ತಾಲೂಕಿನ ಸಾಣಾಪುರ ಎಡದಂಡೆ ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಹೈದರಾಬಾದ್ ಮೂಲದ ಇಬ್ಬರು ಐಟಿ ಬಿಟಿ ಉದ್ಯೋಗಿಗಳು ನಾಪತ್ತೆಯಾಗಿರುವ ಘಟನೆ ಸೋಮವಾರ ಬೆಳಗಿನ ಜಾವ ಜರುಗಿದೆ.
ಹೈದರಾಬಾದ್ ಮೂಲದ ಕೆ.ಆರ್.ಪುರಂ ನಿವಾಸಿಗಳಾದ ಮಧುಕಿರಣ್ (25) ಹಾಗೂ ರಾಜೇಶ್ ಕುಮಾರ್ (26) ಸಂಗಾಪುರ ಹತ್ತಿರವಿರುವ ಮೇಘರಾಜ್ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು. ಸೋಮವಾರ ಬೆಳಿಗ್ಗೆ ಸಾಣಾಪುರ ಕೆರೆಯಲ್ಲಿ ಈಜಾಡಲು ತೆರಳಿದ್ದ ಸಂದರ್ಭದಲ್ಲಿ ಕಲ್ಲಿನ ಮೇಲಿಂದ ಜಂಪಿಂಗ್ ಮಾಡುವ ಸಂದರ್ಭದಲ್ಲಿ ಇಬ್ಬರೂ ನೀರಿನಲ್ಲಿ ನಾಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸ್, ಗೃಹರಕ್ಷಕ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮತ್ತೆ ಕರೆದು ತೊಡಗಿದ್ದಾರೆ. ರಾಜೇಶ್ ಕುಮಾರ್ ಮೃತದೇಹ ಪತ್ತೆಯಾಗಿದ್ದು ಇನ್ನೂ ಮಧುಕಿರಣ್ ಪತ್ತೆಯಾಗಿಲ್ಲ .
ವಿಜಯಸಾಕ್ಷಿ ಸುದ್ದಿ, ಗಂಗಾವತಿ: ತಾಲೂಕಿನ ಸಾಣಾಪುರ ಎಡದಂಡೆ ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಹೈದರಾಬಾದ್ ಮೂಲದ ಇಬ್ಬರು ಐಟಿ ಬಿಟಿ ಉದ್ಯೋಗಿಗಳು ನಾಪತ್ತೆಯಾಗಿರುವ ಘಟನೆ ಸೋಮವಾರ ಬೆಳಗಿನ ಜಾವ ಜರುಗಿದೆ.
ಹೈದರಾಬಾದ್ ಮೂಲದ ಕೆ.ಆರ್.ಪುರಂ ನಿವಾಸಿಗಳಾದ ಮಧುಕಿರಣ್ (25) ಹಾಗೂ ರಾಜೇಶ್ ಕುಮಾರ್ (26) ಸಂಗಾಪುರ ಹತ್ತಿರವಿರುವ ಮೇಘರಾಜ್ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು. ಸೋಮವಾರ ಬೆಳಿಗ್ಗೆ ಸಾಣಾಪುರ ಕೆರೆಯಲ್ಲಿ ಈಜಾಡಲು ತೆರಳಿದ್ದ ಸಂದರ್ಭದಲ್ಲಿ ಕಲ್ಲಿನ ಮೇಲಿಂದ ಜಂಪಿಂಗ್ ಮಾಡುವ ಸಂದರ್ಭದಲ್ಲಿ ಇಬ್ಬರೂ ನೀರಿನಲ್ಲಿ ನಾಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸ್, ಗೃಹರಕ್ಷಕ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮತ್ತೆ ಕರೆದು ತೊಡಗಿದ್ದಾರೆ. ರಾಜೇಶ್ ಕುಮಾರ್ ಮೃತದೇಹ ಪತ್ತೆಯಾಗಿದ್ದು ಇನ್ನೂ ಮಧುಕಿರಣ್ ಪತ್ತೆಯಾಗಿಲ್ಲ .
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ವಿಜಯಸಾಕ್ಷಿ ಸುದ್ದಿ, ಹಾವೇರಿ
ಮೈಸೂರನಲ್ಲಿ ಏನೂ ಮಾಡಲು ಸಾಧ್ಯವಾಗದವರು ಹಾನಗಲ್ ಗೆ ಬಂದು ಎನು ಮಾಡ್ತೀರಾ. ಮೈಸೂರು ಜನರೇ ನಿಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ಹಾನಗಲ್ ಜನ ಯಾಕೆ ವಿಶ್ವಾಸ ಇಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದರು.
