Home Blog Page 3461

ಕೊರೊನಾ ನಿಯಂತ್ರಣ ದೊಡ್ಡ ವಿಷಯವಲ್ಲ – ರಮೇಶ್ ಜಾರಕಿಹೊಳಿ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಸರಿಯಾಗಿ ನಿಯಂತ್ರಣ ಮಾಡದಿರೆ ಕೊರೊನಾ ಮಹಾರೋಗವಲ್ಲ. ಅದನ್ನು ನಿಯಂತ್ರಣಕ್ಕೆ ತರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ.

ಜನರು ಗಂಭೀರ ಪರಿಸ್ಥಿತಿ ಇದ್ದರೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಇಲ್ಲದಿದ್ದರೆ ಮನೆಯಲ್ಲಿಯೇ ಐಸೊಲೇಟ್ ಆಗಿ ಇರಬೇಕು. ಯೋಗ, ಪ್ರಾಣಾಯಾಮ, ವ್ಯಾಯಾಮ, ಉತ್ತಮ ಆಹಾರ ಸೇವಿಸಿದರೆ ಸೋಂಕು ನಿಯಂತ್ರಣ ಮಾಡಬಹುದು. ವೈದ್ಯರ ಸಲಹೆ ಪಡೆದರೆ ಕೊರೊನಾ ನಿಯಂತ್ರಣಕ್ಕೆ ಬರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಗೋಕಾಕ್ ತಹಸೀಲ್ದಾರ್ ಕಚೇರಿಯಲ್ಲಿ ಕೋವಿಡ್ ನಿರ್ವಹಣಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸಲು ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಸಿಡಿ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಅವರು ಸಭೆಗೆ ಹಾಜರಾಗಿದ್ದಾರೆ.

ಸದ್ಯ ರಾಜ್ಯದಲ್ಲಿ ಮಹಾಮಾರಿಯ ಅಲೆ ಜೋರಾಗಿದೆ. ಹೀಗಾಗಿ ಸಿಎಂ, ಸರ್ಕಾರದೊಂದಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಿ ಕೆಲಸ ಮಾಡಿ ಬೇಗನೆ ಮಹಾಮಾರಿ ತಡೆಗಟ್ಟಬಹುದು ಎಂದು ಹೇಳಿದ್ದಾರೆ.

ವೇಗದ ಬೌಲರ್ ಪ್ರಸಿದ್ಧ್ ಕೃಷ್ಣಗೆ ಬಿಗ್ ಶಾಕ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಭಾರತದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರಿಗೆ ಕೊರೊನಾ ಬೆನ್ನು ಬಿದ್ದಿದೆ.

ಪ್ರಸಿದ್ಧ್ ಕೃಷ್ಣ ಅವರು ಇಂಗ್ಲೆಂಡ್‍ ನಲ್ಲಿ ನಡೆಯುವ ಐಸಿಸಿ ಟೆಸ್ಟ್ ಚಾಂಪಿಯನ್‍ ಶಿಪ್ ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಇತ್ತೀಚೆಗೆ ಕೊರೊನಾದಿಂದ ರದ್ದಾಗಿದ್ದ ಐಪಿಎಲ್‍ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಪ್ರಸಿದ್ಧ್ ಕೃಷ್ಣ ಆಡುತ್ತಿದ್ದರು.

ಪ್ರಸಿದ್ಧ್ ಕೃಷ್ಣ ಅವರು ಐಪಿಎಲ್ ರದ್ದಾದ ಹಿನ್ನೆಲೆಯಲ್ಲಿ ನಗರದಲ್ಲಿನ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಕೊರೊನಾ ಟೆಸ್ಟ್ ಗೆ ಒಳಗಾಗಿದ್ದಾರೆ. ಈ ಮೊದಲು ಕೋಲ್ಕತ್ತಾ ತಂಡದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಸೋಂಕು ತಗುಲಿತ್ತು. ಆ ನಂತರ ಬಿಸಿಸಿಐ ಐಪಿಎಲ್‍, ಟೂರ್ನಿಯನ್ನೇ ರದ್ದು ಮಾಡಿತ್ತು. ಹೀಗಾಗಿ ಎಲ್ಲ ಆಟಗಾರರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿದ್ದಾರೆ.

