Home Blog Page 3464

ಜಿಲ್ಲಾ, ತಾಲೂಕು ಪಂಚಾಯತಿ ಮೀಸಲಾತಿ; ಸಚಿವರಿಂದ ಅಹಿಂದ ವರ್ಗಕ್ಕೆ ಅನ್ಯಾಯ

ವಿಜಯಸಾಕ್ಷಿ ಸುದ್ದಿ, ಗದಗ

ರಾಜ್ಯ ಸರಕಾರದಿಂದ ಜಿಲ್ಲೆಯ ವಿವಿಧ
ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಕ್ಷೇತ್ರಗಳಿಗೆ ಘೋಷಣೆ ಮಾಡಿರುವ ಮೀಸಲಾತಿಯಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯವಾಗಿದ್ದು, ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲರ ಕೈವಾಡವಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಸಂಯೋಜಕ ರಾಜು ಪೆಂಡಾರ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತಿಯ ಕೆಲ ಕ್ಷೇತ್ರಗಳಲ್ಲಿ ಮೀಸಲಾತಿ ಘೋಷಣೆಯಲ್ಲಿ ತಾರತಮ್ಯ ಮಾಡಲಾಗಿದೆ. ಲಕ್ಕುಂಡಿ, ಸೊರಟೂರು ಕ್ಷೇತ್ರ, ಕೋಟುಮಚಗಿ, ಕದಾಂಪೂರ, ಅಡವಿಸೋಮಾಪೂರ, ಹುಯಿಲಗೋಳ, ತಾಲೂಕು ಪಂಚಾಯತಿ ಕ್ಷೇತ್ರಗಳ ಮೀಸಲಾತಿ ಘೋಷಣೆಯಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಪೆಂಡಾರ ದೂರಿದ್ದಾರೆ.

ಸಚಿವ ಸಿ ಸಿ ಪಾಟೀಲರು ಅಧಿಕಾರ ದುರುಪಯೋಗ ಮಾಡಿಕೊಂಡು ತಮಗೆ ಬೇಕಾದ ಹಾಗೆ ಮೀಸಲಾತಿ ಘೋಷಣೆ ಮಾಡಿಸಿದ್ದಾರೆ ಎಂದು ರಾಜು ಪೆಂಡಾರ ಆರೋಪಿಸಿದ್ದಾರೆ.

ಸಿಎಂ ಬದಲಾವಣೆ, ದಲಿತ ಸಿಎಂ ಮಾತೇ ಬೇಡ: ಕಾರಜೋಳ

-ಕಾಂಗ್ರೆಸ್ ವಿಸರ್ಜನೆ ಆಗುವ ಕಾಲ ಸನ್ನೀಹಿತ

-ಮುಂದಿನ ಎರಡು ವರ್ಷವೂ ಯಡಿಯೂರಪ್ಪ ಅವರೇ ಸಿಎಂ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಬಿಜೆಪಿಯಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಮಾತೇ ಇಲ್ಲ. ಮುಂದಿನ ಎರಡೂ ವರ್ಷವೂ ಯಡಿಯೂರಪ್ಪ ಅವರೇ ಸಿಎಂ. ದಲಿತ ಸಿಎಂ ಪ್ರಶ್ನೆ ಈಗ ಬೇಡ. ಯಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಿ ಗೆದ್ದಾಗ ಕೇಳಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂಬುದು ಪಕ್ಷವೇ ಅಲ್ಲ. ಸ್ವಾತಂತ್ರ್ಯಕ್ಕಾಗಿ ಕಟ್ಟಿದ್ದ ಸಂಘಟನೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಕಾಂಗ್ರೆಸ್ ಸಂಘಟನೆ ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು. ಈಗ ಕಾಂಗ್ರೆಸ್ ವಿಸರ್ಜಿಸುವ ಕಾಲ ಸನ್ನೀಹಿತವಾಗಿದೆ ಎಂದು ಅವರು ಲೇವಡಿ ಮಾಡಿದರು.

