Home Blog Page 3364

ಬಿಜೆಪಿಯಿಂದ ನಿತ್ಯ ಪಿಕ್ ಪಾಕೆಟ್ ನಡೀತಾ ಇದೆ: ಡಿಕೆಶಿ

0

-ಇನ್ನೊಬ್ಬರನ್ನ ಟೀಕೆ ಮಾಡೊ ಬದಲು ನಮ್ಮನೆ ಸುಭದ್ರವಾಗಿ ಕಟ್ಟೋಣ

ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ರಾಜ್ಯ, ದೇಶದಲ್ಲಿ ನಿತ್ಯ ಪಿಕ್ ಪಾಕೆಟ್ ನಡೀತಾ ಇದೆ. ಪೆಟ್ರೋಲ್, ಗ್ಯಾಸ್ ಬೆಲೆ ಹೆಚ್ಚಳ ಮಾಡುವ ಮೂಲಕ ಆಡಳಿತದಲ್ಲಿರುವ ಸರಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಕೊಪ್ಪಳದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್‌ನ ಡಿಜಿಟಲ್ ಸದಸ್ಯತ್ವ ನೋಂದಣಿಯ ಪ್ರಗತಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ರಾಜ್ಯದಲ್ಲೇ ಹೆಚ್ಚಾಗಿರುವುದು ಸಂತೋಷದ ಸಂಗತಿ.‌ ಅದರಲ್ಲೂ ಗಂಗಾವತಿ ವಿಧಸನಸಭಾ ಕ್ಷೇತ್ರ, ರಾಮನಗರವನ್ನೇ ಮೀರಿಸಿದೆ ಎಂದರೆ ಜನ ಬಿಜೆಪಿ ಆಡಳಿತದಿಂದ ಎಷ್ಟು ರೋಸಿ ಹೋಗಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು ಎಂದರು.

ಬಿಜೆಪಿಯದ್ದು ಭ್ರಷ್ಟ ಸರಕಾರ. ಎಲ್ಲದರಲ್ಲೂ ಪರ್ಸಂಟೇಜ್. ಜನರಿಗೆ ಕರೆಂಟ್ ಕಟ್. ಜನರ ಜೇಬೂ ಕಟ್. ಈಗ ಪುನೀತ್ ಸಿನಿಮಾ ಜೇಮ್ಸ್ ಕಿತ್ತು ಹಾಕಲು ಹೊರಟಿದ್ದಾರೆ. ಇದು ಕನ್ನಡದ ಸ್ವಾಭಿಮಾನದ ಪ್ರಶ್ನೆ. ಬಿಜೆಪಿ ಬೆಲೆ ತೆರಬೇಕಾಗುತ್ತೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಇವತ್ತಿನವರೆಗೆ ಕೊಪ್ಪಳ ಜಿಲ್ಲೆಯಲ್ಲಿ 1,84,302 ಕಾಂಗ್ರೆಸ್‌ ಡಿಜಿಟಲ್ ಸದಸ್ಯತ್ವ ನೋಂದಣಿಯಾಗಿದೆ. ಅತಿ ಹೆಚ್ಚು ಜನರನ್ನು‌ ನೋಂದಣಿ ಮಾಡಿದವರನ್ನು ಇಲ್ಲೇ ಸನ್ಮಾನ ಮಾಡುವುದು ದೊಡ್ಡ ವಿಷಯವಲ್ಲ, ಇನ್ನೂ 7 ದಿನ ಸಮಯಾವಕಾಶ ಇದೆ. ಈ ಸಮಯವನ್ನು ಕಾಂಗ್ರೆಸ್ ಬಂಧುಗಳು ಸದುಪಯೋಗ ಪಡೆದುಕೊಳ್ಳಬೇಕು. ಅತಿ ಹೆಚ್ಚು ಸದಸ್ಯತ್ವ ನೋಂದಣೊ ಮಾಡಿಸಿದವರನ್ನು ರಾಜಧಾನಿ‌ ಬೆಂಗಳೂರಿಗೆ ಆಹ್ವಾನಿಸಿ ಗೌರವಿಸುವುದಾಗಿ ಭರವಸೆ ನೀಡಿದರು.

ಅವರಿವರನ್ನು ಟೀಕೆ ಮಾಡುವ ಬದಲು ಮೊದಲಿಗೆ ನಮ್ಮ ಮನೆಯನ್ನು ಸುಭದ್ರವಾಗಿ ಕಟ್ಟೋಣ. ಆನಂತರ ಇನ್ನೊಬ್ಬರ ಮನೆ ವಿಚಾರದ ಬಗ್ಗೆ ಮಾತಾಡೋಣ. ಮುಂಬರುವ 7 ದಿನಗಳಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ 1 ಲಕ್ಷ ಸದಸ್ಯತ್ವ ನೋಂದಣಿಯಾಗಲಿ. ಬಿಜೆಪಿ, ದಳ ಸೇರಿದಂತೆ ಎಲ್ಲ‌ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಕರೆ ತನ್ನಿ. ನಮ್ಮಷ್ಟಕ್ಕೆ ನಾವೇ ಕಾಲು ಎಳೆಯದಿದ್ದರೆ ಜಿಲ್ಲೆಯ 5ಕ್ಕೆ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ ಎಂದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಸದಸ್ಯತ್ವ ನೋಂದಣಿ ಮಾಡಿಸಿದ ಗಂಗಾವತಿ ವಿಧಾನಸಭಾ ಕ್ಷೇತ್ರದ ಮುಖಂಡರು, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಮಾತನಾಡಿ, ಸದಸ್ಯತ್ವ ನೋಂದಣಿಗೆ‌ಂದು ಮನೆ ಮನೆಗೆ‌ ತೆರಳುವ ನಮ್ಮ ಕಾಂಗ್ರೆಸ್ ಮುಖಂಡರಿಗೆ ಜನರಿಂದ ಅದ್ದೂರಿ ಸ್ವಾಗತ ಸಿಗುತ್ತಿದೆ. ಬಿಜೆಪಿಯವರು ಜಾತಿ ಹೆಸರಿನಲ್ಲಿ ಮೋಸ ಮಾಡಿದ್ದಾರೆ ಎಂದು ಹೇಳಿ ಸಂತೋಷದಿಂದ ಕಾಂಗ್ರೆಸ್ ಸದಸ್ಯತ್ವ ಪಡೆಯುತ್ತಿದ್ದಾರೆ. ಸದಸ್ಯತ್ವ ನೋಂದಣಿಯ ಸಾಧನೆಯಲ್ಲಿ‌ ಪಾಲ್ಗೊಂಡ ಎಲ್ಲರನ್ನೂ ಅಭಿನಂದಿಸುವುದಾಗಿ ತಿಳಿಸಿದರು.