ಪ್ರಸಿದ್ಧ್ ಕೃಷ್ಣ ಅವರು 7 ಪಂದ್ಯಗಳಿಂದ 8 ವಿಕೆಟ್ ಕಬಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಪ್ರಸಿದ್ಧ್ ಕೃಷ್ಣ ಅವರು ಐಪಿಎಲ್ ನಲ್ಲಿ ನೀಡಿದ ಉತ್ತಮ ಪ್ರದರ್ಶನ ಕಂಡು ಬಿಸಿಸಿಐ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಿತ್ತು. ಸದ್ಯ ಕೊರೊನಾ ದೃಢ ಪಟ್ಟಿದೆ. ಜೂ. 18ರಂದು ಇಂಗ್ಲೆಂಡ್ ನಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಆರಂಭವಾಗಲಿದೆ.

ಅಭಿಮಾನಿಗಳಿಗೆ ಸಂದೇಶ ಸಾರಿದ ಕಿಚ್ಚ ಸುದೀಪ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಅನಾರೋಗ್ಯದಿಂದಾಗಿ 3 ವಾರದಿಂದ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ಕಿಚ್ಚ ಸುದೀಪ್, ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಜನರ ಪರಿಸ್ಥಿತಿಯಲ್ಲಿ ಅಭಿಮಾನಿಗಳಿಗೆ ಜೀವನದ ಪಾಠ ಮಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರತಿ ದಿನವನ್ನು ನೀವು ಕಾಣುತ್ತಿದ್ದೀರಾ ಎಂದರೇ ಅದು ಆಶೀರ್ವಾದ. ಪ್ರತಿಕ್ಷಣ ನೀವು ಖುಷಿಯಾಗಿರುತ್ತೀರಾ ಎಂದರೆ ಅದು ನಿಮಗೆ ಸಿಕ್ಕ ದೊಡ್ಡ ಉಡುಗೊರೆ ಎನ್ನುವ ಮೂಲಕ ಪ್ರಸ್ತುತ ಸ್ಥಿತಿಯ ಬಗ್ಗೆ ನಟ ಕಿಚ್ಚ ಸುದೀಪ್ ಎರಡೇ ಅಕ್ಷರದಲ್ಲಿ ಬದುಕಿನ ಸತ್ಯ ತಿಳಿಸಿದ್ದಾರೆ.

ಪ್ರಕೃತಿ ಮತ್ತು ಜೀವನವನ್ನು ಯಾರು ಕೂಡ ನಿಯಂತ್ರಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಅಭಿಮಾನಿಗಳಿಗೆ ಜೀವನದ ಪಾಠ ತಿಳಿಸಿದ್ದಾರೆ. ಸದ್ಯದ ಪರಿಸ್ಥಿತಿ ಎಲ್ಲರಲ್ಲಿಯೂ ಆತಂಕ ಸೃಷ್ಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದಿನವನ್ನು ಸಂತೋಷದಿಂದ ಕಳೆಯಬೇಕು ಎಂದು ಸೋಷಿಯಲ್ ಮಿಡಿಯಾದಲ್ಲಿ ಕಿಚ್ಚ ಹೇಳಿದ್ದಾರೆ.

ನಟಿ ಕಂಗನಾ ದೇಹದಲ್ಲಿ ಕೊರೊನಾ ಪಾರ್ಟಿ ಮಾಡುತ್ತಿದೆಯಂತೆ!

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಸದಾ ವಿವಾದ್ಮಕ ಟ್ವಿಟ್ ಮಾಡಿ ಸುದ್ದಿಯಲ್ಲಿರುತ್ತಿದ್ದ ಕಂಗನಾ ಅವರ ಟ್ವೀಟರ್ ಖಾತೆಯನ್ನು ಇತ್ತಿಚೇಗಷ್ಟೇ ಅಮಾನತು ಮಾಡಲಾಗಿದೆ. ಇದೀಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ.

