Home Blog Page 4

ಕಿರುತೆರೆ ನಟಿ ಶ್ರುತಿಗೆ ಚಾಕು ಇರಿದು ಕೊಲೆಗೆ ಯತ್ನ: ಪತಿ ಬಂಧನ

ಕನ್ನಡ ಕಿರುತೆರೆಯ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್​ಗಳಲ್ಲಿ ನಟಿಸಿದ್ದ ನಟಿ ಮೇಲೆ ಪತಿಯೇ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್​ನಲ್ಲಿ ನಡೆದಿದೆ.

ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದ ಶ್ರುತಿ ಮೇಲೆ ಪತಿಯೇ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದು ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಶ್ರುತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿ ಅಮರೇಶ್ ನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಜುಲೈ​ 4ರಂದು ನಟಿ ಶ್ರುತಿ ಮೇಲೆ ಹಲ್ಲೆ ನಡೆದಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.  20 ವರ್ಷದ ಹಿಂದೆ ಅಮರೇಶ್ ಎಂಬಾತನ ಪ್ರೀತಿಸಿ ಮದುವೆಯಾಗಿದ್ದ ನಟಿ ಶ್ರುತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ಹನುಮಂತ ನಗರದಲ್ಲಿ ಲೀಸ್​ಗೆ ಮನೆ ಪಡೆದು ವಾಸವಿದ್ದರು. ಆದರೆ ಇತ್ತೀಚೆಗೆ ಶ್ರುತಿ ಹಾಗೂ ಅಮರೇಶ್‌ ಮಧ್ಯೆ ಹೊಂದಾಣಿಕೆ ಇರಲಿಲ್ಲ. ಶ್ರುತಿ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ್ದ ಅಮರೇಶ್‌ ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದನಂತೆ. ಇದರಿಂದ ಬೇಸತ್ತಿದ್ದ ಶ್ರುತಿ ಕಳೆದ ಏಪ್ರಿಲ್​ನಲ್ಲಿ ಗಂಡನಿಂದ ದೂರಾಗಿ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಇದರ ಜೊತೆಗೆ ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತಂತೆ.

ಈ ಬಗ್ಗೆ ನಟಿ ಶ್ರುತಿ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರಂತೆ. ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂಧಾನ ಮಾಡಿ ಒಂದಾಗಿದ್ದಾರೆ. ರಾಜಿ ಸಂದಾನದ ಬಳಿಕ ಶ್ರುತಿ ಗಂಡನೊಂದಿಗೆ ಮನೆಗೆ ವಾಪಸ್‌ ಆಗಿದ್ದಾಳೆ. ಆದರೆ ಮನೆಗೆ ಬಂದ ಮರುದಿನವೇ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ.ಈ ವೇಳೆ ಶ್ರುತಿಗೆ ಅಮರೇಶ್ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಶುಕ್ರವಾರ ಮಕ್ಕಳು ಕಾಲೇಜಿಗೆ ಹೋದ ನಂತರ ಹೆಂಡತಿ ಮೇಲೆ ಪೆಪ್ಪರ್ ಸ್ಪ್ರೇ ಹೊಡೆದು ಪತಿ ಹಲ್ಲೆ ಮಾಡಿದ್ದಾನೆ.

ಪತ್ನಿಗೆ ಅಶ್ಲೀಲ ಮೆಸೇಜ್: ಕಾಮುಕನಿಗೆ ಬುದ್ಧಿ ಕಲಿಸಿದ ಹಾಸ್ಯ ನಟ ಸಂಜು ಬಸಯ್ಯ

ಸೋಶಿಯಲ್‌ ಮೀಡಿಯಾದಲ್ಲಿ ಹೆಣ್ಣುಮಕ್ಕಳಿಗೆ ಕೆಟ್ಟ ಕೆಟ್ಟ ಕಾಮೆಂಟ್‌ಗಳನ್ನು ಮಾಡೋದು ಅಥವಾ ಅಶ್ಲೀಲವಾಗಿ ಮೆಸೇಜ್‌ಗಳನ್ನ ಮಾಡೋದು ಕಾಮನ್‌ ಆಗಿದೆ. ಇದೀಗ ಪತ್ನಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಕಾಮುಕನಿಗೆ ಹಾಸ್ಯ ಕಲಾವಿದ ಸಂಜು ಬಸಯ್ಯ ಸರಿಯಾಗಿ ಬುದ್ದಿ ಕಲಿಸಿದ್ದು ಈ ಮೂಲಕ ಹಲವರಿಗೆ ಸಂಜು ಮಾದರಿಯಾಗಿದ್ದಾರೆ.

