Home Blog Page 3348

ಬಿಜೆಪಿ ಭದ್ರಕೋಟೆ ಛಿದ್ರ: ಭಾರಿ ಅಂತರದ ಗೆಲುವು ಸಾಧಿಸಿಧ ಕಾಂಗ್ರೆಸ್ ಅಭ್ಯರ್ಥಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ 33 ನೇ ವಾರ್ಡ್‌ನ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಭದ್ರಕೋಟಿ ಛಿದ್ರಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಇಮಾಮಹುಸೇನ ಯಲಿಗಾರ 4925 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಎದುರಾಳಿ ಬಿಜೆಪಿ ಅಭ್ಯರ್ಥಿ ಮುರಿಗೆಪ್ಪ ಹೊರಡಿ 1778 ಮತಗಳನ್ನು ಪಡೆದು ಪರಾಜಿತಗೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ನಾರಾಯಣ ಪರಶುರಾಮ ಸೋಳಂಕೆ 412 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಗೊಂಡಿದ್ದಾರೆ.

ಆಪ್ ಅಭ್ಯರ್ಥಿ 153 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ಬಾಷಾಸಾಬ್ ಅಲ್ಲಾಬಕ್ಷ ಮುದಗಲ್ 102 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ರಾಮಚಂದ್ರ ಕಾನಪೇಟ 69 ಮತ, ಅಶೋಕ ಅಸೂಟಿ 60 ಮತ, ಮಂಜುನಾಥ ಹ ಭಜಂತ್ರಿ 37, ಫೈರೋಜ ಅಹ್ಮದ್ ಧಾರವಾಡ 19 ಮತಗಳನ್ನು ಪಡೆದಿದ್ದಾರೆ.

ಒಟ್ಟು 7619 ಮತಗಳು ಚಲಾವಣೆಯಗಿದ್ದು 67 ಮತಗಳು ನೋಟಾ ಅಗಿವೆ. 7552 ಮತಗಳು ಸಿಂಧು ಆಗಿವೆ.

ಕಾಂಗ್ರೆಸ್ ಅಭ್ಯರ್ಥಿ ಇಮಾಮ್ ಹುಸೇನ್ ಯಲಿಗಾರ ಗೆಲುವು ಸಾಧಿಸುತ್ತಿದ್ದಂತೆಯೇ ಕಾರ್ಯಕರ್ತರು ಸಂಭ್ರಮಪಟ್ಟರು.

ಶ್ರೀ ಸಿದ್ಧೇಶ್ವರ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ಹಾಲೇಶ್ ನೇಮಕ

0

ವಿಜಯಸಾಕ್ಷಿ ಸುದ್ದಿ, ಹೂವಿನಹಡಗಲಿ

ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆಯ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಹಾಲೇಶ್ ಹಕ್ಕಂಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಗಿರಿಜಾ ಮಾಲಿಪಾಟೀಲ್ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಹಾಲೇಶ್ ಹಕ್ಕಂಡಿ ಅವರನ್ನು ತಾಲೂಕಿನ ಸಾಹಿತಿಗಳು, ಬರಹಗಾರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ

ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಗೆ ಕುಡಿಯುವ ನೀರಿನ ಪೈಪಲೈನ್ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಭೂಮಿಪೂಜೆ ನೆರವೇರಿಸಿದರು.

15ನೇ ಹಣಕಾಸು ಯೋಜನೆಯಡಿ ಈ ಕಾಲೋನಿಗೆ 99 ಸಾವಿರ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಲಕ್ಷ್ಮಣ ಕಂಬಳಿ, ಬಾಪು ಹಿರೇಗೌಡ್ರ, ಶಂಕ್ರಮ್ಮ ಚಲವಾದಿ, ಗ್ರಾಪಂ ಕಾರ್ಯದರ್ಶಿ ಕೆಂಚಪ್ಪ ಮಾದರ, ಗ್ರಾಮದ ಹಿರಿಯರಾದ ಬಸನಗೌಡ ಮುದಿಗೌಡ್ರ, ಅಡಿವೆಪ್ಪ ಮರಿಯಣ್ಣವರ, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿಕ್ಷಕರು ಸುಂದರ ನಾಡು ನಿರ್ಮಿಸುವ ಶಿಲ್ಪಿಗಳು; ಮುತ್ತು ರಾಯರಡ್ಡಿ

ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ

ಮುಗ್ಧ ಮಕ್ಕಳ ಮನದಲ್ಲಿ ಅಕ್ಷರದ ಬೀಜ ಭಿತ್ತಿ ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ ಸುಂದರ ನಾಡನ್ನು ಕಟ್ಟುವ ಶಿಲ್ಪಿಗಳು ಶಿಕ್ಷಕರು ಎಂದು ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಹೇಳಿದರು.

