Home Blog Page 3451

ಡಿಸಿ ರೋಹಿಣಿ ಸಿಂಧೂರಿ ಅವರ ಕುಟುಂಬಸ್ಥರೆಲ್ಲರಿಗೂ ಸೋಂಕು

ವಿಜಯಸಾಕ್ಷಿ ಸುದ್ದಿ, ಮೈಸೂರು

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕುಟುಂಬಸ್ಥರೆಲ್ಲ ಕೊರೊನಾದಿಂದ ಬಳಲುತ್ತಿದ್ದಾರೆ. ಆದರೆ, ರೋಹಿಣಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ – ತಾಯಿ, ಅತ್ತೆ – ಮಾವ ಹಾಗೂ ಪತಿ ಸೇರಿದಂತೆ ಎಲ್ಲರಿಗೂ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಎಲ್ಲರೂ ಹೋಂ ಐಸೋಲೇಷನ್ ನಲ್ಲಿದ್ದಾರೆ.

ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಬಂದ ಕಾರಣದಿಂದಾಗಿ ಜಿಲ್ಲಾಧಿಕಾರಿ ರೋಹಿಣಿ ಅವರು ಕೂಡ ಟೆಸ್ಟ್ ಗೆ ಒಳಪಟ್ಟಿದ್ದರು. ಆದರೆ, ಅವರ ವರದಿ ನೆಗೆಟಿವ್ ಎಂದು ಬಂದಿದೆ.

ಕುಟುಂಬಸ್ಥರೆಲ್ಲ ಮುಂಜಾಗ್ರತೆ ವಹಿಸಿದ ಹಿನ್ನೆಲೆಯಲ್ಲಿ ಯಾರಿಗೂ ಸಮಸ್ಯೆಯಾಗಿಲ್ಲ. ಎಲ್ಲರೂ ಹೋಮ್ ಐಸೋಲೇಶನ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿಯೂ ಕೊರೊನಾ ನಿಭಾಯಿಸುತ್ತಿದ್ದು, ಮನೆಯಲ್ಲಿಯೂ ಕುಟುಂಬಸ್ಥರನ್ನು ನೋಡಿಕೊಳ್ಳುತ್ತಿದ್ದಾರೆ.

ಎರಡೇ ವಾರದಲ್ಲಿ 13 ಜನರ ಸಾವು; ದೇವರ ಮೊರೆ ಹೋದ ಗ್ರಾಮಸ್ಥರು!

ವಿಜಯಸಾಕ್ಷಿ ಸುದ್ದಿ, ಧಾರವಾಡ

ಕೇವಲ ಎರಡೇ ವಾರದಲ್ಲಿ ಒಂದೇ ಗ್ರಾಮದ ಬರೋಬ್ಬರಿ 13 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಇಡೀ ಗ್ರಾಮ ಹಾಗೂ ಸುತ್ತಮುತ್ತಲಿನ ಜನ ಆತಂಕದಲ್ಲಿದ್ದು, ಸದ್ಯ ದೇವರ ಮೊರೆ ಹೋಗಿದ್ದಾರೆ.

ತಾಲೂಕಿನ ಮನಸೂರ ಗ್ರಾಮದಲ್ಲಿ ಕೇವಲ ಎರಡು ವಾರದಲ್ಲಿ ಬರೋಬ್ಬರಿ 13 ಜನ ಸಾವನ್ನಪ್ಪಿದ್ದಾರೆ. ಈ ಪೈಕಿ ಇಬ್ಬರು ಕೋವಿಡ್‍ ನಿಂದ ಸಾವನ್ನಪ್ಪಿದ್ದರೆ, 11 ಜನ ಇತರೆ ಖಾಯಿಲೆಗಳಿಂದ ಸಾವನ್ನಪ್ಪಿದ್ದಾರೆ. ಆದರೆ, ಹಲವರು ಮಾತ್ರ ಕೋವಿಡ್ ನತ್ತ ಬೊಟ್ಟು ತೋರಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

ಗ್ರಾಮಸ್ಥರು ಮನೆಯಿಂದ ಹೊರಗೆ ಬರಲು ಭಯ ಪಡುತಿದ್ದಾರೆ. ಮನೆ ಬಾಗಿಲು ಹಾಕಿಕೊಂಡೇ ಸದ್ಯ ಜನರು ಮನೆಯಲ್ಲಿಯೇ ಉಳಿದಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಹಲವರು ದೇವರ ಮೊರೆ ಹೋಗಿದ್ದಾರೆ. ಗ್ರಾಮದ ಜನರನ್ನು ಉಳಿಸು ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಕಳೆದ 7 ವರ್ಷಗಳ ಹಿಂದೆ ಈ ಗ್ರಾಮದಲ್ಲಿ ಡೋಣಿ ಕರೆಮ್ಮ ದೇವಸ್ಥಾನ ಕಟ್ಟಲಾಗುತ್ತಿತ್ತು. ಆದರೆ, ಅದು ಹಲವು ಕಾರಣಗಳಿಂದ ಅರ್ಧಕ್ಕೆ ನಿಂತಿತ್ತು. ಹೀಗಾಗಿ ಹಳ್ಳದ ಕರೆಮ್ಮ ದೇವಸ್ಥಾನದಲ್ಲಿ ಡೋಣಿ ಕರೆಮ್ಮ ದೇವಸ್ಥಾನ ಕಟ್ಟಿಸುವುದಾಗಿ ಗ್ರಾಮಸ್ಥರು ದೇವಿಯಲ್ಲಿ ಹರಕೆ ಹೊತ್ತಿದ್ದಾರೆ.
ಈಗಾಗಲೇ ಈ ಕಾರ್ಯ ಕೂಡ ಪ್ರಾರಂಭವಾಗಿದೆ.

ಹಿಂದಿನ ವಾರವಷ್ಟೇ ಒಂದೇ ಓಣಿಯಲ್ಲಿ 4 ಜನ ಎರಡು ದಿನಗಳ ಅಂತರದಲ್ಲಿ ಸಾವನ್ನಪ್ಪಿದ್ದರು. ಆದರೆ, ದೇವರ ಮೊರೆ ಹೋಗುತ್ತಿದ್ದಂತೆ ಗ್ರಾಮದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಕಲಬುರಗಿಯಲ್ಲಿ ಮಹಾಮಾರಿಗೆ ಹೆಡ್ ಕಾನ್ಸಟೇಬಲ್ ಬಲಿ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ

ಮಹಾಮಾರಿಗೆ ಜಿಲ್ಲೆಯಲ್ಲಿ ಹೆಡ್ ಕಾನ್ಸಟೇಬಲ್ ಬಲಿಯಾಗಿದ್ದಾರೆ.
ಇಲ್ಲಿಯ ಅಶೋಕ ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಎಚ್.ಸಿ. ಮಲ್ಲಿಕಾರ್ಜುನ ಬೆಳಗುಂಪಿ (45) ಬಲಿಯಾದ ಪೊಲೀಸ್.

ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಹೈ ಶುಗರ್, ಪಾರ್ಶ್ವವಾಯು ಬಾಧಿಸಿ ಸಾವನ್ನಪ್ಪಿದ್ದಾರೆ. ಆ ನಂತರ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದ ಎರಡನೇ ಪೊಲೀಸ್ ಆಗಿದ್ದಾರೆ. ಈ ಹಿಂದೆ ಮಹಾಮಾರಿಗೆ ನಗರದ ರೋಜಾ ಎಂಬ ಎಎಸ್ ಐ ಸಾವನ್ನಪ್ಪಿದ್ದಾರೆ.
ಪೊಲೀಸರಲ್ಲಿಯೂ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗುತ್ತಿದೆ.

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಹುಟ್ಟು ಹಬ್ಬವಿಂದು!

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಬಾಲಿವುಡ್ ನ ಹಿರಿಯ ನಟಿ ಮಾಧುರಿ ದೀಕ್ಷಿತ್ ಅವರು ಇಂದು ತಮ್ಮ 54ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಮಾಧುರಿ ದೀಕ್ಷಿತ್ ಅವರು 1967ರ ಮೇ. 15ರಂದು ಜನಿಸಿದ್ದರು. ಅವರು 1984ರಲ್ಲಿ ಅಬೋಧ್ ಚಿತ್ರದ ಮೂಲಕ ತಮ್ಮ ಬಣ್ಣದ ಲೋಕ ಪ್ರಾರಂಭಿಸಿದ್ದರು. ಆ ನಂತರ 1988ರಲ್ಲಿ ತೇಜಾಬ್ ಸಿನಿಮಾದಲ್ಲಿ ಅಭಿನಯಿಸಿದ್ದ ಮಾಧುರಿ, ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಆ ನಂತರ ಮಾಧುರಿ ದೀಕ್ಷಿತ್ ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ಅಭಿಮಾನಿಗಳಿಗೆ ಕೊಟ್ಟರು.

