Home Blog Page 3422

ನವೆಂಬರ್ 22ರಿಂದ ಜಗ್ಗೇಶ್ ಅವರ ರಾಘವೇಂದ್ರ ಸ್ಟೋರ‌್ಸ್ ಶುರು!

0

ವಿಜಯಸಾಕ್ಷಿ ಸಿನಿಮಾ ಸುದ್ದಿ, ಬೆಂಗಳೂರು:
ನವರಸ ನಾಯಕ ಸದ್ಯ ತೋತಾಪುರಿ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಜಿ ಇದ್ದಾರೆ. ಅದಾದ ನಂತರ ನಿರ್ದೇಶಕ ಗುರುಪ್ರಸಾದ್ ಜೊತೆ ಮೂರನೇ ಸಿನಿಮಾ ರಂಗನಾಯಕನಾಗಿ ಬಣ್ಣ ಹಚ್ಚಲಿದ್ದಾರೆ. ಅಷ್ಟರೊಳಗೆ ಜಗ್ಗೇಶ್ ರಾಘವೇಂದ್ರ ಸ್ಟೋರ‌್ಸ್ ಶುರು ಮಾಡಲಿದ್ದಾರೆ. ಸ್ಟೋರ್ ಆರಂಭಕ್ಕೆ ನವೆಂಬರ್ 22 ಎಂದು ದಿನವನ್ನೂ ನಿಗದಿಪಡಿಸಲಾಗಿದೆ!

ಅರೆ! ಇದೇನಿದು..! ಜಗ್ಗೇಶ್ ಅವರು ಸಿನಿಮಾ ಬಿಟ್ಟು ಅಂಗಡಿ ಆರಂಭಿಸುತ್ತಿದ್ದಾರೆಯೇ? ಎಂದು ಗಾಬರಿಯಾಗಬೇಡಿ. ಇದು ಅವರ ಮುಂದಿನ ಸಿನಿಮಾದ ಹೆಸರು.
ರಾಘವೇಂದ್ರ ಸ್ವಾಮಿಗಳ ಪರಮಭಕ್ತನಾಗಿರುವ ಜಗ್ಗೇಶ್ ಅವರಿಗೆ ಅವರ ಹೆಸರಿನಲ್ಲೇ ಆರಂಭಗೊಳ್ಳುತ್ತಿರುವ ಸಿನಿಮಾದಿಂದ ಸಖತ್ ಖುಷಿಯಾಗಿದ್ದಾರೆ.

ಅದಕ್ಕೆ ಕಾರಣ ಬರೀ ಸಿನಿಮಾ ಹೆಸರು ಮಾತ್ರವಲ್ಲ. ರಾಘವೇಂದ್ರ ಸ್ಟೋರ‌್ಸ್ ಸಿನಿಮಾ ನಿರ್ಮಾಣ ಮಾಡುತ್ತಿರುವ ನಿರ್ಮಾಣ ಸಂಸ್ಥೆ ಮತ್ತು ನಿರ್ದೇಶಕ!

ಈಗಾಗಲೇ ರಾಜಕುಮಾರ, ಯುವರತ್ನ ಸಿನಿಮಾಗಳ ಮೂಲಕ ಹಿಟ್ ಸಿನಿಮಾ ನಿರ್ಮಿಸುವ, ನಿರ್ದೇಶಿಸುವ ಜೋಡಿ ಎನಿಸಿರುವ ವಿಜಯ ಕಿರಂಗದೂರು ಮತ್ತು ಸಂತೋಷ್ ಆನಂದರಾಮ್ ರಾಘವೇಂದ್ರ ಸ್ಟೋರ‌್ಸ್ ಶುರು ಮಾಡಲಿದ್ದಾರೆ. ನವರಸ ನಾಯಕ ಜಗ್ಗೇಶ್ ಈ ಸಿನಿಮಾದಲ್ಲಿ ನಾಯಕನಾಗಿ ವಿಜೃಂಭಿಸಲಿದ್ದಾರೆ.

