Home Blog Page 3299

ಜಿಲ್ಲೆಗೆ ಶುಭ ಶುಕ್ರವಾರ; ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ, ಮೂವರು ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯ ಜನರಿಗೆ ಇವತ್ತು ಶುಭ ಸುದ್ದಿ. ಹೌದು ಎರಡನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಪ್ರಮಾಣದ ಸೋಂಕಿತರು ಪತ್ತೆಯಾಗಿದ್ದಾರೆ.

ಇಂದು 194 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತದ ಮಾಹಿತಿ ಪ್ರಕಾರ ಮೂವರು ಮೃತಪಟ್ಟಿದ್ದಾರೆ.

ಇಂದಿನ 194 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24509 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -102, ಮುಂಡರಗಿ-15, ನರಗುಂದ-08, ರೋಣ-19, ಶಿರಹಟ್ಟಿ-45, ಹೊರಜಿಲ್ಲೆಯ-05 ಸೇರಿದಂತೆ 194 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 265 ಕ್ಕೇರಿದೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿ ಶಿರೂರು ನಿವಾಸಿ 80 ವರ್ಷದ ವ್ಯಕ್ತಿ ಮೇ-29 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -03 ರಂದು ಮೃತಪಟ್ಟಿದ್ದಾರೆ.

ಲಕ್ಷ್ಮೇಶ್ವರ ಶಹರದ ನಿವಾಸಿ 40 ವರ್ಷದ ವ್ಯಕ್ತಿ ಮೆ-19 ರಂದು ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 31 ರಂದು ಮೃತಪಟ್ಟಿದ್ದಾರೆ.

ಗದಗ ಶಹರ ನಿವಾಸಿ 65 ವರ್ಷದ ವ್ಯಕ್ತಿ ಮೇ-19 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಜೂನ್ 01 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 326 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 22161 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 2083 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 192 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸೋಂಕಿತರು ಕೋವಿಡ್ ಕೇರ್ ಸೆಂಟರ್‌ ಗೆ ಬಾರದಿದ್ದಲ್ಲಿ ಕೇಸ್; ಡಿಸಿ ಖಡಕ್ ಸೂಚನೆ

