Home Blog Page 3229

ಕೊಳೆತ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ; ಕೊಲೆ ಮಾಡಿ ಬಿಸಾಕಿರುವ ದುಷ್ಕರ್ಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ;

ಶನಿವಾರ ಸಂಜೆ ಮನೆಯಿಂದ ಕಾಣಿಯಾಗಿದ್ದ ಬಾಲಕಿಯೊಬ್ಬಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗದಗ ತಾಲೂಕಿನ ಅಸುಂಡಿ‌ ಗ್ರಾಮದಲ್ಲಿ ನಡೆದಿದೆ.

ಕೊಲಗೀಡಾದ ಬಾಲಕಿ ಅದೇ‌ ಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದೆ.

ಕಳೆದ ಶನಿವಾರ ಸಂಜೆ ಏಳು ಗಂಟೆಯ ಸುಮಾರಿಗೆ ಮನೆಯಿಂದ ಹೊರ ಹೋಗಿದ್ದ ಬಾಲಕಿ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ.

ಭಾನುವಾರ ಗ್ರಾಮೀಣ ಠಾಣೆಗೆ ಬಾಲಕಿಯ ಪೋಷಕರು ದೂರು ನೀಡಲು ಬಂದಿದ್ದರು. ಆದರೆ ಬಾಲಕಿಯ ಭಾವಚಿತ್ರ ಇರದ ಕಾರಣ‌ ದೂರು ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಕಳೆದ ನಾಲ್ಕು ದಿನಗಳ ಕಾಲ ಹುಡುಕಾಡಿದರೂ ಬಾಲಕಿ ಇರುವಿಕೆ ಪತ್ತೆಯಾಗಿರಲಿಲ್ಲ. ಇಂದು ಸಂಜೆ ಕೊಳೆತ ವಾಸನೆ ಬಂದಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.

ಸದ್ಯಕ್ಕೆ ಕೊಲೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆಯಾ ಅಥವಾ ಒಬ್ಬನೇ ಕೊಲೆ ಮಾಡಿರಬಹುದಾ ಎಂಬುದು ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಲು ಮುಂದಾಗಿದ್ದಾರೆ.

ಸುದ್ದಿ ತಿಳಿದ ಎಸ್ಪಿ ಯತೀಶ್ ಎನ್, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ಸ್‌ಪೆಕ್ಟರ್ ರವಿ ಕಪ್ಪತನವರ, ಪಿಎಸ್ಐ ಅಜಿತಕುಮಾರ್ ಹೊಸಮನಿ ಸ್ಥಳದಲ್ಲಿದ್ದು ಘಟನೆಯ ಮಾಹಿತಿ ಪಡೆದಿದ್ದು, ಕೊಲೆ ಮಾಡಿರುವ ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಗ್ಯಾಂಗ್ ಅರೆಸ್ಟ್

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ;

ಸಾರಿಗೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 70 ಲಕ್ಷ ರೂ. ವಂಚಿಸಿದ್ದ ಗ್ಯಾಂಗ್ ವೊಂದನ್ನು ಹೊಸದುರ್ಗ ಪೊಲೀಸರು ಖೆಡ್ಡಾಗೆ ಬೀಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಕಟನಕೇರಿ ಗ್ರಾಮದ ಮಹಮದ್ ಸಾಬ್ ಅಲ್ಲಾ ಸಾಬ್ ಭಗವಾನ್, ವಿಜಯಪುರ ನಗರದ ಬಸವರಾಜ್ ನಿಂಗಪ್ಪ ಭಜಂತ್ರಿ, ಬಾಗಲಕೋಟೆಯ ವೀರಭದ್ರ ಅರಗಿನಶೆಟ್ಟಿ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿಜಯಪುರ ತಾಲೂಕಿನ ಗೊಗಳಿ ತಾಂಡಾದ ಮಂಜುನಾಥ್ ಬಾಲ್ಯನಾಯ್ಕ, ಬೆಂಗಳೂರಿನ ಅನಿಲಕುಮಾರ್ ಎನ್.ವಿ. ಬಂಧಿತರು.

