತಾಂಶವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ಕುಲಪತಿ ವಿಷ್ಣುಕಾಂತ ಚಟಪಲ್ಲಿ ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಸರ್ಕಾರ ನೀಡಿದ ಅಧ್ಯಯನದ ಜವಾಬ್ದಾರಿಯನ್ನು ಸಮರ್ಪಕ, ಸಮರ್ಥ ಹಾಗೂ ಬಹಳ ವಿಶ್ವಾಸದಿಂದ ವಿದ್ಯಾರ್ಥಿ ಅಧ್ಯಾಪಕರು ಮಾಡಿದ್ದಾರೆ.

ವಿಷ್ಣುಕಾಂತ ಚಟಪಲ್ಲಿ, ಕುಲಪತಿ

ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮಾತ್ರವೇ ಮೊಟ್ಟೆ ನೀಡಲಾಗುತ್ತಿದೆ. ಗದಗನ್ನು ಕಂಟ್ರೋಲ್ ಜಿಲ್ಲೆಯನ್ನಾಗಿ ಆಯ್ದುಕೊಂಡು ಆರ್‌ಡಿಪಿಆರ್ ವಿಶ್ವವಿದ್ಯಾಲಯದ ವತಿಯಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಅದರಂತೆ, ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿವರೆಗಿನ ಒಟ್ಟು 1.43 ಲಕ್ಷ ಮಕ್ಕಳು ಬಿಸಿಯೂಟ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ.

ಮಂಗಳಾ ತಾಪಸ್ಕರ್, ಅಕ್ಷರ ದಾಸೋಹ

‘ಕೈ’ ಅಭ್ಯರ್ಥಿ ಪರ ಶಾಸಕ ಸಲೀಂ ಅಹ್ಮದ್ ಮತಯಾಚನೆ

0

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ-ಬೆಟಗೇರಿ ನಗರಸಭೆ ಚುನಾವಣೆಯ ಅಂಗವಾಗಿ ವಾರ್ಡ್ ನಂ.20ರ ಕಾಂಗ್ರೆಸ್ ಅಭ್ಯರ್ಥಿ ಪರವೀನಬಾನು ಅಬ್ದುಲ್ ಮುನಾಫ್ ಮುಲ್ಲಾ ಅವರ ಪರವಾಗಿ ಕಾಂಗ್ರೆಸ್ ಕೈ ನಾಯಕರು ಭರ್ಜರಿ ಪ್ರಚಾರ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕ ಎಚ್.ಕೆ.ಪಾಟೀಲ್, ಮಾಜಿ ಶಾಸಕರಾದ ಡಿ.ಆರ್.ಪಾಟೀಲ್, ರಾಮಕೃಷ್ಣ ದೊಡ್ಡಮನಿ, ಜಿ.ಎಸ್.ಪಾಟೀಲ್, ಮುಖಂಡರಾದ ವಾಸಣ್ಣ ಕುರುಡಗಿ, ಗುರಣ್ಣ ಬಳಗಾನೂರ, ಕೆ.ಎಂ.ಸೈಯದ್ ಸೇರಿ ಹಲವು ಪ್ರಮುಖ ನಾಯಕರು ಮತಯಾಚಿಸಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ದಾವಲ್ ಸಾಬ್ ಈಟಿ, ಖಾಜಸಾಬ್ ಕೊಪ್ಪಳ, ಸುರೇಶ್ ಕಲಬುರ್ಗಿ, ಹನುಮಂತಪ್ಪ ಮುಂಡರಗಿ, ಅಬ್ದುಲ್ ರೆಹಮಾನ್ ಹುಯಿಲಗೋಳ, ಯುಸೂಫ್ ಕೊಟ್ಟೂರ, ಆರಿಫ್ ಹುನಗುಂದ, ದಾವೂದ್ ಶಿರಹಟ್ಟಿ ಸೇರಿದಂತೆ 20ನೇ ವಾರ್ಡ್ ನ ಗುರು-ಹಿರಿಯರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿ ಪರ ಉಪನ್ಯಾಸಕರ ಪ್ರಚಾರ; ಕಣ್ಮಚ್ಚಿ ಕುಳಿತ ಅಧಿಕಾರಿಗಳು

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ-ಬೆಟಗೇರಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವಳಿ ನಗರದಾದ್ಯಂತ ವ್ಯಾಪಕ ಪ್ರಚಾರ ನಡೆದಿದೆ. ಆದರೆ, ಚುನಾವಣಾ ಕಾರ್ಯಕ್ಕೆ ಕಾಲೇಜು ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ‌ ಬಂದಿದೆ.

ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಿದ್ದ ಶಿಕ್ಷಕರು ರಾಷ್ಟ್ರೀಯ ಪಕ್ಷದ ಕಾರ್ಯಕರ್ತರಂತೆ ಚುನಾವಣಾ ಅಖಾಡದಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಅವಳಿ ನಗರದ 11ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಶ್ವೇತಾ ರವಿ ದಂಡಿನ ಅವರ ಪರವಾಗಿ ಹಗಲು ರಾತ್ರಿ ಎನ್ನದೇ ಮುಖಂಡ ರವಿ ದಂಡಿನ‌ ಸೇರಿದಂತೆ ಬಿಜೆಪಿಯ ಮುಖಂಡರು, ಕಾರ್ಯಕರ್ತರ ಜೊತೆಗೆ ಪ್ರಚಾರದಲ್ಲಿ ತೊಡಗಿದ್ದಾರೆ.

ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಕೆಲವು ಉಪನ್ಯಾಸಕರನ್ನು ಒತ್ತಡದ ಮೂಲಕ ಪ್ರತಿಯೊಂದು ಕಾರ್ಯ ಚಟುವಟಿಕೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ.

ಇವರೆಲ್ಲರೂ ನಾಮಪತ್ರ ಸಲ್ಲಿಸುವ ವೇಳೆಯೂ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಯುಜಿಸಿ ಸಂಬಳ ಪಡೆಯುತ್ತಿರುವ ಉಪನ್ಯಾಸಕರು ಕೂಡ ಬಿಜೆಪಿ ಕಾರ್ಯಕರ್ತರಂತೆ ಓಡಾಡೋದು ಪ್ರಜ್ಞಾವಂತರಲ್ಲಿ ಆಕ್ರೋಶ ತರಸಿದೆ. ಇಂತಹ
ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ‌.

ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ
ಮಾದರಿ ನೀತಿ ಸಂಹಿತೆ (ಎಂಸಿಸಿ) ತಂಡ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಚಿಕ್ಕನರಗುಂದದಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

0

ವಿಜಯಸಾಕ್ಷಿ ಸುದ್ದಿ, ನರಗುಂದ:

ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ ನಡೆಯಿತು.

೨೦೨೧-೨೨ನೇ ಸಾಲಿನ ೧ ಮತ್ತು ೨ನೇ ಹಂತದ ಮಹಾತ್ಮಾ ಗಾಂಧಿ ರಾಷ್ತ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ೨೦೨೦-೨೧ರ ೧೪ ಮತ್ತು ೧೫ನೇ ಹಣಕಾಸು ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಜರುಗಿತು. ನೋಡಲ್ ಅಧಿಕಾರಿಗಳಾಗಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರರಾದ ಎಸ್.ಎಸ್.ವಾಲಿ ಆಗಮಿಸಿದ್ದರು.

ಸಭೆಯಲ್ಲಿ ಗ್ರಾ.ಪಂ.ಅಧ್ಯಕ್ಷ ಮುತ್ತು ರಾಯರಡ್ಡಿ, ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಲಕ್ಷ್ಮಣ ಕಂಬಳಿ, ಶರಣಬಸಪ್ಪ ಹಳೇಮನಿ, ಬಾಪು ಹಿರೇಗೌಡ್ರ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶಂಕ್ರಮ್ಮ ಚಲವಾದಿ, ಪಿಡಿಒ ಶೈನಾಜ್ ಮುಜಾವರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಮಾಜಿಕ ಪರಿಶೋಧನಾ ತಾಲೂಕು ಸಂಯೋಜಕ ಜಿ.ಎನ್.ಅಬ್ದುಲ್‌ಪುರ್, ಸಂಪನ್ಮೂಲ ವ್ಯಕ್ತಿಗಳಾದ ಎಂ.ಎಂ.ಆಶೇಖಾನ್, ಎಂ.ಆರ್.ಖನ್ನೂರ, ಎಸ್.ಬಿ.ದೇಸಾಯಿ, ಜೆ.ಜೆ.ಬಡಿಗೇರ, ಎಸ್.ವಿ.ಕೆಂಚನಗೌಡ್ರ, ಎಸ್.ಪಿ.ಬಡಿಗೇರ ಸೇರಿದಂತೆ ಗ್ರಾಮಸ್ಥರು ಇದ್ದರು.