ಚಿಕ್ಕನರಗುಂದ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ .ವ್ಹಿ.ಜಿ. ಭೋಗಾರ, ಸಹ ಶಿಕ್ಷಕರಾದ ಎ.ಜಿ. ಅರಗುಂಜಿ, ಎಸ್.ಐ. ತಳವಾರ, ಗ್ರಾಪಂ ಕಾರ್ಯದರ್ಶಿ ಕೆಂಚಪ್ಪ ಮಾದರ ಸೇರಿದಂತೆ ಇತರರು ಇದ್ದರು.

ಔಷಧಿ ಬೆಲೆಗಳ ಹೊರೆ ಕಡಿಮೆ, ಕೇಂದ್ರದಿಂದ ಒಳ್ಳೆಯ ಸುದ್ದಿ

0

ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಾಮಾನ್ಯ ಜನರಿಗೆ ಒಳ್ಳೆಯ ಸುದ್ದಿಯನ್ನು ನೀಡಲಿದೆ. ಔಷಧ ಬೆಲೆಗಳ ಹೊರೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಂಡಿದೆ. ವಿಶೇಷವಾಗಿ ಕ್ಯಾನ್ಸರ್, ಕ್ಷಯ ಮತ್ತು ಮಧುಮೇಹವನ್ನು ತಡೆಗಟ್ಟಲು ಬಳಸಲಾಗುವ 39 ವಿಧದ ಔಷಧಗಳು ಮತ್ತು ಲಸಿಕೆಗಳ ಬೆಲೆಗಳು ಶೀಘ್ರದಲ್ಲೇ ಕಡಿಮೆಯಾಗಲಿವೆ. ಇದಕ್ಕೆ ಅನುಗುಣವಾಗಿ, ಕೇಂದ್ರ ಆರೋಗ್ಯ ಸಚಿವಾಲಯವು ರಾಷ್ಟ್ರೀಯ ತುರ್ತು ಔಷಧಿಗಳ ಪಟ್ಟಿಯನ್ನು (NLEM) ಪರಿಷ್ಕರಿಸಿದೆ. ಈ ಪಟ್ಟಿಯಲ್ಲಿ ಸೇರಿಸಲಾದ ಔಷಧಿಗಳ ಬೆಲೆಯನ್ನು ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA) ನಿರ್ಧರಿಸುತ್ತದೆ.
ರಾಷ್ಟ್ರೀಯ ತುರ್ತು ಔಷಧಿಗಳ ಪಟ್ಟಿಗೆ 39 ಔಷಧಿಗಳನ್ನು ಸೇರಿಸುವ ಜೊತೆಗೆ, ಕೇಂದ್ರವು ಇನ್ನೂ 16 ಔಷಧಿಗಳನ್ನು ಪಟ್ಟಿಯಿಂದ ತೆಗೆದುಹಾಕಲು ಪ್ರಸ್ತಾಪಿಸುತ್ತದೆ. ಬ್ಯಾಕ್ಟೀರಿಯಾದ ಸೋಂಕನ್ನು ಕಡಿಮೆ ಮಾಡಲು ಬಳಸುವ ಔಷಧಿಗಳು ಪಟ್ಟಿಯಲ್ಲಿವೆ ಎಂಬ ಮಾಹಿತಿ. ವಿವಿಧ ಕಾರಣಗಳಿಗಾಗಿ ಇವುಗಳನ್ನು NLEM ನಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.

ಮೊಬೈಲ್ ಕಳ್ಳನಿಗೆ ಮಹಿಳೆಯಿಂದ ಧರ್ಮದೇಟು!

