Home Blog Page 3272

ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಸೋಂಕಿತರ ಸಂಖ್ಯೆ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು 4,272 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,31,026ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 115 ಜನ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 34,654ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 955 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ನಗರದಲ್ಲಿ ಸೋಂಕಿತರ ಸಂಖ್ಯೆ 12,10,642ಕ್ಕೆ ಏರಿಕೆಯಾಗಿದೆ. ಸೋಂಕಿಗೆ 16 ಜನ ಬಲಿಯಾಗಿದ್ದಾರೆ.

ರಾಜ್ಯಾದ್ಯಂತ ಇಂದು 1,65,010 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 4,272 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.58ಕ್ಕೆ ಇಳಿದಿದೆ.

ಕೊರೊನಾ; ಶನಿವಾರ ಏರಿಕೆ ಕಂಡ ಸೋಂಕು, ಇಬ್ಬರ ಸಾವು

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಶನಿವಾರ 30 ಜನರಿಗೆ ಸೋಂಕು ಕಾಣಿಸಿಕೊಂಡಿದೆ.

ಇಂದು 30 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25735 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -18, ಮುಂಡರಗಿ-01, ನರಗುಂದ-00, ರೋಣ-05, ಶಿರಹಟ್ಟಿ-06, ಹೊರಜಿಲ್ಲೆಯ-00 ಸೇರಿದಂತೆ 30 ಪ್ರಕರಣಗಳು ದೃಢಪಟ್ಟಿವೆ.

ಶನಿವಾರ ಕೋವಿಡ್ ನಿಂದ ಇಬ್ಬರು ಮೃತಪಟ್ಟ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಹೊರಡಿಸಿದ ವರದಿಯಲ್ಲಿ ಮಾಹಿತಿ ಇದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ 296 ಜನರು ಮೃತಪಟ್ಟಂತಾಗಿದೆ.

ಜಿಲ್ಲೆಯ ರೋಣ ತಾಲೂಕಿನ ಕೋಡಿಕೊಪ್ಪ ನಿವಾಸಿ 84 ವರ್ಷದ ಮಹಿಳೆ ಜೂನ್ 5 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಜೂನ್ 25 ರಂದು ಮೃತಪಟ್ಟಿದ್ದಾರೆ.

ರೋಣ ತಾಲೂಕಿನ ನರೇಗಲ್ ನಿವಾಸಿ 89 ವರ್ಷದ ವ್ಯಕ್ತಿ ಜೂನ್ 16 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 23 ರಂದು ಮೃತಪಟ್ಟಿದ್ದಾರೆ.

ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನೆರವೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಂದು 35 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 25198 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 241 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 70 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳು ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳಬೇಕು; ಹಿಟ್ನಾಳ

ವಿಜಯಸಾಕ್ಷಿ ಸುದ್ದಿ,ಕೊಪ್ಪಳ

ವಿದ್ಯಾರ್ಥಿಗಳ ಶಿಕ್ಷಣದ ಅನುಕೂಲಕ್ಕೆ ಸರಕಾರ ಟ್ಯಾಬ್‌ಗಳನ್ನು ವಿತರಿಸುತ್ತಿದೆ. ವಿದ್ಯಾರ್ಥಿಗಳು ತಂತ್ರಜ್ಞಾನದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಹಿಟ್ನಾಳ ಮತ್ತು ಬಂಡಿಹರ್ಲಾಪುರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಸಿದ್ದರಾಮಯ್ಯನವರ ಸರಕಾರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿತ್ತು. ಈಗ ಟ್ಯಾಬ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಆನಲೈನ್ ತರಗತಿಗಳಿಗೆ ಮತ್ತು ಶಿಕ್ಷಣಕ್ಕೆ ಇದು ಸಹಕಾರಿ. ಎಲ್ಲರೂ ಇದರ ಸದುಪಯೋಗ ಮಾಡಿಕೊಳ್ಳಬೇಕು. ಅಪಾಯಕಾರಿ ಕೊರೊನಾವನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವ ಮೂಲಕ ಎದುರಿಸಬೇಕು. ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಉಪಾದ್ಯಕ್ಷೆ ಜರೀನಾಬೇಗಂ, ತಾಲೂಕ ಪಂಚಾಯತ್ ಅದ್ಯಕ್ಷ ಬಾಲಚಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಾರಕಿಹೊಳಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿ ಸರಿ ಹೊಂದಲ್ಲ: ಬಯ್ಯಾಪುರ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಶಾಸಕ ರಮೇಶ್ ಜಾರಕಿಹೊಳಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿ ಸರಿ ಹೊಂದಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ
ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಇಲ್ಲವೇ ಜೆಡಿಎಸ್ ಪಕ್ಷ ಸೇರಬಹುದು ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ಕೊಪ್ಪಳದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದವರು. ಅವರಿಗೆ ಬಿಜೆಪಿ ಗರ್ಭಗುಡಿ ಸಂಸ್ಕೃತಿ ಒಗ್ಗಲ್ಲ ಅಂತಾ ಅನಸಿದೆ. ಯಾಕಂದ್ರೆ ಅವರು ಹಾಗೂ ಸ್ನೇಹಿತರು ಬಾಂಬೆಗೆ ಹೋಗಿದ್ರು.
ಮುಂದಿನ ದಿನದಲ್ಲಿ ಅವರು ಬೇರೆ ಪಕ್ಷಕ್ಕೆ ಹೋದ್ರೂ ಅಚ್ಚರಿ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

