ಹಾಸನ: ವರ್ಷದ ಮಹತ್ವಪೂರ್ಣ ಹಾಸನಾಂಬೆ ತಾಯಿ ದರ್ಶನಕ್ಕೆ ಇಂದು (ಬುಧವಾರ) ವಿಧ್ಯುಕ್ತ ತೆರೆ ಬಿದ್ದಿದ್ದು, ಭಕ್ತರು ಇಂದು ಮುಂಜಾನೆ ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದರು.
14 ದಿನಗಳ ಸಾರ್ವಜನಿಕ ದರ್ಶನ ಅವಧಿಯಲ್ಲಿ ಈಗಾಗಲೇ 26 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸಿದ್ದಾರೆ. ಧ್ರುವ ಸರ್ಜಾ, ಹರ್ಷ, ನಟಿ ಮಿಲನ ನಾಗರಾಜ್ ಸೇರಿದಂತೆ ಹಲವರು ಇಂದು ದರ್ಶನ ಪಡೆದಿದ್ದಾರೆ. ಸಂಜೆ 7 ರಿಂದ ರಾತ್ರಿ 12 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ಸ್ಥಳೀಯರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಜಾತ್ರಾ ಮಹೋತ್ಸವದ ಹದಿಮೂರು ದಿನಗಳಲ್ಲಿ 1000 ರೂ., 300 ರೂ. ವಿಶೇಷ ಟಿಕೆಟ್ ಮಾರಾಟ ಮತ್ತು ಲಡ್ಡು ಮಾರಾಟದಿಂದ ದೇವಾಲಯಕ್ಕೆ ಒಟ್ಟು 22 ಕೋಟಿ ರೂ. ಆದಾಯ ಬಂದಿದೆ. ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಸ್ಥಳೀಯ ಅಧಿಕಾರಿಗಳು ತಾಯಿ ಸೇವೆಯಲ್ಲಿ ಭಾಗಿಯಾಗಿದ್ದರು.
ನಾಳೆ ಮಧ್ಯಾಹ್ನ 12 ಗಂಟೆಗೆ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ.