Home Blog Page 3446

ಬಸವರಾಜ ಬೊಮ್ಮಾಯಿ ಆರೇಳು ತಿಂಗಳಿಗೆ ಮಾತ್ರ ಸಿಎಂ

ಹೂವಿನ ಹಡಗಲಿಯ ಶ್ರೀ ಕ್ಷೇತ್ರ ಮೈಲಾರದ ಧರ್ಮದರ್ಶಿ ವೆಂಕಪಯ್ಯ ಒಡೆಯರ್ ಭವಿಷ್ಯ

ವಿಜಯಸಾಕ್ಷಿ ಸುದ್ದಿ, ಹೂವಿನ ಹಡಗಲಿ

ಸಿಎಂ ಬೊಮ್ಮಾಯಿ ಆರರಿಂದ ಏಳು ತಿಂಗಳ ಮುಖ್ಯಮಂತ್ರಿ ಮಾತ್ರವಂತೆ. ಬಿಜೆಪಿಯ ಗಡ್ಡದಾರಿ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶ್ರೀ ಕ್ಷೇತ್ರ ಮೈಲಾರದ ಧರ್ಮದರ್ಶಿ ವೆಂಕಪಯ್ಯ ಒಡೆಯರ್ ಭವಿಷ್ಯ ನುಡಿದಿದ್ದಾರೆ.

ಕೆಲವೇ ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ. ಮೂರು ಜನ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಒಡೆಯರ್ ಕಾರ್ಣಿಕ ನುಡಿದಿದ್ದಾರೆ. ಮತ್ತೆ ಕೊರೋನಾ ಹೆಚ್ಚಾಗಲಿದೆ. ಸರ್ಕಾರದ ನಿಯಮಗಳನ್ನ ಪಾಲಿಸಿ ಎಂದು ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ.

ದಿಢೀರ್ ದೆಹಲಿಗೆ ಹಾರಿದ ಸಿಎಂ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಹೈಕಮಾಂಡ್ ಬುಲಾವ್ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ದಿಢೀರ್ ದೆಹಲಿಗೆ ಹಾರಿದ್ದು, ಸಚಿವ ಸಂಪುಟಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.

ಇಂದು ಸಂಜೆ ದೆಹಲಿಗೆ ತೆರಳಿರುವ ಸಿಎಂ ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ. ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ದೆಹಲಿಯಿಂದ ವಾಪಸ್ ಆಗಲಿದ್ದಾರೆ. ಮಂಗಳವಾರ ಅಥವಾ ಬುಧವಾರ ನೂತನ ಸಚಿವರ ಪದಗ್ರಹಣ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆಡಳಿತ ಬಗ್ಗೆ ಸಿಎಂಗೆ ಸಿದ್ದರಾಮಯ್ಯಹೇಳಿಕೊಡಬೇಕಿಲ್ಲ

ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು

ಬಸವರಾಜ ಬೊಮ್ಮಾಯಿ ಚಾಣಾಕ್ಷ ರಾಜಕಾರಣಿ. ಗೃಹ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಎಲ್ಲವನ್ನೂ ಚೆನ್ನಾಗಿ ನಡೆಸಿಕೊಂಡು ಹೋಗಲಿದ್ದಾರೆ ಎಂದು ಮೈಸೂರ ಸಂಸದ ಪ್ರತಾಪಸಿಂಹ ಹೇಳಿದರು.

ಸಿಎಂ ಬೊಮ್ಮಾಯಿ ಕೇಂದ್ರದ ಬಳಿ ರಾಜ್ಯದ ಪಾಲು ಕೇಳಲಾರರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬಸವರಾಜ ಬೊಮ್ಮಾಯಿಯವರು ಮನೆಯಲ್ಲಿದ್ದುಕೊಂಡೇ ಅಧಿಕಾರ ನಡೆಸುವುದನ್ನು ಕಂಡಿದ್ದಾರೆ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅವರಿಗೆ ಎಲ್ಲವೂ ಗೊತ್ತು.
ಹೈವೆ ಕೆಲಸಕ್ಕೆ 95 ಸಾವಿರ ಕೋಟಿ ಹಣ ಕೊಟ್ಟಿರುವುದು ಮೋದಿ ಸರ್ಕಾರ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 8,096 ಕೋಟಿ ಹಣ ಕೊಟ್ಟಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುತ್ತಿರುವುದು ಮೋದಿ ಸರ್ಕಾರ. ರಾಜ್ಯಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ. ಸಿದ್ದರಾಮಯ್ಯ ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುವುದನ್ನು ಬಿಡಬೇಕು ಎಂದು ಆಗ್ರಹಿಸಿದರು.