ಸ್ನೇಹ-ಸಂಬಂಧಗಳ ಮಧ್ಯೆ ಜಂಗಿ ಕುಸ್ತಿ; ಚಹಾ ಮಾರುವವನಿಗೆ ಬಿಜೆಪಿ ಟಿಕೆಟ್

ಗದಗ-ಬೆಟಗೇರಿ ನಗರಸಭೆ ಚುನಾವಣೆ ವಿಶೇಷ

ವಿಜಯಸಾಕ್ಷಿ ವಿಶೇಷ, ಗದಗ


ಗದಗ-ಬೆಟಗೇರಿ ನಗರಸಭೆ ಚುನಾವಣೆ ಅವಳಿ ನಗರದ ಜನರಲ್ಲಿ ದಿನದಿಂದ ದಿನಕ್ಕೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ಹಲವು ವೈಶಿಷ್ಟ್ಯಗಳನ್ನು ಕಂಡಿದೆ. ಕೆಲವು ಅಭ್ಯರ್ಥಿಗಳಿಗೆ ಊಹೆಗೂ ಮೀರಿ ಟಿಕೆಟ್ ಸಿಕ್ಕಿದೆ. ಇನ್ನು ಕೆಲವರು ನಿರೀಕ್ಷಿಸದೆ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಹಲವರ ಮಧ್ಯೆ ನಿರೀಕ್ಷಿಸದಷ್ಟು ಸ್ಪರ್ಧೆ ಏರ್ಪಟ್ಟಿದೆ.

ಅವಳಿ ನಗರ ಸ್ಥಳೀಯ ಸಂಸ್ಥೆಯ ಚುನಾವಣೆಯ ಕಣದಲ್ಲಿ ಸಂಬಂಧಿಗಳು, ಸ್ನೇಹಿತರು, ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು ಎದುರು ಬದುರಾಗಿದ್ದಾರೆ. ಚುನಾವಣೆಗೂ ಮುನ್ನ ಸ್ನೇಹಿತರು, ಸಂಬಂಧಿಗಳಾಗಿದ್ದವರು ಇದೀಗ ಎದುರಾಳಿಗಳಾಗಿ ಚುನಾವಣೆಗೆ ಅಣಿಯಾಗಿದ್ದಾರೆ.

ಒಬ್ಬ ಸಾಮಾನ್ಯ ಚಹಾವಾಲಾ ಸಹಿತ ಈ ದೇಶದ ಪ್ರಧಾನಿಯಾಗಬಲ್ಲ ಎಂಬ ಜನ ಸಂದೇಶ ಸಾರಿರುವ ಬಿಜೆಪಿ, ಗದಗ-ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಚಹಾ ಮಾರಾಟ ಮಾಡುವ ವ್ಯಕ್ತಿಗೆ ಟಿಕೆಟ್ ನೀಡಿದೆ.