ಶಾಸಕ ರಾಘವೇಂದ್ರ ಹಿಟ್ನಾಳ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಪ್ರಾಸ್ತಾವಿಕ ಮಾತನಾಡಿದರು. ಕೃಷ್ಣ ಇಟ್ಟಂಗಿ ನಿರೂಪಿಸಿದರು. ಕಾಟನ್ ಪಾಷಾ ವಂದಿಸಿದರು.


ಡಿ.ಕೆ ಬದಲು ಎಚ್.ಡಿ!!
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ‌ ಮಾತನಾಡುವಾಗ ಜಿಲ್ಲಾಧ್ಯಕ್ಷ ತಂಗಡಗಿ ಸಮಯ ಬಹಳ ಇಲ್ಲ ಎಂದು‌ ಕಿವಿಯಲ್ಲಿ ಹೇಳಿದ್ದೇ ತಡ, ಕ್ಷಣ ಅವಕ್ಕಾದ ಅನ್ಸಾರಿ. ಸಹಕಾರ ನೀಡಿದ ಡಿ.ಕೆ.ಯವರಿಗೆ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳುವಾಗ ಡಿ.ಕೆ. ಬದಲು ಎಚ್.ಡಿ. ಎಂದು ಉಚ್ಛರಿಸಿ, ಆನಂತರ ಸರಿಪಡಿಸಿಕೊಂಡರು.


4 ಗಂಟೆ ಲೇಟ್!:
ಮಧ್ಯಾಹ್ನ 3 ಗಂಟೆಗೆ ಆರಂಭವಾಗಬೇಕಿದ್ದ ಕಾಂಗ್ರೆಸ್ ಕಾರ್ಯಕ್ರಮ ಶುರುವಾಗಿದ್ದು ಬರೋಬ್ಬರಿ 4 ಗಂಟೆ ತಡವಾಗಿ. ಇದಕ್ಕಾಗಿ ಡಿ.ಕೆ.ಶಿವಕುಮಾರ್‌ ಕ್ಷಮಾಪಣೆ ಕೇಳಿದರು.


ಕಾರ್ಯಕರ್ತರಿಂದ ಉದ್ಘಾಟನೆ:
ಸಾಮಾನ್ಯವಾಗಿ ಇಂಥ ಕಾರ್ಯಕ್ರಮಗಳನ್ನು ಪಕ್ಷದ ವರಿಷ್ಠರು ಉದ್ಘಾಟಿಸುತ್ತಾರೆ. ಆದರೆ ಕೊಪ್ಪಳದ ಕಾರ್ಯಕ್ರಮವನ್ನು ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅತಿ ಹೆಚ್ಚು ನೋಂದಣಿ ಮಾಡಿಸಿದ ಜಿಲ್ಲೆಯ 5 ಕ್ಷೇತ್ರಗಳ ಕಾರ್ಯಕರ್ತರಿಂದ ಉದ್ಘಾಟಿಸಿದ್ದು ವಿಶೇಷವಾಗಿತ್ತು.

ಹಾಫ್ ನಾಲೆಡ್ಜ್ ಇಸ್ ಡೇಂಜರ್: ರಾಯರಡ್ಡಿ

0

ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಹಾಫ್ ನಾಲೆಡ್ಜ್ ಇಸ್ ಡೇಂಜರ್. ಮಂತ್ರಿಯಾದವರಿಗೆ ಯಾವುದೇ ವಿಷಯದ ಬಗ್ಗೆ ಹಾಫ್ ನಾಲೆಡ್ಜ್ ಇರಬಾರದು. ಅದು ರಾಜ್ಯಕ್ಕಾಗುವ ಅವಮಾನ. ಹಾಲಪ್ಪ ಆಚಾರ್ ಈಗ ಬರೀ ಶಾಸಕ ಅಲ್ಲ, ಮಂತ್ರಿಯಾಗಿದ್ದಾರೆ. ಮಾತನಾಡುವಾಗ ಅರ್ದಂಬರ್ಧ ಮಾತನಾಡಬಾರದು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಲೇವಡಿ ಮಾಡಿದರು.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ ಬಿ ಸ್ಕೀಮ್‌ಗೆ ಸಂಬಂಧಿಸಿದಂತೆ 1997-98ರಿಂದಲೂ ಹೋರಾಟ ಮಾಡುತ್ತಾ ಬಂದಿದ್ದೇನೆ. ಈಗಲೂ ಅಧಿಕೃತ ದಾಖಲೆಗಳು ನನ್ನ ಬಳಿ ಇವೆ. ಕೊಪ್ಪಳ ಭಾಗಕ್ಕೆ ಬಿ ಸ್ಕೀಂನಡಿ ನೀರಾವರಿ ಮಾಡಲು ಅಡ್ಡಿಯಾಗಿದ್ದೇ ಬಿಜೆಪಿ. ತಮ್ಮ ತಪ್ಪನ್ನು‌ ಮರೆ ಮಾಚಲು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವ ಕೆಲಸಕ್ಕೆ ಕೈ ಹಾಕಿದೆ ಎಂದು ರಾಯರಡ್ಡಿ ಕಿಡಿ ಕಾರಿದರು.

ಕೃಷ್ಣಾ ನ್ಯಾಯಾಧೀಕರಣದ ನೀರನ್ನು ಈ ಭಾಗಕ್ಕೆ ಹರಿಸಲು ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಮೊದಲು ಒತ್ತಾಯಿಸಿದ್ದೇ ನಾನು ಎಂದ ಅವರು ಹೇಳಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಈ ಬಗ್ಗೆ ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ತೆರಳಲು ಕರೆ ನೀಡಿದರೆ, ವಿರೋಧಿಸಿದ್ದ ಬಿಜೆಪಿ, ಈಗ ಚುನಾವಣೆ ಹತ್ತಿರವಾಗುತ್ತಿದ್ದು, ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಬಿಜೆಪಿ ಸರಕಾರಕ್ಕೆ ಈಗ ಬಂದಿದೆ. ಬಿಜೆಪಿಗೆ ಈಗಲಾದರೂ ಬುದ್ಧಿ ಬಂದಿದೆ. ಆದರೆ ತುಂಬಾ ತಡವಾಗಿ‌ ಬುದ್ಧಿ ಬಂದಿದೆ. ಪರವಾಗಿಲ್ಲ. ಈ ವಿಷಯದಲ್ಲಿ ಬಿಜೆಪಿಯ ನಿಲುವನ್ನು ಸ್ವಾಗತಿಸುವುದಾಗಿ ರಾಯರಡ್ಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಪಂ ಮಾಜಿ ಸದಸ್ಯರಾದ ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು ಹಾಗೂ ವಕ್ತಾರ ರವಿ ಕುರಗೋಡ ಇದ್ದರು.