ಅಮಿತಾಬ್ ಬಚ್ಚನ್, ಶಾರೂಖ್ ಖಾನ್, ಅಕ್ಷಯ್ ಕುಮಾರ್, ಸಲ್ಮಾನ್ ಖಾನ್ ಸೇರಿದಂತೆ ಎಲ್ಲ ಸೂಪರ್ ಸ್ಟಾರ್ ಗಳೊಂದಿಗೂ ಮಾಧುರಿ ನಟಿಸಿದ್ದಾರೆ. ಅಲ್ಲದೇ, ಒಂದು ಕಾಲದಲ್ಲಿ ಇಡೀ ಬಾಲಿವುಡ್ ನ್ನೇ ಇವರು ಆಳಿದ್ದರು. ಅಷ್ಟೊಂದು ಬೇಡಿಕೆ ಇವರಿಗೆ ಇತ್ತು. ಒಂದು ಕಾಲದಲ್ಲಿ ನಾಯಕ ನಟನಿಗಿಂತಲೂ ಮಾಧುರಿಗೆ ಹೆಚ್ಚಿನ ಅಭಿಮಾನಿಗಳಿದ್ದರು.

ಬಾಲಿವುಡ್ ಚಿತ್ರ ರಂಗದಲ್ಲಿ ಹಲವಾರು ಫಿಲ್ಮ್ ಫೇರ್ ಅವಾರ್ಡ್ ಗಳನ್ನು ಅವರು ಬಾಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಹಲವಾರು ನಟ – ನಟಿಯರು ವಿಶ್ ಮಾಡಿದ್ದಾರೆ. ಆದರೆ, ಸೆಲೆಬ್ರಿಟಿಗಳು ಮಾತ್ರ ಈ ಕೊರೊನಾ ಸಂಕಷ್ಟದಲ್ಲಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿಲ್ಲ. ಈ ಸಾಲಿಗೆ ಮಾಧುರಿ ಕೂಡ ಸೇರಿದ್ದಾರೆ.

ಕೈ ಕೊಟ್ಟ ಮಹಿಳೆ; ಕೊಡಲಿ ಕಾವಿನಿಂದ ಹಲ್ಲೆ ಮಾಡಿದ ಯುವಕ!

ವಿಜಯಸಾಕ್ಷಿ ಸುದ್ದಿ, ಗದಗ

ಪತಿಯಿಂದ ದೂರವಾಗಿದ್ದ ಮಹಿಳೆಯೊಂದಿಗೆ
ಮೂರು ‌ವರ್ಷಗಳಿಂದ ಸಂಬಂಧ ಇಟಕೊಂಡಿದ್ದ ಲಾರಿ ಚಾಲಕನೊಬ್ಬ ಆ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದು, ಬಿಡಿಸಲು ಬಂದ ಮಹಿಳೆಯ ತಾಯಿಯ ಮೇಲೂ ಹಲ್ಲೆ ನಡೆಸಿದ ಘಟನೆ ನಡೆದಿದೆ

ಜಿಲ್ಲೆಯ ಮುಂಡರಗಿ ತಾಲೂಕಿನ ಚುರ್ಚಿಹಾಳ ಗ್ರಾಮದಲ್ಲಿ ಈ ಘಟನೆ ನಡೆದದ್ದು, ಆರೋಪಿ ಲಾರಿ ಚಾಲಕ ಗೂಡಸಾಬ್ ಅಮೀನಸಾಬ್ ನದಾಫ್ ಎಂಬಾತ ಅದೇ ಗ್ರಾಮದ ಮಹಿಳೆಯೊಂದಿಗೆ ಸಂಬಂಧ ಇಟಗೊಂಡಿದ್ದ. ಮೂರು ವರ್ಷಗಳ ಕಾಲ ಚೆನ್ನಾಗಿಯೇ ಇದ್ದ ಸಂಬಂಧ ಇತ್ತೀಚೆಗೆ ಹಳಸಿದೆ. ಆ ಮಹಿಳೆ ಇತ್ತೀಚೆಗೆ ಗೂಡುಸಾಬ್ ನನ್ನು ನಿರ್ಲಕ್ಷ್ಯ ಮಾಡಲು ಶುರು ಹಚ್ಚಗೊಂಡಿದ್ದಾಳೆ.