ಸ್ನೇಹಿತರ ಸವಾಲ್

ನಗರದ ವಾರ್ಡ್ ನಂ.19ರಲ್ಲಿ ಕಾಂಗ್ರೆಸ್‌ನ ಸಂಗಮೇಶ ಕವಳಿಕಾಯಿ ಹಾಗೂ ಬಿಜೆಪಿಯ ಮಹಾಂತೇಶ ನಲವಡಿ, ವಾರ್ಡ್ ನಂ. 7ರಲ್ಲಿ ಬಿಜೆಪಿಯ ರಾಘವೇಂದ್ರ ಯಳವತ್ತಿ ಹಾಗೂ ಕಾಂಗ್ರೆಸ್‌ನ ನಾಗಲಿಂಗ ಐಲಿ ಆತ್ಮೀಯ ಸ್ನೇಹಿತರಾಗಿದ್ದಾರೆ. ರಾಘವೇಂದ್ರ ಹಾಗೂ ನಾಗಲಿಂಗ 2013ರ ನಗರಸಭೆ ಚುನಾವಣೆಯಲ್ಲಿ ಗೆದ್ದು ಬಂದ ಮೇಲೆ ಇಬ್ಬರ ನಡುವೆ ಸ್ನೇಹ ಗಾಢವಾಗಿ ಬೆಳೆದಿತ್ತು. ಈ ಸ್ನೇಹಕ್ಕೆ ಎಂಟು ವರ್ಷಗಳಾಗಿವೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಹಿಂದುಳಿದ ವರ್ಗ ‘ಎ’ ಮೀಸಲಾತಿ ಬಂದಿರುವ ಕಾರಣ ಇಬ್ಬರು ಒಂದೇ ಪಕ್ಷದಲ್ಲಿದ್ದುಕೊಂಡೇ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದರು.

ಆದರೆ, ಟಿಕೆಟ್ ಸಿಗುವುದು ಅನುಮಾನ ಎಂಬುದನ್ನು ಅರಿತ ಐಲಿ ಅವರು ಕೊನೆಗಳಿಗೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ನೇಹಿತನ ಎದುರಾಳಿಯಾಗಿ ಪರಸ್ಪರ ಸವಾಲೊಡ್ಡಿದ್ದು, ಅವಳಿ ನಗರದಲ್ಲಿ ಭಾರೀ ಸಂಚಲನ ಮೂಡಿಸಿದೆ.

ದೂರದ ಸಂಬಂಧಿಗಳ ತ್ರಿಕೋನ ಸ್ಪರ್ಧೆ

ಗದಗ-ಬೆಟಗೇರಿಯ ವಾರ್ಡ್ ನಂ. 2ರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಮೂವರು ದೂರದ ಸಂಬಂಧಿಗಳ ಮಧ್ಯೆ ಜಟಾಪಟಿ ನಡೆದಿದೆ. ಕಾಂಗ್ರೆಸ್‌ನ ಅಭ್ಯರ್ಥಿ ಸುರೇಶ ಕಟ್ಟಿಮನಿ, ಜೆಡಿಎಸ್‌ನ ರಮೇಶ ಗಡಾದ ಹಾಗೂ ಪಕ್ಷೇತರ ಅಭ್ಯರ್ಥಿ ಮೋಹನ್ ಕಟ್ಟಿಮನಿ ಕಣದಲ್ಲಿದ್ದಾರೆ. ಮೋಹನ್ ಕಟ್ಟಿಮನಿ ಕಾಂಗ್ರೆಸ್ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಆದರೆ, ಪಕ್ಷದ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದು, ದೂರದ ಸಂಬಂಧಿ ಸುರೇಶ ಕಟ್ಟಿಮನಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ನಗರಸಭೆಯ ಅಧಿಕಾರದ ಮೆಟ್ಟಿಲೇರಿರುವ ಸುರೇಶ ಕಟ್ಟಿಮನಿ ಪುನಃ ಆಯ್ಕೆಯಾಗುವ ವಿಶ್ವಾಸದಲ್ಲಿಯೇ ವಾರ್ಡ್ ತುಂಬೆಲ್ಲ ಬಿರುಸಿನ ಪ್ರಚಾರ ನಡೆಸಿದ್ದಾರೆ. ಇತ್ತ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಂಡಾಯ ಅಭ್ಯರ್ಥಿ ಮೋಹನ್ ಕಟ್ಟಿಮನಿ ಹಾಗೂ ರಮೇಶ ಗಡಾದ ತಮ್ಮ ಬೆಂಬಲಿಗರೊಂದಿಗೆ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಮತದಾರರಿಂದಲೇ ಹಣ ಪಡೆದು ಮತಭಿಕ್ಷೆ

