Home Blog Page 4

ಬೆಂಗಳೂರಿಗರ ಗಮನಕ್ಕೆ: ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ – ಕಂಪ್ಲೀಟ್ ವಿವರ ಇಲ್ಲಿದೆ!

0

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಸಂಚಾರದಲ್ಲಿ ಬದಲಾವಣೆ ಇರಲಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಯಿಂದ ಮೆರವಣಿಗೆಯು ಬೊಮ್ಮನಹಳ್ಳಿ ಜಂಕ್ಷನ್‌ನಲ್ಲಿ ಸಾಗಲಿರುವ ಕಾರಣ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಹೊಸೂರು ರಸ್ತೆ ಬೊಮ್ಮನಹಳ್ಳಿ ಜಂಕ್ಷನ್, ರೂಪೇನ ಅಗ್ರಹಾರ, ಗಾರೇಭಾವಿಪಾಳ್ಯ ಜಂಕ್ಷನ್ ಮೂಲಕ ಬೆಂಗಳೂರು ನಗರದಿಂದ ಹೊರ ಹೋಗುವ ಮತ್ತು ಬೆಂಗಳೂರು ನಗರಕ್ಕೆ ಪ್ರವೇಶಿಸುವ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಾಹ್ನ 3 ಗಂಟೆಯ ನಂತರ ಹೊಸೂರು ರಸ್ತೆ ಬೊಮ್ಮನಹಳ್ಳಿ ಜಂಕ್ಷನ್ ಮೂಲಕ ಸಂಚರಿಸುವ ಸಾರ್ವಜನಿಕರು ಬದಲಿ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ.

ಪರ್ಯಾಯ ಮಾರ್ಗ:
ವಿಲ್ಸನ್‌ಗಾರ್ಡನ್, ಆಡುಗೋಡಿ, ಕಡೆಯಿಂದ ಬರುವ ವಾಹನಗಳು ಡೈರಿ ಸರ್ಕಲ್ ಮೂಲಕ ಬನ್ನೇರುಘಟ್ಟ ರಸ್ತೆಗೆ ಸಾಗಿ ಅಲ್ಲಿಂದ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚರಿಸಬಹುದು.

ಬನಶಂಕರಿಯಿಂದ ಕಡೆಯಿಂದ ಡಬಲ್ ಡೆಕ್ಕರ್ ಮೂಲಕ ಬರುವ ವಾಹನಗಳು ಜಯದೇವ ಜಂಕ್ಷನ್‌ನಲ್ಲಿ ಬಲ ತಿರುವುದು ಕಡೆದು ಬನ್ನೇರುಘಟ್ಟ ರಸ್ತೆ ಮೂಲಕ ಸಾಗಿ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚಾರ.

ಹೊರವರ್ತುಲ ರಸ್ತೆ ಮಾರತಹಳ್ಳಿ ಕಡೆಯಿಂದ ಬರುವ ವಾಹನಗಳು 27ನೇ ಮುಖ್ಯರಸ್ತೆ ಎಡ ತಿರುವು ಪಡೆದು ವೇಮನ ಜಂಕ್ಷನ್ ಮೂಲಕ ಸೋಮಸುಂದರ್‌ಪಾಳ್ಯ ಮಾರ್ಗವಾಗಿ ಕೂಡ್ಲುಗೆ ತೆರಳಿ ಹೊಸೂರು ಮುಖ್ಯ ರಸ್ತೆ
ಹೊಸೂರು ಕಡೆಯಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳು ಎಲೆಕ್ಟ್ರಾನಿಕ್‌ಸಿಟಿ ಎಲಿವೇಟೆಡ್ ಪ್ರೈಓವರ್ ಮೂಲಕ ಸಂಚರಿಸಬಹುದು.