ದಲಿತರು, ಅಲ್ಪಸಂಖ್ಯಾತರಯ ಹಾಗೂ ಹಿಂದುಳಿದ ವರ್ಗದವರನ್ನು ಕಾಂಗ್ರೆಸ್ ವೋಟ್ ಬ್ಯಾಂಕ್ ಮಾಡಿಕೊಂಡು ದೇಶದಲ್ಲಿ 60 ವರ್ಷ ಆಳ್ವಿಕೆ ಮಾಡಿದರು. ಆದರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿತ್ತು. ಈಗ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರು ವಿದ್ಯಾವಂತರಾಗಿದ್ದಾರೆ. ಅದಕ್ಕಾಗಿ ಕಳೆದೆರಡು ಚುನಾವಣೆಗಳಲ್ಲಿ ಕಾಂಗ್ರೆಸ್‌ನಿಂದ ದೂರವಾಗಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ದೇಶದಲ್ಲಿ ಅನಾಥಸ್ಥಿತಿ ಅನುಭವಿಸುತ್ತಿದೆ. ಯಾವ ಸಂದರ್ಭದಲ್ಲೂ ದೇಶದಲ್ಲಿ ಆಡಳಿತಕ್ಕೆ ಬರುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಶೀಘ್ರವೇ ಕಾಂಗ್ರೆಸ್ ದೇಶದಿಂದ ತೊಲಗುವ ಸಮಯ ಹತ್ತಿರ ಬಂದಿದೆ ಎಂದು ವ್ಯಂಗ್ಯವಾಡಿದರು.

ಈ ಸಂದರ್ಭದಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಮತ್ತಿತರರು ಇದ್ದರು.

ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತೆ ಪಾಲಿಸಿ; ಡಿಸಿ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 19-07-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳನ್ನು ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಇವುಗಳು ಯಥಾವತ್ತಾಗಿ ಜಾರಿಯಲ್ಲಿರುತ್ತವೆ.

ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ವಾಹನಗಳ ಆಸನಗಳ ಸಾಮರ್ಥ್ಯಕ್ಕನುಗುಣವಾಗಿ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸೇವಾ ಕಾರ್ಯ, ಇತರೆ ಕಾರ್ಯಗಳಿಗೆ ಅವಕಾಶವಿಲ್ಲ.

ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

ಈಜುಕೊಳಗಳಲ್ಲಿ ಮತ್ತು ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ವೀಕ್ಷಕರಿಗೆ ಅವಕಾಶವಿಲ್ಲ.

ಬಾರಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ.

ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯಲು ಪ್ರತ್ಯಕ ಆದೇಶ ಸರ್ಕಾರ ಹೊರಡಿಸುವವರೆಗೆ ತೆರೆಯಲು ಅವಕಾಶ ಇರುವುದಿಲ್ಲ.

ಕೆಲವು ಚಟುವಟಿಕೆಗಳನ್ನು ಹೊರತುಪಡಿಸಿ, ಉಳಿದಂತೆ ಅಗತ್ಯ ಆರ್ಥಿಕ ಚಟುವಟಿಕೆಗಳಿಗೆ ಹಾಗೂ ಕೃಷಿ ಚಟುವಟಿಕೆ ಕೈಗೊಳ್ಳಲು ಅವಕಾಶವಿದೆ.

ಸರ್ಕಾರ ಅನುಮತಿಸಲಾದ ಚಟುವಟಿಕೆ ಕೈಗೊಳ್ಳುವಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಕಡ್ಡಾಯವಾಗಿದೆ.
ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ.

ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದ್ದರು ಕೂಡಾ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದೆ ತೀರಾ ಅಗತ್ಯ ಸಂದರ್ಭಗಳಲ್ಲಿ ಮಾತ್ರ ಹೊರಬರಬೇಕು. ಜಿಲ್ಲೆಯಲ್ಲಿ ಸೋಂಕು ಹರಡದಂತೆ ನಿಯಂತ್ರಿಸಲು ಸಾರ್ವಜನಿಕರು ಸ್ವಯಂ ಮುಂಜಾಗೃತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಜುಲೈ 19ರ ವರೆಗೂ ರಾತ್ರಿ ಕರ್ಪ್ಯೂ; ಡಿಸಿ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಜಾರಿ ಮಾಡಿದ ಕಠಿಣ ಮಾರ್ಗಸೂಚಿಗಳನ್ನು ಸಡಿಲು ಮಾಡಿ ಜುಲೈ 3 ರಂದು ಆದೇಶಿಸಿದ್ದು, ಜುಲೈ 5 ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 19 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ.

ಕೊರೊನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಿಲ್ಲೆಯಲ್ಲಿ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದ್ದು, ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಇದನ್ನೂ ಓದಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತೆ ಪಾಲಿಸಿ; ಡಿಸಿ

ಸರ್ಕಾರಿ ನೌಕರರು ಅಗತ್ಯ ಸೇವೆಗೆ ನಿಯೋಜಿತರಿಗೆ, ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಿದೆ. ಸಾರ್ವಜನಿಕರು ಅನಾರೋಗ್ಯವಾದಲ್ಲಿ ಆಸ್ಪತ್ರೆಗಳಿಗೆ ತೆರಳಲು ಅವಕಾಶ ನೀಡಲಾಗಿದೆ.