ಸಂಜು ಬಸಯ್ಯ ಅವರ ಪತ್ನಿ ಪಲ್ಲವಿ ಅವರಿಗೆ ವಿಜಯನಗರ ಮೂಲದ ಮನೋಜ್‌ ಎಂಬ ಪಿಯುಸಿ ವಿದ್ಯಾರ್ಥಿಯು ಇನ್ಸ್ಟಾಗ್ರಾಮ್‌ ಮೂಲಕ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನ ಕಳುಹಿಸಿದ್ದಾನೆ. ಈ ಬಗ್ಗೆ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಸಂಜು ಬಸಯ್ಯ ದೂರು ನೀಡಿದ್ದು ತಕ್ಷಣವೇ ಅಲರ್ಟ್‌ ಆದ ಪೊಲೀಸರು ಆರೋಪಿಯನ್ನು ಕರೆಸಿ ಶಿಕ್ಷೆ ನೀಡಿದ್ದಾರೆ. ಈ ವೇಳೆ ಯುವಕ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ.

ಈ ಬಗ್ಗೆ ಸಂಜು ಬಸಯ್ಯ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು, “ಮನೋಜ್‌ ಅಂತ ಈತ ನನ್ನ ಧರ್ಮಪತ್ನಿ ಪಲ್ಲವಿಗೆ ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲವಾಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದರು. ಇದರ ಜೊತೆಗೆ ನಾವು ಪರ್ಸನಲ್‌ ಐಡಿಯನ್ನು ಸೇವ್‌ ಮಾಡಿಕೊಂಡು ಬೈಲಹೊಂಗಲ ಸ್ಟೇಷನ್‌ನಲ್ಲಿ ಕಂಪ್ಲೇಂಟ್‌ ಕೊಟ್ಟಾಗ, ಈ ವ್ಯಕ್ತಿಯನ್ನು ಊರಿನಿಂದ ಕರೆದುಕೊಂಡು ಬಂದು, ಅವನಿಗೆ ಕಠಿಣವಾದ ಶಿಕ್ಷೆ ಕೊಟ್ಟಿದ್ದಾರೆ. ನಾವು ಕೇಳಿಕೊಳ್ಳುವುದು ಇಷ್ಟೇ. ಕೆಟ್ಟ ಕೆಟ್ಟದಾಗಿ ಕಾಮೆಂಟ್‌ಗಳು ಅಥವಾ ಮೆಸೇಜ್‌ಗಳು ಮಾಡಿದ್ರೂ ಕೂಡ ನಾವು ಓದುತ್ತಾ ಇರ್ತೇವೆ ಹಾಗೂ ಗಮನಿಸುತ್ತಿರುತ್ತೇವೆ ಅನ್ನೋದು ನಿಮ್ಮ ಗಮನಕ್ಕಿರಲಿ” ಎಂದು ಸಂಜು ಬಸಯ್ಯ ಹೇಳಿದ್ದಾರೆ.

“ಕೆಟ್ಟ ಕೆಟ್ಟ ಕಾಮೆಂಟ್‌ಗಳಿಗೆ ನಾವು ರಿಯಾಕ್ಟ್‌ ಮಾಡಲ್ಲ ಅಂತ ನೀವು ಪದೇ ಪದೇ ಮಾಡ್ತಾ ಇದ್ರೆ, ಇವನಿಗೆ ಆದ ಶಿಕ್ಷೆ ನಿಮಗೂ ಖಂಡಿವಾಗಿಯೂ ಆಗುತ್ತದೆ. ಈ ಬಗ್ಗೆ ನಾವು ಇಷ್ಟು ದಿನ ತಲೆ ಕೆಡಿಸಿಕೊಂಡಿಲ್ಲ. ಆದರೆ ಇನ್ಮೇಲೆ ತಲೆ ಕೆಡಿಸಿಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಮಗೂ ಲೈಫ್‌ ಇದೆ. ನಾವು ಸೋಶಿಯಲ್‌ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದೇವೆ. ನಮಗೆ ಅದರಿಂದ ಲೈಫ್‌ ಇದೆ. ಹೀಗಾಗಿ ನೀವು ಅರಿವಿಟ್ಟುಕೊಂಡು ಮೆಸೇಜ್‌ಗಳನ್ನು ಮಾಡಿ. ನಿಮ್ಮ ಫ್ಯಾಮಿಲಿ ಆಗಲಿ ಅಥವಾ ನಮ್ಮ ಫ್ಯಾಮಿಲಿ ಎಲ್ಲವೂ ಕೂಡ ಒಂದೇ ಆಗಿರುತ್ತದೆ. ನಿಮ್ಮ ಅಕ್ಕ-ತಂಗಿಯರು ನಮ್ಮ ಅಕ್ಕ-ತಂಗಿಯರಿದ್ದಂತೆ” ಎಂದು ಸಂಜು ಬಸಯ್ಯ ತಿಳಿಸಿದ್ದಾರೆ.