ವಿಜಯಸಾಕ್ಷಿ ಸುದ್ದಿ, ಗದಗ

ನಗರದ ವಿಜಯ ಕಲಾ ಮಂದಿರ ರಸ್ತೆಯಲ್ಲಿ ಮೊಬೈಲ್ ಕಳ್ಳನಿಗೆ ಮಹಿಳೆಯೊಬ್ಬರು
ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ
ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ‌ಹೋಟೆಲ್ ಯಜಮಾನಿ ಬಳಿ ಮಹಿಳೆ ಬಂದಿದ್ದಾಗ ಆ ಮಹಿಳೆ ಬಳಿ ಬಂದ ಯುವಕ ಅರ್ಜೆಂಟಾಗಿ ಕಾಲ್ ಮಾಡುವುದಿದೆ ಎಂದು ಹೇಳಿ ಮೊಬೈಲ್ ಪಡೆದು ಎಸ್ಕೇಪ್ ಆಗಿದ್ದ.

ಭಾನುವಾರ ಬಜಾರ್ ನ ಮೊಬೈಲ್‌ ಅಂಗಡಿ ಬಳಿ ದಿಢೀರ್ ಪ್ರತ್ಯಕ್ಷನಾದ ಕಳ್ಳನ ಗುರುತು ಹಿಡಿದ ಮಹಿಳೆ ಅಂಗಿಯ ಕಾಲರ್ ಹಿಡಿದು
ಕಪಾಳಮೋಕ್ಷ ಮಾಡಿದ್ದಾರೆ. ಸ್ಥಳದಲ್ಲಿದ್ದ ಜನರು ಸೇರಿ ಕಳ್ಳನಿಗೆ ಒಂದೆರಡು ಏಟು ಬಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳ್ಳ ಮೊಬೈಲ್ ಅಷ್ಟೆ ಅಲ್ಲದೆ ಬೈಕ್ ಗಳ ನ್ನೂ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಹೇಳುತ್ತಿದ್ದಾರೆ.

ಮೊಬೈಲ್ ಕಳ್ಳನಿಗೆ ಮಹಿಳೆಯಿಂದ ಧರ್ಮದೇಟು

0

ವಿಜಯಸಾಕ್ಷಿ ಸುದ್ದಿ, ಗದಗ
ನಗರದ ವಿಜಯ ಕಲಾ ಮಂದಿರ ರಸ್ತೆಯಲ್ಲಿ ಮೊಬೈಲ್ ಕಳ್ಳನಿಗೆ ಮಹಿಳೆಯೊಬ್ಬರು
ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ
ಘಟನೆ ನಡೆದಿದೆ.
ಎರಡು ದಿನಗಳ ಹಿಂದೆ ‌ಹೋಟೆಲ್ ಯಜಮಾನಿ ಬಳಿ ಮಹಿಳೆ ಬಂದಿದ್ದಾಗ ಆ ಮಹಿಳೆ ಬಳಿ ಬಂದ ಯುವಕ ಅರ್ಜೆಂಟಾಗಿ ಕಾಲ್ ಮಾಡುವುದಿದೆ ಎಂದು ಹೇಳಿ ಮೊಬೈಲ್ ಪಡೆದು ಎಸ್ಕೇಪ್ ಆಗಿದ್ದ.
ಭಾನುವಾರ ಬಜಾರ್ ನ ಮೊಬೈಲ್‌ ಅಂಗಡಿ ಬಳಿ ದಿಢೀರ್ ಪ್ರತ್ಯಕ್ಷನಾದ ಕಳ್ಳನ ಗುರುತು ಹಿಡಿದ ಮಹಿಳೆ ಅಂಗಿಯ ಕಾಲರ್ ಹಿಡಿದು
ಕಪಾಳಮೋಕ್ಷ ಮಾಡಿದ್ದಾರೆ. ಸ್ಥಳದಲ್ಲಿದ್ದ ಜನರು ಸೇರಿ ಕಳ್ಳನಿಗೆ ಒಂದೆರಡು ಏಟು ಬಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳ್ಳ ಮೊಮೈಲ್ ಅಷ್ಟೆ ಅಲ್ಲದೆ ಬೈಕ್ ಗಳ ನ್ನೂ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಹೇಳುತ್ತಿದ್ದಾರೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ; 5 ದಿನಗಳ ಉತ್ಸವಕ್ಕೆ ಮಾತ್ರ ಅವಕಾಶ