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ: 25 ವರ್ಷದ ಯುವಕ ಅರೆಸ್ಟ್, ಸಂತ್ರಸ್ತೆ ಆಸ್ಪತ್ರೆಗೆ ದಾಖಲು

0

ರಾಯಚೂರು: ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ವೈದ್ಯಕೀಯ ಪರೀಕ್ಷೆಯ ವೇಳೆ ಈ ವಿಚಾರ ದೃಢಪಟ್ಟಿದೆ. ಈ ಕುರಿತು ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು, ಆರೋಪಿಯಾಗಿರುವ 25 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಯುವಕ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಘಟನೆ ನಂತರ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.

ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾದ ಹಿನ್ನೆಲೆಯಲ್ಲಿ, ಆರೋಪಿಯನ್ನು ಜೈಲಿಗಟ್ಟಿದ್ದು, ವಿದ್ಯಾರ್ಥಿನಿಯನ್ನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Bengaluru Crime News: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಹತ್ಯೆ – ಆರೋಪಿ ಅರೆಸ್ಟ್‌

0

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಜರುಗಿದೆ.

ಅಂಜಲಿ (20) ಕೊಲೆಯಾದ ಮಹಿಳೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಆರೋಪಿ ಟ್ರಾವೆಲ್ಸ್ ಕಚೇರಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಂಜಲಿ ಸುರಪುರ ಮೂಲದ ರವಿಚಂದ್ರನ ಜೊತೆ ಮಹಿಳೆ 2ನೇ ಮದುವೆಯಾಗಿದ್ದಳು. ಮದುವೆ ನಂತರ ಅಮೃತಹಳ್ಳಿಯಲ್ಲಿ ವಾಸವಿದ್ದರು. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿ ರವಿಚಂದ್ರನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

RTO ಭರ್ಜರಿ ಕಾರ್ಯಾಚರಣೆ; 13 ದಿನದಲ್ಲೇ 102 ಖಾಸಗಿ ಬಸ್ ಸೀಜ್: 1 ಕೋಟಿ ದಂಡ ಸಂಗ್ರಹ!

0

ಬೆಂಗಳೂರು:- ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಎಸಿ ಸ್ಲೀಪರ್ ಬಸ್ ಅಕ್ಟೋಬರ್ 24ರಂದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರಂತದಲ್ಲಿ 19 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದರು.

ಈ ಘಟನೆ ಬಳಿಕ ಸಾರಿಗೆ ಸಚಿವರು ಖಾಸಗಿ ಬಸ್ಸುಗಳ ಸುರಕ್ಷತಾ ಕ್ರಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅವರ ಆದೇಶದ ಮೇರೆಗೆ, ಸಾರಿಗೆ ಇಲಾಖೆ ದೊಡ್ಡ ಮಟ್ಟದ ತಪಾಸಣೆ ಆರಂಭಿಸಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಉಪ ಸಾರಿಗೆ ಆಯುಕ್ತರ ನೇತೃತ್ವದಲ್ಲಿ 12 ತಂಡಗಳನ್ನು ರಚಿಸಿ ಬಸ್ಸುಗಳ ಪರಿಶೀಲನೆ ನಡೆಯಿತು. ಬಸ್‌ಗಳಲ್ಲಿ ತುರ್ತು ನಿರ್ಗಮನ ಬಾಗಿಲು, ಬೆಂಕಿ ನಂದಿಸುವ ಸಾಧನ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇವೆಯೇ ಎಂಬುದನ್ನು ತಪಾಸಣೆ ಮಾಡಲಾಯಿತು. ಜೊತೆಗೆ ಕೆಲವು ಬಸ್ಸುಗಳಲ್ಲಿ ಅನಧಿಕೃತ ಸರಕು ಸಾಗಾಣಿಕೆ ನಡೆಯುತ್ತಿದೆಯೇ ಎಂಬುದನ್ನೂ ಪರಿಶೀಲಿಸಲಾಯಿತು.

