Home Blog Page 330

ಕುದರಿಮೋತಿ ಗ್ರಾಪಂ ಅಧ್ಯಕ್ಷೆಪಿಡಿಒ ಅಮಾನತಿಗೆ ಆಗ್ರಹ

0

//ಬೋಗಸ್ ಬಿಲ್//

-ಲಕ್ಷಾಂತರ ರೂಪಾಯಿ ಗುಳುಂಸ್ವಾಹಾ ಮಾಡಿರುವ ಆರೋಪ
-ಸರಕಾರದ 11.50 ಲಕ್ಷ ರೂಪಾಯಿ ದುರ್ಬಳಕೆಗೆ ಸದಸ್ಯೆಯ ಕಿಡಿ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯಿತಿಯಲ್ಲಿ ಪ್ರಬಾರಿ ಪಿಡಿಓ ಆಗಿದ್ದ ದೊಡ್ಡಬಸಮ್ಮ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುರ್ಗವ್ವ ದೂಪಂ ಸೇರಿಕೊಂಡು ವಿವಿಧ ಕಾಮಗಾರಿಗಳ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿಸಿ ಸರಕಾರದ 11.50 ಲಕ್ಷ ರೂಪಾಯಿ ಗುಳುಂ ಸ್ವಾಹಾ ಮಾಡಿದ್ದಾರೆ ಎಂದು ಗ್ರಾಪಂ ಸದಸ್ಯೆ ಲಕ್ಷ್ಮೀ ದಾಸರ್ ಹಾಗೂ ಅವರ ಪತಿ ವಿಜಯಕುಮಾರ್ ದಾಸರ್ ಆರೋಪಿಸಿದರು.

ಕೊಪ್ಪಳ ಮೀಡಿಯಾ ಕ್ಲಬ್ನಲ್ಲಿ ಬುಧವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುದರಿಮೋತಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಹಾಗೂ ನರೇಗಾ ಯೋಜನೆಯಡಿ ಬೋಗಸ್ ಬಿಲ್ ಸೃಷ್ಟಿಸಿ, ಸುಮಾರು 11.50 ಲಕ್ಷ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಕೂಡಲೇ ಪಿಡಿಒ ದೊಡ್ಡಬಸಮ್ಮ ಅವರನ್ನು ಅಮಾನತುಗೊಳಿಸಿ ಗ್ರಾಪಂ ಅಧ್ಯಕ್ಷೆ ದುರ್ಗವ್ವ ಇವರನ್ನು ಅಧ್ಯಕ್ಷೆ ಸ್ಥಾನದಿಂದ ಅನರ್ಹಗೊಳಿಸುವಂತೆ ಅವರು ಒತ್ತಾಯಿಸಿದರು.

ಪ್ರಭಾರಿ ಪಿಡಿಓ ಆಗಿದ್ದ ದೊಡ್ಡಬಸಮ್ಮ ಸದ್ಯ ತಮ್ಮ ನಿಯೋಜಿತ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ಕುದರಿಮೋತಿ ಗ್ರಾಪಂಗೆ ಬೇರೊಬ್ಬ ಪಿಡಿಓ ಬಂದಿದ್ದಾರೆ. ಸದ್ಯದ ಪಿಡಿಓ ದಾಖಲಾತಿಗಳನ್ನು ಪರಿಶೀಲಿಸಿ ಖೊಟ್ಟಿ ದಾಖಲೆ ಸೃಷ್ಟಿಸಿರುವುದಾಗಿ ತಿಳಿಸಿದ್ದಾರೆ. 15ನೇ ಹಣಕಾಸು ಯೋಜನೆಯಡಿ ಗ್ರಾಪಂಗೆ ಯಾವುದೇ ಸಲಕರಣೆ ಖರೀದಿಸಿಲ್ಲ ಎಂದು ಲಿಖಿತವಾಗಿ ಪತ್ರ ನೀಡಿದ್ದಾರೆ. ಕುಡಿಯುವ ನೀರಿಗಾಗಿ ಮೋಟಾರ್ ಹಾಗೂ ಪಂಪ್ ಖರೀದಿಸಲಾಗಿದೆ ಎಂದು ಹಿಂದಿನ ಪಿಡಿಒ 2 ಲಕ್ಷ ರೂಪಾಯಿ ಖರ್ಚು ಹಾಕಿದ್ದಾರೆ. ಒಂದೇ ಒಂದು ಸಲಕರಣೆಯನ್ನು ಅವರು ಖರೀದಿಸಿಲ್ಲ ಎಂದು ವಿಜಯಕುಮಾರ್ ತಿಳಿಸಿದರು.