ಹಾನಗಲ್ ನಲ್ಲಿ ಉಪಚುನಾವಣೆಯ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಣ್ಣ ಮಾತು ಎತ್ತಿದ್ರೆ ಮೋದಿಯ ಬಗ್ಗೆ ಮಾತಾಡ್ತಾರೆ. ಮೋದಿಯ ವಿರುದ್ಧ ಮಾತನಾಡಿದ್ರೆ ದೊಡ್ಡ ವ್ಯಕ್ತಿ ಆಗುತ್ತೆನೆಂದುಕೊಂಡಿದ್ದಾರೆ. ಅಚ್ಚೇ ದಿನ್ ಎಲ್ಲಿದೆ ಎಂದು ಪದೇ ಪದೆ ಪ್ರಶ್ನೆ ಮಾಡುತ್ತಾರೆ. ಅಚ್ಚೇ ದಿನ್ ದೇಶದ ಜನರಿಗೆ ಬರುತ್ತಿದೆ. ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಇರುವವರೆಗೂ ಅಚ್ಚೇ ದಿನ್ ಬರಲ್ಲ. ಅವರಿಗೆ ಅಚ್ಚೇ ದಿನ್ ಬರಲು ಡಿಕೆಶಿ ಬಿಡಲ್ಲ ಎಂದು ಕುಟುಕಿದರು.
ಕಾಂಗ್ರೆಸ್ ನಲ್ಲಿ ಪಿಸು ಮಾತು ಶುರುವಾಗಿದೆ. ಸಿದ್ದರಾಮಯ್ಯ ದೆಹಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು, ರಾಜ್ಯದಲ್ಲಿ ಗದ್ದುಗೆ ಗಟ್ಟಿ ಮಾಡಿಕೊಳ್ಳಲು ಸಿದ್ದರಾಮಯ್ಯ ತಮ್ಮ ಶಿಷ್ಯರ ಮೂಲಕ ಪಿಸುಮಾತು ಆಡಿಸುತ್ತಿದ್ದಾರೆ. ಕಾಂಗ್ರೆಸ್ ಮುಗಿಸಲು ಕಾಂಗ್ರೆಸ್ ನಾಯಕರೇ ಸಾಕು ಎಂದರು.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಗಂಗೋತ್ರಿ. ಎಲ್ಲರ ಮೇಲೆ ಆರೋಪ ಇದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿದ ಅವರು, ನಾವು ಜನರ ಜೊತೆ ಇರುವವರು. ಭೂಮಿಯಲ್ಲಿ ಆಳವಾಗಿ ಬೇರೂರಿರುವವರು. ನಿಮ್ಮ ಹಾಗೆ ಕುಂಡಲಿಯಲ್ಲಿ ಇರುವ ಗಿಡಗಳಲ್ಲ. ಅಧಿಕಾರ ಶಾಶ್ವತ ಅಲ್ಲ. ವಿಶ್ವಾಸ ಶಾಶ್ವತ. ನಾನು ನಿಮ್ಮ ಪ್ರೀತಿ ವಿಶ್ವಾಸ ಗಳಿಸಲು ಬಂದಿದ್ದೇನೆ ಎಂದು ಹೇಳಿದರು.