0

ಕೊರೊನಾ ಪಾಸಿಟಿವಿಟಿ ದರ ಶೆ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಅವಕಾಶ ಇಲ್ಲ.
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸಾರ್ವಜನಿಕರ ಒತ್ತಡಕ್ಕೆ ಮಣಿದ ಸರ್ಕಾರ ಕೊನೆಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಹಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದೆ.
ಸಿಎಂ ನೇತೃತ್ವದಲ್ಲಿ ಗಣೇಶ ಉತ್ಸವದ ಬಗ್ಗೆ ಇಂದು ನಡೆದ ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ಕಳೆದ ಬಾರಿಯ ಪರಿಸ್ಥಿತಿ ನೋಡಿದಾಗ ಈ ಬಾರಿ ಸ್ವಲ್ಪಮಟ್ಟಿಗೆ ಪರವಾಗಿಲ್ಲ. ಕೊರೊನಾ ಕಡಿಮೆಯಾಗಿದ್ದರೂ ಸಂಪೂರ್ಣ ಹೋಗಿಲ್ಲ. ತಜ್ಞರು ಈ ತಿಂಗಳಲ್ಲಿ ಮೂರನೇ ಅಲೆಯ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಎಚ್ಚರಿಕೆ ಹೆಜ್ಜೆ ಇಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದರು.
ಐದು ದಿನಗಳ ಗಣೇಶೋತ್ಸವಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ನಗರ ಪ್ರದೇಶಗಳಲ್ಲಿ ವಾರ್ಡ್ ಗೆ ಒಂದು, ಹಳ್ಳಿಗಳಲ್ಲಿ ಒಂದು ಇಲ್ಲವೆ, ಸ್ಥಳೀಯ ಆಡಳಿತ ಅನುಮತಿಯೊಂದಿಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.
ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸರ ಅನುಮತಿ ಕಡ್ಡಾಯವಾಗಿದೆ. ಮೂರ್ತಿ ಪ್ರತಿಷ್ಠಾಪಿಸಿದ ಸ್ಥಳಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂರ್ಪಣೆ ನಡೆಸಲು ಅವಕಾಶ ಇರೋದಿಲ್ಲ. 50×50 ಅಡಿ ಅಳತೆಯ ಪೆಂಡಾಲ್ ಹಾಕಲು ಅವಕಾಶ ನೀಡಲಾಗಿದೆ.
ಅಪಾರ್ಟ್ಮೆಂಟ್‌ಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶ ನೀಡಲಾಗಿದ್ದು, ಆದರೆ 20ಕ್ಕಿಂತ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಲಾಗಿದೆ. ಡಿಜೆ ಅಥವಾ ಇತರ ಯಾವುದೇ ವಾದ್ಯಗಳನ್ನು ಬಳಸಲು ಅವಕಾಶ ಇಲ್ಲ.
ಗಣೇಶ ಮೂರ್ತಿ ಪ್ರತಿಷ್ಠಾನೆ ಮಂಡಳಿ ಸದಸ್ಯರಿಗೆ ಕೋವಿಡ್
ವ್ಯಾಕ್ಸಿನ್ ಕಡ್ಡಾಯವಾಗಿದೆ. ಆಯಾ ಸ್ಥಳೀಯ ಆಡಳಿತಗಳು ವ್ಯಾಕ್ಸಿನ್ ಹಾಕಲು ವ್ಯವಸ್ಥೆ ಮಾಡಬೇಕು. ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡಲಾಗಿದ್ದು, ಆದರೆ, 20ಕ್ಕಿಂತ ಹೆಚ್ಚು ಜನರು ಮಾತ್ರ ಸೇರುವಂತಿಲ್ಲ.
ಗಡಿಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2ರಷ್ಟು ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಉತ್ಸವಕ್ಕೆ ಅವಕಾಶ ನೀಡಲಾಗಿದ್ದು, ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಆಚರಣೆಗೆ ಅವಕಾಶ ಇಲ್ಲ. ಶಾಲಾ ಕಾಲೇಜುಗಳಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧಿಸಲಾಗಿದೆ. ನಗರಗಳಲ್ಲಿ ನಿಗದಿತ ಸ್ಥಳಗಳಲ್ಲಿ, ಗ್ರಾಮೀಣ ಭಾಗದಲ್ಲಿ ಕೆರೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲು ಅವಕಾಶ ನೀಡಲಾಗಿದೆ.
ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೂ ಯಾವುದೇ ಚಟುವಟಿಕೆ ನಡೆಸುವಂತಿಲ್ಲ. ಪರಿಸರ ಪ್ರೇಮಿ ಗಣೇಶ ಮೂರ್ತಿ ಮಾತ್ರ ಕೂರಿಸಬೇಕು. ಇನ್ನುಳಿದಂತೆ ಪರಿಸರ ಪ್ರೇಮಿ ಮೂರ್ತಿಗಳ ಪ್ರತಿಷ್ಠಾಪನೆ, ಸಾರ್ವಜನಿಕ ಮೂರ್ತಿಗಳು 4 ಅಡಿ ಎತ್ತರ ಮೀರುವಂತಿಲ್ಲ ಮುಂತಾದ ಹಿಂದಿನ ನಿಯಮಗಳೂ ಅನ್ವಯವಾಗಲಿವೆ ಎಂದು ಹೇಳಿದ ಅವರು, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಮೊಬೈಲ್ ಕಳ್ಳನಿಗೆ ಮಹಿಳೆಯಿಂದ ಧರ್ಮದೇಟು