ನರೇಗಾ ಯೋಜನೆಯಡಿ ಬದು ನಿರ್ಮಾಣ ಮಾಡಲಾಗಿದೆ ಎಂದು ದಾಖಲೆಗಳಲ್ಲಿ ಫೋಟೋಸಮೇತ ವರದಿಯಲ್ಲಿ ತಿಳಿಸಿದ್ದಾರೆ. ಹಿಂದೆ ನಿರ್ಮಾಣ ಮಾಡಿದ್ದ ಬದುವನ್ನೇ ಈಗ ಮಾಡಿರುವುದಾಗಿ ದಾಖಲೆ ಸೃಷ್ಟಿಸಿದ್ದಾರೆ. ಕೃಷಿ ಹೊಂಡ ನಿರ್ಮಾಣ, ಕೆರೆ ಹೂಳೆತ್ತುವ ಕಾಮಗಾರಿಗಳಲ್ಲೂ ನರೇಗಾ ಅನುದಾನವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಅವರು ಕಿಡಿ ಕಾರಿದರು.

ಈ ಬಗ್ಗೆ ಉಳಿದ ಸದಸ್ಯರು ಪ್ರಶ್ನಿಸುತ್ತಿಲ್ಲ. ಸುಮ್ಮನೆ ಯಾಕೆ ವಿರೋಧ ಕಟ್ಟಿಕೊಳ್ಳಬೇಕು ಎಂಬ ಧೋರಣೆಯಲ್ಲಿ ಕಾಲ ತಳ್ಳುತ್ತಿದ್ದಾರೆ. ಸಾರ್ವಜನಿಕರ ಹಣ ದುರ್ಬಳಕೆಯಾಗಬಾರದು ಎಂಬ ಸದುದ್ದೇಶದಿಂದ ಕುದರಿಮೋತಿ ಗ್ರಾಪಂ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮುಂದಾಗಿರುವುದಾಗಿ ತಿಳಿಸಿದ ಅವರು, ಈಗಾಗಲೇ ತಾಪಂ ಇಓ ಅವರಿಗೂ ದೂರು ಸಲ್ಲಿಸಲಾಗಿದ್ದು, ಅವರೂ ಸಹ ಉದಾಸೀನ ತೋರಿದ್ದಾರೆ ಎಂದು ದೂರಿದರು.

ಕೋವಿಡ್ ಹೆಚ್ಚಳ; ಸಂಕ್ರಾಂತಿಗೆ ಬಿಂಕದಕಟ್ಟಿ ZOO ಬಂದ್

0

ಮೂರು ದಿನ ಬಿಂಕದಕಟ್ಟಿ ಮೃಗಾಲಯ, ಉದ್ಯಾನವನ ಬಂದ್

ವಿಜಯಸಾಕ್ಷಿ ಸುದ್ದಿ, ಗದಗ:

ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜ.14 ರಿಂದ 16ರವರೆಗೆ ಗದಗ ತಾಲ್ಲೂಕಿನ ಬಿಂಕದಕಟ್ಟಿಯ ಮೃಗಾಲಯ ಹಾಗೂ ಸಾಲು ಮರದ ತಿಮ್ಮಕ್ಕ ಉದ್ಯಾನವನ ಬಂದ್ ಆಗಿರಲಿವೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೆ ಅವರು ತಿಳಿಸಿದ್ದಾರೆ.

ಶುಕ್ರವಾರ ಮಕರ ಸಂಕ್ರಮಣ ಇರುವ ಹಿನ್ನೆಲೆಯಲ್ಲಿ ಅಧಿಕ ಪ್ರಮಾಣದಲ್ಲಿ ‌ಜಿಲ್ಲೆಯ ಇವೆರಡೂ ಪ್ರೇಕ್ಷಣೀಯ ಸ್ಥಳಗಳಿಗೆ ವಿವಿಧ ಭಾಗಗಳಿಂದ ಸುಮಾರು 5-6 ಸಾವಿರ ಪ್ರವಾಸಿಗರು ಭೇಟಿ‌ ನೀಡುವ ಸಾಧ್ಯತೆ ಇದೆ. ಹೀಗಾಗಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ಮೃಗಾಲಯ ಹಾಗೂ ಉದ್ಯಾನವನ ಬಂದ್ ಇರಲಿದ್ದು, ಪ್ರವಾಸಿಗರಿಗೆ ನಿರಾಸೆಯನ್ನುಂಟು ಮಾಡಿದೆ.