ಸಾಮರಸ್ಯ ಕೆಡಿಸೋದೇ ಬಿಜೆಪಿ ಕೆಲಸ: ತಂಗಡಗಿ

0

ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಬಿಜೆಪಿಯವರು ಮಾಡಿದ ಒಂದಾದರೂ ಉತ್ತಮ ಕೆಲಸ ಇದೆಯಾ? ರಾಜ್ಯದಲ್ಲಿ ಸಾಮರಸ್ಯ ಕೆಡಿಸೋದು, ಜಾತಿಗಳ ನಡುವೆ ಜಗಳ ಹಚ್ಚೋದೇ ಬಿಜೆಪಿ ಕೆಲಸ ಎಂದು ಮಾಜಿ ಸಚಿವ, ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ‌ ತಂಗಡಗಿ ಕಿಡಿ‌ಕಾರಿದರು.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹಿಂದು ದೇವಸ್ಥಾನದ ಬಳಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರುವುದು ಸಮಂಜಸವಲ್ಲ, ಇಷ್ಟು ದಿನ ಇರದ ಕಾನೂನು, ಕ್ರಮ ಈಗೇಕೆ ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಅವರಿಗೆ ಅಭಿವೃದ್ಧಿ ಬಗ್ಗೆ‌ ಕಿಂಚಿತ್ತೂ ಕಾಳಜಿ ಇಲ್ಲ. ಇಂಥ ಕಾರ್ಯಗಳ ಮೂಲಕ ಜನರನ್ನು ಒಡೆದು ಆಳುವ ನೀತಿಗೆ ಕೈ ಹಾಕಿರುವ ಬಿಜೆಪಿ, ಮುಂಬರುವ ಚುನಾವಣೆಯಲ್ಲಿ ತಕ್ಕ ಶಾಸ್ತಿ ಅನುಭವಿಸುತ್ತದೆ ಎಂದು ಟೀಕಿಸಿದರು.

ಕರ್ನಾಟಕದ ಹೆಮ್ಮೆಯ ನಟ ಡಾ.ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ಅತ್ಯುತ್ತಮವಾಗಿ ಪ್ರದರ್ಶನ ಕಾಣುತ್ತಿದ್ದರೂ ಥೇಟರ್‌ಗಳಲ್ಲಿ ಜೇಮ್ಸ್ ಸಿನಿಮಾ ತೆಗೆದು ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಪ್ರದರ್ಶನಕ್ಕೆ ಸಿಎಂ ಸೇರಿದಂತೆ ಬಿಜೆಪಿಯವರು ಅತ್ಯುತ್ಸಾಹ ತೋರುತ್ತಿದ್ದಾರೆ. ಇದು ದಿವಂಗತ ನಟ ಡಾ.ಪುನೀತ್‌ಗೆ ಮಾಡುವ ಅವಮಾನ. ಈಗಾಗಲೇ ರಾಜ್ಯಾದ್ಯಂತ ಪುನೀತ್ ಅಭಿಮಾನಿಗಳು ಸರಕಾರದ ವಿರುದ್ಧ ಬಂಡೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಪಾಠ ಕಲಿಸಲು ಜನ ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸದಸ್ಯತ್ವ ನೋಂದಣಿಯಲ್ಲಿ ರಾಜ್ಯಕ್ಕೆ ಪ್ರಥಮ:
ಕಾಂಗ್ರೆಸ್ ಸದಸ್ಯತ್ವ ನೋಂದಣಿಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದು ತಂಗಡಗಿ ತಿಳಿಸಿದರು.

ಮಾರ್ಚ್ 22ರ ರಾತ್ರಿಯವರೆಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ 22,462, ಕನಕಗಿರಿ ತಾಲೂಕಿನಲ್ಲಿ 49,118, ಗಂಗಾವತಿ ತಾಲ್ಲೂಕಿನಲ್ಲಿ 61,544, ಕೊಪ್ಪಳ ತಾಲೂಕಿನಲ್ಲಿ 19,703 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 20,932 ಸದಸ್ಯತ್ವ ನೋಂದಣಿಯಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 1,73,459 ಜನ ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.

ಮಾರ್ಚ್ 24ರಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಕಾಂಗ್ರೆಸ್ ಸದಸ್ಯತ್ವ ನೋಂದಣಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 24ರ ಮಧ್ಯಾಹ್ನ 3 ಗಂಟೆಗೆ ಕೊಪ್ಪಳದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಪಕ್ಷದ ವರಿಷ್ಠರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ, ವಕ್ತಾರ ರವಿ ಕುರಗೋಡ, ಜಿಪಂ ಮಾಜಿ ಸದಸ್ಯ ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು ಇತರರು ಇದ್ದರು.

ಹಾಫ್ ನಾಲೆಡ್ಜ್ ಇಸ್ ಡೇಂಜರ್: ರಾಯರಡ್ಡಿ

0

ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಹಾಫ್ ನಾಲೆಡ್ಜ್ ಇಸ್ ಡೇಂಜರ್. ಮಂತ್ರಿಯಾದವರಿಗೆ ಯಾವುದೇ ವಿಷಯದ ಬಗ್ಗೆ ಹಾಫ್ ನಾಲೆಡ್ಜ್ ಇರಬಾರದು. ಅದು ರಾಜ್ಯಕ್ಕಾಗುವ ಅವಮಾನ. ಹಾಲಪ್ಪ ಆಚಾರ್ ಈಗ ಬರೀ ಶಾಸಕ ಅಲ್ಲ, ಮಂತ್ರಿಯಾಗಿದ್ದಾರೆ. ಮಾತನಾಡುವಾಗ ಅರ್ದಂಬರ್ಧ ಮಾತನಾಡಬಾರದು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಲೇವಡಿ ಮಾಡಿದರು.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ ಬಿ ಸ್ಕೀಮ್‌ಗೆ ಸಂಬಂಧಿಸಿದಂತೆ 1997-98ರಿಂದಲೂ ಹೋರಾಟ ಮಾಡುತ್ತಾ ಬಂದಿದ್ದೇನೆ. ಈಗಲೂ ಅಧಿಕೃತ ದಾಖಲೆಗಳು ನನ್ನ ಬಳಿ ಇವೆ. ಕೊಪ್ಪಳ ಭಾಗಕ್ಕೆ ಬಿ ಸ್ಕೀಂನಡಿ ನೀರಾವರಿ ಮಾಡಲು ಅಡ್ಡಿಯಾಗಿದ್ದೇ ಬಿಜೆಪಿ. ತಮ್ಮ ತಪ್ಪನ್ನು‌ ಮರೆ ಮಾಚಲು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವ ಕೆಲಸಕ್ಕೆ ಕೈ ಹಾಕಿದೆ ಎಂದು ರಾಯರಡ್ಡಿ ಕಿಡಿ ಕಾರಿದರು.

