Home Blog Page 3242

ಗದಗ ಬೆಟಗೇರಿ ನಗರಸಭೆ ಚುನಾವಣೆಗೆ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟ

0

ವಿಜಯಸಾಕ್ಷಿ ಸುದ್ದಿ ಗದಗ
ಎರಡೂವರೆ ವರ್ಷದಿಂದ ನನೆಗುದಿಗೆ ಬಿದ್ದಿದ್ದ ಗದಗ ಬೆಟಗೇರಿ ನಗರಸಭೆ ಚುನಾವಣೆಯ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ.

ಈ ಕುರಿತು ನಗರಾಭಿವೃದ್ದಿ ಇಲಾಖೆ ಅಧೀನ ಕಾರ್ಯದರ್ಶಿ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದು, ಪರಿಷ್ಕೃತ ಮೀಸಲಾತಿ ಪಟ್ಟಿ ಇಲ್ಲಿದೆ.

ಗದಗ ಬೆಟಗೇರಿ ನಗರಸಭೆ ಚುನಾವಣೆಗೆ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟ

ವಿಜಯಸಾಕ್ಷಿ ಸುದ್ದಿ, ಗದಗ

ಎರಡೂವರೆ ವರ್ಷದಿಂದ ನನೆಗುದಿಗೆ ಬಿದ್ದಿದ್ದ ಗದಗ ಬೆಟಗೇರಿ ನಗರಸಭೆ ಚುನಾವಣೆಯ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ.

ಈ ಕುರಿತು ನಗರಾಭಿವೃದ್ದಿ ಇಲಾಖೆ ಅಧೀನ ಕಾರ್ಯದರ್ಶಿ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದು, ಪರಿಷ್ಕೃತ ಮೀಸಲಾತಿ ಪಟ್ಟಿ ಇಲ್ಲಿದೆ.

ರಜೆ ಮಂಜೂರು ಮಾಡಲು ಲಂಚದ ಬೇಡಿಕೆ ಇಟ್ಟ ಬಸ್ ಡಿಪೋ ಮ್ಯಾನೇಜರ್ ಎಸಿಬಿ ಬಲೆಗೆ

ವಿಜಯಸಾಕ್ಷಿ ಸುದ್ದಿ, ರೋಣ

ಸಾರಿಗೆ ಸಂಸ್ಥೆ ಚಾಲಕ/ನಿರ್ವಾಹಕರೊಬ್ಬರಿಗೆ ರಜೆ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಡಿಪೋ ಮ್ಯಾನೇಜರ್ ನನ್ನು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ರೋಣ ಬಸ್ ಡಿಪೋ ಮ್ಯಾನೇಜರ್ ಬಿ.ಎಂ. ಗೆನ್ನೂರ ಎಸಿಬಿ ದಾಳಿಗೆ ಒಳಗಾದ ಅಧಿಕಾರಿ. ಸಂಸ್ಥೆಯ ನಿರ್ವಾಹಕರೊಬ್ಬರು, ತಾಯಿಗೆ ಹುಷಾರಿಲ್ಲದ ಕಾರಣ ರಜೆ ಕೇಳಿದ್ದರು. ರಜೆ ಮಂಜೂರು ಮಾಡಲು 2 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇಂದು ಹಣ ಕೊಡುವಾಗ ದಾಳಿ ನಡೆಸಿದ ಅಧಿಕಾರಿಗಳು ಡಿಪೋ ಮ್ಯಾನೇಜರನನ್ನು ಬಂಧಿಸಿದ್ದಾರೆ.

ಎಸಿಬಿ ಡಿವೈಎಸ್ಪಿ ಎಂ.ವಿ. ಮಲ್ಲಾಪುರ ಮಾರ್ಗದರ್ಶನದಲ್ಲಿ ಇನ್ಸಪೆಕ್ಟರ್ ಆರ್.ಎಫ್. ದೇಸಾಯಿ, ಈರಣ್ಣ ಹಳ್ಳಿ, ಸಿಬ್ಬಂದಿಗಳಾದ ಎಂ.ಎಂ. ಅಯ್ಯನಗೌಡರ, ವೀರೇಶ ಜೋಳದ, ಎನ್.ಎಸ್. ತಾಯಣ್ಣವರ, ವೀರೇಶ ಬಿಸನಳ್ಳಿ, ಐ.ಸಿ. ಜಾಲಿಹಾಳ, ಶರೀಫ್ ಮುಲ್ಲಾ, ಮಂಜು ಮುಳಗುಂದ ಭಾಗವಹಿಸಿದ್ದರು.