ಕಾಂಗ್ರೆಸ್‌ಗೆ ಬರ್ತೀನಿ ಎಂದರೆ ಪರಿಶೀಲನೆ ಮಾಡಲಾಗವುದು. ರಾಜಕಾರಣ ಅಂದರೆ ನಿಂತ ನೀರಲ್ಲ. ಸಮಯ ಬಂದ ಹಾಗೆ ಬದಲಾಗೋದು ಸಹಜ. ಆದ್ರೆ ಇದು ಇತ್ತೀಚಿನ ದಿನಗಳಲ್ಲಿ ಬೇಸರ ತರಿಸಿದೆ ಎಂದರು.

ಇವತ್ತು ಯಾರು ಯಾವ ಪಕ್ಷದಲ್ಲಿ ಇರ್ತಾರೆ ಅನ್ನೋದ ಗಂಭೀರವಾದ ವಿಷಯ ಅಲ್ಲ. ಜಾರಕಿಹೊಳಿನೇ ಯಡಿಯೂರಪ್ಪ ಅವರನ್ನ ಸಿಎಂ ಮಾಡಿದ್ದು. ಅವರು ಯಡಿಯೂರಪ್ಪರನ್ನ ತಗೀತಾರೆ ಅಂತ ನನಗೆ ಅನಿಸಲ್ಲ. ಬಿಜೆಪಿ‌ ಸರ್ಕಾರ ಕರ್ನಾಟಕದದಲ್ಲಿ ಉಳಿಯಬೇಕಾದ್ರೆ ಯಡಿಯೂರಪ್ಪ ಕಾರಣ.
ಕರ್ನಾಟಕದಲ್ಲಿ‌ ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿನೂ ಇಲ್ಲ ಅಂತಾನೇ ಅರ್ಥ ಎಂದು ಬಯ್ಯಾಪುರ ಪುನರುಚ್ಛರಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎಂಬ ಬಗ್ಗೆ ವಾರ್ ನಡೆದಿಲ್ಲ. ನಮ್ಮಲ್ಲಿ‌ 8 ರಿಂದ 10 ಜನ ಸಿಎಂ ಆಗೋ ಯೋಗ್ಯತೆ ಇರೋರು ಇದಾರೆ. ಅಭಿಮಾನಿಗಳು ಅವರ ಹೆಸರು ಹೇಳ್ತಾರೆ. ಅದೇನು ಅಪರಾಧ ಅಲ್ಲ. ಅದೇನೇ ಇರಲಿ, ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ನದ್ದೇ ಅಂತಿಮ ನಿರ್ಧಾರ. ಚುನಾವಣೆ ಇನ್ನೂ ದೂರ ಇದೆ. ನಾವು ಈಗಲೇ ಬಿಜೆಪಿಗೆ ಅಹಾರ ಆಗೋದು ಬೇಡಾ ಎಂದು ಅಮರೇಗೌಡ ತಿಳಿಸಿದರು.

ಕಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಇಂಜಿನ್ ಆಯತಪ್ಪಿ ಚಾಲಕ ಸಾವು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ಕಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಇಂಜಿನ್ ಆಯತಪ್ಪಿ ಟ್ರಾಲಿಗೆ ಟಿಕ್ಕಿ ಆದ ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ ಕೃಷಿ ಭೂಮಿಯಲ್ಲಿ ಸಿಲುಕಿ ಒದ್ದಾಡಿದ ಸಚಿವರು!

ಗಂಗಾವತಿಯ ಉಪ್ಪಿನಮಾಳಿ ಕ್ಯಾಂಪಿನ ನಿವಾಸಿಯಾದ ಬಸಪ್ಪ ಮೃತ ದುರ್ದೈವಿಯಾಗಿದ್ದು, ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃಷಿ ಭೂಮಿಯಲ್ಲಿ ಸಿಲುಕಿ ಒದ್ದಾಡಿದ ಸಚಿವರು!