ಈ ವೇಳೆ ರೋಗಿಗಳು ಅವರ ಸಹಾಯಕರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳಿಗೆ ಅವಕಾಶವಿರುತ್ತದೆ, ನೌಕರರು ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬೇಕು. ಒಟ್ಟಾರೆ ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆ ಹೊರತುಪಡಿಸಿ ವಾಹನಗಳ ಅನಗತ್ಯ ಓಡಾಟಕ್ಕೆ ನಿರ್ಭಂಧಿಸಲಾಗಿದೆ.

ಅದರಂತೆ ಟೆಲಿಕಾಂ ಇಂಟರ್ನೆಟ್ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ, ಆದರೆ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು, ವೈದ್ಯಕೀಯ ತುರ್ತು ಸೇವೆಗಳು ಅಗತ್ಯ ಸೇವೆಗಳಾದ ಫಾರ್ಮಸಿಗಳ ಕಾರ್ಯಾಚರಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ, ಎಲ್ಲಾ ತರಹದ ಸರಕುಗಳು ಮತ್ತು ಸರಕು ಸಾಗಾಟವಾಹನಗಳ ಸಂಚಾರಕ್ಕೆ ಹಾಗೂ ಸರಕು ಖಾಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ, ಸರಕುಗಳ ಹೋಂ ಡೆಲಿವರಿ, ಇ-ಕಾಮರ್ಸ್ ಚಟುವಟಿಕೆಗಳಿಗೆ ಸರಕಾರದ ಮಾರ್ಗಸೂಚಿ ಅನ್ವಯ ಅವಕಾಶ ಇರುತ್ತದೆ. ರೈಲು ವಿಮಾನ ಸೇವೆ ಎಂದಿನಂತೆ ಅವಕಾಶವಿದ್ದು ಟಿಕೆಟ್ ಅನ್ನು ಪಾಸ್ ರೀತಿಯಲ್ಲಿ ಬಳಸಲು ಸೂಚಿಸಲಾಗಿದೆ.

ಸಾರ್ವಜನಿಕರು ವಿನಾಕಾರಣ ಮನೆಯಿಂದ ಹೊರಬರದೇ ಮನೆಯಲ್ಲೇ ಇರುವ ಮೂಲಕ ಸೋಂಕು ನಿಯಂತ್ರಣದಲ್ಲಿ ಸಹಕರಿಸಬೇಕು. ಅಗತ್ಯ ಸಂದರ್ಭದಲ್ಲಿ ಮನೆಯಿಂದ ಹೊರಬಂದಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳೆ-ಮೋಡದಲ್ಲಿ ಹಸಿರು ಹೊದ್ದ ಆಗುಂಬೆ!

ವಿಜಯಸಾಕ್ಷಿ ವಿಶೇಷ

ಆಗುಂಬೆ ಪ್ರೇಮ ಸಂಜೆಗೆ ಮಾತ್ರವಲ್ಲ, ಸುಂದರವಾದ ಮುಂಜಾನೆಗೂ ಹೆಸರಾಗಿದೆ. ಅದೊಂದು ಅದ್ಭುತ ದೃಶ್ಯಕಾವ್ಯ.

ಸೂರ್ಯಾಸ್ತಮಾನದ ದೃಶ್ಯ ಸವಿಯಬಹುದಾದ ಸ್ಥಳದಿಂದ ಘಟ್ಟದ ಕೆಳಗಿನ ಉಡುಪಿ ಜಿಲ್ಲೆಯ ಕಾನನ, ಗದ್ದೆಗಳು, ತೋಟ, ನದಿ ಕೆರೆಗಳು ಈ ಕಾವ್ಯದ ಸಾಲುಗಳಾಗಿ ಕಣ್ಸೆಳೆಯುತ್ತವೆ. ನಾವು ಮೋಡಗಳ ಮೇಲೆ ತೇಲುತ್ತಿದ್ದೇವೇನೋ ಎನ್ನುವ ಅನುಭವ ನೀಡುತ್ತವೆ.


ಚಿತ್ರ: ಅನಂತ ಹುದೆಂಗಜೆ

ಮಳೆ-ಮೋಡದಲ್ಲಿ ಹಸಿರು ಹೊದ್ದ ಆಗುಂಬೆ!