ಕೃಷ್ಣಾ ನ್ಯಾಯಾಧೀಕರಣದ ನೀರನ್ನು ಈ ಭಾಗಕ್ಕೆ ಹರಿಸಲು ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಮೊದಲು ಒತ್ತಾಯಿಸಿದ್ದೇ ನಾನು ಎಂದ ಅವರು ಹೇಳಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಈ ಬಗ್ಗೆ ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ತೆರಳಲು ಕರೆ ನೀಡಿದರೆ, ವಿರೋಧಿಸಿದ್ದ ಬಿಜೆಪಿ, ಈಗ ಚುನಾವಣೆ ಹತ್ತಿರವಾಗುತ್ತಿದ್ದು, ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಬಿಜೆಪಿ ಸರಕಾರಕ್ಕೆ ಈಗ ಬಂದಿದೆ. ಬಿಜೆಪಿಗೆ ಈಗಲಾದರೂ ಬುದ್ಧಿ ಬಂದಿದೆ. ಆದರೆ ತುಂಬಾ ತಡವಾಗಿ‌ ಬುದ್ಧಿ ಬಂದಿದೆ. ಪರವಾಗಿಲ್ಲ. ಈ ವಿಷಯದಲ್ಲಿ ಬಿಜೆಪಿಯ ನಿಲುವನ್ನು ಸ್ವಾಗತಿಸುವುದಾಗಿ ರಾಯರಡ್ಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಪಂ ಮಾಜಿ ಸದಸ್ಯರಾದ ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು ಹಾಗೂ ವಕ್ತಾರ ರವಿ ಕುರಗೋಡ ಇದ್ದರು.

ಗದಗ ವಿಧಾನಸಭಾ ಮತಕೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ?: ಮಾಧ್ಯಮದವರ ಮುಂದೆ ಹೇಳಿದ್ದೇನು?

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ ವಿಧಾನಸಭಾ ಮತಕ್ಷೇತ್ರದಿಂದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರದ ಕುರಿತು
ಗದಗ ಜಿಲ್ಲಾ ಬಿಜೆಪಿಯಲ್ಲಿ ತೀವ್ರ ಚರ್ಚೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಪಷ್ಟನೆ‌ ನೀಡಿದ್ದಾರೆ.

ಬುಧವಾರ ಗದಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು,
224 ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಇದ್ದರೆ ನಿಲ್ಲಬಹುದಿತ್ತು. ಉಪಚುನಾವಣೆ ವೇಳೆಯೂ ನನ್ನ ಹೆಸರು ಕೇಳಿ ಬರುತ್ತಿತ್ತು. ಬೇರೆ ಕಡೆ ಹೋದಾಗಲೂ ಈ ಮಾತು ಕೇಳಿ ಬರುತ್ತಿವೆ. ಆದರೆ, ರಾಜ್ಯದ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಸಂಘಟನೆ ಮಾಡುತ್ತಿದ್ದೇನೆ. ಉಳಿದಿರುವ ವಿಷಯದ ಬಗ್ಗೆ ನಾನು ಮಾತನಾಡುವುದಿಲ್ಲ. ಆ ಕುರಿತು ನಮ್ಮ ಹಿರಿಯರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೈಕೋರ್ಟ್ ತೀರ್ಪಿನ ವಿರುದ್ಧ ಬಂದ್ ಆಚರಣೆ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಪರೋಕ್ಷವಾಗಿ ಈ ಬೆಳವಣಿಗೆಗೆ ಬೆಂಬಲ ನೀಡಿದ ಅವರು, ಮುಸ್ಲಿಂ ಸಮುದಾಯದ ವ್ಯಾಪಾರಿಗಳು ಅಂಗಡಿ ಮುಗ್ಗಟ್ಟುಗಳ ಬಾಗಿಲು ಹಾಕಿದರೂ ಈ ರೀತಿಯ ಪ್ರಕ್ರಿಯೆಗಳಿಂದ ಬೇರೆ ಬೇರೆ ಬೆಳವಣಿಗೆಗಳು ನಡೆಯುತ್ತಿವೆ. ಹೈಕೋರ್ಟ್ ತೀರ್ಪಿನ ವಿರುದ್ಧ ನಡೆದುಕೊಂಡ ರೀತಿಯೇ ಇದಕ್ಕೆಲ್ಲ ಕಾರಣವಾಗಿದೆ. ಹಿಜಾಬ್ ನಂತರ ಆಗುತ್ತಿರುವ ಬೆಳವಣಿಗೆ ಯಾರಿಗೂ ಶೋಭೆ ತರುವಂತದ್ದಲ್ಲ. ಹಿಜಾಬ್ ವಿಚಾರದಲ್ಲಿ ಮಕ್ಕಳ ಶಿಕ್ಷಣ ಹಾಳು ಮಾಡುವ ವ್ಯವಸ್ಥೆ ನಡೆಯಿತು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದವರು ಹತಾಸೆಯಾಗಿದ್ದಾರೆ.
ಒಂದು ತಿಂಗಳಿನಿಂದ ಅಧಿಕಾರಕ್ಕೆ ಬಂದೇ ಬಿಟ್ವಿ ಎನ್ನುವ ಉತ್ಸಾಹದಲ್ಲಿದ್ದರು. ಆದರೆ, ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಮುಖಂಡರಿಗೆ ನಿದ್ದೆ ಬರುತ್ತಿಲ್ಲ. ಬೇರೆ ಬೇರೆ ವಿಚಾರದಲ್ಲಿಯೂ ಗೊಂದಲದಲ್ಲಿದ್ದಾರೆ. ಕರ್ನಾಟಕವೂ ಸಹ ಕಾಂಗ್ರೆಸ್ ಮುಕ್ತವಾಗಲು ಬೇರೆ ಯಾರೂ ಬೇಡ ಅವರ ಮುಖಂಡರೇ ಸಾಕು ಎಂದು‌ ಕಿಚಾಯಿಸಿದರು.

ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಎಲ್ಲ ಧರ್ಮದವರು ಶಾಂತಿಯಿಂದ ಇರಬೇಕೆನ್ನುವುದು ಎಲ್ಲರಿಗೂ ಇದೆ. ಆದರೆ, ಹೈಕೋರ್ಟ್ ನಿರ್ಧಾರ ಬಂದ ನಂತರವೂ ಈ ರೀತಿಯ ಚಟುವಟಿಕೆಗಳನ್ನು ಯಾರೂ ಒಪ್ಪುವಂತದ್ದಲ್ಲ.
ಎಲ್ಲರೂ ಸಮಾಧಾನದಿಂದ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಸಚಿವ ಸಿ.ಸಿ ಪಾಟೀಲ ಮನೆಯಲ್ಲಿ ನಾಗರಹಾವು ಪ್ರತ್ಯಕ್ಷ!