ಹಿರೇಕೌಂಸಿ, ಬಾಳಬೀಡ ನೀರಾವರಿ ಯೋಜನೆ ಮಾಡಿದ್ದು ಬಿಜೆಪಿ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿದ್ದ ವೇಳೆ ಇವರು ಮಾಡಿದ್ದಾದರೂ ಏನು. ಕೆರೆ ತುಂಬಿಸುವ ಯೋಜನೆ ಬಗ್ಗೆ ಸಿದ್ದರಾಮಯ್ಯ ನವರಿಗೆ ದಾಖಲೆ ಕಳುಹಿಸಿಕೊಡುವೆ. ಬಾರಪ್ಪ ಬಾ ಸಿದ್ದರಾಮಣ್ಣ, ಬೊಮ್ಮಾಯಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ನೋಡು ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಕೋವಿಡ್ ಸಂದರ್ಭದಲ್ಲಿ ಜನರ ಜೀವ ಉಳಿಸಿದ್ದು ಬಿಜೆಪಿ ಸರ್ಕಾರ. ಈ ಕ್ಷೇತ್ರದ 20 ಸಾವಿರ ಜನರಿಗೆ ಕಾರ್ಮಿಕ ಇಲಾಖೆ ಆಹಾರ ಕಿಟ್ ನೀಡಿದ್ದೇವೆ. ಕೋವಿಡ್ ವೇಳೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನಿಜವಾದ ಸೇವೆ ಮಾಡಿದೆ. ಸೇವೆ ಮಾಡಿದ್ದೇವೆ ಎಂದು ಕಾಂಗ್ರೆಸ್ ನವರು ಜನರ ಬಳಿ ಮತ ಕೇಳುತ್ತಿದ್ದಾರೆ. ಇವರು ಯಾವ ಸೇವೆ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಕೇವಲ ಇಂಜಿನಿಯರ್, ಡಾಕ್ಟರ್, ಲಾಯರ್ ಮಾತ್ರ ಕೋಟಿ ಲೆಕ್ಕದಲ್ಲಿ ಮಾತಾಡುವುದಲ್ಲ, ಒಬ್ಬ ರೈತ ಕೂಡ ಕೋಟಿ ಲೆಕ್ಕದಲ್ಲಿ ಮಾತಾಡಬೇಕು. ಜಗತ್ತಿನಲ್ಲಿ ಎಲ್ಲ ಇಲ್ಲದಿದ್ದರೂ ಜಗತ್ತು ನಡೆಯುತ್ತದೆ. ಆದರೆ ರೈತ ಇಲ್ಲದಿದ್ದರೆ ಜಗತ್ತೇ ನಿಂತು ಹೋಗುತ್ತದೆ. ರೈತ ದೇಶದ ಬೆನ್ನೆಲುಬು ಅಲ್ಲ ಜಗತ್ತಿನ ಬೆನ್ನೆಲುಬು ಎಂದು ಕೃಷಿ ಸಾಧಕಿ ಕವಿತಾ ಉಮಾಶಂಕರ ಮಿಶ್ರಾ ಹೇಳಿದರು.
ನರಗುಂದ ತಾಲ್ಲೂಕಿನ ಶಿರೋಳ ಗ್ರಾಮದ ಶ್ರೀ ಯಚ್ಚರಸ್ವಾಮಿಗಳು ಗವಿಮಠದ ಅಜ್ಜನ ಜಾತ್ರೆ ಅಂಗವಾಗಿ ರೈತ ಮತ್ತು ಸೈನಿಕ ಹಿತಚಿಂತನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಹೆಣ್ಣು ಸೃಷ್ಟಿಯ ಸಂಕೇತ. ನಿಮ್ಮಿಂದ ಅಸಾಧ್ಯವಾದುದು ಯಾವುದೂ ಇಲ್ಲ. ನೀವು ಎಲ್ಲವನ್ನೂ ಸಾಧಿಸಬಲ್ಲಿರಿ ಎಂದು ಮಹಿಳೆರಿಗೆ ಸ್ಫೂರ್ತಿ ತುಂಬಿದರು.
ಸಾವಯವ ಗೊಬ್ಬರ ಬಳಸಿ ಬೆಳೆ ಬೆಳೆಯುವ 100ಕ್ಕೂ ಹೆಚ್ಚು ರೈತರು ಮತ್ತು ಗಡಿಯಲ್ಲಿ ಸೇವೆ ಸಲ್ಲಿಸಿದ 100 ಕ್ಕೂ ಹೆಚ್ಚು ಸೈನಿಕರಿಗೆ ಪಾದಪೂಜೆ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಭಿನವ ಯಚ್ಚರಸ್ವಾಮಿಗಳು, ಕಿತ್ತಲಿಯ ಮಂಜುನಾಥ ಸ್ವಾಮಿಗಳು, ಯರಗಟ್ಟಿ ಶ್ರೀ ಗಣಪತಿ ಮಹಾರಾಜರು ಹಾಗೂ ಸೈನಿಕರ ಸಂಘದ ರಾಜ್ಯಾಧ್ಯಕ್ಷ, ಜಾತ್ರಾ ಕಮಿಟಿ ಗೌರವಾಧ್ಯಕ್ಷ ಗುರುಬಸಯ್ಯ ನಾಗಲೋಟಿಮಠ, ಅಧ್ಯಕ್ಷ ಲಾಲಸಾಬ ಅರಗಂಜಿ, ಉಪಾಧ್ಯಕ್ಷ ಶಿವಾನಂದ ಯಲಿಬಳ್ಳಿ, ಕಾರ್ಯದರ್ಶಿ ಪ್ರವೀಣ ವೀ ಸಂಗಳದ ಶೆಟ್ಟರ್, ಸಹ ಕಾರ್ಯದರ್ಶಿ ಬಾಲಪ್ಪ ಮೂಲಿಮನಿ ಉಪಸ್ಥಿತರಿದ್ದರು.