ಇದರಿಂದಾಗಿ ಆರೋಪಿ ಗೂಡುಸಾಬ್ ನಿಗೆ ಸಿಟ್ಟು ಬಂದಿದೆ. ಆಗಾಗ ಆ ಮಹಿಳೆಯ ಮನೆ ಮುಂದೆ ತಿರುಗಾಡುತ್ತಾ ಅವಾಚ್ಯ ಪದಗಳನ್ನು ಬಳಸಿ ಬೈದಾಡುತ್ತಾ ಹೋಗುತ್ತಿದ್ದ.

ಹೀಗೆ ಕೈಯಲ್ಲಿ ಕೊಡಲಿ ಹಿಡಕೊಂಡ ಆರೋಪಿ ಮೊನ್ನೆ ಮಹಿಳೆಯ ಮನೆ ಮುಂದೆ ಹೋಗಿ ದುಡ್ಡು ಕೊಡು ಅಂತ ಕೇಳಿದ್ದಾನೆ. ನೀ ಯಾವುದು ದುಡ್ಡು ಕೊಟ್ಟಿಲ್ಲ ಅಂತ ಮಾತಿಗೆ ಮಾತು ಬೆಳೆದ ಜಗಳ ದೀರ್ಘಕ್ಕೆ ಹೋಗಿ ಕೈಯಲ್ಲಿದ್ದ ಇದ್ದ ಕೊಡಲಿ ಕಾವಿನಿಂದ ಹಲ್ಲೆ ಮಾಡಿದ್ದಾನೆ. ಬಿಡಿಸಲು ಬಂದ ಆ ಮಹಿಳೆಯ ತಾಯಿಗೂ ಗಾಯವಾಗಿದೆ.

ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆರೋಪಿ ಗೂಡುಸಾಬ್ ಪೊಲೀಸರ ಅತಿಥಿಯಾಗಿದ್ದಾನೆ

ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ಸಾವಿನಿಂದ ಮನನೊಂದ ಪತಿ; ಪೋಟೋ ಜೇಬಲ್ಲಿ ಇಟಕೊಂಡೇ ಆತ್ಮಹತ್ಯೆಗೆ ಶರಣು

ವಿಜಯಸಾಕ್ಷಿ ಸುದ್ದಿ, ಗದಗ

ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಸಾವಿನಿಂದ ಮನನೊಂದ ಪತಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ನಡೆದಿದೆ.

ಡೋಣಿ ಗ್ರಾಮದ ಪರಸಪ್ಪ ಮುದಿಯಪ್ಪ ಜಂಗಳಿ (42) ಎಂಬಾತನೇ ಜಮೀನಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.

ಒಂದು ತಿಂಗಳ ಹಿಂದೆ ಪರಸಪ್ಪನ ಪತ್ನಿ ಶಾಂತವ್ವ( 36) ಅನಾರೋಗ್ಯದಿಂದ ಮೃತಪಟ್ಟಿದ್ದಳು. ಅದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ ಪರಸಪ್ಪ ಮಾನಸ್ಸಿಕವಾಗಿ ಕುಗ್ಗಿ ಹೋಗಿದ್ದ.

ಶುಕ್ರವಾರ ರಾತ್ರಿ ಜಮೀನಿಗೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಂಜಾನೆ ಮರದಡಿಯಲ್ಲಿ‌ ನೇತಾಡುತ್ತಿದ್ದ ಶವ ನೋಡಿದ ಗ್ರಾಮಸ್ಥರು‌ ಗಾಬರಿಯಾಗಿ ಪೊಲೀಸರಿಗೆ ಮಾಹಿತಿ ‌ನೀಡಿದ್ದಾರೆ.

ಸುದ್ದಿ ತಿಳಿದ ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ಪರಿಶೀಲನೆ ಮಾಡಿದಾಗ, ಮೃತ ಪರಸಪ್ಪನ ಜೇಬಲ್ಲಿ ಪತ್ನಿ ಶಾಂತವ್ವಳ ಪೋಟೋ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಲೆ ಇಲ್ಲದೆ ನಡು ರಸ್ತೆಯಲ್ಲಿಯೇ ಟೊಮ್ಯಾಟೋ ಸುರಿದು ಹೋಗುತ್ತಿರುವ ರೈತರು!