ರಾಘವೇಂದ್ರ ಸ್ಟೋರ‌್ಸ್ ಸಿನಿಮಾಗೆ since 1972 ಎಂಬ ಟ್ಯಾಗ್ ಲೈನ್ ಇದ್ದು, ಇದರಲ್ಲಿ ಜಗ್ಗೇಶ್ ಪಾಕಶಾಲೆಯ ಮೇಷ್ಟ್ರ ಪಾತ್ರ ಮಾಡಲಿರುವ ಸುಳಿವು ನೀಡಿದ್ದಾರೆ.

ಅದೇನೇ ಇರಲಿ ಜಗ್ಗೇಶ್ ವೃತ್ತಿ ಬದುಕಿಗೆ ರಾಘವೇಂದ್ರ ಸ್ಟೋರ‌್ಸ್ ದೊಡ್ಡ ಸಂಪತ್ತಾಗಲಿ ಎಂಬ ಆಶಯ ನಮ್ಮದು.

ಬೆಟಗೇರಿಯಲ್ಲಿ ಅಂದರ್-ಬಾಹರ್ ಜೂಜಾಟ; 7 ಜನರ ಬಂಧನ

0

ವಿಜಯಸಾಕ್ಷಿ ಸುದ್ದಿ, ಗದಗ

ಏಳು ಜನರ ತಂಡವೊಂದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಬೆಟಗೇರಿ ಠಾಣೆಯ ಪಿಎಸ್ಐ ರಾಜೇಶ್ ಬಟಕುರ್ಕಿ ಹಾಗೂ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಬೆಟಗೇರಿಯ ಕನ್ಯಾಳ ಅಗಸಿ ರಸ್ತೆಯ ಅಂಬೇಡ್ಕರ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಜೂಜಾಟದಲ್ಲಿ ತೊಡಗಿದ್ದ ಸೋಹೆಲ್ ಮಾಬುಸಾಬ ನರಗುಂದ, ಪ್ರಕಾಶ ಮಲಕಾಜಪ್ಪ ರೊಟ್ಟಿ, ಕೃಷ್ಣಪ್ಪ ರಾಮಪ್ಪ ಚಲವಾದಿ, ವೀರಪ್ಪ ರಾಮಪ್ಪ ಮಸ್ಕಿ, ಅಂಬಾದಾಸ ಮಹಾದೇವಪ್ಪ ಜಾದವ್, ಮುತ್ತಪ್ಪ ಕೊಟ್ರಪ್ಪ ಮುಳ್ಳಾಳ ಹಾಗೂ ಸುರೇಶ್ ಮಲ್ಲೇಶಪ್ಪ ಹಳ್ಳಿಕೇರಿ ಎಂಬುವವರನ್ನು ಬಂಧಿಸಿಲಾಗಿದೆ.

ಬಂಧಿತರಿಂದ ನಗದು 13 ಸಾವಿರ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣಿಗೆ ಶರಣಾದ ಅಗ್ರಿಗೋಲ್ಡ್ ಏಜೆಂಟ್

0

ವಿಜಯಸಾಕ್ಷಿ ಸುದ್ದಿ, ಕೋಲಾರ

ಅಗ್ರಿಗೋಲ್ಡ್ ಕಂಪನಿಯ ಏಜೆಂಟ್ ನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲ್ಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ನಡೆದಿದಿದೆ.