ಪಕ್ಷ ನನಗೆ ಸಂಘಟನೆ ಜವಾಬ್ದಾರಿ ಹಾಗೂ ಡಿಸಿಎಂ ಸ್ಥಾನ ನೀಡಿದ್ದು, ನನ್ನ ಗಮನ ಅವುಗಳತ್ತ ಮಾತ್ರ ಇದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲ ಅವರ ಹೊರತಾಗಿ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ. ರಾಜ್ಯ ಉಸ್ತುವಾರಿಗಳ ಜೊತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಬೇಕಿದೆ.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಈ ಪ್ರಕ್ರಿಯೆ ಈಗಾಗಲೇ ತಡವಾಗಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಗೆ ಶ್ರಮಿಸಿದವರ ಹೆಸರನ್ನು ಸೇರಿಸಿ ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು” ಎಂದರು.

ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ದರೋಡೆ: ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

0

ಕಲಬುರಗಿ: ಕಲ್ಬುರ್ಗಿಯ ಹೃದಯಭಾಗವಾದ ಸರಾಫ್ ಬಜಾರ್‌ನಲ್ಲಿ, ಹಾಡಹಗಲೇ ನಡೆದ ದರೋಡೆ ಘಟನೆಯು ಇಡೀ ನಗರವನ್ನು ಬೆಚ್ಚಿ ಬೀಳಿಸಿದೆ. ಸಿನಿಮಾ ಶೈಲಿಯಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಮಾಲೀಕನಿಗೆ ಗನ್ ತೋರಿಸಿ ಸುಮಾರು ಎರಡೂವರೆ ಕೆಜಿ ಚಿನ್ನಾಭರಣವನ್ನು ಲೂಟಿ ಮಾಡಿದ್ದಾರೆ.

ಹೌದು ಮಧ್ಯಾಹ್ನ ಸುಮಾರು 12.30ರಿಂದ 1 ಗಂಟೆ ನಡುವೆ ನಾಲ್ವರು ಖದೀಮರು ನುಗ್ಗಿ ಸಿನಿಮಾ ಸ್ಟೈಲ್ ನಲ್ಲಿ ದರೋಡೆ ಮಾಡಿದ್ದಾರೆ. ಮುಖಕ್ಕೆ ಮಾಸ್ಕ್, ತಲೆಗೆ ಕ್ಯಾಪ್‌ ಹಾಕಿಕೊಂಡು ಬಂದ ಖದೀಮರು ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಬೆದರಿಸಿ 2-3 ಕೆ.ಜಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಈ ಘಟನೆ ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಮಾನನಷ್ಟ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ.

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹಿರಾತು ನೀಡಿತ್ತು. ಪಕ್ಷದ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು.

ಈ ಪ್ರಕರಣ ರದ್ದತಿ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ  ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ಬರೀ ಸುಳ್ಳು ಸುದ್ದಿ.. ಭಾರತಕ್ಕೆ ಯಾವುದೇ ಹಾನಿಯಾಗಿಲ್ಲ: ಅಜಿತ್ ದೋವಲ್

0

ಚೆನ್ನೈ: ಬರೀ ಸುಳ್ಳು ಸುದ್ದಿ.. ಭಾರತಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ಕಿಡಿಕಾರಿದ್ದಾರೆ. ಚೆನ್ನೈನ ಐಐಟಿ ಮದ್ರಾಸ್ 62ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ದೋವಲ್, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸನ್ನು ಶ್ಲಾಘಿಸಿದರು. ರಕ್ಷಣಾ ಸಾಮರ್ಥ್ಯಗಳಲ್ಲಿ ಭಾರತದ ಸ್ವಾವಲಂಬನೆಯನ್ನು ಒತ್ತಿ ಹೇಳಿದ್ದಾರೆ.