ವಿಜಯಸಾಕ್ಷಿ ಸುದ್ದಿ, ಆಗುಂಬೆ

ಆಗುಂಬೆ ಪ್ರೇಮ ಸಂಜೆಗೆ ಮಾತ್ರವಲ್ಲ, ಸುಂದರವಾದ ಮುಂಜಾನೆಗೂ ಹೆಸರಾಗಿದೆ. ಅದೊಂದು ಅದ್ಭುತ ದೃಶ್ಯಕಾವ್ಯ.

ಸೂರ್ಯಾಸ್ತಮಾನದ ದೃಶ್ಯ ಸವಿಯಬಹುದಾದ ಸ್ಥಳದಿಂದ ಘಟ್ಟದ ಕೆಳಗಿನ ಉಡುಪಿ ಜಿಲ್ಲೆಯ ಕಾನನ, ಗದ್ದೆಗಳು, ತೋಟ, ನದಿ ಕೆರೆಗಳು ಈ ಕಾವ್ಯದ ಸಾಲುಗಳಾಗಿ ಕಣ್ಸೆಳೆಯುತ್ತವೆ. ನಾವು ಮೋಡಗಳ ಮೇಲೆ ತೇಲುತ್ತಿದ್ದೇವೇನೋ ಎನ್ನುವ ಅನುಭವ ನೀಡುತ್ತವೆ.

ಚಿತ್ರ: ಅನಂತ ಹುದೆಂಗಜೆ

ಪ್ರತ್ಯೇಕ ದಾಳಿ: 16 ಜನ ಜೂಜುಕೋರರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಎರಡು ಗುಂಪುಗಳ ಮೇಲೆ ಮುಂಡರಗಿ ಪೊಲೀಸರು ದಾಳಿ ಮಾಡಿ 16 ಜನರನ್ನು ಬಂಧಿಸಿ, 25 ಸಾವಿರ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಮುಂಡರಗಿ ಠಾಣೆಯ ಪಿಎಸ್‌ಐ ನೂರಜಾನ್ ಸಬರ್ ಹಾಗೂ ಪೊಲೀಸರು ಈ ದಾಳಿ ನಡೆಸಿದ್ದರು.

ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದ ಕಾಲುವೆ ಬಳಿ ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಮೇವುಂಡಿ ಗ್ರಾಮದ ಕಾಶಪ್ಪ ಸಿದ್ದಪ್ಪ ತಳವಾರ, ಮುಂಡರಗಿಯ ಹಳೆ ಮಾರುಕಟ್ಟೆ ಬಳಿ ನಿವಾಸಿ ಯಮನೂರು ರಾಮಣ್ಣ ಭಜಂತ್ರಿ, ಮೇವುಂಡಿ ಗ್ರಾಮದ ಶಿವಪುತ್ರಪ್ಪ ಬಾಳಪ್ಪ ಹಾರೋಗೇರಿ, ಮುಂಡರಗಿ ಪಟ್ಟಣದ ಕೋಟೆ ಓಣಿಯ ಮಾದೇಗೌಡ್ ಹನಮಂತ ಡೋಣಿ, ಡಂಬಳದ ಮದರಸಾಬ್ ಕಾಶಿಮಸಾಬ್ ಖಸ್ತರ್, ಗದಗ ಶಹರದ ಹಾಳದಿಬ್ಬ ಓಣಿಯ ಭರತ್ ಯಲ್ಲೂಸಾ ಬದಿ, ಒಕ್ಕಲಗೇರಿ ಓಣಿಯ ಮಾರುತಿ ಮುದಕಪ್ಪ ಚನ್ನದಾಸರ್, ಟಾಂಗಾಕೂಟ್ ಬಳಿಯ ನಿವಾಸಿ ಸಂತೋಷ ಬಸವರಾಜ್ ಕುಕನೂರು, ಡಂಬಳದ ಮಲ್ಲಪ್ಪ ರಾಮಪ್ಪ ಹೊಸಕೇರಿ ಎಂಬುವವರನ್ನು ಬಂಧಿಸಿ ಅವರಿಂದ 18,100 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಶಿಂಗಟರಾಯನಕೇರಿತಾಂಡಾದಲ್ಲಿ ಜೂಜಾಟದಲ್ಲಿ ತೊಡಗಿದ್ದ ಅದೇ‌ ಗ್ರಾಮದ ವಿನಾಯಕ ಗುರುನಾಥ್ ನಾಯಕ್, ಥಾಕ್ರೆಪ್ಪ ಚಂದ್ರಪ್ಪ ನಾಯಕ್, ತುಕರಾಮ್ ಪರಶುರಾಮ ನಾಯಕ್, ಗುರು ಹಾಮೇಶ್ ನಾಯಕ್, ಕುಮಾರ್ ಲಕ್ಷ್ಮಣ್ಣ ನಾಯಕ್, ನಾಗೇಶ್ ಹಾಮೇಶ್ ಲಮಾಣಿ, ಶೇಖರ್ ಚೆನ್ನಪ್ಪ ಲಮಾಣಿ ಎಂಬುವವರನ್ನು ಬಂಧಿಸಿ, ಅವರಿಂದ ನಗದು 7100 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ.