ಗ್ರಾಮದ ಡಿ.ಎಂ. ಶ್ರೀನಿವಾಸಪ್ಪ (53) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. 2004 ರವರೆಗೂ ಅಗ್ರಿಗೋಲ್ಡ್ ನಲ್ಲಿ ಏಜೆಂಟ್ ಆಗಿ ಸಂಸ್ಥೆಗೆ ಜನರಿಂದ 2 ಕೋಟಿಗೂ ಅಧಿಕ ಹಣ ಸಂದಾಯ ಮಾಡಿಸಿದ್ದ. ಆದರೆ, ಕಂಪನಿ ಗ್ರಾಹಕರಿಗೆ ವಂಚಿಸಿರುವುದು ಬಹಿರಂಗವಾಗಿದ್ದರಿಂದ ಹಣ ತುಂಬಿದವರು ವಾಪಸ್ಸು ಕೊಡಿಸುವಂತೆ ದುಂಬಾಲು ಬಿದ್ದಿದ್ದರು.

ಆದರೆ, ಅಗ್ರಿಗೋಲ್ಡ್ ಪ್ರಕರಣ
ನ್ಯಾಯಾಲಯದಲ್ಲಿ ತನಿಖೆ ಹಂತದಲ್ಲಿರುವ ಕಾರಣ ಹಣ ಮರಳಿಸುವುದು ಅಸಾಧ್ಯವಾಗಿತ್ತು. ಇದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧಿಕಾರಿಗಳಿಗೆ ಮೂಗುದಾರ ಹಾಕಿದ ಸರ್ಕಾರ; ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಕಟ್ಟಪ್ಪಣೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯ ಸರಕಾರ ಅಧಿಕಾರಿಗಳ ಬೇಕಾಬಿಟ್ಟಿ ವರ್ತನೆಗೆ ಮೂಗುದಾರ ಹಾಕಿದ್ದು, ಅಧಿಕಾರಿಗಳು ನಂಬಿಕಾರ್ಹ ಅಧಿಕೃತ ಕರ್ತವ್ಯ ನಿರ್ವಹಿಸುವುದನ್ನು ಪತ್ರಿಕಾಗೋಷ್ಠಿ, ಪತ್ರಿಕಾ ಹೇಳಿಕೆಗಳ ಮೂಲಕ ಅನಪೇಕ್ಷಿತ ಹೇಳಿಕೆ ನೀಡುವುದನ್ನು ನಿಷೇಧಿಸಿ ಮುಖ್ಯ ಕಾರ್ಯದರ್ಶಿ ರವಿಕುಮಾರ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ನೌಕರ, ಆಕಾಶವಾಣಿ, ದೂರದರ್ಶನ, ಸಾರ್ವಜನಿಕ ಮಾಧ್ಯಮಗಳಲ್ಲಿ ವಾಸ್ತವ ಹೇಳಿಕೆ ಅಥವಾ ಅಭಿಪ್ರಾಯ ನೀಡುವುದಾಗಲಿ, ಅನಾಮಧೇಯವಾಗಿ, ಗುಪ್ತನಾಮದಲ್ಲಿ ಬೇರೊಬ್ಬರ ಹೆಸರಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಾರದು.

ಅಧಿಕೃತ ಪ್ರಾಧಿಕಾರದ ಪೂರ್ವಾನುಮೋದನೆ ಪಡೆಯದೇ ಸರ್ಕಾರದ ನೀತಿ, ನಿರ್ಧಾರದ ಬಗ್ಗೆ ಪ್ರತಿಕೂಲ ಟೀಕೆ, ಮಾನಹಾನಿ, ನಿಂದನೆ ಸೇರಿದಂತೆ ಇತರ ವಿಷಯಗಳ ಸಮರ್ಥನೆಗಾಗಿ ನ್ಯಾಯಾಲಯ ಅಥವಾ ಪತ್ರಿಕೆಗಳ ಮೊರೆ ಹೋಗುವಂತಿಲ್ಲ.

ಅಗತ್ಯವಿದ್ದಲ್ಲಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕೃತ ಮಾಹಿತಿ ಅಥವಾ ಇತರ ಅಧಿಕೃತ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಲು ವೈಯಕ್ತಿಕ ಸಾಮಾಜಿಕ ಖಾತೆಗಳನ್ನು ಬಳಸದೇ ಪ್ರಾಧಿಕಾರದ ಪೂರ್ವಾನುಮತಿ ಪಡೆದು ಸರ್ಕಾರ ಅಥವಾ ಇಲಾಖೆಯ ಅಧಿಕೃತ ಖಾತೆಗಳನ್ನು ಬಳಸಬೇಕು.