ವಿಜಯಸಾಕ್ಷಿ ಸುದ್ದಿ, ಕೋಲಾರ

ಕೊರೊನಾ ಚೈನ್ ಕಟ್ ಮಾಡುವ ಉದ್ಧೇಶದಿಂದ ರಾಜ್ಯದಲ್ಲಿ ಜಾರಿಗೊಳಿಸಿರುವ ಲಾಕ್ ಡೌನ್ ನಿಂದಾಗಿ ರೈತರ ಬದುಕು ಬೀದಿಗೆ ಬಂದಿದೆ.
ರೈತರ ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲದಂತಾಗುತ್ತಿದೆ. ಇದರಿಂದಾಗಿ ರೈತರು ಹೈರಾಣಾಗುತ್ತಿದ್ದಾರೆ. ಎಕರೆಗೆ ರೂ. 3 ಲಕ್ಷ ವ್ಯಯಿಸಿ ಬೆಳೆದ ಮೂರು ಲಕ್ಷ ಖರ್ಚು ಮಾಡಿ ಬೆಳೆದ ಬೆಳೆ.

15 ಕೆಜಿ ತೂಕದ ಟೊಮ್ಯಾಟೋ ಇರುವ ಒಂದು ಬಾಕ್ಸ್ ಕೇವ ರೂ. 30ಕ್ಕೆ ಮಾರಾಟವಾಗುತ್ತಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ಬಳಿ ಇರುವ ಮಾರುಕಟ್ಟೆಯಲ್ಲಿ ಈ ರೀತಿ ಮಾರಾಟವಾಗುತ್ತಿದೆ. ಕೆಜಿ ಟೊಮ್ಯಾಟೋ ಕೇವಲ ರೂ. 2ಕ್ಕೆ ಮಾರಾಟಾವಾಗುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಈ ಕಾರಣದಿಂದಾಗಿ ರೈತರು ಟೊಮ್ಯಾಟೋ ಮಾರಾಟ ಮಾಡದೆ ರಸ್ತೆಯಲ್ಲಿ ಎಸೆದು ಹೋಗುತ್ತಿದ್ದಾರೆ. ದಲ್ಲಾಳಿಗಳಿಗೆ ಟೊಮೊಟೊ ಬಾಕ್ಸ್ ಗಳನ್ನು ಹಿಂದಿರುಗಿಸುವ ಉದ್ಧೇಶದಿಂದ ರೈತರು ರಸ್ತೆಯಲ್ಲಿಯೇ ಟೊಮ್ಯಾಟೋ ಸುರಿಯುತ್ತಿದ್ದಾರೆ.
ಇಂದು ಈ ಮಾರುಕಟ್ಟೆಗೆ ರೂ. 30 ಸಾವಿರ ಟೊಮ್ಯಾಟೋ ಬಾಕ್ಸ್ ಗಳು ಬಂದಿದ್ದವು. ಈ ಪೈಕಿ 5 ಸಾವಿರ ಬಾಕ್ಸ್ ಗಳು ರೂ. 3 ರೂಪಾಯಿಯಂತೆ ಮಾರಾಟವಾಗಿವೆ.

ಇನ್ನುಳಿದ 25 ಸಾವಿರ ಟೊಮ್ಯಾಟೋ ಬಾಕ್ಸ್ ಗಳನ್ನು ಕೇವಲ ರೂ. 10 ರಿಂದ 20ಕ್ಕೆ ಕೇಳಿದ ದಲ್ಲಾಳಿಗಳು. ಇದಕ್ಕೆ ಮನನೊಂದು ರಸ್ತೆ ಬದಿ ಸುರಿದು ರೈತರು ಹೋಗುತ್ತಿದ್ದಾರೆ. ಪ್ರತಿಯೊಬ್ಬ ರೈತರು ಒಂದು ಎಕೆರೆಗೆ ರೂ. 3 ಲಕ್ಷ ಖರ್ಚು ಮಾಡಿ ಟೊಮ್ಯಾಟೋ ಬೆಳೆದಿದ್ದಾರೆ. ಆದರೆ, ರೈತರ ಕೈಗೆ ಮಾತ್ರ ಪುಡಿಗಾಸು ಸಿಗುತ್ತಿದೆ. ಹೀಗಾಗಿ ರೈತರ ನೋವನ್ನು ಕೂಡಲೇ ಸರ್ಕಾರ ಆಲಿಸಿ, ಬೆಂಬಲ ಬೆಲೆ ಘೋಷಿಸಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.