2023ರ ಚುನಾವಣೆಯಲ್ಲಿ ಸ್ಪರ್ಧೆ: ಬಿ.ವೈ.ವಿಜಯೇಂದ್ರ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮುಂಬರುವ ಸಿಂಧಗಿ ಮತ್ತು ಹಾನಗಲ್ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧೆ ವದಂತಿಗೆ ತೆರೆ ಎಳೆದಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರವಿಲ್ಲ, 2023ರ ವಿಧಾನಸಭೆ ಚುನಾವಣೆವರೆಗೂ ಕಾಯುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ, 2023ರ ವಿಧಾನಸಭೆ ಚುನಾವಣೆಗೆ ಕೇವಲ 19 ತಿಂಗಳು ಮಾತ್ರ ಬಾಕಿಯಿದೆ. ನಾನೀಗ ತರಾತುರಿಯಲ್ಲಿ ಸ್ಪರ್ಧಿಸಿದರೆ, 2023 ರಲ್ಲಿ ನನ್ನ ಕ್ಷೇತ್ರ ಬದಲಾಯಿಸಬೇಕಾಗಬಹುದು. ನನ್ನ ಬೆಂಬಲಿಗರು ಶಾರ್ಟ್ಲಿಸ್ಟ್ ಮಾಡುವ ಕ್ಷೇತ್ರದಿಂದ 2023 ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ತಂದೆ ಯಡಿಯೂರಪ್ಪ, ಸಹೋದರ ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬೆಂಬಲಿಗರೊoದಿಗೆ ಚರ್ಚೆ ನಡೆಸಿ ಚುನಾವಣೆಗೆ ಆರು ತಿಂಗಳ ಮೊದಲು ಒಂದು ನಿರ್ಧಾರಕ್ಕೆ ಬರುವುದಾಗಿ ವಿಜಯೇಂದ್ರ ಹೇಳಿದ್ದಾರೆ.

ಕಳೆದ ಬಾರಿ, ನಾನು ವರುಣಾದಿಂದ ಸ್ಪರ್ಧಿಸಲು ಬಯಸಿದ್ದೆ, ಆದರೆ ಪಕ್ಷ ಅವಕಾಶ ನೀಡಲಿಲ್ಲ. ಈ ಬಾರಿ ಅಂತಹ ಮುಜುಗರ ಆಗುವುದು ಬೇಡ. ಹೀಗಾಗಿ ಮುಂಚಿತವಾಗಿಯೇ ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಯಡಿಯೂರಪ್ಪ ರಾಜ್ಯ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಬಿಜೆಪಿ ನಾಯಕರೊಂದಿಗೆ ಸಮಾಲೋಚಿಸಿ ರಾಜ್ಯವ್ಯಾಪಿ ಪ್ರವಾಸ ಯೋಜಿಸಲಾಗಿದೆ. ರಾಜ್ಯ ಬಿಜೆಪಿ ನಾಯಕರು ಯಡಿಯೂರಪ್ಪ ಅವರ ಜೊತೆಗೆ ಸದಾ ಇರಲಿದ್ದಾರೆ ಎಂದರು.

ಮುಂದಿನ ಚುನಾವಣೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅಮಿತ್ ಶಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಬೊಮ್ಮಾಯಿ ಸಿಎಂ ಆಗಿದ್ದಾರೆ. ಹೀಗಾಗಿ ಅವರನ್ನು ಮುಂದಿನ ನಾಯಕ ಎಂದು ಪ್ರೊಜೆಕ್ಟ್ ಮಾಡಬೇಕು, ಅವರೊಂದಿಗೆ ನಾನು ಉತ್ತಮ ಸಂಬoಧ ಹೊಂದಿದ್ದೇನೆ ಎಂದು ಹೇಳಿದರು.