ವಿಜಯಸಾಕ್ಷಿ ಸುದ್ದಿ ಗದಗ

ಸೋಂಕು ನಿಯಂತ್ರಣ ಕಾರ್ಯದಲ್ಲಿ ಸೋಂಕಿತ ವ್ಯಕ್ತಿಯನ್ನು ಹತ್ತಿರದ ಕೋವಿಡ್ ಕೇರ್ ಕೇಂದ್ರಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮೂಲಕ ಸೋಂಕಿತ ವ್ಯಕ್ತಿಯ ಕುಟುಂಬದವರಿಗೆ ಸೋಂಕು ತಗಲದಂತೆ ನಿಗಾ ವಹಿಸಬೇಕು. ಸೋಂಕಿತ ವ್ಯಕ್ತಿ ಕೋವಿಡ್ ಕೇಂದ್ರಕ್ಕೆ ಚಿಕಿತ್ಸೆ ಆಗಮಿಸಲು ನಿರಾಕರಿಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಶಿಸ್ತು ಕ್ರಮ ಜರುಗಿಸಬೇಕು. ಜೊತೆಗೆ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಲಭ್ಯವಾಗುತ್ತಿರುವ ಬಗ್ಗೆ ತಹಶೀಲ್ದಾರರು ನಿಯಮಿತವಾಗಿ ಭೇಟಿ ನೀಡುವ ಮೂಲಕ ಮೇಲುಸ್ತುವಾರಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು, ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾದ್ಯಂತ ವಿಧಿಸಲಾದ ಕಠಿಣ ಮಾರ್ಗಸೂಚಿಗಳ ಅನುಷ್ಟಾನದಲ್ಲಿ ಅಧಿಕಾರಿಗಳ ನಿಷ್ಕಾಳಜಿ ಸಹಿಸಲಾಗದು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿಯೋಜಿತ ಅಧಿಕಾರಿಗಳು ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಸೋಂಕು ನಿಯಂತ್ರಣ ಹಾಗೂ ಸೋಂಕಿನ ಸರಪಳಿ ತುಂಡರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಸರ್ಕಾರ ಲಸಿಕೆ ನೀಡಲು ನಿಗದಿಪಡಿಸಿದ ಆದ್ಯತಾ ಗುಂಪುಗಳಿಗೆ ತೀವ್ರ ಗತಿಯಲ್ಲಿ ಲಸಿಕಾಕರಣವನ್ನು ನೀಡಬೇಕು. ಆದ್ಯತಾ ವಲಯಗಳ ಅರ್ಹರೆಲ್ಲರಿಗೂ ಲಸಿಕೆ ದೊರೆಯುವಂತೆ ತಹಶೀಲ್ದಾರರು ಮೇಲುಸ್ತುವಾರಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿಯೋಜಿತ ವಿವಿಧ ಇಲಾಖೆಗಳ ಜೊತೆಗೆ ಸಮನ್ವಯ ಸಾಧಿಸಿ ಸೋಂಕು ತಡೆಗೆ ಮುಂದಾಗುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ ಮಾತನಾಡಿ, ಮಳೆಗಾಲ ಆರಂಭವಾಗಿದ್ದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ನಗರ ಪಟ್ಟಣಗಳ ಚರಂಡಿಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛಗೊಳಿಸಲು ಯೋಜನೆ ಸಿದ್ಧಗೊಳಿಸಿ ಕ್ರಮ ವಹಿಸಬೇಕು. ಜೊತೆಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ಆಸ್ತಿ ಹಾಗೂ ಜೀವ ಹಾನಿ ತಪ್ಪಿಸಲು ಕ್ರಮ ಅಗತ್ಯ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ , ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅನಿಲಕುಮಾರ್ ಮುದ್ದಾ, ಅವಳಿ ನಗರಸಭೆಯ ಪೌರಾಯುಕ್ತ ರಮೇಶ ಜಾಧವ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟ ಯತ್ನ; ಮೂವರ ಬಂಧನ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಕೊರೊನಾದಿಂದ ನಿತ್ಯ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಪಾಪಿಗಳ ಜೀವ ರಕ್ಷಕ ಔಷಧಿಯನ್ನು ಕಳ್ಳತನ‌ ಮಾಡಿ‌ ಮಾರಾಟ ಮಾಡುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡುವ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ನಾಸೀರ್ ಹುಸೇನ್, ರಾಘವೇಂದ್ರ ಉಣಕಲ್, ನಾಗರಾಜ್ ನಡವಲಕೇರಿ ಎಂಬುವರೇ ಬಂಧಿತರು.

ಬಂಧಿತರಿಂದ 4 ವಯಲ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ನಾಸೀರ್ ಹುಸೇನ್ ಎಂಬುವವನಿಂದ ಇಂಜೆಕ್ಷನ್ 7 ಸಾವಿರಕ್ಕೆ ತಂದು ಹೆಚ್ಚಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ‌ಪ್ರಕರಣ ದಾಖಲಾಗಿದೆ.