ಸೆಲೆಬ್ರೆಟಿಸ್‌ ಗಳಿಗೂ ಕೊರೊನಾ ಸೋಂಕು ಬಿಡುತ್ತಿಲ್ಲ. ಇದೀಗ ಕಾಂಟ್ರವರ್ಸಿ ಕ್ವೀನ್ ಕಂಗನಾ ರಾಣಾವತ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ತಮ್ಮ ಇನ್‌ ಸ್ಟಾಗ್ರಾಂನಲ್ಲಿ ಶೇರ್ ಮಾಡಿರುವ ಅವರು, ಕೆಲವು ದಿನಗಳಿಂದ ಸುಸ್ತು ಹಾಗೂ ಕಣ್ಣು ಉರಿ ಕಾಣಿಸಿಕೊಂಡಿತ್ತು.

ಇನ್ನೂ ಇದೇ ಕಾರಣದಿಂದ ಹಿಮಾಚಲ ಪ್ರದೇಶದಲ್ಲಿರುವ ತಮ್ಮ ಮನೆಗೆ ಹೋಗುವುದಕ್ಕಾಗಿ ಕಂಗನಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಸದ್ಯ ಕೋವಿಡ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಮನೆಯಲ್ಲಿಯೇ ಕ್ವಾರೆಂಟೈನ್ ಆಗಿದ್ದಾರೆ. ಕೊರೋನಾ ವೈರಸ್ ನನ್ನ ದೇಹದಲ್ಲಿ ಪಾರ್ಟಿ ಮಾಡುತ್ತಿದೆ ಎಂದು ನನಗೆ ಗೊತ್ತಾಗಿಲ್ಲ. ಆದರೆ, ಇನ್ನು ಅದನ್ನು ನನ್ನ ದೇಹದಲ್ಲಿ ಇರಲು ಬಿಡುವುದಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.

ಕೇವಲ 150 ರೂಪಾಯಿಯಲ್ಲಿ ಮದುವೆ ಮಾಡಿಕೊಂಡ ಜೋಡಿ!

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಸಾಮಾನ್ಯವಾಗಿ ಸ್ಟಾರ್ ನಟರ ಮದುವೆ ಎಂದರೆ ಅಲ್ಲಿ ಆಡಂಬರ ಹಾಗೂ ಅದ್ದೂರಿ ಖಚಿತ ಎಂಬುವುದೇ ಎಲ್ಲರ ಭಾವನೆ. ಆದರೆ, ಇಲ್ಲೊಬ್ಬ ನಟರು ಇದಕ್ಕೆ ಪರ್ಯಾಯವಾಗಿ ಸುದ್ದಿಯಾಗಿದ್ದಾರೆ.

ವಿರಫ್ ಪಟೇಲ್ ತಮ್ಮ ಬಹುಕಾಲದ ಗೆಳತಿ ಸಲೋನಿ ಜೊತೆ ಅತ್ಯಂತ ಸರಳವಾಗಿ ಅದೂ ಕೇವಲ ರೂ. 150 ರ ಖರ್ಚಿನಲ್ಲಿ ಮದುವೆ ಮಾಡಿಕೊಂಡಿದ್ದಾರೆ. ಪಟೇಲ್ ಹಿಂದಿ ಕಿರುತೆರೆಯ ಸ್ಟಾರ್ ನಟ. ಮಾಹಿ ವೆ, ಕಿಸ್ಮತ್ ಹೀಗೆ ಹಲವಾರು ಸ್ಟಾರ್ ಧಾರವಾಹಿಗಳಲ್ಲಿ ಮಿಂಚಿದ್ದಾರೆ.

ಈ ಜೋಡಿ ಬಿಹಾರದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಳ್ಳಲು ತಯಾರಿ ನಡೆಸಿದ್ದರು. ಇದಕ್ಕೆ ಬೇಕಾದ ಸಿದ್ಧತೆಗಳು ಕೂಡ ಭರದಿಂದ ಸಾಗುತ್ತಿತ್ತು. ಆದರೆ, ಕೊರೊನಾ ಪ್ರಕರಣಗಳು ಹೆಚ್ಚಾದ ಕಾರಣ ಇವರಿಬ್ಬರು ಸರಳವಾಗಿ ಮದುವೆ ಮಾಡಿಕೊಳ್ಳಲು ನಿರ್ಧರಿಸಿ ಅದೇ ರೀತಿ ಮಾಡಿಕೊಂಡಿದ್ದಾರೆ.