ಬಂಧಿತರಿಂದ 12.40 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ನಕಲಿ‌ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

2019ರಲ್ಲಿ ಸಾರಿಗೆ ಇಲಾಖೆಯು ಸಂಚಾರಿ ನಿರೀಕ್ಷಕರು, ಸಹಾಯಕ ಸಂಚಾರಿ ನಿರೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆರೋಪಿಗಳು ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿ ತಮಗೆ ಪರಿಚಯವರಿದ್ದು, ನೌಕರಿ ಮಾಡಿಸಿಕೊಡುವುದಾಗಿ ನಂಬಿಸಿ ಹಲವರ ಬಳಿ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ವಂಚಿಸಿದ್ದರು.

ಒಟ್ಟು 500 ಮಂದಿಗೆ 70 ಲಕ್ಷ ರೂ. ವಂಚಿಸಿದ್ದ ಗ್ಯಾಂಗ್ ಬಣ್ಣ ಈಗ ಬಯಲಾಗಿದೆ. ವಂಚನೆಗೆ ಒಳಗಾಗಿದ್ದ ಯುವಕ ಅಭಿಷೇಕ್ ಹೊಸದುರ್ಗ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಡುಹಗಲೇ ದಾಳಿ ಪ್ರಕರಣ; ರೌಡಿ ಶೀಟರ್ ಸೇರಿ ಮೂವರ ಬಂಧನ, ಪುರಸಭೆ ಸದಸ್ಯ ಪರಾರಿ

ವಿಜಯಸಾಕ್ಷಿ ಸುದ್ದಿ, ಗದಗ;

ಹಾಡುಹಗಲೇ ಯುವಕನ ಮೇಲೆ ನಾಲ್ಕು ಜನರ ತಂಡವೊಂದು ಲಾಂಗ್, ಮಚ್ಚು‌ ಸೇರಿದಂತೆ ಮಾರಕಾಸ್ತ್ರದಿಂದ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸರು ರೌಡಿ ಶೀಟರ್ ಸೇರಿದಂತೆ ಮೂವರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪುರಸಭೆ ಸದಸ್ಯ ಪರಾರಿಯಾಗಿದ್ದಾರೆ.

ಅಬ್ದುಲ್ ಮೈನುದ್ದೀನ ಆಡೂರ, ನಿಜಾಮ್ ಮೈನುಸಾಬ್ ಚಂಗಾಪೂರಿ, ಹಜ್ಜು ಅಲಿಯಾಸ್ ಹಜರತ್ ರಿಯಾಜ್ ಅಹ್ಮದ್ ಶಿರೂರ ಎಂಬುವವರನ್ನು ಬಂಧಿಸಲಾಗಿತ್ತು, ಫಿರ್ದೋಸ್ ಮೈನುದ್ದಿನ ಆಡೂರ ಎಂಬುವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿರುವ ಮಾರಕಾಸ್ತ್ರ, ಹಾಗೂ ಕಾರ ಜಪ್ತಿ ಮಾಡಲಾಗಿದೆ.

ಆಸ್ತಿಗೆ ಸಂಬಂಧಿಸಿದಂತೆ ವಿವಾದ ಇದ್ದು, ಅದೇ ಸೇಡಿನಿಂದ ಮೊನ್ನೆ ಶನಿವಾರ ಅ.23 ರಂದು ಹಾಡುಹಗಲೇ, ಬೈಕ್ ಮೇಲೆ ಮನೆಯತ್ತ ಹೊರಟಿದ್ದ ನೂರ ಅಹ್ಮದ್ ಮಕಾನದಾರನನ್ನು ಅಡ್ಡಗಟ್ಟಿ ಲಾಂಗ್, ಮಚ್ಚು ಹಾಗೂ ಕೊಡ್ಲಿಯಿಂದ ಬಂಧಿತ ಆರೋಪಿಗಳು ದಾಳಿ ಮಾಡಿದ್ದರು. ಇದರಿಂದಾಗಿ ಕೆಲಕಾಲ ಆತಂಕದ‌ ವಾತಾವರಣ ನಿರ್ಮಾಣವಾಗಿತ್ತು. ಗಂಭೀರ ಗಾಯಗೊಂಡಿದ್ದ ನೂರ ಅಹ್ಮದ ಮಕಾನದಾರ ಎಂಬಾತ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿಲಾಗಿತ್ತು.