ಅಕ್ಟೋಬರ್ 24ರಿಂದ ನವೆಂಬರ್ 5ರವರೆಗೆ — 13 ದಿನಗಳ ಅವಧಿಯಲ್ಲಿ — ಒಟ್ಟು 4,452 ಖಾಸಗಿ ಬಸ್ಸುಗಳನ್ನು ತಪಾಸಣೆ ಮಾಡಲಾಗಿದೆ. ಅವುಗಳಲ್ಲಿ 604 ಬಸ್ಸುಗಳ ಮೇಲೆ ಕೇಸ್ ದಾಖಲಿಸಲಾಗಿದೆ. 102 ಬಸ್ಸುಗಳನ್ನು ಸೀಜ್ ಮಾಡಲಾಗಿದ್ದು, ದಂಡ ಮತ್ತು ತೆರಿಗೆಯ ರೂಪದಲ್ಲಿ ₹1,09,91,284 ವಸೂಲಿ ಮಾಡಲಾಗಿದೆ.

ಕರ್ನೂಲು ದುರಂತದ ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಸುರಕ್ಷತಾ ನಿಯಮ ಪಾಲಿಸದ ಬಸ್ ಮಾಲೀಕರಿಗೆ ಈಗಾಗಲೇ ಬಿಸಿ ಮುಟ್ಟಿಸಿದೆ. ಈಗಾದರೂ ಬಸ್ ಮಾಲೀಕರು ಎಚ್ಚೆತ್ತುಕೊಳ್ಳುತ್ತಾರೆಯೇ ಎಂಬುದನ್ನು ನೋಡಬೇಕಾಗಿದೆ.

ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವೊಂದನ್ನು ಬರೆದಿದ್ದಾರೆ.

ರಾಜ್ಯದ ರೈತರ ಸಮಸ್ಯೆಗಳ ಕುರಿತಂತೆ ತಮ್ಮೊಡಗೆ ತುರ್ತಾಗಿ ಚರ್ಚೆ ಮಾಡಬೇಕಿದ್ದು, ಅದಕ್ಕೆ ಅವಕಾಶ ನೀಡುವಂತೆ ಪತ್ರದಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ದಿನದಿಂದ ದಿನಕ್ಕೆ ರೈತರ ಹೋರಾಟ ತೀವ್ರಗೊಂಡಿದ್ದು, ಕಬ್ಬಿನ ಬೆಲೆಗಾಗಿ ಅವರ ಪಟ್ಟು ಯಾವತ್ತೂ ತಣ್ಣಗಾಗಿಲ್ಲ. ದಿನಕ್ಕೊಬ್ಬರಂತೆ ಸಚಿವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದರೂ ಸಮಸ್ಯೆ ಇನ್ನೂ ಬಗೆಹರಿಯುತ್ತಿಲ್ಲ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ತುರ್ತು ಚರ್ಚೆಗಾಗಿ ಪತ್ರ ಬರೆದಿದ್ದಾರೆ.

ಸಿಎಂ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ರೈತರು ತಮ್ಮ ಹೋರಾಟವನ್ನು ತೀವ್ರ ಸ್ವರೂಪದಲ್ಲಿ ಮುಂದುವರೆಸುತ್ತಿದ್ದಾರೆ.

ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಂಧಾನಿಸಲು ನಿರಂತರ ಪ್ರಯತ್ನ ಮಾಡಿದ್ದರೂ, ರೈತರು ಎದುರಿಸುತ್ತಿರುವ ವೆಚ್ಚ ಮತ್ತು ಲಾಭದ ಅಸಮತೋಲನ ಸಮಸ್ಯೆ ಸುಲಭವಾಗಿ ಬಗೆಹರಿಯುತ್ತಿಲ್ಲ. ಕಟಾವು, ಸಾರಿಗೆ ವೆಚ್ಚಗಳನ್ನು ಕಡಿಮೆ ಮಾಡಿದ ಬಳಿಕವೂ, ರೈತರಿಗೆ ಪ್ರತಿ ಟನ್‌ಗೆ 2,600–3,000 ರೂ. ಮಾತ್ರ ಲಾಭ ಸಿಗುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರದ ಸಹಾಯವಾಣಿ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಿಕಲಚೇತನ ಮಕ್ಕಳೊಂದಿಗೆ ವಿದೇಶಿ ದಂಪತಿಗಳು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಇಂಗ್ಲ್ಯಾಂಡ್‌ನ ಮೆಂಚೆಸ್ಟರ್‌ದ ವೇಯ್ನ್ ಕಾರ್ಟರ್ ಮತ್ತು ಜಾನಿಸ್ ಕಾರ್ಟರ್ ದಂಪತಿಗಳು ಪಟ್ಟಣದ ಶ್ರೀ ಅನ್ನದಾನೇಶ್ವರ ವಿಕಲಚೇತನ ಮಕ್ಕಳ ಶಾಲೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳೊಂದಿಗೆ ಆಡಿ ನಲಿದರು.

ಮಕ್ಕಳೊಂದಿಗೆ ಮಕ್ಕಳಾಗಿ ಅವರದ್ದೇ ಆದ ಸಂಕೇತ ಭಾಷೆಯಲ್ಲಿ ಮುಕ್ತವಾಗಿ ಬೆರೆತ ದಂಪತಿಗಳು, ವಿದ್ಯಾರ್ಥಿಗಳೊಂದಿಗೆ ವಿನೋದವಾಗಿ ಕಾಲ ಕಳೆದರು. ಎಸ್‌ಎ ಪಿಯು ಕಾಲೇಜಿನ ಪ್ರಾಚಾರ್ಯ ವೈ.ಸಿ. ಪಾಟೀಲ ಕಾರ್ಟರ್ ದಂಪತಿಗಳಿಗೆ ಶಾಲೆ ನಡೆದು ಬಂದ ದಾರಿಯನ್ನು ವಿವರಿಸಿ, ಲಿಂ. ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳವರು ವಿಕಲಚೇತನರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅವರು ಕಲಿಯುವಾಗ ಅನುಭವಿಸುತ್ತಿದ್ದ ಕಷ್ಟ-ಕಾರ್ಪಣ್ಯಗಳನ್ನು ಕಂಡು ಮರುಗಿದ ಅವರು ವಿಕಲಚೇತನರಿಗಾಗಿಯೇ ಒಂದು ವಸತಿಯುತ ಶಾಲೆಯನ್ನೇಕೆ ತೆರೆಯಬಾರದು ಎಂದು ಯೋಚಿಸಿ ಮುಂದಿಟ್ಟರು. ಇಂದು ಈ ಶಾಲೆ ಈ ಭಾಗದಲ್ಲಿ ಅತ್ಯಂತ ನೆಚ್ಚಿನ ಶಾಲೆಯಾಗಿದೆ. ಇಂದಿನ ಪೀಠಾಧಿಪತಿಗಳಾಗಿರುವ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರು ತಮ್ಮ ಗುರುಗಳ ಈ ಆಸೆಯನ್ನು ಜೀವಂತವಾಗಿರಿಸಿಕೊಡು ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಮುನ್ನಡೆಯುತ್ತಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಗದಗಿನ ಉದ್ಯಮಿ ಸಾಯಿಕುಮಾರ, ಆನಂದ ಪೊತ್ನಿಸ್, ಸ್ನೇಹಾ ಖಟವಟೆ, ಶಿವಕುಮಾರ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ತಳಬಾಳ ವಿದ್ಯಾರ್ಥಿಗಳಿಗೆ ಚಾರ್ಟರ್ ದಂಪತಿಗಳ ಬಗ್ಗೆ ಹೇಳಿದರು. ಶಿಕ್ಷಕ ಬ್ರಹ್ಮಾನಂದ ಗಾಣಿಗೇರ ಸ್ವಾಗತಿಸಿದರು. ಸಂಸ್ಥೆಗೆ ಭೇಟಿ ನೀಡಿದ ಚಾರ್ಟರ್ ದಂಪತಿಗಳು ಸಂಸ್ಥೆಯ ಆಡಳಿತಾಧಿಕಾರಿ ಎನ್.ಆರ್. ಗೌಡರ ಮತ್ತು ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಆತ್ಮೀಯವಾಗಿ ಬರಮಾಡಿಕೊಂಡರು. ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಶ್ವಬಂಧು ಸಂತಕವಿ ಕನಕದಾಸರು

ಉತ್ತಮ ಗುಣಗಳಿದ್ದರೆ ದೇವರು ಅಂಥವರ ಉದ್ಧಾರ ಮಾಡುತ್ತಾನೆ’ ಎಂದು ಮಾರ್ಮಿಕವಾಗಿ ನಮ್ಮನ್ನು ಎಚ್ಚರಿಸಿ, ಜಗತ್ತಿಗೆ ತೋರಿಸಿಕೊಟ್ಟ ಮಹಾಮಹಿಮರು ನಮ್ಮ ಕನಕದಾಸರು. ಕನಕ ನಡುಗನ್ನಡ ಸಾಹಿತ್ಯದ ಪ್ರಮುಖ ಕೀರ್ತನೆಕಾರ, ಸಾಮಂತ, ಜ್ಞಾನಿ, ಕನ್ನಡ ಭಾಷಾ ಶ್ರೇಷ್ಠ ದಾರ್ಶನಿಕ ಕವಿ ಚಿಂತಕ. ಸಮನ್ವಯ ದಾಸ ಸಾಹಿತ್ಯದ ಸಂತ. ಕ್ರಾಂತಿಕಾರಿ ಹರಿದಾಸ ಮತ್ತು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು ಹಾಗೂ ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. 15-16ನೇ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತರು ಕನಕದಾಸರು.

ಇವರು ಹುಟ್ಟಿದ್ದು 1509ರಲ್ಲಿ, ಈಗಿನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ, ಬಂಕಾಪುರ ಸಮೀಪದ ಬಾಡ ಗ್ರಾಮದಲ್ಲಿ. ಇವರ ತಂದೆ ಬೀರಪ್ಪ, ತಾಯಿ ಬಚ್ಚಮ್ಮ. ಇವರ ಮಡದಿಯ ಹೆಸರು ಮುಕುತಿ. ಕಾಗಿನೆಲೆಯ ಆದಿಕೇಶವ ಇವರ ಆರಾಧ್ಯ ದೈವ. ಕನಕದಾಸರ ನಿಜವಾದ ಹೆಸರು ತಿಮ್ಮಪ್ಪನಾಯಕ ಎಂದಾಗಿತ್ತು. ದಾಸ ಸಾಹಿತ್ಯ ಮತ್ತು ಸಂಸ್ಕೃತಿಯ ಪರಂಪರೆಗೆ ನಾಂದಿ ಹಾಡಿದ ಪುರಂದರದಾಸರ ಆರಾಧಕ ಹಾಗೂ ದಾಸಶ್ರೇಷ್ಠರು ಕನಕದಾಸರು. ಸಮಾಜದಲ್ಲಿ ಗುಣಕ್ಕಿಂತ ಕುಲವೇ ಮುಖ್ಯವೆಂದು ಬೀಗುವವರನ್ನು ಕಂಡ ಕನಕದಾಸರು, ಕುಲದ ನೆಲೆಯನೇನಾದರು ಬಲ್ಲಿರಾ’ ಎಂದು ಪ್ರಶ್ನಿಸುತ್ತ, ಗುಣ ಮುಖ್ಯವೇ ಹೊರತು ಕುಲವಲ್ಲ ಎಂಬ ಸಂದೇಶವನ್ನು ಸಾರಿದರು.

ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯಲ್ಲಿ ಅಚ್ಚಳಿಯದ ಛಾಪು ಮೂಡಿಸಿದವರು ಕನಕದಾಸರು. ಕರ್ನಾಟಕದಲ್ಲಿ ಹರಿದಾಸ ಪರಂಪರೆಗೆ ಸುಮಾರು 500 ವರ್ಷಗಳ ಭವ್ಯ ಇತಿಹಾಸವಿದೆ. ಕನಕದಾಸರು ಮತ್ತು ಪುರಂದರದಾಸರತಹ ವೈಚಾರಿಕ ಸಂತರಾಗಿ ಸಮಾಜದಲ್ಲಿ ಬೇರುಬಿಟ್ಟಿದ್ದ ಮೇಲು-ಕೀಳು ಎಂಬ ಭಾವನೆ ಮತ್ತು ಜಾತಿ-ಮತಗಳ ಸಿದ್ಧಾಂತ ಪಕ್ಕಕ್ಕೆ ಸರಿದವು. ದೈವಸ್ತುತಿಯೇ ಪ್ರಮುಖವೆನಿಸಿದ ಭಕ್ತಿ ಪರಂಪರೆಯ ಕಾಲದಲ್ಲಿ ಧೃವತಾರೆಯಂತೆ ಅವತರಿಸಿದ ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸ ಸಾಹಿತ್ಯಕ್ಕೆ,ತನ್ಮೂಲಕ ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದ್ದಾರೆ.

ಕನಕರು ಆದಿಗುರು ಶ್ರೀ ಶ್ರೀ ಶಂಕರಾಚಾರ್ಯರು ಪ್ರತಿಪಾದಿಸಿರುವ ಆದೈತ ತತ್ತ್ವಸಾರವನ್ನನುಸರಿಸಿ ನಾನು, ನನ್ನದೆಂಬ ಮೋಹ, ಪರಬ್ರಹ್ಮ, ಬದುಕು, ಜೀವನಸಾರವನ್ನು ಬೋಧಿಸಿ ಮನುಜಕುಲ ಒಂದೆಬ ತತ್ತ್ವ ಸಾರಿದವರು. ಐದು ಶತಮಾನಗಳ ಹಿಂದೆಯೇ ಒಬ್ಬ ಹರಿದಾಸ, ಆಧ್ಯಾತ್ಮಿಕ ಸಂತಕವಿ ಮಾನವನ ಬದುಕಿನಲ್ಲಿ ಏನೆಲ್ಲಾ ಎದುರಿಸಬೇಕಾಗುತ್ತದೆ ಎಂಬುದನ್ನು ಚಿತ್ರಿಸುತ್ತಲೇ ಜೀವನ ಮೌಲ್ಯಗಳನ್ನು ತಿಳಿಹೇಳಿದರು. ಹಾಗಾಗಿ ಅವರ ಮೌಲ್ಯಯುತವಾದ ನುಡಿಗಳು ಇಂದಿಗೂ ಪ್ರಸ್ತುತವಾಗಿವೆ.

ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು, ಉಡುಪಿ ಶ್ರೀಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ. ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳನ್ನು ಕನ್ನಡ ಸಾಹಿತ್ಯಕ್ಕೆ ಅರ್ಪಿಸಿರುವುದಲ್ಲದೆ ಸಂಗೀತ ಪ್ರಪಂಚಕ್ಕೆ ತನ್ನದೇ ಆದ ಕೊಡುಗೆಯನ್ನು ಮಂಡುಗೆಗಳ ರೂಪದಲ್ಲಿ ನೀಡಿದ್ದಾರೆ.

ವಿದ್ವತ್ ಸಂಪನ್ನ ಕನಕದಾಸರು ಕುಲಾತೀತರಾಗಿ, ಕಾಲಾತೀತರಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಅದ್ವಿತೀಯ ಸ್ಥಾನಗಳಿಸಿ ಚಿರಸ್ಮರಣೀಯರಾಗಿದ್ದಾರೆ. ಭಕ್ತಿ ಎಂಬುದು ಪಾರಾಯಣ ಮಾಡುವುದಕ್ಕಲ್ಲ. ಜ್ಞಾನೋಪಾಸನೆಗೆ ಎಂಬ ದಾರಿಯಲ್ಲಿ ತೊಡಗಿಸಿಕೊಂಡ ದಾಸರ ವೈಶಿಷ್ಟ್ಯ ಭಕ್ತಿಯ ಸಾಮಾಜೀಕರಣ ಅವರ ವಿಶೇಷ ಸಾಧನೆ. ದಾಸರು ಹೊಸಗನ್ನಡ ಸಾಹಿತ್ಯ ಕೋಗಿಲೆ. ಎಲ್ಲ ಮತೀಯ ಬಂಧನಗಳಿಂದ ಪಾರಾಗಿ, ಸಾಮಾಜಿಕ ಕಟ್ಟುನಿಟ್ಟುಗಳಿಂದ ಮುಕ್ತರಾಗಿ ಆಧ್ಯಾತ್ಮ ಸಿದ್ಧಿಯ ಶಿಖರವನ್ನೇರಿದ ವಿಶ್ವಬಂಧು ಸಂತಕವಿ. ಅವರ ಕೃತಿಗಳನ್ನು ಸರ್ವರೂ ಅಭ್ಯಸಿಸಲಿ, ದಾಸರ ಆದರ್ಶಗುಣಗಳು ವಿಶ್ವವ್ಯಾಪಕವಾಗಲೆಂದು ಆಶಿಸುತ್ತಾ ಕನಕದಾಸರಿಗೆ ನಮ್ಮ ಶಿರಸಾಷ್ಟಾಂಗ ಪ್ರಣಾಮಗಳು.