ಗ್ರಾಪಂ ಆವರಣದಲ್ಲಿ‌ ಕಾಂಡೋಮ್ಸ್‌ಗಳ ರಾಶಿ!!

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ


ಜಿಲ್ಲೆಯ ಕಾರಟಗಿ ತಾಲೂಕಿನ ಹುಳ್ಕಿಹಾಳ ಗ್ರಾಪಂ ಆವರಣದಲ್ಲಿ ಕಾಂಡೋಮ್‌ಗಳ ರಾಶಿ ಬಿದ್ದಿರುವುದು ಗ್ರಾಪಂ ಆವರಣ ಅನೈತಿಕ ಚಟುವಟಿಕೆಗಳ ತಾಣ ಎನ್ನಲು ಪುಷ್ಠಿ‌ ನೀಡಿದಂತಿದೆ.

ಗ್ರಾಮದ ಮಹಿಳೆಯರಿಗೆ ಇದು ತೀವ್ರ ಮುಜುಗರ ತಂದಿದ್ದು, ಗ್ರಾಪಂ ಕಚೇರಿಗೆ ಕಾಲಿಡಲು ಯೋಚಿಸುವ ಪ್ರಮೇಯ ಬಂದೊದಗಿದೆ.‌ ಪುಂಡರು ರಾಜಾರೋಷವಾಗಿ ಕಾಂಡೋಮ್‌ಗಳನ್ನು ಗ್ರಾಪಂ ಆವರಣದಲ್ಲಿ ಬಿಸಾಡಿದ್ದಾರೆ.

ಆರೋಗ್ಯ ಇಲಾಖೆ ನಿರ್ಲಕ್ಷ್ಯ
ಈಚೆಗೆ ಗ್ರಾಪಂ ಕಚೇರಿಯಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮ ಆಯೋಜಿಸಿತ್ತು. ಆ ವೇಳೆ ಕಾಂಡೋಮ್‌ಗಳ‌ ಪೆಟ್ಟಿಗೆಯನ್ನು ಶೌಚಾಲಯದಲ್ಲಿ‌ ಇಟ್ಟಿದ್ದರೆ ಅಗತ್ಯ ಇರುವವರು ಮಾತ್ರ ಬಳಸುತ್ತಿದ್ದರು. ಆದರೆ ಕಾಂಡೋಮ್‌ಗಳ ಪೆಟ್ಟಿಗೆಯನ್ನು ಕಚೇರಿ ಮುಂಭಾಗದಲ್ಲೇ ಹಾಕಿದ್ದರಿಂದ ಕಚೇರಿ ಸಮಯದ ನಂತರ ಕಿಡಿಗೇಡಿಗಳು ಬಂದು ಈ ರೀತಿ ಮಾಡಿದ್ದಾರೆ. ವಿಷಯ ನನ್ನ ಗಮನಕ್ಕೆ ತಂದಿದ್ದೀರಿ. ತಕ್ಷಣಚೇ ಅದನ್ನು ತೆರವುಗೊಳಿಸುತ್ತೇನೆ.
-ವೆಂಕಟೇಶ ನಾಯಕ್, ಪಿಡಿಓ, ಹುಳ್ಕಿಹಾಳ ಗ್ರಾಪಂ

ತಂದೆಯ ಆಸ್ತಿ, ಹಣಕ್ಕಾಗಿ ಮಲತಾಯಿ ಮೇಲೆ ಹಲ್ಲೆ

ವಿಜಯಸಾಕ್ಷಿ ಸುದ್ದಿ, ಗದಗ

ರಸ್ತೆಯ ಪಕ್ಕದಲ್ಲಿ ಆಕಳು ಮೇಯಿಸುತ್ತಿದ್ದ ಮಲತಾಯಿ ಮೇಲೆ ಆಸ್ತಿ ಹಾಗೂ ಹಣ ಕೊಡುವಂತೆ ಜಗಳವಾಡಿ ಯುವಕನೋರ್ವ ಕೊಡಲಿಯಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರುದ್ರಾಪುರ ಗ್ರಾಮದ ಬಳಿ ನಡೆದಿದೆ.

