Home Blog Page 366

ಇದೊಂದು ಹಗಲು ದರೋಡೆ, ದರ ಏರಿಕೆಗೆ ರಾಜ್ಯ ಸರ್ಕಾರವೇ ನೇರ ಕಾರಣ: ನಿಖಿಲ್ ಕುಮಾರಸ್ವಾಮಿ ಆರೋಪ

0

ಬೆಂಗಳೂರು: BMRCL ಮೇಲೆ ಒತ್ತಡ ಹಾಕಿ, ಮೆಟ್ರೋ ದರ ಏರಿಕೆ ಮಾಡಿಸಿದ್ದೇ ರಾಜ್ಯ ಸರ್ಕಾರ. ಇದೊಂದು ಹಗಲು ದರೋಡೆ, ದರ ಏರಿಕೆಗೆ ರಾಜ್ಯ ಸರ್ಕಾರವೇ ನೇರ ಕಾರಣ. ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ಈ ಬಗ್ಗೆ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದವರು ಅವರು, ಬೆಂಗಳೂರು ಮೆಟ್ರೋ ದರ ಏರಿಕೆ ಜನ ಸಾಮಾನ್ಯರಿಗೆ ಕತ್ತರಿ ಹಾಕುತ್ತಿದೆ. ಇದೊಂದು ಹಗಲು ದರೋಡೆ. ಹತ್ತು ತಿಂಗಳಲ್ಲಿ ಎರಡು ಬಾರಿ ದರ ಏರಿಸಿರುವುದು ಖಂಡನೀಯ. ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

BMRCLಗೆ 13 ಕೋಟಿಗೂ ಹೆಚ್ಚು ಸಾಲವಿದೆ.ಅದರ ಮರು ಪಾವತಿಗೆ ಮಾಡಬೇಕಿದೆ. ಜತೆಗೆ ಇದರ ಕಾರ್ಯಾಚರಣೆಗೆ ವೆಚ್ಚ ಕೊಡಬೇಕಿದೆ. ಟಿಕೆಟ್ ಮತ್ತು ಟಿಕೆಟ್ ಯೆತರ ಮೂಲಗಳಿಂದ ಆದಾಯ ಬರುತ್ತಿಲ್ಲ. ಈಗ ಸರ್ಕಾರದಿಂದ BMRCLಗೆ ಹಣ ಕೊಡಲು ಆಗ್ತಿಲ್ಲ ಅದಿಕ್ಕೆ ಸರ್ಕಾರ ಈ ಮೂಲಕ ವಸೂಲಿಗೆ ಇಳಿದಿದೆ.

ಪ್ರತಿ ವರ್ಷ ಸ್ವಯಂ ಚಾಲಿತವಾಗಿ ಮೆಟ್ರೋ ಪ್ರಯಾಣದರ ಏರಿಕೆಯಾಗುವ ಸೂತ್ರ ರೂಪಿಸುವಂತೆ ದರ ನಿಗದಿ ಸಮಿತಿಯನ್ನು ರಾಜ್ಯ ಸರ್ಕಾರ ಕೋರಿದೆ. ದೇಶದ ದೆಹಲಿ, ಮುಂಬೈ, ಹೈದರಾಬಾದ್‌ ಹಾಗೂ ಚೆನ್ನೈ ನಗರಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದರ ದುಬಾರಿಯಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ತನ್ನ ಮೇಲಿನ ಹೊರೆಯನ್ನು ಜನರ ಮೇಲೆ ಹೊರಿಸುತ್ತಿದೆ ಎಂದು ಅವರು ನಿಖಿಲ್ ಅವರು ಟೀಕಿಸಿದರು.

ಸಾರ್ವಜನಿಕರ ಮಾಹಿತಿಗಾಗಿ ದರ ನಿಗದಿ ಸಮಿತಿಯ ವರದಿಯನ್ನು ನೀಡಿರಲಿಲ್ಲ. ಆ ವರದಿಯಲ್ಲಿ ನಗರಾಭಿವೃದ್ಧಿ ಇಲಾಖೆ, ಹಣಕಾಸು ಇಲಾಖೆ ಅಧಿಕಾರಿಗಳೇ ರಾಜ್ಯ ಸರ್ಕಾರ ಆರ್ಥಿಕ ಹೊರೆ ಭರಿಸುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡುವಂತೆ ಪ್ರಸ್ತಾಪಿಸಿದ್ದಾರೆ. 1126 ಮಂದಿ ಪ್ರಯಾಣದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಶೇ.51ರಷ್ಟು ಮಂದಿ ಮೆಟ್ರೋ ಪ್ರಯಾಣದರ ವಿರೋಧಿಸಿದ್ದಾರೆ ಎಂದು ತಿಳಿಸಿದರು.