ಇನ್ನೂ ವಿದೇಶಿ ಮಾಧ್ಯಮಗಳು ಭಾರತೀಯ ಯಾವುದೇ ರಚನೆಗೆ ಹಾನಿಯಾಗಿರುವುದನ್ನು ತೋರಿಸುವಲ್ಲಿ ವಿಫಲವಾಗಿವೆ. ಬರೀ ಸುಳ್ಳು ಸುದ್ದಿಗಳನ್ನೇ ಹರಡಿವೆ ಎಂದು ವಾಗ್ದಾಳಿ ನಡೆಸಿದರಲ್ಲೇ ಭಾರತಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮೇ 7 ಮಧ್ಯರಾತ್ರಿ ಭಾರತೀಯ ಸೇನಾಪಡೆಗಳ ಕಾರ್ಯಾಚರಣೆಯನ್ನು ಶ್ಲಾಘಿಸಿದ ದೋವಲ್‌, ನಮ್ಮ ಸಶಸ್ತ್ರ ಪಡೆಗಳು ನಿಖರ ಗುರಿಗಳನ್ನು ಹೊರತುಪಡಿಸಿ ಬೇರೆಲ್ಲಿಯೂ ದಾಳಿ ಮಾಡಲಿಲ್ಲ. ಶತ್ರು ಪ್ರದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲಷ್ಟೇ ದಾಳಿ ಮಾಡಿದವು. ಭಾರತದ ಪ್ರತೀಕಾರದ ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತರಾದರು. 23 ನಿಮಿಷಗಳ ಕಾಲ ಸಂಪೂರ್ಣ ಕಾರ್ಯಾಚರಣೆ ನಡೆದಿತ್ತು ಎಂದು ತಿಳಿಸಿದರು.

ಇನ್ನೂ ಎರಡೂವರೆ ವರ್ಷ ಉತ್ತಮ ಆಡಳಿತ ಕೊಡುವುದು ನಮ್ಮ ಉದ್ದೇಶ: ಡಾ. ಜಿ ಪರಮೇಶ್ವರ್

ಮೈಸೂರು: ಇನ್ನೂ ಎರಡೂವರೆ ವರ್ಷ ಉತ್ತಮ ಆಡಳಿತ ಕೊಡುವುದು ನಮ್ಮ ಉದ್ದೇಶ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಅವರು ಹಿಂದೆಯೂ ಹೇಳಿದ್ದರು, ಈಗಲೂ ಅದನ್ನೇ ಹೇಳಿದ್ದಾರೆ.

ಮತ್ತೊಬ್ಬರಿಗೆ ಅವಕಾಶ ಇದೆಯೋ ಇಲ್ಲವೋ ಎಂಬುದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.  ಇನ್ನೂ ದೇವರಲ್ಲಿ‌ ನಾಡಿಗೆ ಹಾಗೂ ನನಗೂ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ.

ಇನ್ನೂ ಎರಡೂವರೆ ವರ್ಷ ಉತ್ತಮ ಆಡಳಿತ ಕೊಡುವುದು ನಮ್ಮ ಮುಂದೆ ಇದೆ. ದೇವರ ಸನ್ನಿಧಿಯಲ್ಲಿ ನಿಂತು ಹೆಚ್ಚು ರಾಜಕೀಯ ಮಾತನಾಡುವುದಿಲ್ಲ. ನಮ್ಮಲ್ಲೇ ಮೊದಲು ಎಂಬಂತೆ ಮಾಧ್ಯಮದವರಿಗೆ ಎಲ್ಲಾ ಬೆಳವಣಿಗೆ ಗೊತ್ತಾಗುತ್ತದೆ ಎಂದರು.