ರುದ್ರಾಪುರ ಗ್ರಾಮದ ಯುವಕ ಹನುಮಂತ ದ್ಯಾಮಣ್ಣ ಮುತಾರಿ ಎಂಬಾತ ಕಲ್ಲಿಗನೂರು ರಸ್ತೆಯ ಪಕ್ಕದಲ್ಲಿ ಆಕಳು ಮೇಯಿಸುತ್ತಿದ್ದ ಮಲತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಾಡಿ, ನನ್ನ ತಂದೆಯ ಆಸ್ತಿ ಹಾಗೂ ಹಣ ಕೊಡುವಂತೆ ಏಕಾಏಕಿ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ.

ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಿಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನಕಲಿ ಬಿಲ್ ಗಾಗಿ ಗ್ರಾ.ಪಂ. ಅಧ್ಯಕ್ಷೆ ಮೇಲೆ ಹಲ್ಲೆ

ವಿಜಯಸಾಕ್ಷಿ ಸುದ್ದಿ, ಗದಗ

ಒಂದು ದನದ ದೊಡ್ಡಿ ನಿರ್ಮಾಣ ಮಾಡಿ ಎರಡು ಬಿಲ್ ಮಾಡಿ ಕೊಡುವಂತೆ ಒತ್ತಾಯಿಸಿ ಪದೇ ಪದೇ ಗ್ರಾಮ ಪಂಚಾಯತಿ ನೌಕರರಿಗೆ, ಸಿಬ್ಬಂದಿಯ ನೌಕರಿಗೆ ಅಡ್ಡಿಪಡಿಸುತ್ತಾ, ಇಲ್ಲಸಲ್ಲದ ಮಾಹಿತಿ ಕೇಳಿದ್ದ ಮಹಿಳೆಯೊಬ್ಬರು ಆಕ್ರೋಶಗೊಂಡು ಗ್ರಾ.ಪಂ. ಅಧ್ಯಕ್ಷೆ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ಕಲಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಯಮನವ್ವ ದುರಗಪ್ಪ ಬಂಡಿವಡ್ಡರ್ ಹಲ್ಲೆಗೊಳಗಾದ ಮಹಿಳೆ. ಕಲಕೇರಿ ಗ್ರಾಮದ ಶಾಂತವ್ವ ಎಂಬುವವರು ಒಂದು ದನದ ದೊಡ್ಡಿ ನಿರ್ಮಿಸಿಕೊಂಡಿದ್ದರು. ಆ ಬಿಲ್‌ಗಾಗಿ ಗ್ರಾ.ಪಂ. ಕಾರ್ಯಾಲಯಕ್ಕೆ ಅಲೆದಾಡಿ ಸುಸ್ತಾಗಿದ್ದಾರೆ. ಆದರೆ ಅದಕ್ಕೊಂದು ಕಾರಣವಿದೆ. ನಿರ್ಮಾಣ ಮಾಡಿದ್ದು ಒಂದು ದನದ ದೊಡ್ಡಿ. ಆದರೆ ಎರಡು ಬಿಲ್ ಮಾಡಿ ಕೊಡಿ ಅಂತ ಪಟ್ಟು ಹಿಡಿದಿದ್ದಾರೆ. ಬಿಲ್ ಮಾಡಿ ಕೊಡದ ನೌಕರರಿಗೆ ಇಲ್ಲಸಲ್ಲದ ಮಾಹಿತಿ ಕೇಳಿದ್ದಾರೆ ಅನ್ನುವ ಮಾಹಿತಿ ಅಧ್ಯಕ್ಷೆ ಯಮನವ್ವ ಬಂಡಿವಡ್ಡರ್ ಅವರು ಕೊಟ್ಟಿರುವ ದೂರಿನಲ್ಲಿದೆ.

ಇಷ್ಟಕ್ಕೆ ಸುಮ್ಮನಾಗದ ಶಾಂತವ್ವ, ತಮ್ಮ ಮನೆ ಮುಂದೆ ಹಾದು ಹೋಗುತ್ತಿದ್ದ ಅಧ್ಯಕ್ಷೆ ಯಮನವ್ವ ಬಂಡಿವಡ್ಡರ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.