ಇಲಾಖೆಯ ಅಥವಾ ಸರ್ಕಾರದ ಸಾಧನೆಗಳನ್ನು ಅಧಿಕಾರಿಗಳು ವೈಯಕ್ತಿಕ ಸಾಧನೆ ಎಂಬoತೆ ಬಿಂಬಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಈ ಆದೇಶಕ್ಕೆ ವ್ಯತಿರಿಕ್ತವಾಗಿ ಅಧಿಕಾರಿ, ನೌಕರ ಸರ್ಕಾರದ ಕಾರ್ಯನೀತಿಗೆ ಅನಪೇಕ್ಷಿತ ವೇದಿಕೆಗಳಲ್ಲಿ ಸ್ವಂತ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ಕಾರದ ವರ್ಚಿಸ್ಸಿಗೆ ಧಕ್ಕೆ ಉಂಟು ಮಾಡುವ, ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಕೃತ್ಯದಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ಪರೋಕ್ಷವಾಗಿ ಬಿಎಸ್‌ವೈಗೆ ಟಾಂಗ್ ನೀಡಿದ ಅರುಣ್‌ಸಿಂಗ್

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ಯಡಿಯೂರಪ್ಪನವರ ನೇತೃತ್ವದಲ್ಲಿ ಈ ಹಿಂದೆ ನಡೆದ ಎಲ್ಲಾ ಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ. ಈಗ ಬಸವರಾಜ್ ಬೊಮ್ಮಾಯಿ ಹಾಗೂ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಪಚುನಾವಣೆ, ಜಿಲ್ಲಾ ಪಂಚಾಯಿತಿ ಹಾಗೂ ಮುಂಬರುವ ವಿಧಾನಸಭೆ ಚುನಾವಣೆ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಮತ್ತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯ ಪ್ರವಾಸ ಮಾಡುವುದಾಗಿ ಹೇಳುತ್ತಿರುವ ಮಾಜಿ ಸಿಎಂ ಹೇಳಿಕೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಟಾಂಗ್ ನೀಡಿದ್ದಾರೆ.

ದಾವಣಗೆರೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿಗಳ ನೇತೃತ್ವದಲ್ಲಿ ನಡೆದ ಎಲ್ಲ ಚುನಾವಣೆಗಳನ್ನ ಗೆದ್ದಿದ್ದೇವೆ. ಜನರು ಮೋದಿಯವರ ಮೇಲೆ ವಿಸ್ವಾಸವಿಟ್ಟಿದ್ದಾರೆ. ಮುಖ್ಯಮಂತ್ರಿಯಿಂದ ಪ್ರಧಾನಿಮಂತ್ರಿಯವರೆಗೆ ಒಂದೇ ಒಂದು ರೂಪಾಯಿ ಭ್ರಷ್ಟಾಚಾರದ ಆರೋಪವಿಲ್ಲ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ದೇಶದ ರೈತರು, ಕಾರ್ಮಿಕರು, ಬಡವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷದ ಜೊತೆಗೆ ನಿಂತಿದ್ದಾರೆ. ಪ್ರಧಾನಿಗಳ ಜನ್ಮದಿನಾಚರಣೆಗೆ ನಾವು ಕೇಕ್ ಕಟ್ ಮಾಡಲಿಲ್ಲ, ಬಡವರ ಸೇವೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದೇವೆ.