ಗದಗ ಜಿಲ್ಲೆಯಲ್ಲೂ ಶಾಲೆ ಬಂದ್ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಿ; ಎಚ್ ಕೆ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ:

‘ಜಿಲ್ಲೆಯಾದ್ಯಂತ ಶಾಲೆಗಳ ಬಂದ್ ಬಗ್ಗೆ ಜಿಲ್ಲಾಡಳಿತದವರು ತಜ್ಞರನ್ನು ಕರೆದು ತಜ್ಞರ ವರದಿ, ಶಿಫಾರಸ್ಸಿನಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬಾರದು’ ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಂದು ಓಮಿಕ್ರಾನ್ ಸಂಭವನೀಯ ಪ್ರಕರಣದ ಸುದ್ದಿ ಇದ್ದು, ಹದಿನೈದು ದಿನಗಳು ಕಳೆಯುತ್ತಾ ಬಂದರೂ ಖಚಿತವಾಗಿಲ್ಲ. ಅದ್ಯಾಕೆ ಆಗ್ತಿಲ್ಲ ಅಂತಾ ಗೊತ್ತಿಲ್ಲ. ಆದರೆ, ಜಿಲ್ಲಾಡಳಿತ ಪಾರದರ್ಶಕವಾಗಿ ಮಾಹಿತಿ ಹಂಚಿಕೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದೆ, ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರೆ. 450 ಹಾಸಿಗೆಗಳ ಆಸ್ಪತ್ರೆ ಮುಕ್ತಾಯಗೊಳ್ಳಲು ಬಂದಿದೆ. ಆಸ್ಪತ್ರೆಯ ಕಟ್ಟಡಕ್ಕೆ ಬಣ್ಣ ಹಚ್ಚುವ ಕಾರ್ಯ ಪ್ರಾರಂಭವಾಗಿದ್ದು, ಶೀಘ್ರವೇ ಆಸ್ಪತ್ರೆ ಜನಸೇವೆಗೆ ಲೋಕಾರ್ಪಣೆಗೊಳ್ಳಬೇಕು. ಇನ್ನೂ ಬಹಳಷ್ಟು ಕೆಲಸ ಬಾಕಿ ಇದ್ದು, ಮೂರನೇ ಅಲೆಯ ವೇಳೆ ಹೆಚ್ಚಿನ ಸೌಲಭ್ಯ ಬಳಸಿಕೊಳ್ಳಲು ಸರ್ಕಾರ ಆಸ್ಪತ್ರೆಯ ಸ್ವಲ್ಪ ಭಾಗವನ್ನಾದರೂ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಲಾಕ್ ಡೌನ್ ಮಾಡುವ ವಿಚಾರದ ಕುರಿತು ಮಾತನಾಡಿದ ಅವರು, ರಾಷ್ಟ್ರ ಮಟ್ಟದಲ್ಲಿಯೂ ಲಾಕ್ ಡೌನ್ ಚಿಂತನೆ ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ಇದೆ. ಇದರಿಂದ ಬಡವರ ಬದುಕು ಅಸಹನೀಯವಾಗುತ್ತದೆ. ಈ ವೇಳೆ ಬಡವರಿಗೆ ಅನುಕೂಲವಾಗುವಂತೆ ಲಾಕ್ ಡೌನ್ ಜೊತೆಗೆ ಪರಿಹಾರದ ಬಗ್ಗೆಯೂ ಮಾಡಬೇಕು ಎಂದರು.

ಮೇಕೆದಾಟು ಪಾದಯಾತ್ರೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ‘ಮೇಕೆದಾಟು ಪಾದಯಾತ್ರೆ ಇವತ್ತು, ನಿನ್ನೆಯ ನಿರ್ಣಯ ಅಲ್ಲ. ತಿಂಗಳ ಹಿಂದೆಯೇ ನಿರ್ಧರಸಿತ್ತು. ಈ ವೇಳೆ ಸರ್ವ ಪಕ್ಷಗಳ ಸಭೆ ಕರೆಯಲಿಲ್ಲ. ಕೇಂದ್ರ ಸರ್ಕಾರ ಬಳಿ ನಿಯೋಗ ತೆಗೆದುಕೊಂಡು ಹೋಗಲಿಲ್ಲ. ಕೆಲಸ ಪ್ರಾರಂಭಿಸಲಿಲ್ಲ. ಏನಾಗಿದೆ ಎಂಬ ಬಗ್ಗೆ ಪಾರದರ್ಶಕವಾಗಿ ಹೇಳಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಪಾದಯಾತ್ರೆ ಮಾಡಲಾಗುತ್ತಿದೆ.

ಇವತ್ತಿನವರೆಗೂ ಆ ಬಗ್ಗೆ ಚಕಾರ ಎತ್ತುತ್ತಿಲ್ಲ. ಪಾದಯಾತ್ರೆ ವೇಳೆ ಕೋವಿಡ್ ನಿಯಮ ಪಾಲಿಸಿಯೇ ಪಾದಯಾತ್ರೆ ಮಾಡುತ್ತಿದ್ದಾರೆ. ಹೀಗಿದ್ದಾಗ್ಯೂ ಪ್ರಕರಣ ದಾಖಲಿಸಿದ್ದು, ಕಾನೂನು ಹೋರಾಟ ನಡೆಸಲಾಗುವುದು’ ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಮಂಗಳವಾರ ಕೊರೊನಾ ಸ್ಫೋಟ; ಎರಡೇ ದಿನದಲ್ಲಿ 37 ಜನರಿಗೆ ಕೋವಿಡ್ ಸೋಂಕು

ವಿಜಯಸಾಕ್ಷಿ ಸುದ್ದಿ, ಗದಗ:

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡೇ ದಿನದಲ್ಲಿ ಬರೋಬ್ಬರಿ 37 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ ಮಂಗಳವಾರ ಒಂದೇ ದಿನ 21 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ಜಿಲ್ಲೆಯಲ್ಲಿ 84 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಪತ್ತೆಯಾಗಿರುವ 84 ಸೋಂಕಿನ ಪ್ರಕರಣಗಳಲ್ಲಿ ಗದಗ ತಾಲ್ಲೂಕು ಒಂದರಲ್ಲೇ 51 ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಮುಂಡರಗಿಯಲ್ಲಿ 21, ನರಗುಂದದಲ್ಲಿ 01, ರೋಣದಲ್ಲಿ 06, ಶಿರಹಟ್ಟಿಯಲ್ಲಿ 04 ಪ್ರಕರಣಗಳು ಪತ್ತೆಯಾಗಿವೆ.

ಗದಗನ ವಿಎನ್‌ಟಿ ರೋಡ್, ಗಾಂಧಿನಗರ(ಸೆಟ್ಲಮೆಂಟ್), ಸಂಕಣ್ಣವರ ಬಡಾವಣೆ, ಇಮಾಮ್‌ಹುಸೇನ್ ಕಾಲನಿ, ಗದಗ ತಾಲ್ಲೂಕಿನ ಅಡವಿಸೋಮಾಪುರ ದೊಡ್ಡತಾಂಡಾ, ಮಲ್ಲಸಮುದ್ರ, ನೀರಲಗಿ, ಮುಂಡರಗಿಯ ಸ್ವಾಮಿ ವಿವೇಕಾನಂದ ನಗರ, ಕೋಟೆಭಾಗ, ಮಂಜುನಾಥ ನಗರ, ಮುಂಡರಗಿ ತಾಲ್ಲೂಕಿನ ಕೋರ್ಲಹಳ್ಳಿ, ಬೀಡನಾಳ, ಬಸಾಪುರ, ನರಗುಂದದ ಟಿಎಲ್‌ಎಚ್ ಕಚೇರಿ, ರೋಣ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸವಡಿ, ರಾಂಪೂರ ಗ್ರಾಮದ ನಿವಾಸಿಗಳು ಸೇರಿದಂತೆ 21 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಮಂಗಳವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 6,97,019 ಮಾದರಿ ಸಂಗ್ರಹಿಸಿದ್ದು, 6,70,857 ನಕಾರಾತ್ಮಕವಾಗಿವೆ. ಮಂಗಳವಾರದ 21 ಪ್ರಕರಣ ಸೇರಿ ಒಟ್ಟು 26,164 ಜನರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೂ ಸೋಂಕಿನಿಂದ 319 ಜನ ಮೃತಪಟ್ಟಿದ್ದಾರೆ. ಇಂದಿನ ಮೂವರು ಸೇರಿ ಒಟ್ಟು 25,761 ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 84 ಸಕ್ರಿಯ ಪ್ರಕರಣಗಳಿದ್ದು, ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಜ.13ಕ್ಕೆ ಮೋದಿ ಮಹತ್ವದ ಸಭೆ; ದೇಶದಲ್ಲಿ ‌ಮತ್ತೆ ಟಫ್ ರೂಲ್ಸ್ ಜಾರಿ ಆಗುತ್ತಾ?