ಸಂಸದ ಕರಡಿ ಸಂಗಣ್ಣ ಉಡಾಫೆ ಹೇಳಿಕೆ ಖಂಡನೀಯ: ಹಿಟ್ನಾಳ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯ ಸಂಗಣ್ಣ ಕರಡಿ ಅವರು ಇತ್ತೀಚೆಗೆ ಒಂದು ಹೇಳಿಕೆ ನೀಡಿದ್ದನ್ನು ತಾವು ಗಮನಿಸಿರಬಹುದು , ತೈಲ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಗೆ ಸಂಬಂಧಿಸಿದಂತೆ , ‘ ಅಪ್ಪನ ಸಾಲವನ್ನು ಮಗ ತೀರಿಸಬೇಕಲ್ವೆ ? ‘ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ. ಇದು ಖಂಡನೀಯ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರಕಾರವೇ ಕಾರಣ ಎಂದು ಸಂಸದರು ಆರೋಪಿಸಿದ್ದಾರೆ . ಜನರು ಬೆಲೆ ಏರಿಕೆ ಭಾರದಲ್ಲಿ ನಲುಗಿ ಹೋಗುತ್ತಿರುವಾಗ , ಸಂಸದರ ಈ ಹೇಳಿಕೆ ಆಘಾತಕಾರಿಯಷ್ಟೇ ಅಲ್ಲ , ಸಾಕಷ್ಟು ತಪ್ಪು ಮಾಹಿತಿಯನ್ನು ಒಳಗೊಂಡಿದೆ ಎಂದು ಸಂಸದರ ಹೇಳಿಕೆಯನ್ನು ಖಂಡಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ 2014 ರ ಮಾರ್ಚ್‌ವರೆಗೆ ತನ್ನ 67 ವರ್ಷಗಳ ಆಡಳಿತದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅದರ ನೇತೃತ್ವದ ಸರಕಾರಗಳು ಮಾಡಿದ ಒಟ್ಟು ಸಾಲ ರೂ .53.11 ಲಕ್ಷ ಕೋಟಿ , ಆದರೆ , ಜೂನ್ 2014 ರಿಂದ 2021 ರವರೆಗೆ ಬಿಜೆಪಿ ಸರಕಾರ ಮಾಡಿರುವ ಒಟ್ಟು ಸಾಲ 82.7 ಲಕ್ಷ ಕೋಟಿಗಳು . ಈ ಎರಡೂ ಪಕ್ಷಗಳ ನೇತೃತ್ವದ ಸರಕಾರ ಮಾಡಿರುವ ಒಟ್ಟು ಸಾಲ ರೂ .135.87 ಲಕ್ಷ ಕೋಟಿ ಅಗುತ್ತದೆ‌. ಬಿಜೆಪಿ ಸರಕಾರ ತಾನು ಮಾಡಿರುವ ಅಪಾರ ಸಾಲದ ಜೊತೆಗೆ , ಅದಾನಿ ಮುಂತಾದ ಕಾರ್ಪೊರೇಟ್ ಸಂಸ್ಥೆಗಳ ಅಂದಾಜು ರೂ .11 ಲಕ್ಷ ಕೋಟಿ ಸಾಲವನ್ನು ಎನ್‌ಪಿಎ ( ವಸೂಲಾಗದ ಸಾಲ – ಅನುತ್ಪಾದಕ ಸಾಲ ) ಎಂದು ಘೋಷಿಸಿದೆ . ಅಂದರೆ , ಕಾರ್ಪೊರೇಟ್ ಸಂಸ್ಥೆಗಳ ಈ ರೂ .11 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದಂತೆ . ಇದರ ಜೊತೆಗೆ ಕಳೆದ ನಾಲ್ಕು ವರ್ಷಗಳಲ್ಲಿ ರೂ .7 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತವನ್ನು ಮನ್ನಾ ( ಲೈಟ್ ಆಫ್ ಮಾಡಿದೆ 3.ಅನುತ್ಪಾದಕ ಸಾಲ ಪದ ಇಪಿ ನರಕಾರ ಘೋಷಿಸಿರುವ ರೂ . 11 ಲಕ್ಷ ಕೋಟಿ ಮೊತ್ತದಲ್ಲಿ ಪ್ರಧಾನಿ ಆಗಿ ಅವರ ಪರಮಾಪ್ತ ಉದ್ಯಮಿ ಅದಾನಿಯ ಸಾಲದ ಪ್ರಮಾಣವೇ ರೂ .4.5 ಲಕ್ಷ ಕೋಟಿಯಷ್ಟಿದೆ ಎಂದು ಬಿಜೆಪಿಯವರೇ ಆಗಿರುವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ . ಇಷ್ಟೊಂದು ಸಾಲ ಮಾಡಿದ್ದರೂ ಅದಾನಿ ಅವರ ಆದಾಯ 2016 ರಿಂದ ಗುಣವಾಗುತ್ತಿರುವುದು ಹೇಗೆ ? ಇಷ್ಟೊಂದು ಸಾಲ ಇರುವ ವ್ಯಕ್ತಿಯ ಸಾಲವನ್ನು ಮನ್ನಾ ಮಾಡಿದ್ದಾದರೂ ಏಕೆ? ಈ ಅಂಶ ಸನ್ಮಾನ್ಯ ಸಂಸದ ಸಂಗಣ್ಣ ಕರಡಿ ಅವರಿಗೆ ಗೊತ್ತಿಲ್ಲವೆ? ಎಂದು ಹಿಟ್ನಾಳ ಪ್ರಶ್ನಿಸಿದರು.