ವಿಜಯಸಾಕ್ಷಿ ಸುದ್ದಿ, ಉಡುಪಿ

ಕೃಷಿ ಭೂಮಿಯಲ್ಲಿ ಕಾರು ಸಿಲುಕಿದ ಪರಿಣಾಮ ಕೃಷಿ ಸಚಿವರು ಒದ್ದಾಡಿದ ಘಟನೆ ಜಿಲ್ಲೆಯ ಕಡೆಕಾರ್ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಹಡಿಲು ಭೂಮಿ ಕೃಷಿ ಆಂದೋಲನಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್ ರು ಕೃಷಿ ಭೂಮಿಯ ಸಮೀಪದಲ್ಲಿ ಕಾರು ತೆಗೆದುಕೊಂಡು ಹೋಗಿದ್ದರು.

ಮಳೆ ಹಿನ್ನಲೆಯಲ್ಲಿ ಸಂಪೂರ್ಣ ತೇವವಾಗಿದ್ದ ಜಾಗದಲ್ಲಿ ಕಾರಿನ ಟೈರ್ ಸಿಲುಕಿದ್ದರ ಪರಿಣಾಮ ಕಾರು ಅಲ್ಲಿಯೇ ಸಿಲುಕಿತ್ತು. ಹೀಗಾಗಿ ಅಲ್ಲಿ ನೆರೆದಿದ್ದ ಜನರು ಕೃಷಿ ಸಚಿವರು ಕಾರು ದೂಡಿ ರಸ್ತೆಗೆ ತಂದು ನಿಲ್ಲಿಸಿದ್ದರು. ಉಡುಪಿ ಕಡೆಕಾರು ಬಳಿ ಕೃಷಿ ನಾಟಿಗೆ ಕೃಷಿ ಸಚಿವರು ಚಾಲನೆ ನೀಡಿದ್ದಾರೆ. ಕೇದಾರೋತ್ಥಾನ ಟ್ರಸ್ಟ್ ಮೂಲಕ ಈ ಕೃಷಿ ಆಂದೋಲನ ಆರಂಭಿಸಲಾಗಿತ್ತು.

10 ದಿನಗಳಲ್ಲಿ ನನ್ನ ರಾಜಕೀಯ ಜೀವನ ಘೋಷಣೆ; ರಮೇಶ್ ಜಾರಕಿಹೊಳಿ!

ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ

ಮುಂದಿನ 10 ದಿನಗಳಲ್ಲಿಯೇ ನನ್ನ ರಾಜಕೀಯ ಜೀವನದ ನಿರ್ಣಯ ತಿಳಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದ ಕುರಿತು ಹಿರಿಯರು ಖಾರವಾಗಿ ಹೇಳಿದ್ದಾರೆ. ಹೀಗಾಗಿ ನಾನು ಸದ್ಯ ಯಾವುದೇ ಹೇಳಿಕೆ ನೀಡುವದಿಲ್ಲ. ನನ್ನ ಹೇಳಿಕೆಯ ಹಿಂದೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಸುತ್ತೂರು ಶ್ರೀಗಳ ತಾಯಿ ಸಾವನ್ನಪ್ಪಿದ ಕಾರಣ ಸಾಂತ್ವನ ಹೇಳಲು ಸುತ್ತೂರು ಮಠಕ್ಕೆ ಹೋಗಿದ್ದೆ. ಯಾವುದೇ ರಾಜಕೀಯ ವಿಷಯದ ಕುರಿತು ನಾನು ಹೋಗಿರಲಿಲ್ಲ. ಕೋವಿಡ್ ನಿಂದ ಮೃತಪಟ್ಟ ಆಪ್ತರ ಮನೆಗೆ ಇಂದು ಭೇಟಿ ನೀಡಿದ್ದೇನೆ. ಈ ಸಂದರ್ಭದಲ್ಲಿ ಅವರ ಆಪ್ತ ಶಾಸಕ ಮಹೇಶ ಕುಮಟಳ್ಳಿ ಸೇರಿದಂತೆ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

ಮಾನವೀಯತೆಗೆ ಸಾಕ್ಷಿಯಾದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ!

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ

ಅಪಘಾತವಾಗಿ ರಸ್ತೆಯಲ್ಲಿ ನರಳುತ್ತಿದ್ದ ಅಪರಿಚಿತರನ್ನು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ. ತಾಲೂಕಿನ ಸಿರಿಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಬೈಕಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಾಳಾಗಿ ರಸ್ತೆ ಮಧ್ಯೆ ನರಳಾಡುತ್ತಿದ್ದರು. ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಹೊರಟ್ಟಿ, ರಸ್ತೆಯಲ್ಲಿ ನಡೆದ ಅಪಘಾತ ಗಮನಿಸಿ, ತಕ್ಷಣವೇ ಕಾರು ನಿಲ್ಲಿಸಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳ ಬಳಿಗೆ ಧಾವಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಹಾಗೂ ಪುತ್ರನಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಕೆಲವು ಕಾಲ ಸ್ಥಳದಲ್ಲಿಯೇ ಇದ್ದು, ಗಾಯಾಳುಗಳಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಕುರಿತು ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಿಂದಾಗಿ ಟಾಲಿವುಡ್ ನಟ ಆಸ್ಪತ್ರೆಗೆ ದಾಖಲು!