ಅಣ್ಣಾಮಲೈ ಉಪವಾಸ ಚರ್ಚೆ ಅನಗತ್ಯ

ಅಣ್ಣಾಮಲೈ ಅಲ್ಲಿನ ರಾಜಕೀಯಕ್ಕಾಗಿ ಉಪವಾಸ ಮಾಡ್ತಿದ್ದಾರೆ. ಅದರ ಬಗ್ಗೆ ನಮ್ಮಲ್ಲಿ ಹೆಚ್ಚು ಚರ್ಚೆ ಬೇಡ. ನಮ್ಮ ರಾಜಕಾರಣಿಗಳು ಹೇಳಿಕೆ ಕೊಡುವುದನ್ನ ಬಿಟ್ಟು ಡಿಪಿಆರ್ ರೆಡಿ ಮಾಡಲು ಒತ್ತು ನೀಡಬೇಕು ಎಂದು ರಾಜ್ಯ ರಾಜಕಾರಣಿಗಳಿಗೆ ಪ್ರತಾಪ್‌ ಸಿಂಹ ಸಲಹೆ ನೀಡಿದ್ದಾರೆ.

ಮೇಕೆದಾಟು ಯೋಜನೆ‌ ವಿರೋಧಿಸಿ ಅಣ್ಣಾಮಲೈ ಉಪವಾಸ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ಕಿಡಿ‌ ಕಾರಿದ ಅವರು, ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ.
ಸಿದ್ದರಾಮಯ್ಯಗೆ ಎಲ್ಲಾ ಗೊತ್ತಿದ್ದೂ ರಾಜಕೀಯಕ್ಕಾಗಿ ಮಾತನಾಡುತ್ತಾರೆ ಎಂದರು.

ಪೊಲೀಸರ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ ಆಟೋ ಚಾಲಕನ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಆಟೋ ಚಾಲಕನೊಬ್ಬನನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ.

ಬೆಟಗೇರಿಯ ಗಣೇಶ್ ನಗರ ನಿವಾಸಿ, ಆಟೋ ಚಾಲಕ ಮಾರುತಿ ಶೇಖಪ್ಪ ಕಾಳೆ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಗಾಂಜಾ ಸಂಗ್ರ ಸಂಗ್ರಹಿಸಿದ್ದ.

ಈ ಕುರಿತು ಖಚಿತ ಮಾಹಿತಿ ಪಡೆದ ಬೆಟಗೇರಿ ಪೊಲೀಸರು ದಾಳಿ ಮಾಡಿ ಆರೋಪಿ ಮಾರುತಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 10 ಸಾವಿರ ರೂ.ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈ ಗೊಂಡಿದ್ದಾರೆ.

ಮೊಬೈಲ್‌ ಮೂಲಕ ಯುವತಿಗೆ ಕಿರುಕುಳ; ಪೋಷಕರಿಗೂ ಬೆದರಿಕೆ ಹಾಕಿದ ಯುವಕ!

ವಿಜಯಸಾಕ್ಷಿ ಸುದ್ದಿ, ನರಗುಂದ

ಯುವತಿಯೊಬ್ಬಳಿಗೆ ಮೊಬೈಲ್ ಮೂಲಕ, ವಾಟ್ಸಾಪ್ ಮೂಲಕ ಕರೆ ಮಾಡಿ, ಲೈಂಗಿಕ ಕಿರುಕುಳ ನೀಡಿದ ಯುವಕನೊಬ್ಬ, ಕೇಳಲು ಹೋದ ಪೋಷಕರಿಗೂ ಬೆದರಿಕೆ ಹಾಕಿದ ಘಟಯ ನಡೆದಿದೆ.

ನರಗುಂದ ತಾಲೂಕಿನ ಹದ್ಲಿ ಗ್ರಾಮದ ಆರೋಪಿ ಶಿವಪ್ಪ ಶೇಖಪ್ಪ ಅಗಸರ ಎಂಬ ಯುವಕನೇ ಯುವತಿಗೆ ಕಿರುಕುಳ ನೀಡಿದಾತ.