2013-14ರಲ್ಲಿ ಭಾರತದ ರಷ್ಟು ಆದಾಯ ರೂ .25.52 ಲಕ್ಷ ಕೋಟಿ ಇದ್ದದ್ದು ಮೋದಿ ಕಾಲದ 2019-2020ರ ವೇಳೆಗೆ ರೂ .23.02 ಲಕ್ಷ ಕೋಟಿಗೆ ಇಳಿದಿದೆ . ಹಾಗಾದರೆ ” ಮೇಕ್ ಇನ್ ಇಂಡಿಯಾ ” ಎಲ್ಲಿ ಹೋಯ್ತು? ದೇಶದ ಜನ ಕಳೆದ 70 ವರ್ಷಗಳಲ್ಲಿ ಸೃಷ್ಟಿಸಿದ 6 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಮೋದಿಯವರು ಈ ದೇಶದ ಜನರ ಅನುಮತಿ , ಒಪ್ಪಿಗೆ ಪಡೆದಿದ್ದಾರಾ ? ಅಸ್ತಿ ನಗದೀಕರಣ ಹೆಸರಿನಲ್ಲಿ ಭಾರತದ ರಸ್ತೆಗಳು , ಏರ್‌ಪೋರ್ಟ್‌ಗಳು , ರೈಲು ನಿಲ್ದಾಣಗಳು ಸೇರಿ ಪ್ರತಿಯೊಂದನ್ನೂ ಖಾಸಗಿಯವರಿಗೆ ಒಪ್ಪಿಸಲಾಗುತ್ತಿದೆ . ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುವ ಮೋದಿ ಅವರು ಮಾರಾಟ ಮಾಡುತ್ತಿರುವುದು ಯಾರು ಮಾಡಿಟ್ಟ ಆಸ್ತಿಯನ್ನು ? ಇದಕ್ಕೆ ಸಂಸದ ಸಂಗಣ್ಣ ಕರಡಿ ಏನು ಹೇಳುತ್ತಾರೆ? ಎಂದು ಶಾಸಕರು ಕಿಡಿ ಕಾರಿದರು.

ಬಿಜೆಪಿ ಸರಕಾರದ ಅವಧಿಯಲ್ಲಿ ಮನೆಗಳ ಆಸ್ತಿ ತೆರಿಗೆ ವಿಪರೀತ ಹೆಚ್ಚಾಗಿರುವುದು ಮಾತ್ರವಲ್ಲದೆ ಖಾಲಿ ಜಾಗಗಳಿಗೂ ತೆರಿಗೆ ವಿಧಿಸುತ್ತಿದ್ದಾರೆ . ಕಬ್ಬಿಣ , ಸಿಮೆಂಟ್ ಸೇರಿ ದಿನನಿತ್ಯ ಬಳಕೆಯ ಎಲ್ಲಾ ಸ್ಥಳ ಬೆಲೆಯೂ ಆಕಾಶ ಮುಟ್ಟುತ್ತಿದೆ . ಅಚ್ಛೆ ದಿನ್ ಅಂದರೆ ಇದೇನಾ? ಬೆಲೆ ಏರಿಕೆ ಮತ್ತು ಹಣದುಬ್ಬರದಿಂದ ಜನರ ಬದುಕು ನರಕವಾಗಿದೆ . ವಿದ್ಯುಚ್ಛಕ್ತಿ ಬಿಲ್ ಶೇ , 30 ರಷ್ಟು ಹೆಚ್ಚಾಗಿದೆ . ಪೆಟ್ರೋಲ್ , ಡೀಸೆಲ್ , ಅಡುಗೆ ಅನಿಲದ ಬೆಲೆ ಏರಿಕೆಯಂತೂ ನಿರಂತರವಾಗಿ ಸಾಗಿದೆ . ಬಹುಶಃ ಮೋದಿ ಅವರು ಪ್ರಧಾನಿ ಆಗಿರುವವರೆಗೂ ಈ ಬೆಳೆಗೆಸಿ ಇಳಿಯುವಂತೆ ಕಾಣುತ್ತಿಲ್ಲ . ಹೇಳುತ್ತ ಹೋದರೆ ಬಿಜೆಪಿ ಸರಕಾರ ಬಿನದಿಗೆ ಮಾಡಿರುವ ಹಾಗೂ ಮಾಡುತ್ತಿರುವ ದ್ರೋಹಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ . ಅಪ್ಪ ಮಾಡಿಟ್ಟ ಕಾಲವನ್ನು ಮಗ ತೀರಿಸಬೇಕಲ್ವೆ ? ಎಂದು ಸಂಸದ ಸಂಗಣ್ಣ ಕರಡಿ ಉಡಾಫೆಯಿಂದ ಪ್ರಶ್ನಿಸಿದ್ದಾರೆ , ಅಂದರೆ , ಕಾಂಗ್ರೆಸ್ ಅಪ್ಪ ಅದಂತಾಯ್ತು? ಎಂದು ಅವರು ಸಂಸದರ ಹೇಳಿಕೆಗೆ ಟಾಂಗ್ ನೀಡಿದರು.

ಬಿಜೆಪಿಯಂತಹ ಜನವಿರೋಧಿ , ಪ್ರಗತಿವಿರೋಧಿ ಮಗನನ್ನು ಹೊಂದಲು ಕಾಂಗ್ರೆಸ್ ಎಂದಿಗೂ ಬಯಸುವುದಿಲ್ಲ , ಅಂಕಿಅಂಶಗಳು ಸುಳ್ಳು ಹೇಳುವುದಿಲ್ಲ , ಖುದ್ದು ಕೇಂದ್ರ ಸರಕಾರವೇ ಬಿಡುಗಡೆ ಮಾಡಿರುವ ಅಂಕಿಅಂಶಗಳು ಸತ್ಯವನ್ನು ಸ್ಪಷ್ಟವಾಗಿ ಹೇಳುತ್ತಿವೆ , ಜನವಿರೋಧಿ ಸರಕಾರ ಯಾರದು ಎಂಬುದು ಇದರಿಂದಲೇ ಸ್ಪಷ್ಟವಾಗುತ್ತದೆ , ದೇಶಭಕ್ತಿಯ ಹೆಸರಿನಲ್ಲಿ , ಅತ್ಮನಿರ್ಭರ ಹೆಸರಿನಲ್ಲಿ ಜನರ ಬದುಕನ್ನು ದುರ್ಭರವಾಗಿಸಿರುವ ಬಿಜೆಪಿ ಸರಕಾರ , ಕೊರೊನಾದಂತಹ ಸಂಕಷ್ಟ ಕಾಲದಲ್ಲಿಯೂ ಜನರ ರಕ್ತ ಹೀರುವುದನ್ನು ಬಿಟ್ಟಿಲ್ಲ . ತರಿಗೆ ಹೆಸರಿನಲ್ಲಿ , ಸ್ವಾವಲಂಬಿ ಭಾರತದ ಹೆಸರಿನಲ್ಲಿ ಜನರ ಜೇಬಿನಿಂದ ದುಡ್ಡು ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡಿಲ್ಲ . ಅಂತಹ ನೀಚ ಕೆಲಸ ಮಾಡುತ್ತಿರುವುದು ಬಿಜೆಪಿ ಸರಕಾರ , ವಿದ್ಯುತ್ , ನೀರು , ಇಂಧನ ಆಹಾರ ಮುಂತಾದವು ಜನರ ಮೂಲಭೂತ ಅವಶ್ಯಕತೆಗಳೇ ಹೊರತು ಆಡಂಬರವಲ್ಲ . ಇಂತಹ ಕನಿಷ್ಠ ಸೌಕರ್ಯಗಳಿಗೂ ಅಪಾರ ತೆರಿಗೆ ಪಡೆಯುತ್ತಿರುವುದು ಜನವಿರೋಧಿ ಕೆಲಸವಾಗುತ್ತದೆ . ಅಂತಹ ನೀಚ ಕೆಲಸವನ್ನು ಬಿಜೆಪಿ ಮಾಡುತ್ತ ಬಂದಿದೆ . ಆದರೆ , ತಮ್ಮ ಪಾಪದ ಕೆಲಸವನ್ನು ಕಾಂಗ್ರೆಸ್ ಪಕ್ಷದ ತಲೆಗೆ ಕಟ್ಟುವ ದುರ್ಬುದ್ಧಿ ತೋರಿಸುತ್ತಿದೆ ಎಂದು ಅವರು ದೂರಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಜುಲ್ಲು ಖಾದ್ರಿ, ಎಸ್. ಬಿ.ನಾಗರಳ್ಳಿ, ಪ್ರಸನ್ನ ಗಡಾದ, ರವಿ ಕುರಗೋಡ ಮತ್ತಿತರರು ಇದ್ದರು.

ಶಿರಹಟ್ಟಿ ಶಾಸಕರ ಕ್ಷೇತ್ರದಲ್ಲಿ ಭರ್ಜರಿ ಜೂಜಾಟ; ವಿದ್ಯಾರ್ಥಿ, ವ್ಯಾಪಾರಸ್ಥರು, ರಾಜಕಾರಣಿ ಸೇರಿ 19 ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ತವರು ಗ್ರಾಮ ಸೇರಿದಂತೆ ಕ್ಷೇತ್ರದಲ್ಲೀಗ ಅಂದರ್- ಬಾಹರ್ ಜೂಜಾಟ ಜೋರಾಗಿದೆ. ಅದರಲ್ಲೂ ಇತ್ತೀಚೆಗೆ ಲಕ್ಷ್ಮೇಶ್ವರ ತಾಲೂಕಿನಲ್ಲಂತೂ ಜೂಜಾಟದ ಹಾವಳಿ ಮಿತಿಮೀರಿದೆ.