ಇದನ್ನೂ ಓದಿ ಹಾಡುಹಗಲೇ ಮೂವರಿಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ‌ ದಾಳಿ; ಬೆಚ್ಚಿದ ಜನ

ಹಾಡುಹಗಲೇ ನಡೆದ ಈ ಕೃತ್ಯದಿಂದಾಗಿ ಪೊಲೀಸರ ಮೇಲೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ಪಿಎಸ್ಐ ಡಿ ಪ್ರಕಾಶ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸರ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ ಸೆಟ್ಲಮೆಂಟ್ ನ ನಿವಾಸಿ ಸೇರಿ ಮೂವರ ಬಂಧನ

0

ವಿಜಯಸಾಕ್ಷಿ ಸುದ್ದಿ, ಗದಗ

ಇಲ್ಲಿನ ಕಳಸಾಪುರ ರಸ್ತೆಯ ಬ್ರೈಟ್ ಹಾರಿಜೋನ್ ಶಾಲೆಯ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಗದಗ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಸೆಟ್ಲಮೆಂಟ್ ನಿವಾಸಿ ಸುರೇಶ್ ಕಾಳೆ, ರಾಮನಗರದ ದೇವರಾಜ್ ವಿಭೂತಿ, ಬೆಟಗೇರಿಯ ವಾಸೀಂ ಈಟಿ ಸೇರಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗುತ್ತಿದೆ.

ಇನ್ನು ಬಂಧಿತರಿಂದ ಸುಮಾರು 26 ಸಾವಿರ ರೂ.ಮೌಲ್ಯದ 868 ಗ್ರಾ. ಗ್ರಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಮೂವರು ಸೇರಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿಎಸ್ಪಿ ಶಿವಾನಂದ ಪವಾಡಶೆಟ್ಟರ, ಇನ್ಸ್‌ಪೆಕ್ಟರ್ ಆರ್.ಎಸ್.ಕಪ್ಪತನವರ ಮಾರ್ಗದರ್ಶನದಲ್ಲಿ ಪಿಎಸ್ಐ ಅಜಿತಕುಮಾರ್ ಹೊಸಮನಿ, ಅಪರಾಧ ವಿಭಾಗದ ಸಿಬ್ಬಂದಿಗಳಾದ ಎನ್.ಎ.ಮೌಲ್ವಿ, ಪಿ.ಎಸ್.ಗಾಣಿಗೇರ, ಎಲ್.ಬಿ.ಪೂಜಾರ ಅವರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಸಿಬ್ಬಂದಿಗಳ ಈ ಕಾರ್ಯಾಚರಣೆಗೆ ಎಸ್ಪಿ ಯತೀಶ್ ಎನ್ ಶ್ಲಾಘಿಸಿದ್ದಾರೆ.

ಹಿಟ್ ಆ್ಯಂಡ್ ರನ್; ಪಪಂ ಅಧಿಕಾರಿ ಸಾವು

0

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ:

ಹಿಟ್ ಅಂಡ್ ರನ್ ಗೆ ಪಟ್ಟಣ ಪಂಚಾಯತಿ ಸಮುದಾಯ ಅಧಿಕಾರಿ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕುಡತಿನಿ ಬಳಿ ನಡೆದಿದೆ. ಕಂಪ್ಲಿ ನಿವಾಸಿಯಾಗಿದ್ದ
ವೇದಮೂರ್ತಿ (50) ಮೃತ ಪಪಂ ಅಧಿಕಾರಿ. ಪತ್ನಿ ಗಾಯಗೊಂಡಿದ್ದು, ಚಿಕಿತ್ಸೆಗೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇದಮೂರ್ತಿ ಬಳ್ಳಾರಿ ಜಿಲ್ಲೆ ಕುಡತಿನಿ ಪಟ್ಟಣ ಪಂಚಾಯತಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕುಡಿತಿನಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಜಾತಿ ವಿಷ ಬಿತ್ತಿದ್ದೇ ಸಿದ್ದರಾಮಯ್ಯ: ಎಚ್ಡಿಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು;

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ. ಜಾತಿ ಜಾತಿಗಳನ್ನೇ ಒಡೆದರು‌.
ಈಗ ಸಿಂದಗಿ, ಹಾನಗಲ್‌ನಲ್ಲಿ ಜಾತಿವಾರು ಸಭೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಇವರು ಜಾತ್ಯತೀತವಾಗಿದ್ದರೆ ಜಾತಿವಾರು ಸಭೆ ಯಾಕೆ ನಡೆಸುತ್ತಿದ್ದರು. ಇವರೆಂಥಾ ಜಾತ್ಯತೀತವಾದಿ ಎಂದು ವಾಗ್ದಾಳಿ ನಡೆಸಿದರು.