ನಿರ್ಮಾಪಕ ಎಂ.ಬಿ. ಬಾಬು ವಿರುದ್ಧ ಚಿತ್ರ ವಿತರಕ ಕೇಸ್ ದಾಖಲು
ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ
ನಟ ಸುದೀಪ್ ನಟನೆಯ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ರಿಲೀಜ್ ವಿವಾದ ತಾರಕಕ್ಕೇರಿದ್ದು, ರಾಂ ಬಾಬು ಪ್ರೊಡಕ್ಷನ್ಸ್ ನಿರ್ಮಾಪಕ ಎಂ.ಬಿ. ಬಾಬು ವಿರುದ್ಧ ವಿತರಕ ಖಾಝಾಪೀರ್ ಚಿತ್ರದುರ್ಗದಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಗ್ರಿಮೆಂಟ್ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
2.90 ಲಕ್ಷ ಹಣಕ್ಕೆ ಚಿತ್ರ ನಿರ್ಮಾಪಕರು ಮತ್ತು ವಿತರಕರ ನಡುವೆ ಅಗ್ರಿಮೆಂಟ್ ಆಗಿತ್ತು. ಅಗ್ರಿಮೆಂಟ್ ಬಳಿಕ ರಾಂ ಬಾಬು ಪ್ರೋಡಕ್ಷನ್ಸ್ ಗೆ 60 ಲಕ್ಷ ಹಣ ನೀಡಿದ್ದೆ. ಮಾ.31 ಕ್ಕೆ ಕಾಳಿಂಗ ಹ್ಯಾಡ್ಸ್ ಮೂಲಕ 45 ಲಕ್ಷ RTGS, 5 ಲಕ್ಷ ಕ್ಯಾಶ್, ಬಳಿಕ ಸೆ. 23ಕ್ಕೆ 1 ಲಕ್ಷ, 27 ಕ್ಕೆ 4 ಲಕ್ಷ, ಅಕ್ಟೋಬರ್ 27 ಕ್ಕೆ 5 ಲಕ್ಷ ಸೇರಿ ಒಟ್ಟು 60 ಲಕ್ಷ ರಾಂಬಾಬು ಫಿಲಂಸ್ ಗೆ ಹಣ ನೀಡಿದ್ದೆ.
ಈಗ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆ ಪೊಲೀಸರು 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿಹೊತ್ತಿಕೊಂಡು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮವ್ವ ಶೇಖಪ್ಪ ಲಮಾಣಿ ಎಂಬುವವರ ಮನೆಯ ಸಿಲಿಂಡರ್ ಸೋರಿಕೆಯಾಗಿ ಬೆಂಕಿಹೊತ್ತಿಕೊಂಡಿದ್ದು, ಅಡುಗೆ ಮಾಡುತ್ತಿದ್ದ ಸೋಮವ್ವಳ ಹಾಗೂ ಮಗುವಿಗೆ ಸುಟ್ಟ ಗಾಯಗಳಾಗಿವೆ. ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸಿದ್ದಾರೆ.
ಬೆಂಕಿಯಿಂದಾಗಿ ಸಿಲಿಂಡರ್ ಸ್ಪೋಟಗೊಳ್ಳುವ ಆತಂಕ ಇತ್ತು. ಆದರೆ, ಅದೃಷ್ಟವಶಾತ್ ಅವಘಡ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಿಲ್ಲಾ ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಗದಗ, ತಾಲ್ಲೂಕು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ನರಗುಂದ ಮತ್ತು ಗ್ರಾಮ ಪಂಚಾಯತಿ ಚಿಕ್ಕನರಗುಂದ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ನರಗುಂದ ನ್ಯಾಯಾಲಯದ ನ್ಯಾಯಾಧೀಶೆ ಸಲ್ಮಾ ಎಸ್. ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಇದೆ. ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೆ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜ್ಞಾನ ಪಡೆಯಬೇಕು. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮದ ಮೂಲಕ ಆರ್ಥಿಕವಾಗಿ ತೊಂದರೆಗೊಳಗಾದವರಿಗೆ ಉಚಿತ ಕಾನೂನು ನೆರವು ನೀಡಲಾಗುವುದು ಎಂದು ಹೇಳಿದರು.