ವಿಜಯಸಾಕ್ಷಿ ಸುದ್ದಿ, ನವದೆಹಲಿ:

ದೇಶದಾದ್ಯಂತ ಕೊರೊನಾ ರೂಪಾಂತರಿ ಡೆಲ್ಟಾ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
ಜ.13 ರಂದು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆ ನಡೆಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ಸಭೆಯಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಎಷ್ಟಿದೆ?, ರಾಜ್ಯಗಳಲ್ಲಿ ಸೋಂಕು ತಡೆಯಲು ಕೈಗೊಂಡಿರುವ ಕ್ರಮಗಳೇನು?, ರಾಜ್ಯದಲ್ಲಿನ ಪಾಸಿಟಿವಿಟಿ ರೇಟ್, ಡೆತ್ ರೇಟ್ ಹೇಗಿದೆ? ಸೋಂಕು ತಡೆಯಲು ಮುಂದೆ ಕೈಗೊಳ್ಳಬೇಕಾದ ಕ್ರಮಗಳು ಏನೇನು? ಹಾಗೂ ಕೋವಿಡ್ ಲಸಿಕೆ ಹೆಚ್ಚಿಸಲು ಏನು ಮಾಡಬೇಕು? ಎಂಬ ಬಗ್ಗೆ ಸಿಎಂಗಳ ಜೊತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅಲ್ಲದೇ, ಅಂತರರಾಜ್ಯ ಸಾರಿಗೆ ಸಂಪರ್ಕ ವ್ಯವಸ್ಥೆ ದೃಷ್ಟಿಯಲ್ಲಿ ಏನು ಮಾಡಬೇಕು ಎಂಬ ವಿಷಯದ ಕುರಿತು ಅಂದಿನ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಶಿಕ್ಷಣ ಸಂಸ್ಥೆಯ ಬೆಳ್ಳಿಮಹೋತ್ಸವ; ಲಾಂಛನ ಅನಾವರಣ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನಗರದ ಅಲಯನ್ಸ್ ಶಿಕ್ಷಣ ಸಂಸ್ಥೆ 25 ವರ್ಷ ಪೂರೈಸಿ, ಬೆಳ್ಳಿ ಮಹೋತ್ಸವದ ಹೊಸ್ತಿಲಲ್ಲಿರುವ ಅಂಗವಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ಈಚೆಗೆ ಲಾಂಛನ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣ ಮುಂದುವರಿಸಿದ್ದು, ಸವಾಲುಗಳನ್ನು ನಿವಾರಿಸಿ ಸಮಾಜದ ಎಲ್ಲ ವರ್ಗಗಳಿಗೂ ತಲುಪಿರುವುದು ಶ್ಲಾಘನೀಯ ಎಂದರು.

ಸಾಕ್ಷರತೆ, ವಿಮರ್ಶಾತ್ಮಕ ಚಿಂತನೆ, ಮಾನವೀಯ ಮತ್ತು ವೈಜ್ಞಾನಿಕ ವಿಚಾರಣೆ, ನಾಯಕತ್ವ ಮತ್ತು ಲೋಕೋಪಕಾರ ಮತ್ತು ನಿರಂತರ ಕಲಿಕೆಯ ಚಕ್ರವನ್ನು ಸಂಕೇತಿಸುವ ಅಲಯನ್ಸ್ ಶಿಕ್ಷಣದ 25 ವರ್ಷಗಳ ಲೋಗೋವನ್ನು ಅನಾವರಣಗೊಳಿಸಿದರು.

ವಿದ್ಯಾರ್ಥಿಗಳ ವೈವಿಧ್ಯತೆಯನ್ನು ಹೆಚ್ಚಿಸಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರಾಜ್ಯ ಸರ್ಕಾರವು ಖಾಸಗಿ ವಿಶ್ವವಿದ್ಯಾಲಯಗಳಿಗೆ ಬೆಂಬಲವನ್ನು ಮುಂದುವರಿಸುತ್ತದೆ ಎಂದು ಅವರು ಭರವಸೆ ನೀಡಿದರು.

ಅಲಯನ್ಸ್ ವಿಶ್ವವಿದ್ಯಾನಿಲಯವು ರಾಜ್ಯ ಮತ್ತು ದೇಶದೊಳಗೆ ನಿರಂತರ ಸುಧಾರಣೆಯತ್ತ ಗಮನಹರಿಸುವುದರೊಂದಿಗೆ ಹೆಚ್ಚಿನ ಮೈಲಿಗಲ್ಲುಗಳನ್ನು ಸಾಧಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಕ್ಕಿ ಕಳ್ಳದಂಧೆ ಸಾರ್ವಜನಿಕರಿಂದ ಬಯಲಿಗೆ! ಇಬ್ಬರ ಬಂಧನ, ಲಾರಿ ವಶ: ಚಾಲಾಕಿ ದಂಧೆಕೋರ ವೀರೇಶ್ ಪರಾರಿ

ವಿಜಯಸಾಕ್ಷಿ ಸುದ್ದಿ, ಗದಗ:

ವೀರೇಶ್ ಬಡಿಗೇರ

ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಾರ್ವಜನಿಕರಿಂದ ಕಡಿಮೆ ಬೆಲೆಗೆ ಖರೀದಿಸಿ ದೊಡ್ಡ ಮೊತ್ತಕ್ಕೆ ಮಾರಾಟ ಮಾಡುವ ಜಾಲವೊಂದನ್ನು ಸಾರ್ವಜನಿಕರೇ ಬಯಲಿಗೆ ಎಳೆದಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಸಾರ್ವಜನಿಕರ ಈ ಕಾರ್ಯಾಚರಣೆ, ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಕೈಗನ್ನಡಿಯಾಗಿದೆ ಎಂದು ಎನ್ನಲಾಗುತ್ತದೆ.