ಬ್ರದರ್ ಮುಸಲ್ಮಾನರ ಕತ್ತು ಕೋಯ್ತಾರೆ ಎಂಬ ಜಮೀರ್ ಆರೋಪಕ್ಕೆ ಉತ್ತರಿಸಿದ ಅವರು, ಫಾರೂಕ್‌ರನ್ನು ಚುನಾವಣೆಗೆ ನಿಲ್ಲಿಸಿ ಕತ್ತು ಕೋಯ್ದವರು ಯಾರು. ಫಾರೂಕ್ ಸೋಲಿಸಲು ರಾಮಸ್ವಾಮಿಗೆ ವೋಟು ಹಾಕಿದ್ದು ಯಾರು.

ಇವರಿಂದ ಮುಸಲ್ಮಾನರು ಉದ್ಧಾರ ಆಗಿದ್ದಾರಾ? ಹೋಗಲಿ ರಾಮಸ್ವಾಮಿಯವರನ್ನಾದರೂ ಉಳಿಸಿಕೊಂಡಿದ್ದಾರಾ ? ಇವರಿಂದ ನಾವು ಕಲಿಯಬೇಕಿಲ್ಲ. ಚುನಾವಣೆಯುದ್ದಕ್ಕೂ ಹೀಗೆಯೇ ಮಾತನಾಡಲಿ ನನಗದು ಒಳ್ಳೆಯದು, ನಾನು ಅದನ್ನೇ ಆಶಿಸುತ್ತೇನೆ ಎಂದು ಎಚ್ಡಿಕೆ ಹೇಳಿದರು.

ಏ ಬೊಮ್ಮಾಯಿ ಯಾವಾಗಾದ್ರೂ ಕುರಿ ಕಾದಿದ್ದಿಯೇನಯ್ಯಾ ?

  • ಮುಖ್ಯಮಂತ್ರಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ವಿಜಯಪುರ:

ಏ ಬಸವರಾಜ ಬೊಮ್ಮಾಯಿ ನೀನ್ಯಾವಾಗಾದ್ರೂ ಕುರಿ ಕಾದಿದ್ಯಾ..? ಯಾವಾತ್ತಾದ್ರೂ ಕರಿ ಕಂಬಳಿ ಹೊತ್ತಿದ್ದೀಯೇನಯ್ಯ..? ಅದನ್ನ ಹೊತ್ಕೊಳ್ಳೊಕೆ ಯೋಗ್ಯತೆ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಕಂಬಳಿ ಹೊತ್ತಕೊಳ್ಳಲು ಯೋಗ್ಯತೆ ಬೇಕು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ವಿಜಯಪುರದಲ್ಲಿ ತಿರುಗೇಟು ನೀಡಿದ ಅವರು, ಕಾಗಿನೆಲೆಯಲ್ಲಿ ಕನಕ ಗುರುಪೀಠ ಸ್ಥಾಪನೆ, ವಿಜಯಪುರ ಮಹಿಳಾ ವಿವಿಗೆ ಅಕ್ಕಮಹಾದೇವಿ ನಾಮಕರಣ, ಎಲ್ಲ ಕಚೇರಿಗಳಲ್ಲೂ ಬಸವಣ್ಣನವರ ಪೋಟೋ ಹಾಕಿಸಿದ್ದು, ಕಿತ್ತೂರು ಚನ್ನಮ್ಮ ಜಯಂತಿ ಸೇರಿ ಹಲವು ಜಯಂತಿಗಳನ್ನು ಮಾಡಿಸಿದ್ದು ಸಿದ್ದರಾಮಯ್ಯ. ಬಸವರಾಜ ಬೊಮ್ಮಾಯಿ ನೀನೆಲ್ಲಿದ್ದಿಯಪ್ಪಾ..? ಎಂದು ಗುಡುಗಿದರು.

ಈಶ್ವರಪ್ಪನಿಗೆ ತಾನು ಕುರುಬ ಎಂದು ಹೇಳಿಕೊಳ್ಳಲೂ ಭಯ. ಆದರೆ, ನಾನು ಎಲ್ಲಾ ಕಡೆ ಎದೆತಟ್ಟಿ ಹೆಳ್ತಿನಿ ನಾನೊಬ್ಬ ಕುರುಬ, ಕುರುಬ ಕುರುಬ ಎಂದು ಕುಟುಕಿದರು.