ಒಂದೇ ದಿನಕ್ಕೆ 2ಕೋಟಿ 30ಲಕ್ಷ ಜನರಿಗೆ ಕೋವಿಡ್ ವ್ಯಾಕ್ಷಿನ್ ಹಾಕಲಾಗಿದೆ. ನಮ್ಮನ್ನು ರಕ್ಷಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದು ದೇಶದ ಜನರಿಗೆ ಅರ್ಥವಾಗಿದೆ. ಎಸ್ಸಿ ಎಸ್ಟಿ, ಒಬಿಸಿ ಸಮಾಜದವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಹೆಚ್ಚು ಪಾಲು ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿರುವ ಅಭಿವೃದ್ಧಿಗಳನ್ನು ಕಾರ್ಯಕರ್ತರು ಜನಸಾಮಾನ್ಯರಿಗೆ ತಲುಪಿಸಬೇಕಿದೆ ಎಂದು ಕರೆ ನೀಡಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಕಾಂಗ್ರೆಸ್‌ನವರು ಬಡವರಿಗೆ ಶುದ್ಧ ಕುಡಿಯುವ ನೀರು ಸಹ ಕೊಡಲು ಆಗಲಿಲ್ಲ. ಅರವತ್ತು ವರ್ಷದ ಆಡಳಿತದ ಕಾಂಗ್ರೆಸ್ ಪಕ್ಷಕ್ಕೆ ಆರೋಗ್ಯ, ಶಿಕ್ಷಣ, ಕುಡಿಯುವ ನೀರು ಕೊಡಲು ಸಾಧ್ಯವಾಗಲಿಲ್ಲ. ಆರಂಭದಲ್ಲಿ ಭಾರತದ ಲಸಿಕೆ ಬಗ್ಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಪಹಾಸ್ಯ ಮಾಡಿದ್ದರು ಎಂದರು.

ಪಂಜಾಬ್ ಮುಖ್ಯಮಂತ್ರಿಯನ್ನು ಹೇಳದೆ, ಕೇಳದೆ ಬದಲಿಸಲಾಗಿದೆ. ರಾಜಸ್ಥಾನದಲ್ಲಿ ಅತಂತ್ರ ಸ್ಥಿತಿಯಲ್ಲಿದೆ. ಸೋನಿಯಾ ಗಾಂಧಿ, ರಾಹುಲ್ ಗೆ ದೇಶ ನಡೆಸಲು ಸಾಧ್ಯವೇ ಇಲ್ಲ ಎಂದು ಮಾತಿನೇಟು ನೀಡಿದರು.

ಬಿಜೆಪಿ ಶಾಸಕರ ಸೆಳೆಯಲು ಡಿಕೆಶಿ ಯತ್ನ; ಬಿಎಸ್ವೈ ಹೊಸ ಬಾಂಬ್

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ಬಿಜೆಪಿಯ ಶಾಸಕರನ್ನು ಸಂಪರ್ಕಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಸರತ್ತು ನಡೆಸಿದ್ದಾರೆ. ಈಗಾಗಲೆ ಒಂದಿಬ್ಬರು ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು‌ ಮಾಜಿ ಬಿಎಸ್ ವೈ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಪಕ್ಷಗಳನ್ನ ಹಗುರವಾಗಿ ಪರಿಗಣನೆ ಮಾಡಬೇಡಿ. ವಿಪಕ್ಷಗಳು ರಾಜ್ಯದಲ್ಲಿ ತಮ್ಮದೆ ಆದ ಶಕ್ತಿ ಹೊಂದಿವೆ. ನನ್ನ ಕಿವಿಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಶಕ್ತಿ ಮೀರಿ ಮುಂದಿನ ಚುನಾವಣೆ ಎದುರಿಸಬೇಕು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ, ಎದ್ದು ಕೂತಿದೆ. ಲೋಕಸಭೆ ಚುನಾವಣೆಯನ್ನು ಪ್ರಧಾನಿ ಮೋದಿಯವರ ಹೆಸರಿನಲ್ಲಿ ಗೆಲ್ಲಬಹುದು. ಆದರೆ, ವಿಧಾನಸಭೆ ಗೆಲ್ಲುವುದು ಸುಲಭವಲ್ಲ. ತಳ ಮಟ್ಟದಲ್ಲಿ ನಾವು ಪಕ್ಷ ಸಂಘಟನೆ ಬಲಪಡಿಸಬೇಕು.