ವಿಜಯಸಾಕ್ಷಿ ಸುದ್ದಿ, ಗದಗ:

ಹಾವು..! ಈ ಪದ ಕಿವಿಗೆ ಬೀಳುತ್ತಲೇ ಮೈ ಝುಮ್ಮೆನಿಸುತ್ತದೆ. ಒಂದು ಕ್ಷಣ ಮೈ ಮೇಲಿನ ರೋಮಗಳು ಎದ್ದು ನಿಲ್ಲುತ್ತವೆ. ಹಾವು ಕಂಡ ಭಯದಲ್ಲೇ ಹೊಡೆದು ಕೊಲ್ಲಬೇಕೆಂದು ಹಪಹಪಿಸುವವರೇ ಹೆಚ್ಚು. ಕಲ್ಲು ನಾಗರನಿಗೆ ಕೈಮುಗಿದು ಹಾಲೆರೆಯುವವರು, ನಿಜ ನಾಗರ ಕಂಡರೆ ಹೊಡೆಯುವವರ ಮಧ್ಯೆ ಹಾವುಗಳ ರಕ್ಷಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ಸರಿಸೃಪಗಳ ಸಂರಕ್ಷಣೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರೆ ತಪ್ಪಾಗಲಾರದು.

ಹೌದು, ರಾಜ್ಯ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ ನರಗುಂದದ ಮನೆಯ ಕಂಪೌಂಡ್ ಒಳಗಡೆ ಸೋಮವಾರ ಹಾವು ಪ್ರತ್ಯಕ್ಷವಾಗಿದ್ದು, ಗೃಹ ರಕ್ಷಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ನರಗುಂದ ಪಟ್ಟಣದಲ್ಲಿರುವ ಪಿಡಬ್ಲ್ಯೂಡಿ ಸಚಿವರ ಮನೆಯ ಕಂಪೌಂಡ್‌ನಲ್ಲಿ ಕಂಡ ೩-೪ ಅಡಿ ಉದ್ದದ ನಾಗರಹಾವನ್ನು ಹೋಮ್‌ಗಾರ್ಡ್ ಸಿಬ್ಬಂದಿ ಬುಡ್ಡಾ ಸುರೇಬಾನ ಸೆರೆ ಹಿಡಿದು, ಸುರಕ್ಷಿತ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರೆ. ಅದರಂತೆ, ಸ್ನೇಕ್ ಬುಡ್ಡಾ ಅವರು ಕೇರೆ ಹಾವು (ರೆಡ್ ಸ್ನೇಕ್) ಸೇರಿದಂತೆ ಸೋಮವಾರ ಒಂದೇ ದಿನ ವಿವಿಧ ಜಾತಿಯ ಮೂರು ಹಾವುಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿರುವ ಬುಡ್ಡಾ ಸುರೇಬಾನ ಅವರ ಸ್ನೇಕ್ ರೆಸ್ಕ್ಯೂ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಾಬಲಕಟ್ಟಿ‌ ಜಾತ್ರಾ ಮಹೋತ್ಸವಕ್ಕೆ ಸನ್ನಿ ಲಿಯೋನ್ ಅಭಿಮಾನಿಗಳಿಂದ “ವೆಲ್‌ಕಮ್ ಫ್ಲೆಕ್ಸ್”

0

-ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದಲ್ಲಿ ಸನ್ನಿ ಲಿಯೋನ್ ಅಭಿಮಾನಿ ಬಳಗ.

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಾತ್ರಾ ಮಹೋತ್ಸವ ಎಂದ ಮೇಲೆ ಭಕ್ತರು, ಗಣ್ಯರು ತಮ್ಮೂರ ಜಾತ್ರೆಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕೋದು ಕಾಮನ್. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಡಿಯ ಶ್ರೀ ಶರಣಬಸವೇಶ್ವರ ಜಾತ್ರಾ ನಿಮಿತ್ತ ಗ್ರಾಮದಲ್ಲಿ ಹಲವು ಬ್ಯಾನರ್‌ಗಳನ್ನು ಹಾಕಲಾಗಿದೆ. ಗಮನ ಸೆಳೆದ ಬ್ಯಾನರ್ ಎಂದರೆ ಸನ್ನಿ ಲಿಯೊನ್ ಅಭಿಮಾನಿಗಳು ಸ್ವಾಗತ ಕೋರಿದ ಫ್ಲೆಕ್ಸ್!!

ಇಂದು ಹಾಬಲಕಟ್ಟಿ ಗ್ರಾಮದಲ್ಲಿ ಜಾತ್ರೆಯ ನಿಮಿತ್ತ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಲಾಗಿತ್ತು.ಜಾತ್ರೆ ಹಾಗೂ ವಿವಾಹಕ್ಕೆ ಬರುವ ಜನರನ್ನು ಸನ್ನಿ ಲಿಯೋನ ಹೆಸರಲ್ಲಿ ಬ್ಯಾನರ್ ಹಾಕಿ ಸ್ವಾಗತ ಕೊರಲಾಗಿದೆ. ನಾಡಿನಲ್ಲಿ ಸನ್ನಿಲಿಯೋನ್ ಅಭಿಮಾನಿಗಳಿದ್ದಾರೆ ಎನ್ನುವುದಕ್ಕೆ ಹಾಬಲಿಕಟ್ಟಿ ಗ್ರಾಮದ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.

ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಣಕಾರ್

ವಿಜಯಸಾಕ್ಷಿ ಸುದ್ದಿ, ಹಿರೇಕೆರೂರ:

ರಷ್ಯಾ ಶೆಲ್ ದಾಳಿಯಿಂದ ಉಕ್ರೇನ್ ನಲ್ಲಿ ಮೃತ ಪಟ್ಟ ವೈದ್ಯಕೀಯ ವಿದ್ಯಾರ್ಥಿ ಡಾ. ನವೀನ್ ಗ್ಯಾನಗೌಡ್ರ ಮೃತ ದೇಹ ಇಂದು ಮುಂಜಾನೆ ಅವರ ಸ್ವಗೃಹ ಹಾವೇರಿ ಜಿಲ್ಲೆ ರಾಣೇಬೆನ್ನೂರ್ ತಾಲ್ಲೂಕಿನ ಚಳಗೇರೆ ಗ್ರಾಮಕ್ಕೆ ಆಗಮಿಸಿದ್ದು, ಮಾಜಿ ಶಾಸಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು. ಬಿ. ಬಣಕಾರ್ ನವೀನ್ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಎಂಎಚ್‌ಪಿಎಸ್ ಕಟ್ಟಡ ಉಳಿಸಿ ಇತಿಹಾಸ ಪರಂಪರೆ ಸಂರಕ್ಷಿಸಿ