ಸಿಎಂ ಉತ್ತರ ಕೊಟ್ಟಿದ್ದಾರೆ, ನಾನು ಮಾತನಾಡೋ ಅವಶ್ಯಕತೆ ಇಲ್ಲ: ಹೈಕಮಾಂಡ್ ಭೇಟಿಯ ಬಳಿಕ ಡಿಕೆಶಿ ಪ್ರತಿಕ್ರಿಯೆ

ದೇವನಹಳ್ಳಿ: ಹೈಕಮಾಂಡ್ ಭೇಟಿಯ ಬಳಿಕ ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಸಿಎಂ ಅವರೇ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ನಾನು ಮತ್ತೆ ಮತ್ತೆ ಮಾತನಾಡೋದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಡಿಕೆಶಿ ಅವರು, ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ಏನು ಹೇಳಿದ್ದಾರೆ ಎಂಬುದರ ಬಗ್ಗೆ ನಾನು ಮತ್ತೆ ಪ್ರತಿಕ್ರಿಯೆ ನೀಡೋ ಅವಶ್ಯಕತೆ ಇಲ್ಲ ಎಂದರು. ಶಾಸಕರ ಬೆಂಬಲ, ಅಧಿಕಾರ ಹಂಚಿಕೆ, ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡುವುದರ ಬದಲಿಗೆ, ಮಾಧ್ಯಮಗಳ ಪ್ರಶ್ನೆಗಳನ್ನು ತಿರಸ್ಕರಿಸಿದ ಡಿಕೆಶಿ, ನಮ್ಮಗೆ ಯಾವುದೇ ಗಾಬರಿ ಇಲ್ಲ. ನಿಮಗ್ಯಾಕೆ ಗಾಬರಿ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡುವುದು ಶತಸಿದ್ಧ: ಆರ್. ಅಶೋಕ್

ಬೆಂಗಳೂರು: ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡೋದು ಶತಸಿದ್ಧ, ಅಲ್ಪಾವಧಿಯ ವಿಸ್ತರಣೆಯೂ ಸಿಗಲಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಶಿವಕುಮಾರ್ ಸ್ಥಾನಕ್ಕೇರೋದು ಶತಸಿದ್ಧ ಎಂದು ಹೇಳಿದರು.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ, ಅದು ಮೊದಲಿಂದಲೂ ಇತ್ತು, ಈಗ ವಿಕೋಪಕ್ಕೆ ಹೋಗಿದೆ, ಕೆಲ ಮಂತ್ರಿಗಳು ಸಹ ಸ್ಥಾನ ಉಳಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದರು.

ಇದರ ನಡುವೆ ಕಾಂಗ್ರೆಸ್ ಹೈಕಮಾಂಡ್ನಿಂದ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶ ದೊರೆತ ನಂತರವೇ, ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂಬುದು ತಿಳಿದುಬಂದಿದೆ. ಸದ್ಯದ ಮಟ್ಟಿಗೆ ಕರ್ನಾಟಕದಲ್ಲಿ ಯಾವುದೇ ಬದಲಾವಣೆ, ಪ್ರಯೋಗ ಮಾಡುವ ಇರಾದೆಯಲ್ಲಿ ರಾಹುಲ್ ಗಾಂಧಿ ಇಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುವಲ್ಲಿ ತೊಡಕು: ಎಚ್.ಎಂ. ರೇವಣ್ಣ ಹೇಳಿದ್ದೇನು..?

ಮೈಸೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ವಿತರಿಸಲು ತೊಡಕುಗಳಿರುವುದರಿಂದ, ಮೂರು ತಿಂಗಳಿಗೊಮ್ಮೆ ಹಣ ನೀಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿ ತಿಂಗಳು ಹಣ ನೀಡಲು ತಾಂತ್ರಿಕ ಹಾಗೂ ಆಡಳಿತಾತ್ಮಕ ಅಡೆತಡೆಗಳಿವೆ. ಆದ್ದರಿಂದ, ಸದ್ಯಕ್ಕೆ ಮೂರು ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಇನ್ನೊಂದೆಡೆ, ಜಿಎಸ್‌ಟಿ ಸಮಸ್ಯೆ ಕಾರಣದಿಂದಾಗಿ ಸುಮಾರು 1.2 ಲಕ್ಷ ಲಾಭಾಂಶದ ಅರ್ಹ ಮಹಿಳೆಯರಿಗೆ ಹಣ ಜಮೆಯಾಗಿರಲಿಲ್ಲ ಎಂಬುದನ್ನು ಅವರು ಒಪ್ಪಿಕೊಂಡಿದ್ದು, ಇದರಲ್ಲಿ ಈಗ 58 ಸಾವಿರ ಮಂದಿಯ ಸಮಸ್ಯೆ ಬಗೆಹರಿಸಲಾಗಿದ್ದು, ಉಳಿದವರ ಸಮಸ್ಯೆಗಳನ್ನು ಕೂಡ ಬಗೆಹರಿಸುವ ಪ್ರಕ್ರಿಯೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

error: Content is protected !!