ಪ್ರಯಾಣಿಕರಿಂದಲ್ಲದ ಪಾರ್ಕಿಂಗ್‌, ಬಾಡಿಗೆ, ಜಾಹೀರಾತು ಮೂಲಕ ಸಂಗ್ರಹಿಸುವ ಆದಾಯ ಕಡಿಮೆಯಾಗಿದ್ದು, ಪ್ರಯಾಣಿಕರಿಂದ ಸಂಗ್ರಹಿಸುವ ಆದಾಯ ಹೆಚ್ಚಳವಾಗಿದೆ. ಶ್ಯಾಡೋ ಕಾಸ್ಟ್‌ ಸಪೋರ್ಟ್‌ ಅನ್ನು ರಾಜ್ಯ ಸರ್ಕಾರ ಕಳೆದ ಎರಡು ವರ್ಷದಿಂದ ನಿಲ್ಲಿಸಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲದ ಕಾರಣ ಎಸ್‌‍ಸಿಎಸ್‌‍ ಮುಂದುವರೆಸಲಾಗದು, ವಾರ್ಷಿಕ ಶೇ.5ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಕೋರಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕಳೆದ ವರ್ಷ ಶೇ.105ರಷ್ಟು ದುಪ್ಪಟ್ಟು ಮೆಟ್ರೋ ಪ್ರಯಾಣದರ ಪರಿಷ್ಕರಣೆ ಮಾಡಲಾಗಿತ್ತು. ಅಧಿಕಾರಿಗಳು ನೀಡಿರುವ ಮಾಹಿತಿ ನೋಡಿದರೆ, ರಾಜ್ಯ ಸರ್ಕಾರ ಆರ್ಥಿವಾಗಿ ದಿವಾಳಿಯಾಗಿದೆ. ತನ್ನ ಲೋಪ ಮುಚ್ಚಿಕೊಳ್ಳಲು ಜನರನ್ನು ದಾರಿತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದರು.

ಮಾಗಡಿ ರಸ್ತೆ ಪತ್ನಿ ಹತ್ಯೆ ಪ್ರಕರಣ: ಪಿಸ್ತೂಲ್ ಖರೀದಿಗೆ ನೆರವಾಗಿದ್ದ ಮತ್ತೋರ್ವ ಆರೋಪಿ ಅರೆಸ್ಟ್!

0

ಬೆಂಗಳೂರು: ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯೋರ್ವ ತನ್ನ ಪತ್ನಿಯನ್ನು ಪಿಸ್ತೂಲ್ನಿಂದ ಗುಂಡಿಟ್ಟು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪತಿ ಬಾಲಮುರುಗನ್ಗೆ ಪಿಸ್ತೂಲ್ ಖರೀದಿಗೆ ನೆರವಾಗಿದ್ದ ಉತ್ತರ ಪ್ರದೇಶ ಮೂಲದ ಅಭಿಮನ್ಯು ಸಿಂಗ್ನನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡಿಸೆಂಬರ್ 23ರಂದು ಸಂಜೆ ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯಲ್ಲಿ ಪತಿ ಬಾಲಮುರುಗನ್ ತನ್ನ ಪತ್ನಿ ಭುವನೇಶ್ವರಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದ. ಪ್ರಕರಣದ ತನಿಖೆ ವೇಳೆ ಹತ್ಯೆಯ ಹಿಂದೆ ಪೂರ್ವಯೋಜನೆ ಹಾಗೂ ಸಹಚರರು ಇದ್ದುದು ಬೆಳಕಿಗೆ ಬಂದಿದೆ.

ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಮನ್ಯು ಸಿಂಗ್ಗೆ ಬಾಲಮುರುಗನ್ ಪರಿಚಯವಾಗಿದ್ದು, ಮೃತ ಭುವನೇಶ್ವರಿ ಕೆಲಸ ಮಾಡುತ್ತಿದ್ದ ಬ್ಯಾಂಕ್ ಸಮೀಪದ ಜಿಮ್ಗೆ ಅಭಿಮನ್ಯು ಸಿಂಗ್ ಬರುತ್ತಿದ್ದ. ಈ ಸಂದರ್ಭ ಭುವನೇಶ್ವರಿಯ ಚಲನವಲನಗಳ ಬಗ್ಗೆ ಅಭಿಮನ್ಯು ಸಿಂಗ್ ಬಾಲಮುರುಗನ್ಗೆ ಮಾಹಿತಿ ನೀಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಬಾಲಮುರುಗನ್ ಮತ್ತು ಅಭಿಮನ್ಯು ಸಿಂಗ್ ಇಬ್ಬರೂ ಬಿಹಾರಕ್ಕೆ ತೆರಳಿ ಎರಡು ಪಿಸ್ತೂಲ್ಗಳನ್ನು ಖರೀದಿಸಿಕೊಂಡು ಬಂದಿದ್ದರು. ನಂತರ ಆ ಪೈಕಿ ಒಂದು ಪಿಸ್ತೂಲ್ ಅನ್ನು ತಮಿಳುನಾಡಿನ ಸೇಲಂ ಮೂಲದ ಮೌಳೇಶ್ ಎಂಬ ಆರೋಪಿಗೆ ನೀಡಿ ಭುವನೇಶ್ವರಿಯನ್ನು ಹತ್ಯೆ ಮಾಡುವ ಸುಪಾರಿ ನೀಡಲಾಗಿತ್ತು.

ಸುಪಾರಿ ಪಡೆದ ಮೌಳೇಶ್ ಬೆಂಗಳೂರಿಗೆ ಬಂದು ಭುವನೇಶ್ವರಿ ಕೆಲಸ ಮಾಡುತ್ತಿದ್ದ ಸ್ಥಳ ಹಾಗೂ ಓಡಾಡುವ ರಸ್ತೆಗಳಲ್ಲಿ ಕೆಲವು ದಿನಗಳ ಕಾಲ ಚಲನವಲನ ಗಮನಿಸಿದ್ದ. ಆದರೆ ಕೃತ್ಯ ಎಸಗುವ ದಿನ ಆತ ಕೈಕೊಟ್ಟು ತಮಿಳುನಾಡಿಗೆ ಮರಳಿದ್ದಾನೆ. ಇದರಿಂದ ಬೇಸತ್ತ ಬಾಲಮುರುಗನ್, ಬೇರೆಯವರಿಗೆ ಹಣ ಕೊಟ್ಟು ಕಾಯುವ ಬದಲು ತಾನೇ ಹತ್ಯೆ ನಡೆಸಲು ನಿರ್ಧರಿಸಿ ಪಿಸ್ತೂಲ್ ಹಿಡಿದು ಪತ್ನಿಯನ್ನು ಗುಂಡಿಟ್ಟು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ನಂತರ ಬಾಲಮುರುಗನ್ ತಾನೇ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದಾಗ ಪಿಸ್ತೂಲ್ ಮೂಲ, ಸಹಚರರು ಹಾಗೂ ಸುಪಾರಿ ವಿಚಾರಗಳು ಬೆಳಕಿಗೆ ಬಂದಿವೆ.

ಸುಪಾರಿ ಪಡೆದಿದ್ದ ಮೌಳೇಶ್ ಈಗಾಗಲೇ ತಮಿಳುನಾಡಿನಲ್ಲಿ ಮತ್ತೊಂದು ಪ್ರಕರಣದಲ್ಲಿ ಬಂಧನಕ್ಕೊಳಗಾ ಗಿದ್ದರಿಂದ, ಮಾಗಡಿ ರಸ್ತೆ ಠಾಣೆ ಪೊಲೀಸರು ಇತ್ತೀಚಿಗೆ ಬಾಡಿ ವಾರಂಟ್ ಮೂಲಕ ಆತನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.

ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ವಿಧಿವಶ.! ರಾಜಕೀಯ ಗಣ್ಯರಿಂದ ಸಂತಾಪ

0

ದಾವಣಗೆರೆ: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಾವಣಗೆರೆಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ಯಜಮಾನ್ ಮೋತಿ ವೀರಣ್ಣ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ರಾಜಕೀಯ ನಾಯಕರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಮೋತಿ ವೀರಣ್ಣ ಅವರು, ದಾವಣಗೆರೆ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಯಾಗಿ ನೆಲೆನಿಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಶಾಸಕರಾಗಿ ಆಯ್ಕೆಯಾಗುವ ಮೂಲಕ “ದಾವಣಗೆರೆ ಯಜಮಾನ್” ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಸಮಾಜ ಸೇವಕ ಹಾಗೂ ಉದ್ಯಮಿಯಾಗಿಯೂ ಅವರು ಗುರುತಿಸಿಕೊಂಡಿದ್ದರು.

ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮೋತಿ ವೀರಣ್ಣ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಶುಕ್ರವಾರ ತಡರಾತ್ರಿ ತಮ್ಮ ನಿವಾಸದಲ್ಲೇ ಅವರು ನಿಧನರಾಗಿದ್ದಾರೆ. ದಾನ-ಧರ್ಮ ಹಾಗೂ ಸಮಾಜ ಸೇವೆಯ ಮೂಲಕ ಜೀವನ ನಡೆಸಿದ್ದ ಯಜಮಾನ್ ಮೋತಿ ವೀರಣ್ಣ ಇದೀಗ ನೆನಪು ಮಾತ್ರ ಎಂದು ಕುಟುಂಬಸ್ಥರು ಹಾಗೂ ಅಭಿಮಾನಿಗಳು ದುಃಖ ವ್ಯಕ್ತಪಡಿಸಿದ್ದಾರೆ.

ಚಿತ್ರ ನಿರ್ಮಾಪಕ ಯಜಮಾನ್ ಮೋತಿ ರಾಜೇಂದ್ರ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ, ನಾಲ್ವರು ಮೊಮ್ಮಕ್ಕಳು, ಓರ್ವ ಮರಿಮೊಮ್ಮಗಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತದೇಹವನ್ನು ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದ್ದು, ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಮೋತಿ ಟ್ರಸ್ಟ್ ನಿವೇಶನದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ನಾಲ್ವರು ಶಿಕ್ಷಕರಿಂದ ಹಲ್ಲೆ ಆರೋಪ: ಆಸ್ಪತ್ರೆಗೆ ದಾಖಲು

0

ಚಿಕ್ಕಬಳ್ಳಾಪುರ: ಮಕ್ಕಳಿಗೆ ಪಾಠ ಹೇಳಬೇಕಾದ ಶಿಕ್ಷಕರೇ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಗೌರಿಬಿದನೂರಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಸುಶಾಂತ್ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಹಪಾಠಿಯ ಪುಸ್ತಕದ ಪುಟ ಹರಿದಿದ್ದಾನೆ ಎಂಬ ಕಾರಣ ಮುಂದಿಟ್ಟುಕೊಂಡು, ಶಿಕ್ಷಕರು ಬಾಲಕನನ್ನು ತರಗತಿಯಿಂದ ಕರೆದು ಕಠಿಣವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಶಿಕ್ಷಕರಾದ ದೇವರಾಜು, ಹೇಮಾವತಿ, ವನಜಾಕ್ಷಿ ಸೇರಿದಂತೆ ಇತರ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಹಲ್ಲೆಯಿಂದ ಬಾಲಕ ಪ್ರಜ್ಞೆ ಕಳೆದುಕೊಂಡು ಕುಸಿದುಬಿದ್ದಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಪೋಷಕರು ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿ, ಶಾಲಾ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳಿಗೆ ಶಿಕ್ಷಣ ನೀಡಬೇಕಾದ ಶಿಕ್ಷಕರೇ ಹಲ್ಲೆ ನಡೆಸಿರುವುದು ಕ್ಷಮಿಸಲಾಗದ ಅಪರಾಧ ಎಂದು ಪೋಷಕರು ಆರೋಪಿಸಿ, ಸಂಬಂಧಿಸಿದ ಶಿಕ್ಷಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಸಿದ್ಧತೆ ನಡೆಸಿದ್ದು, ಪೊಲೀಸ್ ಕ್ರಮದ ನಿರೀಕ್ಷೆ ಹೆಚ್ಚಾಗಿದೆ. ಈ ಪ್ರಕರಣವು ಶಾಲೆಯೊಳಗಿನ ಶಿಸ್ತು, ಮಕ್ಕಳ ಸುರಕ್ಷತೆ ಮತ್ತು ಶಿಕ್ಷಕರ ಜವಾಬ್ದಾರಿಯ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ಬಿಹಾರದ ರಾಜಗೀರ್‌ನಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