0

ಹಳೆಯ ವಿದ್ಯಾರ್ಥಿಗಳ ಒತ್ತಾಯ

ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಇಲ್ಲಿನ ನಗರಸಭೆ ಬಳಿಯ ಸ್ಟೇಷನ್ ರಸ್ತೆಯಲ್ಲಿರುವ ನಗರದ ಪ್ರತಿಷ್ಠಿತ ಸರ್ಕಾರಿ ಎಂಎಚ್‌ಪಿಎಸ್ (ಇಂದಿನ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ) ಕಟ್ಟಡಕ್ಕೆ ಸುಮಾರು 150 ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಹೈದರಾಬಾದ್ ನವಾಬರ ಆಳ್ವಿಕೆಯ ಕಾಲದ ಪ್ರಮುಖ ಆಡಳಿತಾಧಿಕಾರಿಯ ಬಂಗಲೆಯಾಗಿದ್ದ ಈ ಐತಿಹಾಸಿಕ ಕಟ್ಟಡ ನೆಲಸಮಗೊಳಿಸಿ ಗುರುಭವನ ನಿರ್ಮಿಸಲು ಉದ್ದೇಶಿಸಿರುವ ಕ್ರಮ ಕೈಬಿಡಬೇಕು.ಆಕರ್ಷಕ ಕಟ್ಟಡವನ್ನು ಮೂಲಸ್ವರೂಪದಲ್ಲಿಯೇ ಉಳಿಸಿಕೊಂಡು ಶೈಕ್ಷಣಿಕ ಚಟುವಟಿಕೆಗಳಿಗೆ ಮೀಸಲಿಡಬೇಕು ಅಥವಾ ಪಾರಂಪರಿಕ ಕಟ್ಟಡವಾಗಿ ಸಂರಕ್ಷಿಸಬೇಕು ಎಂದು ಶಾಲೆಯ ಹಳೆಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ರವಿವಾರ ಸಂಜೆ ಶಾಲಾ ಆವರಣದಲ್ಲಿ ಸಭೆ ಸೇರಿದ ಹಳೆಯ ವಿದ್ಯಾರ್ಥಿಗಳು ಶಾಲೆ ಹಾಗೂ ಈ ಆವರಣದೊಂದಿಗಿನ ಒಡನಾಟವನ್ನು ಮೆಲುಕು ಹಾಕುವುದರ ಜೊತೆಗೆ ಐತಿಹಾಸಿಕ ಹಿನ್ನೆಲೆಯುಳ್ಳ ಶಾಲೆಯ ಮುಖ್ಯ ಕಟ್ಟಡವನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಂಡು ಈ ಭಾಗದ ಚರಿತ್ರೆಯ, ಪರಂಪರೆಯ ದ್ಯೋತಕವನ್ನಾಗಿ ಮುಂದಿನ ಪೀಳಿಗೆಗೆ ಪರಿಚಯಿಸಲು ಕಾಪಾಡಿಕೊಳ್ಳಬೇಕು.

ಸ್ಟೇಷನ್ ರಸ್ತೆಯ ಎಂಎಚ್‌ಪಿಎಸ್ ಶಾಲೆ ಸುಮಾರು 7 ದಶಕಗಳ ಇತಿಹಾಸ ಹೊಂದಿದೆ.ಇಂದಿನ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದ ಗುಣಮಟ್ಟದ ಶಿಕ್ಷಣ ನೀಡಿದೆ.ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮಹತ್ವದ ಸಾಧನೆ ಮಾಡಿದ ಸರ್ಕಾರಿ ಶಾಲೆ ಇದಾಗಿದೆ. ಸಾರ್ವಜನಿಕ ವಲಯದ ಶಿಕ್ಷಣ ಸಂಸ್ಥೆಗೆ ಮಾದರಿಯಾಗಿ ಈ ಶಾಲೆಯನ್ನು ಪುನರ್ ರೂಪಿಸಿ ,ಅಭಿವೃದ್ಧಿ ಪಡಿಸುವ ಸಂಕಲ್ಪ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಆಗಬೇಕಾಗಿದೆ.

ಹೈದ್ರಾಬಾದ್ ನವಾಬರ ಆಳ್ವಿಕೆಯ ಕಾಲದಲ್ಲಿ ಜಹಗೀರು ಜಿಲ್ಲೆಯಾಗಿದ್ದ ಕೊಪ್ಪಳ ಐತಿಹಾಸಿಕ ಹಿನ್ನೆಲೆ ಯ ಸ್ಮಾರಕವೂ ಕೂಡ ಇದಾಗಿದೆ.
ಮುಖ್ಯ ಕಟ್ಟಡದ ಎರಡೂ ಬದಿಗೆ ಗೋಲಾಕಾರದ ಕೊಠಡಿಗಳು, ಹೊರಗಿನ ಪರಿಸರ ವೀಕ್ಷಿಸಬಹುದಾದ ಜಾಲರಿ ಮಾದರಿಯ ಕಾಂಕ್ರೀಟ್ ರಚನೆಯ ಕಾರಿಡಾರ್, ವಿಶಾಲ ಸೆಂಟ್ರಲ್ ಹಾಲ್, ಐದಾರು ಕೊಠಡಿಗಳನ್ನು ಹೊಂದಿದೆ.ಮೊದಲ ನೋಟಕ್ಕೆ ತನ್ನತ್ತ ಆಕರ್ಷಿಸುವ ಚುಂಬಕ ಶಕ್ತಿ ಹೊಂದಿರುವ ಈ ಭವ್ಯ ಕಟ್ಟಡವನ್ನು ಉಳಿಸಿಕೊಳ್ಳುವುದು ಶಾಲೆಯ ಹಳೆಯ ವಿದ್ಯಾರ್ಥಿಗಳಷ್ಟೇ ಅಲ್ಲ ಕೊಪ್ಪಳದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯೂ ಆಗಿದೆ.ಈ ಕುರಿತು ಶಿಕ್ಷಣ ಸಚಿವರು,ಸ್ಥಳೀಯ ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಭೆ ನಿರ್ಣಯಿಸಿತು.

ಪತ್ರಕರ್ತ ಬಸವರಾಜ ಕರುಗಲ್ ಮಾತನಾಡಿ, ಕೊಪ್ಪಳದಲ್ಲಿದ್ದ ಐತಿಹಾಸಿಕ ಕಮಾನುಗಳನ್ನು ಈಗಾಗಲೇ ನೆಲಸಮಗೊಳಿಸಿ ಊರಿನ ಅಸ್ಮಿತೆಯನ್ನು ಕಳೆಯಲಾಗಿದೆ. ಈಗ ನಾವು ಕಲಿತ ಶಾಲೆ ಹಾಗೂ ಶಾಲೆಯ ನೆನಪುಗಳನ್ನು ನೆಲಸಮಗೊಳಿಸುವ ಕಾರ್ಯಕ್ಕೆ ಕೈ ಹಾಕಿರುವುದು ಖಂಡನೀಯ. ನವಾಬರ ಕಾಲದ ಕಟ್ಟಡಗಳು ನಮ್ಮ ಹೆಮ್ಮೆಯ ಸ್ಮಾರಕಗಳನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ಈ ಶಾಲೆಯ ಹಳೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಕೊಪ್ಪಳದ ಸಮಸ್ತ ನಾಗರಿಕರಿಗೂ ಇದೆ ಎಂದರು.