ಇವರು ಕೇವಲ ರೂ. 150 ರೂಪಾಯಿಗಳಲ್ಲಿ ತಮ್ಮ ಮದುವೆಯನ್ನು ಮಾಡಿಕೊಂಡಿದ್ದಾರೆ. ಮದುವೆ ನೋಂದಣಿ ಮಾಡಲು ನೂರು ರೂಪಾಯಿ ಹಾಗೂ ವಧು-ವರರ ಫೋಟೋಗಳಿಗೆ ರೂ. 50 ಖರ್ಚು ಮಾಡಿದ್ದಾರೆ. ನನಗೂ ಹಾಗೂ ಸಲೋನಿ ಸರಳವಾಗಿ ಮದುವೆಯಾಗಬೇಕು ಎಂದುಕೊಂಡಿದ್ದೆ. ಹಾಗೆಯೇ ನಡೆದಿದೆ. ಈ ಮದುವೆಗಾಗಿ ಕರ್ಚು ಮಾಡಬೇಕೆಂದಿದ್ದ ಹಣವನ್ನೇ ಕೊರೊನಾ ವಿರುದ್ಧದ ಹೋರಾಟಕ್ಕೆ ನೀಡಬೇಕು ಎಂದು ಅಂದುಕೊಂಡಿದ್ದೆವ ಎಂದು ಈ ಜೋಡಿ ಹೇಳಿದೆ.

ಸಮಾಜವೇ ಮೆಚ್ಚುವಂತಹ ಕಾರ್ಯ ಮಾಡುತ್ತಿದ್ದಾನೆ ಈ ರೌಡಿ ಶೀಟರ್!


ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಕೊರೊನಾ ಮಹಾಮಾರಿ ಇಡೀ ಜಗತ್ತನ್ನೇ ಆತಂಕಕ್ಕೆ ದೂಡಿದೆ. ಹೀಗಾಗಿ ಜಗತ್ತಿನ ಬಹುತೇಕ ಆಸ್ಪತ್ರೆಗಳು ರೋಗಿಗಳ ಪ್ರಾಣ ಉಳಿಸಿ ಕೊಳ್ಳಲು ಸತತ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಸೊಂಕಿತರನ್ನು ಕರೆತರಲು ಅಂಬ್ಯುಲೆನ್ಸ್ ಗಳೂ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಸೆಲೆಬ್ರಿಟಿಗಳು, ಸಂಘ – ಸಂಸ್ಥೆಗಳು ಹಾಗೂ ಹಲವು ಶ್ರೀಮಂತರು ಜನ ಸೇವೆಗೆ ಮುಂದಾಗಿದ್ದಾರೆ. ಇವರೆಲ್ಲರ ಮಧ್ಯೆ ಇಲ್ಲೊಬ್ಬ ರೌಡಿ ಶಿಟರ್ ಎಲೆ ಮರೆಯ ಕಾಯಿಯಂತೆ ಸಮಾಜ ಸೇವೆ ಸಲ್ಲಿಸುತ್ತಿದ್ದಾ‌ನೆ.

ಇಲ್ಲಿಯ ಗಣೇಶ ಪೇಟೆ ನಿವಾಸಿ ಇರ್ಷಾದ್ ಬಳ್ಳಾರಿ ಉರ್ಫ್ ಬಲ್ಲಾಶೆಟ್ ಎಂಬ ವ್ಯಕ್ತಿಯು ಸ್ವಯಂ ಆಂಬುಲೆನ್ಸ್ ವಾಹನವನ್ನು ಉಚಿತವಾಗಿ ಸಾರ್ವಜನಿಕ ಸೇವೆಗೆ ನೀಡಿದ್ದಾನೆ. ಅಷ್ಟೇ ಅಲ್ಲ, ಸ್ವತಃ ತಾನೇ ಚಾಲನೆ ಮಾಡುವ ಮೂಲಕ ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದು, ಕೊರೊನಾದಿಂದ ಮೃತಪಟ್ಟಿರುವ ಮೃತ ದೇಹಗಳನ್ನು ಸಹ ಸಾವಿನ ಹಂಗು ತೊರೆದು ಅಂತ್ಯಕ್ರಿಯೆಗೆ ಕೊಂಡೊಯ್ಯುವುದು ಮಾತ್ರವಲ್ಲದೆ ಬಲ್ಲಾ ಶೇಟ್ ಕೋವಿಡ್ ರೋಗಿಗಳ ಚಿಕಿತ್ಸೆಗೂ ಉಚಿತವಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾನೆ.