ಸಂಗ್ರಹಿಸಿದ್ದ ಗೋದಾಮಿನಿಂದ ಅಕ್ಕಿ ಲೋಡ್ ಮಾಡಿಕೊಂಡು ಹೊರಟಾಗ ಕೆಲವು ಸಾರ್ವಜನಿಕರು ಲಾರಿಗೆ ತಡೆಯೊಡ್ಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಜಾಲವಾಡಗಿ ರಸ್ತೆಯ ಸೃಷ್ಟಿ ಫಾರ್ಮ್ ಹೌಸ್‌ ಬಳಿ ಈ ಘಟನೆ ನಡೆದಿತ್ತು. ಆಗ ಚಾಲಕ ಹೊನ್ನಿನಾಯಕಹಳ್ಳಿಯ ನಿಂಗಪ್ಪ ಭರಮಪ್ಪ ಗೌಡ್ರ, ಲಕ್ಷ್ಮೇಶ್ವರ ಬಳಿಯ ಸೋಗಿಹಾಳದ ಶರಣಪ್ಪ ನಿಂಗಪ್ಪ ಜಾಡರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಮುಖ ಆರೋಪಿ, ದಂಧೆಕೋರ, ಚಾಲಾಕಿ ವೀರೇಶ್ ಬಡಿಗೇರ ಮಾತ್ರ ಪರಾರಿಯಾಗಿದ್ದಾನೆ.

ಹಲವು ತಿಂಗಳಿನಿಂದಲೂ ಜಿಲ್ಲೆಯ ಮುಂಡರಗಿಯಲ್ಲಿ ಈ ದಂಧೆ ಎಗ್ಗಿಲ್ಲದೆ ಸಾಗಿದೆ. ಆದರೂ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ಸೋಜಿಗದ ಸಂಗತಿಯಾಗಿದೆ.

ಎರಡು ತಿಂಗಳ ಹಿಂದೆ ಮುಂಡರಗಿ ಪಟ್ಟಣದಿಂದ ಸಾಗಾಟವಾಗುತ್ತಿದ್ದ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು ಬಳಿ ಅಲ್ಲಿನ ಪೊಲೀಸರು ತಡೆದು ಅಪಾರ ಪ್ರಮಾಣದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದರು. ಚಾಲಕನನ್ನು ಮಾತ್ರ ಬಂಧಿಸಿದ್ದರು.

ರೂವಾರಿ ಮುಂಡರಗಿ ಪಟ್ಟಣದ ವೀರೇಶ್ ಬಡಿಗೇರ ತಲೆಮರೆಸಿಕೊಂಡು, ಜಾಮೀನು ಪಡೆದಿದ್ದ. ಕೆಲವೇ ದಿನಗಳಲ್ಲಿ ಮತ್ತೆ ದಂಧೆ ಚಾಲೂ ಮಾಡಿದ್ದ. ಈಗ ಸಾರ್ವಜನಿಕರ ಪ್ರಯತ್ನದಿಂದ ಸಿಕ್ಕಿಬಿದ್ದಿದ್ದರೂ ಮತ್ತೆ ಪರಾರಿಯಾಗಿದ್ದಾರೆ.

ಇದನ್ನೂ ಓದಿ ಲಕ್ಷಾಂತರ ರೂ. ಮೌಲ್ಯದ ಅನ್ನಭಾಗ್ಯ ಅಕ್ಕಿ ವಶ; ದಂಧೆಕೋರ ವೀರೇಶ್ ಬಡಿಗೇರನಿಗೆ ಬಿಸಿ!