ಯಾರ ಮೇಲೂ ಅವಲಂಬನೆಯಾಗದೆ 140 ಸ್ಥಾನ ಗೆದ್ದು ಅಧಿಕಾರ ಹಿಡಿಯಬೇಕಿದೆ. ಇದಕ್ಕಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಕಿವಿಮಾತು ಹೇಳಿದರು.

ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳಬಾರದು. ಗೆಲ್ಲುವ ತಂತ್ರಗಳನ್ನು ಮಾಡಬೇಕಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ನಾವು ಹೆಚ್ಚು ಸೀಟು ಗೆಲ್ಲಬೇಕಿದೆ ಎಂದು ಹೇಳಿದರು.

ಪಕ್ಷ ಸಂಘಟನೆ ಹಾಗೂ ಹೋರಾಟದ ಬಗ್ಗೆ ಮೆಲುಕು ಹಾಕಿದ ಮಾಜಿ ಸಿಎಂ, ವಿಧಾನಸಭೆಯಲ್ಲಿ ಎರಡು ಸದಸ್ಯರಿಂದ ಅಧಿಕಾರಕ್ಕೇರುವ ಹಾಗೆ ಮಾಡಿದ್ದೇನೆ. ಮುಂಬರುವ ದಿನಗಳಲ್ಲಿ ಒಂದು ತಿಂಗಳ ಕಾಲ ಪಕ್ಷ ಸಂಘಟನೆ ಮಾಡಲಿದ್ದೇನೆ.

ರಾಜ್ಯದಲ್ಲಿ ಯಡಿಯೂರಪ್ಪ ಪ್ರವಾಸದ ಬಗ್ಗೆ ಚರ್ಚೆ ನಡೆಯುತ್ತಿದೆ. ಯಡಿಯೂರಪ್ಪ ಒಬ್ಬನೇ ಪ್ರವಾಸ ಮಾಡಲ್ಲ. ನಾಲ್ಕಾರು ಗುಂಪುಗಳಲ್ಲಿ ಕೆಲಸ ಮಾಡಬೇಕಿದೆ. ಪ್ರಧಾನಿ ಮೋದಿಯವರ ಅಪೇಕ್ಷೆ ಕೂಡ ಇದೆ ಆಗಿದೆ. ಪ್ರಮಾಣಿಕವಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದ ಅವರು, ದೇವಸ್ಥಾನವನ್ನು ಕೆಡುವುದನ್ನು ನಿಲ್ಲಿಸಲು ನಮ್ಮ ಸರ್ಕಾರ ಕಠಿಣ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಬೈಕ್ ಗೆ ಕ್ಯಾಂಟರ್ ಗೂಡ್ಸ್ ವಾಹನ ಡಿಕ್ಕಿ ; ಮಗು ಸಮೇತ ಮೂವರು ಸಾವು

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ

ಬೈಕ್ ಗೆ ಕ್ಯಾಂಟರ್ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸಮೇತ ಅಕ್ಕ ಹಾಗೂ ಸಹೋದರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.

ಮುಂಡರಗಿ ತಾಲೂಕಿನ ಬಾಗೇವಾಡಿ ಸಮೀಪದ ಕಣವಿ ದುರ್ಗಮ್ಮ ದೇವಸ್ತಾನದ ಬಳಿ ನಡೆದ ಈ ದುರ್ಘಟನೆಯಲ್ಲಿ ಶಿರಹಟ್ಟಿ ತಾಲೂಕಿನ ಕನಕವಾಡ ಗ್ರಾಮದ ಮಹ್ಮದರಫಿ ಮಕ್ಕುಗೌಡ ಜಂಗ್ಲೇಗೌಡ (20) ಸಹೋದರಿ ಬೀಬಿಹಾಜಿರಾ ಕೋಂ ಜಂಗ್ಲೀಸಾಬ್ ಲಂಗೂಟಿ (24) ಹಾಗೂ ಮೂರು ವರ್ಷದ ಮಗು ಮಹಮ್ಮದ್ ಸಾಕೀಬ್ ಚಮನಸಾಬ್ ಲಂಗೂಟಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಮಗು, ಅಕ್ಕ ಹಾಗೂ ಸಹೋದರ

