Home Blog Page 3223

ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ – ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

0

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ. ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

 

ಟಗರು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ಡಿಬಾಸ್… ಡಾಲಿ ಬಳಿ ದಚ್ಚು ಇಟ್ಟ ಸ್ವೀಟ್ ಬೇಡಿಕೆ ಏನು.?

ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಮೂರನೇ ಸಿನಿಮಾ ಟಗರು ಪಲ್ಯದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಆಕರ್ಷಕ ಬಿಂದು ಡಿಬಾಸ್.. ಡಾಲಿ ನಿರ್ಮಾಣದ ಟಗಲು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ದಚ್ಚು ಇಡೀ ತಂಡಕ್ಕೆ ಶುಭ ಹಾರೈಸಿದರು. ತಾರಾ, ರಂಗಾಯಣ ರಘು, ಅಮೃತಾ, ನಾಗಭೂಷಣ್ ಸೇರಿದಂತೆ ನೀನಾಸಂ ಸತೀಶ್ ಹಾಗೂ ನೆನಪಿರಲಿ ಪ್ರೇಮ್ ಇವೆಂಟ್ ನಲ್ಲಿ ಭಾಗಿಯಾಗಿದ್ದರು.

ಟ್ರೇಲರ್ ಬಿಡುಗಡೆ ಮಾಡಿ ಮಾತಿಗಿಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ, ಟಗರು ಪಲ್ಯ ತಂಡಕ್ಕೆ ಶುಭಾಶಯ. ಟ್ರೇಲರ್ ನೋಡಿದಾಗ ಖುಷಿ ಆಯಿತು. 7 ಸ್ಟಾರ್ ಸುಲ್ತಾನ್ ಚೆನ್ನಾಗಿ ಆಕ್ಟ್ ಮಾಡಿದೆ. ಅಮೃತಾ ಅವರಿಗೆ ಸ್ವಾಗತ. ನಮ್ಮದು ಚಿಕ್ಕ ಇಂಡಸ್ಟ್ರೀ. ನೀಟ್ ಇಂಡಸ್ಟ್ರೀ. ಇದು ನಮ್ಮ‌ಮಣ್ಣಿನ ಸೊಗಡಿನ ಸಿನಿಮಾ. ಟ್ರೇಲರ್ ನಲ್ಲಿ ಸಿನಿಮಾ ಏನೋ ಅನ್ನೋದು ಹೇಳಬಹುದು. ಪ್ರತಿ ಒಂದು ಸೀನು. ನಗಲು ಏನು ಬೇಕು ಎಲ್ಲವೂ ಇದೆ.

ಸಿನಿಮಾ ಚೆನ್ನಾಗಿ ಆಗಲಿ. ಹೀರೋಗಳು ಏನು ಮಾಡುತ್ತಿದ್ದಾರಯ್ಯ ಅಂತಾ ತುಂಬಾ ಜನ ಕೇಳುತ್ತಾರೆ. ನಾವು ಪ್ರೊಡ್ಯೂಸ್ ಮಾಡ್ತೀವೆ. ಈ ಸಾಲಿನಲ್ಲಿ ಡಾಲಿ ಅವರು ಮೊದಲು ನಿಲ್ಲುತ್ತಾರೆ. ಇದು ಧನಂಜಯ್ ನಿರ್ಮಾಣದ ಮೂರನೇ ಸಿನಿಮಾ. ಆತ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಬಡವರ ಮಕ್ಕಳು ದೊಡ್ಡವರು ಆಗಬೇಕು. ಡಾಲಿ ಪಿಕ್ಚರ್ಸ್ ದೊಡ್ಡ ಪ್ರೊಡಕ್ಷನ್ ಆಗಿ ಬೆಳೆಯಲಿ. ನಾಗಭೂಷಣ್ ಫ್ಯಾನ್ ನಾನು. ನಾವು ಚಿಕ್ಕ ಕಲಾವುದರು ನಿಮ್ಮ ಬ್ಯಾನರ್ ನಡಿ ನನಗೂ ಅವಕಾಶ ಕೊಡಿ‌ ಎಂದು ಧನಂಜಯ್ ಕಾಲೆಳೆದರು.