ದೇಶದಲ್ಲಿ ಇಳಿಮುಖದತ್ತ ಮಹಾಮಾರಿ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ದೇಶದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತ ಸಾಗುತ್ತಿದೆ. ಚೇತರಿಕೆ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಜನ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಿಟ್ಟಿನಲ್ಲಿ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 2,66,207ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 36,73,802ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,04,57,579 ಜನರಿಗೆ ಲಸಿಕೆ ನೀಡಲಾಗಿದೆ.

ಏಮ್ಸ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ದೆಹಲಿ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್ ನಿಂದ ಪ್ರಸಕ್ತ ಸಾಲಿಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.
ಏಮ್ಸ್‌ ಸೀನಿಯರ್ ರೆಸಿಡೆಂಟ್ಸ್‌ ಮತ್ತು ಸೀನಿಯರ್ ಡೆಮಾಂಸ್ಟ್ರೇಟರ್ಸ್‌ ಹುದ್ದೆಗಳನ್ನು ಜುಲೈ – 2021 ಸೆಷನ್‌ ಗೆ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಏಮ್ಸ್‌ ಅಧಿಕೃತ ವೆಬ್‌ಸೈಟ್ aiimsexams.ac.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 28, 2021 ಕೊನೆಯ ದಿನವಾಗಿದೆ.

ಏಮ್ಸ್‌ ಸೀನಿಯರ್ ರೆಸಿಡೆಂಟ್ಸ್‌ ಮತ್ತು ಸೀನಿಯರ್ ಡೆಮಾಂಸ್ಟ್ರೇಟರ್ಸ್‌ ನೇಮಕಾತಿ ಪ್ರಕ್ರಿಯೆ ಮೂಲಕ ಒಟ್ಟು 416 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ಅವಧಿ ಕನಿಷ್ಠ 3 ವರ್ಷ ಇರುತ್ತದೆ. ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
ಹುದ್ದೆಗಳಿಗೆ ಅನುಗುಣವಾಗಿ ಎಂಡಿ, ಎಂಎಸ್, ಎಂಡಿಎಸ್, ಡಿಎನ್‌ ಬಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.

ದೇಶದ ಕೊರೊನಾ ಪರಿಸ್ಥಿತಿಗೆ ಆತಂಕ ವ್ಯಕ್ತಪಡಿಸಿದ ವಿಶ್ವ ಆರೋಗ್ಯ ಸಂಸ್ಥೆ

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಭಾರತ ದೇಶದಲ್ಲಿ ಕೊರೊನಾ ಸ್ಥಿತಿ ಭೀಕರವಾಗುತ್ತಿದೆ. ಅಲ್ಲಿನ ಕೆಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಇದನ್ನು ಗಮನಿಸಿದರೆ ಎರಡನೇ ವರ್ಷ ಇನ್ನೂ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ಆತಂಕ ವ್ಯಕ್ತಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಕುರಿತು ಮಾತನಾಡಿ, ಭಾರತದ ಪರಿಸ್ಥಿತಿಗೆ ವಿಶ್ವ ಸಂಸ್ಥೆ ಸ್ಪಂದಿಸುತ್ತಿದೆ. ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್ ಗಳು, ಮೊಬೈಲ್ ಫೀಲ್ಡ್ ಹಾಸ್ಪಿಟಲ್‍ ಗಳಿಗಾಗಿ ಟೆಂಟ್ಗಸಳು, ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ಪೂರೈಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭಾರತವು ಇನ್ನೂ ಮಹಾಮಾರಿ ವಿರುದ್ಧ ಹೋರಾಡಬೇಕಾದ ಅಗತ್ಯವಿದೆ. ಹಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಚಿಂತೆಗೀಡು ಮಾಡುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವುದು ಹಾಗೂ ಸಾವುಗಳನ್ನು ನೋಡಿದರೆ ಭಯವಾಗುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿರುವ ದೇಶಗಳಿಗೆ ವಿಶ್ವ ಸಂಸ್ಥೆ ಧನ್ಯವಾದ ಅರ್ಪಿಸುತ್ತದೆ ಎಂದು ಹೇಳಿದ್ದಾರೆ.

ಈ ಪರಿಸ್ಥಿತಿ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ನೇಪಾಳ, ಶ್ರೀಲಂಕಾ, ವಿಯಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್ ಹಾಗೂ ಈಜಿಪ್ಟ್ ದೇಶಗಳಲ್ಲಿ ಕೂಡ ಇದೆ ಎಂದು ವಿಶ್ವ ಸಂಸ್ಥೆ ಹೇಳಿದೆ.

error: Content is protected !!