ಕುಂದ್ರಳ್ಳಿ ತಾಂಡಾ, ಕೆರಳ್ಳಿ ತಾಂಡಾ ಸಹಿತ ಮೂರು ಕಡೆ ನಡೆದ ಪ್ರತ್ಯೇಕ ದಾಳಿಯಲ್ಲಿ ಒಟ್ಟು 19 ಜನ ಜೂಜುಕೊರರನ್ನು ಪೊಲೀಸರು ಬಂಧಿಸಿ, 46 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಕುಂದ್ರಳ್ಳಿ ತಾಂಡಾದ ಮಹಿಳೆಯೊಬ್ಬರ ಮನೆಯ ಹಿಂಬಾಗದಲ್ಲಿ ಜೂಜಾಡುತ್ತಿದ್ದ ಕುಂದಗೋಳದ ದೇಶಮಂಡೆಯವರ ಓಣಿಯ ಲತೀಫಸಾಬ್ ದಾವಲಸಾಬ್ ತಿಪ್ಪಿಮನಿ, ಆದ್ರಳ್ಳಿ ತಾಂಡಾದ ಮಹಾದೇವ ಮೊನ್ನಪ್ಪ ಲಮಾಣಿ, ಗದಗ ತಾಲೂಕಿನ ಚಿಂಚಲಿಯ ಕುಮಾರ್ ಕೃಷ್ಣಪ್ಪ ಬಂಡಿವಡ್ಡರ್, ಆದ್ರಳ್ಳಿ ತಾಂಡಾದ ಕಾಶಪ್ಪ ಲಮಾಣಿ ಎಂಬುವವರನ್ನು ಬಂಧಿಸಿ, ಅವರಿಂದ 8,700 ನಗದು ವಶಪಡಿಸಿಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಪಕ್ಕದ ಕೆರಳ್ಳಿ ತಾಂಡಾದ ಮಹಿಳೆಯೊಬ್ಬರ ಮನೆಯ ಹಿತ್ತಲ ಜಾಗೆಯಲ್ಲಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪದ ಹನುಮಂತ ಫಕ್ಕೀರಪ್ಪ ಹೊಸೂರು, ಕೆರಳ್ಳಿ ತಾಂಡಾದ ಪ್ರಭು ರೇಖಪ್ಪ ಲಮಾಣಿ, ಚಂದ್ರು ಲಮಾಣಿ, ಮಾರುತಿ ಲಮಾಣಿ, ಶಿರಹಟ್ಟಿ ತಾಲೂಕಿನ ತಾರಿಕೊಪ್ಪದ ವಿಶಾಲರೆಡ್ಡಿ ಮೇಲಗಿರಿಯಪ್ಪ ಮರುನಬಿಡಾ, ಗದಗ-ಬೆಟಗೇರಿಯ ಹೆಲ್ತ್ ಕ್ಯಾಂಪ್‌ ನಿವಾಸಿ ಏಕನಾಥ್ ಭೀಮಪ್ಪ ವಡ್ಡರ್ ಕಲ್ಲು, ಫಾರೂಕ್, ಮುಂಡರಗಿ ತಾಲೂಕಿನ ನಾಗರಳ್ಳಿಯ ಮಾರುತಿ ಮರಿಯಪ್ಪ ಯಲಿಕಾರ ಎಂಬುವವರನ್ನು ಬಂಧಿಸಿ, ಅವರಿಂದ 21 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಸಂಜೆ ನಡೆದ ಮತ್ತೊಂದು ಪ್ರಕರಣದಲ್ಲಿ ಸರಕಾರಿ ಹಳ್ಳದಲ್ಲಿ ಜೂಜಾಟದಲ್ಲಿ ತೊಡಗಿದ್ದ ವ್ಯಾಪಾರಸ್ಥರು, ವಿದ್ಯಾರ್ಥಿ ಸೇರಿದಂತೆ 7 ಜನರ ಬಂಧಿಸಲಾಗಿದೆ.

ಹನಮಂತ ನೀಲಪ್ಪ ಶೆರಸೂರಿ, ಗಿರೀಶ್ ಶಿವಯ್ಯ ಕಲ್ಮಠ, ಬಸವರಾಜ್ ಕಳಕಪ್ಪ ಉಮಚಗಿ, ಮನೋಜ್ ಮಂಜುನಾಥ್ ತೆಗ್ಗಿನಮನಿ, ಮಹ್ಮದ್ ಅಲಿ ಗೌಸಸಾಬ್ ಕಲಬುರಗಿ, ಮಂಜುನಾಥ್ ಶಾಂತನಗೌಡ್ ಪಾಟೀಲ, ಗದಗನ ಗಂಗಾಪೂರಪೇಟಿಯ ಮನೋಜ್ ಮಲ್ಲಿಕಾರ್ಜುನ ಮೆಣಸಿನಕಾಯಿ ಎಂಬುವವರನ್ನು ಬಂಧಿಸಿಲಾಗಿದೆ. ಬಂಧಿತರಿಂದ 16,200 ಸಾವಿರ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತಂತೆ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾದ ಸಂಚಾರಿ ಡಿಸಿಪಿ ವರ್ತನೆ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ವಿಐಪಿಗಳ ಆಗಮನದಿಂದ ಹುಬ್ಬಳ್ಳಿಯ ಬಹುತೇಕ ರಸ್ತೆಗಳು ವಾಹನಗಳ ದಟ್ಟಣೆಯಿಂದ ಸವಾರರು ಪರದಾಡುವಂತಾಯಿತು.

ಈ ಮಧ್ಯೆ ಕೆಲ ಮಾರ್ಗಗಳ ಸಂಚಾರ ಬದಲಾವಣೆಯಿಂದ ಉಂಟಾದ ವಾಹನ ದಟ್ಟಣೆಯ ಕಿರಿಕಿರಿ ನಡುವೆ ಸಾರ್ವಜನಿಕರ ಸಂಚಾರಕ್ಕೆ ಸೂಕ್ತ ಅವಕಾಶ ಕಲ್ಪಿಸಬೇಕಿದ್ದ ಸಂಚಾರಿ ಡಿಸಿಪಿ ಬಸರಗಿ ಅವರು ರಸ್ತೆ ದಾಟುವ ಜನರ ಮೇಲೆ ಮನಸೋ ಇಚ್ಚೆ ಲಾಠಿ ಬೀಸುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾದರು.