ಡಾಲಿ ಧನಂಜಯ್ ಮಾತನಾಡಿ, ಎಲ್ಲಾ ಸಂಬಂಧಗಳನ್ನು ನೆನಪಿಸುವ ಸಿನಿಮಾವೇ ಟಗರು ಪಲ್ಯ. ಇಡೀ ತಂಡಕ್ಕೆ ಧನ್ಯವಾದ ಹೇಳಬೇಕು. ನನಗೆ ಉಮೇಶ್ ಅವರು ಕಥೆ ಹೇಳಿದಾಗ ತುಂಬಾ ಇಷ್ವವಾಯಿತು. ಒಳ್ಳೆ ಪ್ರತಿಭೆಗಳಿಗೆ ಬಂಡವಾಳ ಹಾಕುವುದು ಖುಷಿ ನನಗೆ ಇದೆ. ಅವರವರ ಪ್ರತಿಭೆಗಳು ಅವರನ್ನ ಮೇಲೆ ಕರೆದುಕೊಂಡು ಬರುತ್ತಿದೆ. ಇಡೀ ತಂಡ ನನಗೆ ಅದ್ಭುತವಾಗಿ ಕೋ ಆಪರೇಟಿಂಗ್ ಮಾಡಿದರು. ನಾಗಭೂಷಣ್ ಯಾವುದೇ ಪಾತ್ರ ಕೊಟ್ಟರು ತೂಗಿಸಿಕೊಂಡು ಹೋಗುವ ನಟ.

ಟಗರು ಪಲ್ಯದಲ್ಲಿ ನೀವು ಬೇರೆ ನಾಗಭೂಷಣ್ ನೋಡಬಹುದು. ಅಮೃತಾ ಲುಕ್ ಟೆಸ್ಟ್ ಮಾಡಿದಾಗ ಸ್ಯಾಂಡಲ್ ವುಡ್ ಮಹಾಲಕ್ಷ್ಮೀ ತರ ಕಾಣಿಸ್ತಾರೆ. ಚಿತ್ರರಂಗದ ಮಹಾಲಕ್ಷ್ಮಿ ಆಗಿ ಬೆಳಗಲಿ ಎಂದು ಹಾರೈಸಿದ್ದೇವು. ಖಂಡಿತ. ಹಾಗೇ ಆಗುತ್ತಿದೆ. ಸೂರ್ಯಕಾಂತಿ ಸಾಂಗ್ ಹಿಟ್ ಆಗಿದೆ. ನನ್ನ ಬೆನ್ನು ತಟ್ಟಲು ಇವತ್ತು ಒಬ್ಬರು ಅಣ್ಣ ಬಂದಿದ್ದಾರೆ. ಯಾವಾಗ ಸಿಕ್ಕರು ಖುಷಿಯಿಂದ ತಬ್ಬಿಕೊಂಡು ಚೆನ್ನಾಗಿ ಕೆಲಸ ಮಾಡುತ್ತಿದ್ದೀಯಾ.. ಮಾಡು ಖುಷಿಪಡುತ್ತೇನೆ ಎನ್ನುತ್ತಾರೆ ಎಂದು ದರ್ಶನ್ ಅವರ ಬಗ್ಗೆ ಹೇಳಿದರು.

ನಟ ನಾಗಭೂಷಣ್ ಮಾತನಾಡಿ, ನಾನು ಲೀಡ್ ಕ್ಯಾರೆಕ್ಟರ್ ಮಾಡಬೇಕು ಎಂದು ಇಂಡಸ್ಟ್ರೀಗೆ ಬಂದವನಲ್ಲ. ಕ್ಯಾರೆಕ್ಟರ್ ಆರ್ಟಿಸ್ಟ್ ಆಗಬೇಕು ಎಂದು ಬಂದವನು. ನನ್ನ ಪುಣ್ಯ. ಅಂದು ಇಕ್ಕಟ್ ಸಿನಿಮಾ. ಈಗ ಟಗರು ಪಲ್ಯ ಸಿಕ್ಕಿದೆ. ಟಗರು ಪಲ್ಯ ಸಿನಿಮಾದ ಪಾತ್ರ ನನಗೆ ತೃಪ್ತಿ ಕೊಟ್ಟ ಪಾತ್ರ. ನಾನು ಒಬ್ಬ ಹಳ್ಳಿ ಹುಡುಗ. ನಾನು ಬೆಳೆದು ಬಂದ ಪರಿಸರವನ್ನು ಪ್ರತಿನಿಧಿಸುವುದು, ನಮ್ಮೂರು ಕಥೆ ಇರುವುದರಿಂದ ಈ ಸಿನಿಮಾ ಮತ್ತಷ್ಟು ಕನೆಕ್ಟ್ ಆಗಿದೆ. ಹಲವು ವರ್ಷಗಳಿಂದ ಒಂದು ಮಾತು ಹೇಳುತ್ತಿದ್ದೀರಾ.. ಬೇರೆ ಭಾಷೆಯಲ್ಲಿ ಕಡಿಮೆ ಬಜೆಟ್ ನಲ್ಲಿ, ಒಳ್ಳೊಳ್ಳೆ ಕಂಟೆಂಟ್ ಸಿನಿಮಾ ಬರ್ತಿಲ್ಲ ಎನ್ನುತ್ತಿದ್ದರು. ಅದಕ್ಕೆಲ್ಲ ಉತ್ತರ ಟಗರು ಪಲ್ಯ ಎಂದರು.