ಈ ಕಾರ್ಯದಿಂದಾಗಿ ಈ ವ್ಯಕ್ತಿ ಸಮಾಜದ ಮೆಚ್ಚುಗೆಗೆ ಪಾತ್ರವಾಗಿದ್ದಾನೆ.
ರೌಡಿ ಶಿಟರ್ ಗಳೆಂದರೆ ಒಂದು ಏರಿಯಾದಿಂದ ಮತ್ತೊಂದು ಎರಿಯಾಗೆ ಹೋಗಲು ತನ್ನದೆ ಆದ ಬೆಂಬಲಿಗರನ್ನು ಜೊತೆಗೆ ಇಟ್ಟು ತಿರುಗಾಡುವ ಖಯಾಲಿ ಹೊಂದಿರುತ್ತಾರೆ. ಆದರೆ, ಮನ ಪರಿವರ್ತನೆ ಗಾಗಿ ಕಳೆದ ವರ್ಷದ ಕೋವಿಡ್ -19 ಸಂದರ್ಭದಲ್ಲಿಯೇ ತನ್ನನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಈ ವ್ಯಕ್ತಿ, ರೋಗದ ವಿರುದ್ಧ ಹೋರಾಟ ನಡೆಸಿ ಸಮಾಜದ ಮೆಚ್ಚುಗೆ ಪಾತ್ರವಾಗಿದ್ದಾನೆ.
ಯಾರಾದರೂ ಕರೆ ಮಾಡಿ ಸಹಾಯ ಕೇಳಿದರೆ ಸಾಕು, ಕೆಲವೇ ಕ್ಷಣದಲ್ಲಿ ಆಂಬುಲೆನ್ಸ್ ಮೂಲಕ ಸಾರ್ವಜನಿಕರ ಸೇವೆಗೆ ಮುಂದಾಗುತ್ತಿದ್ದಾನೆ.

ಹುಬ್ಬಳ್ಳಿಯ ಯಾವುದೇ ಆಸ್ಪತ್ರೆಯಿಂದ ಕರೆ ಮಾಡಿದರೂ ಇರ್ಷಾದ್ ಸಾರ್ವಜನಿಕ ಸೇವೆಗೆ ಬರುತ್ತಾನೆ. ಅಲ್ಲದೇ, ದಿನದ 24 ಗಂಟೆಯು ಹಗಲು ರಾತ್ರಿ ತನ್ನ ಪರಿವಾರವನ್ನು ಲೆಕ್ಕಿಸದೆ ಸೇವೆ ಸಲ್ಲಿಸುತ್ತಿದ್ದಾನೆ. ಜಾತಿ, ಧರ್ಮ ಬೇಧ ಮರೆತು ಯಾರೇ ಸಹಾಯಕ್ಕೆ ಕರೆದರೂ ಹೋಗುವುದು ಇತನ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತಿದೆ.
ಒಟ್ಟಿನಲ್ಲಿ ಇರ್ಷಾದ್ ಬಳ್ಳಾರಿ ಅವರ ಕಾರ್ಯ ಇನ್ನೂ ಹೆಚ್ಚು ಹೆಚ್ಚು ವ್ಯಾಪಿಸಲಿ. ಹೆಚ್ಚಿನ ಸೇವೆ ಮಾಡಲು ದೇವರು ಶಕ್ತಿ ನೀಡಲಿ ಇವರ ಸಮಾಜ ಸೇವೆ ಇನ್ನುಳಿದ ರೌಡಿಗಳಲ್ಲಿಯೂ ಬದಲಾವಣೆ ತರಲಿ ಎಂಬುವುದು ಎಲ್ಲರ ಆಶಯ.