ಯಾವುದೇ ಚುನಾವಣೆಗಳಲ್ಲಿ ಅಭ್ಯರ್ಥಿಗಳು ಮತದಾರರಿಗೆ ಆಸೆ, ಆಮಿಷಗಳನ್ನೊಡ್ಡಿ ಮತ ಪಡೆಯುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ, ಅವಳಿ ನಗರದ ಪಕ್ಷೇತರ ಅಭ್ಯರ್ಥಿಗಳಾದ ವಾರ್ಡ್ 15ರ ವಿಶ್ವನಾಥ ಶೀರಿ ಹಾಗೂ ವಾರ್ಡ್ 21ರ ಮಂಜುನಾಥ ಬಿ.ಮುಳಗುಂದ ಚುನಾವಣಾ ಖರ್ಚಿಗಾಗಿ ಮತದಾರರಿಂದಲೇ ಹಣ ಪಡೆದು ಮತ ನೀಡುವಂತೆ ವಿಭಿನ್ನವಾಗಿ ಪ್ರಚಾರ ನಡೆಸಿದ್ದಾರೆ. ಮತದಾರರಿಗೆ ಹಣ ಹಂಚಿ, ಚುನಾವಣೆ ಗೆಲ್ಲುವ ಅಭ್ಯರ್ಥಿಗಳ ನಡುವೆ ವಿಶ್ವನಾಥ ಅವರ ವಿನೂತನ ಪ್ರಚಾರ ಶೈಲಿಗೆ ಅವಳಿ ನಗರದ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಚಹಾವಾಲಾಗೆ ಬಿಜೆಪಿ ಟಿಕೆಟ್!

ದೇಶದ ಪ್ರಧಾನಿ ನರೇಂದ್ರ ಮೋದಿ ರೈಲು ನಿಲ್ದಾಣವೊಂದರಲ್ಲಿ ಚಹಾ ಮಾರಾಟ ಮಾಡುತ್ತಿದ್ದರು ಎಂಬ ಬಗ್ಗೆ ಕೇಳಿದ್ದೇವೆ. ಸದ್ಯ ಅವರೀಗ ದೇಶದ ಉನ್ನತ ಹುದ್ದೆ ಅಲಂಕರಿಸಿರುವುದು ಇತಿಹಾಸ. ಅದರಂತೆ, ಗದಗ ಬೆಟಗೇರಿಯ ವಾರ್ಡ್ ನಂ. 23ರ ಬಿಜೆಪಿ ಟಿಕೆಟ್ ಅನ್ನು ಚೆನ್ನಪ್ಪ ದ್ಯಾಂಪುರ ಅವರಿಗೆ ನೀಡಿದೆ. ಬಿಜೆಪಿಯಲ್ಲಿ ಸಕ್ರಿಯರಾಗಿರುವ ಅವರು, ನಗರದ ರಾಚೋಟೇಶ್ವರ ದೇವಸ್ಥಾನದ ಎದುರುಗಡೆ ಚಹಾ ಅಂಗಡಿ ನಡೆಸುತ್ತಿದ್ದಾರೆ. ಗದಗ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚಹಾವಾಲಾನನ್ನು ಗೆಲ್ಲಿಸುವ ಮೂಲಕ ಇತಿಹಾಸ ಮರುಕಳಿಸಲು ಬಿಜೆಪಿ ಯತ್ನಿಸುತ್ತಿದೆ. ಅಲ್ಲದೇ, ಪಕ್ಷವು ಸಾಮಾನ್ಯ ಕಾರ್ಯಕರ್ತನನ್ನೂ ಗುರುತಿಸಿ ಟಿಕೆಟ್ ನೀಡುತ್ತಿದೆ ಎಂಬ ಸಂದೇಶ ಸಾರುತ್ತಿದೆ. ಆದರೆ, ಬಿಜೆಪಿ ತಂತ್ರ ಫಲಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉಳ್ಳವರೇ ಚುನಾವಣೆಗೆ ಸ್ಪರ್ಧಿಸಬೇಕೆಂಬ ಮನೋಭಾವನೆ ಬಂದಿದೆ. ಆದರೆ, ಹಣವಿಲ್ಲದಿದ್ದರೂ ಸ್ಪರ್ಧಿಸಬಹುದು ಎಂಬ ಸಂದೇಶ ಸಾರುವ ಸಲುವಾಗಿ ಮತದಾರರಿಂದಲೇ ಹಣ ಪಡೆದು ಮತಭಿಕ್ಷೆ ಕೇಳಲಾಗುತ್ತಿದೆ. ವಾರ್ಡ್‌ನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಜನಸಾಮಾನ್ಯನೂ ಆಸೆ, ಆಮಿಷವೊಡ್ಡದೆ ಗೆಲ್ಲಬಹುದು ಎಂಬ ವಿಶ್ವಾಸ ಮೂಡಿಸಿದೆ.