ಶ್ರೇಷ್ಠ-ಕನಿಷ್ಠ ಎಂಬ ಭೇದ-ಭಾವಗಳನ್ನು, ಕೀರ್ತನೆಗಳ ಮೂಲಕ ಜನರಲ್ಲಿದ್ದ ಮೌಢ್ಯ, ಅಜ್ಞಾನ, ಅಂಧಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವರ ರಚನೆಯ ರಾಮಧಾನ್ಯ ಚರಿತೆ, ನಳಚರಿತೆ, ಮೋಹನತರಂಗಿಣಿ ಕೃತಿಗಳು ವರ್ಣಾಶ್ರಮ ವಿರುದ್ಧ ಹಾಗೂ ಸಮಸಮಾಜ ಪರಿಕಲ್ಪನೆಯನ್ನು ಸಾಬೀತುಪಡಿಸುತ್ತವೆ. ಕನಕದಾಸರು ರಚಿಸಿದ ಕೀರ್ತನೆಗಳು ಸರ್ವ ಕಾಲಕ್ಕೂ ಪ್ರಸ್ತುತವಾಗಿವೆ.

ಬಸವರಾಜ ಎಮ್.ಯರಗುಪ್ಪಿ.
ಶಿಕ್ಷಕರು, ಲಕ್ಷ್ಮೇಶ್ವರ

ಭೀಕರ ರಸ್ತೆ ಅಪಘಾತ: ಬೈಕ್-ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು!

0

ಆಂಧ್ರಪ್ರದೇಶ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲಾ ಎಂಬಲ್ಲಿ ಜರುಗಿದೆ.

ಬೈಕ್​​​ ಸವಾರ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಯುವಕರು ರಕ್ತಸ್ರಾವದಿಂದ ನರಳಾಡುತ್ತ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಯುವಕರಿಬ್ಬರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಯುವಕರ ಪ್ರಾಣ ಸ್ಥಳದಲ್ಲಿ ಹೋಗಿದೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ವೈರಲ್​ ಆಗಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಪೋಲೀಸರು ಲಾರಿ ಚಾಲಕನಿಗಾಗಿ ಶೋಧ ಕೈಗೊಂಡಿದ್ದಾರೆ.

ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಲ್ಲ, ಅರ್ಹತೆ ಇದ್ರೆ ಸಿಗುತ್ತೆ; ರಾಮಲಿಂಗಾರೆಡ್ಡಿ