0

ವಿಜಯಸಾಕ್ಷಿ ಸುದ್ದಿ, ಗದಗ
ನಗರದ ವಿಜಯ ಕಲಾ ಮಂದಿರ ರಸ್ತೆಯಲ್ಲಿ ಮೊಬೈಲ್ ಕಳ್ಳನಿಗೆ ಮಹಿಳೆಯೊಬ್ಬರು
ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಎರಡು ದಿನಗಳ ಹಿಂದೆ ‌ಹೋಟೆಲ್ ಯಜಮಾನಿ ಬಳಿ ಮಹಿಳೆ ಬಂದಿದ್ದಾಗ ಆ ಮಹಿಳೆ ಬಳಿ ಬಂದ ಯುವಕ ಅರ್ಜೆಂಟಾಗಿ ಕಾಲ್ ಮಾಡುವುದಿದೆ ಎಂದು ಹೇಳಿ ಮೊಬೈಲ್ ಪಡೆದು ಎಸ್ಕೇಪ್ ಆಗಿದ್ದ ಈತ.
ಭಾನುವಾರ ಬಜಾರ್ ನ ಮೊಬೈಲ್‌ ಅಂಗಡಿ ಬಳಿ ದಿಢೀರ್ ಪ್ರತ್ಯಕ್ಷನಾದ ಕಳ್ಳನ ಗುರುತು ಹಿಡಿದ ಮಹಿಳೆ ಅಂಗಿಯ ಕಾಲರ್ ಹಿಡಿದು
ಕಪಾಳಮೋಕ್ಷ ಮಾಡಿದ್ದಾರೆ. ಸ್ಥಳದಲ್ಲಿದ್ದ ಜನರು ಸೇರಿ ಕಳ್ಳನಿಗೆ ಒಂದೆರಡು ಏಟು ಬಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳ್ಳ ಮೊಮೈಲ್ ಅಷ್ಟೆ ಅಲ್ಲದೆ ಬೈಕ್ ಗಳ ನ್ನೂ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಹೇಳುತ್ತಿದ್ದಾರೆ.

11 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

0

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಕೌಟುಂಬಿಕ ಕಲಹದಿಂದ ಮನನೊಂದು 11 ತಿಂಗಳ ಮಗುವಿನೊಂದಿಗೆ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಮಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ.

ಕಲ್ಪನಾ ಮೋಹನ್ ಗುಡಾಜಿ (21), ಭೂಮಿಕಾ (11 ತಿಂಗಳ) ಮೃತರು. ಎರಡು ವರ್ಷದ ಹಿಂದಷ್ಟೆ ಬಿರನೋಳಿ ಗ್ರಾಮದ ಕಲ್ಪನಾಳನ್ನು ಮಣ್ಣಿಕೇರಿಯ ಮೋಹನ್ ಎಂಬಾತನೊoದಿಗೆ ವಿವಾಹ ಮಾಡಿಕೊಡಲಾಗಿತ್ತು.

ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಹಿಳೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಪತಿಯ ಜೊತೆಗೆ ವೈಮನಸ್ಸು ಹೊಂದಿದ್ದಳು. ಈ ಕಾರಣಕ್ಕಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಗ್ರಾಮಸ್ಥರ ಸಹಾಯದೊಂದಿಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ.

error: Content is protected !!