ವಿಶ್ವನಾಥ ಶೀರಿ, ಪಕ್ಷೇತರರ ಅಭ್ಯರ್ಥಿ

ನಗರಸಭೆ ಚುನಾವಣೆಯಲ್ಲಿ ಒಂದು ಪಕ್ಷವನ್ನು ಪ್ರತಿನಿಧಿಸುತ್ತಿರುವ ಕಾರಣ ಒಬ್ಬರಿಗೊಬ್ಬರು ಎದುರಾಳಿಗಳಾಗಿದ್ದು, ವೈಯಕ್ತಿಕವಾಗಿ ಒಳ್ಳೆಯ ಸ್ನೇಹಿತರಾಗಿದ್ದೇವೆ. ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಆ ಬಾಂಧವ್ಯ ಮುಂದುವರೆಯಲಿದೆ.

ಹೆಸರು ಹೇಳಲಿಚ್ಚಿಸದ ಅಭ್ಯರ್ಥಿ

ಚುನಾವಣೆಯಲ್ಲಿ ಗೆಲ್ಲಿಸಿ: ಕಣವಿ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಡಿಸೆಂಬರ್ 24ರಂದು‌ ನಡೆಯಲಿರುವ ಜಿಲ್ಲಾ ನ್ಯಾಯವಾದಿಗಳ ಸಂಘದ ಚುನಾವಣೆಯಲ್ಲಿ ನಮ್ಮ ಪ್ಯಾನಲ್‌ನ ನ್ಯಾಯವಾದಿಗಳನ್ನು ಸಂಘದ ಮತದಾರ ಬಂಧುಗಳು ಚುನಾಯಿಸಬೇಕೆಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎ.ವಿ.ಕಣವಿ ಮನವಿ ಮಾಡಿದರು.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳ ಸಂಕೀರ್ಣ ಸ್ಥಾಪನೆಗೆ ಪ್ರಥಮ ಪ್ರಾಶಸ್ತ್ಯವನ್ನು ನಮ್ಮ ತಂಡ ನೀಡಲಿದೆ. ಯುವ ವಕೀಲರ ಸುಸಜ್ಜಿತ ಬದುಕು ನಿರ್ಮಾಣಕ್ಕಾಗಿ ಕಾರ್ಯಾಗಾರ, ಸಹಕಾರ ಸಂಘ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳ ಸಾಕಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಕೊಪ್ಪಳ ಜಿಲ್ಲಾ ನ್ಯಾಯವಾದಿಗಳ ಸಂಘದ ಇದುವರೆಗಿನ ಸದಸ್ಯರ ಸಂಖ್ಯೆ 486ರಷ್ಟಿದ್ದು ರೆಗ್ಯುಲರ್ ಆಗಿ ಪ್ರ್ಯಾಕ್ಟೀಸ್ ಮಾಡುತ್ತಿರುವ 338 ಜನ ಸದಸ್ಯರು ಮಾತ್ರ ಮತದಾನ ಮಾಡಲಿದ್ದು, ಈ ಚುನಾವಣೆಯಲ್ಲಿ ನಮ್ಮ ಪ್ಯಾನಲ್ ಗೆಲುವು ಕಾಣುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಎ.ವಿ.ಕಣವಿ, ಉಪಾಧ್ಯಕ್ಷ ಸ್ಥಾನಕ್ಕೆ ದಿವಾಕರ ಬಾಗಲಕೋಟೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರವಿ.ಎಸ್.ಬೆಟಗೇರಿ, ಜಂಟಿ‌ ಕಾರ್ಯದರ್ಶಿ ಸ್ಥಾನಕ್ಕೆ ಗ್ಯಾನಪ್ಪ ಚಿಲಕಮುಖಿ, ಖಜಾಂಚಿ ಸ್ಥಾನಕ್ಕೆ ಚಿದಾನಂದಗೌಡ ಪೊಲೀಸ್‌ಪಾಟೀಲ ಸ್ಪರ್ಧಿಸಿದ್ದು ಇವರಿಗೆ ಮತದಾರ ಬಂಧುಗಳು ಮತ ನೀಡಬೇಕೆಂದು ಕೋರಿದರು.