ನೈಟ್ ಕರ್ಫ್ಯೂ ಜಾರಿಯ ಹಿನ್ನಲೆ ಬೇಗ ಮನೆ ಸೇರುವ ಧಾವಂತದಲ್ಲಿ ಜನರು ರಸ್ತೆಯಲ್ಲಿ ಲಗುಬಗೆಯಿಂದ ಹೊರಟರೆ ಸಂಬರಗಿಯವರು ಮಾತ್ರ ತಮ್ಮ ಅಧಿಕಾರದ ದರ್ಪ ತೋರಿಸಿ ವಾಹನ ಸವಾರರು, ಪಾದಚಾರಿಗಳ ಜೊತೆಗೆ ಒರಟಾಗಿ ವರ್ತಿಸಿದ್ದು, ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಯಿತು.

ಅಣತಿ ದೂರದಲ್ಲೇ ಮನೆ ಇದ್ದರೂ ಮನೆಗೆ ಹೋಗಲು ಅಡ್ಡಿಪಡಿಸಿದ ಪೊಲೀಸರ ವರ್ತನೆಗೆ ಜನರು ಹಿಡಿಶಾಪ ಹಾಕಿದರು. ಇನ್ನು ಮುಂದಾದರೂ ಪೊಲೀಸರು ಎಚ್ಚೆತ್ತು ದರ್ಪದ ವರ್ತನೆ ಬಿಟ್ಟು ಸಾರ್ವಜನಿಕರೊಂದಿಗೆ ಸೌಹಾರ್ದತೆಯಿಂದ ವರ್ತಿಸಬೇಕು ಎಂದು ಜನರ ಆಗ್ರವಾಗಿದೆ.

ಉಗುರಿಗಾಗಿ ಚಿರತೆ ಕೊಂದಿದ್ದ ಇಬ್ಬರು ಖದೀಮರು ಅಂದರ್

0

ವಿಜಯಸಾಕ್ಷಿ ಸುದ್ದಿ, ಹಾವೇರಿ

ಉಗುರಿಗಾಗಿ ಚಿರತೆ ಕೊಂದ ಆರೋಪದಲ್ಲಿ ಇಬ್ಬರನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಾಮನಹಳ್ಳಿಯಲ್ಲಿ ನಡೆದಿದೆ.
ಸಂತೋಷ ಲಮಾಣಿ (50)
ಮಂಜುನಾಥ ಪೀರಪ್ಪ ಲಮಾಣಿ (30) ಬಂಧನಕ್ಕೊಳಗಾದ ಆರೋಪಿಗಳು.

ಒಂದು ವರ್ಷ ಪ್ರಾಯದ ಚಿರತೆಯನ್ನು ಕೊಂದು ಕಾಲುಗಳ ಕತ್ತರಿಸಿ ತಂದು ಮನೆಯ ಹಿತ್ತಲಿನಲ್ಲಿ ಬಚ್ಚಿಟ್ಟಿದ್ದರು.

ಖಚಿತ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಚಿರತೆ ಕಾಲು ವಶಕ್ಕೆ ಪಡೆದಿದ್ದಾರೆ. ಉಗುರು ಪಡೆಯಲು ಚಿರತೆ ಕೊಂದಿದ್ದಾಗಿ ಒಪ್ಪಿಕೊಂಡಿದ್ದಾರೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಕ್ಕೆ ಚಿಂತನೆ

  • ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಗದಗ

ಆ.23ರಿಂದ 9ರಿಂದ12 ತರಗತಿಗಳನ್ನು ಆರಂಭಿಸಿದ್ದು, ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸೋಮವಾರ 6,7,8 ನೇ ತರಗತಿ ಪ್ರಾರಂಭವಾಗಲಿದ್ದು, ಹತ್ತು ದಿನ ನೋಡಿಕೊಂಡು ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೋಷಕರು ಶಾಲೆಗಳಿಗೆ ಬಂದು ಒಂದನೇ ತರಗತಿಯಿಂದಲೇ ಶಾಲೆ ಪ್ರಾರಂಭಿಸಿ ಎಂದು ಹೇಳುತ್ತಿದ್ದಾರೆ. ಆನ್ ಲೈನ್ ಕ್ಲಾಸ್ ನಿಂದ ನಮಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಪೂರ್ಣ ಪ್ರಮಾಣದ ಶಾಲೆ ಆರಂಭಿಸಿ ಎಂದು ವಿದ್ಯಾರ್ಥಿಗಳೂ ಹೇಳುತ್ತಿದ್ದಾರೆ.