0

ನಾಲಂದಾ: ಬೌದ್ಧ ಮತ್ತು ಜೈನರಿಗೆ ಪವಿತ್ರವೆನಿಸಿದ ಬಿಹಾರದ ರಾಜಗೀರ್‌ನಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಲವು ಅನುಮಾನಗಳನ್ನು ಮೂಡಿಸಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತಾಯಿ, ಮಗ ಮತ್ತು ಇಬ್ಬರು ಪುತ್ರಿಯರು ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಈ ನಾಲ್ವರು ನೇಪಾಳ ಪ್ರವಾಸ ಮುಗಿಸಿ ಜ.30ರಂದು ರಾಜಗೀರ್‌ಗೆ ಆಗಮಿಸಿ ಕೊಠಡಿ ಬುಕ್‌ ಮಾಡಿಕೊಂಡಿದ್ದರು. ಬಳಿಕ ನಾಲಂದಾದ ಪಾವಾಪುರಿಗೆ ತೆರಳುವ ಯೋಜನೆ ಹೊಂದಿದ್ದರು. ಆದರೆ, ಮೂರು ದಿನಗಳ ಕಾಲ ಕೊಠಡಿಯಿಂದ ಯಾರೂ ಹೊರಬಂದಿರಲಿಲ್ಲ.

ಶುಕ್ರವಾರ ಬೆಳಿಗ್ಗೆ ಕೊಠಡಿಯಿಂದ ಕೊಳೆತ ವಾಸನೆ ಬರುತ್ತಿರುವುದನ್ನು ಗಮನಿಸಿದ ಮ್ಯಾನೇಜರ್‌ ಮಾಹಿತಿ ನೀಡಿದ ಬಳಿಕ, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ನಾಲ್ಕೂ ಶವಗಳು ಒಂದೇ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಸ್ಥಳದಿಂದ ನಿದ್ರೆ ಮಾತ್ರೆಗಳ ದೊಡ್ಡ ಪ್ರಮಾಣ ಪತ್ತೆಯಾಗಿರುವುದು ಆತ್ಮಹತ್ಯೆಗೂ ಮುನ್ನ ಮದ್ದು ಸೇವಿಸಿರಬಹುದೆಂಬ ಶಂಕೆ ಮೂಡಿಸಿದೆ. ಮೃತರಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಪತ್ರಗಳು ಹಾಗೂ ನಗದು ಹಣ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದ ತನಿಖೆಗಾಗಿ ನಾಲಂದಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಶೇಷ ತನಿಖಾ ತಂಡ (SIT) ರಚಿಸಿದ್ದಾರೆ. ಜೊತೆಗೆ ಕರ್ನಾಟಕದ ಗುಬ್ಬಿಗೆ ಇಬ್ಬರು ಪೊಲೀಸರ ತಂಡವನ್ನು ಕಳುಹಿಸಲಾಗಿದೆ.

ರಾಜಗೀರ್ ಪೊಲೀಸರು, “ಕರ್ನಾಟಕ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಗುಬ್ಬಿ ಪೊಲೀಸರ ಸಹಕಾರದೊಂದಿಗೆ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಎಲ್ಲಾ ಶವಗಳನ್ನು ಬಿಹಾರ್ ಶರೀಫ್‌ನ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವೈದ್ಯಕೀಯ ಮಂಡಳಿಯಿಂದ ವೀಡಿಯೊಗ್ರಫಿಯೊಂದಿಗೆ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಅಂಡರ್-19 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ BCCI 7.5 ಕೋಟಿ ರೂ. ನಗದು ಬಹುಮಾನ

0

ನವದೆಹಲಿ: ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ 2026ರ ಅಂಡರ್-19 ವಿಶ್ವಕಪ್‌ನ್ನು ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 7.5 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದೆ.