ಸೋಂಕಿನಿಂದ ಮೃತರಾದ ಕುಟುಂಬದವರಿಗೆ ಸರ್ಕಾರಿ ಸೌಲಭ್ಯ; ಡಿಸಿ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್ ಸೋಂಕಿನಿಂದ ಮೃತರಾದ ಕುಟುಂಬದ ಸದಸ್ಯರಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ದೊರಕಿಸುವ ಪ್ರಾಮಾಣಿಕ ಪ್ರಯತ್ನವನ್ನು ಅಧಿಕಾರಿಗಳು ನಿರ್ವಹಿಸಬೇಕು. ಸರ್ಕಾರದ ಒಂದಿಲ್ಲೊಂದು ಯೋಜನೆಯಲ್ಲಿ ಸೋಂಕಿನಿಂದ ಮೃತ ಕುಟುಂಬದ ಸದಸ್ಯರಿಗೆ ಪ್ರಯೋಜನವಾಗಬೇಕು. ಮೃತ ವ್ಯಕ್ತಿಯ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ ಸೌಲಭ್ಯ ದೊರೆಯುವಂತೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳು ತಹಸೀಲ್ದಾರರಿಗೆ ನಿರ್ದೇಶನ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಅನೇಕ ಕುಟುಂಬಗಳು ಆರ್ಥಿಕವಾಗಿ ಬಲಹೀನವಾಗಿದೆ. ಜಿಲ್ಲೆಯ ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರಿಗೆ ಸಾಲ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಹಣಕಾಸು ಸಂಸ್ಥೆಯ ಮುಖ್ಯಸ್ಥರಿಗೆ ಈಗಾಗಲೇ ಸೂಚನೆ ನೀಡಿರುವಂತೆ ಇನ್ನೆರಡು ತಿಂಗಳು ಆರ್ಥಿಕವಾಗಿ ಅಸಹಾಯಕವಾಗಿರುವ ಕುಟುಂಬಗಳಿಂದ ಸಾಲದ ಕಂತು ವಸೂಲಿ ಮಾಡದಿರುವಂತೆ ತಿಳಿಸಲಾಗಿದೆ.

ತಹಶೀಲ್ದಾರರು ಸ್ಥಳೀಯವಾಗಿ ಹಣಕಾಸು ಸಂಸ್ಥೆಯವರೊಂದಿಗೆ ಚರ್ಚಿಸಿ ಸಾಲದ ಕಂತು ಮರುಪಾವತಿಗೆ ಕಾಲಾವಕಾಶ ನೀಡುವಂತೆ ತಿಳಿಸಲು ನಿರ್ದೇಶಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ , ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅನಿಲಕುಮಾರ್ ಮುದ್ದಾ , ನಗರಸಭೆಯ ಪೌರಾಯುಕ್ತ ರಮೇಶ ಜಾಧವ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿ ಪಿ ವೀರಣ್ಣ, ಕಾರ್ಯದರ್ಶಿಯಾಗಿ ಶಿವಕುಮಾರ ಪತ್ರಿಮಠ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಹೂವಿನಹಡಗಲಿ

ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಘಟಕದ ಸಾಮಾನ್ಯ ಸಭೆಯಲ್ಲಿ 2021- 22ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅದ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಪಿ. ವೀರಣ್ಣ,

ಉಪಾಧ್ಯಕ್ಷರಾಗಿ ಕನ್ನಡನಾಡು ಪತ್ರಿಕೆ ವರದಿಗಾರ ಎಸ್. ಅಶ್ವತ್ಥನಾರಾಯಣ್,

ಪ್ರಧಾನ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ಶಿವಕುಮಾರ ಪತ್ರಿಮಠದ,

ಖಜಾಂಚಿಯಾಗಿ ನವೋದಯ ಪತ್ರಿಕೆ ವರದಿಗಾರ ಎಸ್.ಎಂ. ಬಸವರಾಜ್,

ಸಹ ಕಾರ್ಯದರ್ಶಿಯಾಗಿ ಮೂಡಣ ಪತ್ರಿಕೆ ವರದಿಗಾರ ಎಸ್.ಎಂ. ಜಾನ್ ಆಯ್ಕೆ ಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಅಯ್ಯನಗೌಡ, ವಿಶ್ವನಾಥ ಹಳ್ಳಿಗುಡಿ, ಎಂ. ನಿಂಗಪ್ಪ, ಎಂ.ಪಿ.ಎಂ. ಶಿವಪ್ರಕಾಶ್, ಎಸ್.ನಿಂಗರಾಜ, ಚಂದ್ರು ಕೊಂಚಿಗೇರಿ, ಎಂ.ಅಶೋಕ, ಎಚ್.ಎಂ. ಗುರುಬಸವರಾಜಯ್ಯ, ಎಲ್.ಅಕ್ಬರ್, ಸೋಮಶೇಖರ, ಎಚ್.ಚಂದ್ರಪ್ಪ, ಕೆ. ಎಚ್.ಕೆ. ಮಹೇಶ, ಎಚ್‌.ವೀರನಗೌಡ ಸರ್ವಾನುಮತದಿಂದ ಆಯ್ಕೆಯಾದರು.

ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಇಳಿಕೆ; ಸುರಳ್ಕರ್

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಲಾಕ್‌ಡೌನ್ ಹಾಗೂ ಜಿಲ್ಲಾಡಳಿತ ಕೈಗೊಂಡ ಕಠಿಣ ಕ್ರಮಗಳಿಂದ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ಕುರಿತು ಮಾಹಿತಿ ನೀಡುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿನಿತ್ಯ 1,500ರಿಂದ 1800ರವರೆಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷಾ ಫಲಿತಾಂಶದನ್ವಯ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಶೇ. 20ರಷ್ಟು ಇಳಿಕೆ ಕಂಡುಬಂದಿದೆ. ಸಾರ್ವಜನಿಕರು ಲಾಕ್‌ಡೌನ್ ಹಾಗೂ ಜಿಲ್ಲಾಡಳಿತದ ನಿಯಮಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸಿ ಸಹಕರಿಸಿದರೆ ಶೀಘ್ರದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಬಹುದು. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಆಕ್ಸಿಜನ್ ಘಟಕ ಇಂದು ಆರಂಭ

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಹಿತ ಒಟ್ಟು 712 ಫೆಸಿಲಿಟಿಗಳಲ್ಲಿ ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕನಕಗಿರಿಯಲ್ಲಿ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಬೆಡ್‌ಗಳನ್ನು ಕೋವಿಡ್ ನಿಯಮಾನುಸಾರ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿರುವ 1,000 ಎಲ್‌ಪಿಎಂ ಆಕ್ಸಿಜನ್ ಉತ್ಪಾದನಾ ಘಟಕದ ಕಾರ್ಯವು ಬಹುತೇಕ ಪೂರ್ಣಗೊಂಡಿದ್ದು, ಶನಿವಾರದಿಂದ ಕಾರ್ಯಾರಂಭಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಕೋವಿಡ್ ಎರಡನೇ ಅಲೆ ಆರಂಭದಿಂದ ಇಲ್ಲಿಯವರೆಗೆ ಒಟ್ಟು 309 ಜನರು ಮೃತಪಟ್ಟಿದ್ದು, ಅದರಲ್ಲಿ 49 ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಮೊದಲ ಹಾಗೂ ಎರಡನೇ ಸುತ್ತು ಸೇರಿದಂತೆ ಒಟ್ಟು 2,81,120 ಜನರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇನ್ನೂ ಅನೇಕರಿಗೆ ಎರಡನೇ ಡೋಸ್ ಲಸಿಕೆ ನೀಡುವುದು ಬಾಕಿ ಇದೆ. ಲಸಿಕೆ ನಿಯಮಾನುಸಾರ ಮೊದಲ ಡೋಸ್ ನಂತರ ನಿಗದಿತ ಅವಧಿಯನ್ನು ಪೂರ್ಣಗೊಳಿಸಿದವರು ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಎರಡನೇ ಡೋಸ್ ಲಸಿಕೆ ಪಡೆಯಬಹುದು.

ಎರಡನೇ ಡೋಸ್ ಲಸಿಕೆಗೆ ಅರ್ಹರಿರುವರಿಗೆ ಸಂದೇಶದ ಮೂಲಕ ಮಾಹಿತಿ ನೀಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಮುಂದಿನ ವಾರದಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.