ವಿಜಯಸಾಕ್ಷಿ ಸುದ್ದಿ, ಹೈದರಾಬಾದ್

ಇತ್ತೀಚೆಗಷ್ಟೇ ನಟ ಸಂಚಾರಿ ವಿಜಯ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲಿಯೇ ಟಾಲಿವುಡ್ ನ ಮತ್ತೊಬ್ಬ ನಟ ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಟ ಕತ್ತಿ ಮಹೇಶ್ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಚಿತ್ತೂರಿನಿಂದ ಹೈದರಾಬಾದ್ ಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಇನ್ನೊವಾ ಕಾರು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಟನಾಗಿ ಮಾತ್ರವಲ್ಲದೆ, ವಿಮರ್ಶಕನಾಗಿ ಹಾಗೂ ಬಿಗ್ ಬಾಸ್ ತೆಲುಗು ಸೀಸನ್ -1ರ ಸ್ಪರ್ಧಿಯಾಗಿಯೂ ಭಾಗವಹಿಸಿದ್ದರು. ನೆಲ್ಲೂರಿನ ಹೊರ ವಲಯದ ಚಂದ್ರಶೇಖರಪುರಂ ಬಳಿ ಮಹೇಶ್ ಚಲಿಸುತ್ತಿದ್ದ ಕಾರು ಶುಕ್ರವಾರ (ಏ.25)ರಂದು ಅಪಘಾತವಾಗಿದೆ.

ಸರಿಯಾದ ಸಮಯಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅವರಿಗೆ ಮಾರಣಾಂತಿಕ ಗಾಯಗಳಾಗುವುದು ತಪ್ಪಿದೆ ಎನ್ನಲಾಗಿದೆ. ಆದರೂ ಅವರಿಗೆ ಸದ್ಯಕ್ಕೆ ಪ್ರಜ್ಞೆ ಬಂದಿಲ್ಲ ಎಂದು ವರದಿ ತಿಳಿದು ಬಂದಿದೆ.
ಕಾರು ಜಖಂ ಆಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಕಿರುಚಿತ್ರಗಳ ಮೂಲಕ ಮಹೇಶ್ ವೃತ್ತಿ ಜೀವನ ಆರಂಭಿಸಿದ್ದರು. ನೇನೆ ರಾಜು ನೇನೆ ಮಂತ್ರಿ, ಕ್ರ್ಯಾಕ್, ಅಮ್ಮ ರಾಜ್ಯಂ ಲೋ ಕಡಪ ಬಿದ್ದಲು ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಎಸ್ಪಿ ಯತೀಶ್ ನೇತೃತ್ವ; 7 ಲಕ್ಷ ರೂ. ಮೌಲ್ಯದ ಗಾಂಜಾ ನಾಶ!

ವಿಜಯಸಾಕ್ಷಿ ಸುದ್ದಿ, ಗದಗ

ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸುಮಾರು 48 ಕೆ.ಜಿ ಗಾಂಜಾ ನಾಶಮಾಡಲಾಗಿದೆ.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಜಪ್ತಿ ಮಾಡಲಾಗಿದ್ದ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಹಾಗೂ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಬೆಟಗೇರಿ ನರಸಾಪುರ ಕೈಗಾರಿಕಾ ಪ್ರದೇಶದ ಗದಗ ಎನ್ವಿರೋಟೆಕ್ ಪ್ರೈವೇಟ್ ಲಿ. ಕೈಗಾರಿಕೆಯಲ್ಲಿ ಸುಮಾರು 48 ಕೆ.ಜಿ ಅಂದರೆ ಅಂದಾಜು ರೂ. 7.18 ಲಕ್ಷ ಮೌಲ್ಯದ ಗಾಂಜಾ ನಾಶ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಯತೀಶ್ ಎನ್, ನರಗುಂದ ಡಿವೈಎಸ್ ಪಿ ಶಂಕರ ರಾಗಿ, ಗದಗ ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟರ್, ಪರಿಸರ ಮಾಲಿನ್ಯ ಮಂಡಳಿ ಅಧಿಕಾರಿ ಶಶಿಧರ ಕೋಡಿಹಳ್ಳಿ , ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರು ಇದ್ದರು. ಇವರೆಲ್ಲರ ಸಮ್ಮುಖದಲ್ಲಿಯೇ ಗಾಂಜಾ ನಾಶಪಡಿಸಲಾಯಿತು.

error: Content is protected !!