ಭಾರತದ ಅಂಡರ್-19 ತಂಡದ ಸಾಧನೆಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹರ್ಷ ವ್ಯಕ್ತಪಡಿಸಿದ್ದು, ಯುವ ಆಟಗಾರರ ಅಸಾಧಾರಣ ಪ್ರದರ್ಶನವನ್ನು ಮೆಚ್ಚಿ ಈ ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

“2026ರ ಅಂಡರ್-19 ವಿಶ್ವಕಪ್‌ನ್ನು ಗೆದ್ದ ಭಾರತದ ತಂಡದ ಬಗ್ಗೆ ಇಡೀ ದೇಶ ಹಾಗೂ ಬಿಸಿಸಿಐಗೆ ಅಪಾರ ಹೆಮ್ಮೆ ಇದೆ. ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ರೀತಿ ಹಾಗೂ ಪಂದ್ಯಾವಳಿಯುದ್ದಕ್ಕೂ ಅಜೇಯವಾಗಿ ಫೈನಲ್ ತಲುಪಿ ಪ್ರಶಸ್ತಿ ಗೆದ್ದಿರುವುದು ಅತ್ಯಂತ ಪ್ರಶಂಸನೀಯವಾಗಿದೆ. ಈ ಸಾಧನೆಯನ್ನು ಗೌರವಿಸುವ ಸಲುವಾಗಿ ತಂಡಕ್ಕೆ 7.5 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ” ಎಂದು ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ, ಇಬ್ಬರ ಬಂಧನ

0

ಅಸ್ಸಾಂ: ಮೇಘಾಲಯದ ಸುಟಂಗಾ ಪ್ರದೇಶದಲ್ಲಿರುವ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಹಾಗೂ ಗಣಿಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಮೇಲೆ ಮೇಘಾಲಯ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪೂರ್ವ ಜೈನ್ತಿಯಾ ಹಿಲ್ಸ್ ಎಸ್‌ಪಿ ವಿಕಾಸ್ ಕುಮಾರ್, ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿದೆ ಎಂದು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದಿದ್ದಾರೆ.

ಸ್ಫೋಟ ಸಂಭವಿಸಿದ ದಿನ ಗಣಿಯೊಳಗೆ ಎಷ್ಟು ಕಾರ್ಮಿಕರು ಇದ್ದರು ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ ಸ್ಥಳೀಯ ನಿವಾಸಿಗಳ ಪ್ರಕಾರ, ಸ್ಫೋಟದ ವೇಳೆ 70ರಿಂದ 100 ಜನ ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ರ್ಯಾಟ್ ಹೋಲ್ ಗಣಿಗಾರಿಕೆ ಮೂಲಕ ಅಕ್ರಮವಾಗಿ ಕಲ್ಲಿದ್ದಲು ಹೊರತೆಗೆದಿರುವುದು ಕೂಡ ಪತ್ತೆಯಾಗಿದೆ.

ಕಳಪೆ ಗೋಚರತೆ ಹಾಗೂ ಅಪಾಯಕಾರಿ ಪರಿಸ್ಥಿತಿಗಳ ಕಾರಣದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ಗುರುವಾರ ತಡರಾತ್ರಿ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದವು. ಶುಕ್ರವಾರ ರಾತ್ರಿ ನಾಲ್ವರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಶಿಲ್ಲಾಂಗ್ ಆಸ್ಪತ್ರೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದರಿಂದ ಒಟ್ಟು ಸಾವಿನ ಸಂಖ್ಯೆ 25ಕ್ಕೆ ಏರಿದೆ.