ಮ್ಯೂಕಸ್ ಮೈಕೋಸಿಸ್ ಪ್ರಕರಣಗಳು

ಮ್ಯೂಕಸ್ ಮೈಕೋಸಿಸ್ ಬಾಧಿತ 4 ರೋಗಿಗಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ 5 ಜನರು ಸೋಂಕಿಗೆ ಒಳಗಾಗಿರಬಹುದು ಎಂದು ಶಂಕಿಸಲಾಗಿದ್ದು, ಪರೀಕ್ಷಾ ವರದಿಯ ಅನಂತರ ಸೋಂಕು ದೃಢೀಕರಣದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಕೋವಿಡ್ ಮೂರನೇ ಅಲೆಯ ಬಗ್ಗೆ ತಜ್ಞರು, ವೈದ್ಯರು ಹಾಗೂ ಮಾಧ್ಯಮಗಳು ಹೇಳುವ ಪ್ರಕಾರ ಕಡಿಮೆ ವಯಸ್ಸಿನ ಅಥವಾ ಚಿಕ್ಕ ಮಕ್ಕಳಿಗೆ ಸೋಂಕು ಹೆಚ್ಚು ಬಾಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕರನ್ನು ಬಳಸಿಕೊಂಡು ಮನೆ ಮನೆಗೆ ತೆರಳಿ ಮಕ್ಕಳ ಸಮೀಕ್ಷೆ ಮಾಡಲಾಗುತ್ತಿದೆ. ಸಮೀಕ್ಷೆಯಲ್ಲಿ ಮಕ್ಕಳು ಹಾಗೂ ಪೋಷಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಮಕ್ಕಳ ತಜ್ಞ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಲಿಂಗರಾಜು ಟಿ. ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ‌ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಬೆಳಗಾವಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ. ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರು, ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದುಕೊಂಡು ನಂತರ 4 ಗಂಟೆಗೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿರುವ ಸಿಎಂ ಅವರು, ಕೋವಿಡ್ ನಿಯಂತ್ರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್, ವಾರ್ತಾ ಸಚಿವ ಸಿ.ಸಿ.ಪಾಟೀಲ್ ಸೇರಿದಂತೆ ಉಪಸ್ಥಿತಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಹಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿರುವ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ವರ್ಷ ರಾಜ್ಯದ್ಲಿ 8.75 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಇಲ್ಲದ ಕಾರಣ ಅವರ ಕಲಿಕಾ ಮಟ್ಟ ನಿರ್ಧಾರವಾಗುವುದು ತುಂಬಾ ಕಷ್ಟವಾಗುತ್ತದೆ. ಕಳೆದ ವರ್ಷ 9 ನೇ ತರಗತಿ ಪರೀಕ್ಷೆ ನಡೆದಿಲ್ಲ. ಸಿಬಿಎಸ್ ಇ ಪಠ್ಯದಲ್ಲಿ ಮೂರು ತಿಂಗೊಳಿಗೊಮ್ಮೆ ವಿದ್ಯಾರ್ಥಿಗಳ ಇವ್ಯುಲೇಶನ್ ನಡೆಯುತ್ತದೆ. ಆದರೆ, ನಮ್ಮಲ್ಲಿ ಈ ಪದ್ಧತಿ ಇಲ್ಲ. ಹೀಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿವೆ ಎಂದು ಹೇಳಿದ್ದಾರೆ.

ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಮಾಜ ವಿಜ್ಞಾನ, ಗಣಿತ, ವಿಜ್ಞಾನ ಈ ಮೂರು ವಿಷಯ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರಶ್ನೆಗಳು ಸರಳವಾಗಿ, ನೇರವಾಗಿರುತ್ತವೆ. ಆಯ್ಕೆ ಪ್ರಶ್ನೆಗಳು ಇರುತ್ತವೆ ಎಂದು ಹೇಳಿದ್ದಾರೆ.

ಈ ಬಾರಿ 6 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕಳೆದ ವರ್ಷ ಮೂರು ಸಾವಿರ ಮಾತ್ರ ಇದ್ದವು. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಈಗಾಗಲೇ ಕೇಂದ್ರ ಸರ್ಕಾರವು ಸಿಬಿಎಸ್ ಇ 12 ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದರ ಬೆನ್ನಲ್ಲಿಯೇ ರಾಜ್ಯದಲ್ಲಿಯೂ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ.

ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್ಸೆಸ್ಸೆಲ್ಸಿ ನಡೆದಿತ್ತು. ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಆದರೆ, ಕೊರೊನಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಬಹಳ ಅಪಾಯಕಾರಿ. ಹೀಗಾಗಿ ಪರೀಕ್ಷೆ ಎಂಬ ಅಡಕತ್ತರಿಯಲ್ಲಿ ಶಿಕ್ಷಣ ಇಲಾಖೆ ಸಿಲುಕಿತ್ತು.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್ ಅಪಾಯವಾಗಿ ಸೋಂಕು ಸ್ಫೋಟ ಆಗಬಹುದು. ಕೋವಿಡ್ ಸಾವು ನೋವು ಹೆಚ್ಚಾಗಬಹುದು ಎಂಬ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಕೊರೊನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಬಾರದು. ಮಕ್ಕಳ ಶಿಕ್ಷಣಕ್ಕಿಂತ ಮಕ್ಕಳ ಜೀವ ನಮಗೆ ಮುಖ್ಯ. ಈ ಕೊರೊನಾ ವರ್ಷದಲ್ಲಿ ಪರೀಕ್ಷೆಯೇ ಬೇಡ. ಸಿಬಿಎಸ್‍ ಇ ಮಾದರಿಯಲ್ಲಿ ಎಲ್ಲರನ್ನು ಪಾಸ್ ಮಾಡಿ ಎಂಬ ಕೂಗು ಕೇಳಿ ಬಂದಿತ್ತು.

ಶೈಕ್ಷಣಿಕ ಗುಣಮಟ್ಟಕ್ಕೆ ಹೊಡೆತ ಬೀಳುವುದರ ಜೊತೆಗೆ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಹುದು. ನೀಟ್, ಸಿಇಟಿ ಸೀಟ್ ಹಂಚಿಕೆಯಲ್ಲಿ ಗೊಂದಲವಾಗಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲು ಏರಬಹುದು. ಅತ್ಯುತ್ತಮ ಕಾಲೇಜುಗಳಲ್ಲಿ ಪ್ರವೇಶಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಬಹುದು ಎಂಬ ಆತಂಕ ಕೂಡ ಕಾಡುತ್ತಿದೆ.

ಗುರುವಾರ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ; ನಾಲ್ವರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ನಿನ್ನೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿತ್ತು. ಆದರೆ ಮತ್ತೆ ಇವತ್ತು ಇಳಿಕೆ ಕಂಡಿದೆ. ಆದರೆ ಸಾವಿನ ಸರಣಿ ಮುಂದುವರೆದಿದೆ. ಇಂದು 250 ಜನರಿಗೆ ಸೋಂಕು ತಗುಲಿದೆ. ಬುಧವಾರ ಜಿಲ್ಲಾಡಳಿತದ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದಾರೆ.

ಇಂದಿನ 250 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24315 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -105, ಮುಂಡರಗಿ-51, ನರಗುಂದ-23, ರೋಣ-21, ಶಿರಹಟ್ಟಿ-41, ಹೊರಜಿಲ್ಲೆಯ-09 ಸೇರಿದಂತೆ 250 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 262 ಕ್ಕೇರಿದೆ.

ಗದಗನ ಪಂಚಾಕ್ಷರಿ ನಗರದ ನಿವಾಸಿ 62 ವರ್ಷದ ವ್ಯಕ್ತಿ ಮೇ-25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -02 ರಂದು ಮೃತಪಟ್ಟಿದ್ದಾರೆ.

ಗದಗ ಶಹರದ ನಿವಾಸಿ 62 ವರ್ಷದ ವ್ಯಕ್ತಿ ಮೆ,27 ರಂದು ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 31 ರಂದೇ ಮೃತಪಟ್ಟಿದ್ದಾರೆ.

ಜಿಲ್ಲೆಯ ಗಜೇಂದ್ರಗಡ ನಿವಾಸಿ 59 ವರ್ಷದ ಮಹಿಳೆ ಮೇ,28 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ, 29 ರಂದು ಮೃತಪಟ್ಟಿದ್ದಾರೆ.

ಗದಗ ಶಹರ ನಿವಾಸಿ 45 ವರ್ಷದ ಮಹಿಳೆ ಮೇ 21 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್- 01 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 351 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 21835 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 2218 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!