ಮಂಜುನಾಥ ಗೊಂಡಬಾಳ ಮಾತನಾಡಿ, ಜಿಲ್ಲಾ ಗುರುಭವನ ಬೇರೆ ಕಡೆ ಇದಕ್ಕಿಂತ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಿ, ಐತಿಹಾಸಿಕ ಕಟ್ಟಡ ಧ್ವಂಸ ಮಾಡುವುದು ಬೇಡ ಈ ಕುರಿತು ಶಾಸಕರು,ಚುನಾಯಿತ ಪ್ರತಿನಿಧಿಗಳ ಗಮನ ಸೆಳೆಯೋಣ ಎಂದರು.

ಪ್ರಾಸ್ತಾವಿಕ ಮಾತನಾಡಿದ ಡಿ.ಗುರುರಾಜ , ಪ್ರಾಚೀನ ಸ್ಮಾರಕಗಳು ಹಾಗೂ 100 ವರ್ಷಗಳಿಗಿಂತ ಹಳೆಯದಾದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕಾನೂನಿನಲ್ಲಿ ಅವಕಾಶಗಳಿವೆ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದರು.

ನಾಗರಾಜನಾಯಕ ಡೊಳ್ಳಿನ ಮಾತನಾಡಿ, ನವಾಬರ ಆಳ್ವಿಕೆಯ ಕಾಲದಲ್ಲಿ ಜಿಲ್ಲಾಧಿಕಾರಿ/ಉಪವಿಭಾಗಾಧಿಕಾರಿ ಬಂಗಲೆಯಾಗಿದ್ದ ಈ ನಿವಾಸವನ್ನು ಅಂದಿನ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸೂಚನೆ ಮೇರೆಗೆ ಭಾರತದ ಸೇನೆ ವಶಪಡಿಸಿಕೊಂಡು ಹೈದ್ರಾಬಾದ್ ವಿಮೋಚನೆಗೆ ಪ್ರಮುಖ ಹೆಜ್ಜೆ ಇರಿಸಿತ್ತು.ಇಂತಹ ಮಹತ್ವದ ಘಟನೆಗೆ ಸಾಕ್ಷಿಯಾದ ಈ ಕಟ್ಟಡ ಉಳಿಸಿಕೊಂಡರೆ,ಮುಂದಿನ ಪೀಳಿಗೆಗೆ ಇತಿಹಾಸ ಪರಿಚಯಿಸಲು ಸಹಕಾರಿಯಾಗುತ್ತದೆ ಎಂದರು.

ಪ್ರಶಾಂತ ಮಾದಿನೂರ, ಗಿರೀಶ ಪಾನಘಂಟಿ, ಮಂಜುನಾಥ ಡೊಳ್ಳಿನ, ರಾಜೀವ್ ಭದ್ರಾಪೂರ, ಸಂತೋಷ ಹಾಲಳ್ಳಿ, ಅಮರೇಶ ಮುರಲಿ, ಬಸವೇಶ ಕೋರಿ,ಕೃಷ್ಣ ಚಿತ್ರಗಾರ, ವಿನೋದ ಚೆನ್ನಿನಾಯ್ಕರ್, ಸಜ್ಜಾದ ಹುಸೇನ್, ಮಂಜುನಾಥ ಸೊಂಡ್ಲಿ, ಅಮರೇಶ ಕೋರಿ, ಶ್ರೀನಿವಾಸ, ಶ್ರೀಕಾಂತ್ ಭದ್ರಾಪೂರ ಮತ್ತಿತರ ಹಳೆಯ ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಲಕ್ಷ ಲಕ್ಷ ರೂ.ಗಳ ಅಂದರ್-ಬಾಹರ್! ಸರಕಾರಿ ನೌಕರ ಸೇರಿ 17ಜನರ ಬಂಧನ, ಮುಂಡರಗಿಯಲ್ಲಿ ಫಂಡ್ ರೇಡ್

ಫಂಡ್ ಎಬಿ ಅಡ್ಡೆ ಮೇಲೆ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಪೊಲೀಸರ ದಾಳಿ; 14 ಲಕ್ಷ ರೂ. ಜಪ್ತಿ, ಗದಗನ ಜೂಜುಕೋರರು ಪರಾರಿ?

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷ ಲಕ್ಷ ಹಣ ಪಟಕ್ಕಿಟ್ಟು ಅಂದರ್ ಬಾಹರ್ ಆಡುತ್ತಿದ್ದ ಓರ್ವ ಸರ್ಕಾರಿ ನೌಕರ ಸೇರಿದಂತೆ 17 ಜನರು ಅಂದರ್ ಆಗಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಬಳಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ಪೊಲೀಸರು ವಿವಿಧ ಜಿಲ್ಲೆಯ ಜೂಜುಕೋರರ ಹೆಡೆಮುರಿ ಕಟ್ಟಿದ್ದು, ಈ ಬಗ್ಗೆ ಗದಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಪಂಢ್ ಅಡ್ಡೆಯ ಮೇಲೆ ದಾಳಿ ನಡೆಸಿದ ಖಾಕಿಪಡೆ 17 ಆರೋಪಿಗಳಿಂದ ಒಟ್ಟು 14.83 ಲಕ್ಷ ರೂ.ಗೂ ಅಧಿಕ ಹಣ, 04 ಕಾರು ಹಾಗೂ 18 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.

ಎಫ್‌ಡಿಎ ನೌಕರ, ಗುತ್ತಿಗೆ ನೌಕರ, ಚಾಲಕ, ವ್ಯಾಪಾರ, ಕೂಲಿ, ಹಮಾಲಿ, ಶೇತ್ಕಿ ಉದ್ಯೋಗ ಮಾಡುತ್ತಿದ್ದವರು ಇಸ್ಪೀಟು ಎಲೆ ಸಾಹಾಯದಿಂದ ಅಂದರ್ ಬಾಹರ್ ಆಟದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಚಿತ್ರವೆಂದರೆ ಗದಗ ಮೂಲದ 15ಕ್ಕೂ ಹೆಚ್ಚು ಆರೋಪಿಗಳು ಪರಾರಿಯಾಗಿದ್ದು, ಬೇರೆ ಜಿಲ್ಲೆಗಳಾದ ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿಯ ಆರೋಪಿಗಳು ಅಂದರ್ ಆಗಿರುವುದು ಅಚ್ಚರಿಗೆ ಕಾರಣವಾಗಿದೆ‌. ಸಿಕ್ಕ ಆರೋಪಿಗಳ ಮೇಲೆ ಕೆ.ಪಿ ಆ್ಯಕ್ಟ್ 87 ಕಲಂನಡಿ ಸ್ವಂತ ಲಾಭಕ್ಕಾಗಿ ಜೂಜಾಟ ಕೇಸ್ ದಾಖಲಿಸಲಾಗಿದೆ.

ದಾಳಿ ಮಾಡಿದ ಪೊಲೀಸ್ ತಂಡ

ಗದಗ ಜಿಲ್ಲೆಯಾದ್ಯಂತ ಬಹಳ ದಿನಗಳಿಂದ ಆಯಾ ಕಟ್ಟಿನ ಜಾಗಗಳಲ್ಲಿ ಫಂಡ್ ಗೇಮ್ ನಡೆಯುತ್ತಲಿದೆ. ಇದು ಪೊಲೀಸರಿಗೂ ಗೊತ್ತಿದೆ. ಆದರೆ, ಎಲ್ಲವೂ ಗೊತ್ತಿದ್ದರೂ ಗೊತ್ತಿಲ್ಲದಂತೆ ಜಾಣ ಮೌನವಹಿಸಿದ್ದ ಪೊಲೀಸ್ ಅಧಿಕಾರಿಗಳು ದಿಢೀರ್ ಅಂತಾ ಫಂಡ್ ಅಡ್ಡೆಯ ಮೇಲೆ ದಾಳಿ ನಡೆಸಿದ್ದು ಯಾಕೆ? ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ವರ್ಷ ಮೇನಲ್ಲಿ‌ ಫಂಡ್ ಅಡ್ಡೆಯ ಮೇಲೆ ನಡೆದ ದಾಳಿಯ ಬಳಿಕ ಅತ್ತಕಡೆಗೆ ಗಮನ ಹರಸದ ಪೊಲೀಸರು ಪುನಃ ಘರ್ಜಸಿದ್ದಾರೆ.

ಫಂಡ್ ಗೇಮ್ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ, ಇನ್ಸ್‌ಪೆಕ್ಟರ್ ಮಹಾಂತೇಶ್ ಟಿ. ಹಾಗೂ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಓರ್ವ ಸರ್ಕಾರಿ ನೌಕರ ಬಲೆಗೆ

ಫಂಡ್ ಗೇಮ್ ವೇಳೆ ಸಿಕ್ಕಿಬಿದ್ದ 17 ಜನರ ಪೈಕಿ ಓರ್ವ ಸರ್ಕಾರಿ ನೌಕರ ಹಾಗೂ ಹೊರಗುತ್ತಿಗೆ ನೌಕರ ಇದ್ದಾರೆ. ಹೂವಿನಹಡಗಲಿಯ ಮಾಗಳ ಹೈಸ್ಕೂಲ್‌ನಲ್ಲಿ ಎಫ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಆರ್.ವೆಂಕಟೇಶ ನಾಯಕ ಹಾಗೂ ಚಿತ್ರದುರ್ಗದ ಸರ್ವೇ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನಾಗಿರುವ ಕಾಶಿವಿಶ್ವನಾಥ ಶಿವಣ್ಣ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ.

ಜೂಜಾಟದ ವೇಳೆ ಸಿಕ್ಕಿಬಿದ್ದವರು:

1) ಎಂ.ತಿಪ್ಪೇಸ್ವಾಮಿ ಮಲ್ಲೇಶಪ್ಪ (42)
ಕೊಟ್ಟೂರ, ಡ್ರೈವರ್. 2) ಕೊಟ್ರಯ್ಯ ಮರಿಕೊಟ್ರಯ್ಯ (51) ಕೊಟ್ಟೂರ, ವ್ಯಾಪಾರಸ್ಥ. 3) ಕೊಮಾರೆಪ್ಪ ಸಣ್ಣದುರಗಪ್ಪ ಬಣಕಾರ (50) ಕೊಟ್ಟೂರ, ಕೂಲಿ.
4) ಶಿವು ಬುಳ್ಳಮ್ಮ (19) ಕೊಟ್ಟೂರ, ಹಮಾಲಿ.
5) ಬಿ.ಆರ್.ವೆಂಕಟೇಶ ನಾಯಕ (42) ಹೂವಿನಹಡಗಲಿ. ಎಫ್‌ಡಿಎ ಮಾಗಳ ಹೈಸ್ಕೂಲ್.
6) ಚಂದ್ರಶೇಖರ ಸಿದ್ದಪ್ಪ (28) ಚಿತ್ರದುರ್ಗ, ಡ್ರೈವರ್.
7) ಲೋಕೇಶ ಮಲ್ಲೇಶಪ್ಪ ಪತ್ರಿ (32) ಹರಪನಹಳ್ಳಿ, ಶೇತ್ಕಿ. 8) ಅಶೋಕ ಮಲ್ಲಪ್ಪ ಮಡಿವಾಳರ (37) ತಂಗೋಡ, ಹೋಟೆಲ್ ಕೆಲಸ. 9) ಮಂಜುನಾಥ ರುದ್ರಮುನಿಯಪ್ಪ ಮುದ್ದಣ್ಣನವರ (28) ಕೂಡ್ಲಗಿ, ಕಾರು ಚಾಲಕ. 10) ನಾಗೇಶ ರೇವಣ್ಣ ಕೆ. (35),
ಕೂಡ್ಲಗಿ, ಶೇತ್ಕಿ. 11) ಎಸ್.ಕೊಟ್ರೇಶ ಶರಣಪ್ಪ (45) ವಿಜಯನಗರ, ಗುತ್ತಿಗೆದಾರ. 12) ಫಕ್ಕಿರಪ್ಪ ಬಸವರಾಜ ಕೂಡ್ಲಗಿ (31) ಹರಪನಹಳ್ಳಿ, ಡ್ರೈವರ್. 13) ರಾಜಶೇಖರ ಹನಮಂತಪ್ಪ ಬಾರಕೇರ (30) ದಾವಣಗೇರಿ, ಡ್ರೈವರ್. 14) ಎ.ಆನಂದ ಅಜಣ್ಣ (33) ಚಳಕೇರಿ, ಡ್ರೈವರ್. 15) ಎಂ‌.ರವಿಂದ್ರನಾಥ ಹನಮಂತ ನಾಯಕ (45) ದಾವಣಗೇರಿ, ಶೇತ್ಕಿ. 16) ಕಾಶಿವಿಶ್ವನಾಥ ಶಿವಣ್ಣ (24) ಚಿರ್ತದುರ್ಗ, ಗುತ್ತಿಗೆ ನೌಕರ ಸರ್ವೇ ಇಲಾಖೆ. 17) ದುರಗಪ್ಪ ಚಂದ್ರಪ್ಪ ಎಂ. (38) ವಿಜಯನಗರ, ಶೇತ್ಕಿ.