ಈ ಪೈಕಿ 17 ಜನರ ಗುರುತು ಪತ್ತೆಯಾಗಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಹೆತ್ತ ತಾಯಿ ಕೈಯಲ್ಲೇ ಕಂದನ ವ್ಯವಹಾರ: ಶ್ರೀನಿವಾಸಪುರದಲ್ಲಿ 5 ದಿನದ ಮಗು ₹2 ಲಕ್ಷಕ್ಕೆ ಮಾರಾಟ

ಕೋಲಾರ: ತಾಯಿತನದ ಪಾವಿತ್ರ್ಯಕ್ಕೂ ಬೆಲೆ ಕಟ್ಟಿದ ಅಮಾನವೀಯ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಹೆತ್ತ ಗಂಡು ಮಗುವನ್ನು ಕೇವಲ ಐದು ದಿನಗಳಲ್ಲಿ ಲಕ್ಷ ಲಕ್ಷ ಹಣಕ್ಕಾಗಿ ಮಾರಾಟ ಮಾಡಿರುವ ಆರೋಪದಡಿ ದಂಪತಿ ಮತ್ತು ಮಧ್ಯವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೀತು ಮತ್ತು ರಾಘವೇಂದ್ರ ದಂಪತಿಗೆ ಖಾಸಗಿ ನರ್ಸಿಂಗ್ ಹೋಂನಲ್ಲಿ ಮೂರನೇ ಮಗು ಜನಿಸಿತ್ತು. ಈಗಾಗಲೇ ಇಬ್ಬರು ಮಕ್ಕಳನ್ನು ಹೊಂದಿದ್ದ ಈ ದಂಪತಿ, ಮತ್ತೊಂದು ಮಗು ಬೇಡವೆಂದು ನಿರ್ಧರಿಸಿ, ಗಂಡು ಮಗುವನ್ನು 2 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

ಪತಿ ರಾಘವೇಂದ್ರಗೆ ಪರಿಚಿತನಾಗಿದ್ದ ನಾರಾಯಣಸ್ವಾಮಿ ಎಂಬಾತ ಈ ಮಕ್ಕಳ ಮಾರಾಟ ಜಾಲದ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾನೆ. ದಂಪತಿಯಿಂದ ಮಗು ಪಡೆದುಕೊಂಡ ನಾರಾಯಣಸ್ವಾಮಿ, ಅದನ್ನು ಚಿಂತಾಮಣಿ ಮೂಲದ ವ್ಯಕ್ತಿಗೆ ಇನ್ನಷ್ಟು ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಮಗು ಮಾರಾಟದ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆಯೇ ಶ್ರೀನಿವಾಸಪುರ ಪೊಲೀಸರು ದಂಪತಿಯನ್ನು ನಿನ್ನೆ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಮಧ್ಯವರ್ತಿ ನಾರಾಯಣಸ್ವಾಮಿಯನ್ನು ಬಂಧಿಸಿ, ಮಗು ಯಾರ ಬಳಿ ಇದೆ ಎಂಬ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.

ಸದ್ಯ ಮಗು ಮರಳಿ ವಾಪಸ್ ಪಡೆಯಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಈ ಪ್ರಕರಣದ ಹಿಂದೆ ಸಂಘಟಿತ ಮಕ್ಕಳ ಮಾರಾಟ ಜಾಲವಿದೆಯೇ ಎಂಬುದರ ಕುರಿತು ಆಳವಾದ ತನಿಖೆ ನಡೆಯುತ್ತಿದೆ.

ಸರ್ಕಾರಿ ಶಾಲೆ ಜಗಲಿಯಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

0

ಶಿವಮೊಗ್ಗ: ಸರ್ಕಾರಿ ಶಾಲೆಯ ಜಗಲಿಯಲ್ಲೇ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ನಡೆದಿದೆ.

ಬೈಸೆ ಸರ್ಕಾರಿ ಶಾಲೆಯ ಜಗಲಿಯ ಮೇಲಿನ ಮರದ ಪಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ರಾಕೇಶ್ ಜೋಗಿ (28) ಎಂದು ಗುರುತಿಸಲಾಗಿದೆ. ಮೃತ ರಾಕೇಶ್ ಬೈಸೆ ಗ್ರಾಮದ ನಿವಾಸಿಯಾಗಿದ್ದಾರೆ.

ಶನಿವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದ್ದು, ಶಾಲೆಗೆ ಬಂದ ವಿದ್ಯಾರ್ಥಿನಿಯೊಬ್ಬಳು ಮೃತದೇಹವನ್ನು ಕಂಡು ಕೂಗಿಕೊಂಡು ಓಡಿಹೋಗಿದ್ದಾಳೆ ಎನ್ನಲಾಗಿದೆ. ಬಳಿಕ ಸ್ಥಳೀಯರು ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮೃತ ರಾಕೇಶ್ ರಾತ್ರಿ ವೇಳೆ ಮನೆಯಿಂದ ಹಗ್ಗ ತೆಗೆದುಕೊಂಡು ಹೊರಟಿದ್ದಾನೆ ಎನ್ನಲಾಗಿದ್ದು, ಬೆಳಿಗ್ಗೆ ವರೆಗೆ ಮನೆಗೆ ಮರಳದ ಕಾರಣ ಪೋಷಕರು ಹುಡುಕಾಟ ಆರಂಭಿಸಿದ್ದರು. ನಂತರ ಶನಿವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಗೃಹ ಸಚಿವ ಪರಮೇಶ್ವರ್ ಪರೋಕ್ಷ ಸ್ಪಷ್ಟನೆ

0

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂಬುದನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನ ಹಂಚಿಕೆ ಕುರಿತು ಯಾವುದೇ ಪ್ರಸ್ತಾಪವೇ ನಡೆದಿಲ್ಲ ಎಂದು ಹೇಳಿದ್ದಾರೆ.

“ಸಿಎಂ ಅಧಿಕಾರ ಹಂಚಿಕೆಯ ಮಾತೇ ನಡೆದಿಲ್ಲ. ಅದು ನಡೆದಿಲ್ಲ ಎಂದ ಮೇಲೆ ಅದರ ಜಾರಿಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ಘೋಷಿಸಿದೆ. ಹೈಕಮಾಂಡ್ ಎಲ್ಲಾದರೂ ಸಿದ್ದರಾಮಯ್ಯ ಬೇಡ ಎಂದು ಹೇಳಿದೆಯೇ? ಇಲ್ಲ ತಾನೇ” ಎಂದು ಪರಮೇಶ್ವರ್ ಪ್ರಶ್ನಿಸಿದರು.

ಸಿದ್ದರಾಮಯ್ಯ ಬದಲಾವಣೆ ಕುರಿತು ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ ಎಂದು ಹೇಳಿದ ಅವರು, “ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹೈಕಮಾಂಡ್‌ಗೆ ಗೊಂದಲವಾಗಿದೆ ಎಂಬ ಭಾವನೆ ಇಲ್ಲ. ಹೈಕಮಾಂಡ್ ತನ್ನ ಅಗತ್ಯ ಇದ್ದಾಗ ಮಾತನಾಡುತ್ತದೆ. ಈಗ ಸುಮ್ಮನಿದೆ ಎಂದರೆ ಬದಲಾವಣೆಗಳಿಲ್ಲ ಎಂಬುದರ ಅರ್ಥ” ಎಂದು ಹೇಳಿದರು.

ಪಕ್ಷದೊಳಗೆ ಒಬ್ಬೊಬ್ಬರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಬಹುದು ಎಂದ ಅವರು, ಸಿಎಂ ಕುರ್ಚಿ ಬಗ್ಗೆ ಗೊಂದಲ ಇದ್ದಿದ್ದರೆ ಸಿಎಲ್ಪಿ ಸಭೆಯಲ್ಲಿ ಶಾಸಕರು ಪ್ರಶ್ನೆ ಎತ್ತುತ್ತಿದ್ದರು. ಆದರೆ ಯಾರೂ ಆ ಬಗ್ಗೆ ಮಾತನಾಡಿಲ್ಲ. ಅದರಿಂದ ಯಾವುದೇ ಗೊಂದಲ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.

ಯತೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಯತೀಂದ್ರ ಅವರಿಗೆ ಅವರದೇ ಆದ ಸೋರ್ಸ್ ಇರಬಹುದು. ಅದನ್ನೇ ಅವರು ಹೇಳಿರಬಹುದು” ಎಂದು ಪ್ರತಿಕ್ರಿಯಿಸಿದರು.

error: Content is protected !!