ಸಿಡಿಲು ಬಡಿದು ಅಪ್ಪ ಮಗ ಸೇರಿ ಮೂವರ ಸಾವು

0

ವಿಜಯಸಾಕ್ಷಿ ಸುದ್ದಿ, ವಿಜಯನಗರ:

ಸಿಡಿಲು ಬಡಿದು ಅಪ್ಪ ಮಗ ಸೇರಿ ಮೂವರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರಲಹಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಮಲ್ಲಿಕಾರ್ಜುನ (34), ಮಗ ಮೈಲಾರಿ (11), ಉಪ್ಪಾರ ಹನುಮಂತಪ್ಪ (35) ಮೃತ ದುರ್ದೈವಿಗಳು. ಜತೆಗೆ 2 ಆಡುಗಳು ಸಾವನ್ನಪ್ಪಿವೆ.

ಹಗರಿಬೊಮ್ಮನಹಳ್ಳಿ ಕೆಳಬಾಗದಲ್ಲಿ ಆಡು ಮೇಯಿಸಲು ತೋಟಕ್ಕೆ ಹೋಗಿದ್ದ ವೇಳೆ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಲುವ ಹತಾಶೆಯಿಂದ ಆರೆಸ್ಸೆಸ್ ಟೀಕೆಗಿಳಿದ ಎಚ್ಡಿಕೆ, ಸಿದ್ದರಾಮಯ್ಯ

  • ಹಾನಗಲ್ ನಲ್ಲಿ ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಹಾವೇರಿ:

ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನೂರಕ್ಕೆ ನೂರು ಶತಸಿದ್ಧ. ಕಾಂಗ್ರೆಸ್, ಜೆಡಿಎಸ್ ನಾಯಕರು ಹತಾಶೆಯಿಂದ ಆರೆಸ್ಸೆಸ್ ಟೀಕೆ ಮಾಡುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆರೋಪಿಸಿದರು.

‌‌ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು ಹಾನಗಲ್ ದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಅಭಿವೃದ್ಧಿ ಅಂದ್ರೆ ಉದಾಸಿ, ಉದಾಸಿ ಅಂದ್ರೆ ಅಭಿವೃದ್ಧಿ. ಅವರು ಕ್ಷೇತ್ರದ ಜನಮನಲ್ಲಿದ್ದಾರೆ ಎಂದರು.

ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಡಿಕೆಶಿ ಟೀಕೆ, ನಿಂದನೆ ಮಾಡಲು ಸ್ಪರ್ಧೆಗೆ ಇಳಿದಿದ್ದಾರೆ. ಅವರಿಗೆ ಸಂಘ ಪರಿವಾರ ಬೈಯದಿದ್ದರೆ ತಿಂದ ಅನ್ನ ಜೀರ್ಣ ಆಗಲ್ಲ. ಅಲ್ಪಸಂಖ್ಯಾತರ ಜಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಯಡಿಯೂರಪ್ಪನವರ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕಲ್ಯಾಣ ಮಾಡಿದ್ದಾರೆ. ನಾವು ಯಾವುದೇ ಕೋಮಿನ ವಿರೋಧಿಗಳಲ್ಲ. ಆದರೆ, ಜೆಡಿಎಸ್, ಕಾಂಗ್ರೆಸ್ ನವರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯಗೆ ಮಿದುಳೂ ಇಲ್ಲ. ತತ್ವ ಸಿದ್ಧಾಂತವೂ ಇಲ್ಲ ಎಂದು ಮಾತಿನ ಚಾಟಿ ಬೀಸಿದರು.

ಡಿಕೆಶಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಗಾದಿಗಾಗಿ ಪರಸ್ಪರ ಬಡಿದಾಡಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ ಮೆಚ್ಚಿಸಲು ಆರ್ ಎಸ್ ಎಸ್ ಬೈಯುತ್ತಾರೆ. ದೇಶದಲ್ಲಿ ಕಾಂಗ್ರೆಸ್ ಗೆ ಅಡ್ರೆಸ್ ಇಲ್ಲ ಎಂದು ಕುಟುಕಿದರು.