ಮಹಿಳೆಯರಿಗೆ ಆಸ್ತಿಯಲ್ಲಿ ಪಾಲು, ಬಾಲ್ಯ ವಿವಾಹ ನಿಷೇಧ ಹಾಗೂ ಬಾಲ ಕಾರ್ಮಿಕರಿಗೆ ಸಂಬಂಧಿಸಿದ ಕಾಯ್ದೆಯ ಬಗ್ಗೆ ಜನನ ಮತ್ತು ಮರಣ ನೋಂದಣಿ ಕಾಯ್ದೆಯ ಕುರಿತು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಮಾತನಾಡಿ, ಜನಸಾಮಾನ್ಯರಿಗೆ ಕಾನೂನು ಅರಿವು, ನೆರವು ಮತ್ತು ಪಂಚಾಯಿತಿಯಲ್ಲಿ ಸಿಗುವ ಕಾನೂನಾತ್ಮಕ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ನ್ಯಾಯವಾದಿಗಳಾದ ಎಂ.ಬಿ. ಕುಲಕರ್ಣಿ, ಮೋಟಾರು ವಾಹನ ಕಾಯ್ದೆ ಹಾಗೂ ಬಾಲ ಕಾರ್ಮಿಕರ ನಿಷೇಧ ಕಾಯ್ದೆ ಕುರಿತು, ಕೆ.ಎಸ್. ಹೂಲಿ, ಉಚಿತ ಕಾನೂನು ನೆರವು ಅರಿವು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ, ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು, ಆರ್. ಆರ್. ನಾಯ್ಕರ್, ದಿನನಿತ್ಯದ ಕಾನೂನುಗಳು ಹಾಗೂ ಜೀವನಾಂಶದ ಕಾನೂನು ಕುರಿತು, ಪ್ರಭಾರಿ ಪಿಎಸ್ಐ ಪವಾರ, ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸುವ ಹಾಗೂ ಸ್ವಿಕರಿಸುವ ಬಗ್ಗೆ ಮೋಟಾರು ವಾಹನ ಕಾಯ್ದೆ ಕುರಿತು ಮಾಹಿತಿ ನೀಡಿದರು.
ಡಿಕೆಶಿ ವಿರುದ್ಧದ ಆರೋಪ ಸಿದ್ದರಾಮಯ್ಯ ಅವರ ವ್ಯವಸ್ಥಿತವಾದ ಷಡ್ಯಂತ್ರ್ಯ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿಯವರಿಂದ ಬಿಜೆಪಿ ಬಗ್ಗೆ ಮತ್ತಷ್ಟು ಒಳ್ಳೆಯ ಹೆಸರು ಬಂದಿದೆ. ಎರಡೂ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಇದಕ್ಕೆ ವಿರೋಧ ಪಕ್ಷದವರೇ ಅನುಕೂಲ ಮಾಡಿಕೊಟ್ಟಿದ್ದಾರೆ. ಮಾಧ್ಯಮದವರ ಮುಂದೆಯೇ ಸಲೀಂ- ಉಗ್ರಪ್ಪ ಮಾತಾಡಿದ್ದಾರೆ. ಡಿಕೆಶಿಯವರನ್ನು ವ್ಯವಸ್ಥಿತವಾಗಿ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ್ಯ ಎಂದು ದೂರಿದರು.
ಸಲೀಂ ಅವರು ಈಗಿರುವ ಸ್ಥಾನಕ್ಕೆ ಕಾರಣ ಡಿಕೆಶಿ. ಉಗ್ರಪ್ಪ ಸಂಸದರಾಗಲು ಅವರ ಪಾತ್ರ ಮಹತ್ವದ್ದು, ಆದರೆ, ಇಷ್ಟೆಲ್ಲ ಇದ್ದರೂ ಡಿಕೆಶಿಯವರನ್ನು ಟಾರ್ಗೆಟ್ ಮಾಡಲಾಗಿದೆ. ಇದಕ್ಕೆ ಸಿದ್ದರಾಮಯ್ಯ ನೇರ ಕಾರಣ ಎಂದರು.