ಸುದ್ದಿ ತಿಳಿದ ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕನಕವಾಡದಿಂದ ಆಗಮಿಸಿರುವ ಮೃತರ ಸಂಬಂಧಿಕರ ಆಕ್ರಂಧನ ಮುಗಿಲ ಮುಟ್ಟಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಕನಕವಾಡದಿಂದ ಮುಂಡರಗಿಯತ್ತ ಬರುತ್ತಿದ್ದಾಗ ಕ್ಯಾಂಟರ್ ಗೂಡ್ಸ್ ವಾಹನ ಡಿಕ್ಕಿ ಹೊಡದಿದೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.

ಬೈಕ್ ನಜ್ಜುಗುಜ್ಜಾಗಿದ್ದು, ಮಗು ಪಕ್ಕದ ಮುಳ್ಳಿನ ಕಂಟೆಯಲ್ಲಿ‌ ಬಿದ್ದಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.

ಬಾವಿಯಲ್ಲಿ ತಾಯಿ, ಮಗಳ ಶವಪತ್ತೆ

0

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ತಾಯಿ ಹಾಗೂ ಮಗಳು ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ರಾಯಬಾಗ ತಾಲೂಕಿನ ದೇವಾಪೂರ ಸಹಟ್ಟಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ರುಕ್ಮಮ್ಮ ಹಳಿಂಗ(38), ಮಗಳು ಅನ್ವಿತಾ ಹಳಿಂಗ(2) ಮೃತರು. ಗುರುವಾರ ಸಂಜೆ ಮನೆಯಿಂದ ಹೋದ ತಾಯಿ-ಮಗಳ ಶವಗಳು ಬಾವಿಯಲ್ಲಿ ಕಂಡುಬಂದಿವೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸತ್ಯ ಹೊರಬರಲಿದೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ ಸ್ವಾಮೀಜಿಗಳ ಕಾಲಿಗೆ ಬೀಳೋದು, ಬೆಳಗ್ಗೆದ್ದ ಧರ್ಮ ಒಡೆಯೋದು

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ರಾತ್ರಿ ಹೋಗಿ ಹಿಂದು ಸ್ವಾಮೀಜಿಗಳ ಕಾಲಿಗೆ ಬೀಳುವುದು, ಬೆಳಗ್ಗೆ ಎದ್ದು ಧರ್ಮ ಒಡೆಯವ ಕೆಲಸ ಮಾಡ್ತಾರೆ. ಆದರೆ, ನಾವು ಎದೆ ಉಬ್ಬಿಸಿ ಪೂಜೆ ಮಾಡುತ್ತೇವೆ. ಸ್ವಾಮೀಜಿಗಳ ಆಶೀರ್ವಾದ ಪಡೆಯುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಟಾಂಗ್ ನೀಡಿದರು.


ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ಹಿಂದುತ್ವದ ಮೇಲೆ‌ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಜೆಡಿಎಸ್ ಅಧಿಕಾರದಲ್ಲಿದ್ದಾಗ ಕೋಮುಗಲಭೆಗಳಾಗಿವೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂದು-ಮುಸ್ಲಿಮರು ಅನ್ಯೋ‌ನ್ಯತೆಯಿಂದ ಇದ್ದಾರೆ.