ಮಾಜಿ ಸಿಎಂ ಕುಮಾರಸ್ವಾಮಿಯವರೇ ಒಮ್ಮೆ ಆರೆಸ್ಸೆಸ್ ಶಾಖೆಗೆ ಬನ್ನಿ, ನಮಸ್ತೆ ಸದಾ ವತ್ಸಲೇ ಪ್ರಾರ್ಥನೆ ಮಾಡಿ, ಬೆಳಗ್ಗೆ ಭಾಗವಾ ಧ್ವಜಕ್ಕೆ ನಮಸ್ಕಾರ ಮಾಡಿ ಎಂದು ಸಲಹೆ ನೀಡಿದ ರೇಣುಕಾಚಾರ್ಯ, ಬ್ಲೂ ಫಿಲಂ ಅನುಭವ ನಿಮಗೆ ಇರಬೇಕು. ನಿಮ್ಮ ಪಕ್ಷದಲ್ಲಿರಬೇಕು.

ಹಿಡಿದು ಮರಿ ಮಕ್ಕಳ ವರೆಗೆ ಕುಟುಂಬ ರಾಜಕಾರಣ ಮಾಡುವುದೇ ರಾಜ್ಯಕ್ಕೆ ನೀವು ನೀಡಿದ ಕೊಡುಗೆಯಾಗಿದೆ ಎಂದರು. ಸಿದ್ದರಾಮಯ್ಯ ನವರು
ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ಹಗುರವಾಗಿ ಮತನಾಡುತ್ತಿದ್ದಾರೆ. ಡಿಕೆಶಿ ಬ್ಲಾಕ್ ಮೇಲ್ ತಂತ್ರಗಾರಿಕೆ ಹೆಸರಾದವರು. ಬತ್ತಳಿಕೆಯಲ್ಲಿ ಬಾಣ ಇದ್ದರೆ ಈಗಲೇ ತೆಗೆಯರಿ. ನೀವು ಇನ್ನೂ 20 ವರ್ಷ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತೀರಿ ಎಂದು ಹರಿಹಾಯ್ದರು.

ಮಾಜಿ ಸಿಎಂ ಯಡಿಯೂರಪ್ಪ ಯಾವತ್ತಿದ್ದರೂ ರಾಜಾಹುಲಿನೇ. ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತೆ ಎಂದು ಈಗಲೂ ಜನ ಹೇಳುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು.

ತುರ್ತು ಭೂ ಸ್ಪರ್ಶ ಮಾಡಿದ ಭೈರತಿ ಸುರೇಶ್ ಹೆಲಿಕಾಪ್ಟರ್

ವಿಜಯಸಾಕ್ಷಿ ಸುದ್ದಿ, ಹಾವೇರಿ:

ಹೆಲಿಕಾಪ್ಟರ್ ಮೂಲಕ ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯಿಂದಾಗಿ ದಾರಿ ಮಧ್ಯಯೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆಯಿತು.

ಹಾನಗಲ್ ಉಪಚುನಾವಣೆ ಪ್ರಚಾರಕ್ಕಾಗಿ ಭೈರತಿ ಸುರೇಶ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದರು. ಆದರೆ, ದಾರಿ ಮಧ್ಯೆ ಸಿಗ್ನಲ್ ಸಿಗದೇ ರೂಟ್ ಮ್ಯಾಪ್ ತೋರಿಸದಿದ್ದಾಗ ಫೈಲಟ್ ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದ ಆಟದ ಮೈದಾನದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದು, ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.


ಶಾಲಾ ಮೈದಾನದಲ್ಲಿ ಹೆಲಿಕಾಪ್ಟರ್ ಇಳಿದಿದ್ದರಿಂದ ಗ್ರಾಮದ ಯುವಕರು, ಮಕ್ಕಳು ಆಶ್ಚರ್ಯಚಕಿತರಾಗಿ ಗುಂಪುಗುಂಪಾಗಿ ಆಗಮಿಸಿ ಕಾಪ್ಟರ್ ನೋಡಲು ಮುಬಿದ್ದರು.

ಗ್ರಾಮದ ಮುಖಂಡರು ಭೈರತಿ ಸುರೇಶ್ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತ ಕೋರಿದರು. ಶಾಲೆಯ ಆವರಣದಲ್ಲೇ ಕೆಲಕಾಲ ವಿಶ್ರಾಂತಿ ಪಡೆದ ಶಾಸಕ ಭೈರತಿ ಬಳಿಕ ಕಾಪ್ಟರ್ ಏರಿ ಹುಬ್ಬಳ್ಳಿಯತ್ತ ಪ್ರಯಾಣಿಸಿದರು.

error: Content is protected !!