ಹೀಗಾಗಿಯೇ ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಬನ್ನಿ ಎಂದು ಹೈಕಮಾಂಡ್ ಹೇಳಿದೆ. ಇದರಿಂದ ಎಲ್ಲಿ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕೆಂದು ಈ ರೀತಿ ಡಿಕೆಶಿ ಮೇಲೆ ಸಿದ್ದರಾಮಯ್ಯ ಷಡ್ಯಂತ್ರ್ಯ ಮಾಡಿದ್ದಾರೆ. ಇದು ಸಂಪೂರ್ಣ ಸಿದ್ದರಾಮಯ್ಯ ಅವರಿಂದಲೇ ನಡೆದಿರುವ ಷಡ್ಯಂತ್ರ್ಯ ಎಂದು ಪ್ರತಾಪ್ ಸಿಂಹ ಆರೋಪಿಸಿದರು.
ಸಿದ್ದರಾಮಯ್ಯ ಎಲಿಮೆನೆಟರಿ ಆಗಿ ಕೆಲಸ ಮಾಡುತ್ತಿದ್ದಾರೆ. ದೆಹಲಿಗೆ ಬನ್ನಿ ಎಂದಾಗ ಸಿದ್ದರಾಮಯ್ಯ ವಿಚಲಿತರಾಗಿ ಹೀಗೆ ಮಾಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗುತ್ತದೆ. ಅನಾಯಾಸವಾಗಿ ಇದರ ಲಾಭ ಬಿಜೆಪಿಗೆ ಬರಲಿದೆ ಎಂದು ಹೇಳಿದರು.
ಮನಗೂಳಿ ಅವರು ಇಂದು ನಮ್ಮ ಮಧ್ಯೆ ಇಲ್ಲ, ಅವರ ಮಗ ಇದ್ದಾರೆ. ನಮ್ಮ ಮಗನ ಜವಾಬ್ದಾರಿ ನಿಮ್ಮದು. ನಿಮ್ಮ ಮಡಿಲಿಗೆ ನನ್ನ ಮಗನನ್ನು ಹಾಕಿದ್ದೇನೆ ಎಂದು ಸಾಯುವ ಮುನ್ನ ಸ್ವತಃ ಮನಗೂಳಿ ಅವರೇ ಹೇಳಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮಾಜಿ ಸಚಿವ ಕುಮಾರಸ್ವಾಮಿ ಅವರು ಸಾಯುವ ಮುನ್ನ ಡಿಕೆಶಿಯನ್ನು ಭೇಟಿ ಮಾಡಿರಲಿಲ್ಲ ಎಂಬ ಹೇಳಿಕೆಗೆ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಂದಗಿ ಮತ್ತು ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ನಾವು ಜಾತಿ ಮೇಲೆ ಲೆಕ್ಕಾಚಾರ ಇಟ್ಟು ರಾಜಕೀಯ ಮಾಡಲ್ಲ, ನೀತಿ ಮೇಲೆ ರಾಜಕೀಯ ಮಾಡುತ್ತೇವೆ. ಅಲ್ಪಸಂಖ್ಯಾತರು ಪ್ರಜ್ಞಾವಂತರಿದ್ದಾರೆ. ಯಾರಿಗೆ ಮತ ಹಾಕಿದರೆ ಯೋಗ್ಯ ಎಂಬುದು ಅವರಿಗೆ ಗೊತ್ತಿದೆ ಎಂದು ಹೇಳಿದರು.
ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ, ತಿಳಿದುಕೊಂಡು ಮಾತನಾಡುವೆ ಎಂದ ಅವರು, ಸಲೀಂ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಡಿ.ಕೆ. ಶಿವಕುಮಾರ್ ನಿರಾಕರಿಸಿದರು.
ನಾಳೆಯಿಂದ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ದಿನಗಳ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಎರಡು ದಿನ ಹಾನಗಲ್, ಎರಡು ದಿನ ಸಿಂದಗಿಯಲ್ಲಿ ಪ್ರಚಾರ ಮಾಡುತ್ತೇನೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಸರಾ ಸಂದರ್ಭದಲ್ಲಿ ಟೂರಿಸಂ ಸರ್ಕ್ಯೂಟ್ ಮಾಡುತ್ತೇವೆ. ದಸರಾ ವಸ್ತು ಪ್ರದರ್ಶನವನ್ನು 365 ದಿನ ಬಳಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಎಲ್ಲರ ಜೊತೆ ಮಾತುಕತೆ ನಡೆಸುತ್ತೇನೆ. ಈ ಬಾರಿಯ ದಸರಾ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮುಂದಿನ ವರ್ಷ ಅದ್ದೂರಿಯಾಗಿ ದಸರಾ ನಡೆಸುತ್ತೇವೆ ಎಂದು ಹೇಳಿದರು.