ನಟಿ ಅಮೃತಾ ಪ್ರೇಮ್ ಮಾತನಾಡಿ, ದರ್ಶನ್ ಸರ್ ಕಡೆಯಿಂದ ನನ್ನ ಮೊದಲ ಟ್ರೇಲರ್ ಬಿಡುಗಡೆಯಾಗಿರುವುದು ಬಹಳ ಖುಷಿ ಇದೆ. ಈ ಕ್ಷಣ ನನಗೆ ಲೈಫ್ ಲಾಂಗ್ ನೆನಪು ಇರುತ್ತದೆ. ಡಾಲಿ ಪಿಕ್ಚರ್ಸ್ ನಡಿ ನನಗೆ ಅವಕಾಶ ಸಿಕ್ಕಿರುವುದು ಎಷ್ಟು ಖುಷಿ ಇದೆಯೋ, ಅದರ ಜೊತೆ ದರ್ಶನ್ ಸರ್ ಟ್ರೇಲರ್ ಲಾಂಚ್ ಮಾಡಿರುವುದು ತುಂಬಾನೇ ಖುಷಿ ಇದೆ. ದರ್ಶನ್ ಸರ್ ನಮ್ಮ ಫ್ಯಾಮಿಲಿಗೆ ಹತ್ತಿರ ಆದವರು. ಅಪ್ಪನ ಸಿನಿಮಾ ಜರ್ನಿಯಿಂದ ಜೊತೆಯಲಿ ಇದ್ದಾರೆ. ನನಗೆ ಮೊದಲ ಸಿನಿಮಾದ ಟ್ರೇಲರ್ ಲಾಂಚ್ ಬಂದಿದ್ದಾರೆ. ಈ ಪಾತ್ರಕ್ಕೆ ಚ್ಯೂಸ್ ಮಾಡಿದ ನಿರ್ದೇಶಕರಿಗೆ, ಡಾಲಿ ಸರ್ ಗೆ ಧನ್ಯವಾದ. ಡಾಲಿ ಪಿಕ್ಚರ್ಸ್… ಈ ಪ್ರೊಡಕ್ಷನ್ ಬಗ್ಗೆ ಹೇಳೋದಾದರೆ,

ಎಷ್ಟೇ ಹೊಸಬರು ಬರುವಾಗ ಡಾಲಿ ಪಿಕ್ಚರ್ಸ್ ಎಂದು ಬರುತ್ತಾರೆ . ಹೋಗುವಾಗ ನಮ್ಮದೇ ಪಿಕ್ಚರ್ಸ್ ಎಂದು ಹೋಗುತ್ತಾರೆ. ಆ ರೀತಿ ಎಲ್ಲರನ್ನೂ ರೀಸಿವ್ ಮಾಡಿಕೊಳ್ಳುತ್ತಾರೆ ಎಂದರು.ಡಾಲಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಡಾಲಿ ಧನಂಜಯ್ ನಿರ್ಮಿಸುತ್ತಿರುವ ‘ಟಗರು ಪಲ್ಯ’ ಸಿನಿಮಾಗೆ ಉಮೇಶ್ ಕೆ ಕೃಪ ಆಕ್ಷನ್ ಕಟ್ ಹೇಳಿದ್ದಾರೆ. ನಾಗಭೂಷಣ, ಅಮೃತಾ ಪ್ರೇಮ್ ಜೊತೆಗೆ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ, ವೈಜನಾಥ್ ಬಿರಾದಾರ್, ವಾಸುಕಿ ವೈಭವ್ ಸೇರಿದಂತೆ ದೊಡ್ಡ ತಾರಾಬಳಗವಿದೆ. ಅಕ್ಟೋಬರ್ 27ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.