ಸೋಂಕು ನಿಯಂತ್ರಣಕ್ಕೆ
ಜಿಲ್ಲೆಯಾದ್ಯಂತ ಸೋಮವಾರದಿಂದ ನಿಷೇದಾಜ್ಞೆ ಜಾರಿ; ಡಿಸಿ ಆದೇಶ

ವಿಜಯಸಾಕ್ಷಿ ಸುದ್ದಿ, ಗದಗ

ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಕೋವಿಡ್-19 ಸರಪಳಿಯನ್ನು ತುಂಡರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಆದೇಶದಲ್ಲಿ ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷಾನಗೊಳಿಸುವ ಸಲುವಾಗಿ ಮೇ 10 ರ ಬೆಳಿಗ್ಗೆ 6 ಗಂಟೆಯಿಂದ ಮೇ 24 ರ ಬೆಳಗಿನ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಲಾಗುವುದು ಹಾಗೂ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಎಚ್ಚರ…! ಹಳ್ಳಿ ಹಳ್ಳಿಗೂ ಲಗ್ಗೆಯಿಡುತ್ತಿದೆ ಮಹಾಮಾರಿ ಕೊರೊನಾ!

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ಮಹಾಮಾರಿ ಜನರ ನಿರ್ಲಕ್ಷ್ಯದಿಂದಾಗಿ ಹಳ್ಳಿ – ಹಳ್ಳಿಗೂ ಎಂಟ್ರಿ ಕೊಡುತ್ತಿದೆ. ಸದ್ಯ ರಾಜ್ಯದ ಬಹುತೇಕ ಹಳ್ಳಿಗಳಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ 29 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಅಲ್ಲದೇ, ಇದೇ ಗ್ರಾಮದ 1400 ಜನರ ವರದಿ ಇನ್ನೂ ಬಾಕಿ ಉಳಿದಿದೆ. ಹೀಗಾಗಿ ಜನರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಗ್ರಾಮದ 248 ಜನರನ್ನು ಪರೀಕ್ಷೆ ಮಾಡಲಾಗಿತ್ತು. ಆದರೆ, 29 ಜನರ ವರದಿ ಪಾಸಿಟಿವ್ ಬಂದಿದ್ದು, ಹಲವರ ವರದಿ ಬರುವುದು ಬಾಕಿ ಇದೆ. ಇದು ಆತಂಕಕ್ಕೆ ಕಾರಣವಾಗಿದೆ.

ರಾಮೇಶ್ವರ ಗ್ರಾಮದ ಜನರು ಶೀತ ಹಾಗೂ ಕೆಮ್ಮನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿತ್ತು. ಊರಿನ ಅರ್ಧದಷ್ಟು ಜನ ಈ ರೀತಿ ಬಳಲುತ್ತಿದ್ದರು ಎಂದು ತಿಳಿದು ಬಂದಿತ್ತು. ಹೀಗಾಗಿ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಸದ್ಯ ಈ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಜನರ ಸಮಸ್ಯೆ ಆಲಿಸಿ ಎಲ್ಲರೂ ಪರೀಕ್ಷೆಗೆ ಒಳಪಡಬೇಕೆಂದು ಮನವಿ ಮಾಡಿದ್ದರು. ಹೀಗಾಗಿ ಗ್ರಾಮದ ಬಹುತೇಕರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಬಂದಿರುವವರನ್ನು ಆಸ್ಪತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ.

ಅಷ್ಟೇ ಅಲ್ಲದೇ, ಗ್ರಾಮದಲ್ಲಿಯೇ ಇನ್ನೂ ಎರಡು ದಿನಗಳ ಕಾಲ ಅಧಿಕಾರಿಗಳು ಉಳಿದು, ಪರೀಕ್ಷೆ ಮಾಡಬೇಕೆಂದು ರೇಣುಕಾಚಾರ್ಯ ತಿಳಿಸಿದ್ದಾರೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಪರೀಕ್ಷೆ ಮಾಡುತ್ತಿದ್ದಾರೆ.