ಲಾರಿ ಸಂಖ್ಯೆ ಕೆಎ 28 ಎ/7625ರಲ್ಲಿ ಸುಮಾರು 10 ಲಕ್ಷ ರೂ. ಮೌಲ್ಯದ 210 ಕ್ವಿಂಟಲ್ ಪಡಿತರ ಅಕ್ಕಿ‌ ಮೂಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಷ್ಟೆಲ್ಲ ಆದ ಮೇಲೆ ಆಹಾರ ಇಲಾಖೆಯ ಇನ್‌ಸ್ಪೆಕ್ಟರ್ ಶಿವರಾಜ್ ಕೊಟ್ರಪ್ಪ ಆಲೂರು ಮುಂಡರಗಿ ಠಾಣೆಗೆ ಮೂರು ಜನರ ವಿರುದ್ಧ ದೂರು ನೀಡಿದ್ದು, ತನಿಖೆ ನಡೆಯುತ್ತದೆ.

ಮತ್ತೆ ಜಿಮ್ಸ್‌ನ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು; ಗಜೇಂದ್ರಗಡ, ಮುಂಡರಗಿ ಸೇರಿ 16 ಜನರಿಗೆ ಕೊರೊನಾ

0

ವಿಜಯಸಾಕ್ಷಿ ಸುದ್ದಿ, ಗದಗ:

ಇಲ್ಲಿನ ಜಿಮ್ಸ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ 16 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನು ನಗರ ಪ್ರದೇಶದಲ್ಲಷ್ಟೇ ಪತ್ತೆಯಾಗುತ್ತಿದ್ದ ಕೋವಿಡ್ ಇದೀಗ ಗ್ರಾಮೀಣ ಭಾಗಕ್ಕೂ ಕಾಲಿಟ್ಟಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ.

ಗದಗನ ಎಸ್.ಎಂ.ಕೃಷ್ಣ ನಗರ, ಪಂಚಾಕ್ಷರಿ ನಗರ, ಕಳಸಾಪುರ ರಸ್ತೆ, ಮುಂಡರಗಿ ತಾಲ್ಲೂಕಿನ ಬಾಗೇವಾಡಿ, ಗಜೇಂದ್ರಗಡದ ನಿವಾಸಿಗಳು ಸೇರಿದಂತೆ 16 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಸೋಮವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 695220 ಮಾದರಿ ಸಂಗ್ರಹಿಸಿದ್ದು, 669079 ಮಾದರಿಗಳು ನಕಾರಾತ್ಮಕವಾಗಿವೆ.

ಸೋಮವಾರದ 16 ಪ್ರಕರಣ ಸೇರಿ ಒಟ್ಟು 26,143 ಜನರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೂ ಸೋಂಕಿನಿಂದ 319 ಜನ ಮೃತಪಟ್ಟಿದ್ದಾರೆ. ಇಂದಿನ ಮೂವರು ಸೇರಿ ಒಟ್ಟು 25,758 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 66 ಸಕ್ರಿಯ ಪ್ರಕರಣಗಳಿದ್ದು, ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜ್ಜನ ಜಾತ್ರೆಗೆ ದವಸ ಧಾನ್ಯ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜನೇವರಿ 19ರಂದು ಕೊಪ್ಪಳದ ಅಜ್ಜನ ಜಾತ್ರೆಗೆ ಸದ್ದಿಲ್ಲದೆ ಸಿದ್ಧತೆ ನಡೆದಿದೆ. ಆದರೆ ಈ ಬಾರಿಯೂ ಸರಳ ಜಾತ್ರೆ ಆಚರಿಸಲು ನಿರ್ಧರಿಸಲಾಗಿದ್ದು, ಮಠದ ಭಕ್ತರು ದಾಸೋಹಕ್ಕಾಗಿ ದವಸ ಧಾನ್ಯ ನೀಡಲು ಆರಂಭಿಸಿದ್ದಾರೆ.‌ ಸೋಮವಾರ ಕಾಸನಕಂಡಿ‌ ಗ್ರಾಮಸ್ಥರು 200 ಚೀಲ ದವಸ ಧಾನ್ಯಗಳನ್ನು ಭಜನೆ ಸಮೇತ ಗವಿಮಠಕ್ಕೆ ಆಗಮಿಸಿ ಅರ್ಪಿಸಿದರು.

“ಡೊಂಬರಾಟ” ಕಾಂಗ್ರೆಸ್‌ಗೆ ಹೊಸದೇನಲ್ಲ: ಆಚಾರ್

0

//ಕೈ ಪಾದಯಾತ್ರೆಗೆ ಸಚಿವರ ವಾಗ್ದಾಳಿ//

ಜನ ರಾತ್ರಿ‌ ಕಂಡ ಬಾವಿಗೆ ಹಗಲು ಬೀಳುವುದಿಲ್ಲ

ಈ ಹಿಂದೆ ಕೂಡಲಸಂಗಮಕ್ಕೆ ಪಾದಯಾತ್ರೆ ಮಾಡಿ ನೀಡಿದ್ದ ಭರವಸೆ ಏನಾಯ್ತು?