ಕಳೆದ ಹಲವು ದಿನಗಳಿಂದ ಈ ರೀತಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲ ಯುವತಿಯ ದೊಡ್ಡಪ್ಪನ ಮನೆಯ ನಂಬರ್ ಗೂ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಯುವಕನ ವಿರುದ್ಧ ನರಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದರ್-ಬಾಹರ್ ಜೂಜಾಟ; ಆರು ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಆರು ಜನತ ತಂಡವೊಂದು ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರು ದಾಳಿ ಮಾಡಿ ಬಂಧಿಸಿದ ಘಟನೆ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುರಡಿತಾಂಡಾದ ಸೇವಾಲಾಲ ದೇವಸ್ಥಾನದ ಎದುರಿಗೆ ಜೂಜಾಟದಲ್ಲಿ ತೊಡಗಿದ್ದ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪದ ಮುದಕಪ್ಪ ಲಕ್ಷ್ಮಣ್ಣ ನಾಗಾವಿ, ಹನಮಂತ ಪಕ್ಕೀರಪ್ಪ ಹೊಸೂರು, ಮುರಡಿ ತಾಂಡಾದ ಕುಮಾರ್ ಮೇಗಪ್ಪ ಬೂದಿಹಾಳ, ಮಹಾಂತೇಶ್ ರತ್ನಪ್ಪ ರಾಥೋಡ್, ಗುಡ್ಡದಬೂದಿಹಾಳ ಗ್ರಾಮದ ಸಿದ್ದನಗೌಡ ನಿಂಗನಗೌಡ ಪಾಟೀಲ್, ಗೋಣೆಶ್ ಅಲಿಯಾಸ್ ರಮೇಶ್ ಮಲ್ಲಪ್ಪ ತಳವಾರ ಎಂಬುವವರನ್ನು ಬಂಧಿಸಲಾಗಿದೆ.

ಬಂಧಿತರಿಂದ ನಗದು 1950 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನೇಹ…..

0

ನೀ ಎಣ್ಣೆಯಾಗು, ನಾ ಹಣತೆಯಾಗುವೆ..
ಯಾರೇ ಬತ್ತಿ ಇಡಲಿ ನಗು-ನಗುತಾ ಬೆಳಗೋಣ
ಈ ನಮ್ಮ ಸ್ನೇಹವ..

ನೀ ಬೇಳೆಯಾಗು, ನಾ ಬೆಲ್ಲವಾಗುವೆ,
ಯಾರೇ ಬೇಯಿಸಿದರೂ, ಬೆಂದು ಹೂರಣವಾಗಿ
ಬಡಿಸೋಣ ಹೋಳಿಗೆಯ ರಸದೌತಣವ..

ನೀ ಕಬ್ಬಾಗು, ನಾ ರಸವಾಗುವೆ..
ಯಾರೇ ಹಿಂಡಿ ನೋಯಿಸಿದರೂ ಅವರ
ಬಾಯಿಗೆ ಸಿಹಿ ನೀಡಿ ಸವಿಸೋಣ ನಮ್ಮ ಸ್ನೇಹವ ..

ನೀ ಸುಮವಾಗು, ನಾ ಘಮವಾಗುವೆ…
ಯಾರೇ ಕಿತ್ತು ಎತ್ತಿಕೊಂಡರೂ ಪಸರಿಸೋಣ
ನಮ್ಮ ಸ್ನೇಹದ ಪರಿಮಳವ.. ಅಲಂಕರಿಸೋಣ ಅವರ ಮನೆ, ಮನವ.. 🌸🌼🌹 ✍️