0

ಬೆಂಗಳೂರು:- ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಲ್ಲ, ಅರ್ಹತೆ ಇದ್ರೆ ಸಿಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಅಧಿಕಾರ ಬೇಕು ಅಂತ ದೆಹಲಿಗೆ ಹೋಗೊಲ್ಲ. 2 ವರ್ಷಗಳಲ್ಲಿ ದೆಹಲಿಗೆ ನಾನು ಹೋಗಿರೋದು ಎರಡನೇ ಸಾರಿ. ಇಲಾಖೆ ಕಾರ್ಯಕ್ರಮಗಳಿಗೆ. ನಾನು ಯಾವತ್ತು ಸ್ಥಾನಮಾನ ಬೇಕು ಕೊಡಿ ಅಂತ ದೆಹಲಿಗೆ ಹೋಗಿಲ್ಲ ಎಂದರು. ನನಗೆ ಸಚಿವ ಸ್ಥಾನ ಬೇಕು ಅಂತ ಪ್ರಭಾವವನ್ನು ಬೀರೋದಿಲ್ಲ. ಅರ್ಹತೆ ಇದ್ದರೆ ಕೊಡ್ತಾರೆ ಇಲ್ಲಾ ಅಂದರೆ ಇಲ್ಲ. ದಲಿತ ಸಿಎಂ ಕೂಗು ವಿಚಾರವಾಗಿ ನಾನು ಮಾತಾಡೊಲ್ಲ ಎಂದರು.

ಇನ್ನೂ ಬಿಜೆಪಿಯವರು ಅಧಿಕಾರಕ್ಕೆ ಬಂದ 2014 ರಿಂದ ವೋಟ್ ಚೋರಿ ದೇಶದಲ್ಲಿ ನಡೆಯುತ್ತಿದೆ. ರಾಹುಲ್ ಗಾಂಧಿಯವರು ಮತ್ತೆ ವೋಟ್ ಚೋರಿ ಆರೋಪ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಪರ ಬ್ಯಾಟಿಂಗ್ ಮಾಡಿದ್ರು. ಬಿಜೆಪಿಯವರು ವೋಟ್ ಚೋರಿ ಮಾಡೋದು ಹೊಸದೇನು ಅಲ್ಲ. 2014 ರಿಂದ ವೋಟ್ ಚೋರಿ ಪ್ರಾರಂಭ ಆಗಿದೆ. ಎಲ್ಲಾ ಚುನಾವಣೆಯಲ್ಲಿ ಬಿಜೆಪಿ ಕುತಂತ್ರ ಮಾಡಿದೆ. ಕೇಂದ್ರ ಚುನಾವಣೆ ಆಯೋಗದವರು ಬಿಜೆಪಿ ಜೊತೆ ಶಾಮೀಲಾಗಿ ವ್ಯವಸ್ಥಿತವಾಗಿ ಇದನ್ನು ಮಾಡ್ತಿದ್ದಾರೆ ಎಂದು ಅರೋಪಿಸಿದರು.

ಕಾವ್ಯ ಪ್ರಶಸ್ತಿಗೆ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲ್ಲೂಕಿನ ರಣತೂರು ಗ್ರಾಮದ ಸಂತೋಷ್‌ಕುಮಾರ್ ಬಸವರಾಜ ಅಂಗಡಿ ಅವರು ಭವದ ಅಗುಳಿ ಕವನ ಸಂಕಲನಕ್ಕೆ ಹುಬ್ಬಳ್ಳಿಯ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆಯ ಟ್ರಸ್ಟ್ ಕೊಡಮಾಡುವ ರಾಜ್ಯ ಮಟ್ಟದ 2023ನೇ ಸಾಲಿನ ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ ದೊರೆತಿದೆ.

ಸಂತೋಷ್‌ಕುಮಾರ್ ಬಸವರಾಜ ಅಂಗಡಿ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಲಿಪಿಕಾರ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದು, ಸಾಣೆಹಳ್ಳಿಯ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ರಂಗಶಿಕ್ಷಣದಲ್ಲಿ ಪದವಿ, ಶಿವ ಸಂಚಾರ ತಂಡದಲ್ಲಿ ರಂಗನಟರಾಗಿ ಸುಮಾರು 150 ನಾಟಕ ಪ್ರದರ್ಶನ ನೀಡಿದ್ದಲ್ಲದೆ, ಹಲವಾರು ನಾಟಕಗಳನ್ನು ನಿರ್ದೇಶನ ಮಾಡಿ ಮಕ್ಕಳಿಗೆ ರಂಗಶಿಬಿರಗಳನ್ನು ನಡೆಸಿದ್ದಾರೆ.

error: Content is protected !!