ಫುಟ್‌ಪಾತ್ ಗೆ ನುಗ್ಗಿದ ಕಾರು; ಯುವತಿ ದಾರುಣ ಸಾವು; 4 ಮಂದಿಗೆ ಗಂಭೀರ ಗಾಯ

0

ಮಂಗಳೂರು: ನಗರದ ಲೇಡಿಹಿಲ್ ಬಳಿ ಕಾರೊಂದು ಫುಟ್ ಪಾತ್ ಮೇಲೆ ನುಗ್ಗಿದ ಪರಿಣಾಮ ಯುವತಿಯೊಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ರೂಪಶ್ರೀ(23)ಎಂದು ಗುರುತಿಸಲಾಗಿದೆ. ಸುರತ್ಕಲ್ ನ ನಿವಾಸಿಯಾದ ರೂಪಶ್ರೀ ಅವರು ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ರೂಪಶ್ರೀ ಅವರು ಇತರ ನಾಲ್ವರೊಂದಿಗೆ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ವಾಪಸ್ ಬರುವಾಗ ಮಣ್ಣಗುಡ್ಡೆಯಿಂದ ಲೇಡಿಹಿಲ್ ಕಡೆಗೆ ಸಾಗುತ್ತಿದ್ದ ಕಾರು ಫುಟ್ ಪಾತ್ ಗೆ ನುಗ್ಗಿ ಗುಂಪಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರೂಪಾಶ್ರೀ ಅವರು ಸಾವನ್ನಪ್ಪಿದ್ದಾರೆ. ಅವರ ಜತೆ ನಡೆದುಕೊಂಡು ಹೋಗುತ್ತಿದ್ದ ಸ್ವಾತಿ(28), ಹಿತ್ನವಿ(16), ಕೃತಿಕಾ(16) ಮತ್ತು ಯುತಿಕಾ(12) ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಶರಣು: ತಂದೆಯ ಜತೆ ಠಾಣೆಗೆ ಬಂದ ಆರೋಪಿ ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.

ಸಿಕ್ಕಿದ್ದು ಬಿಜೆಪಿ ದುಡ್ಡು ಎಂದು ಡಿಸಿಎಂ ಹೇಳುತ್ತಿರುವುದು ನಾಚಿಕೆಗೇಡು: ಸದಾನಂದ ಗೌಡ

0

ಬೆಂಗಳೂರು: ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಪತ್ತೆ ಬಿಜೆಪಿಯದ್ದು ಎಂದು ಹೇಳುವ ಕಾಂಗ್ರೆಸ್ ಸರ್ಕಾರ, ಸಿಬಿಐ ತನಿಖೆಗೆ ನೀಡಿ‌ ಸಾಚಾತನ ತೋರಿಸಿ ಎಂದು‌ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಡಿವಿ ಸದಾನಂದ ಗೌಡ ಸವಾಲು ಹಾಕಿದರು. ಐಟಿ ದಾಳಿಯಲ್ಲಿ ಸಿಕ್ಕಿದ್ದು‌ ಬಿಜೆಪಿ ದುಡ್ಡು ಎಂದು ಡಿಸಿಎಂ ಹೇಳುತ್ತಿರುವುದು ನಾಚಿಕೆಗೇಡು.

ಹಾಗಾದಲ್ಲಿ ಸಿಬಿಐಗೆ ಹಸ್ತಾಂತರ ಮಾಡಿ ಸಾಚಾತನ ತೋರಿಸಿ ಎಂದು‌ ಆಗ್ರಹಿಸಿದರು. ರಾಜ್ಯದ ಪರಿಸ್ಥಿತಿ ಈ ರೀತಿ‌ ಅಧೋಗತಿಗೆ ಬಂತಲ್ಲ ಎಂಬ ನೋವು ಜನರಿಗೆ‌ ಇದೆ. ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತದಲ್ಲಿ ಇದ್ದರೆ ಅಭಿವೃದ್ಧಿ ಅಸಾಧ್ಯ, ಅದಕ್ಕಾಗಿ ಕಾಂಗ್ರೆಸ್ ಮುಕ್ತ ಆಗಬೇಕು. ಆಸೆ ಆಮಿಷ ತೋರಿಸಿ ಜನರ ದಾರಿ ತಪ್ಪಿಸಿ ಅಧಿಕಾರಕ್ಕೆ ಬಂದಿದೆ. ಇವಾಗ ಹಳೇ ಚಾಳಿ ಮುಂದುವರಿಸಿದೆ ಎಂದು‌ ಆರೋಪಿಸಿದರು.

Mysore dasara: ಗಜಪಡೆಗಳಿಂದ ಜಂಬೂ ಸವಾರಿ ರಿಹರ್ಸಲ್

0

ಮೈಸೂರು: ದಸರಾ ಜಂಬೂ ಸವಾರಿ ಹಿನ್ನೆಲೆ ಇಂದು ಗಜಪಡೆಗಳಿಂದ ಜಂಬೂ ಸವಾರಿ ರಿಹರ್ಸಲ್ ನಡೆಯಿತು. ರಿಹರ್ಸಲ್​ನಲ್ಲಿ ಗಜಪಡೆ, ಅಶ್ವಾರೋಹಿದಳ, ಪೊಲೀಸ್ ಬ್ಯಾಂಡ್, ಪೊಲೀಸ್ ತುಕ್ಕಡಿಗಳು ಭಾಗಿಯಾಗಿವೆ

. ಗಜಪಡೆ ಪುಷ್ಪಾರ್ಚನೆ ಸೇರಿದಂತೆ ಎಲ್ಲಾ ಬಗೆಯ ತಾಲೀಮು ನಡೆಯಿತು. ಅಭಿಮನ್ಯಗೆ ಡಿಸಿಎಫ್ ಸೌರಭ್ ಕುಮಾರ್, ಮೌಂಟೆಡ್ ಎಸ್ಪಿ ಶೈಲೇಂದ್ರ, ಎಸಿಪಿ ಗಳಾದ ಚಂದ್ರಶೇಖರ್, ಸತೀಶ್, ಆರ್.ಎಫ್.ಓ ಸಂತೋಷ್ ಅವರು ಪುಷ್ಪಾರ್ಚನೆ ಮಾಡಿದರು. ಈಗಾಗಲೇ ಬನ್ನಿಮಂಟಪದವರೆಗೆ ಮರದ ಅಂಬಾರಿ ತಾಲೀಮು ಮಾಡಲಾಗಿದೆ.

ಕಾಂಗ್ರೆಸ್‌ನಲ್ಲಿ ಯಾವುದೇ ಬಿರುಕಿಲ್ಲ: ಡಿಸಿಎಂ ಡಿಕೆಶಿ

0

ಬೆಳಗಾವಿ: “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿರುಕಿಲ್ಲ. ೧೩೬ ಶಾಸಕರೂ ನಮ್ಮವರೇ. ನಮ್ಮಲ್ಲಿ ಬಿರುಕಿದೆ ಎಂದು ಹೇಳುವ ಬಿಜೆಪಿ ನಾಯಕರು ಒಮ್ಮೆ ಜೆ.ಎಚ್. ಪಟೇಲರ ಭಾಷಣ ಕೇಳಿಸಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಬೆಳಗಾವಿಯ ಶಾಸಕರು, ಸಚಿವರು ನಿಮ್ಮನ್ನು ಸ್ವಾಗತಿಸಲು ಬರಲಿಲ್ಲ, ಸತೀಶ್ ಜಾರಕಿಹೊಳಿ ಅವರಿಗೂ ನಿಮಗೂ ಮುನಿಸಿದೆಯೇ ಎನ್ನುವ ಪ್ರಶ್ನೆಗೆ ಶಿವಕುಮಾರ್ ಅವರು ಹೀಗೆ ಉತ್ತರಿಸಿದರು.

“ನೆನ್ನೆ, ಮೊನ್ನೆ ಸತೀಶ್ ಅವರು ಮತ್ತು ನಾನು ಜೊತೆಯಲ್ಲಿಯೇ ಕುಳಿತು ಮಾತನಾಡಿದ್ದೇವೆ. ನಾನು ಬಂದಿರುವುದು ಖಾಸಗಿ ಕಾರ್ಯಕ್ರಮಕ್ಕೆ. ಲಕ್ಷ್ಮಿ ಹೆಬ್ಬಾಳಕರ್ ಅವರು ನಾಮಕರಣ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿ ಇದ್ದಾರೆ. ಕೌಜಲಗಿ ಅವರಿಗೆ ಆರೋಗ್ಯ ಸರಿಯಿಲ್ಲ. ದಿಢೀರ್ ಎಂದು ನಿನ್ನೆ ರಾತ್ರಿ ಈ ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ. ಎಲ್ಲರಿಗೂ ಅವರದೇ ಆದ ವೈಯಕ್ತಿಕ ಕೆಲಸಗಳು ಇರುತ್ತವೆ” ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಹಾಗೂ ನಿಮ್ಮ ನಡುವೆ ಬಿರುಕು ಮೂಡಿದೆಯೇ ಎಂದು ಕೇಳಿದಾಗ “ನಮ್ಮ ನಡುವೆ ಯಾವುದೇ ಬಿರುಕಿಲ್ಲ. ನನ್ನನ್ನು ಸ್ವಾಗತಿಸಲು ಬರಲಿಲ್ಲ, ಅದು ಇದು, ಎಂದು ನೀವೇ ಏನೇನೋ ಹೇಳುತ್ತೀರಿ?. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ” ಎಂದರು.
“ನಮ್ಮಲ್ಲಿ ಯಾರ ಬಗ್ಗೆಯೂ ಮುನಿಸಿಲ್ಲ. ಎಲ್ಲಾ ಶಾಸಕರು ನಮ್ಮವರೇ. ನಿಮಗೂ ಹಾಗೂ ಬಿಜೆಪಿಯವರಿಗೆ ಒಂದು ಸುದ್ದಿ ಬೇಕು, ಅದಕ್ಕೆ ಹೀಗೆಲ್ಲಾ ಹೇಳುತ್ತೀರಿ” ಎಂದರು.ಸತೀಶ್ ಅವರು ಶಾಸಕರ ಜೊತೆ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ, ಹೌದು. ಈ ವಿಚಾರವಾಗಿ ನಾವಿಬ್ಬರೂ ಚರ್ಚಿಸಿದೆವು” ಎಂದರು.

ಬೆಳಗಾವಿಯಿಂದಲೇ ಕಾಂಗ್ರೆಸ್ ಬಂಡಾಯ ಆರಂಭ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದು ಕೇಳಿದಾಗ “ಜೆ.ಎಚ್. ಪಟೇಲರ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಆದಾಗ ಅವರು ಒಂದು ಭಾಷಣ ಮಾಡಿದ್ದರು. ಹೋರಿ ಮತ್ತು ನಾಯಿ ಕತೆ. ಅದನ್ನು ನೀವು ಕೇಳಿದ್ದೀರಾ? ಅದನ್ನು ಬಿಜೆಪಿಯವರಿಗೆ ಕೇಳಿಸಿಕೊಳ್ಳಲು ಹೇಳಿ” ಎಂದು ತಿರುಗೇಟು ನೀಡಿದರು.”ಹುಕ್ಕೇರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲು, ಈ ಭಾಗದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಲು ಹಾಗೂ ಮುಖ್ಯವಾಗಿ ಹುಕ್ಕೇರಿ ಮಠದ ಕಾರ್ಯಕ್ರಮಕ್ಕೆ ಬಂದಿದ್ದೇನೆ” ಎಂದು ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು.

ಕೇಂದ್ರದಿಂದ ಹಿಂಗಾರು ಬೆಳೆಗೆ ಬೆಲೆ ಹೆಚ್ಚಳ: ಸಚಿವ ಪ್ರಲ್ಹಾದ್ ಜೋಶಿ

0

ಹುಬ್ಬಳ್ಳಿ :ಕೇಂದ್ರದಿಂದ ಹಿಂಗಾರು ಬೆಳೆಗೆ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮುಂಬರುವ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಗಣಿಗಾರಿಕೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಗೋಧಿ ಸೇರಿ ಪ್ರಮುಖ ಆರು ಹಿಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ರೈತರ ಆದಾಯ ವೃದ್ಧಿಸುವ ಜತೆಗೆ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲು ಬೆಂಬಲ ಬೆಲೆ ಹೆಚ್ಚಿಸಲಾಗಿದೆ ಎಂದು ತಿಳಿಸಿರುವ ಅವರು ಈ ಕುರಿತು ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವ ಪ್ರಕಾರ ಚನ್ನಂಗಿ ಬೇಳೆ ಪ್ರತಿ ಕ್ವಿಂಟಾಲ್​ಗೆ 425 ರೂ. ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದು, ಒಟ್ಟು ಒಂದು ಕ್ವಿಂಟಾಲ್​ಗೆ 6,425 ರೂ. ನಿಗದಿ ಮಾಡಲಾಗಿದೆ. ಗೋಧಿಗೆ 150 ರೂ. ಹೆಚ್ಚಳ ಮಾಡುವುದರ ಮೂಲಕ ಒಟ್ಟು ಒಂದು ಕ್ವಿಂಟಾಲ್​ಗೆ 2,275 ರೂ. ನಿಗದಿ ಮಾಡಲಾಗಿದೆ. ಕಡಲೆ 105 ರೂ. ಹೆಚ್ಚಳ ಮಾಡುವುದರ ಮೂಲಕ ಒಟ್ಟು ಒಂದು ಕ್ವಿಂಟಾಲ್​ಗೆ 5,440 ರೂ. ನಿಗದಿ ಮಾಡಲಾಗಿದೆ.

ಬಾರ್ಲಿಗೆ 115 ರೂ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದು ಒಂದು ಕ್ವಿಂಟಾಲ್ ಗೆ 1,850 ರೂ. ನಿಗದಿ ಮಾಡಲಾಗಿದೆ. ಸಾಸಿವೆಗೆ 200 ರೂ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದು, ಒಂದು ಕ್ವಿಂಟಾಲ್​ಗೆ 5,650 ರೂ. ನಿಗದಿ ಮಾಡಲಾಗಿದೆ. ಕುಸುಬೆಗೆ 150 ರೂ. ಹೆಚ್ಚಳ ಮಾಡುವುದರೊಂದಿಗೆ ಒಂದು ಕ್ವಿಂಟಾಲ್ ಗೆ 5,800 ರೂ. ನಿಗದಿ ಪಡಿಸಲಾಗಿದೆ. 2013-14ನೇ ಸಾಲಿನ ಬೆಂಬಲ ಬೆಲೆ ಗಮನಿಸಿದರೆ, ಈ ಬಾರಿ ಶೇ. 50 ರಷ್ಟು ಹೆಚ್ಚಳ ಮಾಡಿರುವುದು ಮೋದಿ ಸರ್ಕಾರದ ವಿಶೇಷ ಎಂದು ಸಚಿವ ಜೋಶಿ ಹೇಳಿದ್ದಾರೆ.ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಮಾರ್ಗ ಸೂಚಿಗಳನ್ವಯ ರೈತರಿಂದ ಹಿಂಗಾರು ಬೆಳೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಅವರು ತಿಳಿಸಿದ್ದಾರೆ.

ಪಾಕಿಸ್ತಾನದ ಏಜೆಂಟ್ ನವರಂತೆ ಕಾಂಗ್ರೆಸ್ ವರ್ತನೆ- ಎಸ್ ಮುನಿಸ್ವಾಮಿ

0

ಕೋಲಾರ‌;-ಪಾಕಿಸ್ತಾನದ ಏಜೆಂಟ್ ನವರಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದು ಎಸ್ ಮುನಿಸ್ವಾಮಿ ಹೇಳಿದ್ದಾರೆ.ನಗರದ ಹೊಸ ಬಸ್ ನಿಲ್ದಾಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆಯನ್ನು ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. 5 ರಾಜ್ಯಗಳಲ್ಲಿ ನಡೆಯುತ್ತಿರುವಂತಹ ಚುನಾವಣೆಗೆ ಹಣ ಕೊಡಡುವುದಕ್ಕೆ ಈ ಕಮಿಷನ್ ಮಾಡಲಾಗುತ್ತಿದೆ ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ೧೦೦ ಕೋಟಿ ಹಣ ಸಿಕ್ಕಿದೆ ಇದಕ್ಕೆ ಮಾನ್ಯ ಮುಖ್ಯ ಮಂತ್ರಿಗಳು ಸಿದ್ದರಾಮಯ್ಯ ಡಿಕೆಶಿವಕುಮಾರ್ ರಾಜೀನಾಮೆ ಕೊಟ್ಟು ಈ‌ ರಾಜ್ಯದ ಜನತೆಯನ್ನು ಕ್ಷಮೆ ಕೇಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ‌ ರೈತರನ್ನು ಒಕ್ಕಲೆಬಿಸುವ ಕೆಲಸ ಮಾಡುತ್ತಿದ್ದಾರೆ ಕಾಂಗ್ರೆಸ್ ನವರು ಪಾಕಿಸ್ತಾನ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಈ ಸರ್ಕಾರ ತುಂಬ ದಿನ ಉಳಿಯುವುದಿಲ್ಲ ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ ಸರ್ಕಾರ ಕೋಮುಗಲಭೆಗಳನ್ನು ಸೃಷ್ಟಿ ಮಾಡುತ್ತಿರುವ ಸರ್ಕಾರ ಕೂಡಲೇ ಸಿಎಂ‌ ಮತ್ತು ಡಿಕೆಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಹೇಳಿದರು.

Good News; ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅಭ್ಯರ್ಥಿಗಳ ಕೌನ್ಸೆಲಿಂಗ್ ದಿನಾಂಕ ಪ್ರಕಟ

0

ಬೆಂಗಳೂರು;- ಶಿಕ್ಷಣ ಇಲಾಖೆಯಿಂದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ  ಗುಡ್ ನ್ಯೂಸ್ ಸಿಕ್ಕಿದೆ. ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ  ಪ್ರಕಟವಾಗಿದೆ.ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ  ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಅಕ್ಟೋಬರ್ 21ರಂದು ಕೌನ್ಸೆಲಿಂಗ್ ನಡೆಯಲಿದೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಲಿದೆ. ಅ.21ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೌನ್ಸೆಲಿಂಗ್ ಆಯೋಜಿಸಲಾಗಿದೆ.

ಗದಗ-ಬೆಟಗೇರಿ ಅವಳಿ ನಗರದಲ್ಲಿ ಇಂದು ನೀರು ಪೂರೈಕೆ ಎಲ್ಲೆಲ್ಲಿ….?

0

ಗದಗ ಬೆಟಗೇರಿ ಅವಳಿ ನಗರದಲ್ಲಿ ಅಕ್ಟೋಬರ್‌ 19 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

ಸ್ಥಳಗಳ ವಿವರ

ವಾರ್ಡ್ ನಂ. 27 ಕಾಶಿ ವಿಶ್ವನಾಥನಗರ, ಮಾರುತಿ ದೇವಸ್ಥಾನದ ಲೈನ್, ಅಸೂಟಿಯವರ ಲೈನ್, ಕಣವಿ ಅವರ ಲೈನ್, ಮಾಳಿಕೋಟಿಯವರ ಸಂದಿ, ವಿ ಆರ್ ಎಲ್ ಆಫೀಸ್ ಲೈನ್, ವಾರ್ಡ್ ನಂ. 30 ಟಿವಿಎಸ್ ಶೋರೂಮ್, ಮುತ್ತಿನಪೆಂಡಿಮಠ ಲೇಔಟ್, ಅಬ್ಬಿಗೇರಿ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಪಾಸಿಯವರ ಲೈನ್, ವಾರ್ಡ್ ನಂ. 22 ದೊಡ್ಡ ಮಸೀದಿ ಹತ್ತಿರ ಹಿಂದಿನ ಭಾಗ ಮುಂದಿನ ಭಾಗ, ಕನ್ನಡ ಶಾಲೆ ಲೈನ್, ಶುದ್ಧ ನೀರಿನ ಘಟಕ ಭಾಗ-1,2,3, ವಾರ್ಡ್ ನಂ. 1 ಎಸ್ ಎಂ ಕೃಷ್ಣ ನಗರ ಕೆಳಗಿನ ಭಾಗ ಮೇಲಿನ ಭಾಗ, ಆದಿಶಕ್ತಿಯ ಗುಡಿಯ ಸುತ್ತಮುತ್ತಲಿನ ಭಾಗಗಳು, ಕ್ರಿಶ್ಚಿಯನ್‌ ಕಾಲೋನಿ, ಆಟೋ ಕಾಲೋನಿಯ ಕೆಲವು ಭಾಗಗಳು.

ವಾರ್ಡ್ ನಂ. 35, 34, 30 ಈಡಬ್ಲ್ಯೂಎಸ್, ಮೂರು ಶಿಳ್ಳಿನ ವಕಾರ, ಹೂಗಾರ ಪ್ಲಾಟ್, ಡಿಪೋ ಹಿಂದಿನ ಭಾಗ, ವಡ್ಡರಗೇರಿ ಮೇಲಿನ ಭಾಗ, 46 ಪ್ಲಾಟ್, ಶಿವಾನಂದ ನಗರ, ಕುಂಚಿ ಕೊರವರ ಓಣಿ, ಬಸವೇಶ್ವರ ಸ್ಕೂಲ್ ಲೈನ್, ವಾರ್ಡ್ ನಂ. 29 ಸಾಯಿ ನಗರ, ಪಂಚಾಕ್ಷರಿ ನಗರ, ಕಲಾಮಂದಿರ ನಗರ, ಮಸೂತಿ ಲೈನ್ ತಾಂತ್ರಿಕವಾಗಿ ನೀರು ಪೂರೈಕೆಯಲ್ಲಿ ಒಂದು ವೇಳೆ ಅಡೆತಡೆಯಾದಲ್ಲಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕೆಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!