ಮಾಸ್ಕ್ ಹಾಕದಿದ್ದರೆ 100, ಅಂಗಡಿ ತೆರದರೆ 500 ದಂಡ; ಮುತ್ತು ರಾಯರಡ್ಡಿ

ಕೋವಿಡ್-19 ಕಾರ್ಯಪಡೆ ಸಭೆಯಲ್ಲಿ ನಿರ್ಧಾರ

ವಿಜಯಸಾಕ್ಷಿ ಸುದ್ದಿ, ನರಗುಂದ

ಕೋವಿಡ್ ಎರಡನೇ ಅಲೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಚಿಕ್ಕ ನರಗುಂದ ಗ್ರಾಮ ಪಂಚಾಯತಿ ಮುಂದಾಗಿದ್ದು, ಗ್ರಾಮದಲ್ಲಿ ಮಾಸ್ಕ್ ಹಾಕದೇ ತಿರುಗುವವರಿಗೆ 100 ರೂ, ದಂಡ, ಹಾಗೂ ಅವಧಿ ಮೀರಿ ಅಂಗಡಿ ಮುಗ್ಗಟ್ಟು ತೆರದವರಿಗೆ 500 ರೂ, ಗಳ ದಂಡ ಹಾಕಲು ತಿರ್ಮಾನ ಕೈಗೊಳ್ಳಲಾಗಿದೆ.

ಚಿಕ್ಕನರಗುಂದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅಧ್ಯಕ್ಷ ಮುತ್ತು ರಾಯರಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-19 ಕಾರ್ಯಪಡೆಯ ಸಭೆಯಲ್ಲಿ ಈ ತೀರ್ಮಾನ ತಗೆದುಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮುತ್ತು ರಾಯರಡ್ಡಿ, ಗ್ರಾಮದ ಸರಕಾರಿ ಆಸ್ಪತ್ರೆ, ಆವರಣ ಸೇರಿದಂತೆ ಸಿಬ್ಬಂದಿಗಳು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ರೋಗಿಗಳಿಗೆ ಶುದ್ಧ ಕುಡಿಯುವ ನೀರು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಸಿಬ್ಬಂದಿಗಳು ಗ್ರಾಮದ ಪ್ರತಿ ವಾರ್ಡ್ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಗ್ರಾಮದಲ್ಲಿ ಜನಜಂಗುಳಿ ಸೇರದಂತೆ ಪೊಲೀಸರು ಆಗಾಗ ಗ್ರಾಮಕ್ಕೆ ಭೇಟಿ ಕೊಡಬೇಕು. ಕೊರೊನಾ ಸೋಂಕು ತಡೆಗಟ್ಟಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಅಧ್ಯಕ್ಷ ಮುತ್ತು ರಾಯರಡ್ಡಿ ಮನವಿ ಮಾಡಿದರು.

ಪಿಡಿಒ ಶೈನಾಜ್ ಮುಜಾವರ್ ಮಾತನಾಡಿ, ಸರ್ಕಾರದ ನಿಯಮಾವಳಿ ಪ್ರಕಾರ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಗ್ರಾಮದ ಪ್ರತಿ ವಾರ್ಡ್ ಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳೋಣ ಎಂದರು.

ಗ್ರಾಮ ಲೆಕ್ಕಾಧಿಕಾರಿ ದೊಡಮನಿ ಮಾತನಾಡಿ, ಕೋವಿಡ್ ಹರಡದಂತೆ ತಡೆಯಲು ಸರಕಾರದ ನಿಯಮಾವಳಿ ಪ್ರಕಾರ ಗ್ರಾಮದಲ್ಲಿ ಹೋಟೆಲ್, ಪಾನ್ ಶಾಪ್, ಬೀಡಾ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡಿಸಬೇಕು ಎಂದರು.

ಆರೋಗ್ಯ ಸಹಾಯಕಿ ಶರಾವತಿ ಹಿರೇಮಠ ಮಾತನಾಡಿ, ಗ್ರಾಮದಲ್ಲಿ ಈಗಾಗಲೇ ಮನೆ ಮನೆಗೆ ತೆರಳಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ, ಮಾಸ್ಕ್ ಹಾಗೂ ಇತರ ಸುರಕ್ಷಿತ ಮಾರ್ಗಗಳ ಕುರಿತು ಮನವರಿಕೆ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮಾತನಾಡಿ, ಸೋಂಕು ನಿಯಂತ್ರಣಕ್ಕೆ ಹೊರಜಿಲ್ಲೆ, ಹೊರ ರಾಜ್ಯದಿಂದ ಬರುವವರ ಬಗ್ಗೆ ಪ್ರತಿದಿನ ಮಾಹಿತಿ ಸಂಗ್ರಹಿಸಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ತಿಳಿಸಲಾಗಿದೆ. ಗರ್ಭಿಣಿ ಆರೈಕೆ, ಅವರ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಲು ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ತಿಳಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತಿ ಸದಸ್ಯ ಶರಣಪ್ಪ ಹಳೆಮನಿ ಮಾತನಾಡಿ, ಕೊರೊನಾ ಸೋಂಕಿನ ಬಗ್ಗೆ ಈಗಾಗಲೇ ಹಲವು ಬಾರಿ ಮೈಕ್ ಮೂಲಕ ಒಂದು ವಾರಗಳ ಕಾಲ ಪ್ರಚಾರ ಮಾಡಲಾಗಿದೆ. ಆದರೂ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಅಧ್ಯಕ್ಷರು, ಪೊಲೀಸ್ ಇಲಾಖೆ ಮೂಲಕ ಮಾಸ್ಕ್ ಧರಿಸದೇ ತಿರುಗಾಡುವಂತಹ ಜನರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮನವಿ ಮಾಡಿದರು.