ಪವಿತ್ರ ಬಡಿಗೇರ್ ಕಡಬಗೆರೆ

ಪೊಲೀಸರ ಕಾರ್ಯಚರಣೆ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ಲಕ್ಷ್ಮೇಶ್ವರ ಹಾಗೂ ಮುಳಗುಂದ ಪಟ್ಟಣದಲ್ಲಿ ನಡೆದಿದ್ದ ಎರಡು ಮನೆ ಕಳ್ಳತನ ಪ್ರಕರಣ ಬೇಧಿಸಿರುವ ಲಕ್ಷ್ಮೇಶ್ವರ ಪೊಲೀಸರು, ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ.
2021 ರ ಜನವರಿಯಲ್ಲಿ ಮುಳಗುಂದ ಹಾಗೂ ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೀಗ ಮುರಿದು ಮನೆ ಕಳ್ಳತನ ಮಾಡಿದ್ದ ಲಕ್ಷ್ಮೇಶ್ವರ ಪಟ್ಟಣದ ಸಂತೋಷ ಮನೋಹರ ಗಬ್ಬೂರು ಹಾಗೂ ರಶೀದ್ ಇಸ್ಮಾಯಿಲಸಾಬ್ ಮುಳಗುಂದ ಎಂಬುವರನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ಬಾಭರಣ, ಒಂದು ಮೊಬೈಲ್ ಹಾಗೂ ನಗದು 20 ಸಾವಿರ ಜಪ್ತಿ ಮಾಡಿದ್ದಾರೆ.
ಎಸ್ಪಿ ಯತೀಶ್ ಎನ್, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಮಾರ್ಗದರ್ಶನದಲ್ಲಿ, ಸಿಪಿಐ ವಿಕಾಸ್ ಪಿ ಲಮಾಣಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಡಿ. ಪ್ರಕಾಶ್, ಪಿ ಎಮ್ ಬಡಿಗೇರ, ಎಎಸ್ಐ ಗುರುರಾಜ್ ಬೂದಿಹಾಳ ಸಿಬ್ಬಂದಿಗಳಾದ ಎಮ್ ಬಿ ವಡ್ಡಟ್ಟಿ, ಮಾರುತಿ ಲಮಾಣಿ, ಚಂದ್ರು ಕಾಕನೂರು, ಎಸ್ ಎಸ್ ಯರಗಟ್ಟಿ, ಎನ್ ಡಿ ಹುಬ್ಬಳ್ಳಿ ಪಾಲ್ಗೊಂಡಿದ್ದರು.

ಕಂದಾಯ ಇಲಾಖೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ; ರೆವಿನ್ಯೂ ಇನ್ಸ್‌ಪೆಕ್ಟರ್ ಪಾಟೀಲ್ ಪರಾರಿ!

ವಿಜಯಸಾಕ್ಷಿ ಸುದ್ದಿ, ಗದಗ

ಖರೀದಿಸಿದ ಜಮೀನು ನೋಂದಣಿ ಮಾಡಲು ಲಂಚ ಕೇಳಿದ ಆರೋಪದ ಹಿನ್ನೆಲೆಯಲ್ಲಿ (ಚವಡಿ ಕೂಟ) ಕಂದಾಯ ಇಲಾಖೆಯ ಕಛೇರಿ ಮೇಲೆ ಎಸಿಬಿ ಅಧಿಕಾರಿಗಳು ಶನಿವಾರ ಸಂಜೆ ದಾಳಿ ಮಾಡಿದ್ದಾರೆ. ಹಣ ಪಡೆದ ಆರೋಪದಲ್ಲಿ ಮಧ್ಯವರ್ತಿ ದಾವಲ ಎಂಬಾತನನ್ನು ‌ವಶಕ್ಕೆ ಪಡೆಯಲಾಗಿದ್ದು, ದಾಳಿಯ ವಿಷಯ ತಿಳಿದ ರೆವಿನ್ಯೂ ಇನ್ಸ್‌ಪೆಕ್ಟರ್ ಎಸ್ ಎಸ್ ಪಾಟೀಲ್ ಪರಾರಿ ಆಗಿದ್ದಾರೆ.

ಗದಗ ತಾಲೂಕಿನ ಅಂತೂರು ಬೆಂತೂರ‌ ಗ್ರಾಮದ ಗುರಯ್ಯ ಲಗ್ಮಯ್ಯನವರ ಎಂಬುವವರು ಜಮೀನು ಖರೀದಿ ಮಾಡಿದ್ದರು. ಅದನ್ನು ಇವರ ಹೆಸರಲ್ಲಿ ನೋಂದಣಿ ಮಾಡಲು ಎಂಟು ಸಾವಿರ ಲಂಚ‌ ಕೇಳಿದ ಆರೋಪ ರೆವಿನ್ಯೂ ಇನ್ಸ್‌ಪೆಕ್ಟರ್ ಎಸ್ ಎಸ್ ಪಾಟೀಲ್ ಅವರ ಮೇಲಿದೆ.

ಇವತ್ತು ಗುರಯ್ಯ ಎಂಬ ರೈತ ಹಣ ಕೊಡಲು ಬಂದಾಗ ಕಚೇರಿಯಲ್ಲಿ ಇರಲಿಲ್ಲ ಎನ್ನಲಾಗಿದೆ. ಸಂಪರ್ಕಿಸಿದಾಗ ಮಧ್ಯವರ್ತಿ ದಾವಲ ಕೈಯಲ್ಲಿ ಕೊಡಲು ಹೇಳಲಾಗಿತ್ತು ಎಂದು ತಿಳಿದು ಬಂದಿದೆ. ನಂತರ ರೈತ ಎಂಟು ಸಾವಿರ ಹಣವನ್ನು ಮಧ್ಯವರ್ತಿ ದಾವಲ ಎಂಬಾತನ ಕೈಯಲ್ಲಿ ಕೊಟ್ಟಿದ್ದಾರೆ.

ಆಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಮಧ್ಯವರ್ತಿ ದಾವಲನನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವಿಷಯ ಕಂದಾಯ ಇಲಾಖೆಯಲ್ಲಿ ಇದ್ದ ಸಿಬ್ಬಂದಿ ಎಸ್ ಎಸ್ ಪಾಟೀಲ್ ರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಇದರಿಂದ ರೆವಿನ್ಯೂ ಇನ್ಸ್‌ಪೆಕ್ಟರ್ ಎಸ್ ಎಸ್ ಪಾಟೀಲ್ ಕಚೇರಿಯತ್ತ ಸುಳಿಯದೇ ಅಲ್ಲಿಂದಲೇ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸಿಬಿ ಎಸ್ಪಿ ನೇಮಗೌಡ, ಡಿವೈಎಸ್ಪಿ ಸುರೇಶ್ ರೆಡ್ಡಿ, ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಗಳಾದ ಆರ್ ಎಫ್ ದೇಸಾಯಿ, ವೀರೇಶ್ ಹಳ್ಳಿ, ಸಿಬ್ಬಂದಿಗಳಾದ ನಾರಾಯಣಗೌಡ್ ತಾಯಣ್ಣವರ್, ಎಮ್ ಎಮ್ ಅಯ್ಯನಗೌಡ್ರ, ಆರ್ ಎಸ್ ಹೆಬಸೂರ, ವೀರೇಶ್ ಜೋಳದ, ಶರೀಫ್ ಮುಲ್ಲಾ, ಮಂಜು ಮುಳಗುಂದ, ಐ ಸಿ ಜಾಲಿಹಾಳ, ಹಾಗೂ ಬಿಸಿನಳ್ಳಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಂಪುಟ ರಚನೆಗೆ ಹೈಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ: ಸಿಎಂ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಸಂಪುಟ ರಚನೆ ವಿಚಾರವಾಗಿ ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ. ಮಧ್ಯಾಹ್ನದೊಳಗೆ ಲಿಸ್ಟ್ ಬರುತ್ತೋ ಇಲ್ಲವೋ ಗೊತ್ತಿಲ್ಲ. ಈ ಬಗ್ಗೆ ನನಗಿನ್ನೂ ಯಾವುದೇ ಕರೆ ಬಂದಿಲ್ಲ. ಸೂಚನೆ ಬಂದ ಕೂಡಲೇ ಸಚಿವರ ಪಟ್ಟಿ ಬಗ್ಗೆ ಚರ್ಚಿಸುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಭೇಟಿ ವೇಳೆ ಯಾವುದೇ ಚರ್ಚೆಯಾಗಿಲ್ಲ. ವರಿಷ್ಠರ ಸೂಚನೆಯಂತೆ ಸಂಪುಟ ರಚನೆ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಬೆಂಗಳೂರಿಗೆ ವಾಪಸ್ ಬರಲಿದ್ದು,  ಬಳಿಕ ಕೋವಿಡ್ ಕುರಿತು ಎರಡು ಸಭೆ ನಡೆಸುತ್ತೇನೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಇನ್ನೊಮ್ಮೆ 8 ಜಿಲ್ಲೆಗಳ ಅಧಿಕಾರಿಗಳ ಜೊತೆ ಚರ್ಚಿಸಿ ಕೈಗೊಳ್ಳಬೇಕಾದ ಬಿಗಿ ಕ್ರಮಗಳ ಬಗ್ಗೆ ಸೂಚಿಸಲಾಗುವುದು. ಇನ್ನೊಂದು ಸಭೆಯಲ್ಲಿ ಲಸಿಕೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ವಿಚಾರವಾಗಿ ಚರ್ಚಿಸಲಾಗುವುದು ಎಂದರು.

ಈವರೆಗೆ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದವರನ್ನು ತಪಾಸಣೆ ನಡೆಸಿ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಇನ್ಮುಂದೆ ರೈಲ್ವೆ ಮಾರ್ಗಗಳಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗುವುದು ಎಂದು ಸಿಎಂ ತಿಳಿಸಿದರು.