ಲಿಂಗಾಯತ, ವೀರಶೈವ ಎಂದು ಒಡೆದು ನಮ್ಮಲ್ಲೇ ಜಗಳ ತಂದಿಟ್ಟಿದ್ದೀರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಅವರ ಹಾಗೆ ಬುರ್ಕಾ, ಟೋಪಿ ಹಾಕಿ ನಮಾಜ್ ಮಾಡಿ ನಾಟಕ ಮಾಡುವುದಿಲ್ಲ ಎಂದು ಟಾಂಗ್ ನೀಡಿದರು.

ರಾತ್ರಿ ಹೆಣ್ಮಗಳು ಹೊರಗೆ ಬರ್ತಾರಂದ್ರೆ ಹೆಮ್ಮೆ ಪಡಬೇಕು, ಪ್ರಶ್ನಿಸೋದಲ್ಲ; ಬಿಜೆಪಿ ಶಾಸಕ ಗರಂ

0
  • ಗೃಹ ಸಚಿವರಿಗೆ ಪರೋಕ್ಷ ಟಾಂಗ್ ನೀಡಿದ ಶಾಸಕ ರಾಜುಗೌಡ

ವಿಜಯಸಾಕ್ಷಿ ಸುದ್ದಿ, ಯಾದಗಿರಿ

ಯಾದಗಿರಿಯಲ್ಲಿ ಸಾಮೂಹಿಕ‌ ಅತ್ಯಚಾರ ಘಟನೆ ಖಂಡಿಸಿರುವ ಸುರಪುರ ಶಾಸಕ ರಾಜೂಗೌಡ, ಮಹಾತ್ಮ ಗಾಂಧೀಜಿ ರಾತ್ರಿ 12 ಗಂಟೆಗೆ ಹೆಣ್ಣುಮಗಳು ನಿರ್ಭೀತಿಯಿಂದ ಹೊರಗೆ ತಿರುಗಾಡಿದರೆ ರಾಮರಾಜ್ಯ, ಸ್ವಾತಂತ್ರ್ಯ ಸಿಕ್ಕ ಹಾಗೆ ಎಂದು ಹೇಳಿದ್ದರು.

ಆದರೆ, ನಮ್ಮ ಕೆಲಸ ಮಾಡುವುದು ಬಿಟ್ಟು. ಇನ್ನೊಬ್ಬರ ಮೇಲೆ ಬೆರಳು ತೋರುವುದು ಸರಿಯಲ್ಲ ಎಂದು ಗೃಹವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ತಪ್ಪಾಗಿದೇಯಾ ? ಅದಕ್ಕೆ ನಾವು ಏನು ಶಿಸ್ತು ಕ್ರಮ ತೆಗೆದುಕೊಂಡಿದ್ದೇವೆ ಎನ್ನುವುದು ಮುಖ್ಯ. ಅದು ಬಿಟ್ಟು ಅವರು ಅಲ್ಲಿ‌ ಏಕೆ ಹೋಗಿದ್ದರು. ಇವರು ಅಲ್ಲಿ ಏಕೆ ಹೋಗಿದ್ದರು ಎಂದು ಪ್ರಶ್ನಿಸುವುದು ತಪ್ಪು. ನಮ್ಮ ಕರ್ತವ್ಯ ನಾವು ಸರಿಯಾಗಿ ನಿಭಾಯಿಸಬೇಕು ಎಂದು ಕಿವಿಮಾತು ಹೇಳಿದರು.

ರಾತ್ರಿ 12 ಗಂಟೆಗೆ ಹೆಣ್ಣುಮಗಳು ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ತಾಳೆ ಅಂದ್ರೆ ನಾವು ಹೆಮ್ಮೆ ಪಡಬೇಕು. ಅದನ್ನು ಬಿಟ್ಟು ಅಲ್ಲಿ ಏಕೆ ಹೋಗಿದ್ದಳು ಎಂದು ಕೇಳುವುದಲ್ಲ ಎಂದು ಹರಿಹಾಯ್ದರು.