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕಾಂಗ್ರೆಸ್‌ಗೆ ಡೊಂಬರಾಟ ಹೊಸದೇನಲ್ಲ. ಕಾಂಗ್ರೆಸ್‌ನವರು ಚುನಾವಣೆ ಸಮೀಪಿಸುತ್ತಿದ್ದಂತೆ ಪಾದಯಾತ್ರೆಯಂಥ ಡೊಂಬರಾಟ ಶುರು ಮಾಡ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ನಿಷೇಧಿತ ಪದ ಬಳಸಿ ವಿವಾದ ಎಳೆದುಕೊಂಡಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೂರನಢ ಲಸಿಕಾಕರಣ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆ ಸಚಿವರು, ಕಾಂಗ್ರೆಸ್ ನಡೆ ಟೀಕಿಸುವ ಭರದಲ್ಲಿ “ಡೊಂಬರಾಟ” ಎಂಬ ನಿಷೇಧಿತ ಪದವನ್ನು ಬಳಸಿದರು.

ಜನರ ಜೀವದ ಬಗ್ಗೆ ಕಾಳಜಿ ಇಲ್ಲದೇ ಕೋವಿಡ್ ನಿಯಮ‌ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್‌ನವರು ರಾಜಕಾರಣ ಹಾಗೂ ಕೆಲಸವನ್ನು ಜನರಿಗಾಗಿ ಮಾಡುವುದನ್ನು ಬಿಟ್ಟು ರಾಜಕೀಯಕ್ಕಾಗಿ, ಅಧಿಕಾರದ ಲಾಲಸೆಗಾಗಿ ಮಾಡುತ್ತಿದ್ದಾರೆ ಎಂದು ಹರಿ ಹಾಯ್ದರು.

ಇನ್ನೂ ಚುನಾವಣೆ ಮುಂದೆ ಇದೆ. ಮೇಕೆದಾಟು ಯೋಜನೆ ಜಾರಿ ಬಗ್ಗೆ ಸಿಎಂ ಬೊಮ್ಮಾಯಿಯವರು ಕೆಲಸ ಮಾಡುತ್ತಿದ್ದಾರೆ. ಕಳೆದ ಸಲ ಪಾದಯಾತ್ರೆ ಮಾಡಿದಾಗ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಮುಖಂಡರು ಇನ್ನೂ ಅದೇ ಭ್ರಮೆಯಲ್ಲೇ ಇದ್ದಾರೆ‌. ಕೂಡಲ ಸಂಗಮಕ್ಕೆ ಪಾದಯಾತ್ರೆ ನಡೆಸಿ ಕೃಷ್ಣಾ ಯೋಜನೆ ಅನುಷ್ಠಾನಕ್ಕೆ ಪ್ರತಿ ವರ್ಷ 10 ಸಾವಿರ ಕೋಟಿ ಅನುದಾನ ಕೊಡುವುದಾಗಿ ನೀಡಿದ್ದ ಭರವಸೆ ಏನಾಯ್ತು ಎಂಬುದು ಜನರಿಗೆ ಗೊತ್ತಿದೆ ಎಂದು ಲೇವಡಿ ಮಾಡಿದರು.

ದೇವರ ಮೇಲೆ ಪ್ರಮಾಣ ಮಾಡಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ಗೆ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿಪಿಆರ್ ಮಾಡಿಸಲೂ ಆಗಲಿಲ್ಲ. ಸಮ್ಮಿಶ್ರ ಸರಕಾರ ಇದ್ದಾಗ ಡಿಪಿಆರ್ ಆಗಿದೆ. ಕಾಂಗ್ರೆಸ್‌ಗೆ ಮೇಕೆದಾಟು ಯೋಜನೆ ಬಗ್ಗೆ ಪ್ರಾಮಾಣಿಕ ಕಳಕಳಿ ಇಲ್ಲ. ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡಲು ನಿಂತಿದೆ ಎಂದು ಸಚಿವ ಆಚಾರ್ ಆರೋಪಿಸಿದರು.

ಜನರು ರಾತ್ರಿ ಕಂಡ ಬಾವಿಗೆ ಹಗಲು ಬೀಳುವುದಿಲ್ಲ. ಕಾಂಗ್ರೆಸ್‌ನವರ ನಾಟಕವನ್ನು ಜನರು ಒಪ್ಪುವುದಿಲ್ಲ. ಜನರ ದಾರಿ ತಪ್ಪಿಸುವುದು ಕಾಂಗ್ರೆಸ್‌ಗೆ ಮೊದಲಿನಿಂದಲೂ ಇರುವ ಗುಣ. ಜನರು ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.

error: Content is protected !!