ಸರ್ಕಾರದ ಆದೇಶದಂತೆ ಕೊರೊನಾ ಕಾರ್ಯಪಡೆ ರಚಿಸಲಾಯಿತು. ನಂತರ ಗ್ರಾಮದಲ್ಲಿ ಸೋಂಕಿನ ಕುರಿತು ಜಾಗೃತಿ ನಡೆಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರಡ್ಡಿ, ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಲಕ್ಷ್ಮಣ್ಣ ಕಂಬಳಿ, ಶರಣಪ್ಪ ಹಳೆಮನಿ, ಬಾಪು ಹಿರೇಗೌಡ್ರ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರಮ್ಮ ಮುದಿಗೌಡ್ರ, ಶೋಭಾ ಕೋಣನ್ನವರ, ಶ್ರುತಿ ಬ್ಯಾಳಿ, ಶಂಕ್ರವ್ವ ಚಲವಾದಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೈನಾಜ್ ಮುಜಾವರ್, ವಿವಿಧ ಇಲಾಖೆಗಳ ಸಿಬ್ಬಂದಿ, ಆಶಾ, ಅಂಗನವಾಡಿ, ಆರೋಗ್ಯ ಇಲಾಖೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಗದಗ ಜಿಲ್ಲೆಯಲ್ಲಿ ಕೊರೊನಾ ಸ್ಫೋಟ; 248 ಜನರಿಗೆ ಸೋಂಕು, ಮೂವರು ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಮೇ 07 ಶುಕ್ರವಾರ ಗದಗ ಜಿಲ್ಲೆಯಲ್ಲಿ ಸೋಂಕು ಸ್ಫೋಟವಾಗಿದೆ. ಕಳೆದ ಮೂರು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಸೋಂಕು, ಶುಕ್ರವಾರ ದ್ವಿಶತಕ ದಾಟಿದೆ. 248 ಜನರಿಗೆ ಸೋಂಕು ತಗುಲಿದ್ದು, ಕೋವಿಡ್ ನಿಂದ ಮತ್ತೆ ಮೂವರು ಜನರು ಮೃತಪಟ್ಟಿದ್ದಾರೆ.

ಇಂದಿನ 248 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14035 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -151, ಮುಂಡರಗಿ-19, ನರಗುಂದ-08, ರೋಣ-40, ಶಿರಹಟ್ಟಿ-17, ಹೊರಜಿಲ್ಲೆಯ-13 ಸೇರಿದಂತೆ 248 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿಯಿಂದಾಗಿ ಮೂವರು ಮೃತಪಟ್ಟಿದ್ದಾರೆ. ಗದಗ ನಗರದ 50 ವರ್ಷದ ಮಹಿಳೆ ಮೇ 01 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದು, ಇನ್ನೊಬ್ಬರು ಮಹಾವೀರ ಕಾಲೋನಿಯ 69 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೇ 06 ರಂದು ಮೃತಪಟ್ಟಿದ್ದಾರೆ. ಗದಗನ ಕಳಸಾಪೂರ ರಸ್ತೆಯ ಕೆ ಎಸ್ ಆರ್ಟಿಸಿ ಕಾಲೋನಿಯ 62 ವರ್ಷದ ವ್ಯಕ್ತಿ, ಮೇ 6 ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
153 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 158 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12809 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1074 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 211 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!