ತಲ್ವಾರ್ ಝಳಪಿಸಿದ ಕಾಂಗ್ರೆಸ್ ಅಭ್ಯರ್ಥಿ! ಕ್ಯಾಬರೆ ನೃತ್ಯಗಾರರೂ ನಾಚುವಂತೆ ಸಖತ್ ಸ್ಟೆಪ್ಸ್

ವಿಜಯಸಾಕ್ಷಿ ಸುದ್ದಿ, ಗದಗ:

ಇತ್ತೀಚೆಗೆ ಮದುವೆ, ಇತರ ಶುಭ ಸಮಾರಂಭಗಳಲ್ಲಿ ಕತ್ತಿ (ತಲ್ವಾರ್) ಝಳಪಿಸುವುದು, ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡುವುದು ಫ್ಯಾಶನ್ ಆಗಿ ಬಿಟ್ಟಿದೆ. ತಿಳಿದೋ ತಿಳಿಯದೆಯೋ ಸಮಾಜದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳೇ ಈ ರೀತಿ ಕತ್ತಿ ಝಳಪಿಸುತ್ತಿರುವುದು ದುರಂತ. ಕಾಂಗ್ರೆಸ್ ಅಭ್ಯರ್ಥಿಯೇ ಗದಗ ನಗರದಲ್ಲಿ ಕತ್ತಿ ಝಳಪಿಸಿರುವ ವಿಡಿಯೋ ಸಖತ್ ವೈರಲ್ ಆಗಿದೆ.

ಗದಗ-ಬೆಟಗೇರಿ ನಗರಸಭೆ ಚುನಾವಣೆಯ 18ನೇ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಜೂನ್‌ಸಾಬ ಉರ್ಫ್ ಜೈನುಲಾಬ್ದೀನ್ ರಹಿಮಾನಸಾಬ ನಮಾಜಿ ಎಂಬ ವ್ಯಕ್ತಿ ಗದಗನ ಜವಳ ಗಲ್ಲಿಯಲ್ಲಿ ಸಾರ್ವಜನಿಕವಾಗಿ ಕತ್ತಿ ಝಳಪಿಸಿರುವ ವಿಡಿಯೋ ವೈರಲ್ ಆಗಿದ್ದು, ಅವಳಿ ನಗರದಲ್ಲಿ ಭೀತಿ ಹುಟ್ಟಿಸಿದೆ.

ಟಿಪ್ಪು ಜಯಂತಿಯ ಸಂದರ್ಭದಲ್ಲಿ ಈ ತಲ್ವಾರ್ ಡ್ಯಾನ್ಸ್ ನಡೆದಿದೆ ಎನ್ನಲಾಗುತ್ತಿದೆ. ರಾತ್ರಿಹೊತ್ತು ಡಿಜೆ ಹಾಡಿಗೆ ಹೆಜ್ಜೆ ಹಾಕಿರುವ ಜೂನ್‌ಸಾಬ ಕ್ಯಾಬರೆ ಡಾನ್ಸರ್‌ಗಳು ನಾಚುವಂತೆ ಕತ್ತಿ ಝಳಪಳಿಸುತ್ತಾ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಜೂನ್‌ಸಾಬ ನೃತ್ಯ ಮಾಡಿರುವ ವಿಡಿಯೋವನ್ನು ಅಲ್ಲಿನ ಯುವಕನೋರ್ವ ವಾಟ್ಸ್ ಆಪ್‌ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದು, ಬಳಿಕ ಅವಳಿ ನಗರದೆಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿದೆ.

ನಗರಸಭೆಯ ಮಾಜಿ ಉಪಾಧ್ಯಕ್ಷೆಯ ಪತಿಯಾಗಿರುವ ಜೂನ್‌ಸಾಬ ನಮಾಜಿ ಹಾಗೂ ಆತನ ಹಿಂಬಾಲಕರು ಕೈಯಲ್ಲಿ ಕತ್ತಿ ಹಿಡಿದು ಕುಣಿದಿದ್ದಾರೆ. ಇದರಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದು, ಜನಪ್ರನಿಧಿಯಾಗಲು ಹೊರಟಿರುವವರು ಇವರೇನಾ ಎಂದು ಬಾಯಿ ಮೇಲೆ ಬೆರಳಿಡುವಂತಾಗಿದೆ.

ಈ ಬಗ್ಗೆ ‘ವಿಜಯಸಾಕ್ಷಿ‘ ಸಂಪರ್ಕಿಸಿದಾಗ, ‘ಕತ್ತಿ ಝಳಪಳಿಸಿರುವ ವಿಡಿಯೋ ಆರು ವರ್ಷಗಳ ಹಿಂದೆ ರಕ್ತ ಮಾರೆಮ್ಮದೇವಿ ದೇವಸ್ಥಾನದ ಹಿಂದೆ ಕುಣಿದಿರುವುದಾಗಿದೆ. ಆ ಮೇಲೆ ಈದ್ ಮಿಲಾದ್‌ನಲ್ಲಿ ಕುಣಿದಿರುವುದು. ಆದರೆ, ಕೆಲವರು ಮದುವೆ ಇದ್ದಾಗ, ಕ್ರಿಕೆಟ್‌ನಲ್ಲಿ ಸೋತಾಗ ಕುಣಿದಿರುವ ವಿಡಿಯೋ ಅಂತಾ ಹೇಳಿದ್ರು. ನಾನು ಎಂತಹ ದೇಶಭಕ್ತ ಎಂಬುದನ್ನು ಅವರಿಗೆ ಹೇಳಿದ್ದೇನೆ.

ನಾನು ಕುಣಿಯುವ ವೇಳೆ ಹಿಂದೂ, ಎಸ್‌ಸಿ, ಎಸ್‌ಟಿ, ಲಿಂಗಾಯತ, ಬ್ರಾಹ್ಮಣರೂ ಇದ್ದರು. ಅಲ್ಲಿ ಯಾರ್ಯಾರು ಇದ್ದರು ಎಂಬ ಬಗ್ಗೆ ಸ್ಟೇಷನ್‌ನಲ್ಲಿ ಮಾಹಿತಿ ಕೊಟ್ಟಿದ್ದೀನಿ. ನಾನು ಎಲೆಕ್ಷನ್‌ಗೆ ಬಂದಾಗ ಒಂದು ಸಾರಿ ಈ ರೀತಿ ವಿಡಿಯೋ ವೈರಲ್ ಮಾಡ್ತಾರೆ. ನಾನು ಹೇಗಿದ್ದೇನೆ ಎಂಬುದನ್ನು ನಮ್ಮ ಏರಿಯಾದಲ್ಲಿ ಬಂದು ಕೇಳಿ. ವಿಪಕ್ಷದವರು ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದು, ನಮ್ಮ ಪಕ್ಷದವರೂ ಸೇರಿ ಹೀಗೆ ಮಾಡುತ್ತಿದ್ದಾರೆ. ಆದರೂ ಚುನಾವಣೆಯಲ್ಲಿ ನಾನೇ ಗೆಲ್ಲುತ್ತೇನೆ ಎಂದು ಜೂನ್‌ಸಾಬ ಸ್ಪಷ್ಟನೆ ನೀಡಿದರು.

ಪ್ರಕರಣ ದಾಖಲು

ಮೂರು ವರ್ಷಗಳ ಹಿಂದಿನ ವಿಡಿಯೋ ಅದು. ನನ್ನ ಮೇಲೆ ಅಟ್ಯಾಕ್ ಮಾಡಿದ್ದಾರೆ ಅಂತಾ ಅವಾಗಲೇ ದೂರು ಕೊಟ್ಟು ಎಫ್‌ಐಆರ್ ಆಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದರು.

error: Content is protected !!