ಕೋವಿಡ್ ಮೂರನೇ ಅಲೆ ಬಗ್ಗೆ ಚರ್ಚೆ ಆಗುತ್ತಿದೆ. ಹೀಗಾಗಿ ಮಕ್ಕಳ ಆರೋಗ್ಯದ ಮೇಲೆ ಕಾಳಜಿ ವಹಿಸಲಾಗುತ್ತಿದೆ. ಮಕ್ಕಳ ಇಚ್ಚೆ ನೋಡಿಕೊಂಡೇ ಮುಂದಿನ ದಿನಗಳಲ್ಲಿ 1 ರಿಂದ 5 ರವರಗೆ ಶಾಲೆ ಆರಂಭ ಮಾಡುತ್ತೇವೆ ಎಂದು ಹೇಳಿದರು.

ಕೆಲವು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿವೆ. ಅರ್ಬನ್ ಏರಿಯಾಗಳಲ್ಲಿ ಖಾಸಗಿ ಶಾಲೆಗಳಿಂದ ಈ ರೀತಿ ಸಮಸ್ಯೆ ಆಗುತ್ತಿದೆ. ಆಂಧ್ರದಲ್ಲಿ ಈಗಾಗಲೇ ಕಾನೂನು ತಂದಿದ್ದಾರೆ. ಅದೇ ಮಾದರಿಯಲ್ಲಿ ಕಾನೂನು ರೂಪಿಸುವ ಬಗ್ಗೆ
ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ಸಚಿವ ನಾಗೇಶ್ ತಿಳಿಸಿದರು.

ಶಾಲೆಗಳಲ್ಲಿ ಶೌಚಾಲಯಗಳು, ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕೋವಿಡ್ ಮಾರ್ಗಸೂಚಿ ಪ್ರಕಾರ ಗಣೇಶ ಹಬ್ಬಕ್ಕೆ ಅನುಮತಿ ನೀಡಲು ಚಿಂತನೆ

  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್ ಮಾರ್ಗಸೂಚಿ ಅನುಸರಿಸಿ ರಾಜ್ಯದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ಮಾಡಿಕೊಡಲು ಚಿಂತನೆ ನಡೆದಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬ ಆಚರಣೆ ಬಗ್ಗೆ ಮುಖ್ಯಮಂತ್ರಿ ಈಗಾಗಲೆ ಸಭೆ ನಡೆಸುವುದಾಗಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂತ್ರ ತರುವುದಾಗಿ ತಿಳಿಸಿದ್ದಾರೆ.
ಸಮಾರಂಭ ಮಾಡುವಾಗ ಕೋವಿಡ್ ಮಾರ್ಗಸೂಚಿ ಪ್ರಕಾರ ಮಾಡಬೇಕಾಗುತ್ತದೆ ಎಂದು ಹೇಳಿದರು.

ಅರುಣ್ ಸಿಂಗ್ ದುಡ್ಡು ವಸೂಲಿಗೆ ರಾಜ್ಯಕ್ಕೆ ಬಂದಿದ್ದಾರೆಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಆರೋಪ ಮಾಡುವವರಿಗೆ ಆ ವಿಚಾರ ಗೊತ್ತಿರಬಹುದು. ಆದರೆ, ನಮ್ಮ ಪಕ್ಷದಲ್ಲಿ ಆ ಸಿಸ್ಟಮ್ ಇಲ್ಲ. ಕುಮಾರಸ್ವಾಮಿ, ಸಿದ್ಧರಾಮಯ್ಯ ನವರು ನಮ್ಮ ಪಕ್ಷವನ್ನು ಹೊಗಳುತ್ತಾರೆ ಎಂಬ ಭ್ರಮೆ ನಮಗಿಲ್ಲ.

ಅವರ ಅನಾರೋಗ್ಯಕರ ಟೀಕೆಗೆ ಅದೇ ವೇದಿಕೆಯಲ್ಲಿ ಉತ್ತರ ನೀಡುತ್ತೇವೆ. ಸರ್ಕಾರಿ ಕೆಲಸ ಇಲ್ಲಿ ಉತ್ತರ ಬೇಡ ಬೇರೆ ಸಂದರ್ಭದಲ್ಲಿ ಉತ್ತರಿಸುವೆ ಎಂದರು.

ವಿದ್ಯಾರ್ಥಿ ವೇತನ ಬಿಡುಗಡೆಯಾಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಶ್ರೀನಿವಾಸ ಪೂಜಾರಿ, ಪ್ರೋತ್ಸಾಹ ಧನ ಬಂದಿಲ್ಲ ಎಂಬುದು ತಿಳಿದು ಬಂದಿದೆ. ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಜಿಲ್ಲಾವಾರು ಪ್ರೋತ್ಸಾಹ ಧನ ಬಿಡುಗಡೆಗೆ ಸಮಸ್ಯೆಯಾಗಿದೆ. ಸಭೆ ನಡೆಸಿ ಬಗೆಹರಿಸುತ್ತೇನೆ ಎಂದು ತಿಳಿಸಿದರು.

error: Content is protected !!